Author: kannadanewsnow05

ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಓವರ್ ಟೆಕ್ ಮಾಡಲು ಹೋಗಿ KSRTC ಬಸ್ ಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಕಾರಿನ ಚಾಲಕ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಬಳಿ ಈ ಒಂದು ಘಟನೆ ನಡೆದಿದೆ. ಘಟನೆಯಲ್ಲಿ ಇನ್ನೋವಾ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, KSRTC ಬಸ್ ಚಾಲಕನಿಗೆ ಗಂಭೀರವಾದ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಕೆರೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಮೃತ ಕಾರು ಚಾಲಕನ ಬಗ್ಗೆ ಪೊಲೀಸರು ಮಾಹಿತಿ ಕಲೇ ಹಾಕುತ್ತಿದ್ದಾರೆ.

Read More

ದಕ್ಷಿಣಕನ್ನಡ : ಧರ್ಮಸ್ಥಳದ ಬಗ್ಗೆ ಅಪಪ್ರಚಾರದ ಕುರಿತು ಸುಮೊಟೊ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರಾಗಿದ್ದಾನೆ. ಕಳೆದ ಎರಡು ದಿನಗಳಿಂದ ಬೆಂಗಳೂರು ಬಾಡಿಗೆ ಮನೆ ಹಾಗೂ ಬಳ್ಳಾರಿಯಲ್ಲಿರುವ ಸ್ವಂತ ಮನೆಗೆ ಪೊಲೀಸರು ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ಅಂಟಿಸಿ ಬಂದಿದ್ದರು. ಇದೀಗ ಯೂಟ್ಯೂಬರ್ ಸಮೀರ್ ಮೂವರು ವಕೀಲರೊಂದಿಗೆ ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರಾಗಿದ್ದಾನೆ. ಇನ್ನು ಇದೇ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ.

Read More

ಯಾದಗಿರಿ : ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ವಿಚಾರವಾಗಿ ಈಗಾಗಲೇ SIT ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ್ದಾರೆ. ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು ಧರ್ಮಸ್ಥಳದ ಬಗ್ಗೆ ಷಡ್ಯಂತ್ರದ ಬಗ್ಗೆ ‘NIA’ ತನಿಖೆಯಾದ್ರೆ ತಪ್ಪಿಲ್ಲ ಎಂದು ತಿಳಿಸಿದರು. ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, NIA ತನಿಖೆ ನಡೆದರೆ ಷಡ್ಯಂತ್ರದ ಹಿಂದೆ ಯಾರು ಇದ್ದಾರೆ ಎಂದು ಗೊತ್ತಾಗುತ್ತದೆ ಇದಕ್ಕೆ ಬೇಕಾದರೆ NIA ಕ್ಕಿಂತ ಉನ್ನತ ತನಿಖೆ ಆಗಬೇಕು ಜನರು ಬೇರೆ ಕೆಲಸ ಬಿಟ್ಟು ಧರ್ಮಸ್ಥಳದ ಬಗ್ಗೆ ನೋಡ್ತಾ ಕುಳಿತಿದ್ದಾರೆ. ನ್ಯಾಯಾಲಯ ತನಿಖೆಗೆ ಸೂಚಿಸಿದ್ದರಿಂದ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಇದರಲ್ಲಿ ಎಡಪಂಥಿ ಹಾಗೂ ಬಲಪಂಥೀಯ ಎಂಬುದು ಯಾವುದು ಇಲ್ಲ ಇದು ದೇಶಕ್ಕೆ ಹಾಗೂ ರಾಜಕೀಯಕ್ಕೆ ಸಂಬಂಧಿಸಿದ ವಿಷಯ ಅಲ್ಲ ಧರ್ಮಸ್ಥಳದ ವಿಚಾರ ಒಂದು ಊರಿಗೆ ಸಂಬಂಧಿಸಿದಂತೆ ಅದನ್ನು ದೊಡ್ಡದು ಮಾಡಿ ಚರ್ಚೆ ಮಾಡುವುದು ಅನಗತ್ಯ. SIT ಅಧಿಕಾರಿಗಳು 15 ದಿನಗಳಿಂದ ತನಿಖೆ ಮಾಡುತ್ತಿದ್ದಾರೆ. ಕೋರ್ಟ್ ಆದೇಶ ಮಾಡದಿದ್ದರೆ…

Read More

ಸೆಪ್ಟೆಂಬರ್ ತಿಂಗಳು ಖಗೋಳ ದೃಷ್ಟಿಕೋನದಿಂದ ಬಹಳ ವಿಶೇಷವಾಗಿರಲಿದೆ. ಏಕೆಂದರೆ ಈ ಬಾರಿ ಎರಡು ದೊಡ್ಡ ಗ್ರಹಣಗಳು ಒಂದೇ ತಿಂಗಳಿನಲ್ಲಿ ಸಂಭವಿಸಲಿದೆ. ಚಂದ್ರಗ್ರಹಣ ಸೆಪ್ಟೆಂಬರ್ 7 ರಂದು ಮತ್ತು ಸೂರ್ಯಗ್ರಹಣ ಸೆಪ್ಟೆಂಬರ್ 21 ರಂದು. ಮತ್ತೊಂದು ವಿಶೇಷವೆನೆಂದರೆ ಎರಡೂ ಗ್ರಹಣಗಳೂ ಭಾರತದಲ್ಲಿ ಗೋಚರಿಸುತ್ತವೆ, ಆದ್ದರಿಂದ ಧಾರ್ಮಿಕ ಮತ್ತು ಜ್ಯೋತಿಷ್ಯ ದೃಷ್ಟಿಕೋನದಿಂದ ಅವುಗಳ ಪ್ರಾಮುಖ್ಯತೆ ಇನ್ನಷ್ಟು ಹೆಚ್ಚಾಗಲಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ,…

Read More

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮಾಸ್ಕ್ ಮ್ಯಾನ್ ಚೆನ್ನೈನನ್ನು ಸೈಟ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಸಿಕ್ಕಿದ್ದು ಚಿನ್ನಯ್ಯ ತಾನು ಹೆಸರು ಹೇಳಿದ ಎಲ್ಲರನ್ನೂ SIT ಅಧಿಕಾರಿಗಳು ಅರೆಸ್ಟ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೌದು ಬುರುಡೆ ತಂದುಕೊಟ್ಟ 10ರಿಂದ 12 ಜನರ ಬಂಧನ ಆಗುವ ಸಾಧ್ಯತೆ ಇದೆ ಚಿನ್ನಯ ಹೆಸರು ಹೇಳಿದವರಿಗೂ ಕೂಡ ಇದೀಗ ಬಂಧನದ ಭೀತಿ ಎದುರಾಗಿದೆ.ಈಗಾಗಲೇ ಚಿನ್ನಯ್ಯ ಹಲವರ ಹೆಸರು ಹೇಳಿದ್ದು, ಧರ್ಮಸ್ಥಳದ ಕಾಡಿನಲ್ಲಿ ತಾವೇ ಬುರುಡೆ ಹೂತಿಟ್ಟ ಶಂಕೆ ವ್ಯಕ್ತವಾಗಿದೆ. ಧರ್ಮಸ್ಥಳದ ಅರಣ್ಯವ್ಯಾಪ್ತಿಯಲ್ಲಿ ಬುರುಡೆ ಷಡ್ಯಂತ್ರ ಇರಬಹುದು ಎಂದು ತೋರಿಸಲು ಚಿನ್ನಯ್ಯಗೆ ಸೂಚನೆ ಕೊಡಲಾಗಿತ್ತು ತಂದಿದ್ದ ಬುರುಡೆ ಅಲ್ಲದೆ ಮತ್ತೊಂದು ಬುರುಡೆ ಇರಿಸಿ ಸಂಚು ರೂಪಿಸಲಾಗಿತ್ತು ಕಳೆ ಬರಹದ ವೇಳೆ ಎಸ್ಐಟಿಗೆ ಸ್ಥಳ ತೋರಿಸಲು ಸೂಚನೆ ನೀಡಲಾಗಿತ್ತು ಎಂದು ತಿಳಿದು ಬಂದಿದೆ

Read More

ಬೆಂಗಳೂರು : ಚಿನ್ನಯ್ಯ ತಂದುಕೊಟ್ಟ ಬುರುಡೆ ಎಲ್ಲಿಯದ್ದು ಅನ್ನೋ ಯಕ್ಷ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಮುಸುಕುಧಾರಿಯನ್ನ 10 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿರುವ SIT ಸ್ಫೋಟಕ ರಹಸ್ಯಗಳನ್ನ ಬಯಲಿಗೆಳೆಯುತ್ತಿದೆ. ಚಿನ್ನಯ್ಯ ತಂದಿದ್ದ ʻಬುರುಡೆʼ ಅಧಿಕಾರಿಗಳು ಧರ್ಮಸ್ಥಳ ನೋಡುವುದಕ್ಕೂ ಮುನ್ನವೇ ದೆಹಲಿ ನೋಡಿತ್ತು ಅನ್ನೋದು ಗೊತ್ತಾಗಿದೆ. ಹೌದು. ಷಡ್ಯಂತ್ರದ ಗ್ಯಾಂಗ್‌ ಚಿನ್ನಯ್ಯನ ಸಮೇತ ಬುರುಡೆಯನ್ನ ದೆಹಲಿಗೆ ತೆಗೆದುಕೊಂಡು ಹೋಗಿತ್ತು. ಅಲ್ಲಿ ಪ್ರತಿಷ್ಠಿತ ವ್ಯಕ್ತಿಗಳನ್ನ ಭೇಟಿಯಾಗಿ ಬುರುಡೆಯನ್ನ ತೋರಿಸಲಾಗಿತ್ತು. ಬುರುಡೆ ಸಮೇತ ಇಡೀ ಪ್ರಕರಣದ ಕಥೆಯನ್ನು ಅಲ್ಲಿ ಹೇಳಲಾಗಿತ್ತು. ಮೆಗಾ ಡೀಲ್‌ ಕೂಡ ನಡೆದಿತ್ತು ಅನ್ನೋ ರಹಸ್ಯ ಬೆಳಕಿಗೆ ಬಂದಿದೆ. ಈ ಮಧ್ಯೆ ಬುರುಡೆಯಲ್ಲಿದ್ದ ಮಣ್ಣು ಧರ್ಮಸ್ಥಳ ಪರಿಸರದ್ದೇ ಅಲ್ಲ ಎನ್ನುವುದು ವಿಧಿವಿಜ್ಞಾನ ಪ್ರಾಯೋಗಾಲಯದಲ್ಲಿ ದೃಢಪಟ್ಟಿತ್ತು. ಇದು ಪಕ್ಕಾ ಆಗುತ್ತಿದ್ದಂತೆ ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಆತ ಬೇರೆ ಜಾಗದಿಂದ ಈ ಬುರುಡೆ ತಂದಿದ್ದೇನೆ. ಬೇರೆಯವರು ಹೇಳಿದಂತೆ ನಾನು ಈ ಪ್ರಕರಣಕ್ಕೆ ಬಂದಿದ್ದೇನೆ ಎಂದು ಬಾಯಿಬಿಟ್ಟಿದ್ದ.

Read More

ಬೆಂಗಳೂರು : ಆರ್ ಎಸ್ ಎಸ್ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಇದೀಗ ಮತ್ತೆ ಆರ್ ಎಸ್ ಎಸ್ ಕುರಿತು ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದ್ದು, ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ “RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು“ ಎಂಬ ಪ್ರತಿಜ್ಞೆ ಕೈಗೊಳ್ಳಬೇಕು. ಜನಾಂಗೀಯ ದ್ವೇಷ, ವರ್ಣಾಶ್ರಮದ ಕ್ರೌರ್ಯಗಳನ್ನು ಒಳಗೊಂಡ ನಾಜಿವಾದ, ಮನುವಾದಗಳನ್ನೇ ನರ ನಾಡಿ, ರಕ್ತಗಳಲ್ಲಿ ಪ್ರವಾಹಿಸಿಕೊಂಡಿರುವ RSS ಎಂಬ ವಿಷಕಾರಿ ಸಂಘಟನೆಯನ್ನು ಕಾಂಗ್ರೆಸ್ ಪಕ್ಷವು ಎಂದಿಗೂ ಶತ್ರುವಾಗಿಯೇ ನೋಡುತ್ತದೆ. ಏಕೆಂದರೆ, ಆರ್ಎಸ್ಎಸ್ ಸಂವಿಧಾನಕ್ಕೆ ಶತ್ರು, ಆರ್ಎಸ್ಎಸ್ ಐಕ್ಯತೆಗೆ ಶತ್ರು, ಆರ್ಎಸ್ಎಸ್ ರಾಷ್ಟ್ರಧ್ವಜಕ್ಕೆ ಶತ್ರು, ಆರ್ಎಸ್ಎಸ್ ರಾಷ್ಟ್ರಗೀತೆಗೆ ಶತ್ರು, ಆರ್ಎಸ್ಎಸ್ ಏಕತೆಗೆ, ಸಾರ್ವಭೌಮತೆಗೆ ಶತ್ರು. ಬಾಬಾ ಸಾಹೇಬರು, ಸರ್ದಾರ್ ಪಟೇಲರು ದಶಕಗಳ ಹಿಂದೆಯೇ ಆರ್ಎಸ್ಎಸ್ ಕುರಿತು ನಿಷ್ಠುರವಾಗಿ ಎಚ್ಚರಿಕೆಯ ಸಂದೇಶ ನೀಡಿ ಹೋಗಿದ್ದಾರೆ, ಆ ಮಹನೀಯರ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿ ಮನುವಾದಿಗಳನ್ನು ದೂರ ಇಡಬೇಕಿದೆ.…

Read More

ಬೆಂಗಳೂರು : ಎಂ ಕೆ ದೊಡ್ಡಿ ಠಾಣೆ ಶೌಚಾಲಯದಲ್ಲಿ ಆರೋಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಂ ಕೆ ದೊಡ್ಡ ಠಾಣೆಯ ASI ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ. ASI ಪ್ರತಾಪ್, ಕಾನ್ಸ್ಟೇಬಲ್ ಗಳಾದ ಲಕ್ಷ್ಮೀನಾರಾಯಣ ಹಾಗೂ ಸೋಮನಾಥ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಎಂ.ಕೆ ದೊಡ್ಡಿ ಠಾಣೆಯಲ್ಲಿ ಆಗಸ್ಟ್ 20ರಂದು ಆರೋಪಿ ರಮೇಶ್ (59) ಆತ್ಮಹತ್ಯೆ ಮಾಡಿಕೊಂಡಿದ್ದ. ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡನಹಳ್ಳಿ ನಿವಾಸಿಯಾಗಿರುವ ರಮೇಶ್ ಆಗಸ್ಟ್ 20ರಂದು ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಕಳ್ಳತನ ಆರೋಪದ ಮೇಲೆ ಅರೆಸ್ಟ್ ಆಗಿದ್ದಾಗ ಆತ್ಮಹತ್ಯೆಗೆ ಶರಣಾಗಿದ್ದ.

Read More

ಬೆಂಗಳೂರು : ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಟಿ ಹೆಚ್ ಓ ಒಬ್ಬರು ಸಾವನ್ನಪ್ಪಿದ್ದರೆ. ದೇವನಹಳ್ಳಿ ತಾಲೂಕು, ಆರೋಗ್ಯ ಅಧಿಕಾರಿ ಸಂಜಯ್ (52) ಇದೀಗ ಹೃದಯಘಾತದಿಂದ ಸಾವನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಟಿ ಎಚ್ ಓ ಆಗಿದ್ದ ಸಂಜಯ್ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯಯುಸಿರೆಳಿದಿದ್ದಾರೆ. ಐದು ವರ್ಷಗಳಿಂದ ದೇವನಹಳ್ಳಿಯಲ್ಲಿ ಟಿ ಎಚ್ ಆಗಿ ಸಂಜಯ್ ಕಾರ್ಯ ನಿರ್ವಹಿಸುತ್ತಿದ್ದರು ಉತ್ತಮ ಸೇವೆಯಿಂದ ಸಂಜಯ್ ಜನಮನ್ನಣೆ ಗಳಿಸಿದ್ದರು. ಅಂತಾರಾಷ್ಟ್ರೀಯ ಏರ್ಪೋರ್ಟ್ ಸೇರಿದಂತೆ ದೇವನಹಳ್ಳಿ ತಾಲೂಕಿನಲ್ಲಿ ಉತ್ತಮ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದರು. ಖಾಸಗಿ ಕಾರ್ಯಕ್ರಮ ನಿಮಿತ್ಯವಾಗಿ ಅವರು ಚೆನ್ನೈಗೆ ತೆರಳಿದಾಗ ತೀವ್ರ ಹೃದಯಘಾತದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಇದೀಗ ಚಿಕಿತ್ಸೆ ಫಲಿಸದೆ ಸಂಜಯ್ ಸಾವನಪ್ಪಿದ್ದಾರೆ ಮೃತ ಸಂಜಯ್ ಪತ್ನಿ ಮತ್ತು ಓರ್ವ ಮಗಳನ್ನು ಅಗಲಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬಾಶೆಟ್ಟಿ ಪಟ್ಟಣದ ಹೆದ್ದಾರಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿ ಹಳ್ಳಿಯಲ್ಲಿ ರಸ್ತೆಯಿಂದ ಬೈಕ್ ಸಮೇತ ಸವಾರನನ್ನು ಲಾರಿ ಸೈಡಿಗೆ ಎಳೆದೊಯ್ದಿದೆ. ಅಪಘಾತದ ರಭಸಕ್ಕೆ ಲಾರಿಯ ಮುಂಭಾಗ ಹಾಗೂ ಬೈಕ್ ಸಂಪೂರ್ಣವಾಗಿ ನಜ್ಗುಗುಜ್ಜಾಗಿದೆ. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ಬೈಕ್ ಸವಾರನ ಶವ ಶಿಫ್ಟ್ ಮಾಡಲಾಗಿದೆ.ಮೃತ ಬೈಕ್ ಸವಾರನ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More