Author: kannadanewsnow05

ಬೆಂಗಳೂರು : ಮೈಸೂರಿನ ಕೆಆರ್ ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಕರಣದ ಆರೋಪಿ ಆಗಿರುವ ಭವಾನಿ ರೇವಣ್ಣ ಅವರಿಗೆ ಇದೀಗ ಹೈಕೋರ್ಟ್ ಷರತ್ತು ಸಡಿಲಿಸಿದೆ. ಹಾಸನ ಮತ್ತು ಮೈಸೂರಿಗೆ ತೆರಳಲು ಹೈಕೋರ್ಟ್ ಇದೀಗ ಭವಾನಿ ರೇವಣ್ಣ ಅವರಿಗೆ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ. ಹೌದು ಮೈಸೂರು ಜಿಲ್ಲೆಯ ಕೆ ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನ ಮತ್ತು ಮೈಸೂರಿಗೆ ತೆರಳಲು ಭವಾನಿ ರೇವಣ್ಣಗೆ ಇದೀಗ ಹೈಕೋರ್ಟ್ ಅನುಮತಿ ನೀಡಿದೆ. ಷರತ್ತು ಬುದ್ಧ ಅನುಮತಿ ನೀಡಿ ಹೈಕೋರ್ಟ್ ಏಕ ಸದಸ್ಯಪೀಠ ಆದೇಶಿಸಿದೆ. ನಿರೀಕ್ಷಣಾ ಜಾಮೀನು ವೇಳೆ ಹೈಕೋರ್ಟ್ ಷರತ್ತು ವಿಧಿಸಿತ್ತು. ಇದೀಗ ಶರತ್ತು ಸಡಲಿಸಿದೆ. ಅಲ್ಲದೇ ಸಂತ್ರಸ್ತ ಮತ್ತು ಸಾಕ್ಷಿಗಳ ಮನೆಯ 500 ಮೀಟರ್ ಸುತ್ತಳತೆ ಪ್ರವೇಶಿಸುವಂತಿಲ್ಲ ಎಂದು ಭವಾನಿ ರೇವಣ್ಣಗೆ ಹೈಕೋರ್ಟ್ ಇದೆ ವೇಳೆ ಹೊಸ ಷರತ್ತನ್ನು ವಿಧಿಸಿದೆ.

Read More

ಬೆಂಗಳೂರು : ಬೆಳಗಾವಿಯ ಸುವರ್ಣಸೌಧದ ಬಳಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಇತ್ತೀಚಿಗೆ ಪಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಂಚಮಸಾಲಿ ಸಮುದಾಯದ ಶ್ರೀಗಳಾದ ಜಯ ಮೃತ್ಯುಂಜಯ ಸ್ವಾಮೀಜಿಯವರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದರು. ಇಂದು ಹೈಕೋರ್ಟ್ ನಲ್ಲಿ ನಿವೃತ್ತ ನ್ಯಾಯಮೂರ್ತಿಗಳು ಈ ಒಂದು ಅರ್ಜಿ ವಿಚಾರಣೆ ನಡೆಸಿ ರಾಜ್ಯ ಸರ್ಕಾರಕ್ಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುವಂತೆ ಆದೇಶ ನೀಡಿದೆ. ಹೌದು ಪ್ರಕರಣ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆಗೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಕಾಲಮಿತಿಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶ ನೀಡಿದೆ. ಸುವರ್ಣ ಸೌಧದ ಬಳಿ ಪ್ರತಿಭಟನೆ ನಡೆಸುವಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಬಸವ ಜಯಂತಿಯ ಶ್ರೀ ಮತಿತರರು ಈ ಒಂದು ಘಟನೆಗೆ ಸಂಬಂಧಿಸಿದಂತೆ ರಿಟ್ ಅರ್ಜಿ ಸಲ್ಲಿಸಿದ್ದರು. ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು…

Read More

ಬೆಂಗಳೂರು : ಇತ್ತೀಚಿಗೆ ಅಧಿವೇಶನದಲ್ಲಿ ಪಂಚಾಯತ್ ರಾಜ್ ವಿವಿ ಕುಲಪತಿ ನೇಮಕ ತಿದ್ದುಪಡಿ ಕುರಿತು ವಿಧೇಯಕ ಮಂಡನೆ ಮಾಡಲಾಗಿತ್ತು. ಇದೀಗ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಅವರು ವಿವಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡದೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಹೌದು ಪಂಚಾಯತ್ ರಾಜ್ ವಿವಿ ಕುಲಪತಿ ನೇಮಕ ವಿಚಾರವಾಗಿ ರಾಜಪಾಲರು ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಗರಂ ಆಗಿದ್ದಾರೆ. ಪಂಚಾಯತ್ ರಾಜ್ ವಿವಿ ಕುಲಪತಿ ನೇಮಕ ವಿಚಾರಕ್ಕೆ ರಾಜಪಾಲರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿವಿ ತಿದ್ದುಪಡಿ ವಿಧೇಯಕ ಅನುಮೋದನೆ ನೀಡದೆ ರಾಜ ಸರ್ಕಾರಕ್ಕೆ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ವಿಧೇಯಕ ಅನುಮೋದನೆ ಆಗದಿದ್ದಕ್ಕೆ ಹಳೆ ನಿಯಮ ಜಾರಿಯಲ್ಲಿದ್ದು, ಹಳೆ ನಿಯಮದ ಪ್ರಕಾರವೇ ವಿಶ್ವವಿದ್ಯಾಲಯ ಕುಲಪತಿ ಹುದ್ದೆಗೆ ನೇಮಕ ಮಾಡಲಾಗುತ್ತದೆ. ತಕ್ಷಣ ನೇಮಕ ಮಾಡಿ ಎಂದು ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅಲ್ಲದೆ ಒಂದು ತಿಂಗಳೊಳಗೆ ಕ್ರಮ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.…

Read More

ಧಾರವಾಡ : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಸವರಾಜ್ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಶಾಸಕ ವಿನಯ್ ಕುಲಕರ್ಣಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಹೌದು ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಆರೋಪಿ ಬಸವರಾಜ್ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಿದ ಹಿನ್ನೆಲೆಯಲ್ಲಿ ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಆರೋಪಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಧೀಶರಾದ ಎಂ.ನಾಗಪ್ರಸನ್ನ ಅವರು ಅರ್ಜಿವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದೆ ವೇಳೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಾಲ್ಕು ವಾರಗಳಲ್ಲಿ ಟ್ರಯಲ್ ಪೂರ್ಣಗೊಳಿಸಲು ಹೈಕೋರ್ಟ್ ಸೂಚನೆ ನೀಡಿತು. ಯೋಗೀಶ್ ಗೌಡ ಪತ್ನಿ ಮಲ್ಲವ್ವ ಸಲ್ಲಿಸಿದ್ದ ಅರ್ಜಿ ಕೂಡ ಇದೆ ವೇಳೆ ವಜಾ ಗೊಂಡಿತು.

Read More

ಬಳ್ಳಾರಿ : ಬಳ್ಳಾರಿಯಲ್ಲಿ ಹಾಡ ಹಗಲೇ ವ್ಯಕ್ತಿಯ ಭೀಕರ ಕೊಲೆಯಾಗಿದ್ದು, ಬಳ್ಳಾರಿಯ ರಾಣಿತೋಟದ ಜುಮ್ಮಾ ಮಸೀದಿ ಮುಂಭಾಗದಲ್ಲಿ ಈ ಒಂದು ಹತ್ಯೆ ನಡೆದಿದೆ ಎನ್ನಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ವೆಂಕಟೇಶ್ ಎಂದು ತಿಳಿದುಬಂದಿದ್ದು, ಹತ್ಯೆ ಕುರಿತು ಬಳ್ಳಾರಿ ಜನತೆ ಬೆಚ್ಚಿ ಬಿದ್ದಿದ್ದಾರೆ. ಕೊಲೆಯಾದ ವೆಂಕಟೇಶ್ ಆರ್ ಜೆ ಕಾಟನ್ ಬಿಲ್ ಇಂಡಸ್ಟ್ರಿ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಶವಾಗಾರದ ಮುಂದೆ ಮೃತನ ಸಂಬಂಧಿಕರು ಗೋಳಾಡುತ್ತಿದ್ದಾರೆ ಬಳ್ಳಾರಿಯ ಕಣೇಕಲ್ ರಸ್ತೆಯ ರಾಣಿತೋಟದಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಬೆಲೆ ಏರಿಕೆ ಪರಿಣಾಮ ಜನರು ಹೊರಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದು ನಂದಿನಿ ಹಾಲಿನ ದರ, ವಿದ್ಯುತ್ ದರ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ. ಇದೀಗ ಡೀಸೆಲ್ ಬೆಲೆ ಏರಿಕೆ ಆಗುತ್ತಿದ್ದಂತೆ ಲಾರಿ ಮಾಲೀಕರು ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಹೌದು ಬೆಲೆ ಏರಿಕೆ ಹೊಡೆತದಿಂದ ಜನ ಕಂಗಾಲಾಗಿದ್ದಾರೆ. ಹಾಲು, ಮೊಸರು ದರ ಏರಿಕೆ ಹಾಗೂ ಕಸ ತೆರಿಗೆ ಇತ್ಯಾದಿಗಳಿಂದ ಕಂಗಟ್ಟಿರುವ ಜನರಿಗೆ ಇದೀಗ ಡೀಸೆಲ್ ಬೆಲೆ ಹೆಚ್ಚಳದ ಬಿಸಿ ಪರೋಕ್ಷವಾಗಿ ತಟ್ಟಲಿದೆ. ಆದರೆ ಲಾರಿ ಮಾಲೀಕರಿಗೆ ನೇರವಾಗಿ ಹೊಡೆತ ಬೀಳಲಿದೆ. ಡಿಸೆಲ್ ದರ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಮುಷ್ಕರ ಕುರಿತಂತೆ ನಾಳೆ ಲಾರಿ ಮಾಲೀಕರ ಸಂಘ ಸಭೆ ನಡೆಸಲಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಎರಡು ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ.…

Read More

ದಕ್ಷಿಣಕನ್ನಡ : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು, ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗ್ಗಿನ ಜಾವ ನಡೆಯಿತು. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್ ನೀರಕಟ್ಟೆಯ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಓರ್ವ ಪ್ರಯಾಣಿಕ ಬಸ್ಸಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಕೂಡಲೇ ಸ್ಥಳೀಯ ಪೊಲೀಸ್‌ ಠಾಣಾ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದಾರೆ. ಮೃತರ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನಿಮಗೆ ಬೀಳುವ ಕನಸುಗಳಲ್ಲಿ ಬರುವ ಆಯಾ ಪ್ರಾಣಿ ಏನನ್ನು ಸೂಚಿಸುತ್ತೆ. ಅನ್ನೋದನ್ನ ತಿಳಿಯೋಣ ಬನ್ನಿ.ಕನಸಿನಲ್ಲಿ ಈ ಪ್ರಾಣಿಗಳನ್ನು ಕಂಡರೆ ನಿಮಗೆ ಏನಾಗುತ್ತೆ ಗೊತ್ತಾ.ಕನಸುಗಳು ಎಲ್ಲರಿಗೂ ಬೀಳೋದು ಸಹಜ. ಇದು ಪ್ರತಿಯೊಬ್ಬರಿಗೂ ಜರುಗುವ ಸಂಗತಿ.ಪ್ರತಿಯೊಬ್ಬ ಮನುಷ್ಯ ರಾತ್ರಿ ಕನಸಿನಲ್ಲಿ 9 ನಿಮಿಷಗಳಿಂದ ಎರಡು ಗಂಟೆಗಳವರೆಗೆ ಪ್ರತಿ ರಾತ್ರಿ ಕನಸಿನಲ್ಲಿ ಜೀವಿಸುತ್ತಾ ಇರುತ್ತಾನಂತೆ.ಈ ಕನಸಿನಲ್ಲಿ ನಾವು ಸ್ನೇಹಿತರು,ಪ್ರೀತಿ ಪ್ರೇಮ ಮಾಡುವವರು,ಪ್ರಾಣಿಗಳು ಬರಬಹುದು. ವಿದೇಶದಲ್ಲಿ ಸಂದರ್ಶನಗಳು ಜರುಗಬಹುದು.ದೇವರ ಶ್ರೀ ಕ್ಷೇತ್ರ ದರ್ಶನ ಹೇಗೆ ಇತ್ಯಾದಿ ಇತ್ಯಾದಿ ಅನೇಕ ಕನಸುಗಳು ಬೀಳೋದು ಸಹಜ.ನಿಮಗೆ ಬೀಳುವ ಕನಸುಗಳನ್ನು ಆಧರಿಸಿ ಅದರ ಅರ್ಥ ಏನು ಅನ್ನೋದನ್ನ ಹೇಳಬಹುದು.ಆಯಾ ಕನಸುಗಳಿಗೆ ಅದರದ್ದೇ ಆದ ಅರ್ಥ ಇರತ್ತೆ.ಕನಸುಗಳಲ್ಲಿ ಬರುವ ಆಯಾ ಪ್ರಾಣಿ ಏನನ್ನು ಸೂಚಿಸುತ್ತೆ. ಅನ್ನೋದನ್ನ ತಿಳಿಯೋಣ ಬನ್ನ 1. ಜಿಂಕೆ:- ಜಿಂಕೆಯನ್ನು ಕನಸಿನಲ್ಲಿ ಕಂಡರೆ ಒಂದು ಉನ್ನತ ಮಟ್ಟದ ಕೆಲಸವನ್ನು ಪ್ರಯಾಸವಾದರೂ ಸಾಧಿಸಿ ತೀರುತ್ತೀರ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತೆ . ಜಿಂಕೆ ಕನಸಿನಲ್ಲಿ ಸತ್ತು ಹೋದ ಹಾಗೆ ಕಂಡರೆ ಪ್ರೇಮ,ಪ್ರೀತಿಯಲ್ಲಿ ವೈಫಲ್ಯಗಳನ್ನು…

Read More

ಕಲಬುರ್ಗಿ : ನಾರಾಯಣಪುರ ಜಲಾಶಯದಿಂದ ಕಲ್ಬುರ್ಗಿ, ಯಾದಗಿರಿ ಹಾಗು ಜಿಲ್ಲೆಗಳಿಗೆ ನಾಳೆಯಿಂದ ಏಪ್ರಿಲ್ 6ರ ವರೆಗೆ 0.80 ಟಿಎಂ ಸಿ ನೀರು ಹರಿಸುವಂತೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹೌದು ನಾರಾಯಣಪುರ ಜಲಾಶಯದಿಂದ 0.80 ಟಿಎಂಸಿ ನೀರು ಹರಿಸುವಂತೆ ಕಲಬುರ್ಗಿ ಹೈಕೋರ್ಟ್ ಪೀಠದಿಂದ ರಾಜ್ಯ ಸರ್ಕಾರಕ್ಕೆ ಇದೀಗ ನಿರ್ದೇಶನ ನೀಡಿಲಾಗಿದೆ. ನಾಳೆಯಿಂದ ವರೆಗೆ 0.80 ಟಿಎಂಸಿ ನೀರು ಹರಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ರೈತರ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ಕೆ ನಾವದಗಿ ಅವರು ವಾದ ಮಂಡಿಸಿದರು. ಮಾರ್ಚ್ 14 ರಂದು ನೀರು ಹರಿಸಲು ಸರ್ಕಾರದ ಸಲಹಾ ಸಮಿತಿ ನಿರ್ಧರಿಸಿತ್ತು. ನಂತರ ನಿಲುವು ಬದಲಿಸಿ ಕೃಷಿಗೆ ನೀರು ಹರಿಸಲು ನಿರಾಕರಿಸಿದೆ. ಕೃಷಿ ಚಟುವಟಿಕೆಗೆ ನೀರು ಹರಿಸಲು ರೈತರು ನಿರ್ದೇಶನ ಕೋರಿದ್ದರು. ಇದರಿಂದ ಈ ಭಾಗದ ಸಾವಿರಾರು ರೈತರಿಗೆ ನಷ್ಟವೆಂದು ವಾದ ಮಂಡಿಸಿದರು. ಏಪ್ರಿಲ್ 4 ರಿಂದ ಏಪ್ರಿಲ್ 6ವರೆಗೆ 0.80 ಟಿಎಂಸಿ ನೀರು ಹರಿಸುವಂತೆ ಈ…

Read More

ಚಿತ್ರದುರ್ಗ : ಶಾಲೆಗೆ ತೆರಳುವ ಸಂದರ್ಭದಲ್ಲಿ ವಿದ್ಯುತಂತೆ ಮೈ ಮೇಲೆ ಬಿದ್ದು ಶಿಕ್ಷಕಿ ಒಬ್ಬರು ಇಂದು ಸಾವನ್ನಪ್ಪಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿತ್ತು ಈ ಒಂದು ಘಟನೆ ಮಾತ್ರ ಮುನ್ನವೇ ಚಿತ್ರದುರ್ಗದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಬೋರಮ್ಮ (25) ಮತ್ತು ಪುತ್ರ ಪ್ರಣೀತ್ (3) ಎಂದು ತಿಳಿದುಬಂದಿದೆ.ಬಾತ್ ರೂಮ್​​​ಗೆ ಎಳೆದಿದ್ದ ವೈಯರ್ ಅನ್ನು ಮೊದಲು ಅಜಯ್ ಗೆ ತಾಗಿದ್ದು, ರಕ್ಷಣೆಗೆ ಹೋದ ತಾಯಿ ಬೋರಮ್ಮ ಅವರಿಗೂ ವಿದ್ಯುತ್ ಪ್ರವಹಿಸಿ ಇಬ್ಬರೂ ಸಾವನ್ನಪ್ಪಿದ್ದಾರೆ. ಕೊಪ್ಪಳದಲ್ಲಿ ಶಿಕ್ಷಕಿ ಸಾವು ಇನ್ನು ಕೊಪ್ಪಳದಲ್ಲಿ ಕೂಡ ಅಂತದ್ದೆ ಘಟನೆ ನಡೆದಿದ್ದು, ಶಾಲೆಗೆ ಹೊರಟಿದ್ದ ವೇಳೆ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಜಂಗಮರ ಕಲ್ಗುಡಿಯಲ್ಲಿ ಮೃತ ಶಿಕ್ಷಕಿಯನ್ನು ಜಂಗಮರ ಕಲ್ಗುಡಿ ಗ್ರಾಮದ ಹೊಸಕೇರಿಯ…

Read More