Subscribe to Updates
Get the latest creative news from FooBar about art, design and business.
Author: kannadanewsnow05
BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ಬಸ್ ಪ್ರಯಾಣದ ಟಿಕೆಟ್ ದರ ‘ಶೇ.15 ರಷ್ಟು’ ಏರಿಕೆಗೆ ಕ್ಯಾಬಿನೆಟ್ ಅನುಮೋದನೆ
ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ರಾಜ್ಯದ ಜನತೆಗೆ ಇದೀಗ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ಸಂಕ್ರಾಂತಿ ಬಳಿಕ ಎಲ್ಲ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಶೇ.15 ರಷ್ಟು ಏರಿಕೆ ಮಾಡಿ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ ಪ್ರಯಾಣದ ಟಿಕೆಟ್ ದರ ಶೇಕಡ 15ರಷ್ಟು ಏರಿಕೆ ಮಾಡಿ ಸಂಪುಟ ಅನುಮೋದನೆ ನೀಡಿದೆ.ಈ ಕುರಿತಂತೆ ಈಗಾಗಲೇ ಈ ಹಿಂದೆ ಶೇ. 25 ರಷ್ಟು ಟಿಕೆಟ್ ದರ ಏರಿಕೆಗೆ ಎಲ್ಲಾ ಸಾರಿಗೆ ನಿಗಮಗಳು ಮನವಿ ಮಾಡಿದ್ದವು. ಪೆಟ್ರೋಲ್-ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಅದರೆ, ಕಳೆದ ನಾಲ್ಕೈದು ವರ್ಷದಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಇಂಧನ ದರ ನಾಲ್ಕೈದು ವರ್ಷದಲ್ಲಿ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಗೆ ನಾಲ್ಕೂ ನಿಗಮಗಳು ಮನವಿ ಮಾಡಿದ್ದವು. ಹಾಗಾಗಿ ಇಂದು ನಡೆದ ಸಂಪುಟ ಸಭೆಯಲ್ಲಿಎಲ್ಲಾ ನಾಲ್ಕು…
ಬೆಂಗಳೂರು : ರಾಜ್ಯದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಸದರಿ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಒಟ್ಟು 5.85 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಸದರಿ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಬಿಡುಗಡೆಯಾದ ಅನುದಾನ ವಿವರ ಈ ಕೆಳಕಂಡಂತಿದೆ. 2023-24 ನೇ ಸಾಲಿಗೆ ಸ್ವೀಕರಿಸಲಾದ ಅರ್ಜಿಸಲ್ಲಿಸಿದ ಸಂಖ್ಯೆ ಒಟ್ಟು 4474…
ಕಲಬುರ್ಗಿ : ಅಂಗನವಾಡಿಯಲ್ಲಿ ಸಹಾಯಕಿ ಹುದ್ದೆ ಕೊಡಿಸುವುದಾಗಿ ಮಹಿಳೆಯಿಂದ ಹದಿನೈದು ಸಾವಿರ ರೂಪಾಯಿ ಸ್ವೀಕರಿಸುತ್ತಿದ್ದ ವೇಳೆ ಸಿಡಿಪಿಒ ಕಚೇರಿಯ FDA ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಹೌದು 15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.ಕಚೇರಿಯಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ FDA ಶಿಲ್ಪಾ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅಂಗನವಾಡಿ ಸಹಾಯಕಿ ಹುದ್ದೆ ಕೊಡಿಸುವುದಕ್ಕೆ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಒಂದು ಹುದ್ದೆಗಾಗಿ ಈಗಾಗಲೇ ಮಹಿಳೆಯಿಂದ ಈಗಾಗಲೇ FDA ಶಿಲ್ಪ 35,000 ಲಂಚ ಪಡೆದಿದ್ದರು. ಉಳಿದ 15 ಸಾವಿರ ರೂಪಾಯಿ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಶಿಲ್ಪಾ ಬಿದ್ದಿದ್ದಾರೆ. FDA ಶಿಲ್ಪಾಳನ್ನು ಸದ್ಯ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಇದೀಗ ಒತ್ತುವರಿ ಮಾಡಿಕೊಂಡಂತಹ ಜಮೀನು ಸರ್ವೆ ಮಾಡಲು ಹೈಕೋರ್ಟ್ ಆದೇಶ ಹೊರಡಿಸಿದ್ದು, ಜನೆವರಿ 15 ರಂದು ಜಂಟಿಯಾಗಿ ಸರ್ವೆ ನಡೆಸಲು ಆದೇಶಿಸಿದೆ. ಹೌದು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಡು ಹೋಬಳಿಯ ಹೊಸಹುಡ್ಯ ಗ್ರಾಮದ ವ್ಯಾಪ್ತಿಯ ಸರ್ವೆ ನಂ.1 ಮತ್ತು 2ರಲ್ಲಿನ 61 ಎಕರೆ 39 ಗುಂಟೆ ಅರಣ್ಯ ಜಮೀನು ಕುರಿತು ಜ.15ರಂದು ಜಂಟಿ ಸರ್ವೇ ನಡೆಸಲು ಹೈಕೋರ್ಟ್ ಆದೇಶಿಸಿದೆ. ಜಮೀನಿನ ಸರ್ವೇನಡೆಸಲು ರಚಿಸಲಾಗಿದ್ದ ಸಮಿತಿಯನ್ನು ಬದಲಾಯಿಸಿ ಬೆಂಗಳೂರು ಜಿಲ್ಲಾ ಪ್ರಾದೇಶಿಕ ಆಯುಕ್ತರು ನೀಡಿರುವ ಪತ್ರವನ್ನು ರದ್ದುಪಡಿಸಬೇಕು ಎಂದು ಕೋರಿ ಮತ್ತು ಕೆ.ಆರ್.ರಮೇಶ್ ಕುಮಾರ್ ಅವರು ಲಭ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ಜಮೀನಿನ ಸರ್ವೇಯನ್ನು ವಿಳಂಬ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ರಾಯಲ್ಪಡು ಹೋಬಳಿ ನಿವಾಸಿ ಕೆ.ವಿ.ಶಿವಾರೆಡ್ಡಿ ಎಂಬುವವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜು…
ಬೆಂಗಳೂರು : ಬೆಂಗಳೂರಿನ ಜನತೆಗೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು ಜನವರಿ 2ನೇ ವಾರದಲ್ಲಿ ನೀರಿನ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದ್ದು, ಈ ಕುರಿತು ಶಾಸಕರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿ ನಿರ್ಧರಿಸಲಾಗುತ್ತೆ ಎಂದು ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ತಿಳಿಸಿದರು. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಡಿಸಿಎಂ ಸಭೆ ಮಾಡ್ತಾರೆ. ಬೆಂಗಳೂರಿನ ಎಲ್ಲಾ ಶಾಸಕರಿಗೆ ಪತ್ರ ಬರೆದಿದ್ದೇವೆ.ಎಷ್ಟು ಪರ್ಸೆಂಟೇಜ್ ಏರಿಕೆ ಆಗುತ್ತೆ ಅನ್ನೋದು ನಿರ್ಧಾರ ಆಗುತ್ತೆ. ಉಪಮುಖ್ಯಮಂತ್ರಿಗಳು ನಿರ್ಧಾರ ಮಾಡ್ತಾರೆ. ಬೆಂಗಳೂರಿನ ಎಲ್ಲಾ ಶಾಸಕರಿಗೂ ಜಲಮಂಡಳಿ ನಷ್ಟದ ಬಗ್ಗೆ ಪತ್ರದಲ್ಲಿ ವಿವರಿಸಿದ್ದೇವೆ ಎಂದು ತಿಳಿಸಿದರು. ಜಲಮಂಡಳಿ 1000 ಲೀಟರ್ ನೀರು ಪೂರೈಕೆ ಮಾಡುವುದಕ್ಕೆ 52 ರೂಪಾಯಿ ಖರ್ಚು ಮಾಡ್ತಿದೆ. ಆದರೆ, 25 ರಿಂದ 40 ರೂ. ಮಾರುತ್ತಾ ಇದ್ದೇವೆ. ಇದರಿಂದ ಜಲಮಂಡಳಿಗೆ ನಷ್ಟ ಆಗ್ತಿದೆ. ಪ್ರತಿ ತಿಂಗಳಿಗೆ ಜಲಮಂಡಳಿಗೆ 41 ಕೋಟಿ ರೂಪಾಯಿ ನಷ್ಟ ಆಗ್ತಿದೆ.ಕಾವೇರಿ ಐದನೇ ಹಂತ ಆದ ಮೇಲೆ 82 ಕೋಟಿ…
ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಚಾಲಕರ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ಪ್ರಕರಣಗಳ ಸಂಖ್ಯೆ ಹೆಚ್ಚುತಲೆ ಇವೆ. ಇದೀಗ ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲವೆಂದು ಪುಂಡಾಟಿಕೆ ಮೆರಿದ ವ್ಯಕ್ತಿ ಒಬ್ಬ ಬಸ್ ಚಾಲಕನ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿರುವ ಘಟನೆ ನೆಲಮಂಗಲ ತಾಲೂಕಿನ ಮಹಿಮಾಪುರ ಗೇಟ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಹಿಮಾಪುರ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿ ಪುಂಡಾಟಿಕೆ ನಡೆಸಿದ್ದಾನೆ. ಬಿಯರ್ ಬಾಟಲ್ ನಿಂದ ಬಸ್ ಚಾಲಕನ ಕೈಗೆ ಪುಂಡ ಹೊಡೆದಿದ್ದಾನೆ. ಚಾಲಕನ ಮೇಲೆ ಹಲ್ಲೆ ನಡೆಸಿದ ಬಳಿಕ ಬಸ್ಸಿನ ಮಿರರ್ ಒಡೆದು ಪುಂಡ ಅಲ್ಲಿಂದ ಪರಾರಿಯಾಗಿದ್ದಾನೆ. ಸರಿಯಾದ ಸಮಯಕ್ಕೆ ನೀವು ಯಾಕೆ ಬರುತ್ತಿಲ್ಲ ಅಂತ ಗಲಾಟೆ ಮಾಡಿದ್ದಾನೆ. ಬೈಕ್ ನಲ್ಲಿ ಬಂದಿದ್ದ 40 ವರ್ಷದ ದುಷ್ಕರ್ಮಿಯಿಂದ ಈ ಒಂದು ಕೃತ್ಯ ನಡೆದಿದೆ. KA 52 Q 6697 ಸಂಖ್ಯೆಯ ಬೈಕ್ ನಿಂದ ಕಿಡಿಗೇಡಿ ಆಗಮಿಸಿ ಈ…
ಮೈಸೂರು : ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತು ಕೇಂದ್ರದ ಗ್ರಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಿದ್ದನ್ನು ಖಂಡಿಸಿ ಇದೆ ಜನವರಿ 7ರಂದು ವಿವಿಧ ಸಂಘಟನೆಗಳಿಂದ ಮೈಸೂರು ಜಿಲ್ಲೆ ಬಂದ್ ಗೆ ಕರೆ ನೀಡಿವೆ. ಇತ್ತೀಚಿಗೆ ಅಮಿತ್ ಶಾ ಅವರು, ಸಂಸತ್ತಿನಲ್ಲಿ ಅಂಬೇಡ್ಕರ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.ಈ ಒಂದು ಹೇಳಿಕೆಯಿಂದ ಇಡೀ ದೇಶದಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದ್ದು ಹಲವು ಕಡೆಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಜನವರಿ 7ರಂದು ಪ್ರಗತಿಪರ ಸಂಘಟನೆ ಅಂಬೇಡ್ಕರ್ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮೈಸೂರು ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ.
ಬೆಂಗಳೂರು : ಕಳೆದ ವರ್ಷ ರಾಜ್ಯದಲ್ಲಿ ಬಳ್ಳಾರಿ ಬೆಳಗಾವಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ, ಹೆರಿಗೆಗೆ ಎಂದು ದಾಖಲಾಗಿದ್ದ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಅವರು ಮಹಿಳೆಯರಿಗೆ 2 ಸಾವಿರ ಕೊಡುವ ಬದಲು ಬಾಣಂತಿಯರ ಸಾವು ನಿಲ್ಲಿಸಲಿ ಎಂದು ಆಗ್ರಹಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಸರ್ಕಾರ ಬಂದ ಮೇಲೆ 736 ಬಾಣಂತಿಯರ ಸಾವಾಗಿದೆ. ಹೆರಿಗೆಗಾಗಿ ಆಸ್ಪತ್ರೆಗೆ ಹೋದ ಮಹಿಳೆಯರು ಶವವಾಗಿ ಬರುತ್ತಿದ್ದಾರೆ.ಇನ್ನೂ ಕೂಡ ರಾಜ್ಯದಲ್ಲಿ ಬಾಣಂತಿಯರ ಸಾವು ನಿಂತಿಲ್ಲ ಅಧಿವೇಶನದಲ್ಲಿ ನಾವು ರಾಜ್ಯ ಸರ್ಕಾರದ ಕಿವಿ ಹಿಂಡಿದ್ದೆವು. ಮೆಡಿಕಲ್ ಮಾಫಿಯಾ ಗೆ ಸರ್ಕಾರ ಬಗ್ಗಿರುವುದು ಸ್ಪಷ್ಟವಾಗಿದೆ ಎಂದರು. ಹೊಸ ವರ್ಷದಲ್ಲಿ ಎಲ್ಲರೂ ಶುಭಾಶಯ ಕೋರಿದ್ದೆ ಕೋರಿದ್ದು. ಸಚಿವರು ರಜೆ ಹಾಕಿ ಹೊಸ ವರ್ಷ ಆಚರಿಸಿದ್ದಾರೆ. ಆದರೆ ಬಾಣಂತಿಯರ ಕುಟುಂಬದಲ್ಲಿ ಇನ್ನೂ ಹರುಷ ಮೂಡಿಲ್ಲ. ರಾಯಚೂರು ಜಿಲ್ಲೆಯಲ್ಲಿ 11 ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಆರ್…
ಬಳ್ಳಾರಿ : ಇತ್ತೀಚಿಗೆ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಪ್ರಯಾಣಿಕರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಬಳ್ಳಾರಿ ಜಿಲ್ಲೆಯ ಕುರುಡುಗೋಡಿನಲ್ಲಿ ಕೇವಲ ಬಸ್ ಹತ್ತುವ ವಿಚಾರಕ್ಕೆ ಕೆಕೆಆರ್ಟಿಸಿ ಬಸ್ ಚಾಲಕನ ಮೇಲೆ ಪುಂಡನೊಬ್ಬ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹೌದು ಬಸ್ ಹತ್ತುವ ವಿಚಾರಕ್ಕೆ ಚಾಲಕ ಹಾಗೂ ಪುಂಡ ಯುವಕನ ನಡುವೆ ಗಲಾಟೆ ನಡೆದಿದೆ.ಗಲಾಟೆಯು ತೀವ್ರ ಸ್ವರೂಪ ಪಡೆದು, ಈ ವೇಳೆ 52 ವರ್ಷದ ಚಾಲಕನ ಮೇಲೆ ಪುಂಡ ಯುವಕ ಎರಗಿದ್ದಾನೆ. ಬೀಮಣ್ಣ ಎಂಬ ಚಾಲಕ ಮೇಲೆ ಬಸ್ ನಿಲ್ದಾಣದಲ್ಲಿ ಹಲ್ಲೆ ಮಾಡಿದ್ದಾನೆ. ಪುಂಡನ ಈ ಒಂದು ದುರ್ವರ್ತನೆ ಕಂಡು ಸಾರಿಗೆ ಸಿಬ್ಬಂದಿಗಳು ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇನ್ನು ಹಲಗೆ ಒಳಗಾದಂತಹ ಬಸ್ ಚಾಲಕ ಭಿಮಣ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಒಂದು ಘಟನೆ ಸಂಬಂಧಿಸಿದಂತೆ ಕುರುಡುಗೋಡು ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ದಾಖಲಾಗಿದೆ.
ಶಿವಮೊಗ್ಗ : ಭದ್ರಾ ಆಣೆಕಟ್ಟಿನ ಗೊಂದಿ ಬಲದಂಡೆ ನಾಲೆಯ ಸಿಲ್ಟ್ ತೆಗೆಯಲು ಸುಮಾರು 9,36,000 ಲಕ್ಷ ಹಣ ಮಂಜೂರಾಗಿದ್ದು, ಈ ಒಂದು ಹಣ ಮಂಜೂರು ಮಾಡಲು ಗುತ್ತಿಗೆದಾರನಿಂದ 1.20 ಲಕ್ಷ ಹಣ ಲಂಚ ಸ್ವೀಕರಿಸುತ್ತಿರುವಾಗಲೇ ನೀರಾವರಿ ನಿಗಮದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ದಾಳಿಯ ವೇಳೆ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ ಇನ್ನು ಬಂಧನಕ್ಕೆ ಒಳಗಾದಂತಹ ಅಧಿಕಾರಿಗಳನ್ನು,ನೀರಾವರಿ ನಿಗಮದ ಸೆಕ್ಷನ್ ಆಫೀಸರ್ ಕೊಟ್ರಪ್ಪ ಹಾಗೂ ಅರವಿಂದ್ ಎಂದು ತಿಳಿದುಬಂದಿದೆ.ಭದ್ರಾ ಅಣೆಕಟ್ಟೆಯ ಗೊಂದಿ ಬಲದಂಡೆ ನಾಲೆಯ ಸಿಲ್ಟ್ ತೆಗೆಯಲು ಕಾಮಗಾರಿ ಟೆಂಡರ್ ಕರೆಯಲಾಗಿತ್ತು. ಕಳೆದ 2024ರ ಜನವರಿಯಲ್ಲಿ ಕಾಮಗಾರಿಯೂ ಪೂರ್ಣಗೊಂಡಿತ್ತು. ಆದರೆ ಟೆಂಡರ್ ಹಣ 9,36,000ಲಕ್ಷ ರೂ ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. ಹಣ ಮಂಜೂರಾತಿಗೆ ಗುತ್ತಿಗೆದಾರ ರವಿ ಅವರು ಹಲವಾರು ಬಾರಿ ಮನವಿ ಮಾಡಿದ್ದರು. ಆದರೆ ಹಣ ಮಂಜುರು ಮಾಡಲು ನೀರಾವರಿ ನಿಗಮದ ಸೆಕ್ಷನ್ ಆಫೀಸರ್ ಕೊಟ್ರಪ್ಪ 1.20 ಲಕ್ಷ ಲಂಚಕ್ಕೆ ಬಿಡಿಕೆ ಇಟ್ಟಿದ್ದರು.ಈ…