Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತವಾದ ಸಂಭವಿಸಿದ್ದು, 9 ವರ್ಷದ ಬಾಲಕಿಯ ಮೇಲೆ ಟ್ರಾಕ್ಟರ್ ಹರಿದು ಸಾವನ್ನಪ್ಪಿರುವ ದುರ್ಘಟನೆ ವೈಟ್‌ಫೀಲ್ಡ್‌ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಕೆರೆ ಏರಿ ಮೇಲೆ ಚಲಿಸುತ್ತಿದ್ದ ಟ್ರ್ಯಾಕ್ಟರ್‌ ಉರುಳಿ ಬಿದ್ದ ಪರಿಣಾಮ 9 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ವೈಟ್‌ಫೀಲ್ಡ್‌ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಇಸಿನಾಕಾ ಭಟ್‌ (9) ಎಂದು ತಿಳಿದುಬಂದಿದೆ. ಘಟನೆಯಲ್ಲಿ ಚಾಲಕ ಹಾಗೂ ಆರು ವರ್ಷದ ಬಾಲಕಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಚಾಲಕ ತನ್ನ ಆರು ಮತ್ತು ಒಂಬತ್ತು ವರ್ಷದ ಮಕ್ಕಳನ್ನು ಟ್ರ್ಯಾಕ್ಟರ್‌ನಲ್ಲಿ ಕೂರಿಸಿಕೊಂಡು ತನ್ನ ಶೆಡ್‌ಗೆ ಹೋಗುತ್ತಿದ್ದರು. ಪಟ್ಟಂದೂರು ಅಗ್ರಹಾರ ಕೆರೆ ಏರಿ ಮೇಲೆ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಉರುಳಿದ ಟ್ರ್ಯಾಕ್ಟರ್‌ ಕೆರೆಗೆ ಬಿದ್ದಿದೆ. ಆಗ ಟ್ರ್ಯಾಕ್ಟರ್ ಕೆಳಗೆ ಸಿಲುಕಿಕೊಂಡ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಚಾಲಕ ಮತ್ತು ಆರು ವರ್ಷದ ಬಾಲಕಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು…

Read More

ಹುಬ್ಬಳ್ಳಿ : ಸಹಕಾರ ಸಚಿವ ಕೆ.ಎನ್ ರಾಜಣ್ಣ ಮೇಲೆ ಹನಿಟ್ರ್ಯಾಪ್ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ರಾಜ್ಯ ಸರ್ಕಾರ ಈ ಒಂದು ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿದೆ. ಇದರ ಬೆನ್ನಲ್ಲೇ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಹನಿಟ್ರ್ಯಾಪ್ ಸಂಬಂಧಪಟ್ಟಂತೆ ನನ್ನ ಬಳಿ ಹಲವು ದಾಖಲೆಗಳಿವೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಸ್‌ಸಿ/ಎಸ್‌ಟಿ ನಾಯಕರನ್ನು ಮುಗಿಸಿದ್ದೆ ಕಾಂಗ್ರೆಸ್ ಪಕ್ಷ. ಕೆ.ಎನ್ ರಾಜಣ್ಣ, ರಮೇಶ್ ಜಾರಕಿಹೊಳಿ ಮುಗಿಸಿದ್ದು ಯಾರು? ಹಾಗಾಗಿ ರಾಜಕಾರಣ ಹೀಗಾಗಬಾರದು. ಹನಿಟ್ರ್ಯಾಪ್ ಹಿಂದೆ ಮಹಾನ್ ನಾಯಕರ ಕೈವಾಡವಿದೆ. ಎರಡು ಪಕ್ಷದ ಮಹಾನ್ ನಾಯಕರ ಕೈವಾಡ ಇದೆ. ನನ್ನ ಬಳಿಯೂ ಕೆಲವು ದಾಖಲೆಗಳು ಇವೆ. ನನಗೆ ಹಾಯ್ ಅಂದರೆ ನಾನು ಬಾಯ್ ಎಂದು ಹೇಳುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದರು. ನನ್ನ ವಿರುದ್ಧವು ಶತ್ರು ಸಂಹಾರ ಯಾಗ ನಡೆದಿದೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಯಾಗ ನಡೆದಿದೆ. ಹುಬ್ಬಳ್ಳಿಯಲು ಕೂಡ ಒಂದು…

Read More

ಬೆಂಗಳೂರು : ಇತ್ತೀಚಿಗೆ ರಾಜ್ಯ ಸರ್ಕಾರ ಅಗತ್ಯವಸ್ತುಗಳ ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ ಮತ್ತಿತರ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿಯು ಸೋಮವಾರದಿಂದ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರಂಭಿಸಲಿದೆ. ಹೌದು ಈ ಒಂದು ಯಾತ್ರೆಯು ಒಟ್ಟು ನಾಲ್ಕು ಹಂತಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗ ಳಲ್ಲಿ ಯಾತ್ರೆ ನಡೆಯಲಿದೆ. ಮೇ 3ಕ್ಕೆ ಅಂತ್ಯಗೊಳ್ಳಲಿದೆ.ಇಂದು ಮೈಸೂರಿನಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಅವರು ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಉಭಯ ಸದನಗಳ ಪ್ರತಿಪಕ್ಷಗಳ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಸೇರಿ ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3ಗಂಟೆಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಸಂಜೆ 4ಗಂಟೆಗೆ ಕೇಂದ್ರ ಅಂಚೆ ಕಚೇರಿ ವೃತ್ತದಿಂದ ಗಾಂಧಿ ಚೌಕ್‌ವರೆಗೆ ಪಾದಯಾತ್ರೆ ಮೂಲಕ ಜನಾಕ್ರೋಶ ಯಾತ್ರೆ ನಡೆಯಲಿದೆ.ಕಳೆದ ಬುಧವಾರ ಬಿಜೆಪಿ ಇದೇ ವಿಷಯಗಳನ್ನು…

Read More

ಹಾವೇರಿ : ಇತ್ತೀಚಿಗೆ ಹಾಲು ಉತ್ಪಾದಕರಿಂದ ಹಾಲು ಪಡೆಯುವ ಹಾವೇರಿಯ ಹಾವೆಮುಲ್ 3.50 ರೂ. ಅನ್ನು ಇಳಿಕೆ ಮಾಡಿತ್ತು. ಇದಕ್ಕೆ ಹಾಲು ಉತ್ಪಾದಕರು ವಿರೋಧಿಸಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದರು. ಇದೀಗ ಹಾವೆಮುಲ್ ಪ್ರತಿ ಲೀಟರ್ ಗೆ 2.50 ಏರಿಕೆ ಮಾಡಲು ನಿರ್ಧರಿಸಿದೆ. ಹೌದು ಹಸುವಿನ ಹಾಲಿಗೆ 33 ರೂ. ಹಾಗು ಎಮ್ಮೆಯ ಹಾಲಿಗೆ 45.50 ಗೆ ಹೆಚ್ಚಳಕ್ಕೆ ನಿರ್ಧಾರ ಮಾಡಿದೆ. ಕಳೆದ ಮಾರ್ಚ್ 27 ರಂದು ಲೀಟರ್ ಗೆ 3.50 ಕಡಿತಗೊಳಿಸಲಾಗಿತ್ತು. ಈ ವೇಳೆ ಹಾವೆಮುಲ್ ವಿರುದ್ಧ ಹಾಲು ಉತ್ಪಾದಕರು ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಹಾವೆಮುಲ್ ಅಧ್ಯಕ್ಷ ಮತ್ತು ನಿರ್ದೇಶಕರ ಜೊತೆ ಸಭೆ ನಡೆಸಿ ಸಚಿವ ಶಿವಾನಂದ್ ಪಾಟೀಲ್ ಸೂಚನೆ ನೀಡಿದ್ದರು. ಸಚಿವರ ಸಲಹೆ ಹಿನ್ನೆಲೆಯಲ್ಲಿ ಇದೀಗ 2.50 ಹೆಚ್ಚಳಕ್ಕೆ ನಿರ್ಧರಿಸಲಾಗಿದೆ.

Read More

ಬಾಗಲಕೋಟೆ : ನೋಡುತ್ತೀರಿ ನನ್ನ ಹಣೆಬರಹದಲ್ಲಿ ಸಿಎಂ ಆಗುತ್ತೇನೆ ಎಂದು ಬರೆದಿದೆ. ಮುಂದಿನ ಸಿಎಂ ನಾನೇ ಎಂದು ಬಿಜೆಪಿಯಿಂದ ಉಚ್ಛಾಟಿತರಾಗಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆಗೆ ಶಾಸಕ ವಿಜಯಾನಂದ ಕಾಶಪ್ಪನವರ್, ಯತ್ನಾಳ ಸಿಎಂ ಆಗೋದಿರಲಿ 2028ಕ್ಕೆ ಶಾಸಕನಾಗಿ ಗೆದ್ದು ಬರಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಮಾತನಾಡಿದ ಅವರು, ಯತ್ನಾಳ್ ಮತ್ತೆ ಗೆಲ್ಲುತ್ತೇನೆ ಅನ್ನೋದು ತಿರುಕನ ಕನಸು. 2028ಕ್ಕೆ ಗೆದ್ದು ವಿಧಾನಸೌಧಕ್ಕೆ ಬರಲಿ ನೋಡೋಣ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ವಿಜಯಾನಂದ ಕಾಶಪ್ಪನವರು ಹೇಳಿಕೆ ನೀಡಿದ್ದು ಹತ್ನಾಳ ಸಿಎಂ ಆಗುವುದಿಲ್ಲ ಶಾಸಕನಾಗಿ ಗೆದ್ದು ಬರಲಿ ಎಂದು ಸವಾಲು ಹಾಕಿದರು.

Read More

ಬೆಂಗಳೂರು : ಬೆಂಗಳೂರು ಚೆನ್ನೈ ಹೆದ್ದಾರಿಯಲ್ಲಿ ವ್ಹಿಲಿಂಗ್ ಪುಂಡರ ಹಾವಳಿ ಹೆಚ್ಚಾಗಿದ್ದು, ಇದೀಗ ತಮಿಳುನಾಡಿನ ಹೊಸೂರಿನ ರಾಮನಗರದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಮೇಶ್ (20) ಮತ್ತು ಇಮ್ರಾನ್ (19) ಎನ್ನುವವರನ್ನು ಬಂಧಿಸಿದ್ದಾರೆ. ಹೆದ್ದಾರಿಯಲ್ಲಿ ವ್ಹಿಲಿಂಗ್ ಮಾಡಿ ಇತರೆ ಸವಾರರಿಗೆ ಸಂಕಷ್ಟ ತಂದೊಡ್ಡಿದ್ದರು. ವ್ಹಿಲಿಂಗ್ ಮಾಡಿ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದರು. ಸಾಮಾಜಿಕ ಜಾಲತಾಣದ ವಿಡಿಯೋ ಆಧಾರದಲ್ಲಿ ಇದೀಗ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಹೊಸೂರು ಟೌನ್ ಪೊಲೀಸರಿಂದ ವೀಲಿಂಗ್ ಪುಂಡರ ಬಂಧನವಾಗಿದೆ.

Read More

ಹುಬ್ಬಳ್ಳಿ : ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆಯಾದರು, ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಎಸ್ ಯಡಿಯೂರಪ್ಪ ಮತ್ತು ಕುಟುಂಬದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಈಗ ಬಿಎಸ್ ಯಡಿಯೂರಪ್ಪ ವಿರುದ್ಧ ಮತ್ತೊಂದು ಆರೋಪ ಮಾಡಿರುವ ಶಾಸಕ ಯತ್ನಾಳ್ ನನ್ನನ್ನು ಸೋಲಿಸಲು ಬಿಎಸ್ ಯಡಿಯೂರಪ್ಪ ಪ್ರಯತ್ನಿಸಿದ್ದರು ಎಂದು ಆರೋಪಿಸಿದರು. ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಗ್ಗೆ ಮಾತನಾಡಿದರೆ ಸರಿ ಇರಲ್ಲ. ಶ್ರೀಗಳ ಬಗ್ಗೆ ಯಾರಾದರೂ ಮಾತನಾಡಿದರೆ ಪರಿಣಾಮ ಸರಿ ಇರಲ್ಲ. ನನ್ನನ್ನು ಸೋಲಿಸುವುದಕ್ಕೂ ಯಡಿಯೂರಪ್ಪ ಪ್ರಯತ್ನ ಮಾಡಿದ್ದರು. ನಾನು ಕೇವಲ ಹಿಂದುಗಳ ಮತಗಳಿಂದ ಗೆದ್ದಿದ್ದು. ಯಡಿಯೂರಪ್ಪ ಬ್ಲಾಕ್ಮೇಲ್ ಮಾಡಿ ದೊಡ್ಡ ವ್ಯಕ್ತಿ ಆಗಿದ್ದಾನೆ. ಭ್ರಷ್ಟಾಚಾರದಿಂದಾಗಿ ಸಿಎಂ ಸ್ಥಾನದಿಂದ ಬಿಎಸ್ ಯಡಿಯೂರಪ್ಪ ಕೆಳಗಿಳಿದರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ. ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿರುವ ವಿಚಾರವಾಗಿ, ವಿಜಯಪುರದಲ್ಲಿ ಯತ್ನಾಳ್ ಬೆಂಬಲಿಗರ ಪ್ರತಿಭಟನೆ…

Read More

ನವದೆಹಲಿ : ಇಂದು ದೇಶದಾದ್ಯಂತ ರಾಮನವಮಿ ಹಿನ್ನೆಲೆ ದೇಶದಾದ್ಯಂತ ರಾಮನವಮಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಇದೇ ವೇಳೆ ಶ್ರೀಲಂಕಾ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ ಹಿಂತಿರುಗುವ ವೇಳೆ ಪ್ರಧಾನಿ ನರೇಂದ್ರ ಮೋದಿ ವಿಮಾನದಿಂದಲೇ ರಾಮಸೇತು ದರ್ಶನ ಪಡೆದಿದ್ದಾರೆ. ರಾಮ ನವಮಿಯಂದೇ ಪ್ರಧಾನಿ ಮೋದಿ ರಾಮಸೇತು ದರ್ಶನ ಪಡೆದಿದ್ದು, ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.ಸ್ವಲ್ಪ ಸಮಯದ ಹಿಂದೆ ಶ್ರೀಲಂಕಾದಿಂದ ಮರಳುವಾಗ ರಾಮಸೇತುವಿನ ದರ್ಶನ ಪಡೆಯುವ ಸೌಭಾಗ್ಯ ದೊರಕಿತು. ದೈವಿಕ ನಿದರ್ಶನ ಎಂಬಂತೆ ಅಯೋಧ್ಯೆಯಲ್ಲಿ ಸೂರ್ಯ ತಿಲಕದ ಸಂದರ್ಭದಲ್ಲೇ ಈ ದರ್ಶನ ಪಡೆದಿದ್ದೇನೆ. ಶ್ರೀರಾಮ ದೇವರು ನಮ್ಮೆಲ್ಲರನ್ನು ಒಗ್ಗೂಡಿಸುವ ಶಕ್ತಿಯಾಗಿದ್ದು, ದೇವರ ಆಶೀರ್ವಾದ ಸದಾ ಇರಲಿ ಎಂದು ಬರೆದುಕೊಂಡಿದ್ದಾರೆ. https://twitter.com/narendramodi/status/1908784112720122344?t=ll6TUFlYhlOsO81KBytRbg&s=19

Read More

ಬೆಂಗಳೂರು : ಸಚಿವ ಈಶ್ವರ್ ಖಂಡ್ರೆ ಪುತ್ರ ಹಾಗು ಕಾಂಗ್ರೆಸ್ ಸಂಸದ ಸಾಗರ್ ಖಂಡ್ರೆ ಅವರ ಬೆಂಗಳೂರಿನ ಮನೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಕೃಷ್ಣ ಅಪಾರ್ಟಮೆಂಟ್‌ನ ಮ್ಯಾನೇಜರ್ ಚಂದ್ರಕುಮಾರ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮನೆ ನವೀಕರಣ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಹೌದು ಶ್ರೀ ಕೃಷ್ಣ ಅರ್ಪಾಟಮೆಂಟ್ ನಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಪುತ್ರ ಹಾಗೂ ಸಂಸದ ಸಾಗರ ಖಂಡ್ರೆ ವಾಸವಾಗಿದ್ದಾರೆ. ಪ್ರಸ್ತುತ ಈ ಮನೆಯನ್ನು ಕೃಷ್ಣ ಅರ್ಪಾಟಮೆಂಟ್ಸೊ ಸೈಟಿಯಿಂದ ಪೂರ್ವಾನುಮತಿಯನ್ನು ಪಡೆದುಕೊಂಡು ನವೀಕರಣಮಾಡಲಾಗುತ್ತಿದೆ. ನವೀಕರಣದ ವೇಳೆ ಮೆಟ್ಟಿಲುಗಳಿಗೆ ಬೆಳಕಿನ ವ್ಯವಸ್ಥೆ ಮಾಡಲು ವೈರ್​ನ್ನು ಎಳೆಯಲಾಗಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಏಪ್ರಿಲ್​ 2 ರಂದು ಮಧ್ಯಾಹ್ನ ಸುಮಾರು 04:30 ಗಂಟೆ ಸಮಯದಲ್ಲಿ ಅಪಾರ್ಟಮೆಂಟ್​ನ ಮ್ಯಾನೇಜರ್ ಚಂದ್ರಕುಮಾರ ಎಂಬುವರು ನವೀಕರಣ ಕಾಮಗಾರಿ ಮಾಡುತ್ತಿರುವ ಕಾರ್ಮಿಕರನ್ನು ಅಡ್ಡಗಟ್ಟಿ, ಕಾರ್ಮಿಕರಿಗೆ ಮನಬಂದಂತೆ ಅವಾಚ್ಯ ಶಬ್ದಗಳಿಂದ ಬೈದಿದಿದ್ದಾರೆ.ಈ ಬಗ್ಗೆ ಮನೆಯ ಮಾಲೀಕ ಸಾಗರ ಖಂಡ್ರೆ ಅಥವಾ ಈಶ್ವರ ಖಂಡ್ರೆ…

Read More

ಹುಬ್ಬಳ್ಳಿ : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಹುಬ್ಬಳ್ಳಿಯಲ್ಲಿ, ಹೊರವಲಯದ ನೂಲ್ವಿ ಕ್ರಾಸ್ ನಲ್ಲಿ ರಸ್ತೆ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿ ನಾಲ್ವರು ವೃದ್ಧೆಯರು ಸಾವನಪ್ಪಿದ್ದಾರೆ. ಮೃತರನ್ನು ಸುಜಾತ ಹಿರೇಮಠ (60), ಗಾಯತ್ರಿ ಮಹಾಂತನಮಠ (67), ಶಕುಂತಲಾ ಹಿರೇಮಠ (72) ಹಾಗು ಸಂಪತಕುಮಾರಿ ಕಲ್ಮಠ (63) ಎಂದು ತಿಳಿದುಬಂದಿದೆ. ಕಾರು ವರೂರ ಗ್ರಾಮದಿಂದ ಹುಬ್ಬಳ್ಳಿಯ ತ್ತ ಬರುತ್ತಿತ್ತು. ಈ ವೇಳೆ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ನಾಲ್ವರು ವೃದ್ಧೆಯರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ

Read More