Author: kannadanewsnow05

ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿಯ ವಿಚಾರವಾಗಿ ಆಂತರಿಕ ಕಿಚ್ಚಾಟ ಹೆಚ್ಚಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕು ಎಲ್ಲವನ್ನು ಮಾಡಿದ್ದೇನೆ. ನಾನು ಎಲ್ಲರ ಹಾಗೆ ಸ್ಟೇಜ್ ಮೇಲೆ ಬಂದು ಭಾಷಣ ಮಾಡಿಕೊಂಡು ಸುಮ್ಮನೆ ಹೋಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಗೆ ಶಿವಕುಮಾರ್ ನೀಡಿದ್ದಾರೆ. ನಾನು ಬಾವುಟ ಕಟ್ಟಿದ್ದೇನೆ. ಕಸ ಗುಡಿಸಿದ್ದೇನೆ. ಪಕ್ಷಕ್ಕೆ ಏನೇನು ಬೇಕು ಎಲ್ಲವನ್ನು ಮಾಡಿದ್ದೇನೆ. ಭಾಷಣ ಮಾಡಿಕೊಂಡು ಹೋಗು ಕೆಲಸ ಮಾಡಿಲ್ಲ ಸ್ಟೇಜ್ ಗೆ ಬಂದ ಮೇಲೆ ಭಾಷಣ ಮಾಡಿಕೊಂಡು ಹೋಗಿಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾವು ಲೈಫ್ ಟೈಮ್ ವರ್ಕರ್. ನಾನು ಸಿದ್ದರಾಮಯ್ಯ ಈಗಾಗಲೇ ಹೇಳಿದ್ದೇವೆ ಹೈಕಮಾಂಡ್ ಏನ್ ಹೇಳುತ್ತೆ ಅದರಂತೆ ಹೇಳಿಕೊಂಡು ಹೋಗುತ್ತೇವೆ ಅಂತ ಹೇಳಿದ್ದೇವೆ. ನಾನು ನನಗೆ ಯಾವ ಪೋಸ್ಟ್ ಇದ್ದರು ಪಕ್ಷದ…

Read More

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಸದ್ಯ ಸಾವಿನ ದವಡೆಯಿಂದ ಇಬ್ಬರು ಯುವತಿಯರು ಹೊರಬಂದಿದ್ದಾರೆ. ಧಗಧಗನೇ ಉರಿಯುತ್ತಿದ್ದ ಬಸ್‌ನಿಂದ ಇಬ್ಬರು ಯುವತಿಯರು ಪ್ರಾಣ ಉಳಿಸಿ ಬಂದ ದೃಶ್ಯ ವೈರಲ್ ಆಗಿದೆ. ಇನ್ನು ಇದೆ ವೇಳೆ ಅಪಘಾತದಲ್ಲಿ ಐದು ವರ್ಷದ ಮಗು ಸಹ ಸಾವನಪ್ಪಿದೆ ಎಂದು ತಿಳಿದುಬಂದಿದೆ. ಭೀಕರ ಬಸ್ ದೂರದಲ್ಲಿ 5 ವರ್ಷದ ಮಗು ಸಹ ಇದೀಗ ಸಾವನಪ್ಪಿದೆ. ನಾಲ್ಕು ಶವಗಳಲ್ಲಿ ಮಗುವಿನ ಶವದ ಗುರುತು ಪತ್ತೆಯಾಗಿದೆ. ಸಂಬಂಧಿಕರು ಮೃತ ಮಗುವಿನ ಗುರುತು ಪತ್ತೆ ಹಚ್ಚಿದ್ದಾರೆ. ಐದು ವರ್ಷದ ಪುಟ್ಟ ಮಗು ಸಹ ಈ ಒಂದು ಭೀಕರ ಬಸ್ ದುರಂತದಲ್ಲಿ ಸುಟ್ಟು ಕರಕಲಾಗಿದೆ. ಸಂಬಂಧಿಕರು ಮೃತ ಮಗುವಿನ ಗುರುತು ಪತ್ತೆ ಹಚ್ಚಿದ್ದಾರೆ. ಘಟನೆ ವಿವರ ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ…

Read More

ವಿಜಯನಗರ : ವಿಜಯನಗರದಲ್ಲಿ ಪೊಲೀಸರು ಭರ್ಜರಿ ಕಾರ್ಯ ಆಚರಣೆ ನಡೆಸಿದ್ದು ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಬಾಲಕ ಸೇರಿ 6 ಮಂದಿ ಆರೋಪಿಗಳನ್ನು ಬಂಧಿಸಿ 500 ರೂ. ಮುಖ ಬೆಲೆಯ ಒಟ್ಟು 40,000 ಮೊತ್ತದ 80 ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರಸೀಕೆರೆ ಗ್ರಾಮದಲ್ಲಿ ನಡೆದ ಶ್ರೀ ದಂಡಿ ದುರ್ಗಮ್ಮ ದೇವಸ್ಥಾನದ ಜಾತ್ರಾ ಸಮಯದಲ್ಲಿ ಆಟಿಕೆ ನಡೆಸುವ ಶ್ರೀಮಾತ ಅಮ್ಯೂಸ್‌ಮೆಂಟ್‌ ಪಾರ್ಕ್‌ ಅಂಗಡಿಯಲ್ಲಿ ಅಪರಿಚಿತರು 500 ರೂ. ಮುಖ ಬೆಲೆಯ ಎರಡು ನೋಟುಗಳನ್ನು ಚಲಾವಣೆ ಮಾಡಿದ್ದರು.ಈ ಕುರಿತು ಆಟಿಕೆ ಅಂಗಡಿ ಮಾಲೀಕ ವೀರಭದ್ರಪ್ಪ ಎಚ್‌.ಕೆ ಅವರು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಅರಸೀಕೆರೆ ಪೊಲೀಸರು ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಅರಸೀಕೆರೆ ಕೆ.ಮಹಮ್ಮದ್ ರಿಹಾನ್ (18), ಉಚ್ಚಂಗಿದುರ್ಗದ ಮುಹಮ್ಮದ್ ಅಖಿಲ್ (18), ಆರಸೀಕೆರೆ ನರೇಂದ್ರ ಪ್ರಸಾದ್ ಎನ್.ಪಿ (19),…

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೇಪಾಪುರ ಗ್ರಾಮದಲ್ಲಿ ಕೊನೆಗೂ ಹುಲಿ ಬೋನಿಗೆ ಬಿದ್ದಿದೆ. ಬೋನಿಗೆ ಬಿದ್ದ ಹುಲಿ ನೋಡಲು ಗ್ರಾಮಸ್ಥರು ಕಿಕ್ಕಿರಿದು ಸೇರಿದ್ದಾರೆ. ಕೇಜ್ ನಲ್ಲಿ ಲಾಕ್ ಆಗುತ್ತಿದ್ದಂತೆ ಹುಲಿ ವಿಚಲಿತವಾಗಿ ಗರ್ಜಿಸಿದೆ. ಕಳೆದ ಎರಡು ಮೂರು ತಿಂಗಳಿಂದ ಹುಲಿ ಆಗಾಗ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುತ್ತಿತ್ತು ಇದೀಗ ಅರಣ್ಯ ಸಿಬ್ಬಂದಿಗಳು ಹುಲಿ ಸೆರೆಹಿಡಿದಿದ್ದು ದೆಪಾಪುರ ಗ್ರಾಮಸ್ಥರು ನೆಟ್ಟು ಉಸಿರು ಬಿಟ್ಟಿದ್ದಾರೆ. ಸ್ಥಳಕ್ಕೆ ಬಂಡಿಪುರ ಹುಲಿ ಸಂರಕ್ಷಿತ ಅರಣ್ಯದ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ

Read More

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಜಯಲಕ್ಷ್ಮಿ ಅವರು ಪೊಲೀಸರಿಗೆ ದೂರು ಕೊಡುತ್ತಿದ್ದಂತೆ ಬೆದರಿದ ಕಿಡಿಗೇಡಿಗಳು ತಮ್ಮ ಅಕೌಂಟ್ ಗಳನ್ನು ಹಾಗೂ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮೆಸೇಜುಗಳನ್ನು ಸಹ ಇದೀಗ ಡಿಲೀಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಅಶ್ಲೀಲ ಮೆಸೇಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್ಐಆರ್ ದಾಖಲಾಗುತ್ತಿದ್ದಂತೆ ಕಿಡಿಗೇಡಿಗಳು ತಮ್ಮ ಅಕೌಂಟ್ ಗಳನ್ನು ಡಿಲೀಟ್ ಮಾಡಿದ್ದಾರೆ. 18 ಇನ್ಸ್ಟಾಗ್ರಾಮ್ ಖಾತೆಗಳ ಕುರಿತು ವಿಜಯಲಕ್ಷ್ಮಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಅವರಿಗೆ ಕಮಿಷನರ್ ಗೆ ದೂರು ನೀಡಿದ್ದರು. ದೂರು ನೀಡಿದ ಬಳಿಕ ಅಕೌಂಟ್ ಗಳ ಪರಿಶೀಲನೆ ವೇಳೆ ಕೆಲವು ಕಿಡಿಗೇಡಿಗಳು ತಮ್ಮ ಅಕೌಂಟ್ ಗಳನ್ನು ಬ್ಲಾಕ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಹಾಸನ : ಚಿತ್ರದುರ್ಗದ ಹಿರಿಯೂರು ಬಳಿ ಲಾರಿ ಹಾಗೂ ಖಾಸಗಿ ಬಸ್ ನಡುವೆ ಭೀಕರವಾದ ಅಪಘಾತ ಸಂಭವಿಸಿ 9 ಜನ ಸಜೀವ ದಹನಗೊಂಡಿದ್ದಾರೆ. ಇನ್ನು ಈ ಒಂದು ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಕಣ್ಮರೆಯಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಟ್ಟಿಗೆ ಇಂಜಿನಿಯರಿಂಗ್ ಮುಗಿಸಿದ್ದರು. ಬಳಿಕ ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ, ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು. ಘಟನೆ ವಿವರ ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 11 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಬಸ್ ನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದ ಮಾಹಿತಿ ಲಭ್ಯವಾಗಿದೆ. ಮಂಜುನಾಥ್, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತಿಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ,…

Read More

ಬೆಂಗಳೂರು : ಮದುವೆಯಾಗಿ ಒಂದು ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ನಡೆದಿದೆ. ಪತಿಯ ಮನೆಯಲ್ಲಿ ಐಶ್ವರ್ಯ (26) ಆತ್ಮಕ್ಕೆ ಶರಣಾಗಿದ್ದಾಳೆ ಗಂಡನೇ ಕೊಲೆ ಮಾಡಿದ್ದಾರೆ ಎಂದು ಐಶ್ವರ್ಯ ಪೋಷಕರು ಆರೋಪಿಸುತ್ತಿದ್ದಾರೆ. ನಾಗಮಂಗಲ ನಿವಾಸಿಯಾಗಿದ್ದ ಐಶ್ವರ್ಯ MBA ವ್ಯಾಸಂಗ ಮಾಡಿದ್ದರು. ಮಮತಾ ಹಾಗೂ ಕೃಷ್ಣಮೂರ್ತಿ ದಂಪತಿಯ ಹಿರಿಯ ಮಗಳು ಐಶ್ವರ್ಯ ಎಂಬಿಎ ಓದಿದ್ದಳು. ಐಶ್ವರ್ಯಗೆ ಲಿಖಿತ್ ಸಿಂಹ ಜೊತೆ ಮದುವೆಯಾಗಿತ್ತು. ಬಾಗಲಗುಂಟೆ ಪೈಪ್ ಲೈನ್ ಮಲ್ಲಸಂದ್ರ ನಿವಾಸಿಯಾಗಿರುವ ಲಿಖಿತ್ ಸಿಂಹ ಜೊತೆ ಮದುವೆಯಾಗಿತ್ತು. ಎರಡು ಕುಟುಂಬಗಳು ಪರಸ್ಪರ ಒಪ್ಪಿಗೆ ಮೇರೆಗೆ ಮದುವೆಯಾಗಿತ್ತು. 27 ದಿನಗಳ ಹಿಂದೆ ಅಷ್ಟೇ ಐಶ್ವರ್ಯ ಲಿಖಿತ್ ಸಿಂಹ ಮದುವೆಯಾಗಿತ್ತು. ಮದುವೆಯಾಗಿ ಕೆಲವೇ ದಿನಗಳಲ್ಲಿ ಪತಿಯ ವಿರುದ್ಧ ಕಿರುಕುಳ ಕೇಳಿ ಬಂದಿದೆ. ಈ ಕುರಿತು ನಿನ್ನೆ ಬೆಳಿಗ್ಗೆ ತಾನೆ ಎರಡು ಕುಟುಂಬಗಳು ರಾಜಿ ಪಂಚಾಯತಿ ಮಾಡಿದ್ದರು ಇಷ್ಟಾದರೂ ನಿನ್ನೆ ಸಂಜೆ ಐಶ್ವರ್ಯ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹಲ್ಲೆ ಬಳಿಕ ಮನೆಯಲ್ಲಿ ನೇಣು…

Read More

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಎಂ ಸಿದ್ದರಾಮಯ್ಯ ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಚಿತ್ರದುರ್ಗದಲ್ಲಿ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ‌ ಲಭಿಸಲಿ‌ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ಘಟನೆ ವಿವರ ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ…

Read More

ವಿಗ್ರಹಗಳ ಇತಿಹಾಸ ನರಹರಿತೀರ್ಥರ ಮೂಲಕ ಬಂದು ಆಚಾರ್ಯರು ಪೂಜಿಸಿದ ಈ ವಿಗ್ರಹಗಳು ಬಹಳ ಪ್ರಾಚೀನವಾದವು, ಇವುಗಳನ್ನು “ಚತುರ್ಯುಗಮೂರ್ತಿಗಳು” ಎಂದು ಜನಪ್ರಿಯವಾಗಿ ಕರೆಯಲಾಗುತ್ತದೆ. ವಸಿಷ್ಠ ರಾಮಾಯಣ, ಅಧ್ಯಾತ್ಮ ರಾಮಾಯಣ ಮತ್ತು ಮಾರ್ಕಂಡೇಯ ಪುರಾಣಗಳಲ್ಲಿ ಅವುಗಳ ವೈಭವದ ಗತಕಾಲದ ಬಗ್ಗೆ ಉಲ್ಲೇಖಗಳಿವೆ. ಈ ಎರಡೂ ವಿಗ್ರಹಗಳು ಬಹಳ ಸುಂದರವಾಗಿವೆ. ಇವುಗಳ ದರ್ಶನ ಪಡೆದ ಯಾವುದೇ ಧರ್ಮನಿಷ್ಠ ಆತ್ಮವು ಆಳವಾದ ಭಕ್ತಿಯನ್ನು ಹುಟ್ಟುಹಾಕದೆ ಇರಲಾರದು. ಶ್ರೀ ಮೂಲರಾಮನ ವಿಗ್ರಹವನ್ನು ನೋಡಿದ ಪುರಾತತ್ವ ಅಧಿಕಾರಿಯೊಬ್ಬರು ಅದರ ರೂಪ, ಸೌಂದರ್ಯ, ಪ್ರಾಚೀನತೆಯ ಸೂಕ್ಷ್ಮತೆಯ ಬಗ್ಗೆ ತಮ್ಮ ದಿಗ್ಭ್ರಮೆಯನ್ನು ವ್ಯಕ್ತಪಡಿಸಿದ್ದಾರೆ. ಶ್ರೀ ಜಗನಾಥದಾಸರು ತಮ್ಮ ಒಂದು ಕೀರ್ತನೆಯಲ್ಲಿ ಈ ವಿಗ್ರಹಗಳ ಇತಿಹಾಸವನ್ನು ಶ್ರೀ ವದೀಂದ್ರತೀರ್ಥರು ತಾವು ಬರೆದ “ಶ್ರೀ ರಾಘವೇಂದ್ರ-ಮಠ-ಗಥಾರ್ಚಗತಿ-ಕ್ರಮ” ಎಂಬ ಪುಸ್ತಕದಲ್ಲಿ ಮಾಡಿದಂತೆಯೇ ಅದೇ ಕಥಾನಕದಲ್ಲಿ ವಿವರಿಸಿದ್ದಾರೆ. ಶ್ರೀ ವಿಜಯದಾಸರು ಈ ವಿಗ್ರಹಗಳನ್ನು ಹೊಂದಲು ಕಾರಣವಾದ ಘಟನೆಗಳನ್ನು ಚಿತ್ರಿಸುವ ಪ್ರತ್ಯೇಕ ಸುಲಾದಿಯನ್ನು ರಚಿಸಿದ್ದಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್…

Read More

ಬಾಗಲಕೋಟೆ : 75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸುವಂತಾಬೇಕು. ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು. ಎಲ್ಲರೂ ಸಮಾನರಾಗಿ ಬಾಳುವೆ ನಡೆಸಬೇಕು. ಡಾ.ಅಂಬೇಡ್ಕರ್‌ ಅವರು ನೀಡಿರುವ ಮತದಾನ ಹಕ್ಕನ್ನು ಸರಿಯಾರಿ ಬಳಸಿಕೊಂಡು ನಮಗೆ ಬೇಕಾದ ನಾಯಕರನ್ನು ಆರಿಸಿ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಕರೆ ನೀಡಿದರು. ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಹಜರತ್‌ ಟಪ್ಪು ಸುಲ್ತಾನ ಜಯಂತ್ಯುತ್ಸವ ಸಮಿತಿ ವತಿಯಿಂದ ಏರ್ಪಡಿಸಿದ್ದ ಕೌಮಿ ಏಕತಾ ಸಮಾಮೇಶ ಉದ್ದೇಶಿಸಿ ಮಾತನಾಡಿದ ಅವರು, ಟಿಪ್ಪು ಸುಲ್ತಾನರು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದರು. ಆಗಿನ ಕಾಲದಲ್ಲೇ ರಾಕೆಟ್‌ಗಳನ್ನು ತಯಾರಿಸಿ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು. ಅನೇಕ ಮಠ, ಮಂದಿರ ನಿರ್ಮಿಸಿದ್ದರು. ನಾಣ್ಯಗಳನ್ನು ಚಲಾವಣೆಗೆ ತಂದಿದ್ದರು. ಸ್ವಾರ್ಥಕ್ಕಾಗಿ ದೇಶವನ್ನು ಗಟ್ಟಿಯಾಗಿ ಕಟ್ಟಲು ಶ್ರಮಿಸಿದ ಟಿಪ್ಪು ಸುಲ್ತಾನರ ಇತಿಹಾಸ ತಿರುಚುವ ಕೆಲಸ ನಡೆದಿದೆ ಎಂದು ಕಳವಳ ವ್ಯಕ್ತಪಡಿಸಿದರು. ಕೆಟ್ಟ ಪ್ರವೃತ್ತಿ ಬಿಟ್ಟು ಒಗ್ಗಟ್ಟಿನಿಂದ ಬಸವತತ್ವಗಳ ಆಚರಣೆಗೆ ತರುವ ಮೂಲಕ ಎಲ್ಲರೂ ಸಮಾನರಾಗಿ ಬಾಳುವೆ ನಡೆಸಬೇಕು. ಡಾ.ಅಂಬೇಡ್ಕರ್‌ ಅವರು…

Read More