Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಚಾಲಕರ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ಪ್ರಕರಣಗಳ ಸಂಖ್ಯೆ ಹೆಚ್ಚುತಲೆ ಇವೆ. ಇದೀಗ ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲವೆಂದು ಪುಂಡಾಟಿಕೆ ಮೆರಿದ ವ್ಯಕ್ತಿ ಒಬ್ಬ ಬಸ್ ಚಾಲಕನ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿರುವ ಘಟನೆ ನೆಲಮಂಗಲ ತಾಲೂಕಿನ ಮಹಿಮಾಪುರ ಗೇಟ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಹಿಮಾಪುರ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿ ಪುಂಡಾಟಿಕೆ ನಡೆಸಿದ್ದಾನೆ. ಬಿಯರ್ ಬಾಟಲ್ ನಿಂದ ಬಸ್ ಚಾಲಕನ ಕೈಗೆ ಪುಂಡ ಹೊಡೆದಿದ್ದಾನೆ. ಚಾಲಕನ ಮೇಲೆ ಹಲ್ಲೆ ನಡೆಸಿದ ಬಳಿಕ ಬಸ್ಸಿನ ಮಿರರ್ ಒಡೆದು ಪುಂಡ ಅಲ್ಲಿಂದ ಪರಾರಿಯಾಗಿದ್ದಾನೆ. ಸರಿಯಾದ ಸಮಯಕ್ಕೆ ನೀವು ಯಾಕೆ ಬರುತ್ತಿಲ್ಲ ಅಂತ ಗಲಾಟೆ ಮಾಡಿದ್ದಾನೆ. ಬೈಕ್ ನಲ್ಲಿ ಬಂದಿದ್ದ 40 ವರ್ಷದ ದುಷ್ಕರ್ಮಿಯಿಂದ ಈ ಒಂದು ಕೃತ್ಯ ನಡೆದಿದೆ. KA 52 Q 6697 ಸಂಖ್ಯೆಯ ಬೈಕ್ ನಿಂದ ಕಿಡಿಗೇಡಿ ಆಗಮಿಸಿ ಈ…

Read More

ಮೈಸೂರು : ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತು ಕೇಂದ್ರದ ಗ್ರಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಿದ್ದನ್ನು ಖಂಡಿಸಿ ಇದೆ ಜನವರಿ 7ರಂದು ವಿವಿಧ ಸಂಘಟನೆಗಳಿಂದ ಮೈಸೂರು ಜಿಲ್ಲೆ ಬಂದ್ ಗೆ ಕರೆ ನೀಡಿವೆ. ಇತ್ತೀಚಿಗೆ ಅಮಿತ್ ಶಾ ಅವರು, ಸಂಸತ್ತಿನಲ್ಲಿ ಅಂಬೇಡ್ಕರ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.ಈ ಒಂದು ಹೇಳಿಕೆಯಿಂದ ಇಡೀ ದೇಶದಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದ್ದು ಹಲವು ಕಡೆಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಜನವರಿ 7ರಂದು ಪ್ರಗತಿಪರ ಸಂಘಟನೆ ಅಂಬೇಡ್ಕರ್ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮೈಸೂರು ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ.

Read More

ಬೆಂಗಳೂರು : ಕಳೆದ ವರ್ಷ ರಾಜ್ಯದಲ್ಲಿ ಬಳ್ಳಾರಿ ಬೆಳಗಾವಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ, ಹೆರಿಗೆಗೆ ಎಂದು ದಾಖಲಾಗಿದ್ದ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಅವರು ಮಹಿಳೆಯರಿಗೆ 2 ಸಾವಿರ ಕೊಡುವ ಬದಲು ಬಾಣಂತಿಯರ ಸಾವು ನಿಲ್ಲಿಸಲಿ ಎಂದು ಆಗ್ರಹಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಸರ್ಕಾರ ಬಂದ ಮೇಲೆ 736 ಬಾಣಂತಿಯರ ಸಾವಾಗಿದೆ. ಹೆರಿಗೆಗಾಗಿ ಆಸ್ಪತ್ರೆಗೆ ಹೋದ ಮಹಿಳೆಯರು ಶವವಾಗಿ ಬರುತ್ತಿದ್ದಾರೆ.ಇನ್ನೂ ಕೂಡ ರಾಜ್ಯದಲ್ಲಿ ಬಾಣಂತಿಯರ ಸಾವು ನಿಂತಿಲ್ಲ ಅಧಿವೇಶನದಲ್ಲಿ ನಾವು ರಾಜ್ಯ ಸರ್ಕಾರದ ಕಿವಿ ಹಿಂಡಿದ್ದೆವು. ಮೆಡಿಕಲ್ ಮಾಫಿಯಾ ಗೆ ಸರ್ಕಾರ ಬಗ್ಗಿರುವುದು ಸ್ಪಷ್ಟವಾಗಿದೆ ಎಂದರು. ಹೊಸ ವರ್ಷದಲ್ಲಿ ಎಲ್ಲರೂ ಶುಭಾಶಯ ಕೋರಿದ್ದೆ ಕೋರಿದ್ದು. ಸಚಿವರು ರಜೆ ಹಾಕಿ ಹೊಸ ವರ್ಷ ಆಚರಿಸಿದ್ದಾರೆ. ಆದರೆ ಬಾಣಂತಿಯರ ಕುಟುಂಬದಲ್ಲಿ ಇನ್ನೂ ಹರುಷ ಮೂಡಿಲ್ಲ. ರಾಯಚೂರು ಜಿಲ್ಲೆಯಲ್ಲಿ 11 ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಆರ್…

Read More

ಬಳ್ಳಾರಿ : ಇತ್ತೀಚಿಗೆ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಪ್ರಯಾಣಿಕರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಬಳ್ಳಾರಿ ಜಿಲ್ಲೆಯ ಕುರುಡುಗೋಡಿನಲ್ಲಿ ಕೇವಲ ಬಸ್ ಹತ್ತುವ ವಿಚಾರಕ್ಕೆ ಕೆಕೆಆರ್‌ಟಿಸಿ ಬಸ್ ಚಾಲಕನ ಮೇಲೆ ಪುಂಡನೊಬ್ಬ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹೌದು ಬಸ್ ಹತ್ತುವ ವಿಚಾರಕ್ಕೆ ಚಾಲಕ ಹಾಗೂ ಪುಂಡ ಯುವಕನ ನಡುವೆ ಗಲಾಟೆ ನಡೆದಿದೆ.ಗಲಾಟೆಯು ತೀವ್ರ ಸ್ವರೂಪ ಪಡೆದು, ಈ ವೇಳೆ 52 ವರ್ಷದ ಚಾಲಕನ ಮೇಲೆ ಪುಂಡ ಯುವಕ ಎರಗಿದ್ದಾನೆ. ಬೀಮಣ್ಣ ಎಂಬ ಚಾಲಕ ಮೇಲೆ ಬಸ್ ನಿಲ್ದಾಣದಲ್ಲಿ ಹಲ್ಲೆ ಮಾಡಿದ್ದಾನೆ. ಪುಂಡನ ಈ ಒಂದು ದುರ್ವರ್ತನೆ ಕಂಡು ಸಾರಿಗೆ ಸಿಬ್ಬಂದಿಗಳು ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇನ್ನು ಹಲಗೆ ಒಳಗಾದಂತಹ ಬಸ್ ಚಾಲಕ ಭಿಮಣ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಒಂದು ಘಟನೆ ಸಂಬಂಧಿಸಿದಂತೆ ಕುರುಡುಗೋಡು ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ದಾಖಲಾಗಿದೆ.

Read More

ಶಿವಮೊಗ್ಗ : ಭದ್ರಾ ಆಣೆಕಟ್ಟಿನ ಗೊಂದಿ ಬಲದಂಡೆ ನಾಲೆಯ ಸಿಲ್ಟ್ ತೆಗೆಯಲು ಸುಮಾರು 9,36,000 ಲಕ್ಷ ಹಣ ಮಂಜೂರಾಗಿದ್ದು, ಈ ಒಂದು ಹಣ ಮಂಜೂರು ಮಾಡಲು ಗುತ್ತಿಗೆದಾರನಿಂದ 1.20 ಲಕ್ಷ ಹಣ ಲಂಚ ಸ್ವೀಕರಿಸುತ್ತಿರುವಾಗಲೇ ನೀರಾವರಿ ನಿಗಮದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ದಾಳಿಯ ವೇಳೆ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ ಇನ್ನು ಬಂಧನಕ್ಕೆ ಒಳಗಾದಂತಹ ಅಧಿಕಾರಿಗಳನ್ನು,ನೀರಾವರಿ ನಿಗಮದ ಸೆಕ್ಷನ್ ಆಫೀಸರ್ ಕೊಟ್ರಪ್ಪ ಹಾಗೂ ಅರವಿಂದ್ ಎಂದು ತಿಳಿದುಬಂದಿದೆ.ಭದ್ರಾ ಅಣೆಕಟ್ಟೆಯ ಗೊಂದಿ ಬಲದಂಡೆ ನಾಲೆಯ ಸಿಲ್ಟ್ ತೆಗೆಯಲು ಕಾಮಗಾರಿ ಟೆಂಡರ್ ಕರೆಯಲಾಗಿತ್ತು. ಕಳೆದ 2024ರ ಜನವರಿಯಲ್ಲಿ ಕಾಮಗಾರಿಯೂ ಪೂರ್ಣಗೊಂಡಿತ್ತು. ಆದರೆ ಟೆಂಡರ್ ಹಣ 9,36,000ಲಕ್ಷ ರೂ ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. ಹಣ ಮಂಜೂರಾತಿಗೆ ಗುತ್ತಿಗೆದಾರ ರವಿ ಅವರು ಹಲವಾರು ಬಾರಿ ಮನವಿ ಮಾಡಿದ್ದರು. ಆದರೆ ಹಣ ಮಂಜುರು ಮಾಡಲು ನೀರಾವರಿ ನಿಗಮದ ಸೆಕ್ಷನ್ ಆಫೀಸರ್ ಕೊಟ್ರಪ್ಪ 1.20 ಲಕ್ಷ ಲಂಚಕ್ಕೆ ಬಿಡಿಕೆ ಇಟ್ಟಿದ್ದರು.ಈ…

Read More

ಬೆಂಗಳೂರು : ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನಲ್ಲಿ ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರು ಸುದ್ದಿಗೋಷ್ಠಿ ನಡೆಸಿದರು ಈ ಒಂದು ಸುದ್ದಿಗೋಷ್ಠಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಂತಹ ಸಚಿನ್ ಸಾವಿಗೂ ನನಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗರು ಬಹಳ ಬಾಲಿಶವಾಗಿ ಮಕ್ಕಳ ರೀತಿ ಹೇಳಿಕೆ ನೀಡುತ್ತಿದ್ದಾರೆ. ಕಳೆದ ನಾಲ್ಕು ಐದು ದಿನಗಳಿಂದ ಬಿಜೆಪಿ ಬಹಳಷ್ಟು ಪ್ರಯತ್ನ ಮಾಡುತ್ತಿದೆ. ನನ್ನ ರಾಜೀನಾಮೆ ಕೊಡಿಸಲು ಖರ್ಗೆಗೆ ಕಪ್ಪು ಚುಕ್ಕೆ ತರಲು ಬಿಜೆಪಿ ಪ್ರಯತ್ನಿಸುತ್ತಿದೆ. ಬಿಜೆಪಿಯವರು ಯಾಕೋ ಹೋಂವರ್ಕ್ ಸರಿಯಾಗಿ ಮಾಡುತ್ತಿಲ್ಲ.ವಿಜಯೇಂದ್ರ ನಾರಾಯಣಸ್ವಾಮಿ ಹೋಂವರ್ಕ್ ಸರಿ ಮಾಡುತ್ತಿಲ್ಲ. ನಾರಾಯಣಸ್ವಾಮಿಗೆ ವೈಯಕ್ತಿಕ ಟೀಕೆ ಮಾಡಲು ಸ್ಥಾನಕೊಟ್ಟಂತಿದೆ. ಕಲಬುರ್ಗಿ ರಿಪಬ್ಲಿಕ್ ಅಂತ ನಾರಾಯಣಸ್ವಾಮಿ ಆರೋಪ ಮಾಡಿದ್ದರು. ನಿನ್ನೆ ನನ್ನ ಹಳೆಯ ಸ್ವಿಚ್ ಅಪ್ಲೋಡ್ ಮಾಡಿದ್ದಾರೆ. ಬಿಜೆಪಿಯವರು ಕಲ್ಬುರ್ಗಿರಿ ಪಬ್ಲಿಕ್ ಮಾಡಿದವರು ಯಾರು? ನಿಮ್ಮ ಅಭ್ಯರ್ಥಿ ನಮ್ಮ ಕುಟುಂಬದ ವಿರುದ್ಧ ಸಂಚು ಮಾಡುತ್ತಾನೆ. ನಮ್ಮ…

Read More

ಹಾಸನ : ಕಳೆದ ಡಿಸೆಂಬರ್ 31 ರಂದು ಹಾಸನ ನಗರದ ಖಾಸಗಿ ಹೋಟೆಲ್ ಬಳಿ ಮಧ್ಯರಾತ್ರಿ ಹೊಸ ವರ್ಷಚಾರಣೆ ಸಂಭ್ರಮಾಚರಣೆಯ ವೇಳೆ ಪ್ರೀತಿ ನಿರಾಕರಿಸಿದ ಎನ್ನುವ ಕಾರಣಕ್ಕೆ ಯುವಕನ ಮೇಲೆ ಯುವತಿ ಚಾಕು ಇರದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಆರೋಪಿ ಯುವತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಆರೋಪಿ ಯುವತಿಯನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಯುವತಿಯನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಡಿಸೆಂಬರ್ 31ರಂದು ಮನುಕುಮಾರ್ ಎನ್ನುವ ಯುವಕನ ಮೇಲೆ ಯುವತಿ ಚಾಕುವಿನಿಂದ ದಾಳಿ ಮಾಡಿದ್ದಳು. ಮನು ಗೆಳತಿಯಿಂದಲೇ ಈ ಒಂದು ಭೀಕರವಾದಂತಹ ಹಲ್ಲೆ ನಡೆದಿತ್ತು. ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಸದ್ಯ ಮನುಕುಮಾರ್ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಹಿನ್ನೆಲೆ? ಹಲ್ಲೆಗೆ ಒಳಗಾದಂತಹ ಮನು ಕುಮಾರ್ ಹಾಗೂ ಆರೋಪಿ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಯುವಕ ಹಾಗೂ ಯುವತಿ ವೈಮನಸಿನಿಂದ ದೂರವಾಗಿದ್ದರು. ಇದೇ ವಿಚಾರವಾಗಿ ಯುವತಿ ಯುವಕ ಮನು ಕುಮಾರ್ ಮೇಲೆ ಕೋಪಗೊಂಡಿದ್ದಳು.ಕಳೆದ ಡಿಸೆಂಬರ್ 31ರಂದು…

Read More

ಬೀದರ್ : ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಸಚಿನ್ ಪಾಂಚಾಳ್ ಸಹೋದರಿ ಸುರೇಖಾ ಅವರು ನಮ್ಮ ಅಣ್ಣನ ಆತ್ಮಹತ್ಯೆ ಪ್ರಕರಣ ರಾಜ್ಯ ಸರ್ಕಾರ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ. ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಗಾಂವ್ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆವರು, ರಾಜ್ಯ ಸರ್ಕಾರದಿಂದ ಕೇಸ್ ಮುಚ್ಚಿ ಹಾಕಲು ಪ್ರಯತ್ನ ನಡೆಸಲಾಗುತ್ತಿದೆ. ಕಲ್ಬುರ್ಗಿಯಲ್ಲಿ ಸಚಿನ್ ಕೆಲಸ ಮಾಡಿಲ್ಲ. ಆತ ನಮ್ಮನ್ನು ಭೇಟಿ ಆಗಿಲ್ಲ. ಸಚಿನ್ ಹುಟ್ಟೇ ಇಲ್ಲ ಅಂತ ಏನೇನೋ ಹುಟ್ಟಾಕಿ ಬಿಡುತ್ತಾರೆ ಎಂಬ ಭಯವಿದೆ. ಹಾಗಾಗಿ ರಾಜ್ಯ ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ ಸಿಬಿಐ ತನಿಖೆ ಆದರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಇದೆ. ಡೆತ್ ನೋಟ್ ಅಲ್ಲಿ ಉಲ್ಲೇಖವಾದ ಆರೋಪಿಗಳನ್ನು ಪ್ರಶ್ನೆನೆ ಮಾಡಿಲ್ಲ. ಅಧಿಕಾರಿಗಳು ನಮ್ಮನ್ನು ಮಾತ್ರ ವಿಚಾರಣೆ…

Read More

ಚಾಮರಾಜನಗರ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿದ ಪರಿಣಾಮ ಕಾರಿನಲ್ಲಿ ಚಲಿಸುತ್ತಿದ್ದವರಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಓರ್ವ ಪ್ರಾಣಪಾಯದಿಂದ ಪಾರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕುಂತೂರಿನಲ್ಲಿ ನಡೆದಿದೆ. ಮೃತರನ್ನು ಮೈಸೂರಿನಲ್ಲಿ ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದ ಶುಭಾ ಮತ್ತು ಕಾರು ಚಾಲಕ ಊರ್ಜಿತ್ ಮೃತಪಟ್ಟಿದ್ದಾರೆ. ಖಾಸಗಿ ರೆಸ್ಟೋರೆಂಟ್​ನಲ್ಲಿ ಕೆಲಸ ಮಾಡುತ್ತಿರುವ ಮನ್ವಿತ್ ಎಂಬವರನ್ನು ರಕ್ಷಿಸಲಾಗಿದೆ.ಶುಭಾ ಮತ್ತು ಮನ್ವಿತ್ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ತಡರಾತ್ರಿ ಕಾರು ನಿಯಂತ್ರಣ ತಪ್ಪಿ ಕುಂತೂರು ಕೆರೆಗೆ ಉರುಳಿದೆ. ಕಾರು ಉರುಳಿದಾಗ ಪ್ರಾಣಾಪಾಯದಿಂದ ಪಾರಾಗಿದ್ದ ಮನ್ವಿತ್ ಜೋರಾಗಿ ಕೂಗಿದಾಗ ಕೂಡಲೇ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದಾರೆ.ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಮನಿತ್​ನನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಆದರೆ ಶುಭಾ ಹಾಗೂ ಊರ್ಜಿತ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Read More

ಬೀದರ್ : ಚಲಿಸುತ್ತಿದ್ದ ವಾಹನದಿಂದ ಬಿದ್ದು ವಿದ್ಯಾರ್ಥಿ ಒಬ್ಬ ಸಾವನಪ್ಪಿದ್ದು, ಆತನ ಜೊತೆಯಲ್ಲಿದ್ದಂತಹ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹಾಮು ನಗರ್ ತಾಂಡಾದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಾಮು ನಗರ ತಾಂಡಾದ ನಿವಾಸಿ ಕೈಲಾಸ್ (14) ಎಂದು ತಿಳಿದು ಬಂದಿದೆ. ಮೃತ ಕೈಲಾಸ್ ಮುಡಬಿ ಗ್ರಾಮದಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ. ಶಾಲೆಗೆ ಕ್ರೂಸರ್ ವಾಹನದಲ್ಲಿ ಹಾಮು ನಗರ ತಾಂಡಾದಿಂದ ಮುಡಬಿ ಗ್ರಾಮಕ್ಕೆ ತೆರಳುತ್ತಿದ್ದ. ಈ ವೇಳೆ ಕ್ರೂಸರಲ್ಲಿ ಹಿಂಬದಿ ಸೀಟಿನಲ್ಲಿ ಕೈಲಾಸ್ ಕೂತಿದ್ದ. ಏಕಾಏಕಿ ವಾಹನದ ಬಾಗಿಲು ಓಪನ್ ಆಗಿದ ಕೂಡಲೇ ಆತ ಆಯತಪ್ಪಿ ಕೆಳಗೆ ಬಿದ್ದಿದ್ದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಇನ್ನು ಆತನ ಜೊತೆಯಲ್ಲಿದ್ದಂತಹ ಇನೊಬ್ಬ ವಿದ್ಯಾರ್ಥಿ ದಿಲ್ಶ್ಯಾನ ಗಂಭೀರವಾಗಿ ಗಾಯಗೊಂಡಿದ್ದು ಘಟನೇ ಕುರಿತಂತೆ ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More