Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಇತ್ತೀಚೆಗೆ ಗೋಕಾಕದಲ್ಲಿ ಲಕ್ಷ್ಮಿ ದೇವಿ ಜಾತ್ರೆಯಲ್ಲಿ ಕರ್ತವ್ಯನಿರತ ಎ ASI ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿದ್ದರು. ಇದೀಗ ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್ಐ (ASI) ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ನಾಗನಾಯಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಗನಾಯಕ ರಾತ್ರಿ ಡ್ಯೂಟಿ ಮುಗಿಸಿ ಬೆಳಗ್ಗೆ ಮನೆಗೆ ಬಂದಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ASI ಕೊನೆಯುಸಿರೆಳೆದಿದ್ದಾರೆ. ನಗರದ ಪೊಲೀಸ್ ಗೃಹದಲ್ಲಿ ವಾಸವಿದ್ದ ಮನೆಯಲ್ಲಿ ಕುಸಿದು ಬಿದ್ದು ಎಎಸ್ಐ ನಾಗನಾಯಕ ಮೃತಪಟ್ಟಿದ್ದಾರೆ
ಬೆಂಗಳೂರು : ಬೆಂಗಳೂರಿನಲ್ಲಿ ಡ್ರಗ್ಸ್ ವಿರುದ್ಧ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು ಬಂಡಿಪಾಳ್ಯದ ಮನೆಯಲ್ಲಿದ್ದ 2.5 ಕೋಟಿ ಮೌಲ್ಯದ ಡ್ರಗ್ಸ್ ಇದೀಗ ಜಪ್ತಿ ಮಾಡಿದ್ದಾರೆ. ಓರ್ವ ವಿದೇಶ ಪ್ರಜೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನೈಜೀರಿಯಾ ಮೂಲದ ಒಕೋಕೆ ಕ್ರಿಸ್ತಫಾರ್ ಒಕೆಡೀಲ್, ಹಾಗೂ ತಮಿಳುನಾಡಿನ ನವೀನ್ ರಾಜ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಸಿಸಿಬಿಯ ಮಾದಕ ದ್ರವ್ಯ ನಿಗ್ರಹದಳದ ಕಾರ್ಯಾಚರಣೆ ನಡೆಸಿದ್ದು ಬಂಡಿಪಾಳ್ಯದ ನವೀನ್ ರಾಜ್ ಮನೆಯಲ್ಲಿ ಡ್ರಗ್ಸ್ ಜತ್ತಿ ಮಾಡಲಾಗಿದೆ. ಡಾರ್ಕ್ ವೆಬ್ ಮೂಲಕ ಡ್ರಿಕ್ಸ್ ತಂದು ನವೀನ್ ಮಾರಾಟ ಮಾಡುತ್ತಿದ್ದ. ಸ್ನೇಹಿತರಿಂದ ತರಿಸಿಕೊಂಡು ವಿದೇಶಿ ಪ್ರಜೆ ಮಾರಾಟ ಮಾಡುತ್ತಿದ್ದ ಸ್ಥಳೀಯರು ಮತ್ತು ಐಟಿಬಿಟಿ ಉದ್ಯೋಗಗಳು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು.ಈ ಹಿಂದೆಯೂ ಕೂಡ ಎರಡು ಬಾರಿ ಒಕ್ಕೋಕೆ ಕ್ರಿಸ್ಟಾಫರ್ ಅರೆಸ್ಟ್ ಆಗಿದ್ದ ಬೇಲ್ ಮೇಲೆ ಹೊರಗಡೆ ಬಂದು ಮತ್ತೆ ಅದೇ ಕೆಲಸ ಮುಂದುವರಿಸಿದ್ದಾನೆ. ಇದೀಗ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿ ಜೈಲಿಗೆ ಅಟ್ಟಿದ್ದಾರೆ.
ಧಾರವಾಡ : ಧಾರವಾಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ಚಲಿಸುತ್ತೀದ್ದ ಲಾರಿಯ ಚಕ್ರದ ಅಡಿಗೆ ಸಿಲುಕಿ ಇಬ್ಬರು ಯುವಕರು ಲಾರಿಯ ಚಕ್ರದ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಯರಿಕೊಪ್ಪ ಬಳಿ ಮಿಶ್ರಾಪೇಡಾ ಮುಂಭಾಗ ನಡೆದಿದೆ. ಮೃತರನ್ನು ಧಾರವಾಡದ ಗೌಳಿ ಗಲ್ಲಿಯ ಕಿಶನ್ ಖಾನವಾಲೆ (30) ಮತ್ತು ಕಿರಣ ಖಡವಾಕರ್ (32) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಯರಿಕೊಪ್ಪ ಬಳಿ ಮಿಶ್ರಾಪೇಡಾ ಮುಂಭಾಗ ಸ್ಕೂಟಿ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಕೂಟಿ ಸವಾರರು ಲಾರಿ ಚಕ್ರದಡಿ ಸಿಲುಕಿದ್ದಾರೆ. ಪರಿಣಾಮ ಮೃತದೇಹಗಳು ರಸ್ತೆಯಲ್ಲಿ ಛಿದ್ರಗೊಂಡು ಬಿದ್ದಿದ್ದವು. ಘಟನೆಯ ಬಳಿಕ ಸ್ಥಳೀಯರು ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಸ್ಥಳೀಯರ ಮಾಹಿತಿ ಆಧರಿಸಿ ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ತೆರವುಗೊಳಿಸಿ, ಆಸ್ಪತ್ರೆಗೆ ರವಾನಿಸಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದ್ದು, ತನ್ನ ಮೂರು ವರ್ಷದ ಮೊಮ್ಮಗನಿಗೆ ಅಜ್ಜನೇ ಸಾರಾಯಿ ಕುಡಿಸಿದ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ಪಟ್ಟಣದ ಬಾರ್ವೊಂದರಲ್ಲಿ ನಡೆದಿದೆ. ಮಗುವಿನ ಎದುರು ತಾನೂ ಸಾರಾಯಿ ಕುಡಿದ ದ್ದಲ್ಲದೆ ಎಳೆ ವಯಸ್ಸಿನ ಮೊಮ್ಮಗನಿಗೂ ಸಾರಾಯಿಯ ರುಚಿ ತೋರಿಸಿದ್ದಕ್ಕೆ ವೃದ್ಧನ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶನಿವಾರ ರಾತ್ರಿ ರಾಯಭಾಗ ಪಟ್ಟಣದ ಬಾರ್ಗೆ ತನ್ನ ಮೂರು ವರ್ಷದ ಮೊಮ್ಮಗ ನೊಂದಿಗೆ ಆಗಮಿಸಿದ ವ್ಯಕ್ತಿ, ಆತನ ಎದುರು ತಾನೂ ಕುಡಿದದ್ದಲ್ಲದೆ, ಮಗುವಿಗೂ ಸಾರಾಯಿ ಕುಡಿಸಿದ್ದಾನೆ. ಆ ವೇಳೆ, ಸ್ಥಳೀಯರು ಕುಡಿಸೋದು ಬೇಡ, ಬೇಡ ಎಂದರೂ ಅವರ ಮಾತಿಗೆ ಬೆಲೆ ಕೊಡದೆ, ತಾನೇ ಗ್ಲಾಸ್ ನಲ್ಲಿ ಸರಾಯಿ ಹಾಕಿಕೊಟ್ಟಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಇದು ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಾರ್ಮತ್ತು ಆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಅಬಕಾರಿ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆಯೇ ಎಂದು…
ಬೀದರ್ : ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಇದೀಗ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿದೆ. ಬೀದರ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿದೆ. ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿದೆ. ಉದ್ಯಮಿ ಸಂಜು ಕುಮಾರ್ ಸೂಗೂರೆ ದೂರನ್ನು ಆಧರಿಸಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಉದ್ಯಮಿ ಸಂಜುಕುಮಾರ ಸುಗುರೆ 99 ಲಕ್ಷ ಹಣ ಕೊಟ್ಟಿದ್ದರು. ಚುನಾವಣೆ ಸಮಯದಲ್ಲಿ ಶರಣು ಸಲಗರ ಸಂಜು ಕುಮಾರ್ ಸುಗುರೆ ಬಳಿ 99 ಲಕ್ಷ ಹಣ ಪಡೆದಿದ್ದಾರೆ. ಖಾಲಿ ಚಕ್ ಪಡೆದು ಸಂಜು ಕುಮಾರ್ 99 ಲಕ್ಷ ರೂಪಾಯಿ ಹಣ ಕೊಟ್ಟಿದ್ದಾರೆ. ಆದರೆ ಹಣ ವಾಪಸ್ ಕೊಡದ ಹಿನ್ನೆಲೆಯಲ್ಲಿ ಸಂಜು ಕುಮಾರ್ ಶರಣು ಸಲಗರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದಾರೆ.
ಬಾಗಲಕೋಟೆ : ರಾಜಕಾರಣದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳು ಸಹಜ ಏಕತೆ ಮುಖ್ಯವಾಗಿದೆ. ಬಸನಗೌಡ ಪಾಟೀಲ ಹಾಗೂ ನಾನು ಒಂದೇ ಜಿಲ್ಲೆಯವರು ಎಂದು ಮುರುಗೇಶ್ ನಿರಾಣಿ ಹೇಳಿಕೆ ನೀಡಿದರು. ಬಾಗಲಕೋಟೆ ಜಿಲ್ಲೆಯ ಅರಬಕವಿ ಬನಹಟ್ಟಿ ತಾಲೂಕಿನ ಎಲ್ಲಟ್ಟಿ ಗ್ರಾಮದಲ್ಲಿ ನಿನ್ನೆ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೇನೆ ಮಾಜಿ ಸಚಿವ ಮುರುಗೇಶ್ ನಿರಾಣಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು ಹಾಡಿ ಹೊಗಳಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಮುರುಗೇಶ್ ನಿರಾಣಿ ಹಾಡಿ ಹೊಗಳಿದ್ದಾರೆ. ಯತ್ನಾಳ ಗುಡ್ ಬ್ಯಾಟ್ಸ್ಮನ್ ಬೌಲರ್ ಮತ್ತು ವಿಕೆಟ್ ಕೀಪರ್ ಆಗಿದ್ದಾರೆ. ಶ್ರೇಷ್ಠ ಬ್ಯಾಟ್ಸಮನ್ ಆಗಿರುವ ನೀವು ಎಲ್ಲ ಬೌಲರ್ ಗಳಿಗೆ ಶಿಕ್ಷೆ ಹೊಡೆಯಬೇಡಿ. ಒಳ್ಳೆಯ ಬೌಲರ್ ಗೆ ಮಾತ್ರ ಸಿಕ್ಸ್ ಹೊಡೆಯಿರಿ. ರಾಜಕಾರಣದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳು ಸಹಜ ಏಕತೆ ಮುಖ್ಯ ಬಸನಗೌಡ ಹಾಗೂ ನಾನು ಒಂದೇ ಜಿಲ್ಲೆಯವರು ಎಂದು ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದು ಈ ಒಂದು ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು : ಧರ್ಮಸ್ಥಳದ ವಿರುದ್ಧ ಷಡ್ಯಂತರ ಮತ್ತು ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ SIT ಕೋರ್ಟ್ ಗೆ ಸಲ್ಲಿಸಿದ ವರದಿಯಲ್ಲಿ ಮತ್ತಷ್ಟು ಸ್ಪೋಟಕವಾದ ಅಂಶಗಳು ಬಯಲಾಗಿದೆ. ಜಯಂತ್ ರೈಲಿನಲ್ಲಿ ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದ ಫ್ಲೈಟ್ ನಲ್ಲಿ ಚಿನ್ನಯ್ಯ, ಗಿರೀಶ್ ಮಟಣ್ಣನವರ್ ಹಾಗು ಸುಜಾತ ಭಟ್ ತೆರಳಿದ್ದಾರೆ ಎಂದು ಕೋರ್ಟಿಗೆ ಸಲ್ಲಿಸಿದ ಪ್ರಾಥಮಿಕ ವರದಿಯಲ್ಲಿ ಉಲ್ಲೇಖವಾಗಿದೆ.. ದೆಹಲಿಯಲ್ಲಿ ರಾತ್ರಿ ಮಲಗಿದ್ದಾಗ ಜಯಂತ್ ಗೆ ಕೆಟ್ಟ ಕನಸು ಬಿದ್ದಿತ್ತು. ಒಂದೇ ರೂಮ್ನಲ್ಲಿ ಚಿನ್ನಯ, ಮಟ್ಟಣ್ಣನವರ್ ಮತ್ತು ಜಯಂತ್ ಮಲಗಿದ್ದಾರೆ. ಕೆಟ್ಟ ಕನಸು ಬಿದ್ದು ಜಯಂತ್ ಕಿರುಚಿಕೊಂಡಿದ್ದಾನೆ. ಹಾಗಾಗಿ ಬುರುಡೆ ತರಲು ಒಪ್ಪದೇ ಆತ ಹೆದರಿ ವಾಪಸ್ ಆಗಿದ್ದಾನೆ. ದೆಹಲಿಯಲ್ಲಿಯೇ ಬುರುಡೆಯನ್ನು ಬಿಟ್ಟು ಬೆಂಗಳೂರಿಗೆ ಜಯಂತ ವಾಪಸ್ ಆಗಿದ್ದಾನೆ. ಬೆಂಗಳೂರಿಗೆ ಜಯಂತ್ ಗಿರೀಶ ಮಟ್ಟಣ್ಣನವರ್ ಹಾಗೂ ಸುಜಾತ ಭಟ್ ವಾಪಸ್ ಆಗಿದ್ದಾರೆ. ಮತ್ತೆ ವಿಮಾನದ ಮೂಲಕ ತೆರಳಿದ್ದಾನೆ. ನಂತರ ರೈಲಿನ ಮೂಲಕ ಬುರುಡೆಯನ್ನು ತಂದಿದ್ದಾನೆ. ದೆಹಲಿಯಿಂದ ನೇರವಾಗಿ ಜಯಂತ್ ಮಂಗಳೂರಿಗೆ ಬಂದಿದ್ದಾನೆ. ಬಳಿಕ…
ಬೆಂಗಳೂರು : ಬೆಂಗಳೂರಿನಲ್ಲಿ ನಕಲಿ ಗೋಲ್ಡ್ ಲೋನ್ ಸೃಷ್ಟಿ ಮಾಡಿ ಕೋಟಿ ಕೋಟಿ ಆಂಜನೇಯ ಸಿಗುವ ಪ್ರಕರಣ ಬೆಳಕಿಗೆ ಬಂದಿದೆ ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸಿನ ಕೆನರಾ ಬ್ಯಾಂಕ್ ನಲ್ಲಿ ಈ ಒಂದು ಘಟನೆ ನಡೆದಿದೆ ಕೆನರಾ ಬ್ಯಾಂಕ್ ಹಿರಿಯ ಮ್ಯಾನೇಜರ್ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಹಿರಿಯ ವ್ಯವಸ್ಥಾಪಕ ಮ್ಯಾನೇಜರ್ ಎನ್ ರಘು ವಿರುದ್ಧ ಈ ಒಂದು ವಂಚನೆ ಆರೋಪ ಕೇಳಿ ಬಂದಿದ್ದು, 41 ಗ್ರಾಹಕರಿಗೆ ಮಕ್ಮಲ್ ಟೋಪಿ ಹಾಕಿ ವಂಚನೆ ಎಸಗಿದ್ದಾನೆ 3.11 ಕೋಟಿ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ. ಸುಮಾರು 41 ಖಾತೆಗಳಿಂದ ನಕಲಿ ಗೋಲ್ಡ್ ಲೋನ್ ಮಾಡಿಸಿ ವಂಚನೆ ಎಸಗಿದ್ದಾನೆ.
ಬೆಂಗಳೂರು : ಎರಡು ಮೂರು ತಿಂಗಳಿನಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಬೇಕಿದೆ. ಅದಕ್ಕೂ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ಪ್ರಿಯಾಂಕ್ ಖರ್ಗೆ ಅವರಿಗೂ ಇದರ ಬಗ್ಗೆ ತಿಳಿಸಿದ್ದು, ಮೀಸಲಾತಿ ವಿಚಾರವಾಗಿ ನ್ಯಾಯಾಲಯಗಳಲ್ಲಿ ಇರುವ ಕಂಟಕಗಳನ್ನು ಬಗೆಹರಿಸಿ, ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಿನ್ನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಭಾನುವಾರ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೀಸಲಾತಿ ನಿಗದಿಯಾದ ಮೇಲೆ ಜಿಬಿಎ ಚುನಾವಣೆಗೆ ತಯಾರಿ ನಡೆಸಿದರಾಯಿತು ಎಂದುಕೊಂಡರೆ ನೀವುಗಳು ಗೆಲ್ಲಲು ಸಾಧ್ಯವಿಲ್ಲ. ಏಕೆಂದರೆ ನೀವು ಎಷ್ಟೇ ದೊಡ್ಡ ನಾಯಕರಾದರೂ ಸಹ ಎಲ್ಲಾ ನಿಗದಿಯಾದಾಗ ಮಾಡುತ್ತೇನೆ ಎಂದರೆ, ಈ ಡಿ.ಕೆ.ಶಿವಕುಮಾರ್ ನಿಮ್ಮನ್ನು ಗುರುತಿಸುವುದಿಲ್ಲ. ಇಂದಿನಿಂದ ಆಕಾಂಕ್ಷಿ ಅಭ್ಯರ್ಥಿಗಳ ಅರ್ಜಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದರು. ಸಾಮಾನ್ಯ ಅಭ್ಯರ್ಥಿಗಳಿಗೆ 50 ಸಾವಿರ, ಪರಿಶಿಷ್ಟ ಅಭ್ಯರ್ಥಿಗಳಿಗೆ 25 ಸಾವಿರ. ಈ ಹಣವು…
ಪರಮೇಶ್ವರನು ಅಡ್ಡ ನಾಮಗಳನ್ನು ಧರಿಸುತ್ತಾನೆ ಎಂಬುದು ನಮಗೆಲ್ಲ ತಿಳಿದ ವಿಚಾರ. ಶಿವನು ಅಡ್ಡ ನಾಮಗಳನ್ನು ಇಡುತ್ತಾನೆ. ಅದೇ ರೀತಿ, ವಿಷ್ಣುನು ನಿಲುವು ನಾಮಗಳನ್ನು ಧರಿಸುತ್ತಾನೆ. ಶಿವ–ಕೇಶವರಲ್ಲಿ ಭೇದವಿಲ್ಲವೆಂದಾಗ, ಈ ನಾಮಗಳಲ್ಲಿ ಮಾತ್ರ ಏಕೆ ಭೇದ? ಶಿವನು ಅಡ್ಡ ನಾಮಗಳನ್ನು, ವಿಷ್ಣುನು ನಿಲುವು ನಾಮಗಳನ್ನು ಏಕೆ ಧರಿಸುತ್ತಾರೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,…














