Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು ಬೆಂಗಳೂರಿನ ಪ್ರಮುಖ ರಸ್ತೆಗಳೆಲ್ಲವೂ ಸಂಪೂರ್ಣವಾಗಿ ಮಳೆ ನೀರಿನಿಂದ ತುಂಬಿಕೊಂಡು ನದಿಯಂತೆ ಆಗಿವೆ. ಇನ್ನು ಭಾರಿ ಮಳೆಯಿಂದಾಗಿ ಗೋಡೆ ಕೊಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಹಿನ್ನೆಲೆ ಇದೀಗ ಸಿಎಂ ಸಿದ್ದರಾಮಯ್ಯ & ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ರದ್ದಾಗಿದೆ. ಹೌದು ಮಳೆ ಹಾನಿ ಪ್ರದೇಶ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಪ್ರದಕ್ಷಣೆ ರದ್ದಾಗಿದೆ. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಬೇಕಿತ್ತು. ಆದರೆ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಸಿಟಿ ರೌಂಡ್ಸ್ ಗೆ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡ ನಂತರ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಕೆಲವು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಇಂದು ನಗರ ಪ್ರದಕ್ಷಿಣೆ…
ಹಾವೇರಿ : ಡಿಸೆಂಬರ್ ವೇಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಸಂಪುಟ ವಿಸ್ತರಣೆ ವಿಚಾರ ಕುರಿತಂತೆ ಈಗಾಗಲೇ ಶಾಸಕ ಕೆಎಂ ಶಿವಲಿಂಗೇಗೌಡ ನನಗೂ ಈ ಬಾರಿ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ನಾನು ಸಹ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಆದರೆ ನನ್ನನ್ನು ಪರಿಗಣಿಸಲಿ ಎಂದು ಉಪಸಭಾಪತಿ ರುದ್ರಪಲಮಾಣಿ ಹೇಳಿಕೆ ನೀಡಿದ್ದು, ನಮ್ಮ ಸಮುದಾಯದಿಂದ ನಾನೊಬ್ಬನೇ ಶಾಸಕನಿದ್ದೇನೆ. ಹೀಗಾಗಿ ಸಂಪುಟ ವಿಸ್ತರಣೆ ಆದರೆ ನನ್ನನ್ನು ಪರಿಗಣಿಸಲಿ. ಕಳೆದ ಬಾರಿಯೂ ನನಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇತ್ತು. ಆದರೆ ಸುರ್ಜೆವಾಲಾ ಅವರು ಡಿಪ್ಯೂಟಿ ಸ್ಪೀಕರ್ ಮಾಡಿದರು. ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದು ಹಾವೇರಿಯಲ್ಲಿ ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿಕೆ…
ಬೆಂಗಳೂರು : ಬೆಂಗಳೂರಿನಲ್ಲಿ ಈಗಾಗಲೇ ವರುಣ ಅಪರಿಸುತ್ತಿದ್ದು ಕೆಲವು ಪ್ರದೇಶಗಳಲ್ಲಿ ಅಂತೂ ಬಾರಿ ಮಳೆಯಿಂದಾಗಿ ರಸ್ತೆಗಳು ತುಂಬಿ ನದಿಯಂತೆ ಆಗಿವೆ. ಇನ್ನು ಕೆಲವು ನಗರಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಯಾಗಿದೆ.ಅಲ್ಲದೆ ಇಂದು ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಇಷ್ಟೆಲ್ಲಾ ಆದರೂ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಲ್ಲಿ ಮಳೆ ಹೆಚ್ಚಾಗಿದೆ ಅಷ್ಟೇ ಯಾವುದೇ ದೊಡ್ಡ ಸಮಸ್ಯೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಿದೆ ಅಷ್ಟೇ ಆದರೆ ಯಾವುದೇ ದೊಡ್ಡ ಸಮಸ್ಯೆ ಇಲ್ಲ ಎಂದು ತಿಳಿಸಿದರು. ಮಳೆ ಬರಬೇಕು ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೇನೆ. ಮಳೆ ಬಂದರೆ ರೈತರಿಗೆ ಒಳ್ಳೆಯದಾಗುತ್ತದೆ. ಜಲಾಶಯಗಳು ತುಂಬುತ್ತವೆ. ಒಬ್ಬರು ಮೃತಪಟ್ಟಿರುವ ಮಾಹಿತಿ ಇದೆ ಆದರೆ ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದರು. ಮಳೆ ಹಾನಿ ಪ್ರದೇಶದಲ್ಲಿ ನಮ್ಮ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿಗೆ ವಾಪಸ್ ಹೋಗುತ್ತಿದ್ದೇನೆ. ಸಿಎಂ ಸಿದ್ದರಾಮಯ್ಯ…
ಬೆಂಗಳೂರು : ಬೆಂಗಳೂರಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು ಬೆಂಗಳೂರಿನ ಪ್ರಮುಖ ರಸ್ತೆಗಳೆಲ್ಲವೂ ಸಂಪೂರ್ಣವಾಗಿ ಮಳೆ ನೀರಿನಿಂದ ತುಂಬಿಕೊಂಡು ನದಿಯಂತೆ ಆಗಿವೆ. ಇನ್ನು ಭಾರಿ ಮಳೆಯಿಂದಾಗಿ ಗೋಡೆ ಕೊಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು ಇದೀಗ ಸಿಎಂ ಸಿದ್ದರಾಮಯ್ಯ ನಗರ ಪ್ರದಕ್ಷಿಣೆ ಹಾಕುವ ಮಾರ್ಗದಲ್ಲಿ ಬೃಹತ್ ಗಾತ್ರದ ಮರ ಒಂದು ಉರುಳಿ ಬಿದ್ದಿದೆ. ಹೌದು ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಕೆಲವು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಇಂದು ನಗರ ಪ್ರದಕ್ಷಿಣೆ ಹಾಕಲಿದ್ದಾರೆ. ಈ ವೇಳೆ ಸಿಎಂ ನಗರ ಪ್ರದಕ್ಷಿಣೆಯ ತೆರಳುವ ಮಾರ್ಗದಲ್ಲಿ ಬೃಹತ್ ಗಾತ್ರದ ಮರ ಧರೆಗೂರುಳಿದೆ. ಬೆಂಗಳೂರು ಅರಮನೆ ಮೈದಾನದ ಬಳಿ ರಸ್ತೆಯ ಮೇಲೆ ಬೃಹತ್ ಗಾತ್ರದ ಮರ ಒಂದು ಧರೆಗೆ ಉರುಳಿದೆ. ಪ್ಯಾಲೇಸ್ ಗ್ರೌಂಡ್ ಎದುರು ತಿಳಿಸುತ್ತಿರುವ ಕಾರಿನ ಮೇಲೆ ಕೂಡ ಸಮೇತ ಮರ ಧರೆಗೆ ಉರುಳಿದೆ, ಮರ ಬಿದ್ದಿರುವ ಬಸಕ್ಕೆ ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದೆ.
ಕಲಬುರ್ಗಿ : ಶಿಕ್ಷಣ ಇಲಾಖೆಯ ಪುಸ್ತಕ ಗೋದಾಮಿಗೆ ಬೆಂಕಿ ತಗುಲಿ, ಕೋಟ್ಯಂತರ ರೂಪಾಯಿ ಮೌಲ್ಯದ ಪಠ್ಯ ಪುಸಕ್ತಗಳು ಸುಟ್ಟು ಭಸ್ಮವಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ್ ಪಟ್ಟಣದಲ್ಲಿ ನಡೆದಿದೆ. ಈ ಒಂದು ಅಗ್ನಿ ದುರಂತದಲ್ಲಿ ಅವಘಡದಲ್ಲಿ ಒಂದು ಕೋಣೆಯಲ್ಲಿನ ಸುಮಾರು 2 ಲಕ್ಷಕ್ಕೂ ಅಧಿಕ ಪುಸ್ತಕಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಒಟ್ಟು 1 ಕೋಟಿ ರೂಪಾಯಿಗೂ ಹೆಚ್ಚಿನ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ಇನ್ನೊಂದು ಕೋಣೆಯಲ್ಲಿ ಪುಸ್ತಕಗಳು ಸುರಕ್ಷಿತವಾಗಿದೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ. 4ರಿಂದ 8ನೇ ತರಗತಿವರೆಗೆ ವಿವಿಧ ಶಾಲೆಗಳಿಗೆ ವಿತರಣೆಗಾಗಿ ದಾಸ್ತಾನು ಮಾಡಿದ್ದ ಪುಸ್ತಕ ಕೋಣೆಗೆ ಬೆಂಕಿ ತಗುಲಿ ಭಾರಿ ನಷ್ಟವಾಗಿದೆ. ಗೋದಾಮಿನಲ್ಲಿ ಇಡಲಾಗಿದ್ದ ಶಾಲೆಗಳಿಗೆ ವಿತರಣೆಯಾಗಬೇಕಿದ್ದ ಪಠ್ಯಪುಸ್ತಕಗಳು, ಕಲಿಕಾ ಸಾಮಗ್ರಿ ಮತ್ತು ಇತರ ಶೈಕ್ಷಣಿಕ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ ಎನ್ನಲಾಗಿದೆ.
ರಾಮನಗರ : ರಾಜ್ಯದಲ್ಲಿ ಈಗಾಗಲೇ ವರುಣ ಅಬ್ಬರಿಸುತ್ತಿದ್ದು ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಇಂದು ಭಾರಿ ಮಳೆಗೆ ಬೆಂಗಳೂರಿನಲ್ಲಿ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಇದೀಗ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನಪ್ಪಿದ್ದಾರೆ. ಹೌದು ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನಪ್ಪಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೈಜಿಗುಡ್ಡ ಡ್ಯಾಮ್ ನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಡ್ಯಾಮ್ ನಲ್ಲಿ ಮುಳುಗಿ ಬೆಂಗಳೂರು ಮೂಲದ ರಾಘವಿ (18) ಮಧುಮಿತ (20) ಹಾಗೂ ರಮ್ಯಾ (22) ಮೃತ ಯುವತಿಯರು ಎಂದು ತಿಳಿದುಬಂದಿದೆ. ಜಲಾಶಯ ವೀಕ್ಷಣೆಗೆ ಎಂದು 7 ಯುವತಿಯರು ತೆರಳಿದ್ದಾರೆ. ಓರ್ವ ಯುವತಿ ನೀರಿಗೆ ಬಿದ್ದಿದ್ದ ವೇಳೆ ರಕ್ಷಣೆಗೆ ಉಳಿದ ಸ್ನೇಹಿತೆಯರು ಧಾವಿಸಿದ್ದಾರೆ. ಯುವತಿಯ ರಕ್ಷಣೆಗಾಗಿ 7 ಯುವತಿಯರು ನೀರಿಗೆ ಧುಮುಕಿದ್ದಾರೆ. ಕೂಡಲೇ ಸ್ಥಳೀಯ ಓರ್ವ ಯುವಕ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾನೆ. ಸದ್ಯ ಮೃತ ದೇಹಗಳನ್ನು ಮಾಗಡಿ…
ಬೆಂಗಳೂರು : ಬೆಂಗಳೂರಲ್ಲಿ ಇದೀಗ ವರುಣ ಅಬ್ಬರಿಸುತ್ತಿದ್ದು, ಕಳೆದ ಎರಡು ದಿನಗಳಿಂದ ಬೆಂಗಳೂರು ಮಹಾನಗರದಲ್ಲಿ ಭಾರಿ ಮಳೆ ಆಗುತ್ತಿದೆ. ನಿನ್ನೆ ರಾತ್ರಿಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು ಬೆಂಗಳೂರಿನ ಕೆಲವು ರಸ್ತೆಗಳು ಸಂಪೂರ್ಣ ನದಿಯಂತಾಗಿವೆ. ಇದೀಗ ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಬಿಎಂಟಿಸಿ ಬಸ್ ಒಂದು ಕೆಟ್ಟು ಹೋಗಿ ನಿಂತಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ರಸ್ತೆ ಮಧ್ಯೆ ಬಿಎಂಟಿಸಿ ಬಸ್ ಸಿಲುಕಿದೆ. ರಸ್ತೆ ಮಧ್ಯೆಯೇ ಬಿಎಂಟಿಸಿ ಬಸ್ ಕೆಟ್ಟು ನಿಂತಿದೆ. ಈ ವೇಳೆ ಕಿಟಕಿ ಮೂಲಕ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಇದೆ ವೇಳೆ ಆಸ್ಪತ್ರೆಗೆ ತೆರಳಿ ಮನೆಗೆ ವಾಪಾಸಾಗುತ್ತಿದ್ದ ಗರ್ಭಿಣಿ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಜೆಸಿಬಿ ಮೂಲಕ ಬಸ್ ಸೈಡ್ ಗೆ ಹಾಕಿ ಗರ್ಭಿಣಿಯನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಇದೀಗ ರಸ್ತೆಗಳು ಸಂಪೂರ್ಣವಾಗಿ ನದಿಯಂತೆ ಆಗಿವೆ. ಈ ವೇಳೆ ಬೆಂಗಳೂರಿನ ಸಿಲ್ಕ್ ಬೋರ್ಡ್ ಜೆಂಕ್ಷನ್ ನಲ್ಲಿ ಬಿಎಂಟಿಸಿ ಬಸವ…
ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆಯಾಗಿದ್ದು, ಸೊಸೆಗೆ ಮಕ್ಕಳಾಗಲಿಲ್ಲ ಎಂದು ಅತ್ತೆಯೇ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಗ್ರಾಮದ ರೇಣುಕಾ ಸಂತೋಷ ಹೊನಕಾಂಡೆ (27) ಎಂದು ತಿಳಿದುಬಂದಿದೆ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹೊನಕಾಂಡೆ, ಅತ್ತೆ ಜಯಶ್ರೀ ಹೊನಕಾಂಡೆಯನ್ನು ಅರೆಸ್ಟ್ ಮಾಡಲಾಗಿದ್ದು, ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಮೇಲೆ ಗುಂಡಿನ ದಾಳಿ ನಡೆಸಿ ಸೆರೆಹಿಡಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹಳೆ ಹೊನ್ನೂರಿನಲ್ಲಿ ನಡೆದಿದೆ. ಕೊಲೆ ಆರೋಪಿ ಮಂಜುನಾಥ್ ಅಲಿಯಾಸ್ ಚಳಿ ಮಂಜ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದೆ. ಬಂಧಿಸಲು ತೆರಳಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಿನ್ನೆಲೆಯಲ್ಲಿ ಮಂಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹೊಳೆ ಹೊನ್ನೂರು ಪಿಐಲಕ್ಷ್ಮಿಪತಿ ಆರೋಪಿ ಮಂಜನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಈ ಘಟನೆಯಲ್ಲಿ ಕಾನ್ಸ್ಟೇಬಲ್ ಪಿಸಿ ಪ್ರಕಾಶ್ ಅವರಿಗೆ ಗಾಯಗಳಾಗಿದ್ದು ಆರೋಪಿಯನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇ 9ರಂದು ಹೇಮಣ್ಣ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಚಳಿ ಮಂಜ ಸೇರಿದಂತೆ ಮೂವರು ಹೇಮಣ್ಣರನ್ನು ಕೊಲೆ ಮಾಡಿದ್ದರು. ಇದೀಗ ಚಳಿ ಮಂಜಣ್ಣನ್ನು ಬಂಧಿಸಲು ಹೋದಾಗ…
ಪಂಜಾಬ್ : ಭಾರತೀಯ ಸೇನೆ ಹಾಗೂ ಭಾರತದ ಗೌಪ್ಯತೆಯ ಕುರಿತಂತೆ ಇತ್ತೀಚಿಗೆ ಪಂಜಾಬ್ ನಲ್ಲಿ ಇಬ್ಬರು ಮಹಿಳಾ ಯೂಟ್ಯೂಬರ್ ಗಳನ್ನು ಅರೆಸ್ಟ್ ಮಾಡಲಾಗಿತ್ತು. ಜ್ಯೋತಿ ಮಲ್ಹೋತ್ರಾ ಹಾಗು ಗುಝಾಲ್ ಎನ್ನುವ ಮಹಿಳೆಯರನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಭಾರತೀಯ ಸೇನೆಯ ಬಗ್ಗೆ ಪಾಕಿಸ್ತಾನದ ISI ಗೆ ಮಾಹಿತಿ ನೀಡುತ್ತಿದ್ದ ಇಬ್ಬರೂ ಗೂಢಚಾರಿಗಳನ್ನು ಪಂಜಾಬ್ ನಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಪಂಜಾಬ್ ನಲ್ಲಿ ಮತ್ತೆ ಇಬ್ಬರು ಗೂಢಚಾರಿಗಳು ಅರೆಸ್ಟ್ ಆಗಿದ್ದು, ಪಾಕಿಸ್ತಾನದ ISI ಗೆ ಭಾರತದ ಸೇನೆಯ ಬಗ್ಗೆ ಮಾಹಿತಿ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಸೇನಾ ನೆಲೆಗಳ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ ಆರೋಪದ ಅಡಿ ಇಬ್ಬರು ಗೂಢಾಚಾರಿಗಳನ್ನು ಬಂಧಿಸಲಾಗಿದೆ. ಪಂಜಾಬ್ ಪೋಲಿಸರು ಸದ್ಯಕ್ಕೆ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.