Subscribe to Updates
Get the latest creative news from FooBar about art, design and business.
Author: kannadanewsnow05
ಮಹಾರಾಷ್ಟ್ರ : ಕರ್ನಾಟಕದಲ್ಲಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ತನ್ನ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿರುವುದಾಗಿ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 9:10 ರ ಸುಮಾರಿಗೆ ಬೆಂಗಳೂರಿನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಬಸ್ ಅನ್ನು ಗುರಿಯಾಗಿಸಿಕೊಂಡು ಕನ್ನಡ ಪರ ಕಾರ್ಯಕರ್ತರು ಚಾಲಕ ಭಾಸ್ಕರ್ ಜಾಧವ್ ಅವರ ಮುಖಕ್ಕೆ ಕಪ್ಪು ಬಣ್ಣ ಬಳಿದು ಹಲ್ಲೆ ನಡೆಸಿದ್ದಾರೆ ಎಂದು ಸರ್ನಾಯಕ್ ಹೇಳಿದರು. ಈ ದಾಳಿಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದ್ದು, ಕರ್ನಾಟಕ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸುವವರೆಗೆ ಸೇವೆಗಳು ಪುನರಾರಂಭಗೊಳ್ಳುವುದಿಲ್ಲ ಎಂದು ಸರ್ನಾಯಕ್ ಹೇಳಿದ್ದಾರೆ. ಶುಕ್ರವಾರ ಬೆಳಗಾವಿ ಬಳಿ ಮರಾಠಿಯಲ್ಲಿ ಹುಡುಗಿಗೆ ಉತ್ತರಿಸದ ಕಾರಣ ಕರ್ನಾಟಕ ಸಾರಿಗೆ ಬಸ್ ಕಂಡಕ್ಟರ್ ಮಹಾದೇವಪ್ಪ ಮಲ್ಲಪ್ಪ ಹುಕ್ಕೇರಿ ಮೇಲೆ ಹಲ್ಲೆ ನಡೆಸಲಾಗಿತ್ತು. ಸುಲೇಭಾವಿ ಗ್ರಾಮದಲ್ಲಿ ಬಸ್ ಹತ್ತಿದ ಹುಡುಗಿಯೊಬ್ಬಳು ಮರಾಠಿಯಲ್ಲಿ ಮಾತನಾಡುತ್ತಿದ್ದಳು, ಮತ್ತು ಕನ್ನಡದಲ್ಲಿ ಮಾತನಾಡಲು ಕೇಳಿದಾಗ ಅವಳು ತನ್ನನ್ನು ನಿಂದಿಸುತ್ತಿದ್ದಳು ಎಂದು…
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಮುಂದಿನ ಶೈಕ್ಷಣಿಕ ವರ್ಷ (2025-26)ದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂ.2 ರಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿದೆ. ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ಬಳಿಕದ ಮೊದಲ ಕಾರ್ಯನಿರತ ದಿನದಿಂದ ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದೆ. ಮೇ 22ರಿಂದ ದ್ವಿತೀಯ ಪಿಯುಸಿ ದಾಖಲಾತಿ ಆರಂಭವಾಗಲಿವೆ. ಮೊದಲನೇ ಅವಧಿ ಜೂ.2ರಿಂದ ಸೆ.21ರವರೆಗೆ ಇರಲಿದ್ದು, ಎರಡನೇ ಅವಧಿ ಅಕ್ಟೋಬರ್ 8 ರಿಂದ 2026ರ ಮಾ.31ರವರೆಗೆ ನಡೆಯಲಿದೆ. ಮಧ್ಯಂತರ ರಜೆ ಸೆ.22 ರಿಂದ ಅ.7ರವರೆಗೆ ಇರಲಿದೆ. ಉಳಿದಂತೆ ಜೂ.16 ರಿಂದ ಪ್ರಾಯೋಗಿಕ ತರಗತಿಗಳು ಆರಂಭವಾಗಲಿದೆ. ಆಗಸ್ಟ್ 11ರಿಂದ 14ರವರೆಗೆ ಪ್ರಥಮ ಕಿರು ಪರೀಕ್ಷೆ ನಡೆಯಲಿವೆ. ಇನ್ನು ಎರಡನೇ ಅವಧಿಯಲ್ಲಿ ಅಕ್ಟೋಬರ್ 9 ರಿಂದ 27ರವರೆಗೆ ಮಧ್ಯ ವಾರ್ಷಿಕ ಪರೀಕ್ಷೆ, ಡಿ. 19 ರಿಂದ 22 ಎರಡನೇ ಕಿರು ಪರೀಕ್ಷೆ, 2026ರ ಜ.2ರಿಂದ ಜ. 13ರವರೆಗೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳು, ಜ.5ರಿಂದ 20ರವರೆಗೆ ದ್ವಿತೀಯ ಪಿಯು ಪೂರ್ವ ಸಿದ್ಧತಾ…
ಚಿತ್ರದುರ್ಗ : ಬೆಳಗಾವಿಯಲ್ಲಿ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ, ನಿನ್ನೆ ಚಿತ್ರದುರ್ಗದಲ್ಲಿ ಮಹಾರಾಷ್ಟ್ರದ ಬಸ್ ಚಾಲಕನಿಗೆ ಕನ್ನಡ ಪರ ಸಂಘಟನೆಯ ಹಲವು ಕಾರ್ಯಕರ್ತರು ಚಾಲಕನಿಗೆ ಮಸಿ ಬಳೆದು ಆಕ್ರೋಶ ಹೊರಹಾಕಿದ್ದರು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು 8 ಜನ ಕನ್ನಡ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಘಟನೆ ಖಂಡಿಸಿ ಮಹಾರಾಷ್ಟ್ರ ಬಸ್ ಚಾಲಕನಿಗೆ ಮಸಿ ಬಳಿದ ವಿಚಾರಕ್ಕೆ ಸಂಬಂಧಪಟ್ಟಂತೆ ಐಮಂಗಲ ಠಾಣೆಯ ಪೊಲೀಸರಿಂದ ಕನ್ನಡ ಪರ ಕಾರ್ಯಕರ್ತರನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ನವನಿರ್ಮಾಣ ವೇದಿಕೆಯ 8 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಗುಯಿಲಾಳ ಟೋಲ್ ಬಳಿ ನಿನ್ನೆ ಮಹಾರಾಷ್ಟ್ರ ಬಸ್ ಚಾಲಕನಿಗೆ ಇವರು ಮಸಿ ಬಳಿದಿದ್ದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗುಯಿಲಾಳ ಬಳಿ ಒಂದು ಘಟನೆ ನಡೆದಿತ್ತು. ನವ ನಿರ್ಮಾಣ ವೇದಿಕೆಯ ತಿಪ್ಪೇಸ್ವಾಮಿ, ಲಕ್ಷ್ಮಿಕಾಂತ್ ಪ್ರವೀಣ್ ಸೇರಿದಂತೆ ಒಟ್ಟು 8 ಜನರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹಾಸನ : ಧರ್ಮಸ್ಥಳಕ್ಕೆ ಹೋಗುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಒಂದು ಹರಿದ ಪರಿಣಾಮ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಮೃತರನ್ನು ಗ್ರಾಮದ ಸುರೇಶ್ (60) ಮತ್ತು ಕುಮಾರ್ (55) ಮೃತ ದುರ್ದೈವಿಗಳಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಆನಗೋಳ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಇನ್ನೂ ಗಂಭೀರವಾಗಿ ಗಾಯಗೊಂಡ ದಿನೇಶ್ ಗೆ ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರು ಪಾದಯಾತ್ರೆಯ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಪ್ರಾಣಿ ಹಾಗೂ ಮಾನವ ಸಂಘರ್ಷಗಳ ನಡುವೆ ಅರಣ್ಯ ಸಂರಕ್ಷಣೆಯಲ್ಲಿ ತೊಡಗಿದ ಅರಣ್ಯ ಸಂಧಿಗಳು ತಮ್ಮ ಪ್ರಾಣವನ್ನು ಲೆಕ್ಕಿಸದೆ ಶ್ರಮಿಸುತ್ತಿರುವ ಅರಣ್ಯ ಸಿಬ್ಬಂದಿಗಳಿಗೆ ಅಪಾಯದ ಭತ್ಯೆ ನೀಡಲು ಹೋರಾಟ ಸರ್ಕಾರ ನಿರ್ಧರಿಸಿದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಈ ಕುರಿತು ಅರಣ್ಯ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವನ್ಯಜೀವಿ ದಾಳಿ ಮತ್ತು ಕಳ್ಳಬೇಟೆಗಾರರ ದಾಳಿಯ ಭೀತಿಯ ನಡುವೆಯೂ ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆ ಮಾಡಲು ಶ್ರಮಿಸುತ್ತಿರುವ ಸಿಬ್ಬಂದಿಗೆ ಅಪಾಯ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು. ಅರಣ್ಯ ಸಿಬ್ಬಂದಿಯ ಬಹು ದಿನಗಳ ಬೇಡಿಕೆಯಾದ ಪೊಲೀಸ್ ಕ್ಯಾಂಟೀನ್ ಮಾದರಿಯ ಕ್ಯಾಂಟೀನ್ ವ್ಯವಸ್ಥೆ ಜಾರಿಗೊಳಿಸಲು ಶ್ರಮಿಸಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನ ಸೆಳೆಯಲಾಗಿದೆ ಎಂದು ಖಂಡ್ರೆ ಹೇಳಿದರು.
ಶನಿ ಮತ್ತು ಶಿವನ ನಡುವಿನ ಸಂಬಂಧ : ದಂತಕಥೆಯ ಪ್ರಕಾರ, ಶನಿಯು ಒಮ್ಮೆ ಶಿವನ ವಾಸಸ್ಥಳವಾದ ಕೈಲಾಸ ಪರ್ವತವನ್ನು ತಲುಪಿದನು. ಆಗ ಶಿವನು ಶನಿಯ ಬಳಿ ಇಲ್ಲಿಗೆ ಬಂದಿರುವ ಕಾರಣವೇನೆಂದು ಕೇಳಿದನು. ಆಗ ಶನಿ ”ಓ ಸ್ವಾಮಿ ನಾಳೆಯಿಂದ ನಾನು ನಿಮ್ಮ ರಾಶಿಗೆ ಬರಲಿದ್ದೇನೆ, ಅಂದರೆ ನಿಮ್ಮ ಮೇಲೆ ನನ್ನ ವಕ್ರ ದೃಷ್ಟಿ ಬೀಳಲಿದೆ ಎಂದು ಹೇಳುತ್ತಾನೆ”. ಶನಿಯ ಈ ಮಾತನ್ನು ಕೇಳಿದ ಶಿವನು ಚಿಂತಿತನಾಗಿ ಶನಿಯ ವಕ್ರ ದೃಷ್ಟಿಯನ್ನು ತಪ್ಪಿಸುವ ಮಾರ್ಗಗಳ ಬಗ್ಗೆ ಯೋಚಿಸಲು ಆರಂಭಿಸಿದನು. ನಂತರ ಶನಿಯ ದೃಷ್ಟಿಯಿಂದ ತಪ್ಪಿಸಿಕೊಳ್ಳಲು ಶಿವನು ಕಾಲು ಭಾಗದಷ್ಟು ದೇಹವನ್ನು ಆನೆಯ ರೂಪಕ್ಕೆ ತೆಗೆದುಕೊಂಡು ಮೃತ್ಯುಲೋಕವನ್ನು ಸೇರಿಕೊಳ್ಳುತ್ತಾನೆ. ಮತ್ತು ಸಂಜೆಯವರೆಗೂ ಆನೆಯ ರೂಪದಲ್ಲಿ ಇರಬೇಕಾಯಿತು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ…
ಮಹಾರಾಷ್ಟ್ರ : ಮದುವೆಯಾಗಿ ನವ ಉದುವಿನಂತೆ ಗಂಡನ ಮನೆಗೆ ಬಂದಾಗ ಆಕೆಯ ಕನಸಿನಲ್ಲಿಯೂ ಇಂತಹ ಒಂದು ಘಟನೆ ನಡೆಯುತ್ತೆ ಎಂದು ಊಹಿಸಿರಲಿಲ್ಲ. ಹೌದು ಮಹಾರಾಷ್ಟ್ರದ ಥಾಣೆಯಲ್ಲಿ ಮದುವೆಯಾಗಿ ನವವಧು ಮನೆಗೆ ಬಂದಾಗ ಮಗಳ ಸಮಾನದ ಸೊಸೆಯ ಮೇಲೆ ಮಾವ ಹಾಗೂ ಆತನ ಸ್ನೇಹಿತ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಹೌದು ಮಗನನ್ನು ಮದುವೆಯಾಗಿ ಮನೆಗೆ ಬಂದ ಸೊಸೆಯ ಮೇಲೆ ಮಾವ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 20 ವರ್ಷದ ಮಹಿಳೆ ಮೇಲೆ 52 ವರ್ಷದ ಮಾವ ಮತ್ತವನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ವಿಚಾರವನ್ನು ಯಾರ ಬಳಿಯಾದರೂ ಹೇಳಿಕೊಂಡರೆ ಆಕೆಯ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಬಳಿಕ ನಿರಂತರ 15 ದಿನಗಳ ಕಾಲ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ. ಇಬ್ಬರೂ ಮಲಗಿದ್ದಾಗ ಆಕೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ. ಆರೋಪಿಗಳಿಬ್ಬರೂ ಪ್ರಸ್ತುತ ತಲೆಮರೆಸಿಕೊಂಡಿದ್ದು, ಪೊಲೀಸ್ ತಂಡ ಅವರಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ನಾರ್ಪೋಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್ಪೆಕ್ಟರ್ ಭರತ್…
ತಮಿಳುನಾಡು : ‘ಡಿಜಿಟಲ್ ಅರೆಸ್ಟ್’ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಚೆನ್ನೈನ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರೊಬ್ಬರನ್ನು ತಮಿಳುನಾಡು ಪೊಲೀಸರ ಸೈಬರ್ ಅಪರಾಧ ವಿಭಾಗ ಬಂಧಿಸಿದೆ. ಆರೋಪಿ ಪರಶುರಾಮನ್ “ಎರಡು ವರ್ಷಗಳ ಕಾಲ ಅನುಮಾನಾಸ್ಪದ ಖಾತೆ ಕಾರ್ಯಾಚರಣೆಗಳು ಮತ್ತು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ” ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಂದೀಪ್ ಮಿತ್ತಲ್ ಹೇಳಿದ್ದಾರೆ. ಅವರು ಪ್ರತಿ ವಹಿವಾಟಿಗೆ ₹1.20 ಲಕ್ಷ ಪಡೆಯುತ್ತಿದ್ದರು ಮತ್ತು ಈ ಮೊತ್ತವನ್ನು ತಮ್ಮ ಸಾಲಗಳನ್ನು ತೀರಿಸಲು ಬಳಸುತ್ತಿದ್ದರು ಎಂದು ಶ್ರೀ ಮಿತ್ತಲ್ ಹೇಳಿದರು. ಧರ್ಮಪುರಿ ಜಿಲ್ಲೆಯ ಮೂಲದ ಮತ್ತು ಕೋಡಂಬಾಕಂನ ಆರ್ಕಾಟ್ ರಸ್ತೆಯ ನಿವಾಸಿಯಾದ 35 ವರ್ಷದ ಪರಶುರಾಮನ್, ಅಣ್ಣಾ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಎಂಇ ಪದವಿ ಪಡೆದಿದ್ದು, ಕೋಡಂಬಾಕಂನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನಿನ್ನೆ ಒಂದೇ ದಿನ ರಾಜ್ಯದಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ತುಮಕೂರಲ್ಲಿ ಇಬ್ಬರು ವ್ಯಕ್ತಿಗಳು ಹಾಗೂ ಕೋಲಾರದಲ್ಲಿ ಓರ್ವ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಸಹ ಇದೀಗ ಆತ್ಮಹತ್ಯೆಗಳಿಗೆ ಕಡಿವಾಣ ಬಿದ್ದಿಲ್ಲ. ತುಮಕೂರಲ್ಲಿ ಒಬ್ಬ ಆಟೋ ಚಾಲಕ, ಓರ್ವ ಮಹಿಳೆ ಹಾಗೂ ಕೋಲಾರದಲ್ಲಿ ಓರ್ವ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಿನ್ನೆ ನಡೆದಿದೆ. ಹೌದು ಸುಗ್ರೀವಾಜ್ಞೆ ಜಾರಿ ಬಳಿಕವು ಮೈಕ್ರೋ ಟಾರ್ಚರ್ ನಿಂತಿಲ್ಲ. ಇದೀಗ ಗೃಹ ಸಚಿವರ ತವರಿನಲ್ಲಿ ಫೈನಾನ್ಸ್ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆ ಎಂದು ತುಮಕೂರಿನಲ್ಲಿ ಒಂದೇ ದಿನ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಂಜನಮೂರ್ತಿ (35) ಆತ್ಮಹತ್ಯೆಗೆ ಶರಣಾದವರು. ಅಂಜನಮೂರ್ತಿ ಬಟವಾಡಿಯ ಮಹಾಲಕ್ಷ್ಮೀ ನಗರದ ನಿವಾಸಿ ಎಂದು ತಿಳಿದುಬಂದಿದೆ.ಆಂಜನೇಮೂರ್ತಿ ಆಟೋ ಚಾಲಕನಾಗಿದ್ದು, ಫೈನಾನ್ಸ್ ಕಿರುಕುಳಕ್ಕೆ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.ಹಣ ನೀಡುವಂತೆ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ ನನ್ನ ಕುಟುಂಬಕ್ಕೆ ರಕ್ಷಣೆ…
ಬೆಂಗಳೂರು : ಇತ್ತೀಚಿಗೆ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಿನಲ್ಲಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ವರ್ತೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನೇಪಾಳ ಮೂಲದ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಬಾಲಕಿಯ ತಂದೆ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಬಿಹಾರ್ ಮೂಲದ ಯುವಕನಿಂದ ಈ ಒಂದು ನೀಚ ಕೃತ್ಯ ಎಸಗಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಸದ್ಯ ಆರೋಪಿವನ್ನು ಪೊಲೀಸರು ಈಗ ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.