Author: kannadanewsnow05

ಬೆಂಗಳೂರು : ವಸತಿ ಯೋಜನೆ ಅಡಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪದ ಕುರಿತು ಶಾಸಕ ಬಿ ಆರ್ ಪಾಟೀಲ್ ಅವರ ಆಡಿಯೋ ವೈರಲ್ ಆಗಿರುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪ್ರತಿಕ್ರಿಯೆ ನೀಡಿದ್ದು, ಈ ಒಂದು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ ಬಿ ಆರ್ ಪಾಟೀಲ್ ಅವರ ಬಾಯಿಮುಚ್ಚಿಸುವ ಪ್ರಯತ್ನ ಮಾಡಬಹುದು ಎಂದು ಗಂಭೀರವಾಗಿ ಆರೋಪಿಸಿದರು. ಇನ್ನು ಈ ಒಂದು ಘಟನೆ ಸಂಬಂಧ ಶಾಸಕ ರಾಜು ಕಾಗೆ ಸಹ ಇನ್ನೆರಡು ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರು ಆಶ್ಚರ್ಯಪಡಬೇಕಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ, ಶಾಸಕ ರಾಜು ಕಾಗೆ ಮಾತ್ರ ಅಲ್ಲ ಅಂತಹ ಹತ್ತಾರು ಜನರು ಇದ್ದಾರೆ. ಒಬ್ಬೊಬ್ಬರಾಗಿ ಬಾಯಿ ಬಿಡುತ್ತಾರೆ ನೀವೇ ನೋಡ್ತಾ ಇರಿ ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ ಲಂಚ ಆರೋಪ ಮಾಡಿದ್ದಾರೆ ಸಿಎಂ ಮುಂದೆ ವಾಸ್ತವಿಕ ಸ್ಥಿತಿ ಹೇಳುತ್ತೇನೆ ಎಂದಿದ್ದಾರೆ. ಬಿ ಆರ್ ಪಾಟೀಲ್ ಬಾಯಿಮುಚ್ಚಿಸುವ…

Read More

ರಾಯಚೂರು : ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯಿಂದ ನನಗೆ ನೋವಾಗಿದೆ ಹಾಗಾಗಿ ಎರಡು ದಿನದಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಕೊಟ್ಟರು ಯಾವುದೇ ಆಶ್ಚರ್ಯ ಇಲ್ಲ ಎಂದು ಶಾಸಕ ರಾಜು ಕಾಗೆ ಎಚ್ಚರಿಸಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಅವರನ್ನು ಕರೆದು ನಾನು ಮಾತನಾಡುತ್ತೇನೆ ಎಂದು ತಿಳಿಸಿದರು. ರಾಯಚೂರಿನಲ್ಲಿ ಇದೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಅನುದಾನದಲ್ಲಿ ಕ್ಷೇತ್ರಕ್ಕೆ ಹಣ ಬಂದರೂ ಆರ್ಡರ್ ಕೊಟ್ಟಿಲ್ಲ ಎಂಬ ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ಸಿಎಂ ಅನುದಾನ ಅಂತ ಇದೆಯಾ? ಅವರು ಏನು ಬೇಕಾದರೂ ಹೇಳುತ್ತಾರೆ. ಆದರೆ ಸಿಎಂ ವಿಶೇಷ ಅನುದಾನ ಅಂತ ಎಲ್ಲಿಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇನ್ನು ಈ ವಿಚಾರವಾಗಿ ನೀವು ಕರೆ ಮಾಡಿ ಬಿ ಆರ್ ಪಾಟೀಲ್ ಗೆ ಕರೆದಿದ್ದೀರಿ ಅಂತ ಪ್ರಶ್ನೆ ಕೇಳಿದಾಗ ನಾನು ರಾಯಚೂರಿಗೆ ಬರುತ್ತೇನೆ ಅಂತ ಹೇಳಿದ್ದೆ. ಆಗ ಅವರು ರಾಯಚೂರಿಗೆ ನನ್ನ…

Read More

ಬೆಂಗಳೂರು : ವಸತಿ ಯೋಜನೆಯ ಅಡಿಯಲ್ಲಿ ಮನೆಗಳ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಕಾಂಗ್ರೆಸ್ ಪಕ್ಷದಲ್ಲೇ ಹಲವು ಶಾಸಕರು ಅಸಮಾಧಾನ ಹೊರಹಾಕುತ್ತಿದ್ದಾರೆ. ಇದರ ಬೆನ್ನಲ್ಲೆ ಇದೀಗ ರಾಜು ಕಾಗೆ ಆಡಳಿತ ವ್ಯವಸ್ಥೆಯಿಂದ ನನಗೆ ನೋವಾಗಿದ್ದು, ಎರಡು ದಿನದಲ್ಲೇ ರಾಜೀನಾಮೆ ಕೊಟ್ಟರು ಕೊಡಬಹುದು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದೀಗ ಮತ್ತೊರ್ವ ಶಾಸಕ ಬೇಳೂರು ಗೋಪಾಲಕೃಷ್ಣ ಸಚಿವ ಜಮೀರ್ ಅಹ್ಮದ್ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವುದು ಒಳ್ಳೆಯದು ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಮೀರ್ ರಾಜಿನಾಮೆ ಕೊಡೋದು ಒಳ್ಳೆಯದು. ಹಗರಣ ಆಗಿಲ್ಲ ಅಂದರೆ ಮತ್ತೆ ಸ್ಥಾನ ಪಡೆಯಲಿ ಈ ಹಿಂದೆ ಬೇರೆ ಬೇರೆ ಹಗರಣದಲ್ಲಿ ರಾಜೀನಾಮೆ ಕೊಟ್ಟಿದ್ದಾರೆ ತನಿಖೆ ಆದಮೇಲೆ ಮತ್ತೆ ಸ್ಥಾನ ಪಡೆದರೆ ಒಳ್ಳೆಯದು.ಈ ಕುರಿತು ತನಿಖೆ ಮಾಡಿ ಆರೋಪ ಬಂದಿರುವ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆ ಕೊಡೋದು ಒಳ್ಳೆಯದು ತನಿಖೆ ಎದುರಿಸಿದ ಬಳಿಕ ಮತ್ತೆ ಹೊರಗಡೆ ಬಂದು…

Read More

ಬೆಂಗಳೂರು : ವಸತಿ ಯೋಜನೆಯಡಿಯಲ್ಲಿ ಮನೆ ಹಂಚಿಕೆ ವೇಳೆ ಲಂಚ ಪಡೆದಿರುವ ಬಿ.ಆರ್.ಪಾಟೀಲ್ ಆಡಿಯೋ ವೈರಲ್ ವಿಚಾರವಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ಜನರಲ್ ಆಗಿ ಗ್ರಾಮಪಂಚಾಯ್ತಿಗೆ ಕಳಿಸ್ತೇವೆ ಮುನ್ಸಿಪಾಲಿಟಿಗೆ ಬಂದ್ರೆ ಮನೆ ಕೊಡ್ತಾರೆ ಇಷ್ಟು ಮಾತ್ರ ನನಗೆ ಗೊತ್ತಿರೋದು.ಬಿ.ಆರ್.ಪಾಟೀಲರು ಸೋಶಿಯಲ್ ಮೂವ್ ಮೆಂಟ್ ನಿಂದ ಬಂದವರು ಹಾಗಾಗಿ ಇದರ ಬಗ್ಗೆ ಹೆಚ್ಚು ಗೊತ್ತಿಲ್ಲ ಎಂದು ತಿಳಿಸಿದರು. ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಮನೆಗಳನ್ನ ಆಯ್ಕೆ ಮಾಡೋದು ಪಂಚಾಯ್ತಿಗೆ ಇರುತ್ತೆ ಆದರೆ ವಕ್ಯಾನ್ಸಲ್ ಮಾಡೋದು ನಮಗಿರುತ್ತೆ. ಶಾಸಕರು ವಸತಿ ಹಂಚಿಕೆ ಅಧ್ಯಕ್ಷರಿರ್ತಾರೆ. ಗ್ರಾಮಪಂಚಾಯ್ತಿಯವರೇ ಮನೆ ಅಲಾಟ್ ಮಾಡೋದು. ಭ್ರಷ್ಟಾಚಾರದ ಬಗ್ಗೆ ನಾವು ಹೇಳ್ತೇವೆ. ನಾಗೇಂದ್ರ ಮೇಲೂ ಆರೋಪವಿತ್ತು. ಅವರು ಏನು ಡಿಸೈಡ್ ಮಾಡಿದ್ರು ಗೊತ್ತಲ್ಲ. ಜಮೀರ್ ಮೇಲೂ ಆರೋಪ ಬಂದಿದೆ.ಆದರೆ ಇದರಲ್ಲಿ ಜಮೀರ್ ಪಾತ್ರ ಏನು? ಪಂಚಾಯ್ತಿಯಲ್ಲಿ ನಡೆಯೋದು ಇವರೇಗೆ ಜವಾಬ್ದಾರಿ ಆಗ್ತಾರೆ ಎಂದು ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದರು. ಕಾಂಗ್ರೆಸ್ ಶಾಸಕರ ಅಸಮಾಧಾನ ಹಾಗು ಸರ್ಕಾರದ ನಡೆಗೆ ರಾಜುಕಾಗೆ…

Read More

ಲಕ್ನೋ : ಉತ್ತರ ಪ್ರದೇಶದ ಲಕ್ನೋ ನಲ್ಲಿ ಘೋರವಾದ ದುರಂತ ನಡೆದಿದ್ದು ಬಾಲಕನೊಬ್ಬ ನದಿಯ ದಂಡೆಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿರುವಾಗಲೇ ಏಕಾಏಕಿ ಮೊಸಳೆ ದಾಳಿ ಮಾಡಿ ಬಾಲಕನನ್ನು ಎಳೆದೊಯ್ದಿರುವ ಘಟನೆ ನಡೆದಿದೆ. ಹೌದು ಈ ಒಂದು ಘಟನೆಯಿಂದ ಸ್ಥಳಿಯರು ಬೆಚ್ಚಿ ಬಿದ್ದಿದ್ದಾರೆ. ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಿನ್ನೆ ಈ ಘಟನೆ ನಡೆದಿದೆ. ರಾಜಾ ಬಾಬು ಅಲಿಯಾಸ್ ನ್ಯಾನ್ ಯಾದವ್ ನಾಪತ್ತೆಯಾಗಿರುವ ಬಾಲಕ ಎನ್ನಲಾಗಿದೆ.ರಾಜಾ ಬಾಬು ತನ್ನ ಎಮ್ಮೆಗಳನ್ನು ಸ್ನಾನ ಮಾಡಿಸಲು ನದಿಗೆ ಕರೆದುಕೊಂಡು ಹೋಗಿದ್ದ.ಈ ವೇಳೆ ನದಿ ತೀರದಲ್ಲಿ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಬಾಲಕನನ್ನು ಘಾಗ್ರಾ ನದಿಗೆ ಎಳೆದುಕೊಂಡು ಹೋಗಿದೆ. ಮೊಬೈಲ್‌ನಲ್ಲಿ ಈ ಆಘಾತಕಾರಿ ಘಟನೆಯ ವಿಡಿಯೋ ಸೆರೆಯಾಗಿದ್ದು, ಮೊಸಳೆ ಹಾಗೂ ಬಾಲಕನ ತಲೆ ವಿಡಿಯೋದಲ್ಲಿ ಕಾಣಿಸುತ್ತದೆ.ಮೊಸಳೆ ನದಿ ಆಳಕ್ಕೆ ಹೋದ ಬಳಿಕ ಸ್ಥಳೀಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ತಲುಪಿ ಬಾಲಕನ ಪತ್ತೆ ಕಾರ್ಯ ಶುರು ಮಾಡಿದ್ದಾರೆ. ಆದರೆ ಗಂಟೆಗಟ್ಟಲೇ ಹುಡುಕಿದರೂ ಬಾಲಕ ಪತ್ತೆಯಾಗಿಲ್ಲವೆಂದು ವರದಿ ತಿಳಿಸಿದೆ. https://twitter.com/sirajnoorani/status/1936882908905775596?t=5MQTLhh0wcEODQLqPcSKew&s=19

Read More

ಆಂಧ್ರಪ್ರದೇಶ : ಇತ್ತೀಚಿಗೆ ನವ ವಿವಾಹಿತ ಗಂಡು ಮಕ್ಕಳ ಕೊಲೆ ಪ್ರಕರಣಗಳು ಇಡೀ ದೇಶವನ್ನೇ ಬಿಚ್ಚಿಬಿಳಿಸುತ್ತಿವೆ. ಮದುವೆಯಾದ ಬಳಿಕ ಅಕ್ರಮ ಸಂಬಂಧ ಹೊಂದಿದ ಪತ್ನಿಯರು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಭೀಕರವಾಗಿ ಕೊಲೆ ಮಾಡಿರುವ ಹಲವಾರು ಘಟನೆಗಳು ನಡೆದಿವೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಮೇಘಾಲಯಕ್ಕೆ ಹನಿಮೂನ್ ಗೆ ಎಂದು ತೆರಳಿದ್ದ ರಾಜಾ ರಘುವಂಶಿಯ ಕೊಲೆ ಇಡೀ ದೇಶವೇ ಬೆಚ್ಚಿಬಿದ್ದಿತ್ತು. ಇದೀಗ ಈ ಒಂದು ಕೊಲೆ ಮಾದರಿಯಲ್ಲಿಯೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಆಂಧ್ರಪ್ರದೇಶದ ಗದ್ವಾಲ್ ಪಟ್ಟಣದಲ್ಲಿ ನವವಿವಾಹಿತರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆಯು ಮೇಘಾಲಯದಲ್ಲಿ ನಡೆದ ರಾಜಾ ರಘುವಂಶಿ ಕೊಲೆಯನ್ನು ನೆನಪಿಸುತ್ತದೆ. ತೆಲಂಗಾಣದ ಗದ್ವಾಲ್​ನ ರಾಜವೀಧಿನಗರದ 32 ವರ್ಷದ ತೇಜೇಶ್ವರ್ ನಂದ್ಯಾಲ್ ಜಿಲ್ಲೆಯ ಪನ್ಯಂ ಪೊಲೀಸ್ ಠಾಣೆ ವ್ಯಾಪ್ತಿಯ ಸುಗಲಿಮೆಟ್ಟದ ಎಚ್‌ಎನ್‌ಎಸ್‌ಎಸ್ ಕಾಲುವೆಯ ಬಳಿ ಶವವಾಗಿ ಪತ್ತೆಯಾಗಿದ್ದು, ಅವರ ಪತ್ನಿ ಮೇಲೆ ಅನುಮಾನ ಮೂಡಿದೆ. ಹೌದು ತೆಜೇಶ್ವರ್ ಕರ್ನೂಲಿನ ಐಶ್ವರ್ಯಾ ಎಂಬುವವರನ್ನು ಕಳೆದ ಒಂದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು.…

Read More

ಬೆಳಗಾವಿ : ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಕಾಂಗ್ರೆಸ್ ಶಾಸಕರು ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕುತ್ತಿದ್ದು, ರಾಜೀನಾಮೆ ನೀಡುವ ಬೆದರಿಕೆ ಹಾಕುತ್ತಿದ್ದಾರೆ. ಇದೀಗ ಕಾಂಗ್ರೆಸ್ ಶಾಸಕರಾದಂತಹ ರಾಜು ಕಾಗೆ ರಾಜ್ಯದ ಇಂತಹ ಆಡಳಿತ ವ್ಯವಸ್ತೆಯಿಂದ ನನಗೆ ತುಂಬಾ ನೋವಾಗಿದೆ. ಎರಡು ದಿನದಲ್ಲಿ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರು ಯಾವುದೇ ಆಶ್ಚರ್ಯವಿಲ್ಲ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಹೌದು ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯ ಬಗ್ಗೆ ಅಸಮಧಾನ ಹೊರ ಹಾಕಿದ ಅವರು, ರಾಜಿನಾಮೆ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಶಾಸಕ ರಾಜು ಕಾಗೆ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಸ್ವಪಕ್ಷದ ಶಾಸಕರಿಂದಲೇ ಇದೀಗ ಅಸಮಾಧಾನ ಹೊರ ಬೀಳುತ್ತಿದೆ. ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ಎರಡು ದಿನದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರು ಆಶ್ಚರ್ಯವಿಲ್ಲ ಎಂದು ಬೆಳಗಾವಿಯಲ್ಲಿ ಶಾಸಕ ರಾಜು ಕಾಗೆ ಅಸಮಾಧಾನ…

Read More

ಬೆಂಗಳೂರು : ಪ್ರೀತಿಸಿದ ಯುವತಿಯಿಂದ ಕಿರುಕುಳ ಆರೋಪ ಕೇಳಿಬಂದಿದ್ದು, ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ನಡೆದಿದೆ. ಮಾತ್ರೆ ಸೇವಿಸಿ ಕುಂಬಳಗೋಡು ಮೂಲದ ಮಂಜುನಾಥ್ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಜೂನ್ 13 ರಂದು ಮಂಜುನಾಥ್ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆಯ ಬಳಿ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಇದೀಗ ಯುವಕನ ಆತ್ಮಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರೀತಿಸಿದ ಯುವತಿ ನಂಬಿಸಿ ನನಗೆ ಮೋಸ ಮಾಡಿದ್ದಾಳೆ ಹಾಗಾಗಿ ಬೇರೊಬ್ಬನ ಜೊತೆಗೆ ಸಂಬಂಧ ಇದೆ ಎಂದು ಯುವಕ ಆರೋಪಿಸಿದ್ದಾನೆ. ಮಾತ್ರೆ ಸೇವಿಸಿದ ಮಂಜುನಾಥನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಇದೀಗ ಚಿಕಿತ್ಸೆ ಫಲಕಾರಿ ಆಗದೆ ಯುವಕ ಮಂಜುನಾಥ್ ಸಾವನಪ್ಪಿದ್ದಾನೆ. ಮೊಬೈಲ್ ಪಾಸ್ವರ್ಡ್ ಸಮೇತ ಯುವಕ ಸೆಲ್ಫಿ ವಿಡಿಯೋ ಮಾಡಿದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಯುವತಿ ಮತ್ತು ಆಕೆಯ ಕುಟುಂಬಸ್ಥರು ಇದೀಗ…

Read More

ಉತ್ತರಕನ್ನಡ : ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ನದಿ ಹಳ್ಳಕೊಳ್ಳಲು ತುಂಬಿ ಹರಿಯುತ್ತಿವೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ ಒಟ್ಟು 9 ಜನರು ಜಲ ಸಮಾಧಿ ಆಗಿದ್ದದ್ದಾರೆ. ಇದರ ಬೆನ್ನಲ್ಲೆ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು ಫಾಲ್ಸ್ ನೋಡಲು ಬಂದಿದ್ದ ಯುವಕ ಕಾಲು ಜಾರಿ ಹಳ್ಳಕ್ಕೆ ಬಿದ್ದು ನಿರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಸೋಮನಳ್ಳಿ ಗ್ರಾಮದ ಉಂಬಳೆ ಕೊಪ್ಪದ ಪವನ್ ಗಣಪತಿ ಜೋಗಿ (24) ಎಂದು ಗುರುತಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜೋಗನ ಹಕ್ಕಲು ಜಲಪಾತಕ್ಕೆ ಸ್ನೇಹಿತ ವಾಸುದೇವ್ ಜೊತೆ ಪವನ್‌ ನಿನ್ನೆ ಸಂಜೆ ತೆರಳಿದ್ದಾನೆ. ಜಲಪಾತದ ಸಮೀಪ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲುಜಾರಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ. ಸ್ಥಳಕ್ಕೆ ಪೊಲೀಸರು ಹಾಗು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ನಾಪತ್ತೆಯಾದ ಯುವಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿಗೆ ಇದೀಗ ಮಾಜಿ ಸಂಸದ ಡಿಕೆ ಸುರೇಶ್ ವಿಚಾರಣೆಗೆ ಹಾಜರಾಗಿದ್ದಾರೆ.ವಿಚಾರಣೆಗೆ ಹಾಜರಾಗುವುದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಸಿದ ಡಿಕೆ ಸುರೇಶ್ ಅವರು, ಯಾರೋ ಒಬ್ಬ ನಟ ನನ್ನ ಧ್ವನಿಯನ್ನು ಮಿಮಿಕ್ರಿ ಮಾಡಿ ಹಲವರಿಗೆ ವಂಚನೆ ಮಾಡಿದ್ದಾರೆ, ಧ್ವನಿ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು. ವಿಚಾರಣೆಗು ಮುನ್ನ ವಕೀಲರ ಮೂಲಕ ಮಾಹಿತಿ ಪಡೆದು ಇಡಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗುತ್ತೇನೆ. ಪ್ರಕರಣಕ್ಕೆ ಸಂಬಂಧವಿಲ್ಲದೆ ನನಗೆ ನೋಟಿಸ್ ಯಾಕೆ ಕೊಟ್ಟಿದ್ದಾರೆ ಅಂತ ಗೊತ್ತಾಗುತ್ತಿಲ್ಲ. ಯಾರೋ ಒಬ್ಬ ಮಹಿಳೆ ಮೌಖಿಕವಾಗಿ ನನ್ನ ಸಹೋದರಿ ಅಂತ ಹೇಳಿ ವಂಚನೆ ಮಾಡಿದ್ದಾರೆ. ಈ ವಿಚಾರವಾಗಿ ನಾನೇ ಪೊಲೀಸ್ ಕಮಿಷನರ್ ಗೆ ದೂರು ಸಹ ನೀಡಿದ್ದೆ. ಅವರು ಮಾಡಿದ ವಂಚನೆ ಪ್ರಕರಣಕ್ಕೂ ನನಗೂ ಯಾವುದೇ ವಿಧವಾದ ಸಂಬಂಧವಿಲ್ಲ. ನನ್ನ ಕ್ಷೇತ್ರದವರು ಅಂತ ಎರಡು ಮೂರು ಬಾರಿ ಭೇಟಿಯಾಗಿದ್ದಾರೆ. ನಾನು ಅವರ ಎರಡು ಕಾರ್ಯಕ್ರಮಗಳಿಗೆ ಭೇಟಿ ಕೊಟ್ಟಿದ್ದೆ…

Read More