Author: kannadanewsnow05

ಮೈಸೂರು : ಮೈಸೂರು ಜಿಲ್ಲೆಯ ವರುಣಾ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಕ್ಷೇತ್ರ ಅಷ್ಟೆ ಅಲ್ಲದೆ ಅವರು ಹುಟ್ಟಿದ ಊರಿನಲ್ಲಿ ಇಂದಿಗೂ ಸಾಮಾಜಿಕ ಪಿಡುಗು ಚಾಲ್ತಿಯಲ್ಲಿರುವುದು ದುರಾದೃಷ್ಟಕರ. ಹೌದು ಯಜಮಾನರ ಮಾತು ಕೇಳದಿದ್ದಕ್ಕೆ ಕುಟುಂಬ ಒಂದಕ್ಕೆ ಬಹಿಷ್ಕಾರ ಹಾಕಲಾಗಿದ್ದು, ಸಿದ್ದರಾಮನಹುಂಡಿ ಗ್ರಾಮ ಸಮೀಪದ ಶ್ರೀನಿವಾಸಪುರದಲ್ಲಿ ಈ ಒಂದು ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀನಿವಾಸಪುರದಲ್ಲಿ ಈ ಒಂದು ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶ್ರೀನಿವಾಸಪುರ ಗ್ರಾಮದ ಯಜಮಾನರಿಂದ ದಲಿತ ಸಮುದಾಯದ ಕುಟುಂಬಕ್ಕೆ ಬಹಿಷ್ಕಾರ ಹಾಕಲಾಗಿದೆ. ನಾಲ್ಕು ವರ್ಷದಿಂದ ಗ್ರಾಮದ ಸುರೇಶ್ ಕುಟುಂಬಕ್ಕೆ ಯಜಮಾನರಾದ ಚಿಕ್ಕಣ್ಣಯ್ಯ, ಬಸವಯ್ಯ, ಮೋಟಮಹದೇವಯ್ಯ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಮಹದೇವು, ಬೊಮ್ಮಾಯಿ ಇಂದ ಬಹಿಷ್ಕಾರ ಹಾಕಲಾಗಿದೆ. 4 ವರ್ಷದ ಹಿಂದೆ ನಡೆದಿದ್ದ ಗಲಾಟೆ ಸಂಬಂಧ ನ್ಯಾಯ ಪಂಚಾಯಿತಿ ಆಗಿತ್ತು. ರಂಗನಾಥಪುರದ ಪ್ರಮೋದ್ ಹಾಗೂ ಸುರೇಶ್ ನಡುವೆ ಗಲಾಟೆ ನಡೆದಿತ್ತು. ಸುರೇಶ್ ಮನೆಗೆ ನುಗ್ಗಿ ವಸ್ತುಗಳನ್ನು ಪ್ರಮೋದ್ ಕಡೆಯವರು…

Read More

ಹಾಸನ : ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪ್ರಿಯತಮೆ ಒಬ್ಬಳು ತನ್ನ ಪ್ರಿಯಕರನಿಗೆ ಚಾಕು ಇರಿದಿದ್ದ ಘಟನೆ ಹಾಸನದಲ್ಲಿ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಯುವತಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಹಾಸನದ 4ನೇ JMFC ಕೋರ್ಟ್ ಆದೇಶ ಹೊರಡಿಸಿದೆ. ಡಿಸೆಂಬರ್ 31 ಮಧ್ಯರಾತ್ರಿ ಪ್ರಿಯತಮೆಯಿಂದ ಪ್ರಿಯಕರ ಮನು ಕುಮಾರ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವತಿ ಭವಾನಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಸಿದೆ. ನಿನ್ನೆ ಭವಾನಿಯನ್ನು ಹಾಸನದ ಬಡಾವಣೆಯ ಠಾಣೆ ಪೋಲಿಸರು ಅರೆಸ್ಟ್ ಮಾಡಿದ್ದರು. ನಿನ್ನೆ ರಾತ್ರಿ ಜಡ್ಜ್ ಮುಂದೆ ಯುವತಿ ಭವಾನಿಯನ್ನು ಪೊಲೀಸರು ಹಾಜರುಪಡಿಸಿದ್ದರು. ಹಾಸನದ 4ನೇ ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಯುವತಿಯನ್ನು ಹಾಜರುಪಡಿಸಲಾಗಿತ್ತು.ಈ ವೇಳೆ ಭವಾನಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಜಡ್ಜ್ ಆದೇಶಿಸಿದ್ದಾರೆ. ಸದ್ಯ ಹಾಸನದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹವನ್ನು ಆರೋಪಿ ಭವಾನಿ ಸೇರಿದ್ದಾಳೆ. ಏನಿದು ಘಟನೆ? ಹಾಸನ ನಗರದ…

Read More

ಬೆಂಗಳೂರು : ನಿನ್ನ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಸ್ ಪ್ರಯಾಣದ ಟಿಕೆಟ್ ದರದಲ್ಲಿ ಶೇಕಡಾ 15 ರಷ್ಟು ಏರಿಕೆ ಮಾಡಿ ಸಂಪುಟ ಅನುಮೋದನೆ ನೀಡಿದೆ. ಇದರ ಬೆನ್ನಲೇ ನೀರಿನ ದರ ಕೂಡ ಹೆಚ್ಚಳ ಆಗುವ ಸಾಧ್ಯತೆ ಇದ್ದು, ಜನವರಿ 2ನೇ ವಾರದಲ್ಲಿ ನೀರಿನ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದ್ದು, ಈ ಕುರಿತು ಶಾಸಕರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿ ನಿರ್ಧರಿಸಲಾಗುತ್ತೆ ಎಂದು ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ತಿಳಿಸಿದರು. ಈ ಕುರಿತು ಮಾಹಿತಿ ನೀಡಿದ ಅವರು, ಡಿಸಿಎಂ ಸಭೆ ಮಾಡ್ತಾರೆ. ಬೆಂಗಳೂರಿನ ಎಲ್ಲಾ ಶಾಸಕರಿಗೆ ಪತ್ರ ಬರೆದಿದ್ದೇವೆ.ಎಷ್ಟು ಪರ್ಸೆಂಟೇಜ್ ಏರಿಕೆ ಆಗುತ್ತೆ ಅನ್ನೋದು ನಿರ್ಧಾರ ಆಗುತ್ತೆ. ಉಪಮುಖ್ಯಮಂತ್ರಿಗಳು ನಿರ್ಧಾರ ಮಾಡ್ತಾರೆ. ಬೆಂಗಳೂರಿನ ಎಲ್ಲಾ ಶಾಸಕರಿಗೂ ಜಲಮಂಡಳಿ ನಷ್ಟದ ಬಗ್ಗೆ ಪತ್ರದಲ್ಲಿ ವಿವರಿಸಿದ್ದೇವೆ ಎಂದು ತಿಳಿಸಿದರು. ಜಲಮಂಡಳಿ 1000 ಲೀಟರ್ ನೀರು ಪೂರೈಕೆ ಮಾಡುವುದಕ್ಕೆ 52 ರೂಪಾಯಿ ಖರ್ಚು ಮಾಡ್ತಿದೆ. ಆದರೆ, 25 ರಿಂದ 40 ರೂ.…

Read More

ಮೈಸೂರು : ಮದ್ಯ ಸೇವನೆಗೆ ಹಣ ನೀಡಲು ನಿರಾಕರಿಸಿದಕ್ಕೆ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಸರಸ್ವತಿ ಕಾಲೋನಿಯಲ್ಲಿ ಈ ಒಂದು ಕೊಲೆ ನಡೆದಿದೆ. ನಂಜನಗೂಡಿನ ಮಹದೇವ ನಗರದ ನಿವಾಸಿ ರಫೀಕ್ (40) ಸಾವನ್ನಪ್ಪಿದ್ದಾರೆ. ನೀಲಕಂಠ ನಗರದ ನಿವಾಸಿ ಸಲೀಂ ಹಾಗೂ ಆತನ ಸ್ನೇಹಿತನಿಂದ ಈ ಒಂದು ಕೊಲೆ ನಡೆದಿದೆ. ರಫೀಕ್ ಬಳಿ ಬಂದು ಮದ್ಯ ಸೇವನೆಗೆ ಸಲೀಂ ಮತ್ತು ಆತನ ಸ್ನೇಹಿತ ಹಣ ಕೇಳಿದ್ದಾರೆ. ಈ ವೇಳೆ ಹಣ ನೀಡಲು ನಿರಾಕರಿಸಿದ್ದಕ್ಕೆ ರಫೀಕ್ ಜೊತೆಗೆ ಸಲೀಂ ಮತ್ತು ಆತನ ಸ್ನೇಹಿತ ಗಲಾಟೆ ಮಾಡಿದ್ದಾರೆ. ರಫೀಕ್ ಮೇಲೆ ಬಿಯರ್ ಬಾಟಲಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.ತೀವ್ರವಾಗಿ ಗಾಯಗೊಂಡಿದ್ದ ರಫೀಕ್ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಫೀಕ್ ಸಾವನ್ನಪ್ಪಿದ್ದಾರೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹೈದ್ರಾಬಾದ್ : ಕಳೆದ ವರ್ಷ 2024 ಡಿಸೆಂಬರ್ 4ರಂದು ಇಡೀ ದೇಶದಾದ್ಯಂತ ಅಲ್ಲು ಅರ್ಜುನ್ ನಾಯಕ ನಟರಾಗಿ ನಟಿಸಿದ್ದ ಪುಷ್ಪ-2 ಸಿನೆಮಾ ಬಿಡುಗಡೆ ಆಗಿತ್ತು. ಇದೀಗ ಬಿಡುಗಡೆಯಾಗಿ ಕೇವಲ 28 ದಿನಗಳಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದು ಎಲ್ಲಾ ದಾಖಲೆಗಳನ್ನು ಉಡೀಸ್ ಮಾಡಿದೆ. ಪುಷ್ಪ-2ಸಿನಿಮಾ ಬಿಡುಗಡೆಯಾದ ದಿನದಿಂದ 28 ದಿನಗಳಲ್ಲಿ 1,799 ಕೋಟಿ ರೂಪಾಯಿ ಗಳಿಸುವ ಮೂಲಕ ದಾಖಲೆ ನಿರ್ಮಿಸಿದೆ. ಈ ಕುರಿತಂತೆ ಮೈತ್ರಿ ಮೂವಿ ಮೇಕರ್ಸ್ ಮಾಹಿತಿ ಹಂಚಿಕೊಂಡಿದ್ದು, ಕಳೆದ 28 ದಿನಗಳಲ್ಲಿ ಪುಷ್ಪ 2 ಸಿನಿಮಾ 1899 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ತಿಳಿಸಿದೆ. ಹಿಂದಿ ಅವತರಣಿಕೆಯಿಂದ 716.65 ಕೋಟಿ, ತೆಲುಗಿನಲ್ಲಿ 316.3 ಕೋಟಿ, ತಮಿಳಿನಲ್ಲಿ 55.35 ಕೋಟಿ, ಮಲಯಾಳಂನಲ್ಲಿ 14.07 ಕೋಟಿ ಹಾಗೂ ಕನ್ನಡದಲ್ಲಿ 7.48 ಕೋಟಿ ರೂ. ಗಳಿಕೆಯಾಗಿದೆ. ಮೈತ್ರಿ ಮೂವಿ ಮೇಕರ್ಸ್‌ ಪುಷ್ಪ-2 ಚಿತ್ರವು 21ನೇ ದಿನದಾಂತ್ಯಕ್ಕೆ ಜಾಗತಿಕವಾಗಿ 1799 ಕೋಟಿ ರೂ. ಗಳಿಸಿದೆ ಎಂದು ಟ್ವೀಟ್‌ ಮಾಡಿದೆ. ಈ ಹಿಂದೆ “ಬಾಹುಬಲಿ-2′ ಚಿತ್ರ…

Read More

ಬೀದರ್ : ಬೀದರ್ ನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದು ಈ ಹಿನ್ನಲೆಯಲ್ಲಿ ಇಂದು ಬೀದರ್ ಜಿಲ್ಲೆಗೆ ಸಿಐಡಿ ತಂಡ ಭೇಟಿ ನೀಡಲಿದೆ. ಇಂದು ಬೀದರ್ ಗೆ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಲಿದೆ. ಸಿಐಡಿ ಎಸ್ ಪಿ ಸುಲೇಮಾನ್ ತಹಶೀಲ್ದಾರ್ ನೇತೃತ್ವದ ತನಿಖಾ ತಂಡ ಬೀದರ್ಗೆ ಭೇಟಿ ನೀಡಲಿದೆ. ಆತ್ಮಹತ್ಯೆ ಮಾಡಿಕೊಂಡ ಸಚಿನ್ ಪಂಚಾಳ್ ನಿವಾಸಕ್ಕೆ ಸಿಐಡಿ ತನಿಖೆ ತಂಡ ಭೇಟಿ ನೀಡುವ ಸಾಧ್ಯತೆ ಇದ್ದು, ಕುಟುಂಬ ಸದಸ್ಯರು ಹೇಳಿಕೆಯನ್ನು ದಾಖಲಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನೊಂದು ಕಡೆಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಸಚಿನ್ ಪಂಚಾಳ್ ಗುತ್ತಿಗೆದಾರನೆ ಅಲ್ಲ ಎಂದು ಸ್ಪೋಟಕ ಹೇಳಿಕೆ ನೀಡಿದ್ದು, ಆತ ಗುತ್ತಿಗೆದಾರ ಇರುವಂತಹ ದಾಖಲೆಗಳು ಎಲ್ಲಿಯೂ ಕೂಡ ಇಲ್ಲ ಎಂದು ತಿಳಿಸಿದ್ದಾರೆ. ಇನ್ನು ಸಚಿನ್ ಸಹೋದರಿ ಸುರೇಖಾ ಅವರು ರಾಜ್ಯ ಸರ್ಕಾರ ಪ್ರಕರಣವನ್ನು…

Read More

ಬೆಂಗಳೂರು : ಇಂದು ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಿಮ್ಹಾನ್ಸ್ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿ, ಮಧ್ಯಾಹ್ನ 3 ಗಂಟೆಗೆ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಬೆಳಗಾವಿಯಲ್ಲಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಬಳಿಕ ಸಂಜೆ 5.30ಕ್ಕೆ ಬೆಳಗಾವಿಯಿಂದ ದೆಹಲಿಗೆ ವಾಪಸ್ಸಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಜ್ಯೋತಿರಾಧಿತ್ಯ ಸಿಂಧಿಯಾ ಮತ್ತಿತತರು ಪಾಲ್ಗೊಳ್ಳಲಿದ್ದಾರೆ.ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು, ಬೆಳಗಾವಿಗೆ ಭೇಟಿ ನೀಡಲಿದ್ದು, ಅಲ್ಲಿ ಕೆ.ಎಲ್.ಇ. ಸಂಸ್ಥೆಯ ಜಾಗತಿಕ ಗುಣಮಟ್ಟದ ಸಮಗ್ರ ಚಿಕಿತ್ಸೆಯನ್ನು ಒಳಗೊಂಡ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆಯೊಂದಿಗೆ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಗ್ರಾಹಕ ಸೇವೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ ಜೋಶಿ, ರಾಜ್ಯದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದ ಜಗದೀಶ ಶೆಟ್ಟರ್, ಮತ್ತಿತರರು ಭಾಗವಹಿಸಲಿದ್ದಾರೆ. ಏರ್ಕ್ರಾಫ್ಟ್…

Read More

ಬೆಂಗಳೂರು : ಇತ್ತೀಚಿಗೆ ಎಲ್ಲರ ಮೊಬೈಲ್ ಗಳಿಗೆ ಅಪರಿಚಿತ ಮೆಸೇಜ್ ಹಾಗೂ ಲಿಂಕ್ ಗಳು, ಅಲ್ಲದೆ ವಿಡಿಯೋ ಕಾಲ್ ಮೂಲಕ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚುತ್ತಿದೆ. ಇದೀಗ ಇನ್ಸ್ಟಾಗ್ರಾಮ್ ನಲ್ಲಿ ಬಂದಂತಹ ಲಿಂಕ್ ಒಂದನ್ನು ಕ್ಲಿಕ್ ಮಾಡುವುದರ ಮೂಲಕ ಬೆಂಗಳೂರಿನ ವ್ಯಕ್ತಿ ಒಬ್ಬರು ಸುಮಾರು 21 ಲಕ್ಷ ರೂ ಹಣವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಖಾಸಗಿ ಫೈನಾನ್ಸ್ ಗ್ರೂಪ್‌ವೊಂದರ ಜಾಹೀರಾತು ನೋಡಿ ಅಧಿಕ ಲಾಭದ ಆಸೆಯಿಂದ 71.41 ಲಕ್ಷ ರು. ಹೂಡಿಕೆ ಮಾಡಿ ಬಳಿಕ ವಂಚನೆಗೆ ಒಳಗಾಗಿರುವ ಸಂಬಂಧ ಬೆಂಗಳೂರಿನ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆ.ಪಿ.ನಗರ 1ನೇ ಹಂತದ ಶಾಕಾಂಬರಿ ನಗರದ ನಿವಾಸಿ ಬಿ.ಹರ್ಷ ಹಣ ಕಳೆದುಕೊಂಡವರು. ಇವರು ನೀಡಿದ ದೂರಿನ ಮೇರೆಗೆ ಅಪರಿಚಿತನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ, ಬಿಎನ್‌ಎಸ್ ಕಲಂ 318 (4) ಮತ್ತು ಕಲಂ 319(2)ರ ಅಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ…

Read More

ಹೈದ್ರಾಬಾದ್ : ಇತ್ತೀಚಿಗೆ ಕಾಲೇಜು, ಹಾಸ್ಟೆಲ್ ಶೌಚಾಲಯದಲ್ಲಿ ಕ್ಯಾಮರಾ ಅಳವಡಿಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಹೈದರಾಬಾದ್ನ ತೆಲಂಗಾಣದ ಮೇಡ್‌ಚಲ್‌ದಲ್ಲಿ ಇರುವ ಸಿಎಂಆರ್ ಎಂಜಿನಿಯರಿಂಗ್ ಕಾಲೇಜು ಹಾಸ್ಟೆಲ್‌ನ ಶೌಚಾಲಯಗಳಲ್ಲಿ ಗೌಪ್ಯವಾಗಿ ವಿಡಿಯೊ ಚಿತ್ರೀಕರಿಸಲಾಗುತ್ತಿದೆ, ಅದನ್ನು ತಡೆಯಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿನಿಯರು ಗುರುವಾರ ಪ್ರತಿಭಟನೆ ನಡೆಸಿದರು. ಹೌದು ಗರ್ಲ್ಸ್‌ ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಹಿಡನ್‌ ಕ್ಯಾಮೆರಾ ಅಳವಡಿಸಲಾಗಿದೆ ಎಂಬ ಆರೋಪವೊಂದು ಕೇಳಿ ಬಂದಿದೆ. ಹಾಸ್ಟೆಲ್‌ ವಾಶ್‌ರೂಮ್‌ನಲ್ಲಿ ಅಡುಗೆ ಸಿಬ್ಬಂದಿ ಹಿಡನ್‌ ಕ್ಯಾಮೆರಾ ಇಟ್ಟು ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿಯರು ಇದೀಗ ಪ್ರತಿಭಟನೆಗೆ ಇಳಿದಿದ್ದಾರೆ. ಡಿಸೆಂಬರ್ 31ರಂದು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಹಾಸ್ಟೆಲ್ ನಲ್ಲಿ ಡಿಜೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮ ಮುಗಿದ ಬಳಿಕ ಹುಡುಗಿಯರು ಹಾಸ್ಟೆಲ್‌ಗೆ ಹೋದಾಗ, ಅಲ್ಲಿ ಕ್ಯಾಮೆರಾ ಇರುವುದನ್ನು ಅವರು ಪತ್ತೆ ಹಚ್ಚಿದ್ದಾರೆ. ಅಲ್ಲದೆ ಬಾತ್ ರೂಂನ ವೆಂಟಿಲೇಟರ್‌ನಲ್ಲಿ ಕೈಗಳ ಗುರುತು, ಕನ್ನಡಿಯ ಮೇಲೆ ಹೊರಗಿನಿಂದ ಕ್ಯಾಮೆರಾ ಇಟ್ಟಿರುವ ಗುರುತುಗಳು ಪತ್ತೆಯಾಗಿವೆ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ. ಜೊತೆಗೆ ಕಳೆದ…

Read More

ಬೆಂಗಳೂರು : ಕರ್ನಾಟಕ ಹಾಗೂ ಕೇರಳ ರಾಜ್ಯಗಳ ಮಧ್ಯೆ ಇರುವಂತಹ ಬಂಡಿಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ರಾತ್ರಿ ವಾಹನಗಳ ಸಂಚಾರ ಬ್ಯಾನ್ ಮಾಡಿದ್ದು, ಆದರೆ ತುರ್ತು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ನಿನ್ನೆ ವಿಕಾಸ ಸೌಧದಲ್ಲಿ ತಮ್ಮ ಕಚೇರಿಯಲ್ಲಿ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಪ್ರಸ್ತುತ ರಾತ್ರಿ 9 ಗಂಟೆಯ ವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಅದರ ಹೊರತಾಗಿ ಕರ್ನಾಟಕ ಮತ್ತು ಕೇರಳದ ತಲಾ 1 ಬಸ್‌ಗಳು ರಾತ್ರಿ ವೇಳೆ ಸಂಚರಿಸುತ್ತಿವೆ ಹಾಗೂ ವೈದ್ಯಕೀಯ ತುರ್ತು ಸಂದರ್ಭದಲ್ಲಿ ವಾಹನಗಳನ್ನು ಪರಿಶೀಲಿಸಿ ಸಂಚಾರಕ್ಕೆ ಅನುವು ಮಾಡಿ ಕೊಡಲಾಗುತ್ತಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು. ಇನ್ನು ಅರಣ್ಯ ಪ್ರದೇಶದಲ್ಲಿ ಕೈಗೊಳ್ಳುವ ಕಾಮಗಾರಿಗೆ ಬದಲಾಗಿ ಕ್ಯಾಂಪಾ ನಿಧಿ ಸಂಗ್ರಹಿಸಲಾಗುತ್ತದೆ ಹಾಗೂ ಆ ಹಣವನ್ನು ಆಯಾ ರಾಜ್ಯಗಳಿಗೆ ಹಂಚಿಕೆ ಮಾಡಬೇಕಿದೆ. ಆದರೆ, ಕ್ಯಾಂಪಾದಲ್ಲಿ ರಾಜ್ಯದ ಪಾಲಾದ 1,400…

Read More