Author: kannadanewsnow05

ರಾಮನಗರ : ಹೊಸ ವರ್ಷಕ್ಕೆ ಎಂದು ಪಾರ್ಟಿ ಮಾಡಲು ತೆರಳಿದ್ದ ವ್ಯಕ್ತಿಯನ್ನು ಭೀಕರವಾಗಿ ಕೊಂದು ದುಷ್ಕರ್ಮಿಗಳು ಬಾವಿಗೆ ಎಸೆದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮ‌ಳೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಚನ್ನಪಟ್ಟಣ ತಾಲೂಕಿನ‌ ಮ‌ಳೂರು ಪಟ್ಟಣ ಗ್ರಾಮದ ವಾಟರ್ ಮನ್ ಮಧು‌ಕುಮಾರ್ (31) ಎಂದು ಗುರುತಿಸಲಾಗಿದ್ದು, ಮಧು ಕುಮಾರ್ ನನ್ನು ಕೊಲೆ‌ಮಾಡಿ ಬಾವಿಗೆ ಎಸೆಯಲಾಗಿದೆ. ಜನವರಿ 1ರಂದು ಈ ಒಂದು ಕೊಲೆ ನಡೆದಿದ್ದು, ಎಂದು ತಡವಾಗಿ ಬೆಳಕಿಗೆ ಬಂದಿದೆ. ‌ಹೊಸವರ್ಷದ ಪಾರ್ಟಿ ಮಾಡಲೆಂದು ಹೆಂಡತಿಯ ದೊಡ್ಡಪ್ಪನ‌ ಮಗ ಸಾಗರ್ ಎಂಬಾತನ‌ ಜೊತೆ ತೆರಳಿದ್ದ ಮಧು, ಎರಡು ದಿನವಾದರೂ ಮನೆಗೆ ಬಾರದ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲು ಮಾಡಲಾಗಿತ್ತು. ಶುಕ್ರವಾರ ಬೆಳಿಗ್ಗೆ ಕೊಡ್ಲೂರು ತೊರೆ ಬಳಿ ಬಾವಿಯಲ್ಲಿ ಶವ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರು : ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ ಪ್ರಯಾಣದ ಟಿಕೆಟ್ ದರ ಶೇಕಡ 15ರಷ್ಟು ಏರಿಕೆ ಮಾಡಿ ಅನುಮೋದನೆ ನೀಡಲಾಯಿತು. ಈ ವಿಚಾರವಾಗಿ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದೂ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆ ಬಿಜೆಪಿಯವರು 5,900 ಕೋಟಿ ಸಾಲ ಬಿಟ್ಟು ಹೋಗಿದ್ದರು ಅವರು ಸಾಲ ಬಿಟ್ಟು ಹೋಗದೆ ಇದ್ದಿದ್ದರೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಪ್ರಶ್ನೆ ಉದ್ಭವಿಸುತ್ತಿರಲಿಲ್ಲ ಎಂದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2020 ಜನವರಿ 26 ರಲ್ಲಿ ಅವರು 12 ಪರ್ಸೆಂಟ್ ಟಿಕೆಟ್ ದರ ಏರಿಕೆ ಮಾಡಿದರು.ಆಗ ಜನರಿಗೆ ತೊಂದರೆ ಆಗಲಿಲ್ಲವೇ? ಬಿಜೆಪಿಯವರು 5,900 ಕೋಟಿ ರೂಪಾಯಿ ಸಾಲ ಬಿಟ್ಟು ಹೋಗಿದ್ದಾರೆ.ಬಿಜೆಪಿಯವರು 5,900 ಕೋಟಿ ಸಾಲ ಬಿಟ್ಟು ಹೋಗದೆ ಇದ್ದಿದ್ದರೆ ನಾವು ಟಿಕೆಟ್ ದರ ಏರಿಕೆ ಮಾಡುವ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಇದೇ ವೇಳೆ ತಿಳಿಸಿದರು. ಸಂಬಳಕ್ಕೆ…

Read More

ಬೆಂಗಳೂರು : ಕುಡಿದ ನಶೆಯಲ್ಲಿ ಚರಂಡಿಗೆ ಬಿದ್ದು ಗಾರೆ ಮೇಸ್ತ್ರಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಗುಣಿ ಅಗ್ರಹಾರ ಗ್ರಾಮದ ನಿವಾಸಿ ಹರೀಶ್ (33) ಮೃತಪಟ್ಟ ಗಾರೆ ಮೇಸ್ತ್ರಿ ಎಂದು ತಿಳಿದು ಬಂದಿದೆ. ಕೆಲಸ ಮುಗಿಸಿ ತಡರಾತ್ರಿ ಮನೆಗೆ ತೆರಳುತ್ತಿದ್ದಾಗ ಈ ಒಂದು ದುರಂತ ಸಂಭವಿಸಿದೆ.ಹರೀಶ್ ಮದ್ಯ ಸೇವಿಸಿದ ಬಳಿಕ ಊಟ ಪಾರ್ಸೆಲ್ ಮಾಡಿಸಿಕೊಂಡಿದ್ದರು. ಮನೆಗೆ ತೆರಳುತ್ತಿದ್ದಾಗ ಆಯತಪ್ಪಿ ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ.

Read More

ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಂಗಳೂರಿನ ನಿಮಾನ್ಸ್ ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಇಂದು ಬೆಳಿಗ್ಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ದ್ರೌಪದಿ ಮುರ್ಮು ಆಗಮಿಸಿದ್ದಾರೆ. ಬೆಂಗಳೂರಿನ ಹೆಚ್.ಎ.ಎಲ್ ಗೆ ಆಗಮಿಸಿದ ದ್ರೌಪದಿ ಮುರ್ಮು ಅವರಿಗೆ ಸಿಎಂ ಸಿದ್ದರಾಮಯ್ಯ ನವರು ಹೂಗುಚ್ಛ, ಶಾಲು ಹೊದಿಸುವ ಮೂಲಕ ಸ್ವಾಗತಿಸಿದ್ದಾರೆ. ಈ ವೇಳೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್, ಸೇರಿದಂತೆ ಅನೇಕರು ಭಾಗಿಯಾಗಿದ್ದರು.ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ರಾಷ್ಟ್ರಪತಿ ದ್ರೌಪದಿ ಅವರು ಬಳಿಕ 3 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ವಿಮಾನ‌ ನಿಲ್ದಾಣದಂದ ಕೆ‌ಎಲ್‌ಇ ಕ್ಯಾನ್ಸರ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದು, ಕಾರ್ಯಕ್ರಮ ಮುಗಿಸಿ ಸಂಜೆ 5-30ಕ್ಕೆ ಬೆಳಗಾವಿ ಏರ್‌ಪೋರ್ಟ್‌ನಿಂದ ದೆಹಲಿಗೆ ವಾಪಾಸ್ಸಾಗಲಿದ್ದಾರೆ ಎಂದು ವರದಿಯಾಗಿದೆ. https://twitter.com/siddaramaiah/status/1875063721921478948?t=Cl-pCjwd_VsAO1M-Rb4fwg&s=19

Read More

ಬೆಂಗಳೂರು : ನಿನ್ನೆ ತಾನೆ ಸಾರಿಗೆ ಬಸ್ಗಳಲ್ಲಿ ಶೇ. 15 ರಷ್ಟು ಟಿಕೆಟ್ ದರ ಏರಿಕೆ ಮಾಡಿ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಇದರ ಬೆನ್ನೆಲ್ಲಿ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು ಶೀಘ್ರದಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಹಾಲಿನ ದರ ಏರಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಕೆ ವೆಂಕಟೇಶ್ ಮಾತನಾಡಿದ್ದು, ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. 5 ರೂ, 3 ರೂ, 10 ರೂ. ಮಾಡುತ್ತೇವೋ ಅದು ಇನ್ನೂ ತೀರ್ಮಾನ ಆಗಿಲ್ಲ ಎಂದು ತಿಳಿಸಿದರು. ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರ ಒತ್ತಾಯ ಇದೆ. ಯಾಕೆಂದರೆ ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ ಆಗಿದೆ. ಈ ಹಿನ್ನೆಲೆ ಹಾಲಿನ ದರ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ…

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಜೆಡಿಎಸ್ ಪಕ್ಷವನ್ನು ಮುಗಿಸಲು ಆಪರೇಷನ್ ಹಸ್ತ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಪರೇಷನ್ ಹಸ್ತದ ಬಗ್ಗೆ ಜೆಡಿಎಸ್ ಶಾಸಕ ಜಿಟಿ ದೇವೆಗೌಡ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅಂತಹ ಯಾವುದೆ ವರ್ಕೌಟ್ ಆಗಲ್ಲ ಬಿಡಿ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಮುಗಿಸಬೇಕು ಅಂತ ಆಪರೇಷನ್ ಹಸ್ತ ಮಾಡುತ್ತಿದ್ದಾರೆ. 12 ರಿಂದ 13 ಶಾಸಕರನ್ನು ಕರೆತನ್ನಿ ಅಂತ ನಡೆಯುತ್ತಿರುವುದು ಗೊತ್ತಿದೆ.ಆದರೆ ಯಾವ ಶಾಸಕರು ಸಹ ಹೋಗುವ ಪರಿಸ್ಥಿತಿ ಇಲ್ಲ. ಕಾಂಗ್ರೆಸ್ನವರು ಏನೇನು ಮಾಡುತ್ತಿದ್ದಾರೆ ಎಲ್ಲವೂ ಗೊತ್ತಿದೆ. ದೇವರೇ ಅವರಿಗೆ ಶಿಕ್ಷೆ ಕೊಡುತ್ತಾನೆ ಅಂತ ನನಗೆ ನಂಬಿಕೆ ಇದೆ ಎಂದರು.

Read More

ಬೆಂಗಳೂರು : ಪ್ರೀತಿಸಿದ ಯುವತಿ ದೂರವಾಗಿದ್ದಾಳೆ ಎಂದು ಮನನೊಂದ ಯುವಕನೊಬ್ಬ ರೂಮ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೂಮ್ನಲ್ಲಿ ನೇಣು ಬಿಗಿದುಕೊಂಡು ಸತೀಶ್ ಕುಮಾರ್ (25) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಾಸಗಿ ಕಂಪನಿ ಒಂದರಲ್ಲಿ ಮೃತ ಸತೀಶ್ ಕುಮಾರ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕಾಲೇಜಿನಿಂದಲೇ ಸತೀಶ್ ಕುಮಾರ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚಿಗೆ ಸತೀಶ್ ಕುಮಾರ್ ಇಂದ ಯುವತಿ  ದೂರವಾಗಿದ್ದಾಳೆ. ಇದರಿಂದ ಮನನೊಂದು ನೇಣು ಬಿಗಿದುಕೊಂಡು ಸತೀಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸತೀಶ್ ಮೃತ ದೇಹ ಅಂಬೇಡ್ಕರ್ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.ಬಾಣಸವಾಡಿ ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.

Read More

ತುಮಕೂರು : ವೈದ್ಯರು ಪೆಂಟಾ 1 ಲಸಿಕೆ ನೀಡಿದ್ದರಿಂದ 2 ತಿಂಗಳು ಮಗು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಸಿಂಗನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಎರಡುವರೆ ತಿಂಗಳ ಮಗುವಿಗೆ ಪೆಂಟಾ 1 ಲಸಿಕೆ ನೀಡಲಾಗಿತ್ತು. ಭಕ್ತರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಲಸಿಕೆ ಕೊಡಿಸಲಾಗಿತ್ತು. ಮಗುವಿಗೆ ಆಸ್ಪತ್ರೆಯ ವೈದ್ಯರು ಒಟ್ಟಿಗೆ ಮೂರು ಇಂಜೆಕ್ಷನ್ ಗಳನ್ನು ನೀಡಿದ್ದರು. ಹಾಗಾಗಿ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮಗು ಸಾವನ್ನಪ್ಪಿದೆ. ಚಿಕ್ಕಮ್ಮ ಮುರಳಿ ದಬ್ಬತಿಯ ಗಂಡು ಮಗು ಎಂದು ಬೆಳಗ್ಗೆ ಸಾವನಪ್ಪಿದೆ. ವೈದ್ಯರ ಎಡವಟ್ಟಿನಿಂದಲೇ ಮಗು ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ ಘಟನೆ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು : ಹೊಸ ವರ್ಷದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಅಡುಗೆ ತಯಾರಿಸುವ ವೇಳೆ ಕುಕ್ಕರ್ ಸ್ಫೋಟಗೊಂಡು ಇಬ್ಬರು ಅಡುಗೆ ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರ ಸರಕಾರಿ ಶಾಲೆಯಲ್ಲಿ ನಡೆದಿದೆ. ಪುರವರ ಸರಕಾರಿ ಪ್ರೌಢಶಾಲೆಯ ಅಡುಗೆ ಕೋಣೆಯಲ್ಲಿ ಹೊಸ ವರ್ಷದ ಪ್ರಯುಕ್ತ ಶಾಲಾ ಮಕ್ಕಳಿಗೆ ಟೊಮೆಟೊ ಬಾತ್ ಹಾಗೂ ಹೆಸರುಬೇಳೆ ಪಾಯಸ ಸಿದ್ಧಪಡಿಸುವ ವೇಳೆ ಕುಕ್ಕರ್ ಸ್ಫೋಟಗೊಂಡಿದೆ. ಈ ವೇಳೆ ಸ್ಥಳದಲ್ಲಿದ್ದ ಅಡುಗೆ ಸಿಬ್ಬಂದಿ ಮೇಲೆ ನೀರು ಹಾಗೂ ಬೇಳೆ ಸಿಡಿದು ಉಮಾದೇವಿ ಗಂಭೀರಗೊಂಡಿದ್ದಾರೆ. ಸಹಾಯಕಿ ಜಯಮ್ಮ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗ್ಯಾಸ್ ಸಿಲಿಂಡರ ಆಫ್ ಮಾಡಿ ಕುಕ್ಕರ್ ವಿಷಲ್ ತೆಗೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.ತಕ್ಷಣ ಗಾಯಾಳನ್ನು ಗೊಂದಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತಂತೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ.

Read More

ಬೆಂಗಳೂರು : ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಬಸ್ ಟಿಕೆಟ್ ದರ ಶೇಕಡ 15ರಷ್ಟು ಹೆಚ್ಚಿಗೆ ಮಾಡಿ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಇದರ ಬೆನ್ನಲ್ಲೇ ಸಾರಿಗೆ ನೌಕರರಿಗೆ ಇದೀಗ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ನೌಕರರ ಪಿಎಫ್ ಹಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಸಾವಿರ ಕೋಟಿ ರೂಪಾಯಿ ನೀಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೌದು ಕಳೆದ ವರ್ಷ ನವೆಂಬರ್ ನಲ್ಲಿ KSRTC, KKRTC, BMTC ಹಾಗೂ NWKRTC ಎಲ್ಲ ನಾಲ್ಕು ಸಾರಿಗೆ ನಿಗಮಗಳು ನೌಕರರ ಸುಮಾರು 2972 ಕೋಟಿ ಹಣವನ್ನು ಪಿಎಫ್ ಟ್ರಸ್ಟ್ ಗೆ ಜಮೆ ಮಾಡದೇ ದುರ್ಬಳಕೆ ಮಾಡಿ ಕೊಂಡಿವೆ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಇದೀಗ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ನೌಕರರ ಪಿಎಫ್ ಟ್ರಸ್ಟ್ ಗೆ 2000 ಕೋಟಿ ಕೋಟಿ ಹಣ ನೀಡಲು ಸಂಪುಟದಲ್ಲಿ ಅನುಮೋದನೆ ದೊರೆತಿದೆ. ಸಾರಿಗೆ ಸಿಬ್ಬಂದಿಗಳ ಪಿಎಫ್​ ಟ್ರಸ್ಟ್​ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಲು…

Read More