Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಿನ್ನೆ ತಾನೆ ಸಾರಿಗೆ ಬಸ್ಗಳಲ್ಲಿ ಶೇ. 15 ರಷ್ಟು ಟಿಕೆಟ್ ದರ ಏರಿಕೆ ಮಾಡಿ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಇದರ ಬೆನ್ನೆಲ್ಲಿ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು ಶೀಘ್ರದಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಹಾಲಿನ ದರ ಏರಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಕೆ ವೆಂಕಟೇಶ್ ಮಾತನಾಡಿದ್ದು, ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. 5 ರೂ, 3 ರೂ, 10 ರೂ. ಮಾಡುತ್ತೇವೋ ಅದು ಇನ್ನೂ ತೀರ್ಮಾನ ಆಗಿಲ್ಲ ಎಂದು ತಿಳಿಸಿದರು. ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರ ಒತ್ತಾಯ ಇದೆ. ಯಾಕೆಂದರೆ ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ ಆಗಿದೆ. ಈ ಹಿನ್ನೆಲೆ ಹಾಲಿನ ದರ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ…
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಜೆಡಿಎಸ್ ಪಕ್ಷವನ್ನು ಮುಗಿಸಲು ಆಪರೇಷನ್ ಹಸ್ತ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಪರೇಷನ್ ಹಸ್ತದ ಬಗ್ಗೆ ಜೆಡಿಎಸ್ ಶಾಸಕ ಜಿಟಿ ದೇವೆಗೌಡ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅಂತಹ ಯಾವುದೆ ವರ್ಕೌಟ್ ಆಗಲ್ಲ ಬಿಡಿ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಮುಗಿಸಬೇಕು ಅಂತ ಆಪರೇಷನ್ ಹಸ್ತ ಮಾಡುತ್ತಿದ್ದಾರೆ. 12 ರಿಂದ 13 ಶಾಸಕರನ್ನು ಕರೆತನ್ನಿ ಅಂತ ನಡೆಯುತ್ತಿರುವುದು ಗೊತ್ತಿದೆ.ಆದರೆ ಯಾವ ಶಾಸಕರು ಸಹ ಹೋಗುವ ಪರಿಸ್ಥಿತಿ ಇಲ್ಲ. ಕಾಂಗ್ರೆಸ್ನವರು ಏನೇನು ಮಾಡುತ್ತಿದ್ದಾರೆ ಎಲ್ಲವೂ ಗೊತ್ತಿದೆ. ದೇವರೇ ಅವರಿಗೆ ಶಿಕ್ಷೆ ಕೊಡುತ್ತಾನೆ ಅಂತ ನನಗೆ ನಂಬಿಕೆ ಇದೆ ಎಂದರು.
ಬೆಂಗಳೂರು : ಪ್ರೀತಿಸಿದ ಯುವತಿ ದೂರವಾಗಿದ್ದಾಳೆ ಎಂದು ಮನನೊಂದ ಯುವಕನೊಬ್ಬ ರೂಮ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೂಮ್ನಲ್ಲಿ ನೇಣು ಬಿಗಿದುಕೊಂಡು ಸತೀಶ್ ಕುಮಾರ್ (25) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಾಸಗಿ ಕಂಪನಿ ಒಂದರಲ್ಲಿ ಮೃತ ಸತೀಶ್ ಕುಮಾರ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕಾಲೇಜಿನಿಂದಲೇ ಸತೀಶ್ ಕುಮಾರ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚಿಗೆ ಸತೀಶ್ ಕುಮಾರ್ ಇಂದ ಯುವತಿ ದೂರವಾಗಿದ್ದಾಳೆ. ಇದರಿಂದ ಮನನೊಂದು ನೇಣು ಬಿಗಿದುಕೊಂಡು ಸತೀಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸತೀಶ್ ಮೃತ ದೇಹ ಅಂಬೇಡ್ಕರ್ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.ಬಾಣಸವಾಡಿ ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.
ತುಮಕೂರು : ವೈದ್ಯರು ಪೆಂಟಾ 1 ಲಸಿಕೆ ನೀಡಿದ್ದರಿಂದ 2 ತಿಂಗಳು ಮಗು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಸಿಂಗನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಎರಡುವರೆ ತಿಂಗಳ ಮಗುವಿಗೆ ಪೆಂಟಾ 1 ಲಸಿಕೆ ನೀಡಲಾಗಿತ್ತು. ಭಕ್ತರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಲಸಿಕೆ ಕೊಡಿಸಲಾಗಿತ್ತು. ಮಗುವಿಗೆ ಆಸ್ಪತ್ರೆಯ ವೈದ್ಯರು ಒಟ್ಟಿಗೆ ಮೂರು ಇಂಜೆಕ್ಷನ್ ಗಳನ್ನು ನೀಡಿದ್ದರು. ಹಾಗಾಗಿ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮಗು ಸಾವನ್ನಪ್ಪಿದೆ. ಚಿಕ್ಕಮ್ಮ ಮುರಳಿ ದಬ್ಬತಿಯ ಗಂಡು ಮಗು ಎಂದು ಬೆಳಗ್ಗೆ ಸಾವನಪ್ಪಿದೆ. ವೈದ್ಯರ ಎಡವಟ್ಟಿನಿಂದಲೇ ಮಗು ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ ಘಟನೆ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು : ಹೊಸ ವರ್ಷದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಅಡುಗೆ ತಯಾರಿಸುವ ವೇಳೆ ಕುಕ್ಕರ್ ಸ್ಫೋಟಗೊಂಡು ಇಬ್ಬರು ಅಡುಗೆ ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರ ಸರಕಾರಿ ಶಾಲೆಯಲ್ಲಿ ನಡೆದಿದೆ. ಪುರವರ ಸರಕಾರಿ ಪ್ರೌಢಶಾಲೆಯ ಅಡುಗೆ ಕೋಣೆಯಲ್ಲಿ ಹೊಸ ವರ್ಷದ ಪ್ರಯುಕ್ತ ಶಾಲಾ ಮಕ್ಕಳಿಗೆ ಟೊಮೆಟೊ ಬಾತ್ ಹಾಗೂ ಹೆಸರುಬೇಳೆ ಪಾಯಸ ಸಿದ್ಧಪಡಿಸುವ ವೇಳೆ ಕುಕ್ಕರ್ ಸ್ಫೋಟಗೊಂಡಿದೆ. ಈ ವೇಳೆ ಸ್ಥಳದಲ್ಲಿದ್ದ ಅಡುಗೆ ಸಿಬ್ಬಂದಿ ಮೇಲೆ ನೀರು ಹಾಗೂ ಬೇಳೆ ಸಿಡಿದು ಉಮಾದೇವಿ ಗಂಭೀರಗೊಂಡಿದ್ದಾರೆ. ಸಹಾಯಕಿ ಜಯಮ್ಮ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗ್ಯಾಸ್ ಸಿಲಿಂಡರ ಆಫ್ ಮಾಡಿ ಕುಕ್ಕರ್ ವಿಷಲ್ ತೆಗೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.ತಕ್ಷಣ ಗಾಯಾಳನ್ನು ಗೊಂದಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತಂತೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ.
ಬೆಂಗಳೂರು : ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಬಸ್ ಟಿಕೆಟ್ ದರ ಶೇಕಡ 15ರಷ್ಟು ಹೆಚ್ಚಿಗೆ ಮಾಡಿ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಇದರ ಬೆನ್ನಲ್ಲೇ ಸಾರಿಗೆ ನೌಕರರಿಗೆ ಇದೀಗ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ನೌಕರರ ಪಿಎಫ್ ಹಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಸಾವಿರ ಕೋಟಿ ರೂಪಾಯಿ ನೀಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೌದು ಕಳೆದ ವರ್ಷ ನವೆಂಬರ್ ನಲ್ಲಿ KSRTC, KKRTC, BMTC ಹಾಗೂ NWKRTC ಎಲ್ಲ ನಾಲ್ಕು ಸಾರಿಗೆ ನಿಗಮಗಳು ನೌಕರರ ಸುಮಾರು 2972 ಕೋಟಿ ಹಣವನ್ನು ಪಿಎಫ್ ಟ್ರಸ್ಟ್ ಗೆ ಜಮೆ ಮಾಡದೇ ದುರ್ಬಳಕೆ ಮಾಡಿ ಕೊಂಡಿವೆ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಇದೀಗ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ನೌಕರರ ಪಿಎಫ್ ಟ್ರಸ್ಟ್ ಗೆ 2000 ಕೋಟಿ ಕೋಟಿ ಹಣ ನೀಡಲು ಸಂಪುಟದಲ್ಲಿ ಅನುಮೋದನೆ ದೊರೆತಿದೆ. ಸಾರಿಗೆ ಸಿಬ್ಬಂದಿಗಳ ಪಿಎಫ್ ಟ್ರಸ್ಟ್ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಲು…
ಬಳ್ಳಾರಿ : ಕಳೆದ ವರ್ಷ ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಇಡೀ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಇದೀಗ ಬಳ್ಳಾರಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ವಿಮ್ಸ್ ಆಸ್ಪತ್ರೆಯಲ್ಲಿ ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀಕ್ಷಕ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಹೌದು ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಆಡಳಿತ ವಿಭಾಗದಲ್ಲಿ ಲೈಂಗಿಕ ದೌರ್ಜನ್ಯ ನಡೆದಿದ್ದು, ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಇಲಾಖೆಯ ಅಧೀಕ್ಷಕ ವಿ.ಕೆ ವೆಂಕಟೇಶ್ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀಕ್ಷಕ ವಿ.ಕೆ ವೆಂಕಟೇಶ್ ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಳ್ಳಾರಿ ಮಹಿಳಾ ಠಾಣೆಯಲ್ಲಿ ವಿ.ಕೆ ವೆಂಕಟೇಶ್ ವಿರುದ್ಧ ಸಂತ್ರಸ್ತೆ ಇದೀಗ ದೂರು ನೀಡಿದ್ದಾಳೆ. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಇದೀಗ…
ತುಮಕೂರು : ಜಮೀನು ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಮಹಿಳೆ ಒಬ್ಬಳು ದೂರು ನೀಡಲು ಠಾಣೆಯ ಮೆಟ್ಟಿಲು ಏರಿದ್ದಾಳೆ. ಆದರೆ ಠಾಣೆಯಲ್ಲಿದ ಡಿವೈಎಸ್ಪಿ ಅಧಿಕಾರಿ ಒಬ್ಬ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕ್ಷೇತ್ರ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ. ಹೌದು ಪಾವಗಡದ ಮಹಿಳೆಯೊಬ್ಬರು ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆ ಪಾವಗಡದಿಂದ ಡಿವೈಎಸ್ಪಿ ಕಚೇರಿಗೆ ಬಂದಿದ್ದರು. ಮಹಿಳೆಯನ್ನು ಏಕಾಂತ ಕೊಠಡಿಗೆ ಕರೆದುಕೊಂಡು ಹೋದ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾನೆ. ಗೃಹ ಸಚಿವ ಜಿ. ಪರಮೇಶ್ವರ್ ಅವರ ಜಿಲ್ಲೆಯಲ್ಲಿಯೇ ಇಂತಹ ಘಟನೆ ನಡೆದಿದ್ದು, ಇದು ಇಡೀ ಪೊಲೀಸ್ ಇಲಾಖೆಯ ತಲೆ ತಗ್ಗಿಸುವಂತಹ ಘಟನೆಯಾಗಿದೆ. ಡಿವೈಎಸ್ಪಿ ಕಚೇರಿಗೆ ಮಹಿಳೆಯ ಜೊತೆ ಆಗಮಿಸಿದ್ದ ಅನಿಲ್ ಎಂಬಾತನು ವಿಡಿಯೋ ಸೆರೆ ಹಿಡಿದಿದ್ದಾರೆ ಎಂದು ಶಂಕಿಸಲಾಗಿದೆ. ಬಳಿಕ, ಬಳಿಕ ವಾಟ್ಸ್ಅಪ್…
ಚಿತ್ರದುರ್ಗ : ಕಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟೈರ್ ಸ್ಫೋಟಗೊಂಡು ಟ್ರಾಕ್ಟರ್ ನಲ್ಲಿದ್ದ ಓರ್ವ ಕಾರ್ಮಿಕ ಸಾವನಪ್ಪಿದ್ದು, ಉಳಿದ ಇಬ್ಬರು ಕಾರ್ಮಿಕರಿಗೆ ಗಾಯವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರೇಣುಕಾಪುರ ಗ್ರಾಮದಲ್ಲಿ ನಡೆದಿದೆ. ರೇಣುಕಾಪುರ ಬಳಿ ಟ್ರಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ.ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರೇಣುಕಾಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ರೇಣುಕಾಪುರ ಗ್ರಾಮದ ಶಂಕರನಾಗ (40) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಟ್ರಾಕ್ಟರ್ ನಲ್ಲಿದ್ದ ಮತ್ತಿಬ್ಬರು ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿದ್ದು ಕಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟೈಯರ್ ಸ್ಪೋಟಗೊಂಡು ಪಲ್ಟಿಯಾಗಿದೆ.ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಕಳೆದ ಡಿಸೆಂಬರ್ 20ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕುಡ ಗ್ರಾಮದಲ್ಲಿ ಗರ್ಭಿಣಿ ಸುವರ್ಣ (33) ಎನ್ನುವ ಮಹಿಳೆಯ ಹತ್ಯೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಅಪ್ಪಯ್ಯ ರಾಚಯ್ಯ ಮಠಪತಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಕೇವಲ 50 ಸಾವಿರ ಹಣಕ್ಕಾಗಿ ಆರೋಪಿ ಅಪ್ಪಯ್ಯ ಗರ್ಭಿಣಿಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಡಿಸೆಂಬರ್ 20ರಂದು ಅಥಣಿ ತಾಲೂಕಿನ ಚಿಕ್ಕೋಡು ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿತ್ತು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೋಡು ಗ್ರಾಮ ಸುವರ್ಣಳನ್ನು ಭಾವ ಅಪ್ಪಯ್ಯ ಭೀಕರವಾಗಿ ಕೊಂದು ಪರಾರಿಯಾಗಿದ್ದ. ಬಾಗಲಕೋಟೆ ಜಿಲ್ಲೆಯ ತೆರದಾಳದಿಂದ ಬಂದು ಕೊಲೆ ಮಾಡಿ ಆತಪರಾರಿಯಾಗಿದ್ದ ಇದೀಗ ಪೊಲೀಸರು ಮಹಾರಾಷ್ಟ್ರದ ಮೀರಜ್ ನಲ್ಲಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಕೆಲ ತಿಂಗಳ ಹಿಂದೆ 50,000 ಸಾಲವನ್ನು ಕೊಟ್ಟು ಸುವರ್ಣ ಕೊಟ್ಟಿದ್ದಳು. ಪದೇಪದೇ ಹಣ ಕೇಳಿದ್ದಕ್ಕೆ ಅಪ್ಪಯ್ಯ ಕೊಲೆಯ ನಿರ್ಧಾರಕ್ಕೆ ಬಂದಿದ್ದಾನೆ. ಕೊಂದರೆ ಐವತ್ತು ಸಾವಿರ ಉಳಿಯುತ್ತೆ, ಮೈ ಮೇಲಿನ ಚಿನ್ನ ಸಿಗುತ್ತದೆ ಎಂದು ಸಂಚು…