Author: kannadanewsnow05

ಬೆಂಗಳೂರು : ನಾಳೆಯಿಂದ ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ. ಆದರೆ ಇದು ಜಾತಿಗಣತಿ ಅಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ ನಾಯ್ಕ್ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದ ನಾಯ್ಕ್, ನಾಳೆಯಿಂದ ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ. ಇದು ಜಾತಿಗಣತಿ ಅಲ್ಲ. ನಾಳೆಯಿಂದ ನಡೆಯುತ್ತಿರುವುದು ಜಾತಿಗಣತಿ ಅಲ್ಲ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ಸಾಮಾಜಿಕ ಶೈಕ್ಷಣಿಕಹಾಗು ಆರ್ಥಿಕ ಸ್ಥಿತಿಗತಿ ತಿಳಿಯುವುದಕ್ಕಾಗಿ ಸಮೀಕ್ಷೆ ಮಾಡುತ್ತಿದ್ದೇವೆ. ಕೆಲವರು ಇದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ನಮ್ಮ ಸಮೀಕ್ಷೆ ಪೂರ್ಣಗೊಳ್ಳುವುದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಮಧುಸೂಧನ್ ನಾಯಕ್ ತಿಳಿಸಿದರು.

Read More

ಬೆಂಗಳೂರು : “ನಾನು ಸರ್ಕಾರದಲ್ಲಿದ್ದೇನೆ. ಸಮಾಜದವರ ಅಭಿಪ್ರಾಯಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದು ಅವರ ಅಭಿಪ್ರಾಯ. ಆನಂತರ ಇದರ ಬಗ್ಗೆ ಮಾತನಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಭಾನುವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಶನಿವಾರ ನಡೆದಿದ್ದ ಒಕ್ಕಲಿಗ ಮಠಾಧೀಶರ ಹಾಗೂ ಮುಖಂಡರ ಸಭೆಯಲ್ಲಿ ಜಾತಿಜನಗಣತಿ ಮುಂದೂಡುವ ನಿರ್ಣಯದ ಬಗ್ಗೆ ಕೇಳಿದಾಗ ಆ ಬಗ್ಗೆ ಈಗ ಪ್ರತಿಕ್ರಿಯಿಸುವುದಿಲ್ಲ ಎಂದರು. ದೆಹಲಿ ಭೇಟಿಯ ಕುರಿತು ಕೇಳಿದಾಗ, “ಕಾವೇರಿ ನೀರಿನ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ದಿನಾಂಕ ನಿಗದಿಯಾಗಿದ್ದು, ಈ ಬಗ್ಗೆ ವಕೀಲರುಗಳ ಬಳಿ ಚರ್ಚಿಸಲು ಹಾಗೂ ಒಂದಷ್ಟು ಕೆಲಸಗಳ ಕಾರಣಕ್ಕೆ ತೆರಳುತ್ತಿರುವೆ” ಎಂದು ತಿಳಿಸಿದರು.

Read More

ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆ ನಡೆದಿದ್ದು, ಗೆಜ್ಜೆಗದಹಳ್ಳಿಯಲ್ಲಿ 2ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾನೆ. ಮೃತ ಕಾರ್ಮಿಕನನ್ನು ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ಬೀರಪ್ಪ (38) ಎಂದು ತಿಳಿದುಬಂದಿದೆ. ಕಳೆದ ಎಂಟು ವರ್ಷಗಳಿಂದ ಬೀರಪ್ಪ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಇದೀಗ ಎರಡನೇ ಮಹಡಿಯಿಂದ ಆಯತಪ್ಪಿ ಬಿದ್ದು ಬೀರಪ್ಪ ಸಾವನಪ್ಪಿದ್ದಾನೆ. ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾಸನ : ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪುರಸಭೆ ಆವರಣದಲ್ಲಿರುವ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದೇವಸ್ಥಾನಕ್ಕೆ ಮುಖ ಮುಚ್ಚಿಕೊಂಡು ಮಹಿಳೆ ಒಬ್ಬಳು ದೇವಸ್ಥಾನದ ಒಳಗಡೆ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ್ದು ಇದೇ ಮಹಿಳೆ ಎಂದು ಅನುಮಾನ ವ್ಯಕ್ತವಾಗುತ್ತಿದೆ. ಮಹಿಳೆಯ ಮೇಲೆ ಜನರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಪೂರಕವೆಂಬಂತೆ ಮಹಿಳೆ ದೇವಸ್ಥಾನದ ಒಳಗಡೆ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಇನ್ನು ಘಟನಾ ಸ್ಥಳಕ್ಕೆ ಹಾಸನ ಜಿಲ್ಲಾ ಎಸ್.ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಿಡಿಗೇಡಿಗಳನ್ನು ಬಂಧಿಸುವಂತೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Read More

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚಿನ್ನಯ್ಯ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ 5ನೇ ವಿಡಿಯೋ ರಿಲೀಸ್ ಆಗಿದ್ದು 2023 ಆಗಸ್ಟ್ ನಲ್ಲಿ ಈ ಒಂದು ವಿಡಿಯೋಗಳನ್ನು ರೆಕಾರ್ಡ್ ಮಾಡಿಟ್ಟುಕೊಳ್ಳಲಾಗಿತ್ತು. ಇದೀಗ ಆರೋಪಿಗಳು ಒಂದೊಂದಾಗಿ ವಿಡಿಯೋ ಬಿಡುತ್ತಿದ್ದಾರೆ. ತಿಮರೋಡಿ ಜೊತೆಗೆ ಮಾತನಾಡುವಾಗ ಚಿನ್ನಯ್ಯ ಸೌಜನ್ಯ ಕೊಲೆ ಪ್ರಕರಣದ ಕುರಿತು ಮಾತನಾಡಿದ್ದಾನೆ ಹೌದು ತಿಮರೊಡಿ ಮುಂದೆ ಸೌಜನ್ಯ ಕೇಸ್ ಬಗ್ಗೆ ಪ್ರಸ್ತಾಪಿಸಲಾಗಿದೆ. ಆರೋಪಿ ಚಿನ್ನಯ ತಿಮ್ಮರೋಡಿ ಮುಂದೆ ಸೌಜನ್ಯ ಪ್ರಕರಣದ ಕುರಿತು ಪ್ರಸ್ತಪಿಸಿದ್ದಾನೆ. ಸೌಜನ್ಯ ಕಿಡ್ನಾಪ್ ಕೇಸ್ನಲ್ಲಿ ರವಿ ಪೂಜಾರಿ ಭಾಗಿಯಾಗಿದ್ದಾನೆ. ಕೊಲೆ ಮಾಡಿದವರಿಗೆ ಊಟ ಮತ್ತು ತಿಂಡಿ ಕೊಟ್ಟಿದ್ದಾನೆ ಕೊಲೆ ಮಾಡಿದವರಿಗೆ ರವಿ ಪೂಜಾರಿ ಸಹಾಯ ಮಾಡಿದ್ದಾನೆ. ರವಿ ಪೂಜಾರಿ ನಂತರ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.ಸಹಾಯ ಮಾಡಿದ ರವಿ ಪೂಜಾರಿ ಇದೀಗ ಇಲ್ಲ ಎಂದು ಆರೋಪಿ ಚಿನ್ನಯ್ಯ ಹೇಳಿಕೆ ನೀಡಿದ್ದಾನೆ. ರವಿ ಪೂಜಾರಿ ಮತ್ತು ಗೋಪಾಲಕೃಷ್ಣ ಒಂದೇ ರೂಮ್ನಲ್ಲಿದ್ದರು. ಧರ್ಮಸ್ಥಳದಲ್ಲಿ ಇಬ್ಬರು ಒಟ್ಟಿಗೆ ರೂಮ್ನಲ್ಲಿ ಇದ್ದರು ಇಬ್ಬರು ಬಾಹುಬಲಿ ಬೆಟ್ಟದಲ್ಲಿ…

Read More

ಬೆಂಗಳೂರು : ಇನ್ನೇನು ಕೆಲವೇ ದಿನಗಳಲ್ಲಿ ಬಹು ನಿರೀಕ್ಷಿತ ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್-1 ಬಿಡುಗಡೆಯಾಗಲಿದೆ. ಈಗಾಗಲೇ ಟ್ರೈಲರ್ ಹೊರಬರಲು ಮುಹೂರ್ತ ಫಿಕ್ಸ್ ಆಗಿದೆ. ದೊಡ್ಡಮಟ್ಟದಲ್ಲಿ ಸಿನಿಮಾ ಪ್ರಮೋಷನ್ ಪ್ಲ್ಯಾನ್ ನಡೀತಿದೆ. ಹೌದು ಇಡೀ ಭಾರತೀಯ ಚಿತ್ರರಂಗವೇ ‘ಕಾಂತಾರ’ ಹೊಸ ಅಧ್ಯಾಯ ಸಂಭ್ರಮಿಸಲಿದೆ. ಅದಕ್ಕಾಗಿ ಸ್ಟಾರ್ ನಟರು ಹೊಂಬಾಳೆ ಜೊತೆ ಕೈ ಜೋಡಿಸುತ್ತಿದ್ದಾರೆ. ಈ ಬಗ್ಗೆ ಕಾಂತಾರಾ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ನಿಗದಿಪಡಿಸಿರುವ ಬಗ್ಗೆ ಹೊಂಬಾಳೆ ಫಿಲ್ಮ್ಸ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಧಿಕೃತ ಮಾಹಿತಿ ಪ್ರಕಟಿಸಿದೆ. ಸೆಪ್ಟೆಂಬರ್ 22ರ ಸೋಮವಾರ ಮಧ್ಯಾಹ್ನ 12:45 ಗಂಟೆಗೆ ‘ಕಾಂತಾರ ಚಾಪ್ಟರ್‌-1’ ಸಿನಿಮಾ ಟ್ರೈಲರ್ ಬಿಡುಗಡೆ ಆಗಲಿದೆ. ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ದೊಡ್ಡ ಈವೆಂಟ್ ಮಾಡಿ ಟ್ರೈಲರ್ ರಿಲೀಸ್ ಮಾಡುವ ಸಾಧ್ಯತೆಯಿದೆ. ಇನ್ನು ಹೃತಿಕ್ ರೋಷನ್ ಹಿಂದಿ ವರ್ಷನ್ ಟ್ರೈಲರ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಿದ್ದಾರೆ. ಅದೇ ರೀತಿ, ತೆಲುಗಿಗೆ ಪ್ರಭಾಸ್‌, ಮಲಯಾಳಂಗೆ ಪೃಥ್ವಿರಾಜ್‌ ಸುಕುಮಾರನ್‌, ತಮಿಳಿಗೆ ಶಿವಕಾರ್ತಿಕೇಯನ್‌ ಪ್ರಚಾರಕ್ಕೆ ಸಾಥ್‌…

Read More

ಮಹಾಲಯ ಅಮವಾಸ್ಯೆ (ಪಿತೃಪಕ್ಷದ ಕೊನೆಯ ದಿನ)ವನ್ನು ಅತ್ಯಂತ ಪವಿತ್ರವಾದ ಮತ್ತು ಶ್ರೇಷ್ಠವಾದ ತಿಥಿ ಎಂದು ಶಾಸ್ತ್ರಗಳು ಹೇಳುತ್ತವೆ. ಇದು ಮುಖ್ಯವಾಗಿ ಪಿತೃಗಳಿಗೆ ತರ್ಪಣ, ಶ್ರಾದ್ಧ, ಪಿಂಡಪ್ರದಾನ ಮಾಡುವ ದಿನ. ಈ ದಿನ ಮಾಡಿದ ಕಾರ್ಯಗಳು ಬಹಳ ಪರಿಣಾಮಕಾರಿ. ಮಹಾಲಯ ಅಮಾವಾಸ್ಯೆಯ ಅನುಕೂಲಗಳು: 1. ಪಿತೃಗಳ ಆಶೀರ್ವಾದ: ಈ ದಿನ ಶ್ರಾದ್ಧ–ತರ್ಪಣ ಮಾಡಿದರೆ ಪಿತೃಗಳು ತೃಪ್ತರಾಗಿ ವಂಶಕ್ಕೆ ಕೃಪೆ ಮಾಡುತ್ತಾರೆ. 2. ಅಪರ ಪಿತೃಗಳಿಗೆ ಲಾಭ: ಪೂರ್ವಜರಿಗೆ ಮೋಕ್ಷ ಸಿಗಲು ಸಹಾಯವಾಗುತ್ತದೆ ಎಂದು ನಂಬಿಕೆ. 3. ಕುಟುಂಬದ ಸಮೃದ್ಧಿ: ಪಿತೃಕೃಪೆಯಿಂದ ಧನ, ಧಾನ್ಯ, ಸಂತಾನ, ಆರೋಗ್ಯದಲ್ಲಿ ಸುಧಾರಣೆ. 4. ಪಾಪ ಕ್ಷಯ: ನಿತ್ಯಕರ್ಮಗಳಲ್ಲಿ ಮಾಡದಿದ್ದ ಶ್ರಾದ್ಧವನ್ನು ಈ ದಿನ ಮಾಡಿದರೆ ವಿಶೇಷ ಫಲ ಸಿಗುತ್ತದೆ. 5. ಆಧ್ಯಾತ್ಮಿಕ ಶ್ರೇಯಸ್ಸು: ಜಪ, ದಾನ, ಅನ್ನಸಂತರ್ಪಣೆ ಮಾಡಿದರೆ ದೀರ್ಘಕಾಲದ ಪುಣ್ಯ. * ಅನಾನುಕೂಲಗಳು (ಅಲಕ್ಷ್ಯ ಮಾಡಿದರೆ):* 1. ಪಿತೃದೋಷ: ಈ ದಿನ ಶ್ರಾದ್ಧ, ತರ್ಪಣ, ಸ್ಮರಣೆಗಳನ್ನು ಮಾಡದಿದ್ದರೆ ಪಿತೃಗಳು ಅಸಮಾಧಾನಗೊಂಡು ಕುಲದಲ್ಲಿ ಅಡೆತಡೆಗಳು ಬರಬಹುದು. 2.…

Read More

ಬೆಂಗಳೂರು : ಈ ಬಾರಿಯ 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ.ಆಕ್ಷೇಪಣೆಗಳನ್ನು ಮಂಡಲಿಯ ಇ-ಮೇಲ್ ವಿಳಾಸ: chairpersonkseab@gmail.comಗೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗೆ ಕಳುಹಿಸಬೇಕು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ www.kseab.karnataka.gov.in ನಲ್ಲಿ ಪರೀಕ್ಷೆ-1, ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟಿಸಿದೆ. 2026ರ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್‌ 9ರ ವರೆಗೆ ಕಾಲಾವಕಾಶ ನೀಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1: ಮಾ.18 ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ,ಮರಾಠಿ, ತಮಿಳು, ಉರ್ದು, ಇಂಗ್ಲಿಷ್,…

Read More

ಚಾಮರಾಜನಗರ : ಚುನಾವಣೆಯಲ್ಲಿ ವಿರುದ್ಧವಾಗಿ ಮತ ಹಾಕಿದ್ದಕ್ಕೆ ಬೇಸತ್ತು ಆತ್ಮಹತ್ಯೆಗೆ ಕುಟುಂಬವೊಂದು ಮುಂದಾಗಿದ್ದ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಉಪಾರಶೆಟ್ಟಿ ಸಮುದಾಯದ ರವಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ವರ್ಷದ ಹಿಂದೆ ಕೇವಲ 5000 ಚೀಟಿ ಹಣ ಕೊಡುವಂತೆ ರವಿ ಕೇಳಿದ್ದಾನೆ. ರವಿ ಬದಲು ಬೇರೆ ಅವರಿಗೆ ಊರಿನ ಜಮಾನರು ಚೀಟಿ ಹಣ ನೀಡಿದ್ದರು. ಇದನ್ನು ಪ್ರಶ್ನೆಸಿ ಗ್ರಾಮದ ಯಜಮಾನರ ಜೊತೆ ರವಿ ಜಗಳವಾಡಿದ್ದ. ಘಟನೆ ನಡೆದ ಒಂದು ವಾರದಲ್ಲಿ ಸಮುದಾಯದ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಯಜಮಾನರ ವಿರೋಧಿ ಬಣ್ಣಕ್ಕೆ ರವಿ ಮತ ಹಾಕಿದ್ದಾನೆ. ಯಜಮಾನರ ವಿರೋಧಿ ಬಣಕ್ಕೆ ಮತ ಹಾಕಿದ್ದಕ್ಕೆ ರವಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಯಾರು ರವಿ ಕುಟುಂಬಸ್ಥರನ್ನು ಮಾತನಾಡಿಸಿದಂತೆ ಕಟ್ಟಾಜ್ಞೆ ಹೊರಡಿಸಲಾಗಿತ್ತು. ಯಾರಾದ್ರೂ ಮಾತನಾಡಿದಿದ್ದರೆ 10,000 ದಂಡ ವಿಧಿಸುವ ಎಚ್ಚರಿಕೆ ಸಹ ನೀಡಲಾಗಿತ್ತು . ಈ ವೇಳೆ ತಪ್ಪಾಯ್ತು ಕ್ಷಮಿಸಿ ಎಂದು ಬೇಡಿಕೊಂಡರು ಊರಿನ ಯಜಮಾನರು ಇದಕ್ಕೆ ಒಪ್ಪಲಿಲ್ಲ. ಇನ್ನು…

Read More

ಬೆಳಗಾವಿ : ಬಸವಣ್ಣನವರು ಲಿಂಗಾಯತ ಧರ್ಮವನ್ನು ಮಾಡಿಲ್ಲ, ಕೆಲವು ಕಂಪನಿಗಳು ಅದನ್ನು ತಯಾರು ಮಾಡಿಕೊಂಡಿವೆ. ಬಸವಣ್ಣನವರು ಹಿಂದೂ ಸಮಾಜದಲ್ಲಿ ಮೌಢ್ಯಗಳ ವಿರುದ್ಧ ಹೋರಾಡಿದ್ದಾರೆಯೇ ಹೊರತು ಲಿಂಗಾಯತ ಧರ್ಮವನ್ನು ಸ್ಥಾಪನೆಯೇ ಮಾಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು. ರಾಯಭಾಗ ತಾಲೂಕಿನ ಹಾರುಗೇರಿಯಲ್ಲಿ ಪಂಚಮಸಾಲಿ ಮೀಸಲಾತಿ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವು ಮಠಾಧೀಶರು ವೀರಶೈವ ಲಿಂಗಾಯತ ಎಂದು ಜಾತಿಗಣತಿಯಲ್ಲಿ ಉಲ್ಲೇಖಿಸುವಂತೆ ಹೇಳುತ್ತಿದ್ದಾರೆ. ಆದರೆ ಎಲ್ಲಿಯವರೆಗೆ ಕೇಂದ್ರ ಸರ್ಕಾರ ವೀರಶೈವ ಲಿಂಗಾಯತ ಎಂದು ಅಧಿಕೃತವಾಗಿ ಘೋಷಣೆ ಮಾಡುವುದಿಲ್ಲವೋ ಅಲ್ಲಿಯವರೆಗೆ ಈ ರೀತಿ ನಾವು ಬರೆಸಿದರೆ ಯಾವುದೇ ಅರ್ಥವಿಲ್ಲ. ಕೆಲವು ಮೂರ್ಖರು ಲಿಂಗಾಯತ ಸಮುದಾಯವನ್ನು ತಪ್ಪು ದಾರಿಗೆ ಎಳೆಯುವುದಕ್ಕೆ ಪ್ರಯತ್ನ ಪಡುತ್ತಿದ್ದಾರೆ ಎಂದು ಯತ್ನಾಳ್​ ಹರಿಹಾಯ್ದರು. ಧರ್ಮ ಎಂದಲ್ಲಿ ಹಿಂದೂ ಎಂದೇ ಬರೆಸಬೇಕು, ಜಾತಿ ಕಾಲಂನಲ್ಲಿ ಲಿಂಗಾಯತ, ಪಂಚಮಸಾಲಿ ಏನಿದೆಯೋ ಅದನ್ನು ಬರೆಸಬೇಕು, ಸರ್ಕಾರದ ಮೀಸಲಾತಿಯಲ್ಲಿ ವೀರಶೈವ ಲಿಂಗಾಯತ ಎಂಬುದೇ ಇಲ್ಲ, ಆರು ಧರ್ಮಕ್ಕೆ ಮಾತ್ರ ನಮ್ಮ…

Read More