Author: kannadanewsnow05

ಬೆಂಗಳೂರು : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹೊರವಲಯದಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಕುಟುಂಬದ ಒಡೆತನದ ಸಿದ್ದಸಿರಿ ಸಕ್ಕರೆ ಹಾಗೂ ಎಥನಾಲ್ ಘಟಕ ಮುಚ್ಚುವ ಸಂಬಂಧ ಅಭಿಪ್ರಾಯ ತಿಳಿಸುವಂತೆ ಯತ್ನಾಳ ಅವರ ಪುತ್ರರೂ ಆದ ಸಂಸ್ಥೆಯ ನಿರ್ದೇಶಕ ರಮಣಗೌಡ ಬಿ.ಪಾಟೀಲ್‌ ಅವರಿಗೆ ಹೈಕೋರ್ಟ್ ಸೂಚಿಸಿದೆ. ಸಿದ್ದಸಿರಿ ಎಥನಾಲ್ ಮತ್ತು ಪವರ್‌ಘಟಕ ಮುಚ್ಚುವಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್‌ ಪಿಸಿಬಿ) ಕಲಬುರಗಿ ವಲಯದ ಅಧಿಕಾರಿಗಳು ನೀಡಿದ್ದ ನೋಟಿಸ್‌ ರದ್ದು ಕೋರಿ ರಮಣಗೌಡ ಬಿ.ಪಾಟೀಲ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್‌ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತು. ಇದಕ್ಕೂ ಮುನ್ನ ಅರ್ಜಿದಾರರ ಪರ ಹಾಜರಾದ ವಕೀಲ ವೆಂಕಟೇಶ್ ದಳವಾಯಿ, ರಾಜಕೀಯ ಕಾರಣಕ್ಕಾಗಿ ಘಟಕ ಮುಚ್ಚಲು ಒತ್ತಾಯಿಸಲಾಗುತ್ತಿದೆ. ಕಾರ್ಖಾನೆಗೆ ಕಾರ್ಯ ನಿರ್ವಹಣೆಗೆ ಅನುಮತಿ ಕೋರಿ ಸಲ್ಲಿಸಿರುವ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ. ಹಾಗಾಗಿ, ಕೆಎಸ್‌ಪಿಸಿಬಿ ನೋಟಿಸ್‌ ರದುಪಡಿಸಬೇಕು ಎಂದು…

Read More

ಬೆಂಗಳೂರು : ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ಮಲತಾಯಿ ಧೋರಣೆ ಯನ್ನು ಖಂಡಿಸಿ ನಾಡಿದ್ದು ಫೆಬ್ರವರಿ 7ರಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಗ್ಗೆ 11 ಗಂಟೆಗೆ ಧರಣಿ ಹಮ್ಮಿಕೊಳ್ಳಲಾಗಿದೆ. ಈ ವಿಷಯವಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸರ್ಕಾರದ ವಿರುದ್ಧ ಕಿಡಿ ಕಾರಿಂದು ಈ ರೀತಿ ಧರಣಿ ಕುಳಿತುಕೊಂಡು ರಾಜ್ಯದ ಮಾನ ಮರ್ಯಾದೆ ತೆಗೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರುವಂತಹ ಅನುದಾನದಲ್ಲಿ ತಾರತಮ್ಯವಾಗಿದ್ದರೆ ಕಳೆದ ಯುಪಿಎ ಸರ್ಕಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಮನಮೋಹನ್ ಸಿಂಗ್ ಪ್ರಧಾನಿ ಮಂತ್ರಿ ಆಗಿದ್ದಾಗ ಎಷ್ಟು ಅನುದಾನ ಬಂದಿತ್ತು, ಇದೀಗ ನರೇಂದ್ರ ಮೋದಿ ನೇತೃತ್ವದಲ್ಲಿರುವ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ ಎಂಬುದರ ಕುರಿತು ಶ್ವೇತ ಪತ್ರ ಹೊರಡಿಸಲಿ ಎಂದು ಈಶ್ವರಪ್ಪ ಸಿಎಂ ಸಿದ್ದರಾಮಯ್ಯಗೆ ಸವಾಲು ಎಸೆದರು. ಲೋಕಸಭೆ ಚುನಾವಣೆ ದೂರದಿಂದ ಸಿಎಂ ಸಿದ್ದರಾಮಯ್ಯ ಶ್ವೇತ…

Read More

ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನುದಾನ ವಿಷಯದಲ್ಲಿ ತಾರತಮ್ಯಾಗ ಮಲತಾಯಿ ಧೋರಣೆ ಕುರಿತಂತೆ ವಿರೋಧಿಸಿ ಫೆಬ್ರವರಿ ಯೋಳರಂದು ನಾಡಿದ್ದು ದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ಹಮ್ಮಿಕೊಂಡಿದೆ. ಇದಕ್ಕೆ ರಾಜ್ಯ ಬಿಜೆಪಿಯು ವಾಗ್ದಾಳಿ ನಡೆಸಿದ್ದು, ನಿಮ್ಮಿಂದ ಆಡಳಿತ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೊರಡಿ ಎಂದು ಟೀಕಿಸಿದೆ. ಸಾಮಾಜಿಕ ಜಾಲತಾಣ X ನಲ್ಲಿ ಸಿದ್ದರಾಮಯ್ಯ ಅವರ “ಸ್ಲೀಪಿಂಗ್‌ ಸರ್ಕಾರ” ಕಳೆದ 9 ತಿಂಗಳಿಂದಲೂ ನಿದ್ದೆ ಮಾಡುತ್ತಲೇ ಇದೆ. ಎಚ್ಚರಿಸುವ ಕೆಲಸ ಮಾಡಿದರೆ ಸಿದ್ದರಾಮಯ್ಯ ಅವರಿಗೆ ಇರಿಸು ಮುರಿಸಾಗುತ್ತದೆ.ನಿಮ್ಮಿಂದ ಆಡಳಿತ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೊರಡಿ. ನಿಮ್ಮ ದುರಾಡಳಿತದಿಂದಾಗಿ ಕರ್ನಾಟಕದ ಜನ ರೋಸಿ ಹೋಗಿದ್ದಾರೆ. ಸ್ವಾಮಿ ಸಿದ್ದರಾಮಯ್ಯರವರೇ, ನಿಮ್ಮ ಸಾಧನೆ ಏನು ಹೇಳಿ ಎಂದು ಜನತೆ ಕೇಳಿದರೆ, ನಿಮ್ಮ ಬಳಿ ಉತ್ತರವಿಲ್ಲ. ಬೇರೆಯವರ ಮೇಲೆ ಗೂಬೆ ಕೂರಿಸಲು ನೀವು ಕೊಡುವ ಸಮಯವನ್ನೇನಾದರೂ ರಾಜ್ಯದ ಅಭಿವೃದ್ಧಿಗೆ ಕೊಟ್ಟಿದ್ದರೆ, ಬಹುಶಃ ಇಂದು ನೀವು ಈ…

Read More

ಬೆಂಗಳೂರು : ದೇಶದಲ್ಲಿ ಅಂಧ ಭಕ್ತರು ಹೆಚ್ಚಿರುವ ರಾಜ್ಯಗಳಿಗೆ ಮಾತ್ರ ಹೆಚ್ಚಿನ ಅನುದಾನ ನೀಡುವ ಮೂಲಕ ಮತ ಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ, ದಕ್ಷಿಣ ಭಾರತದವರು ಅಂಧ ಭಕ್ತರಲ್ಲ ಎನ್ನುವ ಕಾರಣಕ್ಕೆ ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ರಾಜ್ಯದ ಇತಿಹಾಸದಲ್ಲಿ‌ ಮೊದಲ ಬಾರಿಗೆ ಇಂತಹ ಪ್ರತಿಭಟನೆ ನಡೆಸಲಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಪ್ರತಿಭಟನೆ ನಡೆಸಲು ಬರ್ತಿದ್ದಾರೆ. ಭಾರತದಲ್ಲಿ ಗುಜರಾತ್ ಒಂದು ರಾಜ್ಯ, ಆದರೆ ಭಾರತ ಅಂದ್ರೆ ಗುಜುರಾತ್ ಅನ್ನೊ ಹಾಗಾಗಿದೆ. ದೇಶದಲ್ಲಿ ಗುಜರಾತ್‌ಗೆ ಮಾತ್ರ ಹೆಚ್ಚು ಪ್ರಾಧಾನ್ಯತೆ ನೀಡಲಾಗುತ್ತಿದೆ. ಕ್ರಿಕೆಟ್ ನಿಂದ ಹಿಡಿದು ಕಡ್ಲೆಕಾಯಿ ಮಾರುವ ವಿಚಾರದಲ್ಲೂ ಗುಜುರಾತ್‌ಗೆ ಆದ್ಯತೆ ನೀಡಿದರೆ, ಬಾಕಿ ರಾಜ್ಯಗಳು ದನ ಮೇಯಿಸಲು ಬಂದಿವೆಯಾ? ಗುಜರಾತ್ ಮಾಡೆಲ್ ಅಂದ್ರೆ ಪಂಗನಾಮ ಹಾಕುವುದು ಅಂತಾನಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಯವರು ತ್ರಿವರ್ಣ ಧ್ವಜ, ಸಂವಿಧಾನ, ಜಾತ್ಯತೀತ ತತ್ವದ ವಿರೋಧಿಗಳು…

Read More

ಬೆಂಗಳೂರು : ಕೆಎಸ್​ಆರ್​ಟಿಸಿಯು ಹೊಸ ಅಶ್ವಮೇಧ ಕ್ಲಾಸಿಕ್​ ಬಸ್​​​ಗಳನ್ನು ಕಾರ್ಯಾಚರಣೆಗೆ ಇಳಿಸುತ್ತಿದೆ. ಮಹಿಳಾ ಸುರಕ್ಷತೆ ದೃಷ್ಟಿಯಿಂದ ಹಲವು ಹೊಸ ಫೀಚರ್​ಗಳನ್ನು ಒಳಗೊಂಡಿರುವ ಈ ನಾನ್ ಎಸಿ ಬಸ್​​ಗಳಲ್ಲಿ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ನೂತನ ಬಸ್‌ಗಳಿಗೆ ಹಸಿರು ನಿಶಾನೆ ತೋರಿದರು. ಏಪ್ರಿಲ್ ವೇಳೆಗೆ 800 ಅಶ್ವಮೇಧ ಕ್ಲಾಸಿಕ್ ಬಸ್‌ಗಳು ರಸ್ತೆಗೆ ಇಳಿಯಲಿದ್ದು, ಸೋಮವಾರ ಮೊದಲ ಹಂತದಲ್ಲಿ 100 ಬಸ್‌ಗಳಿಗೆ ಚಾಲನೆ ನೀಡಿದ್ದಾರೆ. ಅಶ್ವಮೇಧ ಕ್ಲಾಸಿಕ್​ ಬಸ್​​ ವಿಶೇಷತೆಗಳೇನು? ಸದ್ಯ ಕಾರ್ಯಾರಂಭ ಮಾಡುತ್ತಿರುವ ನೂರು ಅಶ್ವಮೇಧ ಕ್ಲಾಸಿಕ್​ ಬಸ್​​​ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ 12 ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮರಾ, ಮೊಬೈಲ್ ಫೋನ್ ಚಾರ್ಜ್ ಹಾಕಿಕೊಳ್ಳಲು ಆರು ಚಾರ್ಜಿಂಗ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ. 52 ಸೀಟು, ಬಸ್ಸಿನ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್‌ಇಡಿ ಮಾರ್ಗಫಲಕ, ಪ್ರಯಾಣಿಕರು ಲಗೆಜ್ ಇಡಲು ದೊಡ್ಡದಾದ ಸ್ಥಳದ ವ್ಯವಸ್ಥೆ ಮಾಡಲಾಗಿದೆ. ಅಶ್ವಮೇಧ ಕ್ಲಾಸಿಕ್​ ಬಸ್​​​ಗಳು…

Read More

ಬೆಂಗಳೂರು : ಬಿಜೆಪಿ ಅವರು ನಮ್ಮ ಸರ್ಕಾರದ ಗ್ಯಾರಂಟಿಗಳನ್ನ ಮೊದಲು ಟೀಕೆ ಮಾಡಿ ಈಗ ನಮ್ಮ ಗ್ಯಾರಂಟಿ ನೋಡಿಕೊಂಡು ಮೋದಿ ಗ್ಯಾರಂಟಿ, ಮೋದಿ ಗ್ಯಾರಂಟಿ ಎಂದು ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ನಲ್ಲಿ ನಡೆದ 100 ಅಶ್ವಮೇಧ ಕ್ಲಾಸಿಕ್ ಬಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.ನಾವು ಚುನಾವಣೆ ಪೂರ್ವದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಉಚಿತ ಬಸ್ ಪ್ರಯಾಣ ಘೋಷಣೆ ‌ಮಾಡಿದ್ದೆವು. ಜೂನ್ 11 ಕ್ಕೆ ಇದೇ ಜಾಗದಲ್ಲಿ ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿ ಮಾಡಿದೆವು. ಅಲ್ಲಿಂದ ಇಲ್ಲಿಯವರೆಗೆ 146 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ವಿರೋಧ ಪಕ್ಷದವರು ಟೀಕೆ ಮಾಡ್ತಾರೆ. ಇಷ್ಟು ಜನ ಉಚಿತವಾಗಿ ಪ್ರಯಾಣ ಮಾಡ್ತಾರೆ ಅಂದರೆ ಅವರು ತೆಗೆದುಕೊಳ್ಳಬೇಕಾದ ಹಣ ಉಳಿತಾಯ ಆಗಿದೆ. ಕೋಟಿಗಟ್ಟಲೆ ಹಣ ಹೆಣ್ಣು ಮಕ್ಕಳಿಗೆ ಉಳಿತಾಯವಾಗಿದೆ. ಈ ಉಳಿತಾಯದ ಹಣ ಬೇರೆಯದಕ್ಕೆ ಹೆಣ್ಣುಮಕ್ಕಳು ಖರ್ಚು ಮಾಡಿದ್ದಾರೆ. ನಾವು…

Read More

ಬೆಂಗಳೂರು:ಮುಖ್ಯಮಂತ್ರಿಯವರ ನೇರ ಉಸ್ತುವಾರಿಯಲ್ಲಿರುವ ಆರ್ಥಿಕ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಸೇರಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 1.37 ಲಕ್ಷಕ್ಕೂ ಹೆಚ್ಚು ಕಡತಗಳು ವಿಲೇವಾರಿಗೆ ಬಾಕಿ ಇವೆ.ಹೆಚ್ಚಿನ ಸಂಖ್ಯೆಯಲ್ಲಿ ಕಡತಗಳು ಬಾಕಿ ಇರುವುದು ಗೊತ್ತಾಗುತ್ತಿದ್ದಂತೆಯೇ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಕ್ಷಣ ವಿಲೇವಾರಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಚಿವಾಲಯದಲ್ಲಿಯೇ ಕಡತಗಳು ವಿಲೇವಾರಿ ಆಗುತ್ತಿಲ್ಲ ಎಂದು ಕೆಲವು ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದರ ಬೆನ್ನಲ್ಲೆ, 39 ಇಲಾಖೆಗಳಲ್ಲಿ ಸಾವಿರಾರು ಕಡತಗಳು ವಿಲೇವಾರಿಯಾಗದೆ ಉಳಿದಿರುವ ಮಾಹಿತಿ ಬಹಿರಂಗವಾಗಿದೆ.2023ರ ನವೆಂಬರ್‌ 30ರ ಅಂತ್ಯಕ್ಕೆ ಒಟ್ಟು 1,55,795 ಕಡತಗಳು ಬಾಕಿ ಇದ್ದವು. ಡಿಸೆಂಬರ್‌ ಮತ್ತು ಜನವರಿ ಈ ಎರಡು ತಿಂಗಳಲ್ಲಿ ಹೊಸದಾಗಿ 35,036 ಕಡತಗಳನ್ನು ತೆರೆಯಲಾಗಿದೆ. ಈ ಅವಧಿಯಲ್ಲಿ 52,935 ಕಡತಗಳನ್ನು ಮುಕ್ತಾಯಗೊಳಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿರುವ ವಿಷಯದ ಕುರಿತು ಎಲ್ಲ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಗಳಿಗೆ ಮರುದಿನವೇ (ಫೆ.…

Read More

ಮಂಗಳೂರು : ಮಂಗಳೂರು ಹೊರವಲಯದ ಪಣಂಬೂರು ಬೀಚ್​ಗೆ ಕೇರಳದ ಯುವಕ ಹಾಘೂ ಬೆಂಗಳೂರಿನ ಯುವತಿ ಬಂದಿದ್ದರು. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕ-ಯುವತಿಯನ್ನು ತಡೆದು ವಿಚಾರಣೆ ನಡೆಸಿ ಕಿರಿಕ್ ಮಾಡಿದ್ದಾರೆ. ಪಣಂಬೂರು ಪೊಲೀಸರು ಮೂರು ಮಂದಿ ರಾಮ್ ಸೇನೆ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಂಧಿಸಿದ್ದಾರೆ. ಪಣಂಬೂರು ಬೀಚ್ ನಲ್ಲಿ ಅನ್ಯಕೋಮಿನ ಯುವಕ ಯುವತಿಯನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಕಿರಿಕ್ ಮಾಡಿದ್ದಾರೆ. ಸದ್ಯ ಪಣಂಬೂರು ಪೊಲೀಸರು ಮೂರು ಮಂದಿ ರಾಮ್ ಸೇನೆ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಘಟನೆ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ಹೊರವಲಯದ ಪಣಂಬೂರು ಬೀಚ್​ಗೆ ಕೇರಳದ ಯುವಕ ಹಾಗೂ ಬೆಂಗಳೂರಿನ ಯುವತಿ ಬಂದಿದ್ದರು. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕ-ಯುವತಿಯನ್ನು ತಡೆದು ವಿಚಾರಣೆ ನಡೆಸಿ ಕಿರಿಕ್ ಮಾಡಿದ್ದಾರೆ. ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪಣಂಬೂರು ಪೊಲೀಸರು ಮೂರು ಮಂದಿ ರಾಮ್ ಸೇನೆ ಕಾರ್ಯಕರ್ತರನ್ನು…

Read More

ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನುದಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸುತ್ತಿದ್ದು,ಕೇಂದ್ರ ಸರ್ಕಾರ ತೆರಿಗೆ ಹಣ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಈಗಾಗಲೇ ಏಳರಂದು ಅಂದರೆ ನಾಡಿದ್ದು ದೆಹಲಿಯ ಜಂತರ್ ಮಂತರ್ ನಲ್ಲಿ ಕಾಂಗ್ರೆಸ್ ಸರ್ಕಾರ ಕಾಂಗ್ರೆಸ್ ಸರ್ಕಾರ ಮತ್ತು ಪಕ್ಷ ಪ್ರತಿಭಟನೆಯನ್ನು ಕೇಂದ್ರ ಸರ್ಕಾರದ ಗಮನ ಸೆಳೆಯೋಗೊಸ್ಕರ ದೇಶದ ಜನರ ಗಮನ ಸೆಳೆಯಲು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ.ಇಲ್ಲಿಯವರೆಗೆ ನಾವು ಯಾವತ್ತಿಗೂ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿಲ್ಲ ಆದರೆ ಅನಿವಾರ್ಯ ಕಾರಣಗಳಿಂದ ಪ್ರತಿಭಟನೆ ಮಾಡಲೇಬೇಕಾದಂತಹ ಪರಿಸ್ಥಿತಿ ಇವತ್ತು ಒದಗಿ ಬಂದಿದೆ. ಈ ಪ್ರತಿಭಟನೆಯೂ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಮಾಡುತ್ತಿದೆ ಇದು ರಾಜಕೀಯ ಪ್ರತಿಭಟನೆ ಅಲ್ಲ. ನಮಗೆ ಆಗಿರುವಂತಹ ಅನ್ಯಾಯದ ಬಗ್ಗೆ ಇಡೀ ದೇಶದ ಜನರ ಗಮನ ಸೆಳೆಯಲು ಹಣಕಾಸು ಹಂಚಿಕೆಯಲ್ಲಿ ಆಗಿರುವಂತಹ ತಾರತಮ್ಯದಲ್ಲಿ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಅವರು…

Read More

ಶಿವಮೋಗ್ಗ : ಮುಸ್ಲಿಂ ಖಬರ್ ಸ್ಥಾನದ ಜಾಗದಲ್ಲಿ ಮರ ಕಡಿದ ವಿಚಾರಕ್ಕೆ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಜಂಬರಘಟ್ಟೆಯಲ್ಲಿ ನಡೆದಿದೆ. ಇತ್ತೀಚಿಗೆ ಶಿವಮೊಗ್ಗದಲ್ಲಿ ಹಿಂದೂ ಮುಸ್ಲಿಂ ಸಂಘರ್ಷ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿದ್ದವು. ಇದೀಗ ಶಾಂತವಾಗಿದೆ ಎನ್ನುವಂತಹ ಪರಿಸ್ಥಿತಿ ಬೆನ್ನಲ್ಲೇ ಮತ್ತೆ ಇದೀಗ ಕೋಮುಗಳ ನಡುವೆ ಸಂಘರ್ಷ ನಡೆದಿದ್ದು ಜನರಲ್ಲಿ ಆತಂಕ ಮೂಡಿದೆ. ಹೊಸ ಜಂಬಘಟ್ಟೆ ನಿವಾಸಿ ರವಿ (20) ಹಲ್ಲೆಗೊಳಗಾದ ವ್ಯಕ್ತಿ. ಹಲ್ಲೆ ನಡೆಸಿದ ಬಳಿಕ ಯುವಕರು ಪರಾರಿಯಾಗಿದ್ದಾರೆ.. ಜೀವನೋಪಾಯಕ್ಕಾಗಿ ಕುರಿಗಳನ್ನ ಸಾಕಿರುವ ರವಿ. ಮನೆಯಲ್ಲಿ ಕುರಿ ಕಟ್ಟುವ ಗೂಟ ಮುರಿದ ಕಾರಣ ಹೊಸ ಗೂಟ ಹುಡುಕಾಡಿಕೊಂಡು ಹೋಗಿದ್ದಾರೆ. ಹೀಗೆ ಖಬರ್ ಸ್ಥಾನದ ಬಳಿ ಹೋಗಿರುವ ರವಿ ಎಂಬಾತ ಅಕೆಶಿಯ ಮರದಿಂದ ಕೊಂಬೆಯೊಂದನ್ನು ಕಡಿದಕೊಂಡು ಕುರಿ ಕಟ್ಟಲು ಬೇಕಾದ ಗೂಟವನ್ನು ಸಿದ್ದ ಪಡಿಸಿಕೊಂಡು ಹೋಗಿದ್ದಾನೆ. ಅದೇ ಈಗ ಕೋಮು ಸಂಘರ್ಷದ ರೂಪು ಪಡೆದು ಠಾಣೆ ಮೆಟ್ಟಿಲೇರುವಂತಾಗಿದೆ. ಹಿಂದು ಮುಸ್ಲಿಂ ಸಂಘರ್ಷದ…

Read More