Author: kannadanewsnow05

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ಸೂಟ್ಕೇಸ್ ನಲ್ಲಿ ಶವವನ್ನ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿ ರಾಕೇಶ್ ಕಡೇಕರ್​ಗೆ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶಿಸಲಾಗಿದೆ. ನಿನ್ನೆ ರಾತ್ರಿ ಆರೋಪಿಯನ್ನು ಬೆಂಗಳೂರಿಗೆ ಕರೆತಂದಿದ್ದ ಪೊಲೀಸರು ಇಂದು ಕೋರಮಂಗಲ ಎನ್​​ಜಿವಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜಡ್ಜ್ ನಿವಾಸಕ್ಕೆ ಹಾಜರುಪಡಿಸಿದ್ದರು. ಹೌದು ಆರೋಪಿಯನ್ನು ಪೊಲೀಸರು ಇಂದು ಜಡ್ಜ್ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ಬಳಿಕ ಆರೋಪಿ ರಾಕೇಶ್‌ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ನಿನ್ನೆ ರಾತ್ರಿ ಆರೋಪಿಯನ್ನು ಪೊಲೀಸರು ಬೆಂಗಳೂರಿಗೆ ಕರೆತಂದಿದ್ದರು. ಪುಣೆಯಿಂದ ಬೆಂಗಳೂರಿಗೆ ಆರೋಪಿ ರಾಕೇಶನನ್ನು ಪೊಲೀಸರು ಕರೆತಂದಿದ್ದರು. ಸದ್ಯ ರಾಕೇಶ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾನೆ. ಪ್ರಕರಣ ಹಿನ್ನೆಲೆ? ಪತ್ನಿಯ ಕೊಲೆ ಮಾಡಿದ ರಾಕೇಶ್‌, ಶವದ ಕಾಲುಗಳನ್ನ ಮುರಿದು ಶವವನ್ನ ಟ್ರ್ಯಾಲಿ ಬ್ಯಾಗ್‌ಗೆ ತುಂಬಿದ್ದ. ಅದೇ ಬ್ಯಾಗ್‌ನನ್ನ ಎಳೆಯುವಾಗ ಹ್ಯಾಂಡಲ್‌ ಕಟ್ ಆಗಿದೆ. ಹೀಗಾಗಿ ಶವವನ್ನ ಅಲ್ಲೇ ಬಿಟ್ಟು ಕಾರ್‌ನಲ್ಲಿ ಎಸ್ಕೇಪ್ ಆಗಿದ್ದ. ಮಾರ್ಚ್‌ 27ರಂದು ಮಧ್ಯಾಹ್ನ ಗೌರಿ…

Read More

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಯುಗಾದಿ ಹಬ್ಬದ ದಿನದಂದು ಘೋರವಾದ ದುರಂತ ಒಂದು ಸಂಭವಿಸಿದೆ. ಯುಗಾದಿ ಹಿನ್ನೆಲೆಯಲ್ಲಿ ಪುಣ್ಯ ಸ್ನಾನಕ್ಕೆಂದು ತ್ರಿವೇಣಿ ಸಂಗಮದಲ್ಲಿ ನದಿಗೆ ಇಳಿದಿದ್ದ ಬಾಲಕ ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ನಡೆದಿದೆ. ಮೃತ ಬಾಲಕನನ್ನು ಶರಣ್ (13) ಎಂದು ತಿಳಿದುಬಂದಿದೆ. ಮೃತ ಶರಣ್ ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ನಿವಾಸಿಯಾಗಿದ್ದು, ಸ್ನೇಹಿತರ ಜೊತೆ ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಬಂದಿದ್ದ. ಇವಳೇ ಸ್ನಾನಕ್ಕೆ ಎಂದು ನದಿಗೆ ಹೇಳಿದಾಗ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಶವವನ್ನು ಹೊರ ತೆಗೆದಿದ್ದಾರೆ. ಕುಟುಂಬಸ್ಥ ಆಕ್ರಂದನ ಮುಗಿಲು ಮುಟ್ಟಿದೆ.

Read More

ರಾಯಚೂರು : ರಾಯಚೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಬಹಿರ್ದೆಸೆಗೆ ಹೋದ ಸಂದರ್ಭದಲ್ಲಿ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ಮಾಡಿದೆ. ಈ ವೇಳೆ ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಸಬಾ ಎಂಬ ಗ್ರಾಮದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಸಬಾ ಗ್ರಾಮದಲ್ಲಿ ಸಿದ್ದಪ್ಪ (6) ಎನ್ನುವ ಬಾಲಕ ನಿನ್ನೆ ಸಂಜೆ ಬಹಿರ್ದೆಸೆಗೆ ಎಂದು ತೆರಳಿದ್ದ ಈ ವೇಳೆ ಬೀದಿ ನಾಯಿ ಏಕಾಏಕಿ ದಾಳಿ ಮಾಡಿದೆ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇದೀಗ ಬಾಲಕ ಸಿದ್ದಪ್ಪ ಸಾವನಪ್ಪಿದ್ದಾನೆ.

Read More

ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2025-26ನೇ ಶೈಕ್ಷಣಿಕ ವರ್ಷಕ್ಕೆ 10 ಮತ್ತು 12ನೇ ತರಗತಿಯ ಪಠ್ಯಕ್ರಮವನ್ನು ಬಿಡುಗಡೆ ಮಾಡಿದೆ. ಹೊಸದಾಗಿ ಪ್ರಕಟವಾದ ಪಠ್ಯಕ್ರಮವು ಶೈಕ್ಷಣಿಕ ವಿಷಯ, ಕಲಿಕೆಯ ಫಲಿತಾಂಶಗಳು ಮತ್ತು 2026 ರ CBSE ಮಂಡಳಿ ಪರೀಕ್ಷೆಗಳಿಗೆ ಮಾರ್ಗಸೂಚಿಯ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಒದಗಿಸುತ್ತದೆ. CBSE ಪರೀಕ್ಷಾ ಪ್ರಕ್ರಿಯೆಯ ಪ್ರಮುಖ ಕೂಲಂಕಷ ಪರೀಕ್ಷೆಯನ್ನು ಘೋಷಿಸಿದೆ. 2025-26ರ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗುವ 10 ನೇ ತರಗತಿ ವಿದ್ಯಾರ್ಥಿಗಳು ಈಗ ಪ್ರತಿ ವರ್ಷ ಫೆಬ್ರವರಿ ಮತ್ತು ಏಪ್ರಿಲ್‌ನಲ್ಲಿ ಎರಡು ಬೋರ್ಡ್ ಪರೀಕ್ಷೆಗಳನ್ನು ಬರೆಯಲು ಅವಕಾಶವನ್ನು ಹೊಂದಿರುತ್ತಾರೆ.ಆದಾಗ್ಯೂ, 12 ನೇ ತರಗತಿ ಪರೀಕ್ಷೆಗಳನ್ನು ವರ್ಷಕ್ಕೊಮ್ಮೆ ನಡೆಸುವುದನ್ನು ಮುಂದುವರಿಸಲಾಗುತ್ತದೆ. 2026 ರ 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 17 ರಂದು ಪ್ರಾರಂಭವಾಗಲಿದ್ದು, ಸುಮಾರು 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗುವ ನಿರೀಕ್ಷೆಯಿದೆ. CBSE 10ನೇ ತರಗತಿಯ ಪಠ್ಯಕ್ರಮ 2025: ಹೊಸ ಫಲಿತಾಂಶ ಕ್ಯಾಲ್ಕುಲೇಷನ್ ವ್ಯವಸ್ಥೆ 2025-26ನೇ ಶೈಕ್ಷಣಿಕ ವರ್ಷದ CBSE…

Read More

ಕಲಬುರ್ಗಿ : ನಿರುದ್ಯೋಗಿ ಯುವಕರನ್ನೇ ಟಾರ್ಗೆಟ್ ಮಾಡಿ, ಸರ್ಕಾರಿ ಹುದ್ದೆ ಕೊಡಿಸುವುದಾಗಿ ನಂಬಿಸಿ, ಅವರಿಂದ ಲಕ್ಷ ಲಕ್ಷ ಹಣ ಪಿಕಿ, ನಕಲಿ ನೇಮಕಾತಿ ಆದೇಶ ಪತ್ರ ವಿತರಣೆ ಮಾಡುತ್ತಿದ್ದ ಇಬ್ಬರು ಕತರ್ನಾಕ್ ಖದೀಮರನ್ನು ಕಲ್ಬುರ್ಗಿಯ ಸೆನ್ ಠಾಣೆ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಕಲ್ಬುರ್ಗಿಯ ಸೆನ್ ಠಾಣೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಮಹಾರಾಷ್ಟ್ರದ ಸೋಲಾಪುರದಲ್ಲಿ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ನಾಗೇಶ್ ಸಂಕಲ್ ಮತ್ತು ಅಭಿಷೇಕ್ ಮಾತಾಡಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತರು ಕಲ್ಬುರ್ಗಿ ತಾಲೂಕಿನ ಮೇಳಕುಂದ (ಬಿ) ಗ್ರಾಮದ ನಾಗೇಶ್ ಸುಂಕನ್ ಹಾಗು ಅಭಿಷೇಕ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತಾರೀಹಾಳ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಆರೋಪಿಗಳು ಕಂದಾಯ, ರೈಲ್ವೆ ಇಲಾಖೆ, ಆರೋಗ್ಯ ಇಲಾಖೆ, ವಾಣಿಜ್ಯ ತೆರಿಗೆ, ಸಮಾಜ ಕಲ್ಯಾಣ, ಪಂಚಾಯತ್ ರಾಜ್, ಅಬಕಾರಿ ಇಲಾಖೆ, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಎಸಗಿದ್ದರು. ಯುವಕರ ಬಳಿ ಲಕ್ಷ ಹಣ ಪಡೆದು ವಂಚನೆ ಎಸಗುತ್ತಿದ್ದರು. ಡಿ ಗ್ರೂಪ್…

Read More

ವಿಜಯಪುರ : ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಆದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಂಬರುವ ವಿಜಯದಶಮಿಗೆ ರಾಜ್ಯದಲ್ಲಿ ಹೊಸ ಪಕ್ಷ ರಚನೆ ಮಾಡುವ ಕುರಿತು ಸುಳಿವು ನೀಡಿದ್ದು, ರಾಜ್ಯದಲ್ಲಿ ಹಿಂದೂ ಪಕ್ಷವನ್ನು ಕಟ್ಟುವ ಅನಿವಾರ್ಯತೆ ಇದೆ. ಹಾಗಾಗಿ ಮುಂದಿನ ವಿಜಯದಶಮಿಗೆ ಹೊಸ ಪಕ್ಷ ರಚನೆ ಮಾಡುವ ಅನಿವಾರ್ಯತೆ ಬರಲಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂ ಪಕ್ಷವನ್ನು ಕಟ್ಟುವ ಅನಿವಾರ್ಯತೆ ಇದೆ. ಇದರಿಂದ ರಾಜ್ಯಾದ್ಯಂತ ನಮ್ಮ ಹೋರಾಟ ಆರಂಭವಾಗಿದೆ. ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುತ್ತೇನೆ. ಬಿಎಸ್ ಯಡಿಯೂರಪ್ಪ ವಿಜಯೇಂದ್ರ ಕುಟುಂಬ ರಾಜಕಾರಣ ತಡೆಯಬೇಕು ಎಂದು ಅವರು ಮತ್ತೆ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು. ಅಕಸ್ಮಾತ್ ಯಡಿಯೂರಪ್ಪ ವಿಜಯೇಂದ್ರನೆ ಪಕ್ಷಕ್ಕೆ ಅನಿವಾರ್ಯವಾದರೆ, ವಿಜಯೇಂದ್ರನನ್ನು ಅಧ್ಯಕ್ಷರಾಗಿ ಮುಂದುವರಿಸಿದರೆ ಅದು ಪಕ್ಷದ ಕರ್ಮ. ನಾವು ಹಿಂದೂ ಪರವಾಗಿ ಪಕ್ಷ ಕಟ್ಟಬೇಕಾದ ಅನಿವಾರ್ಯತೆ ಬರಲಿದೆ.…

Read More

ಚಿಕ್ಕಮಗಳೂರು : ಕೌಟುಂಬಿಕ ಕಲಹಕ್ಕೆ ಬೇಸತ್ತ ವ್ಯಕ್ತಿಯೊಬ್ಬ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಬಳಿ ಈ ಒಂದು ಘಟನೆ ನಡೆದಿದೆ. ಪಾಳು ಬಿದ್ದ ಬಸ್ ನಿಲ್ದಾಣದಲ್ಲಿ ಮೋಹನ್ (37) ನೇಣಿಗೆ ಶರಣಾಗಿದ್ದಾನೆ. ಚಿಕ್ಕಮಗಳೂರು ನಗರದ ಕೆಂಪನಹಳ್ಳಿ ನಿವಾಸಿಯಾಗಿರುವ ಮೋಹನ್, 6 ವರ್ಷಗಳ ಹಿಂದೆ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗಿದ್ದ. ಚಿಕ್ಕಮಗಳೂರು ಮೆಡಿಕಲ್ ಶಾಪ್ ನಲ್ಲಿ ಮೋಹನ್ ಕೆಲಸ ಮಾಡುತ್ತಿದ್ದ. ಈ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಯಚೂರು : ಯುಗಾದಿ ಹಬ್ಬದ ದಿನದಂದೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮುಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಅಕ್ಕನನ್ನು ಬಿಡಿಸಲು ಬಂದ ತಂಗಿಯ ಮೇಲು ಮಚ್ಚಿನಿಂದ ಹಲ್ಲೆ ನಡೆಸಿ ಪಾಪಿ ಪತಿ ಪರಾರಿಯಾಗಿರುವ ಘಟನೆ ರಾಯಚೂರು ತಾಲೂಕಿನ ಏಗನೂರು ಎಂಬ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ಪತ್ನಿ ಪದ್ಮಾವತಿ (33) ಹಾಗೂ ಆಕೆಯ ತಂಗಿ ಭೂದೇವಿ (23) ಮೇಲೆ ಪದ್ಮಾವತಿ ಪತಿ ತಿಮ್ಮಪ್ಪ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಮಚ್ಚಿನಿಂದ ದಾಳಿ ನಡೆಸಿದ ಪದ್ಮಾವತಿ ಪತಿ ತಿಮ್ಮಪ್ಪ ಯಾದವ್ ಪತ್ನಿ ಜೊತೆಗೆ ಜಗಳವಾಡಿ 2ನೇ ಮದುವೆಯಾಗಿದ್ದ. ತಿಮ್ಮಪ್ಪ ಯಾದವ್ ಜೀವನಾಂಶ ಮತ್ತು ಜಮೀನಿನಲ್ಲಿ ಪಾಲು ಕೋರಿ ಪತ್ನಿ ಪದ್ಮಾವತಿ ನ್ಯಾಯಾಲಯ ಮೆಟ್ಟಿಲೇರಿದ್ದಳು. ಕೋರ್ಟ್ ಆದೇಶ ಪಾಲಿಸಿದ ಹಿನ್ನೆಲೆಯಲ್ಲಿ ತಿಮ್ಮಪ್ಪ ಯಾದವ್ ಜೈಲು ಪಾಲಾಗಿದ್ದ. ಬಳಿಕ 50,000 ಹಣ ನೀಡಿ ಸೆಟಲ್ಮೆಂಟ್ ಮಾಡಿಕೊಂಡಿದ್ದ. ಈಗ ಏಕಾಏಕಿ ಪತ್ನಿ ಮೇಲೆ ತಿಮ್ಮಪ್ಪ ಮೆಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಅಕ್ಕನ ರಕ್ಷಣೆಗೆ ಬಂದ ತಂಗಿ ಭೂದೇವಿ…

Read More

ಬೆಂಗಳೂರು : ಪ್ರಸ್ತುತ ಕರ್ನಾಟಕದಲ್ಲಿ ಪೊಲೀಸರು ಬ್ರಿಟಿಷರ ಕಾಲದ ಟೋಪಿಗಳನ್ನೇ ಬಳಸುತ್ತಿದ್ದಾರೆ. ಈ ಒಂದು ಟೋಪಿ ಬದಲಾವಣೆಗಾಗಿ ಮೊದಲಿನಿಂದಲೂ ಕೂಗು ಕೇಳಿ ಬಂದಿತ್ತು. ಆದರೆ ಇದೀಗ ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್​​ ಪೀಕ್​ ಹ್ಯಾಟ್​ ಹೆಡ್​ ಕಾನ್​​ಸ್ಟೆಬಲ್​​ ಹಾಗೂ ಕಾನ್​​ ಸ್ಟೆಬಲ್​ಗಳ ತಲೆಯನ್ನು ಅಲಂಕರಿಸಲಿದೆ. ಇಂತಹದೊಂದು ಸಾಹಸಕ್ಕೆ ಪೊಲೀಸ್​ ಇಲಾಖೆ ದಿಟ್ಟ ಹೆಜ್ಜೆಯಿಟ್ಟಿದೆ. ಹೌದು ಕರ್ನಾಟಕ ಪೊಲೀಸ್ ಇಲಾಖೆಯ ಹೆಡ್ ಕಾನ್‌ಸ್ಟೆಬಲ್ ಮತ್ತು ಕಾನ್‌ಸ್ಟೆಬಲ್‌ಗಳು ಬಹಳ ವರ್ಷಗಳಿಂದ ಬ್ರಿಟಿಷ್ ಕಾಲದ ಟೋಪಿಗಳನ್ನು ಧರಿಸುತ್ತಿದ್ದಾರೆ. ಇದು ಆರೋಗ್ಯ ಮತ್ತು ಇತರೆ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಹೊಸ ಪೀಕ್ ಕ್ಯಾಪ್‌ಗಳನ್ನು ನೀಡಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಬಗ್ಗೆ ಏಪ್ರಿಲ್​ 4ರಂದು ಸಭೆ ನಡೆಯಲಿದೆ. ಪ್ರಸ್ತುತ ಪೊಲೀಸ್ ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಗ್ಲೋಚ್ ಟೋಪಿಯಿಂದಾಗಿ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಗಳ ಬಗ್ಗೆ ಇತ್ತೀಚೆಗೆ ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿತ್ತು. ಇನ್ನು ಕೇರಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ಪೊಲೀಸ್…

Read More

ಬೆಳಗಾವಿ : ಕಳೆದ ಮಾರ್ಚ್ 26 ರಂದು ಕುಂದಾನಗರಿ ಬೆಳಗಾವಿಯಲ್ಲಿ ಎಂಬಿಎ ಪದವೀಧರೆ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಬೆಳಗಾವಿಯ ನೆಹರು ನಗರದ ಪಿಜಿಯಲ್ಲಿ ನೇಣು ಬಿಗಿದುಕೊಂಡು ಯುವತಿ ಐಶ್ವರ್ಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸೂಸೈಡ್‌ಗೆ ತನ್ನ ಪ್ರಿಯಕರ ಮತ್ತೋರ್ವ ಯುವತಿಯ ಲವ್ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ. ಹೌದು ವಿದ್ಯಾರ್ಥಿನಿ ಐಶ್ವರ್ಯ ಲಕ್ಷ್ಮಿ ಆತ್ಮಹತ್ಯೆ ಇದೀಗ ಸ್ಪೋಟಕ ತಿರುವು ಸಿಕ್ಕಿದೆ ಐಶ್ವರ್ಯ ಪ್ರಿಯಕರ ಆಕಾಶ್ ಬೇರೊಬ್ಬ ಯುವತಿಯನ್ನು ಲವ್ ಮಾಡುತ್ತಿದ್ದ. ಅದಕ್ಕಾಗಿ ಐಶ್ವರ್ಯ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಆಕಾಶ್ ಮತ್ತು ಐಶ್ವರ್ಯ ಲಕ್ಷ್ಮಿ ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.ಇಬ್ಬರು ವಿಜಯಪುರ ಜಿಲ್ಲೆಯ ಚಡಚಣ ಮೂಲದವರು ಎಂದು ತಿಳಿದು ಬಂದಿದೆ. ಆಕಾಶ್ ಇತ್ತೀಚಿಗೆ ಮತ್ತೊಬ್ಬ ಯುವತಿಯ ಜೊತೆಗೆ ಲವ್ ಮಾಡುತ್ತಿದ್ದ.ಈ ವಿಚಾರ ಗೊತ್ತಾಗಿ ಪಿಜಿಯಲ್ಲಿ ನೇಣು ಬಿಗಿದುಕೊಂಡು ಐಶ್ವರ್ಯ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗು ಮುನ್ನ ಆಕಾಶ್ ಗೆ ಐಶ್ವರ್ಯ ಲಕ್ಷ್ಮಿ ಮೆಸೇಜ್ ಮಾಡಿದ್ದಳು. ಮೆಸೇಜ್ ಮಾಡುತ್ತಿದ್ದಂತೆ ಆಕಾಶ ಐಶ್ವರ್ಯ ರೋಮ್ಗೆ…

Read More