Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನ ಕುಕ್ಕೊಡು ಎಂಬಲ್ಲಿ ಇತ್ತೀಚಿಗೆ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ ಮೂರು ಜನ ಮೃತಪಟ್ಟಿದ್ದರು. ಇದೀಗ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನ ಅನಿಲ್ ಎಂ ಡೇವಿಡ್ (49) ಎಂದು ಹೇಳಲಾಗುತ್ತಿದ್ದು, ಬೆಂಗಳೂರು ಉತ್ತರ ದಿವಾನರ ಪಾಳ್ಯ ನಿವಾಸಿ ಅನಿಲ್ ಎಂದು ಹೇಳಲಾಗುತ್ತಿದೆ. ಹೆಚ್ಚು ಪಟಾಕಿ ರಾಸಾಯನಿಕ ಸರಬರಾಜು ಮಾಡಿತ್ತಿದ್ದ ಎಂದು ಆರೋಪಿಸಲಾಗಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಠಾಣೆ ಪೋಲೀಸರು ಇದೀಗ ಅನಿಲ್ ಡೇವಿಡ್ ನನ್ನು ಬಂಧಿಸಿದ್ದಾರೆ. ಪಟಾಕಿ ಸ್ಪೋಟ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣುರಿನ ಕುಕ್ಕೇಡಿ ಗ್ರಾಮದಲ್ಲಿ ಈ ಪಟಾಕಿ ದುರಂತ ಸಂಭವಿಸಿತ್ತು. ಘಟನೆ ಹಿನ್ನೆಲೆ? ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ದುರಂತ ಸಂಭವಿಸಿತ್ತು. ಕೇರಳ ಮೂಲದ…
ಬಾಗಲಕೋಟೆ : ವ್ಯಕ್ತಿಯೊಬ್ಬನನ್ನು ತಂತಿಯಿಂದ ಆತನ ಕುತ್ತಿಗೆಯನ್ನು ಬಿಗಿದು ಅತ್ಯಂತ ಭೀಕರವಾಗಿ ಹತ್ತೆಗೈದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಿಳಗಿ ತಾಲೂಕಿನ ಡವಳೇಶ್ವರ ಎಂಬ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ತಂತಿಯಿಂದ ಕುತ್ತಿಗೆ ಬಿಗಿದು ವ್ಯಕ್ತಿಯ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಡವಳೇಶ್ವರ ಗ್ರಾಮಲ್ಲಿ ಘಟನೆ ಸಂಭವಿಸಿದೆ.ಡವಳೇಶ್ವರ ಗ್ರಾಮದ ಈರಪ್ಪ ಗರಸಂಗಿ (50) ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಬಾಗಲಕೋಟೆ ಜಿಲ್ಲೆಯ ಬೆಳಗಿ ತಾಲೂಕಿನ ಡಬಳೇಶ್ವರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ ಘಟನೆ ಕೋರಿದಂತೆ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯಾರು ಕೊಲೆ ಮಾಡಿದ್ದಾರೆ ಕೊಲೆಗೆ ಕಾರಣ ಏನು ಎಂದು ಇದೀಗ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಂಡ್ಯ : ಮಂಡ್ಯ ಜಿಲ್ಲೆಯ ಕೆರೆಗೂಡು ಗ್ರಾಮದಲ್ಲಿ ಇತ್ತೀಚಿಗೆ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ, ಗ್ರಾಮದಲ್ಲಿ ಇತ್ತೀಚೆಗೆ ಬಿಜೆಪಿ ನಾಯಕರು ಹಿಂದೂ ಸಂಘಟನೆಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ಹಾಗೂ ಪಾದಯಾತ್ರೆ ಮಾಡುವ ಮೂಲಕ ತೀವ್ರವಾದ ವಿರೋಧ ವ್ಯಕ್ತಪಡಿಸಿದ್ದರು. ಅದಕ್ಕೆ ಜಿಲ್ಲೆಯ ಸಮಾನ ಮಸ್ಕರ ವೇದಿಕೆಯು ಫೆಬ್ರವರಿ 7 ಅಂದರೆ ನಾಳೆ ಮಂಡ್ಯ ಜಿಲ್ಲೆ ಬಂದ್ಗೆ ಕರೆ ನೀಡಿತ್ತು. ಆದರೆ ನಾಳೆ ನೀಡಿರುವ ಬಂದ್ ಗೆ ಇದೀಗ ಸಮಾನ ನಮಸ್ಕಾರ ವೇದಿಕೆಯು ವಾಪಸ್ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಮಂಡ್ಯ ಡಿಸಿ ಡಾ. ಕುಮಾರ್ ಎಸ್ ಪಿ ಎನ್ ಯತೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಂದ್ ನಿಂದ ಸಾರ್ವಜನಿಕರು ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಲಿದೆ. ಅಂಗಡಿ ಮುಂಗಟ್ಟುಗಳ ವ್ಯಾಪಾರಕ್ಕೂ ತೊಂದರೆ ಆಗಲಿದೆ.ಬಂದ್ ಹಿಂಪಡೆಯುವಂತೆ ಸಮಾನ ಮನಸ್ಕರ ವೇದಿಕೆಗೆ ಜಿಲ್ಲಾಡಳಿತ ಮನವಿ ಮಾಡಿತು. ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ ಸಮಾನ ಮನಸ್ಕರ ವೇದಿಕೆಯು ಬಂದ್ ಅನ್ನು ಹಿಂಪಡೆದಿದೆ. ನಾಳೆ ನಡೆಯಬೇಕಿದ್ದ ಮಂಡ್ಯ ಬಂದನ್ನು ತಾತ್ಕಾಲಿಕವಾಗಿ ಸಮಾನ ಮನಸ್ಕರ…
ಮಂಗಳೂರು : ಫೆ.4 ರಂದು ಶಿರಸಿಯ ನರಬೈಲ್ ಗ್ರಾಮದ ಪ್ರಸಿದ್ದ ಸೋಮೇಶ್ವರ ದೇವಸ್ಥಾನದ ಶಿವಲಿಂಗದ ಮೇಲೆ ಇಂಗ್ಲಿಷ್ನಲ್ಲಿ ಜೆ.ಇ 2024,2026 ಎಂದು ಬರೆಯಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೇವಸ್ಥಾನದ ಮುಂಭಾಗದಲ್ಲಿ ಇದ್ದ ಸಿಸಿ ಕ್ಯಾಮರಾವನ್ನು ಪರಿಶಿಲಿಸಿದ್ದಾರೆ. ಆದರೆ ಇಲ್ಲಿ ಆದದ್ದೇ ಬೇರೆ ಯಾರೋ. ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ಈ ಶಿವಲಿಂಗದ ಮೇಲೆ ಬರೆದದ್ದು ಒಬ್ಬ puc ವಿದ್ಯರ್ಥಿ ಎಂದು ಇದೀಗ ಬೆಳಕಿಗೆ ಬಂದಿದೆ.ದೇವರಲ್ಲಿ ಒಳಿತಿಗಾಗಿ ಹರಕೆ ಕಟ್ಟಿಕೊಳ್ಳುವುದು ಸಾಮಾನ್ಯ. ಆದರೆ ಉತ್ತರ ಕನ್ನಡದ ಶಿರಸಿಯಲ್ಲಿ ಪಿಯುಸಿ ವಿದ್ಯಾರ್ಥಿ ತನಗೆ ಉತ್ತಮ ಅಂಕ ನೀಡಿ ರ್ಯಾಂಕ್ನಲ್ಲಿ ಉತ್ತೀರ್ಣ ಮಾಡಬೇಕು ಎಂದು ಕೋರಿಕೆ ಈಡೇರಿಕೆಗಾಗಿ ದೇವರ ಶಿರದಮೇಲೆಯೇ ಬರೆದು ಪೊಲೀಸರ ಅತಿಥಿಯಾಗಿದ್ದಾನೆ. ತನಿಖೆಯ ವೇಳೆ ಕೆ.ಹೆಚ್. ಬಿ ಕಾಲೋನಿಯ ದ್ವಿತೀಯ ವರ್ಷದ ಪಿಯು ವಿದ್ಯಾರ್ಥಿ ಬರೆದಿರುವ ವಿಚಾರ ತಿಳಿಯಲ್ಪಟ್ಟಿತ್ತು. ವಿಚಾರಣೆ ನಡೆಸಿದಾಗ ಈತ ಪಿಯುಸಿ ಮೊದಲ ವರ್ಷದಲ್ಲಿ 98% ಅಂಕ ಪಡೆದು ಉತ್ತೀರ್ಣನಾಗಿದ್ದ. ದೇವರ ಮೇಲೆ ಅತೀವ ಭಕ್ತಿ…
ಗದಗ : ಸಿಕ್ಕಿಂನ ಬಾಂಗ್ ಡೊಂಗ್ರಿ ಎಂಬಲ್ಲಿ ಕರ್ನಾಟಕ ಮೂಲದ ಯೋಧರೊಬ್ಬರು ಕರ್ತವ್ಯ ನಿರತದಲ್ಲಿ ಇರುವ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಹೃದಯಾಘಾತದಿಂದ ನಿಧನ ಹೊಂದಿದ ಯೋಧನನ್ನು ಕರ್ನಾಟಕ ರಾಜ್ಯದ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ರೆಡ್ಡಿರ ನಾಗನೂರ ಗ್ರಾಮದ ರಾಮನಗೌಡ ಚಂದ್ರಗೌಡ (40) ಎಂದು ತಿಳಿದುಬಂದಿದೆ.ಬಾಂಗ್ ಡೋಂಗ್ರೆಯಲ್ಲಿ ಕರ್ತವ್ಯದಲ್ಲಿದ್ದಾಗ ಹಿಮಪಾತದ ನಡುವೆ ರಕ್ತದೊತ್ತಡ ಏರುಪೇರಾಗಿ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಇವರು 2002 ರಲ್ಲಿ ಐಟಿಬಿಪಿಗೆ (ಇಂಡಿಯನ್ ಟಿಬೆಟಿಯನ್ ಬಾರ್ಡರ್ ಸೆಕ್ಯೂರಿಟಿ ಫೋರ್ಸ್) ನೇಮಕವಾಗಿದ್ದರು ಎಂದು ಹೇಳಲಾಗುತ್ತಿದೆ.ನಾಳೆ ಯೋಧನ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಕಳೆದ 22 ವರ್ಷಗಳಿಂದ ಸೇನೆಯಲ್ಲಿ ಇವರು ಸೇವೆ ಸಲ್ಲಿಸುತ್ತಿದ್ದರು. ಉತ್ತರಾಖಂಡ, ಅಸ್ಸಾಂ, ಮಿಜೋರಾಂ, ಚಂಡೀಗಢ, ಸಿಕ್ಕಿಂ ಸೇರಿದಂತೆ ಅನೇಕ ಕಡೆಗಳಲ್ಲಿ ಇವರು ಕರ್ತವ್ಯ ನಿರ್ವಹಿಸಿದ್ದಾರೆ. ಬರುವ ಏಪ್ರಿಲ್ನಲ್ಲಿ ಸೇವಾ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳಲಿದ್ದರು. ಅಷ್ಟರಲ್ಲೇ ಅವರು ವಿಧಿಯಾಟಕ್ಕೆ ಬಲಿಯಾಗಿದ್ದಾರೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಅಂಕೋಲೆ ಕಡ್ಡಿ ಅತ್ಯಂತ ಶಕ್ತಿಶಾಲಿಯಾದ ಕಡ್ಡಿ ಎಂದು ಹೇಳುತ್ತಾರೆ. ಅಂಕೋಲೆ ಕಡ್ಡಿಯಲ್ಲಿ ಉದ್ದವಾಗಿರುವ ಹಲವು ಮುಳ್ಳುಗಳು ಇರುತ್ತವೆ. ಅಂಕೋಲೆ ಮರದ ಪ್ರತಿಯೊಂದು ಭಾಗವನ್ನು ಹಲವಾರು ಔಷಧಿಗಳನ್ನು ತಯಾರಿಸಲು ಬಳಸುತ್ತಾರೆ. ಅಂಕೋಲೆ ಕಡ್ಡಿಯನ್ನು ತೆಗೆದುಕೊಂಡು, ಅದರಲ್ಲಿರುವ ಎಲೆಯನ್ನು ತೆಗೆದು ಆ ಎಲೆಯನ್ನು ಒಣಗಿಸಿ ಪುಡಿ ಮಾಡಬೇಕು. ನಂತರ ನೀವು ಸಾಮ್ರಾಣಿ ಧೂಪವನ್ನು ಹಾಕುವ ಸಂದರ್ಭದಲ್ಲಿ ಸ್ವಲ್ಪ ಸ್ವಲ್ಪ ಅಂಕೋಲೆ ಎಲೆಯ ಪುಡಿಯನ್ನು ಹಾಕಿದರೆ ತುಂಬಾ ಒಳ್ಳೆಯದು. ಮನೆಯಲ್ಲಿ ನಕರಾತ್ಮಕ ಶಕ್ತಿಗಳು ಹೆಚ್ಚಾಗಿದ್ದರೆ ಎಲ್ಲಾ ನಕರಾತ್ಮಕ ಶಕ್ತಿಗಳು ಕಡಿಮೆಯಾಗುತ್ತದೆ. ಅಂಕೋಲೆ ಕಡ್ಡಿಯನ್ನು ದುಷ್ಟ ಶಕ್ತಿಗಳ ವಿರುದ್ಧ ದುಷ್ಟ ಶಕ್ತಿಗಳನ್ನು ಎದುರಿಸಲು ಬಳಸುತ್ತಾರೆ. ಅಂಕೋಲೆ ಕಡ್ಡಿಯನ್ನು ಸುಮಾರು ಎಲ್ಲಾ ಜನರು ತಮ್ಮ ಮನೆಯ ಮುಂಬಾಗಿಲಿಗೆ ಕಟ್ಟುತ್ತಾರೆ. ಏಕೆಂದರೆ ಈ ರೀತಿ ಮಾಡುವುದರಿಂದ ಯಾವುದೇ ದುಷ್ಟ ಶಕ್ತಿಗಳು ಮನೆಯ ಒಳಗೆ ಪ್ರವೇಶ ಮಾಡುವುದಿಲ್ಲ. ಹೆಣ್ಣು ಮಕ್ಕಳು ಮೊದಲು…
ಬೆಂಗಳೂರು : ರಸ್ತೆ ಅಪಘಾತಗಳಲ್ಲಿ ಸಂಭವಿಸುವ ನಾವು ನೋವುಗಳ ಶ್ರೀ ಸಂಖ್ಯೆ ಹೆಚ್ಚಾಗುತ್ತಲೇ ಸಾಗಿವೆ. ರಾಜ್ಯದಲ್ಲಿ ಸರಾಸರಿ ನಿತ್ಯ 32 ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಇದರಲ್ಲಿ 30 ಮಂದಿ ಪ್ರಾಣ ಕಳೆದುಕೊಂಡರೆ, 96 ಮಂದಿ ಗಾಯಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ದಿನಕ್ಕೆ 2- 3 ರಸ್ತೆ ಅಪಘಾಗತಗಳು ಸಾಮಾನ್ಯಎಂಬಂತಾಗಿದ್ದು, ಕನಿಷ್ಠ ಇಬ್ಬರು ಅಥವಾ ಮೂವರು ಸಾವನ್ನಪ್ಪುತ್ತಿದ್ದಾರೆ. ಇದು ರಾಜ್ಯ ಅಪರಾಧ ದಾಖಲಾತಿ ವಿಭಾಗ (ಎಸ್.ಸಿ.ಆರ್.ಐ) ಬಿಡುಗಡೆ ಮಾಡಿರುವ ಅಂಕಿ ಅಂಶಗಳಿಂದ ತಿಳಿದುಬಂದಿದೆ. ರಾಜ್ಯದಲ್ಲಿನ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಮತ್ತು ಇತರ ರಸ್ತೆಗಳಲ್ಲಿ 2023ನೆ ಸಾಲಿನಲ್ಲಿ 10,830 ಅಘಾತಗಳು ಸಂಭವಿಸಿದ್ದು, ಒಟ್ಟಾರೆ 11,489 ಮಂದಿ ಮೃತಪಟ್ಟಿದ್ದಾರೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇ.32 ಅಪಘಾತಗಳು ಸಂಭವಿಸಿದರೆ ರಾಜ್ಯ ಹೆದ್ದಾರಿಗಳಲ್ಲಿ ಶೇ.30 ಹಳ್ಳಿಗಾಡು ಪ್ರದೇಶಗಳಲ್ಲಿನ ಅಪಘಾತ ಪ್ರಮಾಣ ರೇ.38 ಆಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ 880 ಮಾರಣಾಂತಿಕ ಅಪಘಾತ ಸಂಭವಿಸಿದ್ದು, 909 ಮಂದಿ ಮೃತಪಟ್ಟಿದ್ದಾರೆ. ರಾಜಧಾನಿ ಯಲ್ಲಿಯೇ ಹೆಚ್ಚು ಜನಸಂಖ್ಯೆ ಮತ್ತು ವಾಹನದಟ್ಟಣೆ ಕಾರಣಕ್ಕೆ ಸಾವು, ನೋವುಗಳ ಪ್ರಮಾಣದಲ್ಲಿಯೂ…
ಬೆಂಗಳೂರು :ರಾಜ್ಯದ ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆ ಅಡಿ 2,000ಗಳನ್ನು ಖಾತೆಗೆ ಹಾಕುತ್ತಿರುವ ಯೋಜನೆಗೆ ತಾಂತ್ರಿಕ ದೋಷದಿಂದ ಇದುವರೆಗೂ ಹಲವಾರು ಮಹಿಳೆಯರಿಗೆ 2000 ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದೀಗ ರಾಜ್ಯ ಸರ್ಕಾರ ಅರ್ಹರಾಗಿರುವ ಸಂಬಂಧ ಪಟ್ಟ ಐಟಿಜಿಎಸ್ಟಿ ಪ್ರಾಧಿಕಾರಿಗಳಿಂದ ತಾವು ತೆರಿಗೆ ವ್ಯಾಪ್ತಿಗೆ ಬರುವುದಿಲ್ಲ ಎಂದು ದೃಢೀಕರಣ ಪತ್ರ ನೀಡಲು ಮುಂದಾಗಿದೆ ಎಂದು ತಿಳಿದು ಬಂದಿದೆ. ‘ಗೃಹಲಕ್ಷ್ಮಿ’ ಯೋಜನೆಯ ತಾಂತ್ರಿಕ ಕಾರಣದಿಂದಾಗಿ ರಾಜ್ಯದ ಸಹಸ್ರಾರು ಮಹಿಳೆಯರು ಮಾಸಿಕ ತಲಾ 2 ಸಾವಿರ ರು. ಪಡೆಯುವುದರಿಂದ ವಂಚಿತರಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ (ಇಡಿಸಿಎಸ್) ನಿರ್ದೇಶನಾಲಯದೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹರಿಸಲು ಮುಂದಾಗಿದೆ. ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾಗಿದ್ದು, ವಾಸ್ತವವಾಗಿ ತೆರಿಗೆ ಪಾವತಿಸದಿದ್ದರೂ ಐಟಿ ಅಥವಾ ಜಿಎಸ್ಟಿ ತೆರಿಗೆದಾರರರೆಂದು ಪೋರ್ಟಲ್ನಲ್ಲಿ ತೋರಿಸುತ್ತಿತ್ತು. ಇದರಿಂದಾಗಿ ಯೋಜನೆಗೆ ಫಲಾನುಭವಿಗಳಾಗಲು ನೋಂದಣಿ ಮಾಡಿಸಿ ಆರು ತಿಂಗಳಾಗಿದ್ದರೂ ಬಹಳಷ್ಟು ಮಹಿಳೆಯರು ಸರ್ಕಾರದಿಂದ ಹಣ ಪಡೆಯಲು ಸಾಧ್ಯವಾಗಿರಲಿಲ್ಲ. ಈ…
ಬೆಂಗಳೂರು:’ಶಕ್ತಿ’ ಯೋಜನೆಗೆ ಅನುಕೂಲವಾಗಲು ಪ್ರಸಕ್ತ ವರ್ಷದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂನಿಗಮಗಳಿಗೆ ಐದು ಸಾವಿರಕ್ಕೂ ಹೆಚ್ಚಿನ ಬಸ್ಗಳನ್ನು ಸೇರ್ಪಡೆ ಮಾಡಲಾಗುತ್ತಿದ್ದು, ಈ ಪೈಕಿ ಕೆಎಸ್ಸಾರ್ಟಿಸಿಗೇ ಒಂದು ಸಾವಿರ ಬಸ್ ಖರೀದಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಎಸ್ಸಾರ್ಟಿಸಿ ನೂತನವಾಗಿ ಖರೀದಿಸಿರುವ 100 ಕರ್ನಾಟಕ ಸಾರಿಗೆ ಅಶ್ವಮೇಧ ಕ್ಲಾಸಿಕ್ ಬಸಗಳನ್ನು ವಿಧಾನ ಸೌಧ ಮುಂಭಾಗ ಲೋಕಾರ್ವಣೆ ಮಾಡಿ ಮಾತನಾಡಿದ ಅವರು, ಶಕ್ತಿ ಯೋಜನೆ ಅಡಿಯಲ್ಲಿ 250 ಕೋಟಿಗೂ ಹೆಚ್ಚಿನ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ వారిగ సంశయ నాల్యూ నిగమగళ ಗಳಲ್ಲಿ ಪ್ರಯಾಣಿಸಿದ್ದಾರೆ. ಇದು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದರು. ಸಾರಿಗೆ ನಿಗಮಗಳ ಸೇವೆಯನ್ನು ಇನ್ನಷ್ಟು ಉತ್ತಮಗೊಳಿಸಲು ಹೊಸ ಬಸ್ಗಳನ್ನು ಸೇರ್ಪಡೆ ಮಾಡಲಾಗುತ್ತಿದೆ. ಕಳೆದ ನಾಲ್ಕುವರ್ಷಗಳಿಂದ ನಾಲ್ಕೂ ನಿಗಮಗಳಿಗೆ ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿರಲಿಲ್ಲ.ಇದೀಗ ಸರ್ಕಾರ ನಾಲ್ಕೂ ನಿಗಮಗಳಿಗೆ 5,800 ಬಸ್ ಗಳನ್ನು ಸೇರ್ಪಡೆ ಮಾಡಲಾಗುತ್ತಿದೆ.ಇದರಿಂದ ಶಕ್ತಿ ಯೋಜನೆಯ ಪ್ರಯಾಣಿಕರು ಹಾಗೂ ರಾಜ್ಯದ ಜನರು ಸುರಕ್ಷಿತ ಮತ್ತು ಉತ್ತಮ ಸಾರಿಗೆ ವ್ಯವಸ್ಥೆ…
ಬೆಂಗಳೂರು : ಕೇಂದ್ರ ಸರ್ಕಾರ ನೀಡುವ ರೂ.29 ಕೇಜಿಯ ಭಾರತ್ ಅಕ್ಕಿ ಮಾರಾಟಕ್ಕೆ ಮಂಗಳವಾರದಿಂದ ರಾಜ್ಯದಲ್ಲಿಯೂ ಚಾಲನೆ ಸಿಗಲಿದ್ದು, ಭಾರತ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ (ನಾಫೆಡ್) ಏಳು ಸಂಚಾರಿ ವಾಹನಗಳಲ್ಲಿ ಮಾರಾಟ ಪ್ರಾರಂಭವಾಗಲಿದೆ. ಈ ಬಗ್ಗೆ ಮಾಹಿತಿ ನೀಡಿದ ನಾಫೆಡ್ ರಾಜ್ಯ ಮುಖ್ಯಸ್ಥೆ ಜ್ಯೋತಿ ಪಾಟೀಲ್, ಮಂಗಳವಾರ ಸಂಜೆ 4ಕ್ಕೆ ಭಾರತ್ ಅಕ್ಕಿ ವಾಹನಗಳಿಗೆ ಚಾಲನೆ ನೀಡಲಾಗುವುದು. ಪ್ರಾಥಮಿಕವಾಗಿ ಮಂಗಳವಾರ ಬೆಂಗಳೂರಿನಲ್ಲಿ ಮಾತ್ರ ಸಿಗಲಿದ್ದು, ನಗರದ ವಿವಿಧೆಡೆ ಈ ವಾಹನಗಳು ಸಂಚರಿಸಿ ಅಕ್ಕಿ ಮಾರಲಿವೆ. ಬುಧವಾರದಿಂದ ಮಂಡ್ಯದಲ್ಲಿ ಹಾಗೂ ಇನ್ನೊಂದು ವಾರದಲ್ಲಿ ಇತರೆ ಜಿಲ್ಲೆಗಳಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ ಎಂದರು. ಬಿಗ್ ಬಾಸ್ಕೆಟ್, ಪ್ಲಿಪ್ಕಾರ್ಟ್, ರಿಲೈಯನ್ಸ್ ಸ್ಟೋರ್ಸ್, ಸ್ಟಾರ್ ಹೈಪರ್ ಬಝಾರ್ಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮಂಗಳವಾರ ಸಂಜೆಯಿಂದ ರಿಲೈಯನ್ಸ್ ಸ್ಟೋರ್ಸ್ಗಳಲ್ಲಿ ಈ ಅಕ್ಕಿ ಸಿಗಲಿದೆ. ಇನ್ನೊಂದು ವಾರದ ಬಳಿಕ ಇತರೆ ಸ್ಟೋರ್ಸ್ಗಳಲ್ಲಿ ಗ್ರಾಹಕರು ಖರೀದಿ ಮಾಡಬಹುದು. ಭಾರತ್ ಅಕ್ಕಿ ಜೊತೆಗೆ, ಈಗಾಗಲೇ ವಾಹನಗಳಲ್ಲಿ ಕೇಜಿಗೆ ರೂ.27.50 ನಂತೆ ಮಾರುತ್ತಿರುವ…