Author: kannadanewsnow05

ಹುಬ್ಬಳ್ಳಿ : ಹಿಂದೂ ಧರ್ಮಕ್ಕೆ ಅವಮಾನ ಆಗುವ ರೀತಿ ವಾಟ್ಸಪ್ ಸ್ಟೇಟಸ್ ನಲ್ಲಿ ವಿಡಿಯೋ ಹಾಕಿದವನನ್ನು ಹುಬ್ಬಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸರಿಂದ ದಾದಾಪೀರ್ ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಹುಬ್ಬಳ್ಳಿ ನಗರದ ನೂರಾನಿ ಪ್ಲಾಟ್ ನಿವಾಸಿ ಆಗಿರುವ ದಾದಾಪೀರ್ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಪೊಲೀಸರು ಇದೀಗ ದಾದಾಪೀರ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿ ದಾದಾಪೀರ್ ನನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ದಾದಪೀರ್ ಹಿಂದೂ ದೇವರು ಬಳಿ ಹೋಗಿ ಕಲ್ಮಾ ಹೇಳಿಕೊಟ್ಟ ಯುಟುಬರ್ ಒಬ್ಬನ ವಿಡಿಯೋವನ್ನ ತನ್ನ ಸ್ಟೇಟಸ್ ಗೆ ಹಾಕೊಂಡಿದ್ದ. ಹಿಂದೂ ಧರ್ಮಕ್ಕೆ ಅಪಮಾನ ಆಗೋ ರೀತಿ ಸ್ಟೇಟಸ್ ಹಾಕಿದ್ದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಪ್ರೀತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಪ್ರೇಯಸಿಯ ಜೊತೆಗಿನ ಖಾಸಗಿ ಕ್ಷಣಗಳನ್ನು ಸೆರೆಹಿಡಿದ ಯುವಕನಿಗೆ ಇದೀಗ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಪ್ರಿಯಕರನೊಬ್ಬ ತನ್ನ ಪ್ರೇಯಸಿಯೊಂದಿಗಿನ ಖಾಸಗಿ ಕ್ಷಣಗಳನ್ನು ಸೆರೆ ಹಿಡಿದು ಲೈಂಗಿಕ ಕ್ರಿಯೆ ಒತ್ತಾಯ ಮಾಡಿದ್ದಾನೆ. ಈ ಸಂಬಂಧ ಪೊಲೀಸ್‌ ಪ್ರಕರಣ ದಾಖಲಾಗಿದ್ದು, ಇದ್ದನ್ನು ರದ್ದು ಕೋರಿ ಪ್ರಿಯಕರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದನು. ವಿಚಾರಣೆ ನಡೆಸಿದ ಕೋರ್ಟ್‌ ಜಾಮೀನು ನೀಡಲು ನಿರಾಕರಣೆ ಮಾಡಿದೆ. ವಿಚಾರಣೆ ವೇಳೆ ನಿಜವಾದ ಪ್ರೇಮಿಯು ತನ್ನ ಪ್ರೇಯಸಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ದೃಶ್ಯಗಳನ್ನು ಸೆರೆಹಿಡಿಯುವುದಿಲ್ಲ. ಅಲ್ಲದೆ, ಅಂತಹ ಪೋಟೋಗಳನ್ನು ತೋರಿಸಿ ಲೈಂಗಿಕ ಕ್ರಿಯೆಗೆ ಬಲವಂತಪಡಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಪ್ರಕರಣ ಹಿನ್ನೆಲೆ ಪ್ರಕರಣದಲ್ಲಿ ಅರ್ಜಿದಾರ ಆರೋಪಿಯು, ಬ್ಲ್ಯಾಕ್‌ಮೇಲ್‌ ಮಾಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಿ ಸಂತ್ರಸ್ತೆಯು 2025ರ ಮಾ.11ರಂದು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಹಾಗಾಗಿ,…

Read More

ಬೆಂಗಳೂರು : ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್‌ಗೆ ಬೆಂಕಿ ಬಿದ್ದು 100ಕ್ಕೂ ಅಧಿಕ ಶೆಡ್‌ಗಳು ಹೊತ್ತಿ ಉರಿದ ಘಟನೆ ಕೂಡ್ಲು ಕೆರೆ ಸಮೀಪ ನಡೆದಿದೆ. ಇಂದು ಬೆಳಗ್ಗೆ 5:30 ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲೆಕ್ಟ್ರಾನಿಕ್ ಸಿಟಿ , ಹುಳಿಮಾವು , ಸರ್ಜಾಪುರ ಹಾಗು ಡೈರಿ ಸರ್ಕಲ್‌ನಿಂದ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶೆಡ್ ಗಳು ಹಾಗು ಸ್ಕ್ರಾಪ್ ವಸ್ತುಗಳು ಬೆಂಕಿಗಾಹುತಿಯಾಗಿದೆ. ಹೈ ಟೆನ್ಷನ್‌ ವಯರ್‌ ತುಂಡಾಗಿ ಬಿದ್ದು ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಾವಣಗೆರೆ : ದಾವಣಗೆರೆಯಲ್ಲಿ ಜಿಂಕೆಗಳಿಗೆ ಸಾಂಕ್ರಾಮಿಕ ರೋಗ ಹರಡಿದ್ದು, ಮಾಸಾಂತ್ಯದ ವರೆಗೆ ಮೃಗಾಲಯಕ್ಕೆ ಪ್ರವೇಶವನ್ನು ನಿಷೇಧ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯ ಅನಗೋಡದಲ್ಲಿರುವ ಇಂದಿರಾ ಪ್ರಿಯದರ್ಶಿನಿ ಮೃಗಾಲಯದಲ್ಲಿ ಈ ಒಂದು ಘಟನೆ ನಡೆದಿದೆ. ಮೃಗಾಲಯದಲ್ಲಿ ಜಿಂಕೆಗಳಿಗೆ ಸಾಂಕ್ರಾಮಿಕ ರೋಗ ಹರಡಿರುವ ಹಿನ್ನೆಲೆಯಲ್ಲಿ ಇಡೀ ಮೃಗಾಲಯಕ್ಕೆ ಸದ್ಯ ಅರಣ್ಯ ಇಲಾಖೆ ಪರದೆ ಅಳವಡಿಸಿದೆ. ಜನವರಿ 16 ಕೆ ಮೊದಲ ಜಿಂಕೆ ಸಾವನ್ನಪ್ಪಿದ್ದು ಇಲ್ಲಿಯವರೆಗೆ ಆರು ಜಿಂಕೆಗಳು ಸಾವನ್ನಪ್ಪಿವೆ. ಹಾಗಾಗಿ ಇಡೀ ಮೃಗಾಲಯವನ್ನು ಬಂದ್ ಮಾಡಲಾಗಿದ್ದು, ಪಶು ವೈದ್ಯರು ಆಗಮಿಸಿ ಜಿಂಕೆಗಳನ್ನು ಪರೀಕ್ಷಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳ ಹಾವಳಿ ಮುಂದುವರೆದಿದ್ದು, ನಿನ್ನೆ ತಾನೇ ಇಟಲಿ, ಜಪಾನ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಇದೀಗ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೂ ಕೂಡ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಆರ್​​ಟಿ ನಗರದ ಗಂಗಾನಗರದಲ್ಲಿರುವ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೆ ಜನವರಿ 29ರಂದು ಕಿಡಿಗೇಡಿಗಳು ಇ-ಮೇಲ್ ಕಳುಹಿಸಿ ‘5 RDX ಮತ್ತು ಐಇಡಿ ಬಳಸಿ ಸ್ಫೋಟ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಈ ಕುರಿತು ರಾಯಭಾರಿ ಕಚೇರಿ ಅಧಿಕಾರಿ ಭಾಸ್ಕರ್ ಸುಬ್ರಹ್ಮಣಿ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. gaina_ramesh@outlook.com ವಿಳಾಸದಿಂದ bangalore.visa@esteri.it ಗೆ ಸಂದೇಶ ಕಳುಹಿಸಿ ‘5 RDX ಬಾಂಬ್ ಸ್ಫೋಟ ಮಾಡುತ್ತೇವೆ’ ಎಂದು ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಇಟಾಲಿಯನ್ ಕಾನ್ಸುಲೇಟ್ ಭದ್ರತಾ ವ್ಯವಸ್ಥಾಪಕ ಜಿಯೋಡೊಮೆನಿಕ್ ಒ ಮಿಲಾನೋ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸದ್ಯ ಇಟಲಿ,…

Read More

ಮೈಸೂರು : ಮೈಸೂರಿನಲ್ಲಿ ದಿನಕ್ಕೊಂದು ಡ್ರಗ್ ತಯಾರಿಕಾ ಘಟಕ ಪತ್ತೆ ಹಿನ್ನಲೆಯಲ್ಲಿ ಡ್ರಗ್ ಹಾವಳಿ ತಡೆಗಟ್ಟುವಲ್ಲಿ ಸಿಸಿಬಿ ಪೊಲೀಸರು ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಸಿಸಿಬಿ ಪೊಲೀಸ ವಿಂಗ್ ಗೆ ಮೇಜರ್ ಸರ್ಜರಿ ಮಾಡಲಾಗಿದ್ದು, ಒಂದೇ ಬಾರಿಗೆ ಸಿಸಿಬಿಯ ಸುಮಾರು 10 ಸಿಬ್ಬಂದಿಗಳು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿ ಕಮಿಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಕಮಿಷನರ್ ಸೀಮಾ ಲಾಟ್ಕರ್ ಸಿಸಿಬಿ ಇಂದ ಮೂಲ ಸ್ಥಾನಕ್ಕೆ ಸಿಬ್ಬಂದಿಗಳನ್ನು ಕಳುಹಿಸಿದ್ದಾರೆ. ಸಾಕಷ್ಟು ದಿನಗಳಿಂದ ಸಿಸಿಬಿಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹಾಗು ಹೆಡ್ ಕಾನ್ಸ್ಟೇಬಲ್ ಗಳು ಕೆಲಸ ಮಾಡುತ್ತಿದ್ದರು. ಮಾರಾಟಗಾರರ ಬಗೆಗಿನ ಸುಳಿವುಗಳ ವಿಚಾರದಲ್ಲಿ ಲೋಪ ಕಂಡು ಬಂದ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿಗೆ ಹೆಚ್ಚಿನ ಒತ್ತು ನೀಡಲು ಕಮಿಷನರ್ ಸೀಮಾ ಲಾಟ್ಕರ್ ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಉಯ್ತರಕನ್ನಡ : ಜ್ಯೋತಿಷಿ ಕಮಲಾಕರ ಭಟ್ ಮತ್ತು ಸುಚಿತ್ರ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿದ್ದಾಪುರ ಪೊಲೀಸರ ವೈಫಲ್ಯ ಎಂದು ಸ್ಥಳೀಯರು ಆರೋಪಿಸಿದ್ದು, ಈ ಹಿನ್ನೆಲೆಯಲ್ಲಿ ಸಿದ್ದಾಪುರ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ. ಎಸ್ ಪಿ ದೀಪನ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಎಸ್ ಐ ಗಣಪತಿ ಭಟ್ ಮತ್ತು ಹೆಡ್ ಕಾನ್ಸ್ಟೇಬಲ್ ಆದಂತಹ ಚಂದ್ರಶೇಖರ್ ರನ್ನು ವರ್ಗಾವಣೆ ಮಾಡಲಾಗಿದೆ. ಇಬ್ಬರನ್ನು ಹಳಿಯಾಳ ಉಪ ವಿಭಾಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಏನಾದರೂ ಲೋಪ ಕಂಡುಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ತಿಳಿಸಿದ್ದಾರೆ.

Read More

ಚೈನ್ನೈ : ಡ್ರಗ್ಸ್ ಹೊಂದಿದ್ದ ಆರೋಪದ ಅಡಿ ನಟಿ ಸೇರಿ 8 ಜನರನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಚೆನ್ನೈನಲ್ಲಿ ನಟಿ ಅಂಜುಕೃಷ್ಣ, ಸಹಾಯಕ ನಿರ್ದೇಶಕಿ ವಿನ್ಸಿ ನಿವೇತ, ಕಾರ್ತಿಕ ರಾಜ, ಯಶವಂತ ಸೇರಿದಂತೆ 8 ಜನರನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಲಾಗಿದೆ. ಮೆಥಾಂಫೆಂಟಮೇನ್, ಗಾಂಜಾ ಮೊಬೈಲ್ ಸೇರಿದಂತೆ ಹಲವ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಚೆನ್ನೈ ಪೊಲೀಸರು ಗುರುವಾರ ಪ್ರಮುಖ ಮಾದಕವಸ್ತು ಪತ್ತೆ ಕಾರ್ಯವನ್ನು ನಡೆಸಿದ್ದು, ತಮಿಳು ಮತ್ತು ಮಲಯಾಳಂ ನಟಿ ಅಂಜು ಕೃಷ್ಣ ಮತ್ತು ತಮಿಳು ಸಹಾಯಕ ನಿರ್ದೇಶಕಿ ವಿನ್ಸಿ ನಿವೇತಾ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದಾರೆ. ನೇಸಪಕ್ಕಂ ನಿವಾಸಿ ವಿಘ್ನೇಶ್ವರನ್ (33) ಬಂಧನದೊಂದಿಗೆ ತನಿಖೆ ಪ್ರಾರಂಭವಾಯಿತು.  ಎಎನ್‌ಐಯು (ದಕ್ಷಿಣ) ತಂಡದ ಇನ್ಸ್‌ಪೆಕ್ಟರ್ ಜಾನಿ ಚೆಲ್ಲಪ್ಪ ಅವರಿಗೆ ದೊರೆತ ಸುಳಿವಿನ ಮೇರೆಗೆ ಬಂಧನ ನಡೆದಿದೆ. ವಿಚಾರಣೆಯ ಸಮಯದಲ್ಲಿ, ವಿಘ್ನೇಶ್ವರನ್ ಪೋರೂರು ಬಳಿಯ ಕೋವೂರಿನ ವೆಂಕಟೇಶ್ ಕುಮಾರ್ (31) ಅವರಿಂದ ಮಾದಕ ವಸ್ತುಗಳನ್ನು ಪಡೆದುಕೊಂಡಿದ್ದಾಗಿ ಬಹಿರಂಗಪಡಿಸಿದ್ದಾನೆ. ಈ ಮಾಹಿತಿಯ ಆಧಾರದ ಮೇಲೆ, ಪೊಲೀಸರು…

Read More

ಪ್ರತಿಯೊಬ್ಬರ ಜೀವನದಲ್ಲೂ ಒಂದಲ್ಲ ಒಂದು ರೂಪದಲ್ಲಿ ಸಾಲ ಬರುತ್ತದೆ. ಆ ಸಾಲದ ಹೊರೆಯಿಂದ ಹೊರಬರಲು ಸಾಕಷ್ಟು ಪ್ರಯತ್ನಿಸಿದರೂ, ಅನೇಕ ಜನರು ಸಿಲುಕಿಕೊಳ್ಳುತ್ತಾರೆ. ಸಂಪತ್ತಿನ ಅಧಿಪತಿಯಾದ ವೆಂಕಟಾಜಲಪತಿಯೇ ಕುಬೇರನಿಂದ ಸಾಲ ಪಡೆದನೆಂದು ಹೇಳಲಾಗುತ್ತದೆ. ಅಂತಹ ಸಾಲದ ಹೊರೆಯಿಂದ ಹೊರಬರಲು ಮತ್ತು ಸಾಲದಿಂದ ಮುಕ್ತರಾಗಲು ನಾವು ಈ ಪೋಸ್ಟ್ನಲ್ಲಿ ಕೆಲವು ಸರಳ ಪರಿಹಾರಗಳನ್ನು ನೋಡುತ್ತೇವೆ. ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆದುಕೊಳ್ಳಬಹುದು ಖಾಯಂ ವಿಳಾಸ:- ಶ್ರೀ ಕ್ಷೇತ್ರ ಸಿಗಂದೂರು ಕಳಸವಳ್ಳಿ ಗ್ರಾಮ, ತುಮರಿ ಅಂಚೆ, ಸಾಗರ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಋಣ ಪರಿಹಾರ ತಮ್ಮ ಸಾಲವನ್ನು ಮರುಪಡೆಯಲು ಸಾಧ್ಯವಾಗದ ಅನೇಕ ಜನರಿದ್ದಾರೆ. ಅದೇ ರೀತಿ ಸಾಲ ತೀರಿಸಲಾಗದೆ ಸಾಕಷ್ಟು ಮಂದಿ ಇದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು ಮಂಗಳವಾರವನ್ನು ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ. ಹೌದು, ಮಂಗಳವಾರದಂದು ನಾವು ಪಡೆದ ಸಾಲದ ಸ್ವಲ್ಪ ಮೊತ್ತವನ್ನು ಮರುಪಾವತಿ ಮಾಡುವ ಮೂಲಕ ನಮ್ಮ…

Read More

ಪಂಜಾಬ್ : ಪಂಜಾಬ್ ನಲ್ಲಿ ಗುಂಡಿಕ್ಕಿ ಆಪ್ ಮುಖಂಡನ ಬರ್ಬರ ಹತ್ಯೆ ನಡೆಸಲಾಗಿದೆ. ಪಂಜಾಬ್ ನ ಜಲಂಧರ ಬಳಿಯ ಗುರುದ್ವಾರದ ಹತ್ತಿರ ಈ ಒಂದು ಭೀಕರ ಗುಂಡಿನ ದಾಳಿ ನಡೆದಿದೆ. ಗುಂಡಿಕ್ಕಿ ಆಪ್ ಮುಖಂಡರಾದ ಲಕ್ಕಿ ಒಬೆರಾಯ್ ಅವರನ್ನು ಕೊಲೆ ಮಾಡಲಾಗಿದೆ. ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದೆ. ಲಕ್ಕಿ ಒಬೆರಾಯ್ ಅವರ ಮೇಲೆ ಗುಂಡಿನ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನೆ ಸಂಭಂದಿಸಿದಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ

Read More