Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬಿಗ್ ಬಾಸ್ ಸೀಸನ್ 12 ಶುರುವಾಗಿನಿಂದ ಒಂದಿಲ್ಲೊಂದು ಸಮಸ್ಯೆಗಳು ಇದರಾಗುತ್ತಲೇ ಇವೆ . ಮೊದಲು ಅಶ್ವಿನಿ ಗೌಡ ರಕ್ಷಿತಾ ಕುರಿತು ಹೇಳಿಕೆ ನೀಡಿದ ವಿರುದ್ಧ ದೂರು ದಾಖಲಾಗಿದ್ದಾರೆ ಇನ್ನೊಂದು ಕಡೆ ಮಹಿಳಾ ಸ್ಪರ್ಧಿಯನ್ನು ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಆರೋಪ ಸಂಬಂಧ ಗಿಲ್ಲಿ ನಟ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಗಿಲ್ಲಿ ನಟನ ಮೇಲೆ ಹಲ್ಲೆ ಮಾಡಿದ್ದರ ಕುರಿತು ಗಿಲ್ಲಿ ಅಭಿಮಾನಿಗಳು ರಿಷಾ ವಿರುದ್ಧ ದೂರು ದಾಖಲಿಸಿದ್ದಾರೆ. ಹೌದು ಈಗಾಗಲೇ ಬಿಗ್ಬಾಸ್ ಮನೆಯಲ್ಲಿರುವ ಅಶ್ವಿನಿ ಗೌಡ ಮತ್ತು ಗಿಲ್ಲಿ ನಟ ವಿರುದ್ಧ ದೂರು ದಾಖಲಾಗಿವೆ. ಇದೀಗ ಮತ್ತೋರ್ವ ಸ್ಪರ್ಧಿ ವಿರುದ್ಧ ದೂರು ದಾಖಲಾಗಿದೆ. ಹಳೆಯ ಪ್ರಕರಣವೊಂದು ಮತ್ತೆ ಜೀವ ಪಡೆದುಕೊಂಡಿದ್ದು, ಜಿಲ್ಲಾ ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಪರ್ಧಿ ಗಿಲ್ಲಿ ನಟ ಅವರ ಮೇಲೆ ಹಲ್ಲೆ ಸಂಬಂಧ ರಿಷಾ ಗೌಡ ವಿರುದ್ಧ ದೂರು ದಾಖಲಾಗಿದೆ. ಕಾರ್ಯಕ್ರಮದ ಆಯೋಜಕರು ರಿಷಾ ಗೌಡ ವಿರುದ್ಧ ಯಾವುದೇ ಸೂಕ್ತ ಕ್ರಮ…
ಚಾಮರಾಜನಗರ : ರಾಜ್ಯದಲ್ಲಿ ನವೆಂಬರ್ಕ್ರಾಂತಿ ಆಗಲಿದೆ ನಾಯಕತ್ವ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ಬಿಜೆಪಿ ನಾಯಕರು ಇತ್ತೀಚಿಗೆ ಈ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದರು ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಜನರ ಆಶೀರ್ವಾದ ಇರುವವರೆಗೂ ನಾನೆ ಸಿಎಂ ಆಗಿರುತ್ತೇನೆ ಯಾವ ಕ್ರಾಂತಿಯು ಇಲ್ಲ ಬ್ರಾಂತಿಯು ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಜನರ ಆಶೀರ್ವಾದ ಇರುವವರೆಗೂ ನಾನೆ ಸಿಎಂ ಆಗಿರುತ್ತೇನೆ ಎರಡು ವರ್ಷದ ಬಳಿಕ ಸಂಪುಟ ಪುನಾರಚನೆ ಎಂದಿದ್ದೆ ಆ ವಿಚಾರಕ್ಕೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದಕ್ಕೆ ಎಲ್ಲರೂ ಕೂಡ ಕ್ರಾಂತಿ ಅಂತ ತಿಳಿದುಕೊಂಡಿದ್ದರು ಆದರೆ ಯಾವ ಕ್ರಾಂತಿಯು ಇಲ್ಲ ಯಾವ ಬ್ರಾಂತಿಯು ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಮುಂದಿನ ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಎರಡೆರಡು ಬಾರಿ ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿಯಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚಿಸಿದರು. ಈ ವೇಳೆ ಮಲ್ಲಿಕಾರ್ಜುನ…
ಚಾಮರಾಜನಗರ : ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಎರಡೆರಡು ಬಾರಿ ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿಯಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚಿಸಿದರು. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಸಿಎಂ ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದು ರಾಹುಲ್ ಗಾಂಧಿ ಅವರಿಗೆ ವರದಿ ಸಲ್ಲಿಸೋಣ ಅವರು ಏನು ಹೇಳುತ್ತಾರೋ ಅದೇ ರೀತಿ ನಿರ್ಧರಿಸೋಣ ಅಂತ ತಿಳಿಸಿದರು. ಇದೀಗ ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಪುಟ ಪುನಾರಚನೆ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ ಹೈಕಮಾಂಡ್ ಬಳಿ ಈ ಕುರಿತು ಇನ್ನು ಮಾತನಾಡಬೇಕು ಆದರೆ ಸದ್ಯಕ್ಕಂತೂ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಸ್ತಾಪ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಇನ್ನು ಅನುದಾನ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಜಿಎಸ್ಟಿ ನೀಡುತ್ತೇವೆ. ಅನುದಾನ ಕೊಡುವ ವಿಚಾರದಲ್ಲಿ ಮಾತ್ರ ಸರಿಯಾಗಿ ಕೊಡುತ್ತಿಲ್ಲ ಹೆಚ್ಚಿನ ಅನುದಾನ ಕೊಡಿ…
ಮೈಸೂರು : ಮೈಸೂರಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದ್ದು, ಮನೆ ಮುಂದೆ ನಿಲ್ಲಿಸಿದ ಎರಡು ಕಾರುಗಳಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ನಡೆದಿದ್ದು, ಅಲ್ಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ನಂಜನಗೂಡು ನಗರದ ಶ್ರೀರಾಂಪುರ ಬಡಾವಣೆಯಲ್ಲಿರುವ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಅಭಿನಾಗಭೂಷಣ್ ಮತ್ತು 5ನೇ ಕ್ರಾಸ್ನಲ್ಲಿರುವ ಸಂತೋಷ್ ಎಂಬುವವರ ಕಾರಿಗೆ ಮಧ್ಯರಾತ್ರಿ ಏಕಕಾಲದಲ್ಲಿ ಪೆಟ್ರೋಲ್ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಹೊತ್ತಿ ಉರಿಯುತ್ತಿದ್ದ ಕಾರನ್ನು ಕಂಡು ಅಕ್ಕಪಕ್ಕದ ನಿವಾಸಿಗಳು ನೀರು ಎರಚಿ ಬೆಂಕಿಯನ್ನು ನಂದಿಸಿ ಅನಾಹುತ ತಪ್ಪಿಸಿದ್ದಾರೆ. ಕಾರುಗಳಿಗೆ ಬೆಂಕಿ ಹಾಕಿದ ಪರಿಣಾಮ ಸುಟ್ಟು ಕರಕಲಾಗಿವೆ. ನಂಜನಗೂಡಿನಲ್ಲಿ ಬೀಟ್ ಪೊಲೀಸ್ ಇಲ್ಲದೇ ಇಂತಹ ಘಟನೆಗಳು ನಡೆಯುತ್ತಿವೆ. ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ದುಷ್ಕರ್ಮಿಗಳ ಹೆಡೆಮುರಿ ಕಟ್ಟಬೇಕಿದೆ. ಕೂಡಲೇ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಾಮರಾಜನಗರ : ನಿನ್ನೆ ಬೆಂಗಳೂರಲ್ಲಿ ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ದರೋಡೆ ನಡೆದಿದ್ದು, 7.11 ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಂಧ್ರಪ್ರದೇಶದ ತಿರುಪತಿಯಲ್ಲಿ ದರೋಡೆಕೋರರ ಕಾರು ಪತ್ತೆಯಾಗಿದೆ. ಇದೀಗ ಈ ಒಂದು ದರೋಡೆಕೋರರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾಮರಾಜನಗರದಲ್ಲಿ ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ದರೋಡೆ ಕೋರರ ಸುಳಿವು ಪತ್ತೆಯಾಗಿದೆ. ದರೋಡೆಕರರು ಕೃತ್ಯಕ್ಕೆ ಬಳಸಿದ್ದ ಕಾರು ಪತ್ತೆಯಾಗಿದೆ ಎಂದು ಚಾಮರಾಜನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇನ್ನೋವಾ ಕಾರು ಆಂಧ್ರಪ್ರದೇಶದ ಚಿತ್ತೂರು ಬಳಿ ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ಬೆಂಗಳೂರು ಪೊಲೀಸರು ಸದ್ಯ ವಶಕ್ಕೆ ಪಡೆದಿದ್ದಾರೆ. ತಿರುಪತಿಯಲ್ಲಿ ಕಾರು ಬಿಟ್ಟು ಆರೋಪಿಗಳು ಪರಾರಿ ಆಗಿದ್ದಾರೆ ದರೋಡೆಕೋರರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಬೆಂಗಳೂರು : ನಿನ್ನೆ ಬೆಂಗಳೂರಲ್ಲಿ ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ದರೋಡೆ ನಡೆದಿದ್ದು, 7.11 ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಂಧ್ರಪ್ರದೇಶದ ತಿರುಪತಿಯಲ್ಲಿ ದರೋಡೆಕೋರರ ಕಾರು ಪತ್ತೆಯಾಗಿದೆ. ಹೌದು ಇನ್ನೋವಾ ಕಾರು ಆಂಧ್ರಪ್ರದೇಶದ ಚಿತ್ತೂರು ಬಳಿ ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ಬೆಂಗಳೂರು ಪೊಲೀಸರು ಸದ್ಯ ವಶಕ್ಕೆ ಪಡೆದಿದ್ದಾರೆ. ತಿರುಪತಿಯಲ್ಲಿ ಕಾರು ಬಿಟ್ಟು ಆರೋಪಿಗಳು ಪರಾರಿ ಆಗಿದ್ದಾರೆ. ದರೋಡೆಕೋರರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಇನ್ನು ಕಾರಿನ ನಂಬರ ಪ್ಲೇಟ್ ಬದಲಿಸಿ, ಓಡಾಡುತ್ತಿದ್ದ ಇಬ್ಬರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಣಸವಾಡಿಯ ಕಲ್ಯಾಣ ನಗರದ ಇಬ್ಬರು ಸಿಸಿಬಿ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ ನಂಬರ್ ಪ್ಲೇಟ್ ಬದಲಿಸಿ ಇನೋವಾ ಕಾರಿನಲ್ಲಿ ಗ್ಯಾಂಗ್ ಎಸ್ಕೇಪ್ ಆಗಿತ್ತು ಯುಪಿ ನೊಂದಣಿಯ ಕಾರಣ ನಂಬರ್ ಪ್ಲೇಟ್ ಹಾಕಿಕೊಂಡು ಇದೀಗ ದರೋಡೆ ಗ್ಯಾಂಗ್ ಪರಾರಿ ಆಗಿದೆ ದರೋಡೆಯ ವೇಳೆ ಕರ್ನಾಟಕ ನೊಂದಣಿ ನಂಬರ್ ಹಾಕಿದ ಆರೋಪಿಗಳು. ಕಲ್ಯಾಣ ನಗರದ ಸ್ವಿಫ್ಟ್ ಕಾರ್ ನಂಬರ್ ಪ್ಲೇಟ್ ಅನ್ನು ಆರೋಪಿಗಳು…
ಉಡುಪಿ : ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಯಕ್ಷಗಾನ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ದಾಖಲಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹಾಸನ : ಹಾಸನದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಮನೆಯೊಳಗೆ ಬೆತ್ತಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಗಾಣಿಗರ ಬೀದಿಯಲ್ಲಿ ಈ ಒಂದು ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿಯ ಸ್ಪಂದನ (26) ಎನ್ನುವ ಮಹಿಳೆಯ ಶವ ಬೆತ್ತಲೆಯಾಗಿ ಪತ್ತೆಯಾಗಿದೆ. ಕಳೆದ ಎಂಟು ದಿನದ ಹಿಂದೆ ಸ್ಪಂದನ ಬೇಲೂರಿನಲ್ಲಿ ಬಾಡಿಗೆ ಮನೆಗೆ ಬಂದಿದ್ದರು. ಎರಡು ದಿನದಿಂದ ಮನೆಯಲ್ಲಿ ಯಾರು ಇಲ್ಲದ್ದನ್ನು ಸ್ಥಳೀಯರು ಗಮನಿಸಿದ್ದಾರೆ. ಅನುಮಾನಗೊಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಪರಿಶೀಲನೆ ವೇಳೆ ಮನೆಯಲ್ಲಿ ಸ್ಪಂದನ ಮೃತ ದೇಹ ಪತ್ತೆಯಾಗಿದೆ. ವತಿಯಿಂದ ದೂರವಾಗಿ ಸ್ಪಂದನ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದುಷ್ಕರ್ಮಿಗಳು ಸ್ಪಂದನಾಳನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೇಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿಗೂ ಅಧಿಕ ದರೋಡೆ ನಡೆದಿದೆ. ಅಧಿಕಾರಿಗಳ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಎಟಿಎಂ ಯಂತ್ರಗಳಿಗೆ ಹಣ ತುಂಬಿಸಲು ಕೊಂಡೊಯ್ಯುತ್ತಿದ್ದ ವಾಹನದಿಂದ 7.11 ಕೋಟಿ ರೂಪಾಯಿ ದೋಚಿದ್ದಾರೆ. ನಗರದ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ದುಷ್ಕೃತ್ಯ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್, ದರೋಡೆಕೋರರನ್ನು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದಂತಹ ದರೋಡೆಯಲ್ಲಿ ಈಗಾಗಲೇ ಪೊಲೀಸ್ ಅಧಿಕಾರಿಗಳು ಎಲ್ಲಾ ಮಾಹಿತಿ ಪಡೆದುಕೊಂಡಿದ್ದಾರೆ. ದರೋಡೆಕೋರರು ಕರ್ನಾಟಕದವರಾ ಬೇರೆ ರಾಜ್ಯದವರ ಹಾಗೂ ಯಾವ ವಾಹನ ಬಳಸಿದ್ದಾರೆ, ಅದರ ಕುರಿತು ತನಿಖೆ ನಡೆಸುತ್ತಿದ್ದಾರೆ. ದರೋಡೆಕೋರರು ಯಾವ ಕಾರಿಗೆ ನಂಬರ್ ಪ್ಲೇಟ್ ಬಳಸಿದ್ದರೊ ಅದು ಸಹ ಡುಪ್ಲಿಕೇಟ್ ಆಗಿದೆ. ಅವರು ಯಾವ ವಾಹನದಲ್ಲಿ ತೆರಳಿದ್ದರೋ ಗೊತ್ತಿಲ್ಲ ದರೋಡೆಗೆ ಬಳಸಿದ ಕಾರು ಬೇರೆ ಅವರು ಅಲ್ಲಿಂದ ಪರಾರಿಯಾಗಿರುವಾಗ ಬಳಸಿದ ಕಾರೆ ಬೇರೆ. ಸದ್ಯ ಪೊಲೀಸರು ದರೋಡೆಕೋರರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಿಸಿಟಿವಿ…
ನಮ್ಮ ಸುತ್ತಮುತ್ತ ಇರುವಂತಹ ಪ್ರತಿಯೊಂದು ದೇವಸ್ಥಾನವು ಕೂಡ ಒಂದೊಂದು ವಿಶೇಷವಾದ ಚಮತ್ಕಾರವನ್ನು ಹೊಂದಿದ್ದು. ಈ ದಿನ ನಾವು ಹೇಳುತ್ತಿರುವಂತಹ ಈ ದೇವಸ್ಥಾನವು ಕೂಡ ಬಹಳ ವಿಶೇಷ ವಾಗಿದ್ದು ಈ ದೇವಸ್ಥಾನಕ್ಕೆ ಬಂದರೆ ನಿಮ್ಮ ಎಲ್ಲಾ ಕಷ್ಟಗಳು ಕೂಡ ದೂರವಾಗುತ್ತದೆ ಎಂದು ಇಲ್ಲಿಯ ಭಕ್ತರು ಹೇಳುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ…














