Subscribe to Updates
Get the latest creative news from FooBar about art, design and business.
Author: kannadanewsnow05
ಹೊಸದಿಲ್ಲಿ : ಸಿಎಂ, ಡಿಸಿಎಂ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ, ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಹೇಳಿದರು. ಪಕ್ಷದಲ್ಲಿ ಎಲ್ಲಾ ಗೊಂದಲಗಳು ಬಗೆಹರಿದಿವೆಯೇ, ಈ ಹಿಂದೆ ನಡೆದ ಮಾತುಕತೆ ವೇಳೆ ನೀವು ಇದ್ದೀರಾ ಎನ್ನುವ ಪ್ರಶ್ನೆಗೆ, “ಇನ್ನೂ ಹೆಚ್ಚಿನದ್ದೇನಾದರೂ ಇದ್ದರೇ ಅದನ್ನು ವರಿಷ್ಠರು ಬಗೆಹರಿಸುತ್ತಾರೆ. ಈ ಬಗ್ಗೆ ಇಬ್ಬರು ನಾಯಕರು ಈಗಾಗಲೇ ಸ್ಪಷ್ಟನೆ ನೀಡಿರುವಾಗ ಹೆಚ್ಚಿನ ವ್ಯಾಖ್ಯಾನಗಳು ಬೇಡ. ಶಿವಕುಮಾರ್ ಅವರ ಮಾತು ಒಂದೇ, 140 ಶಾಸಕರು ನಮ್ಮವರೇ. ಅವರು ಪಕ್ಷದ ರಾಜ್ಯ ಅಧ್ಯಕ್ಷ ಎಂದು ಈ ಹಿಂದೆ ಹೇಳಿದ್ದಾರೆ, ಇಂದು, ನಾಳೆಯೂ ಹೇಳುತ್ತಾರೆ ಎಂದರು. ಸಿಎಂ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಹಿಂದೆ ನೀಡಿದ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಆ ರೀತಿಯ ಹೇಳಿಕೆ ನೀಡಿಲ್ಲ. ನಾನು ಹೇಳಿದ್ದು ಬೇರೆ, ರೀತಿ ಅದನ್ನು ನೀವು ತಿರುಚಿದ್ದೀರಿ. ಆದರೂ ಸಿಎಂ ಮತ್ತು ಡಿಸಿಎಂ ಇಬ್ಬರೂ ಇಂದು ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಕಾರಣಕ್ಕೆ ಇದನ್ನು…
ಬೆಂಗಳೂರು : ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ನ ಮಹಿಳಾ ರಾಜ್ಯಾಧ್ಯಕ್ಷೆ ಮಾಡುವುದಾಗಿ ಮಹಿಳೆಗೆ ವಂಚಿಸಿದ್ದ ಆರೋಪಿಯನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ನಾಗರನವಿಲೆ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಕರ್ನಾಟಕ ಪ್ರೆಸ್ ಕ್ಲಬ್ ಅಧ್ಯಕ್ಷನೆಂದು ಪರಿಚಯಿಸಿಕೊಂಡಿದ್ದ ಆರೋಪಿ, ವಿವಿಧ ಬಗೆಯ ಆಮೀಷವೊಡ್ಡಿ ಹಂತಹಂತವಾಗಿ 20.18 ಲಕ್ಷ ರೂಪಾಯಿ ಪಡೆದು ವಂಚಿಸಿರುವುದಾಗಿ ಆರೋಪಿಸಿ ಮೀನಾಕ್ಷಿ.ಬಿ ಎಂಬುವವರು ಗೋವಿಂದರಾಜನಗರ ಠಾಣೆಗೆ ದೂರು ನೀಡಿದ್ದರು. ಮೀನಾಕ್ಷಿ ಅವರಿಗೆ ಪರಿಚಯವಾಗಿದ್ದ ಆರೋಪಿ ‘ನಿಮ್ಮನ್ನ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ನ ಮಹಿಳಾ ರಾಜ್ಯಾಧ್ಯಕ್ಷೆ ಹಾಗೂ ಸಿಂಗಾಪುರ್ನಲ್ಲಿ ಆಯೋಜಿಸುತ್ತಿರುವ 2ನೇ ಆವೃತ್ತಿಯ ವಿಶ್ವ ಕನ್ನಡ ಹಬ್ಬಕ್ಕೆ ನಿರ್ದೇಶಕಿಯನ್ನಾಗಿ ಮಾಡುತ್ತೇನೆ’ ಎಂದು ನಂಬಿಸಿದ್ದ. ಇದಕ್ಕಾಗಿ ಆರಂಭದಲ್ಲಿ 11 ಸಾವಿರ ರೂಪಾಯಿ ಪಡೆದಿದ್ದ ಆರೋಪಿ ನಂತರ ಸಚಿವರಿಂದ ಆದೇಶ ಪತ್ರ ಕೊಡಿಸುವುದಾಗಿ 20 ಸಾವಿರ ರೂಪಾಯಿ ಪಡೆದುಕೊಂಡಿದ್ದ. ಬಳಿಕ ವಿಶ್ವ ಕನ್ನಡ ಹಬ್ಬದ ಖರ್ಚುಗಳಿಗಾಗಿ ಹಂತಹಂತವಾಗಿ ಒಟ್ಟು 20.18 ಲಕ್ಷ ಪಡೆದಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದರು. ಗುರುವಾರ…
BIG NEWS : ನಾಳೆಯಿಂದ ಯಾವುದೇ ಗೊಂದಲವಿಲ್ಲ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ : ಸಿದ್ದು, ಡಿಕೆಶಿ ಒಗ್ಗಟ್ಟಿನ ಮಂತ್ರ!
ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದು, ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಡಿ.ಕೆ.ಶಿವಕುಮಾರ್ ಅವರು ಪೊನ್ನಣ್ಣ ನಾವು ಮೂವರು ಬ್ರೇಕ್ ಫಾಸ್ಟ್ ನಲ್ಲಿ ಭಾಗಿಯಾಗಿದ್ದೇವು. ಅಲ್ಲಿ ಏನೂ ಮಾತನಾಡಿಲ್ಲ. ಬ್ರೇಕ್ ಫಾಸ್ಟ್ ಚೆನ್ನಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಇಂದು ನಮ್ಮ ಮನೆಗೆ ಬಂದಿದ್ದರು. ಒಟ್ಟಿಗೆ ಬ್ರೇಕ್ ಫಾಸ್ಟ್ ಒಟ್ಟಿಗೆ ಮಾಡಿದ್ದೇವೆ. ಹೈಕಮಾಂಡ್ ಮೊನ್ನೆ ಪೊನ್ನಣ್ಣರಿಗೆ ಕರೆ ಮಾಡಿದ್ದರು. ಡಿ.ಕೆ.ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಕರೆಯಿರಿ ಎಂದು ಹೇಳಿದ್ದರು. ಡಿ.ಕೆ. ಶಿವಕುಮಾರ್ ಅವರಿಗೂ ಇದನ್ನು ಹೇಳಿದ್ದರು. ಡಿ.ಕೆ.ಶಿವಕುಮಾರ್ ಅವರು ತಮ್ಮ ಮನೆಗೆ ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಇನ್ನೊಂದಿನ ನಿಮ್ಮ ಮನೆಗೆ ಊಟಕ್ಕೆ ಬರ್ತಿನಿ ಅಂತ ಹೇಳಿದ್ದೇನೆ ಎಂದರು. ನಾವು ಇಂದು ಮೀಟಿಂಗ್ ಮಾಡಿದ ಉದ್ದೇಶ, ಕೆಲವು ಗೊಂದಲಗಳು ನಿರ್ಮಾಣ ಆಗಿದ್ದೇವೆ. ಒಂದು ತಿಂಗಳಿನಿಂದ ಈ ಗೊಂದಲಗಳು…
ಶಿವಮೊಗ್ಗ : ಶಿವಮೊಗ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವನ್ನಪ್ಪಿರುವ ಘಟನೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. 2ನೇ ಬಾರಿಗೆ ಶಸ್ತ್ರ ಚಿಕಿತ್ಸೆಗೆ ನೂರ್ ಅಪ್ಸ(26) ಒಳಗಾಗಿದ್ದು, ಇದೀಗ ಇಂದು ಸಾವನ್ನಪ್ಪಿದ್ದರೆ. ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷವೆ ಕಾರಣ ಎಂದು ಆರೋಪಿಸಲಾಗುತ್ತಿದೆ. ವೈದ್ಯರ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವೆಂಬರ್ 21 ರಂದು ನೂರ್ ಗಂಡು ಮಗುವಿಗೆ ಜನ್ಮ ನೀದ್ದರು. ಸಿಸೆರಿಯನ್ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆಪರೇಷನ್ ಬಳಿಕ ನೂರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. 1 ವಾರದಿಂದ ಬಾಣಂತಿ ಮಲ ವಿಸರ್ಜನೆ ಸಹ ಮಾಡಿರಲಿಲ್ಲ ನಂತರ ವೈದ್ಯರು ಮತ್ತೊಂದು ಆಪರೇಷನ್ ಮಾಡಿದರು. ಚಿಕಿತ್ಸೆ ಫಲಿಸದೇ ನೂರ್ ಸಾವನ್ನಪ್ಪಿದ್ದರೆ. ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಅಗ್ರಹಿಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಕೊಲೆಯ ಪ್ರಕರಣ ಸಂಬಂಧ ಕಡ್ಡಾಯ ಜಾಮೀನು ಕೋರಿ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶಿಸಿದೆ. ಪ್ರಕರಣ ಸಂಬಂಧ ಜಾಮೀನು ಕೋರಿ ಆರೋಪಿಗಳಾದ ಕಿರಣ್, ವಿಮಲ್ ರಾಜ್, ಪ್ರದೀಪ್ ಮತ್ತು ಆರ್.ಮದನ್ ಸಲ್ಲಿಸಿದ್ದ ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಪೀಠ ಶುಕ್ರವಾರ ಪ್ರಕಟಿಸಿದೆ. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟದ ನಡುವೆ ನಾಳೆ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡವರು ನನಗೂ ಹಾಗೂ ಡಿಕೆ ಶಿವಕುಮಾರ್ ಅವರಿಗೂ ಕರೆ ಮಾಡಿದ್ದರು. ಹೈಕಮಾಂಡ್ ಏನು ಹೇಳುತ್ತಾರೋ ಕೇಳುತ್ತೇನೆ. ನಾಳೆ ನಾನು ಮತ್ತು ಡಿಕೆ ಶಿವಕುಮಾರ್ ಮಾತಾಡಿಕೊಂಡು ಹೋಗುತ್ತೇವೆ. ಹಾಗಾಗಿ ನಾಳೆ ಕಾವೇರಿ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಲಾಗಿದೆ ಆ ಒಂದು ಸಭೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ನಾನು ಮಾತಾಡಿಕೊಂಡು ದೆಹಲಿ ನಾಯಕರು ಕರೆದರೆ ಹೋಗುತ್ತೇನೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ದೆಹಲಿ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮೊದಲು ನೀವು ಕುಳಿತುಕೊಂಡು ಮಾತನಾಡಿ ನೀವು…
ಮಂಡ್ಯ :- ಯುವಕನೋರ್ವನನ್ನು ಕೊಲೆ ಮಾಡಲು ಯತ್ನಿಸಿ ವಿಫಲವಾಗಿರುವ ಘಟನೆ ಮದ್ದೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಜರುಗಿದೆ. ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮದ ವೆಂಕಟೇಶ್ ಅವರ ಪುತ್ರ ಮಧು (28) ಗಾಯಗೊಂಡಿರುವ ಯುವಕ ಎನ್ನಲಾಗಿದೆ. ಕೊಕ್ಕರೆ ಬೆಳ್ಳೂರು ಗ್ರಾಮದ ಮಧು ಎಂಬುವವರು ಪೂಜಾ ಕುಣಿತ ಕೆಲಸ ಮಾಡುತ್ತಿದ್ದು, ಅದೇ ಗ್ರಾಮದ ಲಾವಣ್ಯ (19) ಎಂಬ ಯುವತಿಯನ್ನು ಕುಟುಂಬದ ವಿರೋಧದ ನಡುವೆಯೂ ಪ್ರೀತಿಸಿ ಕಳೆದ 7 ತಿಂಗಳ ಹಿಂದೆ ಮದುವೆಯಾಗಿದ್ದರು. ಈ ವಿಚಾರವಾಗಿ ಆಕ್ರೋಶಗೊಂಡಿದ್ದ ಯುವತಿಯ ಕುಟುಂಬದವರು ಮಧು ವಿರುದ್ದ ಸೇಡು ತೀರಿಸಿಕೊಳ್ಳಲು ಸಂಚುರೂಪಿಸಿದ್ದರು. ಹೀಗಾಗಿ ಕೊಕ್ಕರೆ ಬೆಳ್ಳೂರು ಗ್ರಾಮದ ವಿಶ್ವ ಎಂಬುವವರಿಗೆ ಈ ವಿಚಾರವಾಗಿ ಪ್ರಸ್ತಾಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 2-3 ತಿಂಗಳಿಂದ ಮಧು ಅವರನ್ನು ವಿಶ್ವ ಹಾಗೂ ಆತನ ಸಹಚರರು ಹಿಂಬಾಲಿಸಿ ಕೊಲೆ ಮಾಡಲು ಯತ್ನಕ್ಕೆ ಪ್ರಯತ್ನ ಮಾಡಿದ್ದಾರೆ. ಮಧು ಅವರು ಶುಕ್ರವಾರ ಬೆಳಿಗ್ಗೆ ಕೊಕ್ಕರೆ ಬೆಳ್ಳೂರಿಂದ ಬೆಂಗಳೂರಿಗೆ ಪೂಜಾ ಕುಣಿತದಲ್ಲಿ ಪಾಲ್ಗೋಳ್ಳಲು ತೆರಳುತ್ತಿದ್ದ ವೇಳೆ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟದ ನಡುವೆ ನಾಳೆ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಅಂತ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡವರು ನನಗೂ ಹಾಗೂ ಡಿಕೆ ಶಿವಕುಮಾರ್ ಅವರಿಗೂ ಕರೆ ಮಾಡಿದ್ದರು. ಹೈಕಮಾಂಡ್ ಏನು ಹೇಳುತ್ತಾರೋ ಕೇಳುತ್ತೇನೆ. ನಾಳೆ ನಾನು ಮತ್ತು ಡಿಕೆ ಶಿವಕುಮಾರ್ ಮಾತಾಡಿಕೊಂಡು ಹೋಗುತ್ತೇವೆ. ಹಾಗಾಗಿ ನಾಳೆ ಕಾವೇರಿ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಲಾಗಿದೆ ಆ ಒಂದು ಸಭೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ನಾನು ಮಾತಾಡಿಕೊಂಡು ದೆಹಲಿ ನಾಯಕರು ಕರೆದರೆ ಹೋಗುತ್ತೇನೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ದೆಹಲಿ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮೊದಲು ನೀವು…
ಬೆಂಗಳೂರು : ರಾಜ್ಯದಲ್ಲಿ ಕುರ್ಚಿ ಕಿತ್ತಾಟ ಜೋರಾಗಿ ನಡೆಯುತ್ತಿದ್ದು, ನಿನ್ನೆ ಸಿಎಂ ಮತ್ತು ಡಿಸಿಎಂ ಪರಸ್ಪರ ಟ್ವೀಟ್ ವಾರ್ ನಡೆದಿದ್ದು, ನಾಯಕತ್ವ ಬದಲಾವಣೆ ಆಗುತ್ತಾ ಅಥವಾ ಇಲ್ವಾ ಅನ್ನೋದು ಎರಡು ದಿನದಲ್ಲಿ ತಿಳಿಯಲಿದೆ. ಇದೀಗ ನಾಳೆ ಸಿಎಂ ನಿವಾಸ ಕಾವೇರಿಯಲ್ಲಿ ಬೆಳಿಗ್ಗೆ 9:30ಕ್ಕೆ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಲಾಗಿದೆ. ಹೌದು ಇಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲು ಎರಡೆರಡು ಬಾರಿ ಟಿಕೆಟ್ ಬುಕ್ ಮಾಡಿದ್ದರು. ಆದರೆ ಏಕಾಏಕಿ ದಿಡೀರ್ ಎಂದು ದೆಹಲಿ ಪ್ರವಾಸವನ್ನು ಮುಂದೂಡಿದರು. ಇದೀಗ ದೆಹಲಿ ಪ್ರವಾಸ ಮುಂದೂಡಿರುವುದಕ್ಕೆ ಕಾರಣ ತಿಳಿದು ಬಂದಿದೆ. ನಾಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಲಾಗಿದ್ದು ನಾಳೆ ಬೆಳಗ್ಗೆ 9:30ಕ್ಕೆ ಕಾವೇರಿ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ತೆರಳಲಿದ್ದಾರೆ ಹಾಗಾಗಿ ಈ ಒಂದು ಸಭೆ ಭಾರಿ ಕುತೂಹಲ ಮೂಡಿಸಿದೆ.
ಮಂಡ್ಯ : ಎರಡುವರೆ ವರ್ಷಕ್ಕೆ ಸಿಎಂ ಬದಲಾವಣೆ ಬಗ್ಗೆ ಯಾರಿಗೂ ಗೊತ್ತಿಲ್ಲ ಸಿಎಂ ಬದಲಾವಣೆಯ ಬಗ್ಗೆ ಗೊತ್ತಿಲ್ಲ ಅಂದಮೇಲೆ ಆ ಕುರಿತು ಚರ್ಚೆ ಮಾಡುವ ಅವಶ್ಯಕತೆಯೇ ಇಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬದ್ಧರಾಗಿರುತ್ತಾರೆ. ಶೀಘ್ರದಲ್ಲಿಯೇ ಎಲ್ಲದಕ್ಕೂ ಹೈಕಮಾಂಡ್ ತೆರೆ ಎಳೆಯುತ್ತಾರೆ ಎಂದು ಮಂಡ್ಯದಲ್ಲಿ ಕುರುಬ ಸಮುದಾಯದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತಿಂದ್ರ ಹೇಳಿಕೆ ನೀಡಿದರು. ರಾಜ್ಯದಲ್ಲಿ ಯಾವುದೇ ಯುದ್ಧ ಅಥವಾ ಯಾವುದೇ ಘರ್ಷಣೆ ಇಲ್ಲ ಹೈಕಮಾಂಡ್ ಯಾವುದೇ ಸೂಚನೆ ಕೊಟ್ಟಿಲ್ಲ ಅವರು ಕರೆದು ಮಾತನಾಡುತ್ತಾರೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವಂತೆ ಕೆಲವರು ಮಾತನಾಡುತ್ತಿದ್ದಾರೆ ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದೇವೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಹೈಕಮಾಂಡ್ ಮಾತಾಡಲಿದೆ ಅಲ್ಲಿಯವರಿಗೆ ಯಾವುದೇ ಗೊಂದಲ ಆಗಬಾರದು ನಮ್ಮ ಪಕ್ಷದಲ್ಲಿ ಯಾರು ಸಿಎಂ ಅನ್ನೋದನ್ನ ಹೈಕಮಾಂಡ್ ತಿರುಮನಿಸುತ್ತದೆ. ಹೊರಗಿನವರು ಯಾರು ಕಮೆಂಟ್ ಮಾಡುವ ಅಧಿಕಾರವಿಲ್ಲ ಎಂದು ಕುರುಬ ಸಮುದಾಯದ ಕಾರ್ಯಕ್ರಮದಲ್ಲಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…














