Author: kannadanewsnow05

ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾವೇರಿ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಅಭಿಯಂತರ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಹಿಡಿದಿದ್ದಾರೆ. ಕಾರ್ಯಪಾಲಕ ಅಭಿಯಂತರ ಕಾವೇರಿ ರಂಗನಾಥ್ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ಉಮಾ ಮಹೇಶ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಅಧಿಕಾರಿಗಳು 1.45 ಲಕ್ಷ ರೂ.ಲಂಚದ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಚಾಮರಾಜನಗರದ ಅಬ್ದುಲ್ ಅಜೀಜ್ ಎಂಬವರಿಂದ ಅಧಿಕಾರಿಗಳು 1.45 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದರು. ಅಬ್ದುಲ್ ಅಜೀಜ್ ಕಾವೇರಿ ನೀರಾವರಿ ನಿಗಮದ ಕಾಮಗಾರಿಗಳ ಪ್ರಥಮ ದರ್ಜೆಯ ಗುತ್ತಿಗೆದಾರರಾಗಿದ್ದು, 5 ಕಾಮಗಾರಿಗಳನ್ನು ಮಾಡಿದ್ದಾರೆ. ಅದರ ಬಾಬ್ತು ಬಿಲ್ 23 ಲಕ್ಷ ರೂ ಬಾಕಿ ಇದ್ದು, ಅದನ್ನು ನೀಡಲು ಶೇ.6 ಕಮಿಷನ್ ಆದ 1.45 ಲಕ್ಷ ರೂ ಹಣ ನೀಡುವಂತೆ ಕಾವೇರಿ ರಂಗನಾಥ್ ಮತ್ತು ಉಮಾ ಮಹೇಶ್ ಬೇಡಿಕೆ ಇಟ್ಟಿದ್ದರು. ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Read More

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಬಾಲಕಿಯರು ಇಬ್ಬರು ತೋಟದಲ್ಲಿ ಕೃಷಿ ಚಟುವಟಿಕೆ ಮಾಡುತ್ತಿದ್ದ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಿನ್ನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಕುರುಪ್ಪಲ್ಲಿ ಗ್ರಾಮದಲ್ಲಿ ಈ ಒಂದು ಘೋರ ಘಟನೆ ನಡೆದಿದ್ದು ಮೃತ ಬಾಲಕಿಯರನ್ನು ರಾಧಮ್ಮ (17), ಸಾಹಿತಿ (14) ಎಂದು ತಿಳಿದುಬಂದಿದೆ. ಚೇಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತಪಟ್ಟ ಬಾಲಕಿಯರು ಕುರುಪ್ಪಲ್ಲಿ ಗ್ರಾಮದವರು. ರಾಧಮ್ಮ ಆದಿನಾರಾಯಣರೆಡ್ಡಿ ಎಂಬವರ ಪುತ್ರಿ. ಬಾಗೇಪಲ್ಲಿಯ ನ್ಯಾಷನಲ್ ಕಾಲೇಜ್ ಪಿಯುಸಿ ವಿದ್ಯಾರ್ಥಿನಿ. ಸಾಹಿತಿ ರಾಮಲಿಂಗ ರೆಡ್ಡಿ ಎಂಬವರ ಪುತ್ರಿ. ಇವರು ಆದರ್ಶ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮನೆ ಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಇತರೆ ಆರೋಪಿಗಳ ಮೇಲಿನ ವಿಚಾರಣೆಗೆ ತಡೆ ನೀಡಲಾಗಿದೆ ಎಂಬ ಆಧಾರದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಜಾಮೀನು ಕೇಳುವಂತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಮನೆ ಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಎರಡನೇ ಬಾರಿಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಆರೋಪಿಸಿರುವ ಅತ್ಯಾಚಾರ ಘಟನೆ 2021ರಲ್ಲಿ ನಡೆದಿದೆ. ಆದಾದ ನಾಲ್ಕೂವರೆ ವರ್ಷಗಳ ನಂತರ ದೂರು ದಾಖಲಿಸಲಾಗಿದೆ. ಅದಕ್ಕೆ ದೂರುದಾರೆ ಯಾವುದೆ ವಿವರಣೆ ನೀಡಿಲ್ಲ. ಹೀಗಿದ್ದರೂ ಅರ್ಜಿದಾರರು ಜೈಲಿನಲ್ಲಿ ಮುಂದುವರಿಯುವುದು ಹೇಗೆ? ಆದ್ದರಿಂದ ಪ್ರಜ್ವಲ್‌ಗೆ ಜಾಮೀನು ನೀಡಬೇಕು ಎಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪ್ರಕರಣದ ಇತರೆ ಆರೋಪಿಗಳ ವಿರುದ್ಧ ತಡೆಯಾಜ್ಞೆ ಇದ್ದರೂ ಪ್ರಜ್ವಲ್ ರೇವಣ್ಣ ವಿರುದ್ಧ ನಂಬಲರ್ಹ ಸಾಕ್ಷಿಗಳಿವೆ. ಇತರೆ ಆರೋಪಿಗಳ ಮೇಲಿನ ವಿಚಾರಣೆಗೆ ತಡೆ…

Read More

ಬೆಂಗಳೂರು : ಕಳೆದ ಏಪ್ರಿಲ್ 2 ರಂದು ಬೆಸ್ಕಾಂನ ಸುಂಕದಟ್ಟೆ ಕದಟ್ಟೆ ವ್ಯಾಪ್ತಿಯಲ್ಲಿ ವಿದ್ಯುತ್ ವಿದ್ಯುತ್ ಪರಿವರ್ತಕ (ಟಿಸಿ ರಿಪೇರಿ ವೇಳೆ ವಿದ್ಯುತ್‌ ಸ್ಪರ್ಶದಿಂದ ತೀವ್ರ ಸುಟ್ಟ ಗಾಯಗಳಾಗಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವರ್ ಮ್ಯಾನ್ ಪ್ರಕಾಶ್‌ (45) ಚಿಕಿತ್ಸೆ ಫಲಕಾರಿ ಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಸುಂಕದಕಟ್ಟೆಯ ವಿಭಾಗದ ಬೈರವೇಶ್ವರ ಕೈಗಾರಿಕಾ ಪ್ರದೇಶದ ಬಳಿ ಅವಘಡ ನಡೆದಿತ್ತು. 848ನೇ ಸಂಖ್ಯೆಯ ವಿದ್ಯುತ್ ಪರಿವರ್ತಕ ದುರಸ್ತಿ ಮಾಡುವಾಗ ಶಾಕ್ ತಗುಲಿದ್ದು ಮೈ ಎಲ್ಲಾ ಗಂಭೀರ ಸುಟ್ಟ ಗಾಯಗಳಾಗಿತ್ತು. ತಕ್ಷಣ ಅವರನ್ನು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಸೇಂಟ್ ಜಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

Read More

ವಿಜಯಪುರ : ರಾಜ್ಯದಲ್ಲಿ ಕೆಲವು ದಿನಗಳ ಹಿಂದೆ ಸಿಎಂ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಲಾಗುತ್ತೆ ಎಂದು ಅಲಲ್ಲಿ ಈ ಮಾತು ಕೇಳಿ ಬರುತ್ತಿತ್ತು. ಆದರೆ ಯಾವಾಗ ಹೈಕಮಾಂಡ್ ನಾಯಕರು ರಾಜ್ಯದ ನಾಯಕರಿಗೆ ಖಡಕ್ ಎಚ್ಚರಿಕೆ ಕೊಟ್ಟರೊ ಅವಾಗಿನಿಂದ ಸಿಎಂ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಚರ್ಚೆ ನಿಂತು ಹೋಯ್ತು. ಇದೀಗ ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ಉತ್ತರ ಕರ್ನಾಟಕದ ಈ ನಾಯಕನಿಗೆ ಭವಿಷ್ಯದಲ್ಲಿ ಸಿಎಂ ಆಗುವ ಯೋಗ ಇದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಹೌದು ಕೋಡಿ ಮಠದ ಸ್ವಾಮೀಜಿಗಳ ಭವಿಷ್ಯದ ಬಗ್ಗೆ ಸಾಕಷ್ಟು ಕುತೂಹಲವಂತೂ ಇದ್ದೇ ಇರುತ್ತದೆ. ರಾಜ್ಯ ಮಳೆ, ಬೆಳೆ, ರಾಜಕಾರಣದ ಬಗ್ಗೆ ಭವಿಷ್ಯ ನುಡಿದು ಗಮನ ಸೆಳೆಯುತ್ತಾರೆ. ಇದೀಗ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯ ಚರ್ಚೆ ಆಗಾಗ ಚರ್ಚೆಗೆ ಬರುತ್ತಲೇ ಇರುತ್ತದೆ. ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ವಿಜಯಪುರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದು, ಪೌರ ಕಾರ್ಮಿಕರಿಗೆ ಕಾಯಂಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಮೇ 1ರ ಕಾಮಿಕ ದಿನದಂದು ಕಾಯಂಗೊಳಿಸಿದ ಆದೇಶ ಪತ್ರವನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ನಗರ ಪಾಲಿಕೆ ನಗರಸಭೆ ಪುರಸಭೆ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೇ 1 ರ ಕಾರ್ಮಿಕ ದಿನಾಚರಣೆಯಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕರು ಹಾಗೂ ತ್ಯಾಜ್ಯ ವಿಲೇವಾರಿ ವಾಹನಗಳ ಚಾಲಕರನ್ನು ಖಾಯಂಗೊಳಿಸಿ, ಅವರ ಬದುಕಿಗೆ ಸೇವಾ ಭದ್ರತೆಯನ್ನು ಒದಗಿಸುತ್ತಿದ್ದೇವೆ. ಕಾರ್ಮಿಕ ದಿನಾಚರಣೆ ಸಾವಿರಾರು ಪೌರ ಕಾರ್ಮಿಕರ ಬಾಳಲ್ಲಿ ಐತಿಹಾಸಿಕ ದಿನವಾಗಲಿದೆ. ಕಾರ್ಮಿಕರ ದಿನದಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕರನ್ನು ಹಾಗೂ ತ್ಯಾಜ್ಯ ಸಂಗ್ರಹಣಾ ವಾಹನಗಳ ಚಾಲಕರನ್ನು ಖಾಯಂಗೊಳಿಸುವ…

Read More

ಬೆಂಗಳೂರು : ಇಂದು ಮಧ್ಯಾಹ್ನ 12 ಗಂಟೆಗೆ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ 1ರ ಫಲಿತಾಂಶವು ಫಲಿತಾಂಶ ಪ್ರಕಟಗೊಳ್ಳಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಮಧ್ಯಾಹ್ನ 12.30ಕ್ಕೆ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ನಂತರ 1.30ರ ವೇಳೆಗೆ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ (https://karres (https://karresults.nic.in) ವೀಕಿಸಬಹುದು ಎಂದು ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು.ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ ಎಂದಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸಚಿವ…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಪ್ರಮುಖವಾಗಿದ್ದು ಇದೀಗ ಈ ಒಂದು ಯೋಜನೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮಿ” ಯೋಜನೆಗೆ ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಾಗುತ್ತದೆ ಎಂದು ಪ್ರಕಟಣೆ ಹೊರಡಿಸಿದೆ. ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ…

Read More

ಧಾರವಾಡ : ಇತ್ತೀಚಿಗೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ವಕ್ಫ್ ಮಸೂದೆ-2025 ಬಿಲ್ ಮಂಡನೆ ಮಾಡಲಾಯಿತು. ಇದೇ ವಿಚಾರವಾಗಿ ಕಾರ್ಮಿಕ ಸಚಿವ ಸಂತೋಷ ಲಾರ್ಡ್ ಚೀನಾ ಭಾರತದ 176 ಕಿಲೋಮೀಟರ್ ಪ್ರದೇಶವನ್ನು ಅತಿಕ್ರಮಣ ಮಾಡಿದೆ ಇದಕ್ಕಾಗಿ ವಕ್ಫ್ ಬಿಲ್ ಮಂಡನೆ ಮಾಡಿ ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೀನಾ ನಮ್ಮ ದೇಶದೊಳಗೆ 175 ಕಿಲೋ ಮೀಟರ್ ಅತಿಕ್ರಮ ಪ್ರವೇಶ ಮಾಡಿದೆ. ಅದನ್ನು ಮುಚ್ಚಿ ಹಾಕಲು ವಕ್ಫ್ ವಿಚಾರ ಮುಂದೆ ತಂದಿದ್ದಾರೆ. ಚೀನಾ 600ಕ್ಕೂ ಹೆಚ್ಚು ಹಳ್ಳಿಗಳನ್ನು ಕಬ್ಜಾ ಮಾಡಿದೆ ಎಂದು ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಗಂಭೀರವಾಗಿ ಆರೋಪಿಸಿದರು. ಚೀನಾದವರು ಎರಡು ಪೋಸ್ಟ್ ಕ್ರಿಯೇಟ್ ಮಾಡಿದ್ದಾರೆ. ಇದು ಎಲ್ಲೂ ಬರಬಾರದೆಂದು ವಕ್ಫ್ ಬಿಲ್ ತಂದಿದ್ದಾರೆ. ಬಡತನ, ನಿರುದ್ಯೋಗದ ಬಗ್ಗೆ ಚರ್ಚೆ ಆಗಬಾರದೆಂಬ ಉದ್ದೇಶದಿಂದ ಬಿಜೆಪಿಯವರು ಇಂತಹ ನಾಟಕ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರಿಗೆ ಅವರದ್ದೇ ಆದಂತಹ ಒಂದು ವ್ಯವಸ್ಥೆ ಇದೆ. ಅವರಿಗೆ ಆದ ಕಾಯ್ದೆ…

Read More

ಬೆಳಗಾವಿ : ವಿದೇಶದಲ್ಲಿ ಯಾವುದೇ ಆಸ್ತಿ ಇಲ್ಲ ಎಂದು ವಿಜಯೇಂದ್ರ ಘೋಷಣೆ ಮಾಡಲಿ. ಯಾವುದೇ ಬ್ಯಾಂಕ್ ನಲ್ಲಿ ಹಣ ಇಟ್ಟಿಲ್ಲ ಅಂತ ಆಣೆ ಮಾಡಲಿ. ಎಡೆಯೂರು ಸಿದ್ದಲಿಂಗೇಶ್ವರನ ದೇವಸ್ಥಾನಕ್ಕೆ ಹೋಗಿ ಆಣೆ ಮಾಡಲಿ. ಪ್ರತಿ ಮೂರು ತಿಂಗಳಿಗೊಮ್ಮೆ ಅಪ್ಪ ಮಕ್ಕಳು ದುಬೈಗೆ ಯಾಕೆ ಹೋಗುತ್ತೀರಿ? ವಿದೇಶದಲ್ಲಿ ಆಸ್ತಿ ಮಾಡಿದವರಿಗೆ ನೈತಿಕತೆ ಇಲ್ಲ ಎಂದು ಬಿಎಸ್ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಒಬ್ಬ ಮಹಾನ್ ಭ್ರಷ್ಟ. ಯಡಿಯೂರಪ್ಪ ತಾನು ಲಿಂಗಾಯತ ಅನ್ನೋದನ್ನ ಸಾಬೀತು ಮಾಡಿದ್ದಾರ? ಕೋವಿಡ್ ವೇಳೇ ಲೂಟಿ ಮಾಡಿದ್ದ ಎಂದೆ ಅದರ ಬಗ್ಗೆ ಪ್ರತಿಕ್ರಿಯಿಸಲಿಲ್ಲ. ಬಿವೈ ವಿಜಯೇಂದ್ರ ನಮ್ಮ ಭಿಕ್ಷೆಯಿಂದ ಶಾಸಕನಾಗಿದ್ದಾನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ಅದಕ್ಕೆ ರಾಜೀನಾಮೆ ಕೊಟ್ಟು ಗೆಲ್ಲುತ್ತೇನೆ ಅಂತ ವಿಜಯೇಂದ್ರ ಹೇಳಲಿಲ್ಲ. ನೀನೆ ಮಹಾಭ್ರಷ್ಟ ಈಗ ಸಿದ್ದರಾಮಯ್ಯ ಬಗ್ಗೆ ಮಾತನಾಡುತ್ತಿದ್ದೀಯಾ? ಎಂದು ವಾಗ್ದಾಳಿ ನಡೆಸಿದರು.…

Read More