Author: kannadanewsnow05

ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಹೇಳಿದ ದೂರುದಾರ ಚೆನ್ನಯ್ಯ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿನ್ನಯ್ಯ ಬಾಯಿ ಬಿಟ್ಟಿರುವ ಅವರ ವಿರುದ್ಧ ಇದೀಗ ಎಸ್ಐಟಿ ತನಿಖಾ ಅಸ್ತ್ರ ಪ್ರಯೋಗಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಆಶ್ರಯ ಕೊಟ್ಟವರಿಂದ ಷಡ್ಯಂತರ ಮಾಡಿದವರಿಗೆ ತನಿಖಾ ಬಿಸಿ ತಟ್ಟಲಿದೆ. ಇಂದಿನಿಂದ ಪೊಲೀಸ್ ಸ್ಟೈಲ್ ನಲ್ಲಿ ಎಸ್ಐಟಿ ತನಿಖೆ ನಡೆಸಲಿದೆ ಚೆನ್ನಯ್ಯ ಹೇಳಿರುವ ಎಲ್ಲರಿಗೂ ಪ್ಲಾನ್ ಮಾಡಿಕೊಳ್ಳುತ್ತಿದೆ. ಇಂದು ಬಿಎನ್ಎಸ್ 183 ಅಡಿ ಚಿನ್ನಯ್ಯ ಹೇಳಿಕೆ ದಾಖಲು ಸಾಧ್ಯತೆ ಇದೆ ಪ್ರಧಾನ ನ್ಯಾಯಾಧೀಶರು ಇಂದು ಚಿನ್ನಯ ಹೇಳಿಕೆ ದಾಖಲು ಮಾಡುವ ಸಾಧ್ಯತೆ ಇದೆ ಇದಕ್ಕೂ ಮುನ್ನ ವಿಚಾರಣ ಹೇಳಿಕೆಯ ಆಧಾರದಲ್ಲಿ ನೋಟಿಸ್ ನೀಡಲು ಪ್ಲಾನ್ ಮಾಡಿದೆ.

Read More

ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…

Read More

ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಮಾತನಾಡಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಈಗ ಒಂದೊಂದೇ ಸತ್ಯಗಳು ಹೊರ ಬರುತ್ತಿವೆ. ಇದರ ಬಗ್ಗೆ ನಾನು ಈಗ ಹೆಚ್ಚೇನೂ ಮಾತನಾಡುವುದಿಲ್ಲ. ಎಲ್ಲಾ ಆರೋಪಗಳು ತೊಳೆದು ಹೋದಂತಾಗಿದೆ ಎಂದು ತಿಳಿಸಿದ್ದಾರೆ. ತನಿಖೆಯಿಂದ ಇನ್ನೂ ಎಲ್ಲಾ ವಿಚಾರಗಳು ಗೊತ್ತಾಗಲಿವೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಹೀಗೇಯೇ ಇರಲಿ ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆ ಬಳಿಕ ಬೆಳ್ತಂಗಡಿ ಸಿವಿಲ್ ಮತ್ತು JMFC ಕೋರ್ಟ್ ಗೆ ಹಾಜರುಡಿಸಿದ್ದರು. ವಿಚಾರಣೆ ನಡೆಸಿದ ಜಡ್ಜ್ ವಿಜಯೇಂದ್ರ ಅವರು 10 ದಿನಗಳ ಕಾಲ ಚಿನ್ನಯ್ಯನನ್ನು SIT ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

Read More

ಮಂಗಳೂರು : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಬಂಧನವಾದ ಬೆನ್ನಲ್ಲೇ ಧರ್ಮಸ್ಥಳ ದೇವಸ್ಥಾನದ ಅಧಿಕೃತ ಸಾಮಾಜಿಕ ಜಾಲತಾಣ ಪುಟದಲ್ಲಿ ಶಿವ ರುದ್ರತಾಂಡವ ಮಾಡುತ್ತಿರುವ ಫೋಟೋವನ್ನು ಅಪ್ಲೋಡ್‌ ಮಾಡಲಾಗಿದೆ.ಧರ್ಮ ವಿಜಯದ ಸಂಕೇತವಾಗಿ ಧರ್ಮಸ್ಥಳ ದೇವಸ್ಥಾನದ ಹಿಂದೆ ಶಿವ ರುದ್ರತಾಂಡವದ ಫೋಟೋ ಅನಾವರಣವಾಗಿದೆ. ಧರ್ಮಸ್ಥಳ ದೇವರ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಷಡ್ಯಂತ್ರ ಮಾಡಿ ಗ್ಯಾಂಗ್‌ ಸುಳ್ಳಿನ ಕೋಟೆ ಕಟ್ಟಿತ್ತು. ಒಂದೊಂದೇ ಸುಳ್ಳಿನ ಕೋಟೆಗಳು ಕಳಚಿ ಬಿದ್ದು ಷಡ್ಯಂತ್ರ ಮಾಡುತ್ತಿದವರು ಬಂಧನವಾಗುತ್ತಿದ್ದಂತೆ ಆಡಳಿತ ಮಂಡಳಿ ಶಿವರುದ್ರ ತಾಂಡವದ ಫೋಟೋ ಹಾಕಿ ನಮೋ ಮಂಜುನಾಥ ಎಂದು ಬರೆದು ಅಪಪ್ರಚಾರ ಮಾಡಿದವರಿಗೆ ಸಂದೇಶ ಕಳುಹಿಸಿದೆ. ಶಿವ ರುದ್ರ ತಾಂಡವ ಸಂತೋಷ ಮತ್ತು ಭಾವಪರಾವಶತೆಯನ್ನು ಕೋಪವನ್ನು ಸಂಕೇತಿಸುತ್ತದೆ. ಅಧರ್ಮದ ವಿನಾಶವನ್ನು , ಅಹಂಕಾರದ ನಾಶವನ್ನು ಶಿವರುದ್ರತಾಂಡವ ಸೂಚಿಸುತ್ತದೆ. ಢಮರುಗ ಹಿಡಿದ ರೌದ್ರತೆ ತೋರುವ ಶಿವನ ಉಗ್ರ ಮತ್ತು ವಿನಾಶಕಾರಿ ಸ್ವರೂಪವನ್ನು ಬಿಂಬಿಸುತ್ತದೆ.

Read More

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಅಣ್ಣ ತಾನಾಸಿಯನ್ನು ಇದೀಗ ಪೊಲೀಸರು ವಶಕ್ಕೆ‌‌ ಪಡೆದಿದ್ದಾರೆ. ಇಂದು ಬೆಳಗ್ಗೆ ತಾನಾಸಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮಾಡುತ್ತಿದ್ದ ಜಾಗಕ್ಕೆ ಹೋಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಸ್‌ಐಟಿ (SIT) ವಿಚಾರಣೆಯ ಸಂದರ್ಭದಲ್ಲಿ ಚಿನ್ನಯ್ಯ ಅಣ್ಣ ತಾನಾಸಿಯ ಬಗ್ಗೆ ಕೆಲ ಮಾಹಿತಿ ತಿಳಿಸಿದ್ದ ಹಿನ್ನೆಲೆಯಲ್ಲಿ ಈಗ ಅಣ್ಣನನ್ನು ವಶಕ್ಕೆ ಪಡೆದಿದೆ. ಎಸ್‌ಐಟಿ ಚಿನ್ನಯ್ಯನ ವಿಚಾರಣೆ ನಡೆಸುತ್ತಿದ್ದ ವೇಳೆ ತಾನು ಹೆಣ ಹೂಳುತ್ತಿರುವ ವಿಚಾರ ಅಣ್ಣ ತಾನಾಸಿಗೂ ತಿಳಿದಿತ್ತು ಎಂದು ಹೇಳಿದ್ದ. ಈ ಕಾರಣಕ್ಕೆ ತಾನಾಸಿಯನ್ನು ಎಸ್‌ಐಟಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಬೆಳ್ತಂಗಡಿ ಕೋರ್ಟ್‌ ಈಗ ಚಿನ್ನಯ್ಯನನ್ನು 10 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದೆ. ಶುಕ್ರವಾರ ವಿಚಾರಣೆಗೆ ಬಂದಿದ್ದ ಚಿನ್ನಯ್ಯನಿಗೆ ಎಸ್‌ಐಟಿ ಪೊಲೀಸರು ನಿರಂತರ ಪ್ರಶ್ನೆ ಕೇಳಿದ್ದರು. ರಾತ್ರಿಯೂ ಬೆಳ್ತಂಗಡಿ ಠಾಣೆಯಲ್ಲೇ ಇದ್ದ ಚಿನ್ನಯ್ಯನನ್ನು ಇಂದು ಬೆಳಗ್ಗೆ ಬಂಧಿಸಿದ್ದರು.

Read More

ಚಿತ್ರದುರ್ಗ : ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವೀರೇಂದ್ರ ಪಪ್ಪಿ ಮನೆಯಲ್ಲಿ ಸುಮಾರು 12 ಕೋಟಿ ನಗದು ಹಣವನ್ನು ಇಡಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಸುಮಾರು 1 ಕೋಟಿ ವಿದೇಶಿ ಕರೆನ್ಸಿ ಸೇರಿದಂತೆ ಸುಮಾರು 12 ಕೋಟಿ ನಗದು ಪತ್ತೆಯಾಗಿದೆ. ಶಾಸಕ ಕೆಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ದಾಳಿ ಮಾಡಿದಾಗ 6 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ ನಾಲ್ಕು ವಾಹನ ಜಪ್ತಿ ಮಾಡಿದ್ದಾರೆ. ನಿನ್ನೆ ಸಿಕ್ಕಿಂನ ಗ್ಯಾಂಗ್ಟಾಕ್ ನಲ್ಲಿ ಶಾಸಕ ಕೆ ಸಿ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಅರೆಸ್ಟ್ ಮಾಡಲಾಗಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ನಿನ್ನೆ ಚಳ್ಳೆಕೆರೆ ಪಟ್ಟಣದಲ್ಲಿರುವ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು ಕೆ ಸಿ…

Read More

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು ಅರೆಸ್ಟ್ ಮಾಡಿದ್ದಾರೆ. ಎಸ್ಐಟಿ ವಿಚಾರಣೆಯ ವೇಳೆ, ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆಯೇ ಇದ್ದಾರೆ ಎಂದು ಮಾಸ್ಕ್ ಮ್ಯಾನ್ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಧರ್ಮಸ್ಥಳದಲ್ಲಿ ಉತ್ಖನನ ನಿಲ್ಲಿಸಿ ಮಾಸ್ಕ್ ಮ್ಯಾನ್‌ನನ್ನೇ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಆತ ಹೇಳಿದ್ದೆಲ್ಲಾ ಬುರುಡೆ ಎಂದು ಕನ್ಫರ್ಮ್ ಆದ ಬಳಿಕ ಮಾಸ್ಕ್ ಮ್ಯಾನ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಸತ್ಯದ ಅನಾವರಣವಾಗಿದೆ. ನನಗೆ ಈ ರೀತಿ ಹೇಳಲು ಹೇಳಿದ್ರು, ನಾನು ಈ ರೀತಿ ಹೇಳಿದೆ. ಬುರುಡೆ ತೆಗೆದುಕೊಂಡು ಕೋರ್ಟ್‌ಗೆ ಒಪ್ಪಿಸಿ ಅಂದ್ರು, ನಾನು ಒಪ್ಪಿಸಿದೆ. ಕೋರ್ಟ್‌ಗೆ ಹಾಜರುಪಡಿಸಿದ ಬುರುಡೆ ಎಲ್ಲಿಂದ ಬಂತು ನನಗೆ ಗೊತ್ತಿಲ್ಲ ಎಂದು ಮಾಸ್ಕ್ ಮ್ಯಾನ್ ಚೆನ್ನ ಹೇಳಿದ್ದಾನೆ. ಮಾಸ್ಕ್ ಮ್ಯಾನ್ ವಿರುದ್ಧವೇ ರಿವರ್ಸ್ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು…

Read More

ದಕ್ಷಿಣಕನ್ನಡ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಅನಾಮಿಕ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ಮಾಸ್ಕ್‌ಮ್ಯಾನ್‌ನ ದೂರಿನ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಯ ನಂತರ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧನವಾಗಿದೆ. ಬಳಿಕ ಚಿನ್ನಯ್ಯನನ್ನು ಬೆಳ್ತಂಗಡಿ ಸಿವಿಲ್ ಹಾಗು JMFC ಕೋರ್ಟ್ ಗೆ ಹಾಜರುಪಡಿಸಲಾಯಿತು.ಈ ವೇಳೆ ಜಡ್ಜ್ ವಿಜಯೇಂದ್ರ ಚಿನ್ನಯ್ಯನನ್ನು ಹತ್ತು ದಿನಗಳ ಕಾಲ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಮಾಸ್ಕ್​ಮ್ಯಾನ್​ ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಬಂಧಿಸಿದ್ದಾರೆ. ತಲೆಬುರುಡೆ ಕೇಸ್​ನಲ್ಲಿ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಿವಿಲ್ ಮತ್ತು JMFC ಕೋರ್ಟ್​ಗೆ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಹಾಜರುಪಡಿಸಿದರು. ವಿಚಾರಣೆಯ ವೇಳೆ SIT ಅಧಿಕಾರಿಗಳು ಜಡ್ಜ್ ಗೆ ಚಿನ್ನಯ್ಯನನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡಿ ಎಂದು ಮನವಿ ಮಾಡಿದರು. ನಾನು ಹೆಣ ಹೂತು ಹಾಕಿದ್ದು…

Read More

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಆರೋಪಿಗಳ ಜೈಲು ವರ್ಗಾವಣೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಲಾಗಿದೆ. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 9 ರವರೆಗೆ ವಿಸ್ತರಿಸಲಾಗಿದೆ. ಹೌದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಸಹ ಆರೋಪಿಗಳು ಸಲ್ಲಿಸಿದ್ದ ಜೈಲು ವರ್ಗಾವಣೆ ಅರ್ಜಿಯ ವಿಚಾರಣೆಯನ್ನು ಸೆಷನ್ಸ್ ಕೋರ್ಟ್ ಮುಂದೂಡಿದೆ. ಜತೆಗೆ, ಪವಿತ್ರಾ ಗೌಡ ಪರ ವಕೀಲರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಲಾಗಿದೆ. ಈ ನಡುವೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳಿಗೆ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 9ರ ವರೆಗೆ ವಿಸ್ತರಿಸಲಾಗಿದೆ. ಇದೇ ವೇಳೆ, ಪವಿತ್ರಾ ಗೌಡ ಪರ ವಕೀಲರು ಸ್ಟ್ಯಾಚುಟರಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ ಅನ್ನು ಸಿಆರ್‌ಪಿಸಿ ಅಡಿಯಲ್ಲಿ ಸಲ್ಲಿಸಲಾಗಿದ್ದು, ಹೊಸ ಬಿಎನ್‌ಎಸ್‌ಎಸ್ ಕಾಯ್ದೆ ಅಡಿಯಲ್ಲಿ ಸಲ್ಲಿಸಿಲ್ಲ ಎಂದು ವಕೀಲ ಬಾಲನ್…

Read More

ಬೆಂಗಳೂರು : ರಾಜ್ಯದ ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಕರಾವಳಿ ಮತ್ತು ಮಲೆನಾಡು ಪ್ರದೇಶದ ಒಟ್ಟು 9 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದ್ದು ಈ ಒಂದು 9 ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಳಗಾವಿ ಹಾಗೂ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ, ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Read More