Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ಹೊರ ರಾಜ್ಯಗಳಿಂದ ಮಂಡ್ಯ ಜಿಲ್ಲೆಯ ಕೆಆರ್ಎಸ್ ಬೃಂದಾವನ ಗಾರ್ಡನ್ ನೋಡಲು ಬರುತ್ತಿದ್ದ ವಾಹನಗಳನ್ನು ಗುರಿಯಾಗಿಸಿಕೊಂಡು ಅವರಿಂದ ಹಣವನ್ನು ವಸೂಲಿ ಮಾಡುತ್ತಿದ್ದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಕುರಿತು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹೌದು ಕೆಆರ್ಎಸ್ ಪೊಲೀಸ್ ಠಾಣೆಯ ಮುಖ್ಯಪೇದೆ ಸೇರಿದಂತೆ ಒಟ್ಟು ಮೂವರು ಪೊಲೀಸರು ಸೇರಿಕೊಂಡು ಹೊರ ರಾಜ್ಯದಿಂದ ಮಂಡ್ಯದ ಕೆಆರ್ಎಸ್ ಬೃಂದಾವನ ಗಾರ್ಡನ್ ನೋಡಲು ಬರುತ್ತಿದ್ದ ವಾಹನಗಳಿಂದ ಹಣ ವಸೂಲಿ ಮಾಡುತ್ತಿದ್ದರು. ಈ ಬಗ್ಗೆ ವಿಡಿಯೋ ಸಾಕ್ಷಿ ಸಮೇತ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯ ಪೇದೆ ಸೇರಿ ಮೂವರು ಪೊಲೀಸ್ ಪೇದೆಗಳ ಸಸ್ಪೆಂಡ್ ಮಾಡಲಾಗಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಪುರುಷೋತ್ತಮ್, ಕಾನ್ಸ್ ಸ್ಟೇಬಲ್ ಅನಿಲ್ ಕುಮಾರ್ ಹಾಗೂ ಪ್ರಭು ಸ್ವಾಮಿ ಎಂಬುವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ. ಈ…
ಕೊಪ್ಪಳ : ಸೆಲ್ಫಿ ತೆಗೆದುಕೊಳ್ಳುವ ವೇಳೆ ಅನೇಕ ಅವಘಡ ಸಂಭವಿಸಿ ಎಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಕುರಿತು ಎಷ್ಟೇ ಜಾಗೃತಿ ಮೂಡಿಸಿದರು ಸಹ ಜನರು ಕ್ಯಾರೆ ಎನ್ನದೆ ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದೀಗ ಸೆಲ್ಫಿ ಕ್ರೇಜ್ ಗೆ ಮತ್ತೊಂದು ದುರಂತ ಸಂಭವಿಸಿದ್ದು, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಬೆಟ್ಟದ ಮೇಲಿಂದ ಜಾರಿ ಬಿದ್ದು ಯುವತಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದಾಳೆ. ದುರಂತದಲ್ಲಿ ಗಾಯಗೊಂಡ ಯುವತಿಯನ್ನು ರಾಯಚೂರು ಜಿಲ್ಲೆಯ ಅಶ್ವಿನಿ ಎಂದು ಗುರುತಿಸಲಾಗಿದ್ದು, ಬೆಟ್ಟದ ಮೇಲೆ ಸಂಜೆ ಸೂರ್ಯಾಸ್ತದ ಸಮಯದಲ್ಲಿ ಸೆಲ್ಫಿ ತೆಗೆದುಕೊಳ್ಳುವ ವೇಳೆ ಆಯತಪ್ಪಿ ಬೆಟ್ಟದ ಮೇಲಿಂದ ಬಿದ್ದಿದ್ದಾಳೆ. ಗಾಯಗೊಂಡ ಅಶ್ವಿನಿಯನ್ನು ಕೂಡಲೇ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆ ಕುರಿತಂತೆ ಕೊಪ್ಪಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಎರಡು ಮಹಾನಗರ ಪಾಲಿಕೆ ರಚಿಸಲು ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಒಂದು ನಿರ್ಣಯ ಕೈಗೊಳ್ಳಲಾಗಿದೆ. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ವಿಷಯ ತಿಳಿಯುತ್ತಿದ್ದಂತೆ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಸಮಿತಿ ವತಿಯಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ನಡೆಸಲಾಗಿದೆ. ಧಾರವಾಡದ ಜನಸಂಖ್ಯೆ 6.5 ಲಕ್ಷ ದಾಟಿರುವುದರಿಂದ, 2014ರಲ್ಲಿಯೇ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಒತ್ತಾಯ ಕೇಳಿ ಬಂದಿತ್ತು.ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಬಗ್ಗೆ ಘೋಷಣೆ ಮಾಡಲಾಗಿದ್ದು, ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಸಂಭ್ರಮಾಚರಣೆ ನಡೆಸಲಾಗಿದೆ.
ಬೆಂಗಳೂರು : ಮುಂದಿನ ತಿಂಗಳು ಫೆಬ್ರವರಿ 28ರಿಂದ ಮೂರು ದಿನಗಳ ಕಾಲ ವಿಜಯನಗರ ಜಿಲ್ಲೆಯಲ್ಲಿ ಹಂಪಿ ಉತ್ಸವ ನಡೆಯಲಿದ್ದು, ಈ ಒಂದು ಉತ್ಸವಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದು, ಫೆಬ್ರವರಿ 18ರಂದು ಹಂಪಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಹಂಪಿ ಉತ್ಸವ ನಡೆಸುವ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಅವರಿಗೆ ಸೂಚನೆ ನೀಡಿದ್ದು, ಫೆಬ್ರುವರಿ 28ರಂದು ದಿನಾಂಕ ನಿಗದಿಯಾಗಿದ್ದು ಫೆಬ್ರವರಿ 28ರಿಂದ ಮಾರ್ಚ್ 1 ಮತ್ತು 2ನೇ ತಾರೀಖಿನವರೆಗೂ ಸುಮಾರು ಮೂರು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಹಂಪಿ ಉತ್ಸವ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ಜಿಲ್ಲಾಧಿಕಾರಿಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಮಾರ್ಚ್ 2 ರಂದು ಹಂಪಿ ಉತ್ಸವದ ಸಮಾರೋಪ ಸಮಾರಂಭ ನಡೆಯಲಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಗಾರ್ಮೆಂಟ್ ಗೋದಾಮಿನಲ್ಲಿ ಬೆಂಕಿ ಹತ್ತಿ ಹೊಡೆದಿದ್ದು ಗುದಾಮಿನಲ್ಲಿರುವಂತಹ ಬಟ್ಟೆ ವೆದರ್ ಸೇರಿದಂತೆ ಹಲೋ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿರುವ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಒಂದು ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಬಟ್ಟೆ, ಲೆದರ್ ಸೇರಿ ಕೆಮಿಕಲ್ ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ನಿನ್ನೆ ಬೈಕ್ ಶೋ ರೂಂ ಗೂ ಬೆಂಕಿ! ಇದಕ್ಕೂ ಮುನ್ನ ನಿನ್ನೆ ಸಂಜೆ ಬೆಂಗಳೂರಿನ ಮಹದೇವಪುರ ವ್ಯಾಪ್ತಿಯ ಬಿ.ನಾರಾಯಣಪುರದಲ್ಲಿ ಬೈಕ್ ಶೋರೂಂಗೆ ಬೆಂಕಿ ಬಿದ್ದು, ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.ಶಾರ್ಟ್ ಸರ್ಕ್ಯೂಟ್ನಿಂದ…
ಬೀದರ್ : ಬೀದರ್ ನಲ್ಲಿ ಭೀಕರವಾದಂತಹ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೋ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಯರಭಾಗ ಬಳಿ ಈ ಒಂದು ಭೀಕರವಾದ ಅಪಘಾತ ನಡೆದಿದೆ. ಮೃತ ದಂಪತಿಯನ್ನು ಪ್ರಕಾಶ್ ಹಾಗೂ ಬಬಿತ ಎಂದು ಗುರುತಿಸಲಾಗಿದೆ. ಅಪಘಾತ ಬಳಿಕ ಪತಿ ಪ್ರಕಾಶ್ ಸ್ಥಳದಲ್ಲೆ ಸವಣ್ಣಪ್ಪಿದರೆ, ಇನ್ನು ಗಾಯಗೊಂಡ ಪತ್ನಿ ಬಬಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದಿಂದ ಸೋಲಾಪುರದ ಕಡೆಗೆ ಸ್ಕಾರ್ಪಿಯೋ ಕಾರು ತೆರಳುತ್ತಿತ್ತು. ಇತ್ತ ನಾರಾಯಣಪುರದಿಂದ ಬೈಕ್ ನಲ್ಲಿ ಚಿಟುಗುಪ್ಪ ಕಡೆಗೆ ದಂಪತಿ ಹೊರಟಿದ್ದ ವೇಳೆ ಅಪಘಾತವಾಗಿದೆ.ಅಪಘಾತದ ಕುರಿತು ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಹೊಸ ವರ್ಷದ ಆರಂಭದಲ್ಲಿ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಇದೀಗ ಬಿಗ್ ಶಾಕ್ ನೀಡಿದೆ.ಸಾರಿಗೆ ಬಸ್ಗಳಲ್ಲಿ ಟಿಕೆಟ್ ದರ ಶೇಕಡ 15ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಟಿಕೆಟ್ ದರ ಹೆಚ್ಚಳಕ್ಕೆ ಅನುಮೋದನೆ ದೊರೆತಿದೆ. ಇನ್ನು ಈ ವಿಚಾರವಾಗಿ ರಾಜ್ಯದ ಜನರು ಆಕ್ರೋಶ ಹೊರ ಹಾಕಿದ್ದು, ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ ಒಂದು ಕಡೆಗೆ ಬಸ್ ನಲ್ಲಿ ಫ್ರೀ ಕೊಟ್ಟು ಇನ್ನೊಂದು ಕಡೆಗೆ ಕಿತ್ತುಕೊಳ್ಳುತ್ತಿದ್ದಾರೆ. 2 ರೂಪಾಯಿ ಫ್ರೀ ಕೊಟ್ಟು ರೂ.10 ಕಿತ್ತುಕೊಳ್ಳುತ್ತಿದ್ದಾರೆ ದರ ಏರಿಕೆ ನಿರ್ಧಾರ ಒಳ್ಳೆಯದಲ್ಲ ಎಂದು ಪ್ರಯಾಣಿಕರು ಕಿಡಿ ಕಾರುತ್ತಿದ್ದಾರೆ. ಅದೇ ರೀತಿಯಾಗಿ ಹುಬ್ಬಳ್ಳಿಯಲ್ಲಿ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಹೆಚ್ಚಳ ಮಾಡಬಾರದು. ಬಸ್ ನಲ್ಲಿ ಮಹಿಳೆಯರಿಗೆ ಅಷ್ಟೇ ಏಕೆ ಫ್ರೀ? ನಮಗೂ ಫ್ರೀ…
ಚಾಮರಾಜನಗರ : ಕೇವಲ ಸೌತೆಕಾಯಿಗಾಗಿ ನರಹಂತಕ ಅಣ್ಣನೊಬ್ಬ ತನ್ನ ತಂಗಿಯ ಕುತ್ತಿಗೆಯನ್ನು ಕತ್ತಿಯಿಂದ ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಈದ್ಗಾ ಮೊಹಲ್ಲ ಎಂಬಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಐಮನ್ ಬಾನು ಎಂದು ತಿಳಿದುಬಂದಿದ್ದು, ಇನ್ನೂ ಆಕೆಯನ್ನು ಹತ್ಯೆಗೈದ ಹಂತಕ ಅಣ್ಣನನ್ನು ಫರ್ಮಾನ್ ಪಾಷಾ ಎಂದು ತಿಳಿದುಬಂದಿದೆ.ಸೌತೆಕಾಯಿ ಗಾಗಿ ಅಣ್ಣನೊಬ್ಬ ಭೀಕರವಾಗಿ ಕತ್ತಿಯಿಂದ ತಂಗಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾನೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಈದ್ಗ ಮೊಹಲ್ಲಾದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ನಿನ್ನೆ ರಾತ್ರಿ ಅಣ್ಣನ ಮಗನಿಗೆ ಕೊಲೆ ಆರೋಪಿ ಫರ್ಮಾನ್ ಪಾಷಾ ಸೌತೆಕಾಯಿ ತಿನಿಸುತ್ತಿದ್ದ. ಮಗನಿಗೆ ಜ್ವರ ಇದೆ ತಿನ್ನಿಸಬೇಡ ಎಂದು ಆತನ ಅತ್ತಿಗೆ ಹೇಳಿದ್ದಾಳೆ. ಇದೆ ವಿಚಾರವಾಗಿ ಅಣ್ಣ ಫರ್ಮಾನ್ ಪಾಷಾಗೆ ತಂಗಿ ಐಮನ್ ಬಾನು ಬೈದಿದ್ದಾಳೆ.ಇದರಿಂದ ಕೋಪಗೊಂಡ ಫರ್ಮಾನ್ ಕತ್ತಿ ತೆಗೆದುಕೊಂಡು ತಂಗಿಯ ಕುತ್ತಿಗೆಗೆ ಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾನೆ. ಇದನ್ನು ಬಿಡಿಸಲು ಬಂದ ಅತ್ತಿಗೆ ಹಾಗೂ ತಂದೆಯ…
BREAKING : ರಾಜ್ಯದ ಜನತೆಗೆ ಬಿಗ್ ಶಾಕ್ : ಬಸ್ ಪ್ರಯಾಣದ ಟಿಕೆಟ್ ದರ ‘ಶೇ.15 ರಷ್ಟು’ ಏರಿಕೆಗೆ ಕ್ಯಾಬಿನೆಟ್ ಅನುಮೋದನೆ
ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ರಾಜ್ಯದ ಜನತೆಗೆ ಇದೀಗ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ಸಂಕ್ರಾಂತಿ ಬಳಿಕ ಎಲ್ಲ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಶೇ.15 ರಷ್ಟು ಏರಿಕೆ ಮಾಡಿ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ ಪ್ರಯಾಣದ ಟಿಕೆಟ್ ದರ ಶೇಕಡ 15ರಷ್ಟು ಏರಿಕೆ ಮಾಡಿ ಸಂಪುಟ ಅನುಮೋದನೆ ನೀಡಿದೆ.ಈ ಕುರಿತಂತೆ ಈಗಾಗಲೇ ಈ ಹಿಂದೆ ಶೇ. 25 ರಷ್ಟು ಟಿಕೆಟ್ ದರ ಏರಿಕೆಗೆ ಎಲ್ಲಾ ಸಾರಿಗೆ ನಿಗಮಗಳು ಮನವಿ ಮಾಡಿದ್ದವು. ಪೆಟ್ರೋಲ್-ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಅದರೆ, ಕಳೆದ ನಾಲ್ಕೈದು ವರ್ಷದಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಇಂಧನ ದರ ನಾಲ್ಕೈದು ವರ್ಷದಲ್ಲಿ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಗೆ ನಾಲ್ಕೂ ನಿಗಮಗಳು ಮನವಿ ಮಾಡಿದ್ದವು. ಹಾಗಾಗಿ ಇಂದು ನಡೆದ ಸಂಪುಟ ಸಭೆಯಲ್ಲಿಎಲ್ಲಾ ನಾಲ್ಕು…
ಬೆಂಗಳೂರು : ರಾಜ್ಯದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಸದರಿ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಒಟ್ಟು 5.85 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಸದರಿ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಬಿಡುಗಡೆಯಾದ ಅನುದಾನ ವಿವರ ಈ ಕೆಳಕಂಡಂತಿದೆ. 2023-24 ನೇ ಸಾಲಿಗೆ ಸ್ವೀಕರಿಸಲಾದ ಅರ್ಜಿಸಲ್ಲಿಸಿದ ಸಂಖ್ಯೆ ಒಟ್ಟು 4474…