Author: kannadanewsnow05

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಎಸ್ ಐ ಟಿ ಅಧಿಕಾರಿಗಳು ಬೆಳಿಗ್ಗೆ ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು ಅರೆಸ್ಟ್ ಮಾಡಿದ್ದಾರೆ ಬೆಳ್ತಂಗಡಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಕೆಲವೇ ಕ್ಷಣಗಳಲ್ಲಿ ಚಿನ್ನಯ್ಯ ಭವಿಷ್ಯ ನಿರ್ಧಾರವಾಗಲಿದೆ. ಇದೀಗ ಎಫ್ ಐ ಟಿ ಅಧಿಕಾರಿಗಳು ಚೆನ್ನಯ್ಯನನ್ನು ವಿಚಾರಣೆ ಮಾಡುವ ವೇಳೆ ಸ್ಪೋಟಕವಾದ ಮಾಹಿತಿ ಬಿಚ್ಚಿಟ್ಟಿದ್ದು 2, ಲಕ್ಷ ಹಣ ಪಡೆದಿರುವುದು ಚಿನ್ನಯ್ಯ ಬಾಯಿಬಿಟ್ಟಿದ್ದಾನೆ. ಮಹೇಶ್ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ ತಂಡದಿಂದ ಎರಡು ಲಕ್ಷ ಹಣ ಪಡೆದಿರುವುದಾಗಿ ಚಿನ್ನಯ್ಯ ಬಾಯಿ ಬಿಟ್ಟಿದ್ದಾನೆ. ತನಿಖೆ ವೇಳೆ ಮತ್ತೊಬ್ಬ ದೂರ ಟಿ ಜಯಂತಿ ತನ್ನ ಸಂಪರ್ಕದಲ್ಲಿ ಇದ್ದ ಎನ್ನುವುದು ಕೂಡ ಚಿನ್ನಯ ಎಸ್ಐಟಿ ತನಿಖೆ ವೇಳೆ ಬಾಯಿಬಿಟ್ಟಿದ್ದಾನೆ.

Read More

ಸಕಲ ಸಂಪತ್ತು ತರುವ ಅವನಿ ಅಮಾವಾಸ್ಯೆ ದೀಪ ಪೂಜೆ ನಮ್ಮ ಜೀವನದಲ್ಲಿ ನಮಗೆ ಅಗತ್ಯವಿರುವ ಎಲ್ಲಾ ಅಗತ್ಯಗಳನ್ನು ಪೂರೈಸಲು ನಾವು ಹಲವು ವಿಧಗಳಲ್ಲಿ ಪ್ರಯತ್ನಗಳನ್ನು ಮಾಡುತ್ತೇವೆ. ಆದಾಗ್ಯೂ, ಆ ಪ್ರಯತ್ನಗಳಲ್ಲಿ ಹಲವು ವಿಫಲವಾಗಿವೆ ಮತ್ತು ಅವು ಕೆಲವು ಕೊರತೆಯಿಂದಾಗಿ ಬಳಲುತ್ತಿವೆ. ಈ ಸಮಸ್ಯೆಗಳನ್ನು ತೆಗೆದುಹಾಕಬೇಕಾದರೆ, ನಮ್ಮ ಜೀವನಕ್ಕೆ ಅಗತ್ಯವಾದ ಎಲ್ಲಾ ಸಂತೋಷವನ್ನು ನಾವು ಪಡೆಯಬೇಕು. ಭಗವಾನ್ ಶುಕ್ರ ಮತ್ತು ಅವನ ದೇವತೆ ಮಹಾಲಕ್ಷ್ಮಿ ಅಂತಹ ಸಂತೋಷವನ್ನು ನೀಡುವ ಗ್ರಹಗಳು. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಅವರಿಬ್ಬರ ಆಶೀರ್ವಾದವನ್ನು ಸಂಪೂರ್ಣವಾಗಿ ಪಡೆಯಲು ಅವನಿಯ ಅಮಾವಾಸ್ಯೆಯ ದಿನದಂದು ಬೆಳಗಿಸಬೇಕಾದ ದೀಪವನ್ನು ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ…

Read More

ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸ್ಐಟಿ ಅಧಿಕಾರಿಗಳು ದೂರುದಾರ ಮಾಸ್ಕ್ ಮ್ಯಾನ್ ಅನ್ನು ಅರೆಸ್ಟ್ ಮಾಡಿದ್ದಾರೆ ಇಂದು ಅರೆಸ್ಟ್ ಮಾಡಿ ಬೆಳ್ತಂಗಡಿಯ ಸಿವಿಲ್ ಮತ್ತು JMFC ಕೋರ್ಟಿಗೆ ಹಾಜರುಪಡಿಸಲಿದ್ದು ಮಾಸ್ಕ್ ಮ್ಯಾನ್ ಕಸ್ಟರ್ಡಿನ ಅಥವಾ ನ್ಯಾಯಾಂಗ ಬಂಧನ ಎನ್ನುವುದು ಕೆಲವೇ ಕ್ಷಣಗಳಲ್ಲಿ ತಿಳಿದು ಬರಲಿದೆ ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಸ್ಕ್ ಮ್ಯಾನ್ ನನ್ನು ಸಂಶಯ ಬಂದು ವಶಕ್ಕೆ ತಗೊಂಡಿದ್ದಾರಾ ಅಥವಾ ಯಾವ ಉದ್ದೇಶದಿಂದ ಅವನನ್ನು ವಶಕ್ಕೆ ವಶಕ್ಕೆ ತೆಗೆದುಕೊಂಡಿದ್ದರೋ ಅವರಿಗೆ ಗೊತ್ತು. ದೂರುದಾರನ ಆಧಾರದ ಮೇಲೆ ನಾವು ತನಿಖೆ ಪ್ರಾರಂಭ ಮಾಡಿದ್ದೇವೆ ಈಗ ಅವರನ್ನು ಅರೆಸ್ಟ್ ಮಾಡಿ ಅವನ ಹೇಳಿಕೆ ಆಧಾರದ ಮೇಲೆ ತನಿಖೆ ಮುಂದುವರಿಯುತ್ತದೆ. ಅವರು ಹೇಳಿದ್ದನ್ನೆಲ್ಲ ನಾನು ನಿಮಗೆ ಹೇಳೋಕೆ ಆಗಲ್ಲ ಎಂದರು. ಮಾಸ್ಕ್ ಮ್ಯಾನ್ ಅರೆಸ್ಟ್ ಆಗಿರೋದು ಅಂತ ಅಷ್ಟೇ ಗೊತ್ತು ಅದನ್ನೇ ಹೇಳಿದ್ದೇನೆ ಎಸ್ ಐ…

Read More

ದಕ್ಷಿಣಕನ್ನಡ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಅನಾಮಿಕ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ಮಾಸ್ಕ್‌ಮ್ಯಾನ್‌ನ ದೂರಿನ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಯ ನಂತರ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧನವಾಗಿದೆ. ಇದೀಗ ಮಾಸ್ಕ್ ಮ್ಯಾನ್ ಹೆಸರು ಮತ್ತು ಫೋಟೋವನ್ನು ಎಸ್ಐಟಿ ಅಧಿಕಾರಿಗಳು ಕೊನೆಗೂ ರಿವಿಲ್ ಮಾಡಿದ್ದಾರೆ. ಮಾಸ್ಕ್​ಮ್ಯಾನ್​ ಹೆಸರು ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ತಿಳಿದುಬಂದಿದ್ದು, ಆತನನ್ನು ಬಂಧಿಸಿದ್ದಾರೆ. ತಲೆಬುರುಡೆ ಕೇಸ್​ನಲ್ಲಿ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಿವಿಲ್ ಮತ್ತು JMFC ಕೋರ್ಟ್​ಗೆ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಹಾಜರುಪಡಿಸಿದ್ದಾರೆ.

Read More

ಬಳ್ಳಾರಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶವ ಹೂತು ಹಾಕಿದ್ದಾಗಿ ಮಾಸ್ಕ್ ಮ್ಯಾನ್ ದೂರು ನೀಡಿರುವ ವಿಚಾರವಾಗಿ ಇದೀಗ ದೂರುದಾರರನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಿ ಕೆಲವೇ ಕ್ಷಣಗಳಲ್ಲಿ ಕೋರ್ಟಿಗೆ ಹಾಜರುಪಡಿಸಲಿದ್ದಾರೆ, ಇದರ ಮಧ್ಯ, ಮಂಗಳೂರು ಜಿಲ್ಲಾ ನ್ಯಾಯಾಲಯದಿಂದ ಜಾಮೀನು ಸಿಕ್ಕರೂ ಧರ್ಮಸ್ಥಳ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಯೂಟ್ಯೂಬರ್‌ ಸಮೀರ್‌ ಎಂ.ಡಿ. ಮನೆಗೆ ಪೊಲೀಸರು ನೋಟಿಸ್‌ ಅಂಟಿಸಿ ಬಂದಿದ್ದಾರೆ. ಹೌದು ಸಮೀರ್‌ ಎಂ.ಡಿ. ಕೋರ್ಟ್‌ಗೆ ನೀಡಿದ ವಿಳಾಸ ಬಳ್ಳಾರಿ ಜಿಲ್ಲೆಯ ಕೌಲ್‌ ಬಜಾರ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿರುವ ಬಂಡಿಹಟ್ಟಿ ನಿವಾಸಕ್ಕೆ ಶುಕ್ರವಾರ ನೋಟಿಸ್‌ ನೀಡಲು ತೆರಳಿದಾಗ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮನೆ ಗೋಡೆಗೆ ನೋಟಿಸ್‌ ಅಂಟಿಸಿದ್ದಾರೆ. ಪೊಲೀಸರ ಇನ್ನೊಂದು ತಂಡ ಬೆಂಗಳೂರು ಜಿಗಣಿಯಲ್ಲಿರುವ ಹುಲ್ಲಹಳ್ಳಿಯಲ್ಲಿರುವ ಬಾಡಿಗೆ ಮನೆಗೆ ಹೋದಾಗ ಕೂಡ ಮನೆ ಬಾಗಿಲಿಗೆ ಬೀಗ ಹಾಕಿದ್ದ ಹಿನ್ನೆಲೆಯಲ್ಲಿ ಆ ಮನೆ ಗೋಡೆಗೂ ಪೊಲೀಸರು ನೋಟಿಸ್‌ ಅಂಟಿಸಿದ್ದಾರೆ.

Read More

ಬೆಂಗಳೂರು : ಕಳೆದ ಜೂನ್ ನಾಲ್ಕರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಲ್ತೊಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಆರ್‌ಸಿಬಿ ವಿರುದ್ಧ ಕೇಶ ದಾಖಲಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಹೌದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿವೃತ್ತ ನ್ಯಾ.ಮೈಕಲ್ ಕುನ್ಹಾ ಸಮಿತಿಯ ತನಿಖಾ ವರದಿ ಸಲ್ಲಿಕೆ ವಿಚಾರವಾಗಿ ಇಂದು ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಈ ವೇಳೆ ಆರ್ಸಿಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಿರ್ಧಾರಿಸಲಾಯಿತು. ಅಲ್ಲದೇ ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ಧವು ಕೇಸ್ ದಾಖಲಿಸುವ ನಿರ್ಧರಿಸಲಾಗಿದೆ. ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ತೆಗೆದುಕೊಳ್ಳಲಾಗಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ವರದಿಯಲ್ಲೂ ಶಿಫಾರಸು ಮಾಡಲಾಗಿದೆ.

Read More

ಬೆಂಗಳೂರು : ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯ ಹೆಚ್ಚುವರಿ ಎಸ್ಪಿ ಆಗಿದ್ದ ನಾರಾಯಣ ಭರಮನಿ ಅವರಿಗೆ ಗದರಿ ಕೈ ಎತ್ತಿ ಹೊಡೆಯಲು ಮುಂದಾಗಿದ್ದರು. ಅದಾದ ಬಳಿಕ ಸಿಎಂ ನನ್ನು ಅವಮಾನಿಸಿದ್ದಾರೆ ಎಂದು ಬರಮನಿ ರಾಜೀನಾಮೆಗೆ ಮುಂದಾಗಿದ್ದರು ಆದರೆ ಅವರು ಮತ್ತೆ ತಮ್ಮ ನಿರ್ಧಾರ ಬದಲಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇದೀಗ ರಾಜ್ಯ ಸರ್ಕಾರ ಎಎಸ್‌ಪಿ ನಾರಾಯಣ ಭರಮನಿಗೆ ಮುಂಬಡ್ತಿ ನೀಡಿದ್ದು ಧಾರವಾಡ ಎಎಸ್ಪಿಯಾಗಿದ್ದ ನಾರಾಯಣ ಬರಮನಿ ಅವರಿಗೆ ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿ ಹುದ್ದೆ ನೀಡಲಾಗಿದೆ. ಈ ಮೂಲಕ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ. ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಸಿಎಂ ಸಿದ್ದರಾಮಯ್ಯ ನಾರಾಯಣ ಭರಮನಿ ಮೇಲೆ ಕೈ ಎತ್ತಲು ಮುಂದಾಗಿದ್ದರು. ಇದರಿಂದ ಮನನೊಂದು ಭರಮನಿ ರಾಜೀನಾಮೆಗೆ ಮುಂದಾಗಿದ್ದರು. ಬಳಿಕ ಹಿರಿಯ ಅಧಿಕಾರಿಗಳ ಮನವೊಲಿಕೆ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮನವೊಲಿಕೆಯಿಂದ ಮತ್ತೆ ಕರ್ತವಕ್ಕೆ ಹಾಜರಾಗಿದ್ದರು.ಇದರ ಬೆನ್ನಲ್ಲೇ ಇದೀಗ ನಾರಾಯಣ ಬರಮನಿ ಅವರಿಗೆ…

Read More

ನವದೆಹಲಿ : ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನಲ್ಲಿರುವ ಕೇತಗಾನಹಳ್ಳಿಯಲ್ಲಿನ ಭೂವತೋರಿ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂಕೋರ್ಟ್ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ದಾಖಲಿಸಿರುವ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್​ ತಾತ್ಕಾಲಿಕವಾಗಿ ತಡೆ ನೀಡಿದೆ. ಹೌದು ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್​ ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾಯಾಮೂರ್ತಿ.ಪ್ರಸನ್ನ ಬಿ. ವರಾಳೆ ಅವರ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಬಾಕಿ ಇರುವುದರಿಂದ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗೆ ತಡೆ ನೀಡುವಂತೆ ಕುಮಾರಸ್ವಾಮಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಕುಮಾರಸ್ವಾಮಿ…

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಲೀಕ್ ಆಗಿ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡಿದೆ.ಅದೃಷ್ಟವಶಾತ್ ಇಂದು ಮಕ್ಕಳಿಗೆ ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಹೌದು ಮಲ್ಲಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾಲೆಯ ಅಡುಗೆ ಕೋಣೆಯಲ್ಲಿ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಸ್ಪೋಟಗೊಂಡಿದೆ. ಮುಂಜಾಗ್ರತಕ್ಕ ಕ್ರಮವಾಗಿ ವಿದ್ಯಾರ್ಥಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿತ್ತು. ಹಾಗಾಗಿ ಶಾಲೆಯಲ್ಲಿಯೇ ಬ್ಯಾಗ್ ಬಿಟ್ಟು ಮಕ್ಕಳಿಗೆ ಮನೆಗೆ ತೆರಳುವಂತೆ ಸೂಚನೆ ನೀಡಲಾಗಿತ್ತು. ಘಟನೆ ಕುರಿತಂತೆ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಜನ ಕಾಲ್ತುಳಿತದಿಂದ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ಹಿನ್ನೆಲೆಯಲ್ಲಿ ಅಮಾನತು ರದ್ದು ಪಡಿಸಿದ ಸಿಇಟಿ ಆದೇಶ ಪ್ರಶ್ನೆ ಸಿ ಮೇಲ್ಮನವಿ ಸಲ್ಲಿಸಲಾಗಿದೆ. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ವೇಳೆ ಪೊಲೀಸರ ಅಮಾನತುಕ್ರಮವನ್ನು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿತು. ರಾಜ್ಯ ಸರ್ಕಾರದ ಪರವಾಗಿ ಪಿ. ಎಸ್ ರಾಜಗೋಪಾಲ್ ವಾದ ಮಂಡಿಸಿದರು ಅನುಮತಿ ಕೇಳಿದ ದಿನವೇ ಪೊಲೀಸರು ಅನುಮತಿ ನಿರಾಕರಿಸಬೇಕಿತ್ತು ಅನುಮತಿ ನೀಡದಿದ್ದರೂ ಪೊಲೀಸ್ ಆಯುಕ್ತಾರಾದಿಯಾಗಿ ಎಲ್ಲರೂ ಸಿದ್ಧತೆ ಆರಂಭಿಸಿದ್ದಾರೆ.ಪೊಲೀಸ್ ಆಯುಕ್ತರು ಅಂದು ಬೆಳಗ್ಗೆ 11:40ಕ್ಕೆ ಬಂದೋ ಬಸ್ತ್ ಗೆ ಸೂಚನೆ ನೀಡಿದ್ದಾರೆ. ಮೆರವಣಿಗೆಗೆ ಅನುಮತಿ ನಿರಾಕರಿಸಿದರೆ ನಿಬಂಧನೆ ಏಕೆ ವಿಧಿಸಲಿಲ್ಲ? ಪೊಲೀಸರು ಕಾರ್ಯಕ್ರಮ ನಡೆಸಿದಂತೆ ನಿರ್ಬಂಧ ವಿಧಿಸಬಹುದಿತ್ತು. ದುರ್ಘಟನೆಯಿಂದ ಸರ್ಕಾರಕ್ಕೆ ಮುಜುಗರವಾಗಿದ್ದರಿಂದ ಅವರನ್ನು ಅಮಾನತು ಪಡಿಸಲಾಗಿದೆ ಎಂದು ಪೊಲೀಸರ ವಿರುದ್ಧವೇ ರಾಜ್ಯ ಸರ್ಕಾರ ಆರೋಪಿಸಿತು. ಗುಪ್ತಚರ ಇಲಾಖೆ ಮುಖ್ಯಮಂತ್ರಿಗಳಿಗೆ ವರದಿ ನೀಡಿತ್ತು…

Read More