Author: kannadanewsnow05

ಶಿವಮೋಗ್ಗ : ಮುಸ್ಲಿಂ ಖಬರ್ ಸ್ಥಾನದ ಜಾಗದಲ್ಲಿ ಮರ ಕಡಿದ ವಿಚಾರಕ್ಕೆ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಜಂಬರಘಟ್ಟೆಯಲ್ಲಿ ನಡೆದಿದೆ. ಇತ್ತೀಚಿಗೆ ಶಿವಮೊಗ್ಗದಲ್ಲಿ ಹಿಂದೂ ಮುಸ್ಲಿಂ ಸಂಘರ್ಷ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿದ್ದವು. ಇದೀಗ ಶಾಂತವಾಗಿದೆ ಎನ್ನುವಂತಹ ಪರಿಸ್ಥಿತಿ ಬೆನ್ನಲ್ಲೇ ಮತ್ತೆ ಇದೀಗ ಕೋಮುಗಳ ನಡುವೆ ಸಂಘರ್ಷ ನಡೆದಿದ್ದು ಜನರಲ್ಲಿ ಆತಂಕ ಮೂಡಿದೆ. ಹೊಸ ಜಂಬಘಟ್ಟೆ ನಿವಾಸಿ ರವಿ (20) ಹಲ್ಲೆಗೊಳಗಾದ ವ್ಯಕ್ತಿ. ಹಲ್ಲೆ ನಡೆಸಿದ ಬಳಿಕ ಯುವಕರು ಪರಾರಿಯಾಗಿದ್ದಾರೆ.. ಜೀವನೋಪಾಯಕ್ಕಾಗಿ ಕುರಿಗಳನ್ನ ಸಾಕಿರುವ ರವಿ. ಮನೆಯಲ್ಲಿ ಕುರಿ ಕಟ್ಟುವ ಗೂಟ ಮುರಿದ ಕಾರಣ ಹೊಸ ಗೂಟ ಹುಡುಕಾಡಿಕೊಂಡು ಹೋಗಿದ್ದಾರೆ. ಹೀಗೆ ಖಬರ್ ಸ್ಥಾನದ ಬಳಿ ಹೋಗಿರುವ ರವಿ ಎಂಬಾತ ಅಕೆಶಿಯ ಮರದಿಂದ ಕೊಂಬೆಯೊಂದನ್ನು ಕಡಿದಕೊಂಡು ಕುರಿ ಕಟ್ಟಲು ಬೇಕಾದ ಗೂಟವನ್ನು ಸಿದ್ದ ಪಡಿಸಿಕೊಂಡು ಹೋಗಿದ್ದಾನೆ. ಅದೇ ಈಗ ಕೋಮು ಸಂಘರ್ಷದ ರೂಪು ಪಡೆದು ಠಾಣೆ ಮೆಟ್ಟಿಲೇರುವಂತಾಗಿದೆ. ಹಿಂದು ಮುಸ್ಲಿಂ ಸಂಘರ್ಷದ…

Read More

ಪಾಕಿಸ್ತಾನ : ಪಾಕಿಸ್ತಾನದ ಪೊಲೀಸ್ ಠಾಣೆಯ ಮೇಲೆ ಉಗ್ರರ ದಾಳಿಯಲ್ಲಿ 10 ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ, ಸ್ಥಳೀಯ ಕಾಲಮಾನ ಮುಂಜಾನೆ 3 ಗಂಟೆಗೆ ಉಗ್ರರು ಮೊದಲು ಸ್ನೈಪರ್‌ಗಳನ್ನು ಬಳಸಿಕೊಂಡು ಕಾನ್‌ಸ್ಟೆಬಲ್‌ಗಳನ್ನು ಗುರಿಯಾಗಿಸಿಕೊಂಡು ನಂತರ ಪೊಲೀಸ್ ಠಾಣೆಗೆ ಪ್ರವೇಶಿಸಿದಾಗ ದಾಳಿ ಸಂಭವಿಸಿದೆ. ವಾಯುವ್ಯ ಪಾಕಿಸ್ತಾನದ ಪೊಲೀಸ್ ಠಾಣೆಯ ಮೇಲೆ ಸೋಮವಾರ ನಡೆದ ಉಗ್ರರ ದಾಳಿಯಲ್ಲಿ ಕನಿಷ್ಠ 10 ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಪಾಕಿಸ್ತಾನಿ ತಾಲಿಬಾನ್ ಮತ್ತು ಸರ್ಕಾರದ ನಡುವಿನ ಕದನ ವಿರಾಮ ಮುರಿದುಬಿದ್ದ 2022 ರಿಂದ ಪಾಕಿಸ್ತಾನವು ಇಸ್ಲಾಮಿ ಉಗ್ರಗಾಮಿಗಳು, ವಿಶೇಷವಾಗಿ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ಮರುಕಳಿಸಿದೆ ಎಂದು ಹೇಳಲಾಗುತ್ತಿದೆ. ಪೊಲೀಸ್ ಠಾಣೆಯ ಕಟ್ಟಡವನ್ನು ಪ್ರವೇಶಿಸಿದ ನಂತರ, ಭಯೋತ್ಪಾದಕರು ಹ್ಯಾಂಡ್ ಗ್ರೆನೇಡ್‌ಗಳನ್ನು ಬಳಸಿದರು, ಇದು ಪೊಲೀಸರಿಗೆ ಹೆಚ್ಚಿನ ಸಾವುನೋವುಗಳನ್ನು ಉಂಟುಮಾಡಿತು” ಎಂದು ಡ್ರಾಬನ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ಮಲಿಕ್ ಅನೀಸ್ ಉಲ್ ಹಸನ್ ಹೇಳಿದ್ದಾರೆ. ಕಳೆದ ವರ್ಷ…

Read More

ಬೆಂಗಳೂರು : ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ ಹಣ ಬಾಕಿ ಉಳಿಸಿಕೊಂಡಿದ್ದರಿಂದ ಹಾಲು ಉತ್ಪಾದನೆಯು ಕುಂಠಿತಗೊಂಡಿದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಈ ಕುರಿತು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು ಹೀಗಾಗಿ ಪ್ರತಿನಿತ್ಯ 26 ಲಕ್ಷ ರೈತರಿಂದ 85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು.ಆದರೆ ಕಾಂಗ್ರೆಸ್ ಸರ್ಕಾರ 716 ಕೋಟಿ ಬಾಕಿ ಹಣ ಉಳಿಸಿಕೊಂಡಿದೆ. ಇದರಿಂದ ರಾಜ್ಯದಲ್ಲಿ 10 ಲಕ್ಷ ಲೀಟರ್ ಹಾಲು ಸಂಗ್ರಹ ಕಡಿಮೆಯಾಗಿದೆ ಜನ ಅಷ್ಟೇ ಅಲ್ಲ ಜಾನುವಾರುಗಳು ಕೂಡ ಸರ್ಕಾರದ ಮೇಲೆ ಶಾಪ ಹಾಕುತ್ತಿವೆ. ರಾಜ್ಯ ಸರ್ಕಾರ ಜಾನುವಾರುಗಳ ಕೋಪಕ್ಕು ಬಲಿಯಾಗಿದೆ.ರಾಜ್ಯ ಸರ್ಕಾರ ತನ್ನ ಹೊಣೆ ಮರೆತು ಕೇಂದ್ರದ ಕಡೆ ಕೈ ತೋರಿಸುತ್ತದೆ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಜನ ಮತ್ತು ಜಾನುವಾರುಗಳ ಜೊತೆ ಹೋರಾಟ ಮಾಡಬೇಕಾಗುತ್ತದೆ ಪದೇ ಪದೇ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲವೆಂದು…

Read More

ಹುಬ್ಬಳ್ಳಿ : ಬಿಜೆಪಿಯವರು ಗಲಾಟೆ ಗಲಬೆ ಮಾಡಿಸೋರೆಂದು ಪರೋಕ್ಷವಾಗಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚುನಾವಣೆ ಬಂದರೆ ಸಾಕು ಬಿಜೆಪಿಯವರ ಆಟ ಆರಂಭವಾಗುತ್ತದೆ ಎಂದು ಕಿಡಿ ಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇವರ ಉದ್ಯೋಗ ಏನಂದರೆ ಗಲಾಟೆ ಗಲಬೆ ಭಾವನಾತ್ಮಕವಾಗಿ ಮತ ಕೇಳುವುದು.ಎಂದು ಹುಬ್ಬಳ್ಳಿಯಲ್ಲಿ ಅಬಕಾರಿ ಇಲಾಖೆಯ ಸಚಿವ ಆರ್ ಬಿ ತಿಮ್ಮಾಪುರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ್ದು ಇವರೇ.ಜಾತಿ ಧರ್ಮಗಳನ್ನು ನಾವು ವಿಭಾಗ ಮಾಡಿದ್ದೇವ? ಬಿಜೆಪಿಯದ್ದು ಬರೀ ಸರ್ಕಾರ ಬೀಳಿಸುವ ದಂಧೆ. ಜನ ಬಹುಮತ ನೀಡಿಲ್ಲವೆಂದು ಅಡ್ಡದಾರಿ ಮೂಲಕವೇ ಅವರು ಅಧಿಕಾರಕ್ಕೆ ಬಂದಿದ್ದು ಎಂದು ವಾಗ್ದಾಳಿ ನಡೆಸಿದರು.

Read More

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮರಾಠಿ ಪ್ರೇಮ ಮತ್ತೆ ಮುಂದುವರೆದಿದ್ದು ಬೆಳಗಾವಿ ನಗರದ ಕುವೆಂಪು ನಗರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮರಾಠಿಯಲ್ಲಿ ಭಾಷಣ ಮಾಡಿದ್ದು,ಮಗ ಮೃಣಾಲ ಸ್ಪರ್ಧಿಸಿದ್ರೆ ನಾವೆಲ್ಲ ಮತ ಹಾಕುತ್ತೇವೆ ಎಂದು ಮರಾಠಿಗರು ತಿಳಿಸಿದ್ದಾರೆ. ಈ ವೆಳೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕರ್ತರಿಗೆ ಮರಾಠಿಯಲ್ಲಿಯೇ ಭಾಷಣ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮಗನಿಗೆ ಟಿಕೆಟ್ ಕೇಳುವುದಿಲ್ಲ ಹೈಕಮಾಂಡ ಟಿಕೆಟ್ ಕೊಟ್ಟರೆ ಪುತ್ರ ಸ್ಪರ್ಧಿಸುತ್ತಾನೆ.ಟಿಕೆಟ್ ಕೇಳಲ್ಲ ಅಂತಾನೆ ಮಗನಿಗೆ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಎಲ್ಲಾ ಸಮುದಾಯದವರಿಗೆ ಮರಾಠಿ ಭಾಷೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್  ಮನವಿ ಮಾಡಿದ್ದಾರೆ.ಸಚಿವರ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮ ಪರಾಠಮಯವಾಗಿತ್ತು ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕುರಿತು ಸಿದ್ಧತೆ ನಡೆಸಿದ್ದೇವೆ. ರಾಜಕೀಯ ವ್ಯಕ್ತಿಗಳು ಚುನಾವಣೆಯನ್ನು ಹಗುರವಾಗಿ ಪರಿಗಣಿಸುವುದಿಲ್ಲ. ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ ಐದು ಪ್ರಮುಖ ಗ್ಯಾರಂಟಿ ಭರವಸೆಯನ್ನು ಅಧಿಕಾರಕ್ಕೆ ಬಂದ ಮೇಲೆ ಈಡೇರಿಸಿದ್ದೇವೆ.…

Read More

ದಕ್ಷಿಣಕನ್ನಡ : ಮಂಗಳೂರಿನ ಮಳಲಿ ಮಸೀದಿ ವಿವಾದ ಸಂಬಂಧ ಇಂದು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಮಳಲಿ ಮಸೀದಿ ವಕ್ಫ್ ಬೋರ್ಡ್ ಆಸ್ತಿ ಎಂದು ಪ್ರತ್ಯೇಕ ವಾದ ಮಂಡಿಸಲು ಮುಂದಾಗಿದೆ. ವಕೀಲರ ಮೂಲಕ ವಕಾಲತ್ತು ದಾಖಲಿಸಿ ಪ್ರಕರಣದಲ್ಲಿ ಅಧಿಕೃತ ಹೋರಾಟಕ್ಕೆ ವಕ್ಫ್ ಬೋರ್ಡ್ ಇಳಿದಿದೆ. ಸದ್ಯ ಹೈಕೋರ್ಟ್ ನಿಂದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್​ಗೆ ನಿರ್ದೇಶನ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲಾ ಬೋರ್ಡ್ ಎಂದು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ಇಂದು ವಕಾಲತ್ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮಳದಿ ಮಸೀದಿ ಆಸ್ತಿ ಜಿಲ್ಲಾ ಬೋರ್ಡ್ ಗೆ ಸೇರಿದ್ದು ಎಂದು ದಾಖಲೆ ಸಲ್ಲಿಸಿದ್ದಿ, ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆ ಮಳಲಿ ಮಸೀದಿ, ಹಾಗೂ ವಿ ಎಚ್ ಪಿ ಇಂದಲೂ ದಾಖಲೆ ಸಲ್ಲಿಸುವ…

Read More

ಮಂಗಳೂರು : ಹಿಂದೂ ಮುಖಂಡ ಅರುಣ್ ಕುಮಾರ್ ಫುತ್ತಿಲ್  ಬಿಜೆಪಿ ಸೇರ್ಪಡೆಗೊ ಮುನ್ನ ಬಿಜೆಪಿ ಪಕ್ಷವು ಅರುಣ್ ಕುಮಾರ್ ಗೆ ಹಲವು ಷರತ್ತುಗಳನ್ನು ಒಡ್ಡಿದೆ ಎಂದು ಹೇಳಲಾಗುತ್ತಿದ್ದು ಈ ಕುರಿತಾಗಿ ಇಂದು ಅರುಣ್ ಕುಮಾರ್ ಪುತ್ತಿಲ್  ಸಮಾಲೋಚನಾ ಸಭೆ ಕರೆದಿದ್ದು ಸಭೆಯ ಬಳಿಕ ಬಿಜೆಪಿ ಸೇರ್ಪಡೆ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ. ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಪುತ್ತಿಲ ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದುವರೆಯಲು ಪುತ್ತಿಲ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಮತ್ತು ಆರಸ್​​​ಎಸ್‌ಎಸ್ ಜೊತೆಗಿನ ಹಲವು ಸುತ್ತಿನ ಮಾತುಕತೆಯ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ. ವಿಧಾನಸಭೆ ಚುನಾವಣೆಯ ನಂತರ ಅವರು ಹುಟ್ಟುಹಾಕಿರುವ ಪುತ್ತಿಲ ಪರಿವಾರದ ಸಭೆ ನಡೆಯಲಿದ್ದು, ಅಂತಿಮ ತೀರ್ಮಾನದ ಬಗ್ಗೆ ಕಾರ್ಯಕರ್ತರ ಜತೆ ಸಮಾಲೋಚನೆ ನಡೆಯಲಿದೆ. ಬಿಜೆಪಿ ವಿಧಿಸಿರುವ ಷರತ್ತೇನು? ಪುತ್ತಿಲ ಪರಿವಾರವನ್ನು ವಿಸರ್ಜಿಸಿದರೆ ಮಾತ್ರ ಬಿಜೆಪಿಗೆ ಬನ್ನಿ ಎಂದು ಕೆಲವು ಬಿಜೆಪಿ ನಾಯಕರು ಷರತ್ತು ಒಡ್ಡಿದ್ದಾರೆ ಎಂದೂ…

Read More

ಬೆಂಗಳೂರು : ಈ ತಿಂಗಳಿನಲ್ಲಿ ರಾಜ್ಯಕ್ಕೆ ಮೂವರು ನಾಯಕರು ಭೇಟಿ ನೀಡಲಿದ್ದಾರೆ. ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದು, ಫೆಬ್ರವರಿ 9 ಹಾಗೂ 10 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.ಅಲ್ಲದೆ ರಕ್ಷಣಾ ಸಚಿವ ರಾಜೀನಾಥ ಸಿಂಗ್ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಕೂಡ ಆಗಮಿಸಲಿದ್ದಾರೆ. ಫೆಬ್ರವರಿ 10 ಮತ್ತು 11ರಂದು ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಹುಬ್ಬಳ್ಳಿಗೆ ಅಮಿತ್ ಶಾ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಕ್ಲಸ್ಟರ್ ಸಭೆಗಳನ್ನು ಮೂರು ನಾಯಕರು ನಡೆಸಲಿದ್ದಾರೆ. 28 ಲೋಕಸಭಾ ಕ್ಷೇತ್ರಗಳನ್ನು ಎಂಟು ಸಂಘಟನಾ ಕ್ಲಸ್ಟರ್ಗಳಾಗಿ ವಿಂಗಡಣೆ ಮಾಡುವ ಕುರಿತು 1 ಬಾರಿಯ ಭೇಟಿಯ ವೇಳೆ 1 ದಿನದಲ್ಲಿ 2 ಕ್ಲಸ್ಟರ್ ಗಳ ಸಭೆ ನಡೆಸಲಿದ್ದಾರೆ ಎಂದು ಹೇಳಲಗುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ತಿಂಗಳ 10ರಂದು ರಾಜ್ಯಕ್ಕೆ ಭೇಟಿ…

Read More

ಗದಗ : ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬಳು ಇಬ್ಬರು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದಳು. ಆದರೆ ವೈದ್ಯರ ನಿರ್ಲಕ್ಷತನದಿಂದ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದೆ ಇಬ್ಬರು ಕಂದಮ್ಮಗಳು ಸಾವನಪ್ಪಿದ್ದು, ತಾಯಿ ಕೂಡ ಅಸ್ವಸ್ಥಳಾಗಿದ್ದಾಳೆ. ತಕ್ಷಣ ಬಾದಾಮಿ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ, ಆ ಬಾಣಂತಿ ಕೂಡ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಬಾಣಂತಿ, ಅವಳಿ ಕಂದಮ್ಮಗಳ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿ ವಿರುಪಾಪುರ ಗ್ರಾಮದ ತುಂಬು ಗರ್ಭಿಣಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಗಜೇಂದ್ರಗಡ ಪಟ್ಟಣದ ಕಾರೊಡಗಿಮಠ ಖಾಸಗಿ ಆಸ್ಪತ್ರೆಗೆ ಫೆಬ್ರುವರಿ 2 ರಂದು 28 ವರ್ಷದ ತುಂಬು ಗರ್ಭಿಣಿ ನಂದಿನಿ ಹರಿಗೆಗೆ ಎಂದು ದಾಖಲಿಸಲಾಗಿತ್ತು. ಅಂದು ವೈದ್ಯರು ಎರಡು ಬಾರಿ ಸ್ಕ್ಯಾನ್ ಮಾಡಿದ್ದಾರೆ. ಆಗ ಎರಡು ಅವಳಿ ಮಕ್ಕಳು ಚೆನ್ನಾಗಿವೆ ಎಂದು ಹೇಳಿದ್ದಾರೆ. ಸಿಜೆರಿಯನ್ ಮಾಡಿಯೇ ಹೆರಿಗೆ ಮಾಡಿಬೇಕಾಗುತ್ತೆ ಅಂತ ಕುಟುಂಬಸ್ಥರಿಗೆ ವೈದ್ಯರು ತಿಳಿಸಿದ್ದಾರೆ.…

Read More

ಬೆಂಗಳೂರು : ಇತ್ತೀಚಿಗೆ ಆನ್ಲೈನ್ ನಲ್ಲಿ ಹಣ ಕಳೆದು ಕೊಳ್ಳುತ್ತಿರುವವರ ಸಂಖ್ಯೆ ಜಾಸ್ತಿ ಆಗುತ್ತಿದೆ. ಅದರಲ್ಲೂ, ಬುದ್ಧ ಜನರನ್ನೇ ಸೈಬರ್ ಕಳ್ಳರು ಟಾರ್ಗೆಟ್ ಮಾಡುತ್ತಿದ್ದಾರೆ.ವರ್ಕ್‌ ಫ್ರಂ ಹೋಮ್ ಕೆಲಸದ ಆಮಿಷವೊಡ್ಡಿ ಸೈಬರ್ ವಂಚಕರು ಮಹಿಳಾ ಇಂಜಿನೀಯರ್‌ಗೆ ಲಕ್ಷ ಲಕ್ಷ ವಂಚನೆ ಮಾಡಿರುವ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿಶಾ ಯಾದವ್(36) ವಂಚನೆಗೊಳಗಾದ ಮಹಿಳೆ. ಎಚ್‌ಎಎಲ್ ನಿವಾಸಿಯಾಗಿರುವ ಮಹಿಳೆ. ವಂಚಕರ ಮಾತುಗಳನ್ನು ನಂಬಿ 18 ಲಕ್ಷ ರೂ.ಕಳೆದುಕೊಂಡಿದ್ದಾರೆ.ಸೈಬರ್ ಕಳ್ಳರು ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಬಗ್ಗೆ ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದಾರೆ. ಮಹಿಳೆ ಮೊಬೈಲ್ ನಂಬರ್ ಕಲೆಕ್ಟ್ ಮಾಡಿಕೊಂಡಿರುವ ಖದೀಮರು. ಮೊದಲಿಗೆ ವರ್ಕ್ ಫ್ರಂ ಹೋಮ್ ಕೆಲಸ ಇದೆ ಎಂದು ಸಂದೇಶ ಕಳಿಸಿದ್ದಾರೆ. ಬಳಿಕ ಟೆಲಿಗ್ರಾಾಂ ಲಿಂಕ್ ಕಳಿಸಿ ಇದರಲ್ಲಿ ಜಾಯಿನ್ ಆಗುವಂತೆ ಮಹಿಳೆಗೆ ತಿಳಿಸಿದ್ದಾರೆ. ವಂಚಕರ ತಿಳಿಸಿದಂತೆ ಜಾಯಿನ್ ಆಗಿದ್ದಾರೆ. ನಂತರ ಅಶ್ವಿನಿ ಎಂಬ ಹೆಸರಿನಲ್ಲಿ ನಿಶಾಗೆ ಒಂದು ಸಂದೇಶ ಬಂದಿದೆ. 17 ಉಚಿತ ಟಾಸ್ಕ್…

Read More