Author: kannadanewsnow05

ಬೆಂಗಳೂರು : ಬೆಂಗಳೂರಿನ ಮಹಾಲಕ್ಷ್ಮಿ ಮೆಟ್ರೋ ನಿಲ್ದಾಣದಲ್ಲಿ ಬಳಿ ಅಪರಿಚಿತ ವಾಹನ ಒಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಹಿಟ್ ಅಂಡ್ ರನ್ನಿಗೆ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಿಟ್ ಅಂಡ್ ರನ್ನಿಗೆ 62 ವರ್ಷದ ಆಶಾರಾಣಿ ಎನ್ನುವ ಮಹಿಳೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ನಿಗೆ ಮಹಿಳೆ ಬಲಿಯಾಗಿದ್ದು ಮಹಾಲಕ್ಷ್ಮಿ ಲೇಔಟ್ ಮೆಟ್ರೋ ನಿಲ್ದಾಣ ಬಳಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನೆಯು ಬೆಳಗಿನ ಜಾವ5.40ಕ್ಕೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದ್ದು, ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿ ಆಶಾರಾಣಿ (62) ಮಹಿಳೆ ಸಾವನ್ನಪ್ಪಿದ್ದಾಳೆ.ಸ್ಥಳಕ್ಕೆ ಮಹಾಲಕ್ಷ್ಮಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು: ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ಗೆ 439 ಕೋಟಿ ರೂ.ಗಳ ಸಾಲ ಪಾವತಿಸದೇ ವಂಚಿಸಿರುವ  ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಮುಂದಿನ ವಿಚಾರಣೆವರೆಗೂ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಮೂಲಕ ಸಾಹುಕಾರಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ಗೆ 439 ಕೋಟಿ ರೂ.ಗಳ ಸಾಲ ಪಾವತಿಸದೇ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್‌ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್ ಜಾರಕಿಹೊಳಿ ಮತ್ತಿತರರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಪ್ರಶ್ನಿಸಿ ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯಪೀಠ ವಿಚಾರಣೆ ನಡೆಸಿತು. ಈ ವೇಳೆ ರಮೇಶ್‌ ಜಾರಕಿಹೊಳಿ ಪರ ವಕೀಲರು, ಫೆ. 26ರಂದು ಅರ್ಜಿದಾರರ ಮಗನ ಮದುವೆ ನಿಶ್ಚಯವಾಗಿದೆ. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳು ಬಂಧಿಸುವ ಸಾಧ್ಯತೆಯಿದೆ. ಈ…

Read More

ಬೆಂಗಳೂರು: ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳುವ ಕುರಿತಂತೆ ಮುಂದಿನ ರಣತಂತ್ರ ರೂಪಿಸುವ ಉದ್ದೇಶದಿಂದ ಕೇಂದ್ರ ಗೃಹ ಸಚಿವ ಚಾಣಕ್ಯ ಅಮಿತ್ ಶಾ ಅವರು ಭಾನುವಾರ ಮೈಸೂರಿನಲ್ಲಿ ರಾಜ್ಯ ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ಕಮಿಟಿ ಸಭೆ ನಡೆಸಲಿದ್ದಾರೆ. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಸಂಬಂಧ ಅಮಿತ್ ಶಾ ಅವರು ಆಗಮಿಸುತ್ತಿದ್ದು, ಈ ವೇಳೆ ಪಕ್ಷದ ಸಂಘಟನೆ ಕುರಿತಂತೆ ಸಭೆಗಳನ್ನೂ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ ಈ ಭೇಟಿ ವೇಳೆ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸಿ ಪಕ್ಷ ಸಭೆಗಳನ್ನು ನಡೆಸುವುದು ಈ ಮೊದಲು ನಿರ್ಧಾರವಾಗಿತ್ತು. ಬಳಿಕ ಸಮಯದ ಅಭಾವದ ಕಾರಣ ಬದಲಾವಣೆ ಮಾಡಲಾಯಿತು. ಇದೀಗ ಭಾನುವಾರ ಮೈಸೂರಿನಲ್ಲೇ ಪಕ್ಷದ ಸಭೆಗಳನ್ನು ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ. ಆ ಪ್ರಕಾರ, ಭಾನುವಾರ ಮಧ್ಯಾಹ್ನ 3 ಗಂಟೆಗೆ ಮೈಸೂರು, ಚಾಮರಾಜನಗರ, ಹಾಸನ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡ ಮೈಸೂರು ಕ್ಲಸ್ಟರ್ ನ ಪಕ್ಷದ ಬೂತ್ ಅಧ್ಯಕ್ಷರು ಹಾಗೂ ಪ್ರಮುಖ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ…

Read More

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ಸಮೀಪದ ಶ್ರೀಕಂಠೇಶ್ವರ ನಗರದ ಮನೆಯಲ್ಲಿ ಇತ್ತೀಚೆಗೆ ನಡೆದಿದ್ದ ಗೃಹಿಣಿ ಆತ್ಮಹತ್ಯೆ ಎನ್ನಲಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತಿಯೇ ಸುಪಾರಿ ಕೊಟ್ಟು ಪತ್ನಿಯನ್ನು ಹತ್ಯೆ ಮಾಡಿಸಿರುವುದು ಪೊಲೀಸರ ತನಿಖೆಯಲ್ಲಿ ದೃಢಪಟ್ಟಿದೆ. ಶ್ರೀಕಂಠೇಶ್ವರ ನಗರದ ನಿವಾಸಿ ಪುಷ್ಪಲತಾ ಕೊಲೆಗೈದ ಆರೋಪದ ಹಿನ್ನೆಲೆಯಲ್ಲಿ ಪತಿ ಶಿವಶಂಕರ್ ಹಾಗೂ ಆತನ ಸ್ನೇಹಿತ ವಿನಯ್‌ನನ್ನು ಪೊಲೀಸರು ಇದೀಗ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪತ್ನಿ ಪುಷ್ಪಲತಾ ಶೀಲ ಶಂಕಿಸಿ ಪತಿ ಶಿವಶಂಕರ್ ಆಗಾಗ್ಗೆ ಜಗಳವಾಡುತ್ತಿದ್ದ. ಆಕೆಯನ್ನು ಕೊಲೆ ಮಾಡಲು ಸ್ನೇಹಿತ ವಿನಯ್‌ಗೆ ಸುಪಾರಿ ಕೊಟ್ಟಿದ್ದ ಎನ್ನಲಾಗುತ್ತಿದೆ. ಫೆ.5ರಂದು ಪುಷ್ಪಲತಾ ಒಬ್ಬರೇ ಮನೆಯಲ್ಲಿದ್ದಾಗ ವಿನಯ್ ಹೋಗಿ, ಸಿಸಿ ಕ್ಯಾಮರಾ ಆಫ್ ಮಾಡಿಸಿದ ಪತಿ ಕುತ್ತಿಗೆ ಬಿಗಿದು ಕೊಲೆ ಮಾಡಿ ನಂತರ ಕಿಟಕಿಗೆ ಹಗ್ಗದಿಂದ ನೇಣು ಬಿಗಿದುಕೊಂಡಂತೆ ಬಿಂಬಿಸಿ ಪರಾರಿಯಾಗಿದ್ದ. ಸುದ್ದಿ ತಿಳಿದು ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ, ಮೇಲ್ನೋಟಕ್ಕೆ ಆತ್ಮಹತ್ಯೆ ಎಂಬುದು ಕಂಡುಬಂದಿತ್ತು. ಮರಣೋತ್ತರ ವರದಿಯಲ್ಲಿ ಕೊಲೆ…

Read More

ಬೆಂಗಳೂರು : ಕಳೆದ ವರ್ಷ ರಾಜ್ಯದಲ್ಲಿ ಮಳೆ ಬಾರದೆ ಇರುವುದರಿಂದ ರೈತರು ಸೇರಿದಂತೆ ರಾಜ್ಯದ ಜನತೆ ತೀವ್ರ ಬರ ಸಂಕಷ್ಟ ಎದುರಿಸಿತ್ತು. ಅಲ್ಲದೆ ಈ ಬಾರಿಯ ಬೇಸಿಗೆಯಲ್ಲಿ ನೀರಿನ ಹಾಹಾಕಾರ ಹೆಚ್ಚುವ ಸಂಭವವಿದೆ.ಇದರ ಮಧ್ಯ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎನ್ನುವ ಸ್ಪೋಟಕ ವರದಿ ಬಹಿರಂಗವಾಗಿದೆ. ಹೌದು ಕಾವೇರಿ, ಕೃಷ್ಣಾಸೇರಿದಂತೆ ರಾಜ್ಯದ ನದಿಗಳ ನೀರನ್ನು ಕುಡಿಯುವುದಕ್ಕೂ ಮುನ್ನ ಯೋಚಿಸುವ ಸ್ಥಿತಿ ಎದುರಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 12 ನದಿಗಳ ವಿವಿಧ ಭಾಗಗಳ ನೀರು ಸಂಗ್ರಹಿಸಿ ನಡೆಸಿದ ಪರೀಕ್ಷೆಯ ವರದಿ ಪರಿಗಣಿಸಿದರೆ ಈ ಸ್ಥಿತಿಯಿರುವುದಂತೂ ದಿಟ. ಏಕೆಂದರೆ, ವರದಿಯಲ್ಲಿ ಬೆಚ್ಚಿ ಬೀಳಿಸುವಂತಹ ಅಂಶ ಪತ್ತೆಯಾಗಿದ್ದು, ಆ ನದಿಗಳ ನೀರನ್ನು ನೇರವಾಗಿ ಕುಡಿದರೆ ಗಂಟಲು, ಕಣ್ಣು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಅಪಾಯ ಎದುರಾಗುವುದು ಖಚಿತವಂತೆ ಹಾಗಂತ, ಇಡೀ ನದಿಗಳ ನೀರೇ ಅಪಾಯಕಾರಿ ಯಂತೇನಲ್ಲ, ಮಂಡಳಿಯು ಈ 12 ನದಿಗಳ ನಿರ್ದಿಷ್ಟ ತಾಣಗಳಲ್ಲಿನ ನೀರು ಸಂಗ್ರಹಿಸಿ ಪರೀಕ್ಷೆ ನಡೆಸಿದ್ದು, ಆ…

Read More

ಬೆಂಗಳೂರು : ತನ್ನ ಪ್ರೀತಿಯನ್ನು ನಿರಾಕರೀಸಿದ್ದ ಹಿನ್ನೆಲೆಯಲ್ಲಿ ಬಾಲಕಿಯನ್ನ ಕೊಂದು ಮಣ್ಣಲ್ಲಿ ಹೂತು ಹಾಕಿದ ಯುವಕ, ನಂತರ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಬೆಂಗಳೂರು ನಗರದ ಹೊಸಕೋಟೆ ಎಂಬಲ್ಲಿ ಈ ಘಟನೆ ನಡೆದಿದೆ. ಬರಗೂರು ನಿವಾಸಿ ನಿತಿನ್ (23) ಎಂಬಾತ ಕೊಲೆ ಮಾಡಿದ ಪಾಗಲ್ ಪ್ರೇಮಿ. 2 ದಿನಗಳ ಹಿಂದೆ ಕಾಣೆಯಾ ಗಿದ್ದ 15 ವರ್ಷದ ಬಾಲಕಿ ತಾಲೂಕಿನ ಅನುಗೊಂಡನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವ ಪತ್ತೆಯಾಗಿದೆ.ಕೋಲಾರಜಿಲ್ಲೆ ಮಾಲೂರು ತಾಲೂಕಿನ ದೊಮ್ಮಲೂರು ಗ್ರಾಮದ ಬಾಲಕಿ ಕೊಲೆಯಾದ ನತದೃಷ್ಟೆ. 20 ದಿನಗಳ ಹಿಂದೆ ಶಾಲೆಗೆ ಹೋಗುತ್ತಿ ದ್ದಾಗ ನಿತಿನ್ ಬಾಲಕಿಗೆ ಚುಡಾಯಿಸಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ನಿತಿನ್ ಬಾಲಕಿ ಮೇಲೆ ಹಲ್ಲೆ ಮಾಡಿದ್ದ. ಈ ವಿಚಾರ ಬಾಲಕಿಯು ಪೋಷಕರಿಗೆ ತಿಳಿಸಿ ಮಾಲೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಎರಡು ಗ್ರಾಮದವರು ಪರಸ್ಪರ ಮಾತು ಕತೆಯಿಂದ ರಾಜಿ ಮಾಡಿಕೊಂಡಿದ್ದರು. ಇದಾದ ಮೂರು ದಿನದ ಬಳಿಕ ನಂದಿನಿ ನಾಪತ್ತೆಯಾಗಿದ್ದು, ಹೊಸ ಕೋಟೆ ತಾಲೂಕಿನ…

Read More

ಬೆಂಗಳೂರು : ಸ್ನಾ ಹೆಸರಿನಲ್ಲಿ ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ವೈಟ್‌ಫೀಲ್ಡ್ ವಿಭಾಗದ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿ, ಆರು ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಸ್ಪಾ ಮ್ಯಾನೇಜರ್ ನವೀನ್ (26) ಮತ್ತು ಸಹಾಯಕ ಭರತ್ ಸಿಂಗ್(27) ಬಂಧಿತರು. ದಾಳಿ ವೇಳೆ ಮೂರು ಸಾವಿರ ರು. ನಗದು, ಎರಡು ವಾಕಿಟಾಕಿ, ಮೊಬೈಲ್, ಸ್ವಾಪಿಂಗ್ ಯಂತ್ರ, ಕಾಂ ಡೋಮ್ ಸೇರಿದಂತೆ ಕೆಲ ದಾಖಲೆಗ ಳನ್ನು ಜಪ್ತಿ ಮಾಡಲಾಗಿದೆ. ಸ್ಪಾದ ಮಾಲೀಕ ಭೀಮಾ ನಾಯಕ್‌ ತಲೆಮರೆಸಿ ಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾರತ್ತಹಳ್ಳಿಯ ಹೊರವರ್ತುಲ ರಸ್ತೆ ಲಕ್ಷದೀಪ ಕಾಂಪ್ಲೆಕ್ಸ್‌ನ 1ನೇ ಮಹಡಿಯ ವಿಐಪಿ ಹೆಸರಿನ ಸ್ಪಾದಲ್ಲಿ ಹೊರರಾಜ್ಯದ ಹುಡುಗಿಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ವೈಟ್ ಫೀಲ್ಡ್ ವಿಭಾಗದ ಪೊಲೀಸರು ಸ್ವಾ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ದೆಹಲಿ, ಪಶ್ಚಿಮ ಬಂಗಾಳ, ಅಸ್ಸಾಂ, ಥೈಲ್ಯಾಂಡ್ ಮೂಲದ ಆರು ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ.…

Read More

ಬೆಂಗಳೂರು : ಬಿಎಂಟಿಸಿ ಸೇವೆಯನ್ನು ಮತ್ತಷ್ಟು ಉತ್ತಮವಾಗಿಸಲು ಹೊಸ ಬಸ್‌ಗಳ ಖರೀದಿಯನ್ನು ಹೆಚ್ಚಿಸಲಾಗುತ್ತಿದ್ದು, ಎಲೆಕ್ಟಿಕ್ ಬಸ್‌ಗಳ ಸೇರ್ಪಡೆ ನಂತರ ಇದೀಗ ಹೊಸ ದಾಗಿ 820 ಡೀಸೆಲ್ ಬಿಎಸ್6 ಬಸ್‌ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಿಗೆ ಪ್ರಸಕ್ತ ವರ್ಷದಲ್ಲಿ 5 ಸಾವಿರಕ್ಕೂ ಹೆಚ್ಚಿನ ಬಸ್‌ಗಳ ಸೇರ್ಪಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಅದಕ್ಕೆ ಪೂರಕವಾಗಿ ಬಿಎಂಟಿಸಿಗೆ ಹಂತಹಂತವಾಗಿ 920ಕ್ಕೂ ಹೆಚ್ಚಿನ ಎಲೆಕ್ಟಿಕ್ ಬಸ್‌ಗಳ ಸೇರ್ಪಡೆಗೆ ಈಗಾಗಲೇ ಚಾಲನೆ ನೀಡಿದೆ. ಹಾಗೆಯೇ, ಕೆಲದಿನಗಳ ಹಿಂದಷ್ಟೇ ಕೆಎಸ್ಸಾರ್ಟಿಸಿಗೆ 100 ಡೀಸೆಲ್ ಬಸ್‌ಗಳನ್ನು ಸೇರ್ಪಡೆ ಮಾಡಲಾಗಿದೆ. ಅದರ ಜತೆಗೆ ಇದೀಗ ಬಿಎಂಟಿಸಿಗೆ ಹೊಸದಾಗಿ 820 ಡೀಸೆಲ್ ಬಸ್ ಗಳನ್ನು ಸೇರ್ಪಡೆ ಮಾಡಲು ಯೋಜನೆ ರೂಪಿಸಲಾಗಿದ್ದು, ಅದಕ್ಕಾಗಿ ಟೆಂಡರ್‌ಪ್ರಕ್ರಿಯೆ ನಡೆಸಲಾಗಿದೆ. ಸಿದ್ಧಪಡಿಸಿರುವ ಟೆಂಡರ್ ದಾಖಲೆಯಲ್ಲಿನ ಷರತ್ತಿನಂತೆ ಗುತ್ತಿಗೆದಾರರು ಬಸ್ ಪೂರೈಕೆಗೆ ಕಾರ್ಯಾದೇಶ ಪಡೆದ 45 ದಿನಗಳಲ್ಲಿ 19 ಬಸ್‌ಗಳನ್ನು ಪೂರೈಸಬೇಕಿದೆ. ಅದಾದ ನಂತರ ಹಂತಹಂತವಾಗಿ ಬಸ್‌ಗಳನ್ನು ಪೂರೈಸಬೇಕಿದ್ದು, 210 ದಿನದ ಒಳಗಾಗಿ…

Read More

ಡೆಹಲಿ : ದೆಹಲಿಯಲ್ಲಿ ಲಷ್ಕರ್ ಈ ತೊಯ್ಬಾ ಉಗ್ರಣ ಬಂಧನವಾಗಿದ್ದು, ಉಗ್ರನನ್ನು ದೆಹಲಿ ವಿಶೇಷ ಪೊಲೀಸ್ ದಳ ಬಂಧಿಸಿದೆ ಎಂದು ತಿಳಿದುಬಂದಿದೆ.ಭದ್ರತಾ ಪಡೆಯಲ್ಲಿ ಕೆಲಸ ಮಾಡಿ ಬಂದಿತ ಉಗ್ರ ನಿವೃತ್ತನಾಗಿದ್ದ ಎಂದು ಹೇಳಲಾಗುತ್ತಿದೆ. ಪಾಕಿಸ್ತಾನದಲ್ಲಿ ಎಲ್ಇಟಿ ಸಂಘಟನೆಯಲ್ಲಿ ಉಗ್ರ ತರಬೇತಿ ಪಡೆದಿದ್ದ, ಜಮ್ಮು ಕಾಶ್ಮೀರದ ಕುಪ್ಪು ವಾರದಲ್ಲಿ ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದ ಎಂದು ತಿಳಿದುಬಂದಿದೆ. ಬಂಧಿತ ಉಗ್ರನನ್ನು ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಉಡುಪಿಯಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಆಕ್ಟಿವ್? ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಆಕ್ಟಿವ್ ಆಗಿದೆ ಎಂದು ಹೇಳಲಾಗುತ್ತಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ನಕ್ಸಲರ ಓಡಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮುಧೂರು, ಜಡ್ಕಲ್ ಬೆಳಕಲ್. ಬಳಿ ನಕಸಲು ಓಡಾಟ ನಡೆಸಿದ್ದಾರೆ. ಅಲ್ಲಿನ ಹಲವು ಮನೆಗಳಿಗೆ ನಕ್ಸಲರ ತಂಡ ಭೇಟಿ ನೀಡಿದೆ ಎಂದು ಹೇಳಲಾಗುತ್ತಿದೆ ಈ ಕುರಿತಂತೆ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಪಶ್ಚಿಮಘಟ್ಟದ ತಪ್ಪಿಲಿನಲ್ಲಿ ಮತ್ತೆ ನಕ್ಸಲ್…

Read More

ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನುದಾನ ನೀಡುವಲ್ಲಿ ಮಲತಾಯಿದೋರಾಣೆ ಅನುಸರಿಸುತ್ತಿರುವುದನ್ನು ಖಂಡಿಸಿ ನಾಳೆ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಇದರ ಭಾಗವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಸಿರಿಗಂತೆ 136 ಶಾಸಕರು ಸಚಿವರು ಸೇರಿದಂತೆ ಕಾಂಗ್ರೆಸ್ನ ಎಲ್ಲಾ ನಾಯಕರು ದೆಹಲಿಗೆ ತೆರಳಲಿದ್ದಾರೆ.ಈ ಒಂದು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ರಾಜ್ಯಸಂಸದವರಿಗೆ ಪ್ರತಿಭಟನೆಗೆ ಬೆಂಬಲ ಸೂಚಿಸುವಂತೆ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ನಡೆಸುತ್ತಿರುವ ಈ ಪ್ರತಿಭಟನೆಗೆ ಕೇಂದ್ರ ಸಚಿವ ಪ್ರಹದ ಜೋಶಿ ಅವರು ತಮ್ಮ ಟ್ವೀಟ್ ಖಾತೆಯಲ್ಲಿ ಆಕ್ರೋಶ ಅವರ ಹಾಕಿದ್ದು ಕರ್ನಾಟಕ ಕಾಂಗ್ರೆಸಿಗರೇ ಯಾತಕ್ಕಾಗಿ ದಿಲ್ಲಿ ಚಲೋ ನಾಟಕ? ಎಂದು ಕಿಡಿ ಕಾರಿದ್ದಾರೆ. 1) ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕನ್ನ ಹಾಕಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ? 2)…

Read More