Author: kannadanewsnow05

ಬೆಂಗಳೂರು : ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಮ್ಯಾನೇಜರ್ ಗೆ ವಂಚಕನೊಬ್ಬ 6.5 ಲಕ್ಷ ರೂಪಾಯಿ ಮೋಸ ಮಾಡಿರುವ ಘಟನೆ ಇದೀಗ ತಡವಾಗಿ ಬಳಕೆಗೆ ಬಂದಿದೆ.ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುತ್ತೇನೆ ಎಂದು ಹೇಳಿ ಆರೋಪಿ 6.5 ಲಕ್ಷ ರೂಪಾಯಿ ವಂಚನೆ ಎಸಗಿದ್ದಾನೆ. ಹೆಚ್​ಎಸ್​ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಕಳೆದ ಅಕ್ಟೋಬರ್ ನಲ್ಲಿ ನಡೆದ ವಂಚನೆ ಪ್ರಕರಣ ಇದೀಗ ತಡವಾಗಿ ಬಳಕೆಗೆ ಬಂದಿದೆ.ಎಂ ಎಸ್ ಧೋನಿ ಮ್ಯಾನೇಜರ್ ಸ್ವಾಮಿನಾಥನ್ ಎಂಬುವವರಿಗೆ ಆರೂವರೆ ಲಕ್ಷ ರೂಪಾಯಿ ವಂಚನೆ ಎಸೆಗಿದ್ದಾನೆ. ಕೇಂದ್ರ ಹಣಕಾಸು ಸಚಿವ ನಿರ್ಮಲ ಸೀತಾರಾಮನ್ ಪಿಎ ಅಂತ ಹೇಳಿ ಆರೋಪಿ ವಂಚನೆ ಎಸೆಗಿದ್ದಾನೆ ಎಂದು ತಿಳಿದುಬಂದಿದೆ. ನಾನು ಐಎಎಸ್ ಅಧಿಕಾರಿ ಎಂದು ವಂಚಕ ಸ್ವಾಮಿನಾಥನಿಗೆ ನಂಬಿಸಿದ್ದ ಎನ್ನಲಾಗುತ್ತಿದ್ದು, 12 ಜನರಿಗೆ ವಿಶೇಷ ದರ್ಶನ ಹಾಗೂ ಇರುತ್ತದೆ ಎಂದು ಕೂಡ ಹೇಳಿದ್ದ ಎನ್ನಲಾಗುತ್ತಿದೆ. ನಂತರ ಅಕ್ಟೋಬರ್​ 29 ರಂದು ಸಂದೀಪ್​ ಹಾಗೂ ಆತನ ಸ್ನೇಹಿತ ಸಲ್ಮಾನ್ ಬೆಂಗಾಲ್​​ ಹೋಟೆಲ್​​ನಲ್ಲಿ…

Read More

ರಾಯಚೂರು : ಕಳೆದ ತಿಂಗಳು ಜನವರಿ 30ರಂದು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದಕ್ಕೆ ಸಿರವಾರ ಠಾಣೆಯ ಇಬ್ಬರು ಕಾನ್ಸಟೇಬಲ್ ಅವರನ್ನು ಅಮಾನತುಗೊಳಿಸಲಾಗಿದೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ,ಕುಡಿದ ಮತ್ತಲ್ಲಿ ಟಿಪ್ಪು ಸುಲ್ತಾನ್ ವೃತ್ತದಲ್ಲಿದ್ದ ಟಿಪ್ಪು ಭಾವ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದ ಆರೋಪಿ ಆಕಾಶ್‌ನನ್ನು ಘಟನೆ ನಡೆದ 24 ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದರು.ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಯನ್ನು ಖಂಡಿಸಿ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ಮಾಡಿದ್ದರು. ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಪೇದೆಗಳನ್ನು ಅಮಾನತು ಮಾಡಿ ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ ಆದೇಶ ಹೊರಡಿಸಿದ್ದಾರೆ. ರೇವಣಸಿದ್ದಪ್ಪ, ಇಸ್ಮಾಯಿಲ್ ಅಮಾನತಾಗಿರುವ ಪೇದೆಗಳು. ಆರೋಪಿ ಆಕಾಶ್ ಬಂಧನದ ಬೆನ್ನಲ್ಲೇ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಗುತ್ತಿದೆ.

Read More

ಮಂಗಳೂರು: ಎರಡು ತಿಂಗಳಿಂದ ರಿಬ್ಬ್‌ಡ್‌ ಸ್ಮೋಕ್ಡ್‌ ಶೀಟ್‌ ದರ್ಜೆಯ ರಬ್ಬರ್‌ ಧಾರಣೆ ಏರುತ್ತಿದೆ.ಒಂದು ಕೆ.ಜಿಗೆ ರೂ 147ರಿಂದ ರೂ 148ರ ಆಸುಪಾಸಿನಲ್ಲಿದ್ದ ಬೆಲೆಯು ಒಂದು ವಾರದಿಂದ ರೂ 161ಕ್ಕೆ ತಲುಪಿದ್ದು ರಾಜ್ಯದ ಬೆಳೆಗಾರರಲ್ಲಿ ಖುಷಿ ಮೂಡಿಸಿದೆ. ಇದರ ನಡುವೆಯೇ ಎಷ್ಟು ದಿನಗಳವರೆಗೆ ಈ ಬೆಲೆ ಇರಲಿದೆ ಎಂಬ ಪ್ರಶ್ನೆಯೂ ಕಾಡತೊಡಗಿದೆ. ಬೆಳೆಗಾರರ ಪ್ರಕಾರ ದಶಕದ ಹಿಂದೆ ರಾಜ್ಯದಲ್ಲಿ ರಬ್ಬರ್ ಧಾರಣೆಯು ಕೆ.ಜಿಗೆ ರೂ 240 ಆಗಿತ್ತು. ನಂತರ ಬೆಲೆ ಕುಸಿಯುತ್ತ ಬಂದಿದೆ. ಇತ್ತೀಚಿನ ದಿನಗಳಲ್ಲಿ ₹200ರ ಆಸುಪಾಸು ತಲುಪಿದ್ದೇ ಇಲ್ಲ. ಆದ್ದರಿಂದ ಈಗಿನ ದಾರಣೆ ಸಮಾಧಾನಕರ ಎನಿಸಿದರೂ ಉತ್ಪಾದನಾ ವೆಚ್ಚಕ್ಕೆ ಹೋಲಿಸಿದರೆ ಇದು ತೀರಾ ಕಡಿಮೆ ಎಂಬುದು ಅವರ ಅಭಿಪ್ರಾಯ. ಹೀಗಾಗಿ, ಕೇರಳದಂತೆ ಕರ್ನಾಟಕದಲ್ಲೂ ಬೆಂಬಲ ಬೆಲೆ ನೀಡಬೇಕೆಂಬುದು ಬೆಳೆಗಾರರ ಒತ್ತಾಯವಾಗಿದೆ.ರಬ್ಬರ್‌ನಲ್ಲಿ ಅತ್ಯುತ್ತಮ ಗುಣಮಟ್ಟದ್ದು ಆರ್‌ಎಕ್ಸ್‌ ದರ್ಜೆ. ಭಾರತದಲ್ಲಿ ಹೆಚ್ಚು ಚಾಲ್ತಿಯಲ್ಲಿರುವುದು ಆರ್‌ಎಸ್‌ಎಸ್‌–4. ರಬ್ಬರ್ ಮಂಡಳಿಯ 2016ರ ಅಂದಾಜಿನ ಪ್ರಕಾರ ಇದರ ಉತ್ಪಾದನಾ ವೆಚ್ಚ ಕೆ.ಜಿಗೆ ರೂ 178. ಆದರೆ, ಈಗ…

Read More

ರಾಮನಗರ : ನಗರದ ತಾಲೂಕು ಕಚೇರಿಯಲ್ಲಿನ ಚುನಾವಣಾ ಶಾಖೆ ಕಚೇರಿಯಲ್ಲಿ ಶುಕ್ರವಾರ ಫ್ಯಾನ್‌ಗೆ ನೇಣು ಬಿಗಿದುಕೊಂಡು ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲಧಿಕಾರಿ ಕಿರುಕುಳಕ್ಕೆ ಮನನೊಂದು ಈ ಕೃತ್ಯ ಮಾಡಿಕೊಂಡಿರುವುದಾಗಿ ಬರೆದ ಡೆತ್‌ನೋಟ್ ಪೊಲೀಸರಿಗೆ ದೊರೆತಿದೆ. ಚನ್ನಪಟ್ಟಣ ತಾಲೂಕಿನ ತವಕನಹಳ್ಳಿಯ ಸುರೇಶ್ (50) ಮೃತ. ಒಂದು ವಾರದಿಂದ ಶಿರಸ್ತೇದಾರ್ ಪೂರ್ಣಿಮಾ ಅವರೊಂದಿಗೆ ನಡೆಯುತ್ತಿದ್ದ ಮುಸುಕಿನ ಗುದ್ದಾಟದಿಂದ ಬೇಸತ್ತ ಸುರೇಶ್, ಬೆಳಗ್ಗೆ 10.30ಕ್ಕೆ ಕಚೇರಿ ಬಾಗಿಲು ಹಾಕಿಕೊಂಡು ಫ್ಯಾನ್‌ಗೆ ವಯರ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ. ಸಂಜೆ 4:30 ಆದರೂ ಬಾಗಿಲು ತೆರೆಯದ ಹಿನ್ನೆಲೆ ತಹಸೀಲ್ದಾ‌ರ್ ಮತ್ತು ಇತರ ಅಧಿಕಾರಿಗಳು ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಪಕ್ಕದಲ್ಲಿಯೇ ಎರಡೂವರೆ ಪುಟದ ಡೆತ್‌ನೋಟ್ ಬರೆದಿಟ್ಟು ಅದರಲ್ಲಿ ಶಿರಸ್ತೇದಾ‌ರ್ ಪೂರ್ಣಿಮಾ ಅವರ ಕಿರುಕುಳ, ಮಾನಸಿಕ ಒತ್ತಡ ಹಾಗೂ ಅವಮಾನಗಳಿಂದ ಕೆಲಸ ನಿರ್ವಹಿಸಲು ಆಗುತ್ತಿಲ್ಲ ಎಂದು ಬರೆದಿಟ್ಟಿದ್ದಾರೆ. ಹಿರಿಯ ಅಧಿಕಾರಿಗಳ ಭೇಟಿ: ರಾಮನಗರ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್…

Read More

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಆದ ಬಳಿಕ ದರ್ಶನಕ್ಕಾಗಿ ಭಕ್ತರ ದಂಡೆ ಹರಿದು ಬಂದಿದೆ. 11 ದಿನಗಳಲ್ಲಿ ಭಕ್ತರು ನೀಡಿದ ದೇಣಿಗೆ 11.5 ಕೋಟಿ ರೂ. ದಾಟಿದೆ. ಸುಮಾರು 8 ಕೋಟಿ ರೂಪಾಯಿ ಕಾಣಿಕೆ ಪೆಟ್ಟಿಗೆಗಳಲ್ಲಿ ಜಮಾ ಮಾಡಲಾಗಿದೆ ಮತ್ತು ಸುಮಾರು 3.50 ಕೋಟಿ ರೂಪಾಯಿಯನ್ನು ಆನ್‌ಲೈನ್‌ನಲ್ಲಿ ಸ್ವೀಕರಿಸಲಾಗಿದೆ ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ. ದೇಗುಲದ ಗರ್ಭಗುಡಿಯ ಮುಂಭಾಗದ ದರ್ಶನ ಪಥದ ಬಳಿ ನಾಲ್ಕು ದೊಡ್ಡ ಗಾತ್ರದ ಕಾಣಿಕೆ ಪೆಟ್ಟಿಗೆಗಳನ್ನು ಇರಿಸಲಾಗಿದ್ದು, ಅದರಲ್ಲಿ ಭಕ್ತರು ಕಾಣಿಕೆ ಹಾಕುತ್ತಾರೆ. 11 ಬ್ಯಾಂಕ್ ಉದ್ಯೋಗಿಗಳು ಮತ್ತು ದೇವಸ್ಥಾನದ ಟ್ರಸ್ಟ್‌ನ ಮೂವರನ್ನು ಒಳಗೊಂಡ 14 ಜನರ ತಂಡವು ನಾಲ್ಕು ಪೆಟ್ಟಿಗೆಗಳಲ್ಲಿನ ಕಾಣಿಕೆಗಳನ್ನು ಎಣಿಸುತ್ತದೆ. ದೇಣಿಗೆ ಮೊತ್ತವನ್ನು ಠೇವಣಿ ಇಡುವುದರಿಂದ ಹಿಡಿದು ಎಣಿಸುವವರೆಗೆ ಎಲ್ಲವನ್ನೂ ಸಿಸಿಟಿವಿ ಕ್ಯಾಮೆರಾಗಳ ಕಣ್ಣಾವಲಿನಲ್ಲಿ ಮಾಡಲಾಗುತ್ತದೆ ಎಂದು ದೇವಾಲಯದ ಟ್ರಸ್ಟ್‌ನ ಕಚೇರಿ ಉಸ್ತುವಾರಿ ಪ್ರಕಾಶ್ ಗುಪ್ತಾ ಹೇಳಿದ್ದಾರೆ.ಇನ್ನು ಉತ್ತರಪ್ರದೇಶದಲ್ಲಿನ ಹವಾಮಾನ ಬದಲಾವಣೆ ಯಿಂದಾಗಿ ಭಕ್ತರಿಗೆ ತೊಂದರೆ ಆಗಬಹುದು…

Read More

ಮೈಸೂರು : ಪತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯನ್ನು 12 ವರ್ಷ ಮನೆಯೊಳಗೇ ಕೂಡಿಹಾಕಿ, ಬಾಗಿಲಿಗೆ ಮೂರು ಬೀಗ ಹಾಕುತ್ತಿದ್ದ ಅಮಾನವೀಯ ಘಟನೆಯೊಂದು ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಸಮೀಪದ ಎಚ್.ಮಟಕೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗೃಹ ಬಂಧನದಲ್ಲಿದ್ದ ಈ ಮಹಿಳೆಯು ಮಲ, ಮೂತ್ರ ವಿಸರ್ಜನೆಗೂ ಮನೆಯಿಂದ ಹೊರಬರ ಲಾಗದೆ ತನ್ನ ಗಂಡ ಕೊಟ್ಟು ಹೋಗುತ್ತಿದ್ದ ಡಬ್ಬಿಯನ್ನೇ ನೈಸರ್ಗಿಕ ಅವಲಂಬಿಸಬೇಕಾದಂಥ ಸ್ಥಿತಿ ಯಲ್ಲಿ ಬದುಕು ನಡೆಸುತ್ತಿದ್ದ ವಿಚಾರ ಈ ವೇಳೆ ಬಯಲಾಗಿದೆ. ಇದೀಗ ಈ ಮಹಿಳೆಯನ್ನು ರಕ್ಷಿಸಿ, ತವರು ಮನೆಗೆ ಕಳುಹಿಸಲಾಗಿದೆ. ಎಚ್.ಮಟಕೆರೆ ಗ್ರಾಮದ ಸಣ್ಣಾಲಯ್ಯ ಎಂಬಾತ ಈ ಕೃತ್ಯ ಎಸಗಿರುವ ಆರೋಪಿ. ಆತ ಪಕ್ಕದ ಡೈರಿಗೆ ಗ್ರಾಮದ ಸುಮಾ ಎಂಬುವರನ್ನು 12 12 ವರ್ಷಗಳ ಹಿಂದೆ 3ನೇ ಮದುವೆಯಾಗಿದ್ದು, 2 ಮಕ್ಕಳು ಸಹ ಇದ್ದಾರೆ. ಮದುವೆ ಆದಾಗಿನಿಂದಲೂ ಪತ್ನಿಯನ್ನು ಅನುಮಾನದಿಂದಲೇ ನೋಡುತ್ತಿದ್ದ ಸಣ್ಣಾಲಯ್ಯ ಆಕೆಯನ್ನು ಮನೆಯೊಳಗೇ ದಿಗ್ವಂಧನದಲ್ಲಿರಿಸಿದ್ದ. ಕಿಟಕಿಗಳನ್ನು ಹಗ್ಗದಿಂದ ಭದ್ರಗೊಳಿಸಿ ಮನೆ ಬಾಗಿಲಿಗೆ ಹೊರಗಿನಿಂದ ಮೂರು ಬೀಗ ಹಾಕಿ…

Read More

ನವದೆಹಲಿ: ಹೆದ್ದಾರಿಗಳಲ್ಲಿ ವಾಹನ ಚಲಾಯಿಸುತ್ತ ಆಯಾಸಗೊಳ್ಳುವ ಚಾಲಕರಿಗಾಗಿ ಪ್ರಧಾನಿ ನರೇಂದ್ರ ಮೋದಿ ಹೊಸಸೌಲಭ್ಯ ಘೋಷಿಸಿದ್ದಾರೆ. ಶೀಘ್ರದಲ್ಲೇ ಹೆದ್ದಾರಿಗಳಲ್ಲಿ ವಾಹನ ಚಾಲಕರಿಗೆ ವಿಶ್ರಾಂತಿ ತೆಗೆದುಕೊಳ್ಳಲು 1000 ಅತ್ಯಾ ಧುನಿಕ ವಿಶ್ರಾಂತಿ ಕೊಠಡಿಗಳನ್ನು ಮೊದಲ ಹಂತದಲ್ಲಿ ನಿರ್ಮಿಸಲಾಗುವುದು ಎಂದರು. ರಸ್ತೆ ಸುರಕ್ಷತೆ ಹಾಗೂ ವಾಹನ ಕುರಿತಾದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ ಪೋದಲ್ಲಿ ಮಾತನಾಡಿದ ಅವರು, ಹೈವೇ ಬದಿ ಸ್ಥಾಪಿಸಲಾಗುವ ವಿಶ್ರಾಂತಿ ಗೃಹಗಳಲ್ಲಿ ಮಲಗುವ ಕೋಣೆ, ಶೌಚಾಲಯ, ಕುಡಿವ ನೀರಿನ ವ್ಯವಸ್ಥೆ ಇರಲಿದೆ. ಇದರಿಂದ ಹೆದ್ದಾರಿ బది ವಿಶ್ರಾಂತಿಗಾಗಿ ಪರದಾಡುವ ಚಾಲಕರಿಗೆ ಸಹಾಯವಾಗಲಿದೆ ಎಂದರು. ಇದೇ ವೇಳೆ, ಬಿಜೆಪಿ ಸರ್ಕಾರದ 3ನೇ ಅವಧಿಯಲ್ಲಿ ಭಾರತವು ಜಾಗತಿಕವಾಗಿ 3ನೇ ಅತಿದೊಡ್ಡಆರ್ಥಿಕತೆಯಾಗಲಿದೆ ಎಂದರು. ಈ ಮೂಲಕ ಮತ್ತೆ ತಾವು 3ನೇ ಬಾರಿ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿ ದರು. ಭಾರತದಲ್ಲಿ ಅಭಿವೃದ್ಧಿ ಪರ್ವ ಉಂಟಾಗುತ್ತಿದೆ. ನಾವು ಅಟಲ್ ಸುರಂಗದಿಂದ ಅಟಲ್ ಸೇತುವಿನವರೆಗೆ ಸಮುದ್ರ ಮತ್ತು ಪರ್ವತಗಳಿಗೇ ಸಡ್ಡು ಹೊಡೆದು ತಂತ್ರಜ್ಞಾನ ಕ್ಷೇತ್ರದಲ್ಲಿ ಅದ್ಭುತಯಶಸ್ಸನ್ನು ಸಾಧಿಸಿದ್ದೇವೆ. 2014ರ ಹಿಂದಿನ…

Read More

ಬೆಂಗಳೂರು : ಕಳೆದ ವರ್ಷ ರಾಜ್ಯದಲ್ಲಿ ಮಳೆ ಬಾರದೆ ರೈತರು ಸೇರಿದಂತೆ ಎಲ್ಲರು ತೀವ್ರ ಸಂಕಷ್ಟ ಎದುರಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕುಸಿಯುತ್ತಿರುವ ಅಂತರ್ಜಲ ಮಟ್ಟ ಸುಧಾರಣೆಗೆ ಸಂಬಂಧಿಸಿದಂತೆ ಸಮಗ್ರ ಕ್ರಿಯಾ ಯೋಜನೆಯನ್ನು ಶೀಘ್ರದಲ್ಲೇ ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲು ತಜ್ಞರು ತೀರ್ಮಾನಿಸಿದ್ದಾರೆ. ಅಂತರ್ಜಲ ಮಟ್ಟ ಸುಧಾರಿಸುವಂತೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದ ಹಿನ್ನೆಲೆಯಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆ ಮತ್ತು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಜಲಾನಯನ ನಿರ್ವಹಣೆಯ ಉತ್ಕೃಷ್ಟ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅಂತರ್ಜಲದ ಸಮರ್ಪಕ ಬಳಕೆಗಾಗಿ ಸೂಕ್ತ ನೀರಾವರಿ ತಂತ್ರಜ್ಞಾನ ಅಳವಡಿಕೆ, ರೈತರಿಗೆ ನೀರಿನ ಸದ್ಬಳಕೆ ಕುರಿತು ಶಿಕ್ಷಣ, ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಒಗ್ಗೂಡಿಸುವುದು, ಅವಶ್ಯಕತೆಗೆ ಅನುಗುಣವಾಗುವ ಮಳೆ ನೀರು ಮತ್ತು ಅಂತರ್ಜಲ ಬಳಕೆ ಮಾಡುವುದು, ರೈತರಲ್ಲಿ ಸಹಭಾಗಿತ್ವ ನೀರಿನ ನಿರ್ವಹಣೆ ಪದ್ಧತಿಯನ್ನು ಅಳವಡಿಸುವಂತೆ ಮಾಡಿ ಅವರಲ್ಲಿ ಒಡೆತನದ ಜವಾಬ್ದಾರಿ ತರುವುದು, ಚೆಕ್ ಡ್ಯಾಮ್, ಇಂಗು ಗುಂಡಿನಿರ್ಮಾಣ, ಹನಿಮತ್ತು ತುಂತುರು ನೀರಾವರಿ,…

Read More

ಬೆಂಗಳೂರು : ನಗರ ಸಂಚಾರ ಪೊಲೀಸರು ನಗರದ ಶಾಲಾ-ಕಾಲೇಜುಗಳ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ಸವಾರರ ವಿರುದ್ದ ವಿಶೇಷ ಕಾರ್ಯಾಚರಣೆ ಮುಂದುವರೆಸಿದ್ದು, ಗುರುವಾರವೂ 1,896 ಪ್ರಕರಣ ದಾಖಲಿಸಿ 9.48 ಲಕ್ಷ ದಂಡ ವಸೂಲಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಶಾಲಾ-ಕಾಲೇಜುಗಳ ಸುತ್ತ ಮುತ್ತಲ ರಸ್ತೆಗಳಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘಿಸುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ನಗರ ಸಂಚಾರ ಪೊಲೀಸರು ಪ್ರತಿ ಸಂಚಾರ ಠಾಣಾ ವ್ಯಾಪ್ತಿಯ ಶಾಲಾ-ಕಾಲೇಜುಗಳ ಸುತ್ತಮುತ್ತಲ ರಸ್ತೆಗಳಲ್ಲಿ ವಿಶೇಷ ಕಾಲ್ಯಾಚರಣೆ ಕೈಗೊಂಡು ಸಂಚಾರ ನಿಯಮ ಉಲ್ಲಂಘಿಸುವ ಸವಾರರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡುತ್ತಿದ್ದಾರೆ. ಗುರುವಾರ ನಗರದಲ್ಲಿ ನಡೆದ ವಿಶೇಷ ಕಾರ್ಯಾಚರಣೆ ವೇಳೆ ಹೆಲೈಟ್ ರಹಿತ ಸವಾರಿ 1,279 ಪ್ರಕರಣ, ಟ್ರಿಪಲ್ ರೈಡಿಂಗ್ 85, ನೋ ಎಂಟ್ರಿ 455, ಪಾದಾಚಾರಿ ಮಾರ್ಗದಲ್ಲಿ ಚಾಲನೆ 77 ಸೇರಿ ಒಟ್ಟು 1,896 ಪ್ರಕರಣ ದಾಖಲಿಸಲಾಗಿದೆ. ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯ…

Read More

ಬೆಂಗಳೂರು : ಕಾಂಗ್ರೆಸ್ ಸಂಸದ ಡಿಕೆ ಸುರೇಶ್​ ದೇಶ ವಿಭಜನೆ ಹೇಳಿಕೆ ಬಗ್ಗೆ ಬಿಡದಿಯಲ್ಲಿ ಜೆಡಿಎಸ್ ನಾಯಕ  ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬಡವರನ್ನು ಲೂಟಿ ಮಾಡಿಕೊಂಡು ಗುಡ್ಡೆ ಹಾಕಿದ್ದಾರೆ. ಅಂಥವರನ್ನು ದೇಶ ಕಟ್ಟು ಅಂತ ಕಳುಹಿಸಿದರೆ ಅವರು ದೇಶ ಕಟ್ಟುತ್ತಾರಾ? ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಅವರ ಸಾಮ್ರಾಜ್ಯ ಕಟ್ಟಿಕೊಳ್ಳುತ್ತಾರೆ ಅಷ್ಟೇ. ಇಂಥವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಕಲ್ಲು ಒಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ದೇಶದ ಮೊದಲನೇ ಬಜೆಟ್ 174 ಕೋಟಿ ಇತ್ತು. ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡಿಸಿಕೊಂಡು ಬಂದಿವೆ. ನಾವು ಹಣಕಾಸು ಆಯೋಗಗಳನ್ನು ಮಾಡಿಕೊಂಡಿದ್ದೇವೆ. ಅವರು ಎಲ್ಲಾ ರಾಜ್ಯಕ್ಕೂ ಭೇಟಿಕೊಟ್ಟು ಪರಿಶೀಲನೆ ಮಾಡುತ್ತಾರೆ. ಯಾವ ರಾಜ್ಯಕ್ಕೆ ಎಷ್ಟು ಹಣಬೇಕು ಎಂಬ ವರದಿ ಕೊಡುತ್ತಾರೆ ಎಂದರು. ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ, ಯಾವ ರಾಜ್ಯ ಅಭಿವೃದ್ಧಿ ಆಗಿದೆ ಎಂಬುದನ್ನು ನೋಡಿಕೊಂಡು ಹಣ…

Read More