Author: kannadanewsnow05

ಬೆಂಗಳೂರು : ರಾಜ್ಯದ 5,950 ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲು ಪಟ್ಟಿ ಅಂತಿಮಗೊಳಿಸಲು ಕನಿಷ್ಠ ಮೂರು ತಿಂಗಳು ಕಾಲಾವಕಾಶ ಬೇಕೆಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮೌಖಿಕವಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚುನಾವಣೆ ನಡೆಯುವುದು ಅನುಮಾನ ಎಂದು ಹೇಳಲಾಗಿದೆ. ನ್ಯಾಯಾಲಯವು ಸರ್ಕಾರದ ವಸ್ತುಸ್ಥಿತಿ ವರದಿಯನ್ನು ದಾಖಲಿಸಿಕೊಂಡು ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ. ಹೌದು ವಾರ್ಡ್‌ಗಳ ವಿಂಗಡಣೆ ಮತ್ತು ಮೀಸಲಾತಿ ಪಟ್ಟಿ ಅಂತಿಮಗೊಳಿಸಲು ಸರ್ಕಾರಕ್ಕೆ ಹೆಚ್ಚಿನ ಸಮಯದ ಅಗತ್ಯವಿದೆ. ಚುನಾವಣೆ ವಿಳಂಬವಾಗುವುದರಿಂದ ಹಾಲಿ ಸದಸ್ಯರ ಅವಧಿ ಮುಕ್ತಾಯಗೊಂಡರೆ ಆಡಳಿತಾಧಿಕಾರಿಗಳ ನೇಮಕ ಅಥವಾ ಸದಸ್ಯರ ಮುಂದುವರಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ವಾದವನ್ನು ಆಲಿಸಿ, ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ. ಅವಧಿ ಮುಗಿದ ರಾಜ್ಯದ 5,950 ಗ್ರಾಮ ಪಂಚಾಯಿತಿ ಹಾಗೂ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಸಕಾಲದಲ್ಲಿಸಾರ್ವತ್ರಿಕ ಚುನಾವಣೆ ನಡೆಸಲು ಆಯೋಗಕ್ಕೆ ಅನುಕೂಲವಾಗಲು ಅಂತಿಮ ಮೀಸಲು ಅಧಿಸೂಚನೆ ಹೊರಡಿಸಲು ತಕ್ಷಣ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕು ಎಂದು ಕೋರಿ ರಾಜ್ಯ…

Read More

ಬೆಂಗಳೂರು : ಬೆಂಗಳೂರು ರಾಯಲ್ ಚಾಲೆಂಜರ್ಸ್ (RCB) ತಂಡದ ಈ ಬಾರಿಯ ಕ್ರೀಡಾ ಋತುವಿಗೆ ಕರ್ನಾಟಕ ಹಾಲು ಮಹಾಮಂಡಳಿ (KMF) ಅಧಿಕೃತ ಪಾಲುದಾರನಾಗಿ (Official Partner) ಒಪ್ಪಂದ ಮಾಡಿಕೊಂಡಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಅವರು ಅಧಿಕೃತವಾಗಿ ತಿಳಿಸಿದ್ದಾರೆ. ಈ ಮೂಲಕ ಸ್ಥಳೀಯ ಬ್ರ್ಯಾಂಡ್ ‘ನಂದಿನಿ’ಯನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಗುರುತಿಸುವಂತೆ ಮಾಡುವುದು ಮಂಡಳಿಯ ಉದ್ದೇಶವಾಗಿದೆ. 2026 ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದೆ ಈ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿದೆ. ಆರ್‌ಸಿಬಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡವಾಗಿದೆ. ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಂದಿನಿ ಉತ್ಪನ್ನ ಪರಿಚಯಿಸಲಾಗುತ್ತದೆ ಕೆಎಂಎಫ್ ಉತ್ಪನ್ನ ಪ್ರಚಾರಕ್ಕೆ ವಿರಾಟ್, ಕೊಹ್ಲಿ ರಜತ್ ಪಾಟೀದಾರ್, ದೇವದತ್ತ ಪಡಿಕಲ್ 4 ಕೋಟಿ ವೆಚ್ಚದಲ್ಲಿ ಕೆಎಂಎಫ್ ಒಂದು ವರ್ಷದ ಟೆಂಡರ್ ಪಡೆದಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಶಿವ ಸ್ವಾಮಿ ಹೇಳಿಕೆ ನೀಡಿದರು.

Read More

ಬೆಂಗಳೂರು : ರಾಜ್ಯದಲ್ಲಿ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಇಂದು ಕಂದಾಯ ಸಚಿವ ಕೃಷ್ಣಭೇರೇಗೌಡ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು. * ಪೂರ್ವ ಮುಂಗಾರಿನಲ್ಲಿ 17 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ, 5 ಜಿಲ್ಲೆಗಳಲ್ಲಿ ಅಧಿಕ ಮಳೆ, 6 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದ್ದರೆ, 3 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ. * ಪ್ರಸ್ತುತ ವರ್ಷ ಜೂನ್ ಜುಲೈ ತಿಂಗಳಲ್ಲಿ ವಾಡಿಕೆ ಮಳೆ ಆಗಲಿದೆ. * ತದನಂತರ ಮಳೆ ಕೊರತೆ ಎದುರಾಗುವ ಸಾಧ್ಯತೆ ಇದೆ. * ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಮಳೆ ಕೊರತೆಯಾಗಲಿದೆ. * ಈ ಬೇಸಿಗೆಯಲ್ಲಿ ಕರಾವಳಿ ಭಾಗದಲ್ಲಿ ವಾಡಿಕೆಗಿಂತ ತಾಪಮಾನ ಹೆಚ್ಚಾಗಲಿದೆ. * ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ತೀವ್ರತೆ ಹೆಚ್ಚಲಿದೆ. * ಮುಂಬರುವ ತಿಂಗಳು ಲಾ ನಿನಾ ಪರಿಸ್ಥಿತಿ ತಟಸ್ಥವಾಗುವ ನಿರೀಕ್ಷೆ ಇದೆ. * 2026ರ ಮೇ-ಜುಲೈ ವರೆಗೆ ಲಾ ನಿನಾ ತಟಸ್ಥವಾಗಿ ಮುಂದುವರೆಯುವ ಸಾಧ್ಯತೆ. *…

Read More

ಬೆಂಗಳೂರು: ಇರಾನ್ ಇಸ್ರೇಲ್ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಈಗ ಪಾತಾಳಕ್ಕೆ ಕುಸಿಯುತ್ತಿದ್ದು, 1 ಲಕ್ಷ ರೂ. ಸನಿಹಕ್ಕೆ ಬರುವಹಾಗಿದೆ. ಹೌದು. ವಾರ್ ಎಫೆಕ್ಟ್ (War Effect) ಗಗನಕ್ಕೇರಿದ ಚಿನ್ನ ಈಗ ಪಾತಾಳಕ್ಕೆ ಕುಸಿದಿದೆ. ಚಿನ್ನದ ದರ ಕುಸಿತವು ಹೆಂಗಳೆಯರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ. 10 ಗ್ರಾಂ ಗೆ ಯುದ್ಧದ ಪರಿಣಾಮದಿಂದ 30 ಸಾವಿರ ರೂ. ವರೆಗೆ ಇದ್ದ 24 ಕ್ಯಾರೆಟ್ ಚಿನ್ನದ ದರ ಕೊಂಚ ಇಳಿಕೆ ಕಂಡಿದ್ದರೆ, 22 ಕ್ಯಾರೆಟ್ ಚಿನ್ನವೂ 25 ಸಾವಿರದಷ್ಟು ಇಳಿಕೆಯಾಗಿದೆ. ನಗರ 22 ಕ್ಯಾರೆಟ್ (ಆಭರಣ ಚಿನ್ನ) 24 ಕ್ಯಾರೆಟ್ (ಶುದ್ಧ ಚಿನ್ನ) ಬೆಂಗಳೂರು ₹ 1,28,650 ₹ 1,40,350 ಮೈಸೂರು ₹ 1,28,650 ₹ 1,40,350 ಮಂಗಳೂರು ₹ 1,28,700 ₹ 1,40,400 ಕಲಬುರಗಿ ₹ 1,27,850 ₹ 1,39,570 ಬೆಲೆ ಇಳಿಕೆಗೆ ಪ್ರಮುಖ ಕಾರಣಗಳು: ಯುದ್ಧದ ಆತಂಕವಿದ್ದರೂ ಬೆಲೆ…

Read More

ಧಾರವಾಡ : ಮಾಜಿ ಶಾಸಕ ಬಾಬುರಾವ್ ಬೋಳ ಶೆಟ್ಟಿ ಪುತ್ರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಕಾರಿನಲ್ಲಿಯೇ ಸುಟ್ಟ ಸ್ಥಿತಿಯಲ್ಲಿ ರಾಜು ಬೋಳಶೆಟ್ಟಿ (53) ಶವ ಪತ್ತೆಯಾಗಿದೆ. ಧಾರವಾಡ ತಾಲೂಕಿನ ರಾಮಾಪುರ ಬಳಿಯ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದೆ. ರಾಜು ಬೋಳಶೆಟ್ಟಿ ಕೊಲೆ ಮಾಡಿ ದುಷ್ಕರ್ಮಿಗಳು ಕಾರಿನಲ್ಲಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಉಡಗೇರಿ ನಿವಾಸಿ ಆಗಿರುವ ರಾಜು ಬೋಳಶೆಟ್ಟಿ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಪುತ್ರ ಆಗಿದ್ದಾರೆ. ನಿರ್ಜನ ಪ್ರದೇಶದಲ್ಲಿ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗುತ್ತಿದ್ದು, ಸ್ಥಳಕ್ಕೆ ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಪರಿಷತ್ ನಲ್ಲಿ ಇವ ನಮ್ಮ ಇವ ನಮ್ಮ ವಿಧೇಯಕ ಮೇಲೆ ಇಂದು ಚರ್ಚೆ ನಡೆಯಿತು ಕರ್ನಾಟಕ ವಿವಾಹದಲ್ಲಿ ಆಯ್ಕೆ ಸ್ವಾತಂತ್ರ ಹಾಗೂ ಮರ್ಯಾದೆ ಮತ್ತು ಸಂಪ್ರದಾಯ ಹೆಸರಿನಲ್ಲಿನ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ ಬಿಲ್ ಮೇಲೆ ಚರ್ಚೆ ನಡೆಯಿತು. ಈ ವೇಳೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಬ್ರಾಹ್ಮಣರನ್ನೇ ನಾವು ಜಾತಿವಾದಿ ಅಂತ ಹೇಳುವುದು ಎಂದು ಮಾತು ಆರಂಭಿಸಿದರು. ಯಲ್ಲಾಪುರದಲ್ಲಿ ಪ್ರೀತಿಸುವಂತೆ ಮಹಿಳೆಯನ್ನು ಓರ್ವ ಪೀಡಿಸುತ್ತಿದ್ದ. ಆಕೆ ನನಗೆ ಇಷ್ಟ ಇಲ್ಲ ಅಂತ ಹೇಳಿದ್ದಕ್ಕೆ ಕೊಂದುಬಿಟ್ಟ. ಸ್ವಾಮೀಜಿಗಳನ್ನು ನಾವು ದ್ವೇಷ ಮಾಡುವುದಿಲ್ಲ ನಾನು ಹುಟ್ಟಿದ ಮೇಲೆ ಜಾತಿ ವ್ಯವಸ್ಥೆ ಇದೆ ಅಂತ ಗೊತ್ತಾಯ್ತು. ನಮ್ಮೂರಿನ ದೇವಸ್ಥಾನವನ್ನೇ ನಾನು ನೋಡಿಲ್ಲ. ಶೇವಿಂಗ್ ಮಾಡಿಸಲು ಕಟಿಂಗ್ ಶಾಪ್ ಗೆ ಹೋದರೆ ಬೈದು ಕಳುಹಿಸಿದರು. ಯಾರ ಬಳಿಯು ಶೇವಿಂಗ್ ಮಾಡಿಸಲ್ಲ ನಾನೇ ಮಾಡಿಕೊಳ್ಳುತ್ತೇನೆ ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿಕೆ ನೀಡಿದರು.

Read More

ಬೆಂಗಳೂರು : ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ ಕೇರಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೇ 10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡಿದ್ದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.ಈ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ನಲ್ಲಿ ಆಕ್ರೋಶ ಹೊರಹಾಕಿದೆ. ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನೀರಗಂಟಿಗಳಿಗೆ ಸಂಬಳ ಕೊಡಲು ಯೋಗ್ಯತೆ ಇಲ್ಲದ ಲೂಟಿಕೋರ ಕಾಂಗ್ರೆಸ್‌ ಸರ್ಕಾರ, ವಯನಾಡು ಭೂಕುಸಿತ ಸಂತ್ರಸ್ತರಿಗೆ 10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆದಿದೆ ಎಂದು ಬಿಜೆಪಿ ಸಿಟ್ಟು ಹೊರಹಾಕಿದೆ. ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನೀರಗಂಟಿಗಳಿಗೆ ಸಂಬಳ ಕೊಡಲು ಯೋಗ್ಯತೆ ಇಲ್ಲದ ಲೂಟಿಕೋರ @INCKarnataka ಸರ್ಕಾರ, ವಯನಾಡು ಭೂಕುಸಿತ ಸಂತ್ರಸ್ತರಿಗೆ ₹10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆದಿದೆ. ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ @siddaramaiah ನವರು ಹೈಕಮಾಂಡ್‌ ಮೆಚ್ಚಿಸಲು ಕನ್ನಡಿಗರ ತೆರಿಗೆ ದುಡ್ಡನ್ನು,…

Read More

ಬೆಂಗಳೂರು : ಮುಂದಿನ 5 ದಿನಗಳಲ್ಲಿ ರಾಜ್ಯದ 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಸ್ಥಳೀಯರು ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಿದೆ. ಸೋಮವಾರ ಸಂಜೆ ಹಾಗೂ ರಾತ್ರಿ ದಕ್ಷಿಣ ಒಳನಾಡು ಹಾಗೂ ಕರಾವಳಿಯ 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಿಂಚು ಗುಡುಗುವಿನಿಂದ ಕೂಡಿದ ಮಳೆಯಾಗಲಿದೆ.ತಮಿಳುನಾಡು ಮತ್ತು ಕರ್ನಾಟಕದ ಒಳನಾಡಿನಾದ್ಯಂತ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಇರಲಿದೆ. ಈ ಹಿನ್ನೆಲೆ ಮಾರ್ಚ್‌ 23 ರಿಂದ 5 ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಗದಗ, ಹಾವೇರಿ, ಯಾದಗಿರಿ, ಕಲಬುರಗಿ, ಚಿತ್ರದುರ್ಗ, ವಿಜಯನಗರ, ದಕ್ಷಿಣ ಕ್ನನಡ, ಬಾಗಲಕೋಟೆ, ಧಾರವಾಡ, ವಿಜಯಪುರ, ಚಿಕ್ಕಮಗಳೂರು , ಕೊಡಗ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಮವಾರ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Read More

ಬೀದ‌ರ್ : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೀಳಿಗೆ ಇದೀಗ ಮತ್ತೊಂದು ಬಲಿಯಾಗಿದೆ. ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಸುಮಾರು 80 ಸಾವಿರ ರೂ. ಕಳೆದುಕೊಂಡ ಕಾರಣ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್‌ನ ಬ್ರಿಮ್ಸ್ ವೈದ್ಯಕೀಯ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ. ಅನಿಷ್ಕಾರ್ ಚವ್ಹಾಣ್ (21 ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದುಬಂದಿದೆ.ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾದ ನಿವಾಸಿ ಅನಿಷ್ಕಾ‌ರ್ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. ವಸತಿ ನಿಲಯದ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನ್‌ಲೈನ್ ಗೇಮ್ ನಿಂದ ಹಣ ಕಳೆದುಕೊಂಡಿದಕ್ಕೆ ವಿದ್ಯಾರ್ಥಿ ಅನಿಷ್ಕಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಪೋಷಕರು ದೂರು ಸಲ್ಲಿಸಲಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಮಾಡಲಾಗುವುದು ಎಂದ ಎಸ್ಪಿ ಪ್ರದೀಪ್‌ ಹೇಳಿದರು.

Read More

ಬೆಂಗಳೂರು : ಗಡಿಪಾರು ಆದೇಶ ಪ್ರಶ್ನೆಸಿ ಮಹೇಶ ಶೆಟ್ಟಿ ಕೆಮ್ಮರೋಡಿ ಅರ್ಜಿ ಸಲ್ಲಿಸಿದ್ದು ಮಾರ್ಚ್ 26 ರ ವರೆಗೆ ಗಡಿಪಾರು ಆದೇಶ ಅನುಷ್ಠಾನಗೊಳಿಸದಂತೆ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಹೈಕೋರ್ಟ್ ಪೀಠ ಅವರಿಂದ ಹೈಕೋರ್ಟ್ ಪೀಠ ಸೂಚನೆ ನೀಡಿದೆ. ಸೆಪ್ಟೆಂಬರ್ 16ರವರೆಗೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿಗೆ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಮಾಡಲಾಗಿತ್ತು. ಪುತ್ತೂರು, ದಕ್ಷಿಣ ಕನ್ನಡ ಜಿಲ್ಲಾ ಉಪವಿಭಾಗಾಧಿಕಾರಿ ಆದೇಶ ಮಾಡಿದ್ದರು. ಈ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

Read More