Author: kannadanewsnow05

ಮಂಗಳೂರು : ಮಂಗಳೂರಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡುತ್ತಿದ್ದ ಹಿನ್ನೆಲೆ ಪಿಕಪ್ ವಾಹನದಲ್ಲಿದ್ದ 19 ಗೋವುಗಳನ್ನ ರಕ್ಷಣೆ ಮಾಡಲಾಗಿದೆ. ಮಂಗಳೂರಿನ ಸೂರಲ್ಪಾಡಿ ಬಳಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡುತ್ತಿದ್ದ ವಾಹನ ತಡೆದು ಬಜರಂಗದ ದಳ ಕಾರ್ಯಕರ್ತರು ಗೋವುಗಳನ್ನು ರಕ್ಷಿಸಿದ್ದಾರೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಜರಂಗದಳ ಕಾರ್ಯಕರ್ತರು ವಾಹನ ಚೇಸಿಂಗ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಿಸುತ್ತಿದ್ದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮೂಡುಬಿದರೆಯಿಂದ ಮಂಗಳೂರು ಕಡೆ ಪಿಕಪ್ ವಾಹನ ಬರುತ್ತಿತ್ತು. ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟದ ಬಗ್ಗೆ ಮಾಹಿತಿ ಬಂದಿದೆ. ಈ ವೇಳೆ ಬಜರಂಗದಳ ಕಾರ್ಯಕರ್ತರು ವಿಷಯ ಆಧರಿಸಿ ಕಾರಿನಲ್ಲಿ ವಾಹನ ಬೆನ್ನಟ್ಟಿದ್ದಾರೆ. ಸೂರಲ್ಪಾಡಿ ಬಳಿ ಪಿಕಪ್ ವಾಹನವನ್ನು ತಡೆದಿದ್ದಾರೆ. ಈ ವೇಳೆ ಪಿಕಪ್ ವಾಹನದಲ್ಲಿದೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ವಾಹನದಿಂದ 19 ಗೋವುಗಳನ್ನ ಬಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಬಜರಂಗದಳ ಕಾರ್ಯಕರ್ತರು…

Read More

ಚಾಮರಾಜನಗರ : ಯುಗಾದಿ ಹಬ್ಬದ ಅಂಗವಾಗಿ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ, ಆಟೋ ಮತ್ತು ಗೂಡ್ಸ್ ವಾಹನಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಹನ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರತಿ ವರ್ಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಹಬ್ಬದ ದಿನದಂದು ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಹಾಗಾಗಿ ವಾಹನದ ದಟ್ಟಣೆಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಇದೀಗ ಮುಂದಾಗಿದ್ದು, ಇಂದಿನಿಂದ ಮಾರ್ಚ್ 31ರವರೆಗೆ ಬೆಟ್ಟಕ್ಕೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಈ ಕುರಿತು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಆದೇಶ ಹೊರಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ ಬಳಿ ವಾಹನಗಳ ಪಾರ್ಕಿಂಗ್ ಗೆ ವ್ಯವಸ್ಥೆ ಮಾಡಲಾಗಿದೆ. ಇಂದು ಅಮಾವಾಸ್ಯೆಯ ಪೂಜೆ, ಯುಗಾದಿ ರಥೋತ್ಸವ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ ಹಾಗಾಗಿ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

Read More

ಉತ್ತರಕನ್ನಡ : ಸಾರಿಗೆ ಸಂಸ್ಥೆಗೆ ಶಕ್ತಿ ನೀಡಲು ರಾಜ್ಯ ಸರ್ಕಾರ 2 ಸಾವಿರ ಬಸ್‌ಗಳ ಖರೀದಿಗೆ ಬಜೆಟ್‌ನಲ್ಲಿ ಅನುದಾನ ನೀಡಿದೆ. ಮೊದಲ ಹಂತದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 300 ಬಸ್ಸುಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಎರಡನೆಯ ಹಂತದಲ್ಲಿ ಹೆಚ್ಚಿವರಿಯಾಗಿ 400 ಬಸ್ ಸೇರಿದಂತೆ ಒಟ್ಟು 700 ನೂತನ ಬಸ್ಸುಗಳನ್ನು ನೀಡಲಾಗುತ್ತದೆ ಎಂದು ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ನಿನ್ನೆ ಉತ್ತರಕನ್ನಡ ವಿಭಾಗದ ಶಿರಸಿ ಕೇಂದ್ರ ಬಸ್​ ನಿಲ್ದಾಣ ಮತ್ತು ಸಾರಿಗೆ ಇಲಾಖೆಯ ಶಿರಸಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೊದಲ ಹಂತದಲ್ಲಿ 300 ಬಸ್ಸುಗಳನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ನೀಡಲು ಸೂಚನೆ ನೀಡಿದ್ದೇನೆ. ಎರಡನೆಯ ಹಂತದಲ್ಲಿ ಹೆಚ್ಚಿವರಿಯಾಗಿ 400 ಬಸ್ಸುಗಳನ್ನು ನೀಡುತ್ತೇನೆ. ಸಂಸ್ಥೆಯು 6 ಜಿಲ್ಲೆಗಳನ್ನು ಒಳಗೊಂಡಿದ್ದು, ಜಿಲ್ಲೆಗೆ 100 ಬಸ್ಸುಗಳಿಗೆ ಹೆಚ್ಚುವರಿಯಾಗಿ 100 ಬಸ್ಸು ಸೇರಿ ಒಟ್ಟು 700 ಬಸ್ಸು ನೀಡಲಾಗುತ್ತದೆ ಎಂದರು.…

Read More

ದಾವಣಗೆರೆ / ಉಡುಪಿ : ಯುಗಾದಿ ಹಬ್ಬಕ್ಕೆಂದು ಸ್ವಂತ ಊರಿಗೆ ತೆರಳುತ್ತಿರುವಾಗಲೇ ಎರಡು ಪ್ರತ್ಯೇಕ ಭೀಕರ ಪ್ರಧಾನದಲ್ಲಿ ಇಬ್ಬರು ಯುವಕರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಉಡುಪಿ ಹಾಗೂ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೀರೂರು ಹಾಗೂ ಸಮ್ಮಸಗಿ ರಾಜ್ಯ ಹೆದ್ದಾರಿಯ ಗುಳ್ಳೇಹಳ್ಳಿಯ ಕೂಗಳತೆಯಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಅರ್ಜುನ್ ನಾಯ್ಕ (25), ಹರೀಶ್ ನಾಯ್ಕ (31) ಮೃತ ಯುವಕರು ಎಂದು ತಿಳಿದುಬಂದಿದೆ. ಯುಗಾದಿ ಹಬ್ಬ ಇರುವ ಕಾರಣ ತಮ್ಮ ದ್ವಿಚಕ್ರ ವಾಹನದಲ್ಲಿ ಯುವಕರು ಊರಿಗೆ ಮರಳುವ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಹೋಗಿದೆ. ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಚನ್ನಗಿರಿ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಉಡುಪಿಯಲ್ಲಿ ಕಾರು ಹಾಗೂ ಬಸ್ರೂರು ಸಮೀಪದ ಬಿ.ಹೆಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ…

Read More

ಬೆಂಗಳೂರು : ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿ, ಆರೋಗ್ಯ, ಮೂಲಸೌಕರ್ಯ, ರಸ್ತೆ, ಫ್ಲೈವರ್, ಸ್ಕೈಡೆಕ್ ಸೇರಿದಂತೆ ದೂರದೃಷ್ಟಿ ಯೋಜನೆಗಳು ಸೇರಿದಂತೆ ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಇಂದು ಬೃಹತ್ ಬೆಂಗಳೂರು ಬಜೆಟ್ ಮಂಡನೆಯಾಗಲಿದೆ. ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸಮಕ್ಷಮದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ। ಹರೀಶ್‌ ಕುಮಾರ್‌ ಬರೋಬ್ಬರಿ 20 ಸಾವಿರ ಕೋಟಿ ಗಾತ್ರದ ಬಜೆಟ್ ಮಂಡಿಸಲಿದ್ದಾರೆ. ಹೌದು ಬಿಬಿಎಂಪಿಯ 2025-26ನೇ ಸಾಲಿನ ಆಯವ್ಯಯದಲ್ಲಿ ರಾಜಧಾನಿಯ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ₹20 ಸಾವಿರ ಕೋಟಿ ಗಾತ್ರದ ಬಜೆಟ್‌ ಮಂಡಿಸುವುದಕ್ಕೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ. ಇಂದು ಬೆಳಗ್ಗೆ 11ಕ್ಕೆ ನಗರದ ಪುರಭವನದಲ್ಲಿ ಆಯವ್ಯಯ ಮಂಡಿಸುವುದಕ್ಕೆ ವೇದಿಕೆ ಸಿದ್ಧಪಡಿಸಿಕೊಳ್ಳಲಾಗಿದೆ. ಬಿಬಿಎಂಪಿಯ ಆಡಳಿತಾಧಿಕಾರಿ ಉಮಾಶಂಕರ್‌, ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸಮಕ್ಷಮದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ। ಹರೀಶ್‌ ಕುಮಾರ್‌ ಸುಮಾರು 45 ರಿಂದ 50 ನಿಮಿಷ ಆಯವ್ಯಯದ ಭಾಷಣ ಮಂಡಿಸಲಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ನಗರ ವಿವಿಧ ಕಾಮಗಾರಿಗಳನ್ನು ಅನುಷ್ಠಾನಕ್ಕೆ…

Read More

ನವದೆಹಲಿ : ನಿನ್ನೆ ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟನ್ನು ನಾಶಪಡಿಸಿತು. ಮ್ಯಾನ್ಮಾರ್‌ನಲ್ಲಿ ಕನಿಷ್ಠ 144 ಜನರು ಸಾವನ್ನಪ್ಪಿದ್ದಾರೆ. 730 ಜನರು ಗಾಯಗೊಂಡಿದ್ದಾರೆ. ಅಲ್ಲಿ ಎರಡು ತೀವ್ರ ಹಾನಿಗೊಳಗಾದ ನಗರಗಳ ಫೋಟೋಗಳು ಮತ್ತು ವೀಡಿಯೊಗಳು ವ್ಯಾಪಕ ಹಾನಿಯನ್ನು ತೋರಿಸಿದವು. ಆದರೆ ಇಂದು ಮ್ಯಾನ್ಮಾರ್ ನಲ್ಲಿ ಮತ್ತೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ ಭೂ ಕಂಪನದ 4.2ರಷ್ಟು ತೀವ್ರತೆ ದಾಖಲಾಗಿದೆ. ನೀನೆ 7.7 ರಷ್ಟು ತೀವ್ರತೆ ದಾಖಲಾಗಿತ್ತು. ಭೂಕಂಪಕ್ಕೆ ಜನ ತತ್ತರಿಸಿ ಹೋಗಿದ್ದರು. ಆದರೆ ಇಂದು ಮತ್ತೆ ಭೂಮಿ ಕಂಪಿಸಿದ್ದು, 4.2 ರಷ್ಟು ಮತ್ತೆ ಭೂಮಿ ಕಂಪಿಸಿದೆ. ಇದೀಗ ಮ್ಯಾನ್ಮಾರ್‌ ಬಳಿಕ ಅಫ್ಘಾನಿಸ್ತಾನ್ ನಲ್ಲೂ ಸಹ ಭೂಕಂಪ ಆಗಿದ್ದು, ಬೆಳಿಗ್ಗೆ 4.51 ರ ಸುಮಾರಿಗೆ ಭೂಮಿ ಕಂಪಿಸಿದೆ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲಾಗಿದೆ. ನಿನ್ನೆ ಸಹ ಮ್ಯಾನ್ಮಾರ್‌ ಹಾಗು ಬ್ಯಾಂಕಾಕ್ ನಲ್ಲಿ ಪ್ರಬಲವಾದ ಭೂಕಂಪ ಸಂಭವಿಸಿ ಸುಮಾರು 144 ಜನರು ಸಾವನ್ನಪ್ಪಿದ್ದು,…

Read More

ಮಂಗಳೂರು : ಮಂಗಳೂರಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡುತ್ತಿದ್ದ ಹಿನ್ನೆಲೆ ಪಿಕಪ್ ವಾಹನದಲ್ಲಿದ್ದ 19 ಗೋವುಗಳನ್ನ ರಕ್ಷಣೆ ಮಾಡಲಾಗಿದೆ. ಮಂಗಳೂರಿನ ಸೂರಲ್ಪಾಡಿ ಬಳಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡುತ್ತಿದ್ದ ವಾಹನ ತಡೆದು ಬಜರಂಗದ ದಳ ಕಾರ್ಯಕರ್ತರು ಗೋವುಗಳನ್ನು ರಕ್ಷಿಸಿದ್ದಾರೆ. ಬಜರಂಗದಳ ಕಾರ್ಯಕರ್ತರು ವಾಹನ ಚೇಸಿಂಗ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಿಸುತ್ತಿದ್ದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮೂಡುಬಿದರೆಯಿಂದ ಮಂಗಳೂರು ಕಡೆ ಪಿಕಪ್ ವಾಹನ ಬರುತ್ತಿತ್ತು. ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟದ ಬಗ್ಗೆ ಮಾಹಿತಿ ಬಂದಿದೆ. ಈ ವೇಳೆ ಬಜರಂಗದಳ ಕಾರ್ಯಕರ್ತರು ವಿಷಯ ಆಧರಿಸಿ ಕಾರಿನಲ್ಲಿ ವಾಹನ ಬೆನ್ನಟ್ಟಿದ್ದಾರೆ. ಸೂರಲ್ಪಾಡಿ ಬಳಿ ಪಿಕಪ್ ವಾಹನವನ್ನು ತಡೆದಿದ್ದಾರೆ. ಈ ವೇಳೆ ಪಿಕಪ್ ವಾಹನದಲ್ಲಿದೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ವಾಹನದಿಂದ 19 ಗೋವುಗಳನ್ನ ಬಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಅಫ್ಘಾನಿಸ್ತಾನ್ : ನಿನ್ನೆ ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟನ್ನು ನಾಶಪಡಿಸಿತು. ಮ್ಯಾನ್ಮಾರ್‌ನಲ್ಲಿ ಕನಿಷ್ಠ 144 ಜನರು ಸಾವನ್ನಪ್ಪಿದ್ದಾರೆ. 730 ಜನರು ಗಾಯಗೊಂಡಿದ್ದಾರೆ. ಅಲ್ಲಿ ಎರಡು ತೀವ್ರ ಹಾನಿಗೊಳಗಾದ ನಗರಗಳ ಫೋಟೋಗಳು ಮತ್ತು ವೀಡಿಯೊಗಳು ವ್ಯಾಪಕ ಹಾನಿಯನ್ನು ತೋರಿಸಿದವು. ಇದೀಗ ಮ್ಯಾನ್ಮಾರ್‌ ಬಳಿಕ ಅಫ್ಘಾನಿಸ್ತಾನ್ ನಲ್ಲೂ ಸಹ ಭೂಕಂಪ ಆಗಿದ್ದು, ಬೆಳಿಗ್ಗೆ 4.51 ರ ಸುಮಾರಿಗೆ ಭೂಮಿ ಕಂಪಿಸಿದೆ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲಾಗಿದೆ. ನಿನ್ನೆ ಸಹ ಮ್ಯಾನ್ಮಾರ್‌ ಹಾಗು ಬ್ಯಾಂಕಾಕ್ ನಲ್ಲಿ ಪ್ರಬಲವಾದ ಭೂಕಂಪ ಸಂಭವಿಸಿ ಸುಮಾರು 144 ಜನರು ಸಾವನ್ನಪ್ಪಿದ್ದು, 700ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ 1000ಕ್ಕೆ ಏರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Read More

ಕೊಡಗು : ರಾಜ್ಯದಲ್ಲಿ ಮತ್ತೊಂದು ಭೀಕರ ಹತ್ಯಾಕಾಂಡ ನಡೆದಿದ್ದು, ಅಕ್ರಮ ಸಂಬಂಧದ ಶಂಕೆಯಿಂದ ಓರ್ವ ವ್ಯಕ್ತಿ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಳುತೋಡು ಗ್ರಾಮದಲ್ಲಿ ನಡೆದಿದೆ.ಇದೀಗ ಕೊಲೆ ಆರೋಪಿಯನ್ನು ಪೊಲೀಸರು ಕೇರಳದಲ್ಲಿ ಅರೆಸ್ಟ್ ಮಾಡಿದ್ದಾರೆ. ಹೌದು ಕೇರಳದ ತಳಪೂಯ ಎಂಬಲ್ಲಿ ಕೊಲೆ ಆರೋಪಿ ಗಿರೀಶ್ (38) ಬಂಧನವಾಗಿದೆ. ಕೇರಳದಲ್ಲಿ ಕೊಲೆ ಆರೋಪಿ ಗಿರೀಶ್ ತಲೆಮರೆಸಿಕೊಂಡಿದ್ದ.ಪತ್ನಿಯ ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಗಿರೀಶ್ ನಾಲ್ವರನ್ನು ಭೀಕಾರವಾಗಿ ಹತ್ಯೆಗೈದಿದ್ದಾನೆ. ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಕತ್ತಿಯಿಂದ ಕತ್ತರಿಸಿ ಕರಿಯ (75), ಗೌರಿ (70), ನಾಗಿ (35) ಹಾಗೂ 7 ವರ್ಷದ ಕಾವೇರಿಯನ್ನು ಗಿರೀಶ್ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ಆರೋಗ್ಯ ಗಿರೀಶನ ಅರೆಸ್ಟ್ ಮಾಡಿ ಇದೀಗ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಬ್ಯಾಂಕಾಕ್: ಶುಕ್ರವಾರ ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟನ್ನು ನಾಶಪಡಿಸಿತು. ಮ್ಯಾನ್ಮಾರ್‌ನಲ್ಲಿ ಕನಿಷ್ಠ 144 ಜನರು ಸಾವನ್ನಪ್ಪಿದ್ದಾರೆ. 730 ಜನರು ಗಾಯಗೊಂಡಿದ್ದಾರೆ. ಅಲ್ಲಿ ಎರಡು ತೀವ್ರ ಹಾನಿಗೊಳಗಾದ ನಗರಗಳ ಫೋಟೋಗಳು ಮತ್ತು ವೀಡಿಯೊಗಳು ವ್ಯಾಪಕ ಹಾನಿಯನ್ನು ತೋರಿಸಿದವು. ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರವಾದ ಮಂಡಲೇ ಬಳಿ ಕೇಂದ್ರಬಿಂದುವಾಗಿರುವ 7.7 ತೀವ್ರತೆಯ ಭೂಕಂಪವು ಮಧ್ಯಾಹ್ನ ಸಂಭವಿಸಿತು ಮತ್ತು ನಂತರ 6.4 ತೀವ್ರತೆಯ ಪ್ರಬಲವಾದ ನಂತರದ ಕಂಪನ ಸಂಭವಿಸಿತು.ಈ ಒಂದು ಘಟನೆಯಲ್ಲಿ ಸಾವಿನ ಸಂಖ್ಯೆ 1000ಕ್ಕೆ ಏರುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಸಾವು, ಗಾಯ ಮತ್ತು ವಿನಾಶದ ಸಂಪೂರ್ಣ ಪ್ರಮಾಣವು ತಕ್ಷಣವೇ ಸ್ಪಷ್ಟವಾಗಿಲ್ಲ – ವಿಶೇಷವಾಗಿ ವಿಶ್ವದ ಅತ್ಯಂತ ಬಡ ದೇಶಗಳಲ್ಲಿ ಒಂದಾದ ಮ್ಯಾನ್ಮಾರ್‌ನಲ್ಲಿ. ಇದು ಅಂತರ್ಯುದ್ಧದಲ್ಲಿ ಸಿಲುಕಿಕೊಂಡಿದೆ ಮತ್ತು ಮಾಹಿತಿಯನ್ನು ಬಿಗಿಯಾಗಿ ನಿಯಂತ್ರಿಸಲಾಗುತ್ತದೆ. ಮ್ಯಾನ್ಮಾರ್‌ನ ಮಿಲಿಟರಿ ಸರ್ಕಾರದ ಮುಖ್ಯಸ್ಥರು ಶುಕ್ರವಾರ ಸಂಜೆ ದೂರದರ್ಶನದ ಭಾಷಣದಲ್ಲಿ ಕನಿಷ್ಠ 144 ಜನರು ಸಾವನ್ನಪ್ಪಿದ್ದಾರೆ…

Read More