Author: kannadanewsnow05

ನವದೆಹಲಿ : ಹಿಂದಿ ಹೇರಿಕೆ ಸೇರಿದಂತೆ ದಕ್ಷಿಣ ಭಾರತಕ್ಕೆ ಬಜೆಟ್ ನಲ್ಲಿ ಅನ್ಯಾಯ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ರಾಷ್ಟ್ರದ ಹೇಳಿಕೆಯನ್ನು ನೀಡಿದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ಹೇಳಿಕೆಗೆ ರಾಜ್ಯಸಭಾ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದು ದೇಶ ಒಡೆಯುವ ಕುರಿತು ಯಾರೇ ಮಾತನಾಡಿದರು ಸಹಿಸುವುದಿಲ್ಲ ಎಂದು ಅಸಮಾಧಾನ ಹೊರ ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರು ಸಹಿಸುವುದಿಲ್ಲ ಯಾವುದೇ ಪಕ್ಷದವರಾಗಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರಿಗೆ ನಾವೆಲ್ಲರೂ ಒಂದೇ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂಸದ ಡಿಕೆ ಸುರೇಶ್ ಹೇಳಿಕೆಗೆ ಇದೀಗ ವಿರೋಧ ವ್ಯಕ್ತಪಡಿಸಿದ್ದಾರೆ

Read More

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಲೆಗೆ ಬಾಂಬ ಬೆದರಿಕೆ ಬಂದಿದ್ದು, ಆರ್ ಕೆ ಪುರಂನಲ್ಲಿರುವ ಡಿಪಿಎಸ್ ಶಾಲೆಗೆ ಇದೀಗ ಬೆದರಿಕೆ ಸಂದೇಶ ಬಂದಿದೆ. ಶಾಲೆಯ ಪ್ರಾಂಶುಪಾಲರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮಕ್ಕಳನ್ನು ತಕ್ಷಣ ಸಿಬ್ಬಂದಿ ಶಾಲೆಯಿಂದ ಹೊರಗಡೆ ಕಳುಹಿಸಿದ್ದಾರೆ. ರಾಷ್ಟ್ರ ರಾಜಧಾನಿಯ ಆರ್‌ಕೆ ಪುರಂ ಪ್ರದೇಶದ ದೆಹಲಿ ಪಬ್ಲಿಕ್ ಸ್ಕೂಲ್‌ಗೆ ಶುಕ್ರವಾರ ಬಾಂಬ್ ಬೆದರಿಕೆ ಕರೆ ಬಂದಿದೆ. ಸುಮಾರು 10 ಗಂಟೆಗೆ ಕರೆ ಸ್ವೀಕರಿಸಿದ ನಂತರ ಶಾಲೆಯ ಆವರಣದಲಿರುವ ಮಕ್ಕಳನ್ನು ಸ್ಥಳಾಂತರಿಸಲಾಯಿತು.ಬಾಂಬ್‌ನಿಂದ ಶಾಲೆಯನ್ನು ಸ್ಫೋಟಿಸಲಾಗುವುದು ಎಂದು ಬೆದರಿಕೆ ಕರೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ದೆಹಲಿ ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಬಾಂಬ್ ಬೆದರಿಕೆ ಸಂದೇಶ ಬಂದ ತಕ್ಷಣ ಇದೀಗ ಪೊಲೀಸರು ಶಾಲೆಗೆ ಧಾವಿಸಿ ಶಾಲಾ ಆವರಣದಲ್ಲಿರುವ ಎಲ್ಲ ಮಕ್ಕಳನ್ನು ಹಾಗೂ ಎಲ್ಲಾ ಸಿಬ್ಬಂದಿಗಳನ್ನು ತಕ್ಷಣ ಹೊರಗಡೆ ಕಳುಹಿಸಲಾಗಿದೆ. ಮೇಲ್ ಎಲ್ಲಿಂದ ಬಂತು ಯಾರು ಕಳಿಸಿದ್ದು ಎಂಬುದರ ಕುರಿತು ಇದೀಗ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ…

Read More

ಬೆಂಗಳೂರು : ಸಿಬಿಐ, ಐಟಿ, ಇಡಿಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ. ಅವು ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ (ಜಾರಿ ನಿರ್ದೇಶನಾಲಯ) ದಾಳಿಯೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣ X ಅಲ್ಲಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಭಾರತೀಯ ಜನತಾ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ. ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ. ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ ಎಂದು ಕಿಡಿ ಕಾರಿದ್ದಾರೆ. https://twitter.com/siddaramaiah/status/1753276191824597500?t=qtCmYxC6rrIE_oRkbpLZjQ&s=19

Read More

ಬೆಂಗಳೂರು : ಹಿಂದಿ ಹೇರಿಕೆ ಸೇರಿದಂತೆ ದಕ್ಷಿಣ ಭಾರತಕ್ಕೆ ಬಜೆಟ್ ನಲ್ಲಿ ಅನ್ಯಾಯ ಆಗುವುದರ ಕುರಿತು ನಿನ್ನೆ ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕುರಿತು ಮಾತನಾಡಿದರು.ಇದಕ್ಕೆ ಗೃಹ ಸಚಿವ ಡಾ. ಜಿ ಪರಮೇಶ್ವರ ತಿರುಗೇಟು ನೀಡಿದ್ದು ನಮ್ಮ ದೇಶ ಭವ್ಯ ಭಾರತ ಹೀಗಾಗಿ ದೇಶವನ್ನು ಒಡೆಯುವಂತಹ ಮಾತುಗಳನ್ನು ಯಾರು ಆಡಬಾರದು ಎಂದು ತಿರುಗೇಟು ನೀಡಿದರು. ಈ ವಿಷಯದ ಕುರಿತಾಗಿ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ನಮ್ಮ ಭಾರತ ಭವ್ಯವಾದ ಭಾರತ. ಪಾಕಿಸ್ತಾನ ವಿಭಜನೆ ಆದಾಗ ನಾವು ಯಾರೂ ಹುಟ್ಟಿರಲಿಲ್ಲ. ಆದರೆ ಅದರ ಇತಿಹಾಸ ನಮಗೆ ಗೊತ್ತಿದೆ. ನಮ್ಮ ದೇಶ ಒಂದು ರಾಷ್ಟ್ರ ಒಂದು ದೇಶ ಅಂತಾನೇ ಇರಬೇಕು ಬೇಕು ಅಂತ ಡಿಕೆ ಸುರೇಶ್ ಗೆ ತಿರುಗೇಟು ಕೊಟ್ರು. ಸಂಸದ ಡಿಕೆ ಸುರೇಶ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಆದರೆ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗಬೇಕಾದರೆ ಕೋಟ್ಯಾಂತರ ಜನರ ಬಲಿದಾನವಾಗಿದೆ. ನೂರಾರು ವರ್ಷ ಹೋರಾಟ‌ಗಳು ನಡೆದಿವೆ. ಗಾಂಧೀಜಿಯಿಂದ ಹಿಡಿದು ಅನೇಕ…

Read More

ಮಾಡೆಲ್ ಮತ್ತು ನಟಿ ಪೂನಂ ಪಾಂಡೆ ಫೆಬ್ರವರಿ 2 ರಂದು ಗರ್ಭಕಂಠದ ಕ್ಯಾನ್ಸರ್ನೊಂದಿಗೆ ಹೋರಾಡಿದ ನಂತರ ನಿಧನರಾದರು ಎಂದು ಅವರ ತಂಡ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಅಲ್ಲಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಈ ಬೆಳಿಗ್ಗೆ ನಮಗೆ ಕಠಿಣವಾಗಿದೆ. ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಳೆದುಕೊಂಡಿದ್ದೇವೆ ಎಂದು ತಿಳಿಸಲು ತುಂಬಾ ದುಃಖವಾಗುತ್ತಿದೆ. ಅವಳೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಂದು ಜೀವಂತ ರೂಪವು ಶುದ್ಧ ಪ್ರೀತಿ ಮತ್ತು ದಯೆಯಿಂದ ಭೇಟಿಯಾಯಿತು, ಎಂದು ಪೂನಂ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. “ಈ ದುಃಖದ ಸಮಯದಲ್ಲಿ, ನಾವು ಹಂಚಿಕೊಂಡ ಎಲ್ಲದಕ್ಕೂ ನಾವು ಅವಳನ್ನು ಪ್ರೀತಿಯಿಂದ ನೆನಪಿಸಿಕೊಳ್ಳುವಾಗ ನಾವು ಖಾಸಗಿತನಕ್ಕಾಗಿ ವಿನಂತಿಸುತ್ತೇವೆ” ಎಂದು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ.

Read More

ಬೆಂಗಳೂರು : ಖಾಸಗಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿರ್ಲಕ್ಷದಿಂದ ಬಿಎಂಟಿಸಿ ಬಸ್ಗೆ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಶ್ಚಂದ್ರ ಘಾಟ್ ಬಳಿ ನಡೆದಿದೆ.ಘಟನೆ ನಂತರ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಮೃತ ವಿದ್ಯಾರ್ಥಿನಿಯನ್ನು ಕುಸುಮಿತ (21) ಎಂದು ಹೇಳಲಾಗುತ್ತಿದ್ದು, ಕಾಲೇಜಿಗೆಂದು ತೆರಳುತ್ತಿದ್ದಾಗ ಮೆಟ್ರೋ ನಿಲ್ದಾಣದಲ್ಲಿ ಬೈಕ್ ನಿಲ್ಲಿಸಿದ್ದಳು. ನಂತರ ಬೈಕ್ ಹಿಂತೆಗೆದುಕೊಳ್ಳುತಿದ್ದ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ಹಿಂಬದಿ ಚಕ್ರಕ್ಕೆ ಬೈಕ್ ತಾಗಿ ಆಕೆ ಮೇಲೆ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದಳು. ಗಾಯಗೊಂಡ ಆಕೆಯನ್ನ ತಕ್ಷಣ ಆಸ್ಪತ್ರೆಗೆ ರವಾನಿಸುತ್ತಿರುವಾಗ ಮಾರ್ಗ ಮಧ್ಯದಲ್ಲಿ ಸಾವನಪ್ಪಿದ್ದಾಳೆ. ಘಟನೆಯು ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.ಪದೇಪದೇ ಈ ಘಟನೆಗಳು ಸಂಭವಿಸುತ್ತವೆ ಇದಕ್ಕೆ ಕಾರಣ ಏನು ಇದುವರೆಗೂ ಪತ್ತೆಯಾಗಿಲ್ಲ.ಘಟನೆಗೆ ಸಂಬಂಧಪಟ್ಟಂತೆ ಮಲ್ಲೇಶ್ವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ದರೋಡೆ ಕಳ್ಳತನ ಸಾಮಾನ್ಯವಾಗಿ ರಾತ್ರಿ ಹೊತ್ತು ನಡೆಯುತ್ತವೆ ಆದರೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಗನ್, ಲಾಂಗ್, ಪೆಪ್ಪರ್ ಸ್ಪ್ರೇ ದಾಳಿ ನಡೆಸಿ ವ್ಯಾಪಾರಿಯೊಬ್ಬನಿಂದ 15 ಲಕ್ಷರೂ. ದರೋಡೆ ಮಾಡಿ ಪರಾರಿಯಾದ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಣ ಕಳೆದುಕೊಂಡ ವ್ಯಕ್ತಿ ಸಿಗರೇಟ್ ಡಿಸ್ಟ್ರಿಬ್ಯೂಟರ್ ಗೋಪಾಲ್ ಸಿಗರೇಟ್ ಡಿಸ್ಟ್ರಿಬ್ಯೂಟರ್ ಆಗಿರುವ ಗೋಪಾಲ್ ಟಾಟಾ ಏಸ್ ವಾಹನದಲ್ಲಿ ಅಂಗಡಿಗಳಿಂದ ಸಿಗರೇಟ್ ಬಿಲ್ ಕಲೆಕ್ಟ್ ಮಾಡಿದ್ದ ವೇಳೆ ಹಿಂಬಾಲಿಸಿರುವ ಖದೀಮರು. ಕೆಂಗೇರಿಯಿಂದ ಅಂಗಡಿಗಳಲ್ಲಿ ಸಿಗರೇಟ್ ಬಿಲ್ ಕಲೆಕ್ಟ್ ಮಾಡಿಕೊಂಡು ಬರ್ತಾ ಇದ್ರು. ಈ ವೇಳೆ ಡಿಯೋ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಕ ಮೂವರು ರಾಬರ್ಸ್. ನಾಗರಭಾವಿ ಪಾಪರೆಡ್ಡಿ ಪಾಳ್ಯಕ್ಕೆ ಬಂದಿದ್ದ ಗೋಪಾಲ್. ಈ ವೇಳೆ ನಾತೂರಾಮ್ ಎಂಬುವವರ ಅಂಗಡಿ ಬಳಿ ವಾಹನ ನಿಲ್ಲಿಸಿ ಬಿಲ್ ಕಲೆಕ್ಟ್ ಮಾಡಲು ಇಳಿದಿದ್ದ ವೇಳೆ ಅಟ್ಯಾಕ್ ಮಾಡಿರುವ ಖದೀಮರು. ರಾಬರ್ಸ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಾವಿಜನ್ ಸ್ಟೋರ್ ಒಳಗೆ ಹೋಗಿರುವ ಗೋಪಾಲ್. ಆದರೆ ಖದೀಮರು ಪ್ರಾವಿಜನ್…

Read More

ಬೆಂಗಳೂರು : ಊಟ ಹಾಕಲ್ಲ ವೆಂದು ತಾಯಿಯು ಬೈದಿದ್ದಕ್ಕೆ 18 ವರ್ಷದ ಮಗನೊಬ್ಬ ಹೆತ್ತ ತಾಯಿಯನ್ನೇ ರಾಡ್ ನಿಂದ ಹೊಡೆದು ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆಆರ್ ಪುರಂನ ಭೀಮಯ್ಯ ಲೇಔಟ್ ನಲ್ಲಿ ಈ ದುರಂತ ಸಂಭವಿಸಿದೆ. ತಾಯಿ ನೇತ್ರ (40) ಕೊಲೆಗೆ ಈಡಾಗಿರುವ ದುರ್ದೈವಿಯಾಗಿದ್ದಾರೆ. ನಂತರ ಕೊಲೆ ಮಾಡಿ ಠಾಣೆಗೆ ಶರಣಾದ ಮಗ, ಊಟ ಹಾಕಲ್ಲ ಅಂದಿದ್ದಕ್ಕೆ ತಾಯಿಯನ್ನು ರಾಡ್ ನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.ಇಂದು ಬೆಳಿಗ್ಗೆ 7 ಗಂಟೆಗೆ ಮಗನು ಕಾಲೇಜಿಗೆ ಹೋಗಲು ತಯಾರಾದಾಗ, ತನ್ನ ತಾಯಿಗೆ ಊಟ ಬಡಿಸು ಎಂದು ಕೇಳಿಕೊಂಡಾಗ ತಾಯಿ ಕೋಪದಲ್ಲಿ ನೀನು ನನ್ನ ಮಗನೆ ಅಲ್ಲ ಊಟ ಹಾಕಲ್ಲವೆಂದು ಬೈದಿದ್ದಾಳೆ . ಈ ವೇಳೆ ಕ್ರೋದಗೊಂಡ ಮಗ ಅಲ್ಲಿಯೇ ಇದ್ದ ರಾಡ್ ನಿಂದ ಬಲವಾಗಿ ತಾಯಿಗೆ ಹೊಡೆದಿದ್ದಾನೆ. ತಾಯಿ ಸಾವನಪ್ಪಿದಿರುವ ಕುರಿತು ಖಚಿತವಾದ ಮೇಲೆ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಕೆ ಆರ್ ಪುರಂ ಠಾಣೆ…

Read More

ರಾಮನಗರ : ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಯಾಕೋ ನಿಲ್ಲುವಂತೆ ಕಾಣುತ್ತಿಲ್ಲ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗೌಡಹಳ್ಳಿ ಎಂಬಲ್ಲಿ ಇದೀಗ ಕಾಡಾನೆ ದಾಳಿಗೆ ರಾಜು (48) ಎನ್ನುವ ವ್ಯಕ್ತಿ ಬಲಿಯಾಗಿದ್ದಾರೆ. ಇದುವರೆಗೆ ಕಾಡಾನೆಗಳ ದಾಳಿಗೆ 10 ಜನರು ಬಲಿಯಾಗಿದ್ದಾರೆ. ಗುರುವಾರ ಮಧ್ಯಾಹ್ನ ರಾಜು ಸೇರಿದಂತೆ ಇನ್ನೂ ಕೆಲವರು ಗೌಡಹಳ್ಳಿ ಸಮೀಪದ ಸಂಗಮ‌ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಮೂರು ಜನ ಪೈಕಿ ರಾಜು ದಾರಿ ತಪ್ಪಿದ್ದಾನೆ. ಎಷ್ಟೇ ಹುಡುಕಿದರೂ ರಾಜು ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗೆ ಕಾಡಿನಲ್ಲಿ ರಾಜು ಮೃತದೇಹ ಪತ್ತೆಯಾಗಿದೆ. ಅಭಿಮನ್ಯು ತಂಡದ ಮೇಲೆ ‘ಬೀಟಮ್ಮ’ ಗ್ಯಾಂಗ್ ದಾಳಿ ಚಿಕ್ಕಮಗಳೂರಿನಲ್ಲಿ ಭೀಮ ಆನೆ ಸೇರಿದಂತೆ 30 ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಕಾಡಾನೆ ಸೆರೆ ಕಾರ್ಯಾಚರಣೆ ಸಂಬಂಧ ಅಭಿಮನ್ಯೂ ಮತ್ತು ಆತನ ತಂಡ ಚಿಕ್ಕಮಗಳೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿರುವ ಅರಣ್ಯ ಇಲಾಖೆಯ ವಸತಿ ಗೃಹದ ಬಳಿ ಕ್ಯಾಂಪ್ ಹಾಕಲಾಗಿದೆ. ಈ ಕ್ಯಾಂಪ್​​​ಗೆ ಬೀಟಮ್ಮ ಗ್ಯಾಂಗ್ ರಾತ್ರೋರಾತ್ರಿ​ ದಾಳಿ ಮಾಡಲು ಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಅರಣ್ಯ…

Read More

ಹಣದ ಮಳೆ ಬೀಳುವ ರಾಶಿಚಕ್ರದ ಚಿಹ್ನೆಗಳ ಜ್ಯೋತಿಷ್ಯಕ್ಕೆ ಸಂಬಂಧಿಸಿದಂತೆ, ಒಂದು ಗ್ರಹದ ಬದಲಾವಣೆಯು ಖಂಡಿತವಾಗಿಯೂ ಎಲ್ಲಾ 12 ರಾಶಿಗಳಲ್ಲಿ ವಿವಿಧ ಬದಲಾವಣೆಗಳನ್ನು ತರುತ್ತದೆ, ಇದು ಸಾಮಾನ್ಯವಾಗಿದೆ. ಅದೇ ರೀತಿ 12 ವರ್ಷಗಳ ನಂತರ ಶುಕ್ರ ರಾಹು ಮತ್ತು ಎರಡು ಗ್ರಹಗಳು ಒಟ್ಟಿಗೆ ಸೇರುತ್ತವೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ರಾಹು ಈಗಾಗಲೇ ಮೀನ ರಾಶಿಯಲ್ಲಿದ್ದಾನೆ.…

Read More