Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ನಮ್ಮ ಯಾತ್ರಿ ಆಪ್ ನಲ್ಲಿ ಮಹಿಳೆಯೋಬ್ಬರು ಆಟೋ ಬುಕ್ ಮಾಡಿರುತ್ತಾರೆ.ಆದರೆ ಕುಡಿದ ನಶೆಯಲ್ಲಿ ನಿಗದಿತ ಸ್ಥಳಕ್ಕೆ ತೆರಳದೆ ಆಟೋ ಚಾಲಕ ಬೇರೆ ಸ್ಥಳಕ್ಕೆ ತೆರಳಿದ್ದಾನೆ. ಈ ವೇಳೆ ಭೀತಾರಾದಂತಹ ಮಹಿಳೆ ಆಟೋದಿಂದ ಜಿಗಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಲ್ಲಿ ಮಹಿಳೆಯ ಜೊತೆಗೆ ಆಟೋ ಚಾಲಕ ಕಿರಿಕ್ ಮಾಡಿಕೊಂಡಿದ್ದು, ಆಟೋ ಚಾಲಕನ ಕಿರುಕುಳಕ್ಕೆ ಮಹಿಳೆ ಭಯ ಭೀತಾರಾಗಿದ್ದಾರೆ.ನಮ್ಮ ಯಾತ್ರೆ ಆಪ್ ನಲ್ಲಿ ಆಟೋವನ್ನು ಮಹಿಳೆ ಬುಕ್ ಮಾಡಿದ್ದಾರೆ. ನಿಗದಿದ್ದ ಸ್ಥಳಕ್ಕೆ ಹೋಗದೆ ಆಟೋ ಚಾಲಕ ಬೇರೆ ಕಡೆ ಹೋಗಿದ್ದಾನೆ. ಕುಡಿದ ನಶೆಯಲ್ಲಿ ಮಹಿಳೆಯ ಜೊತೆ ಕಿರಿಕ್ ಮಾಡಿದ್ದಾನೆ. ಈ ವೇಳೆ ಗಾಡಿ ನಿಲ್ಲಿಸಲ್ಲ ಜಿಗಿದು ಹೋಗು ಎಂದು ಚಾಲಕ ಹೇಳಿದಾಗ, ಅನಿವಾರ್ಯವಾಗಿ ಮಹಿಳೆ ಚಲಿಸುತ್ತಿದ್ದ ಆಟೋದಿಂದ ಜಿಗಿದಿದ್ದಾಳೆ. ಹೊರಮಾವಿನಿಂದ ಥಣಿಸಂದ್ರಕ್ಕೆ ಮಹಿಳೆ ಆಟೋ ಬುಕ್ ಮಾಡಿದ್ದರು.ಆದರೆ ಚಾಲಕ ಹೆಬ್ಬಾಳದತ್ತ ಆಟೋ ತಿರುಗಿಸಿದ್ದಾನೆ ಎಂದು ಮಹಿಳೆಯ ಆರೋಪಿಸಿದ್ದಾರೆ. ನಿಲ್ಲಿಸುವಂತೆ ಹೇಳಿದಾಗ ಆಟೋ ಚಾಲಕ…

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಇಬ್ಬರು ಬಾಲಕರನ್ನು ಕಿಡ್ನಾಪ್ ಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯ ವೇಳೆ ಸತ್ಯಾಂಶ ತಿಳಿದು ಇದೀಗ ಪೊಲೀಸರೇ ಶಾಕ್ ಆಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಬಳಿ ಬಾಲಕರ ಕಿಡ್ನ್ಯಾಪ್ ಯತ್ನ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಗ್ರಾಮದಲ್ಲಿ ಮಕ್ಕಳ ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ವಿಚಾರಣೆ ವೇಳೆ ಚಾಲಕರು ಕಥೆ ಕಟ್ಟಿದ್ದು ಬಯಲಾಗಿದೆ. ಹೋಂವರ್ಕ್ಹಾಗೂ ಟ್ಯೂಷನ್ ನಿಂದ ತಪ್ಪಿಸಿಕೊಳ್ಳಲು ಬಾಲಕರು ಕಿಡ್ನಾಪ್ ಕಥೆ ಕಟ್ಟಿದ್ದಾರೆ ಎಂದು ತಿಳಿದುಬಂದಿದೆ. ಓಮಿನಿಯಲ್ಲಿ ಬಂದ ಮುಸುಕು ದಾರಿಗಳು ಕಿಡ್ನ್ಯಾಪ್ಗೆ ಯತ್ನಿಸಿದ್ದರು. ಅಪಹರಣಕಾರರು ಹಿಂದಿಯಲ್ಲಿ ಮಾತನಾಡುತ್ತಿದ್ದರು. ಈ ಬಾಲಕರಲ್ಲ ಎಂಬ ಕರೆ ಬಂದಾಗ ಬಿಟ್ಟು ಹೋದರು ಎಂದು ಬಾಲಕರು ತಿಳಿಸಿದ್ದಾರೆ. ಬಾಲಕರಿಬ್ಬರ ಅಪಹರಣ ಯತ್ನ ಆರೋಪ ಕೇಸ್ ಆತಂಕ ಸೃಷ್ಟಿ ಮಾಡಿತ್ತು. ಅಬ್ಬಿನಹೊಳೆ ಠಾಣೆ ಪೊಲೀಸರಿಂದ ತನಿಖೆಯ ವೇಳೆ ಈ ಒಂದು ಸತ್ಯಾಂಶ ಬಯಲಾಗಿದೆ.

Read More

ಬೆಂಗಳೂರು : ಕುಡಿದ ಮಾತಿನಲ್ಲಿ ಕುದುರೆ ಸವಾರಿ ಮಾಡುವ ವಿಚಾರಕ್ಕೆ ಎರಡು ಗ್ರಾಮಗಳ ಯುವಕರ ಗುಂಪುಗಳ ನಡುವೆ ಮಾರಮಾರಿ ನಡೆದಿದ್ದು ಈ ಒಂದು ಗಲಾಟೆಯಲ್ಲಿ ಆರು ಯುವಕರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬ್ಯಾಟರಾಯಸ್ವಾಮಿ ಜಾತ್ರೆಯಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಮೋಟಗಾನಹಳ್ಳಿ ಹಾಗೂ ಯಂಟಗಾನಹಳ್ಳಿಯ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಮೋಟಗಾನಹಳ್ಳಿ ಹಾಗೂ ಯಂಟಗಾನಹಳ್ಳಿಯ ಯುವಕರ ನಡುವೆ ಗಲಾಟೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎರಡು ಗ್ರಾಮಗಳ ಯುವಕರ ಮಧ್ಯ ಮಾರಾಮಾರಿ ನಡೆದಿದೆ. ಈ ಒಂದು ಘಟನೆಯಲ್ಲಿ 6 ಜನರಿಗೆ ಗಂಭೀರವಾಗಿ ಗಾಯವಾಗಿದ್ದು, ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಕುಡಿದ ಮತ್ತಿನಲ್ಲಿ ಕುದುರೆ ಮೇಲೆ ಸವಾರಿ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ. ಘಟನೆ ಸಂಭಂದ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹೈದ್ರಾಬಾದ್ : ಹೈದರಾಬಾದ್ ನಲ್ಲಿ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಸಿನಿಮಾ ವೀಕ್ಷಣೆ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ನಟ ಅಲ್ಲು ಅರ್ಜುನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಜಾಮೀನು ಕುರಿತು ನಾಂಪಲ್ಲಿ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಅವರು, ರೆಗ್ಯುಲರ್ ಬೇಲ್ ಅರ್ಜಿ ಸಲ್ಲಿಸಿದ್ದಾರೆ. ವಾದ ಮತ್ತು ಪ್ರತಿವಾದ ಆಲಿಸಿ, ನಾಂಪಲ್ಲಿ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ಹಾಗಾಗಿ ಇಂದು ಜಾಮೀನು ಕುರಿತು ನಾಂಪಲ್ಲಿ ಕೋರ್ಟ್ ಆದೇಶ ಪ್ರಕಟಿಸಲಿದೆ. ಸದ್ಯ ಅಲ್ಲು ಅರ್ಜುನ್ ಅವರು ಮಧ್ಯಂತರ ಜಾಮೀನು ಮೇಲೆ ಹೊರಗಡೆ ಇದ್ದಾರೆ. ಮಳೆ ಕಾಲ್ ತೋಳಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಅವರು ಅರೆಸ್ಟ್ ಆಗಿದ್ದರು ಬಳಿಕ ಹೈಕೋರ್ಟಿಗೆ ಗ್ರಾಮೀಣ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ತುರ್ತು ವಿಚಾರಣೆ ನಡೆಸಿದ ಹೈ ಕೋರ್ಟ್ ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು ನೀಡಿತ್ತು.

Read More

ಬೆಂಗಳೂರು : ಜಾತಿ ಗಣತಿ ವರದಿ ಜಾರಿಯಾಗುವ ಕುರಿತಂತೆ ಮತ್ತೆ ಈ ವಿಷಯ ಮುನ್ನೆಲೆಗೆ ಬಂದಿದ್ದು, ಶೀಘ್ರದಲ್ಲಿ ಜಾತಿಗಣತಿ ವರದಿ ಜಾರಿಯಾಗುವ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಯಾಗುವ ಕುರಿತು ಆದಷ್ಟು ಬೇಗ ನಿರ್ಧಾರ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹೌದು ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಬಗ್ಗೆ ಚರ್ಚಿಸಿ ಆರ್ಥಿಕ, ಸಾಮಾಜಿಕ ವರದಿ ಪಡೆದಿದ್ದೇವೆ. ಅದರ ಮೇಲೆ ಯಾವುದೇ ಕ್ರಮವಾಗಿಲ್ಲ. ಆದಷ್ಟು ಶೀಘ್ರದಲ್ಲಿ ವರದಿಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಬೇಕಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಾತಿ ಜನಗಣತಿ ಸಂಬಂಧ ಸಚಿವ ಸಂಪುಟ ಉಪ ಸಮಿತಿ ಅಥವಾ ತಜ್ಞರ ಸಮಿತಿ ರಚಿಸುವ ಬಗ್ಗೆಯೂ ಸಿಎಂ ಮಾತನಾಡಿದ್ದಾರೆ.‌ ಆದಷ್ಟು ಬೇಗ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

Read More

ಬೆಂಗಳೂರು : ರಾಜ್ಯದ ಪ್ರತಿಷ್ಠಿತ KMF ನ ನಂದಿನಿ ಬ್ರಾಂಡ್ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಇದಿಗ ಒಂದು ಹೆಜ್ಜೆ ಮುಂದೆ ಹೋಗಿ ಕೆಎಂಎಫ್ ನಂದಿನಿ ಬ್ರಾಂಡ್ ನ ಇಡ್ಲಿ, ದೋಸೆ ಹಿಟ್ಟು ಮಾರಾಟ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಹೌದು ಕೆಎಂಎಫ್​​ನ ನಂದಿನಿ ಬ್ರ್ಯಾಂಡ್‌ನ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಬೆಂಗಳೂರಿನಲ್ಲಿ ಭಾರಿ ಯಶಸ್ಸು ಕಂಡಿದೆ. ಮೂರು ದಿನಗಳಲ್ಲಿ 2250 ಮೆಟ್ರಿಕ್ ಟನ್‌ಗಳಷ್ಟು ಮಾರಾಟವಾಗಿದೆ. ಈ ಯಶಸ್ಸಿನಿಂದಾಗಿ, ಕೆಎಂಎಫ್ ರಾಜ್ಯದ ಇತರ ಜಿಲ್ಲೆಗಳಿಗೂ ಶೀಘ್ರದಲ್ಲಿ ಈ ಹಿಟ್ಟನ್ನು ವಿತರಿಸಲು ಯೋಜಿಸಿದೆ. ಒಂದು ವಾರದೊಳಗೆ ಇತರ ಜಿಲ್ಲೆಗಳನ್ನೂ ಮಾರಾಟ ಆರಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯಕ್ಕೆ ಕೆಎಂಎಫ್ ಬೆಂಗಳೂರಿನಲ್ಲಿ ಮಾತ್ರ ಪ್ರಾಯೋಕವಾಗಿ ನಂದಿನಿ ಬ್ರಾಂಡ್ ನ ಇಡ್ಲಿ ದೋಸೆ ಹಿಟ್ಟು ಮಾರಾಟ ಮಾಡುತ್ತಿದ್ದು ಇದರಿಂದ ಬೆಂಗಳೂರಿನಲ್ಲಿ ಉತ್ತಮ ಸ್ಪಂದನೆ ದೊರಕಿದ್ದರಿಂದ ಮುಂದಿನ ದಿನಗಳಲ್ಲಿ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಕೂಡ ನಂದಿನಿ ಇಡ್ಲಿ, ದೋಸೆ ಹಿಟ್ಟು ಪೂರೈಸುವ ಪ್ಲಾನ್ ಮಾಡಿದೆ.ಇತ್ತ…

Read More

ಮೈಸೂರು : ಮೈಸೂರು ಜಿಲ್ಲೆಯ ವರುಣಾ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಕ್ಷೇತ್ರ ಅಷ್ಟೆ ಅಲ್ಲದೆ ಅವರು ಹುಟ್ಟಿದ ಊರಿನಲ್ಲಿ ಇಂದಿಗೂ ಸಾಮಾಜಿಕ ಪಿಡುಗು ಚಾಲ್ತಿಯಲ್ಲಿರುವುದು ದುರಾದೃಷ್ಟಕರ. ಹೌದು ಯಜಮಾನರ ಮಾತು ಕೇಳದಿದ್ದಕ್ಕೆ ಕುಟುಂಬ ಒಂದಕ್ಕೆ ಬಹಿಷ್ಕಾರ ಹಾಕಲಾಗಿದ್ದು, ಸಿದ್ದರಾಮನಹುಂಡಿ ಗ್ರಾಮ ಸಮೀಪದ ಶ್ರೀನಿವಾಸಪುರದಲ್ಲಿ ಈ ಒಂದು ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀನಿವಾಸಪುರದಲ್ಲಿ ಈ ಒಂದು ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶ್ರೀನಿವಾಸಪುರ ಗ್ರಾಮದ ಯಜಮಾನರಿಂದ ದಲಿತ ಸಮುದಾಯದ ಕುಟುಂಬಕ್ಕೆ ಬಹಿಷ್ಕಾರ ಹಾಕಲಾಗಿದೆ. ನಾಲ್ಕು ವರ್ಷದಿಂದ ಗ್ರಾಮದ ಸುರೇಶ್ ಕುಟುಂಬಕ್ಕೆ ಯಜಮಾನರಾದ ಚಿಕ್ಕಣ್ಣಯ್ಯ, ಬಸವಯ್ಯ, ಮೋಟಮಹದೇವಯ್ಯ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಮಹದೇವು, ಬೊಮ್ಮಾಯಿ ಇಂದ ಬಹಿಷ್ಕಾರ ಹಾಕಲಾಗಿದೆ. 4 ವರ್ಷದ ಹಿಂದೆ ನಡೆದಿದ್ದ ಗಲಾಟೆ ಸಂಬಂಧ ನ್ಯಾಯ ಪಂಚಾಯಿತಿ ಆಗಿತ್ತು. ರಂಗನಾಥಪುರದ ಪ್ರಮೋದ್ ಹಾಗೂ ಸುರೇಶ್ ನಡುವೆ ಗಲಾಟೆ ನಡೆದಿತ್ತು. ಸುರೇಶ್ ಮನೆಗೆ ನುಗ್ಗಿ ವಸ್ತುಗಳನ್ನು ಪ್ರಮೋದ್ ಕಡೆಯವರು…

Read More

ಹಾಸನ : ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪ್ರಿಯತಮೆ ಒಬ್ಬಳು ತನ್ನ ಪ್ರಿಯಕರನಿಗೆ ಚಾಕು ಇರಿದಿದ್ದ ಘಟನೆ ಹಾಸನದಲ್ಲಿ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಯುವತಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಹಾಸನದ 4ನೇ JMFC ಕೋರ್ಟ್ ಆದೇಶ ಹೊರಡಿಸಿದೆ. ಡಿಸೆಂಬರ್ 31 ಮಧ್ಯರಾತ್ರಿ ಪ್ರಿಯತಮೆಯಿಂದ ಪ್ರಿಯಕರ ಮನು ಕುಮಾರ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವತಿ ಭವಾನಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಸಿದೆ. ನಿನ್ನೆ ಭವಾನಿಯನ್ನು ಹಾಸನದ ಬಡಾವಣೆಯ ಠಾಣೆ ಪೋಲಿಸರು ಅರೆಸ್ಟ್ ಮಾಡಿದ್ದರು. ನಿನ್ನೆ ರಾತ್ರಿ ಜಡ್ಜ್ ಮುಂದೆ ಯುವತಿ ಭವಾನಿಯನ್ನು ಪೊಲೀಸರು ಹಾಜರುಪಡಿಸಿದ್ದರು. ಹಾಸನದ 4ನೇ ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಯುವತಿಯನ್ನು ಹಾಜರುಪಡಿಸಲಾಗಿತ್ತು.ಈ ವೇಳೆ ಭವಾನಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಜಡ್ಜ್ ಆದೇಶಿಸಿದ್ದಾರೆ. ಸದ್ಯ ಹಾಸನದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹವನ್ನು ಆರೋಪಿ ಭವಾನಿ ಸೇರಿದ್ದಾಳೆ. ಏನಿದು ಘಟನೆ? ಹಾಸನ ನಗರದ…

Read More

ಬೆಂಗಳೂರು : ನಿನ್ನ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಸ್ ಪ್ರಯಾಣದ ಟಿಕೆಟ್ ದರದಲ್ಲಿ ಶೇಕಡಾ 15 ರಷ್ಟು ಏರಿಕೆ ಮಾಡಿ ಸಂಪುಟ ಅನುಮೋದನೆ ನೀಡಿದೆ. ಇದರ ಬೆನ್ನಲೇ ನೀರಿನ ದರ ಕೂಡ ಹೆಚ್ಚಳ ಆಗುವ ಸಾಧ್ಯತೆ ಇದ್ದು, ಜನವರಿ 2ನೇ ವಾರದಲ್ಲಿ ನೀರಿನ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದ್ದು, ಈ ಕುರಿತು ಶಾಸಕರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿ ನಿರ್ಧರಿಸಲಾಗುತ್ತೆ ಎಂದು ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ತಿಳಿಸಿದರು. ಈ ಕುರಿತು ಮಾಹಿತಿ ನೀಡಿದ ಅವರು, ಡಿಸಿಎಂ ಸಭೆ ಮಾಡ್ತಾರೆ. ಬೆಂಗಳೂರಿನ ಎಲ್ಲಾ ಶಾಸಕರಿಗೆ ಪತ್ರ ಬರೆದಿದ್ದೇವೆ.ಎಷ್ಟು ಪರ್ಸೆಂಟೇಜ್ ಏರಿಕೆ ಆಗುತ್ತೆ ಅನ್ನೋದು ನಿರ್ಧಾರ ಆಗುತ್ತೆ. ಉಪಮುಖ್ಯಮಂತ್ರಿಗಳು ನಿರ್ಧಾರ ಮಾಡ್ತಾರೆ. ಬೆಂಗಳೂರಿನ ಎಲ್ಲಾ ಶಾಸಕರಿಗೂ ಜಲಮಂಡಳಿ ನಷ್ಟದ ಬಗ್ಗೆ ಪತ್ರದಲ್ಲಿ ವಿವರಿಸಿದ್ದೇವೆ ಎಂದು ತಿಳಿಸಿದರು. ಜಲಮಂಡಳಿ 1000 ಲೀಟರ್ ನೀರು ಪೂರೈಕೆ ಮಾಡುವುದಕ್ಕೆ 52 ರೂಪಾಯಿ ಖರ್ಚು ಮಾಡ್ತಿದೆ. ಆದರೆ, 25 ರಿಂದ 40 ರೂ.…

Read More

ಮೈಸೂರು : ಮದ್ಯ ಸೇವನೆಗೆ ಹಣ ನೀಡಲು ನಿರಾಕರಿಸಿದಕ್ಕೆ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಸರಸ್ವತಿ ಕಾಲೋನಿಯಲ್ಲಿ ಈ ಒಂದು ಕೊಲೆ ನಡೆದಿದೆ. ನಂಜನಗೂಡಿನ ಮಹದೇವ ನಗರದ ನಿವಾಸಿ ರಫೀಕ್ (40) ಸಾವನ್ನಪ್ಪಿದ್ದಾರೆ. ನೀಲಕಂಠ ನಗರದ ನಿವಾಸಿ ಸಲೀಂ ಹಾಗೂ ಆತನ ಸ್ನೇಹಿತನಿಂದ ಈ ಒಂದು ಕೊಲೆ ನಡೆದಿದೆ. ರಫೀಕ್ ಬಳಿ ಬಂದು ಮದ್ಯ ಸೇವನೆಗೆ ಸಲೀಂ ಮತ್ತು ಆತನ ಸ್ನೇಹಿತ ಹಣ ಕೇಳಿದ್ದಾರೆ. ಈ ವೇಳೆ ಹಣ ನೀಡಲು ನಿರಾಕರಿಸಿದ್ದಕ್ಕೆ ರಫೀಕ್ ಜೊತೆಗೆ ಸಲೀಂ ಮತ್ತು ಆತನ ಸ್ನೇಹಿತ ಗಲಾಟೆ ಮಾಡಿದ್ದಾರೆ. ರಫೀಕ್ ಮೇಲೆ ಬಿಯರ್ ಬಾಟಲಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.ತೀವ್ರವಾಗಿ ಗಾಯಗೊಂಡಿದ್ದ ರಫೀಕ್ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಫೀಕ್ ಸಾವನ್ನಪ್ಪಿದ್ದಾರೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More