Author: kannadanewsnow05

ರಾಯಚೂರು : ರಾಯಚೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಿಲ್ಲೆಯ ಲಿಂಗಸುಗೂರು ತಾಲೂಕಿನ ಖೈರವಾಡಗಿ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿದ್ದು, ಇಂದು ಯುವಕನ ಶವ ಪತ್ತೆಯಾಗಿದೆ. ಖೈರವಾಡಗಿ ಗ್ರಾಮದ ಪರಶುರಾಮ ಗುಂಡಪ್ಪ ಅಕ್ಕಿ (22) ಮೃತ ಯುವಕ. ಈತ ಸ್ನೇಹಿತರೊಂದಿಗೆ ಈಜಲು ಹೋಗಿ ದಡಕ್ಕೆ ಬಾರದೇ ನಾಪತ್ತೆಯಾಗಿದ್ದರು. ಇದರಿಂದ ಆತಂಕಗೊಂಡ ಗೆಳೆಯರು ಪೊಲೀಸರಿಗೆ ಮತ್ತು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಲಿಂಗಸುಗೂರು ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿದ್ದರು. ನಿರಂತರ ಶೋಧ ಕಾರ್ಯ ಕೈಗೊಂಡ ಹಿನ್ನೆಲೆ ಸೋಮವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬೆಟ್ಟಿಂಗ್ ಮತ್ತು ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಸಿ ವೀರೇಂದ್ರ ಪಪ್ಪಿ ಸಹಚರರ ವಿರುದ್ಧ ED ಇಂದ ಇದೀಗ ಹೆಚ್ಚುವರಿ ದೂರು ಸಲ್ಲಿಸಲಾಗಿದೆ. ಚಿತ್ರದುರ್ಗ ಶಾಸಕ ಕೆಎಸಿ ವೀರೇಂದ್ರ ಪಪ್ಪಿ ಜೊತೆ ಅಕ್ರಮದಲ್ಲಿ ಶಾಮೀಲು ಆಗಿರುವ ಆರೋಪ ಕೇಳಿ ಬಂದಿದ್ದು, ಅಕ್ರಮದಲ್ಲಿ ಶಾಮಿಲು ಆದ ಆರೋಪದ ಅಡೆ ಇಡೀ ಹೆಚ್ಚುವರಿ ದೂರು ಸಲ್ಲಿಸಲಾಗಿದೆ. ಫೋನ್ ಪೈಸಾ ಪೇಮೆಂಟ್ ಸಲ್ಯೂಷನ್ ಪ್ರೈವೇಟ್, ಲಿಮಿಟೆಡ್ ಲಾಜಿಕ್ ಫೋರರ್ಜ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್, ಪೃಥ್ವಿ ಎನ್ ರಾಜ್, ಕೆ.ಸಿ ತಿಪ್ಪೇಸ್ವಾಮಿ ಮತ್ತಿತರರ ವಿರುದ್ಧ ಇಡೀ ದೂರು ಸಲ್ಲಿಸಿದೆ. ಕಿಂಗ್ 567, ಪ್ಲೇ 567, ಪ್ಲೇವಿನ್ 567 ಬೆಟ್ಟಿಂಗ್ ತಾಣಗಳ ಮೂಲಕ ಹೂಡಿಕೆ ಮಾಡಿದ್ದರು. ವ್ಯವಸ್ಥಿತವಾಗಿ ವಂಚನೆ ಮಾಡಿರುವ ಆರೋಪದ ಅಡಿ ದೂರು ದಾಖಲಾಗಿದೆ. 2025 ಆಗಸ್ಟ್ ರಲ್ಲಿ ವೀರೇಂದ್ರ ಪಪ್ಪಿ ಮನೆ ಸೇರಿ ಹಲವಡೆ ಇಡಿ ದಾಳಿ ಮಾಡಿತ್ತು.ಈ ವೇಳೆ ಕೋಟ್ಯಂತರ ನಗದು ಚಿನ್ನದ ಬಿಸ್ಕತ್ತು ಮತ್ತು ಐಷಾರಾಮಿ…

Read More

ಬೆಂಗಳೂರು : ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡರ್ ಅವರು ಇದೀಗ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ರೇಣುಕಾ ಸ್ವಾಮಿ ಧರಿಸಿದ್ದ ಚೈನ್ ಮತ್ತು ಉಂಗುರದ ಕಸ್ಟಡಿ ನೀಡಲು ಮನವಿ ಮಾಡಿದ್ದಾರೆ. ಒಡವೆ ರೇಣುಕಸ್ವಾಮಿ ತಾಯಿಕ ಕಸ್ಟಡಿಗೆ ನೀಡಲು ಕೋರ್ಟ್ ಒಪ್ಪಿಗೆ ನೀಡಿದ್ದು, ಕೆಲ ಷರತ್ತುಗಳನ್ನ ವಿಧಿಸಿ ಬೆಂಗಳೂರಿನ 57ನೇ ಸಿಸಿ ಹೆಚ್ಚು ಕೋರ್ಟ್ ಒಪ್ಪಿಗೆ ನೀಡಿದೆ. 2 ಲಕ್ಷದ ಬಾಂಡ್ ನೀಡಬೇಕು ಕೇಳಿದಾಗ ಹಾಜರುಪಡಿಸಬೇಕು. ಒಡವೆಯ ಸ್ವರೂಪ ಬದಲಿಸಬಾರದು, ಮಾರಾಟ ಮಾಡದಂತೆ ಷರತ್ತು ವಿಧಿಸಿದೆ. ಇನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಕ್ಕಾಗಿ A3 ಪವನ್ ಅರ್ಜಿ ಸಲ್ಲಿಸಿದ್ದು, ಆರೋಪಿಗಳ ಮೊಬೈಲ್ ಮಾಡಿದ ಸ್ಥಳದ ಬಗ್ಗೆ A3 ವಕೀಲರು ತಕರಾರು ತೆಗೆದಿದ್ದಾರೆ. A3 ಪರ ವಕೀಲರು ಠಾಣೆಗೆ ತೆರಳಿ ಪರಿಶೀಲನೆಗೆ ಕೋರ್ಟ್ ಅನುಮತಿ ನೀಡಿದೆ. ಇಂದಿನ ಸಿಸಿಟಿವಿ ದೃಶ್ಯ ಕಾಯ್ದು ಕಾಮಾಕ್ಷಿಪಾಳ್ಯ ಠಾಣೆಗೆ ಸೂಚನೆ ನೀಡಲಾಗಿದೆ.

Read More

ವಿಜಯಪುರ : ವಿಜಯಪುರ ನಗರ ಸೇರಿದಂತೆ ಹಲವಡೆ ಇಂದು ಅಕಾಲಿಕ ಮಳೆ ಆಯಿತು. ಕಳೆದ ಅರ್ಧ ಗಂಟೆಯಿಂದ ಅಕಾಲಿಕ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲೂ ಸ್ಥಗಿತವಾಗಿದೆ. ಒಂದು ಕಡೆ ಮಳೆಯಲ್ಲಿಯೇ ದ್ವಿಚಕ್ರ ವಾಹನ ಓಡಿಸಿ ಸವಾರರು ಖುಷಿ ಪಟ್ಟರು. ಆದರೆ ಮತ್ತೊಂದು ಕಡೆ ದ್ರಾಕ್ಷಿ ಬೆಳೆಗಾರರಲ್ಲಿ ಈ ಒಂದು ಅಕಾಲಿಕ ಮಳೆ ಆತಂಕ ಮೂಡಿಸಿದೆ. ಬಿರುಸಾದ ಮಳೆಯಿಂದ ದ್ರಾಕ್ಷಿ ಬೆಳೆ ಹಾಳಾಗುವ ಸಾಧ್ಯತೆ ಇದೆ. ಕಠಾವಿಗೆ ಬಂದಿದ್ದ ಹಿಂಗಾರು ಬೆಳೆ ಹಾನಿಯಾಗುವ ಆತಂಕ ಇದೆ.

Read More

ಶಿವಮೊಗ್ಗ : ಅಧಿಕಾರ ಹಂಚಿಕೆಯ ನಡುವೆ ರಾಜ್ಯದಲ್ಲಿ ಮೊದಲ ಬಾರಿ ಗೆದ್ದು ಶಾಸಕರಾಗಿದ್ದ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದು 5 ಶಾಸಕರಿಗೆ ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ಕೊಡಿ ಎಂದು ಪತ್ರ ಬರೆದಿದ್ದಾರೆ. ಇದೆ ವೇಳೆ ನನಗೆ ಸಿಎಂ ಆಗುವ ಆಸೆ ಇಲ್ಲ. ಸಚಿವ ಸ್ಥಾನ ಕೊಡಿ ಸಾಕು ಎಂದು ಶಾಸಕ ಬೀಳೋರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಸಿಎಂ ಬದಲಿಸುವುದು ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದೇನೆ. ಸಿಎಂ ಆಗೋ ಅಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಕರ್ನಾಟಕ ರಾಜ್ಯದಲ್ಲಿ ಕೆಲವು ಹಿರಿಯ ನಾಯಕರು ಇದ್ದಾರೆ. ಕೆಲವರನ್ನು ಬದಲಾಯಿಸಿ ಯುವಕರಿಗೆ ಅವಕಾಶ ಕೊಡಬೇಕು. ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ. ನಮಗೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುವುದು ಬೇಡ. ಹೈಕಮಾಂಡ್ ನಾಯಕರು ಏನಾದರೂ ಒಂದು ನಿರ್ಧಾರ ತೆಗೆದುಕೊಳ್ಳಬೇಕು. ನಾನು ಮೂರು ಬಾರಿ ಗೆದ್ದಿದ್ದೇನೆ ನಮಗೂ ಕೇಳುವ ಹಕ್ಕಿದೆ.…

Read More

ಯಾದಗಿರಿ : ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ. ಪಾಕಿಸ್ತಾನದ ರಾಷ್ಟ್ರಪಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ವೈರಲಾಗಿದೆ. ಶಿವಾಜಿ ಜಯಂತಿಯಲ್ಲಿ ಶಾಸಕ ಬಸನಗೌಡ ಪಾಟೀಲ ಭಾಷಣದ ವಿಡಿಯೋ ಈಗ ವೈರಲ್ ಆಗಿದೆ. ಫೆಬ್ರುವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳಲ್ಲ. ಜವಾಹರ್ಲಾಲ್ ನೆಹರೂರನ್ನ ಮೊದಲ ಪ್ರಧಾನಿ ಎಂದು ಒಪ್ಪಿಕೊಳ್ಳಲ್ಲ ನಮ್ಮ ದೇಶದ ಮೊದಲ ಪ್ರಧಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಕಾಶ್ಮೀರಕ್ಕೆ 370 ಕೊಟ್ಟಿದ್ದು ಯಾಕಂದ್ರೆ ಫಾರೂಕ್ ಅಬ್ದುಲ್ಲ ಲಿಂಕ್ ಇದೆ, ಫಾರೂಕ್ ಅಬ್ದುಲ್ಲಗೆ ಜವಾಹರಲಾಲ್ ನೆಹರುಗೆ ಲಿಂಕ್ ಇತ್ತು. ಅದಕ್ಕೆ ರಾಹುಲ್ ಗಾಂಧಿ ಮತ್ತು ಓಮರ್ ಅಬ್ದುಲ್ಲ ಒಂದೇ ತರಹ ಇದ್ದಾರೆ. ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಮತ್ತು ರಾಹುಲ್ ಸೇಮ್ ಇದ್ದಾರೆ ಇಬ್ಬರೂ ಒಂದೇ ಪ್ರೋಡಕ್ಷನ್ ಇದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜವಾಹರ್ ಲಾಲ್ ನೆಹರು ಈ…

Read More

ಬೆಂಗಳೂರು : ಎಂ.ಫಾರ್ಮಾ ಕೋರ್ಸ್ ಪ್ರವೇಶಕ್ಕೆ ಎರಡನೇ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಫೆ.25ರಂದು ಮಧ್ಯಾಹ್ನ 2 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಹೌದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಎಂ.ಫಾರ್ಮಾ (M.Pharma) ಕೋರ್ಸ್‌ಗಳ ಪ್ರವೇಶಾತಿಗಾಗಿ ಅಂತಿಮ ಸುತ್ತಿನ (Final Round) ಸೀಟು ಹಂಚಿಕೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಸುತ್ತಿನಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು ಇಲ್ಲಿವೆ: ಪ್ರಮುಖ ದಿನಾಂಕಗಳು ಮತ್ತು ವಿವರಗಳು * ಆಪ್ಷನ್ ಎಂಟ್ರಿ (Option Entry): ಅರ್ಹ ಅಭ್ಯರ್ಥಿಗಳು ತಮ್ಮ ಆದ್ಯತೆಯ ಕಾಲೇಜು ಮತ್ತು ಕೋರ್ಸ್‌ಗಳನ್ನು ದಾಖಲಿಸಲು ನಿಗದಿತ ಸಮಯವನ್ನು ನೀಡಲಾಗಿರುತ್ತದೆ. ಈಗಾಗಲೇ ಮೊದಲ ಸುತ್ತಿನಲ್ಲಿ ಸೀಟು ಸಿಗದವರು ಅಥವಾ ಉತ್ತಮ ಸೀಟು ಬಯಸುವವರು ಇಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. * ಸೀಟು ಹಂಚಿಕೆ ಫಲಿತಾಂಶ: ಆಪ್ಷನ್ ಎಂಟ್ರಿ ಪ್ರಕ್ರಿಯೆ ಮುಗಿದ ನಂತರ, ಅಭ್ಯರ್ಥಿಗಳ ಮೆರಿಟ್ ಮತ್ತು…

Read More

ಬೆಂಗಳೂರು : ಕಾಂತಾರಾ’ ಪಾತ್ರವನ್ನು ಅವಹೇಳನ ಮಾಡಿದ್ದ ಆರೋಪದ ಮೇಲೆ ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನಲ್ಲಿ ಕೇಸ್ ದಾಖಲಾಗಿದೆ. ಈ ಎಫ್‌ಐಆರ್ ರದ್ದು ಕೋರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ವೇಳೆ, ಬಾಲಿವುಡ್ ನಟ ಆದರೆ ಈಗಲೇ ಕೇಸ್ ವಿಚಾರಣೆ ಮಾಡಬೇಕಾ ಎಂದು ಹೈ ಕೋರ್ಟ್ ತರಾಟೆಗೆ ತೆಗೆದುಕೊಂಡಿತು. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠದ ಮುಂದೆ ರಣವೀರ್ ಸಿಂಗ್ ಪರ ವಕೀಲರು ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. “ಪೊಲೀಸರು ಈಗಾಗಲೇ ಎರಡು ಬಾರಿ ನೋಟಿಸ್ ನೀಡಿದ್ದಾರೆ, ಆದ್ದರಿಂದ ಇಂದೇ ವಿಚಾರಣೆ ನಡೆಸಿ” ಎಂದು ಕೋರಿದರು. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ಬಾಲಿವುಡ್ ನಟನಾದರೆ ಮಧ್ಯಾಹ್ನವೇ ವಿಚಾರಣೆ ನಡೆಸಬೇಕೇ? ಒಂದು ವೇಳೆ ಹಾಲಿವುಡ್ ನಟನಾದರೆ ಈಗಲೇ ವಿಚಾರಣೆ ನಡೆಸಬೇಕೆ?” ಎಂದು ಪ್ರಶ್ನಿಸುವ ಮೂಲಕ ವಿಶೇಷ ಆದ್ಯತೆ ನೀಡಲು ನಿರಾಕರಿಸಿದರು. ಅಂತಿಮವಾಗಿ ವಿಚಾರಣೆಯನ್ನು ನಾಳೆಗೆ ನಿಗದಿಪಡಿಸಿದರು.

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKRTC) ಸಿಹಿ ಸುದ್ದಿ ನೀಡಿದೆ. ಫೆಬ್ರವರಿ 28 ರಿಂದ ಆರಂಭವಾಗಲಿರುವ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರವೇಶ ಪತ್ರವೇ ಬಸ್ ಪಾಸ್! ಪರೀಕ್ಷಾ ಕೇಂದ್ರಗಳು ವಿದ್ಯಾರ್ಥಿಗಳ ಸ್ವಂತ ವಿದ್ಯಾಸಂಸ್ಥೆಗಿಂತ ಬೇರೆಡೆ ನಿಯೋಜನೆಯಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಈ ಕೆಳಗಿನ ಮಾರ್ಗಸೂಚಿಗಳ ಅನ್ವಯ ಸೌಲಭ್ಯ ಪಡೆಯಬಹುದು: ದಿನಾಂಕ: 2026ರ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ (ಪರೀಕ್ಷೆ ನಡೆಯುವ ದಿನಗಳಂದು ಮಾತ್ರ). ಅಗತ್ಯ ದಾಖಲೆ: ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ ವಿದ್ಯಾರ್ಥಿಗಳು ತಮ್ಮ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಪ್ರವೇಶ ಪತ್ರ (Hall Ticket) ತೋರಿಸುವುದು ಕಡ್ಡಾಯ. ಬಸ್ಸುಗಳ ವಿವರ: ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ (Ordinary & Express) ಬಸ್ಸುಗಳಲ್ಲಿ ಈ ಉಚಿತ ಪ್ರಯಾಣಕ್ಕೆ ಅವಕಾಶವಿರುತ್ತದೆ. ವಿದ್ಯಾರ್ಥಿಗಳು ಯಾವುದೇ…

Read More

ಬೆಂಗಳೂರು : ‘ಕಾಂತಾರ’ ಚಿತ್ರದ ದೈವದ ಪಾತ್ರದ ಕುರಿತು ನೀಡಿದ ಹೇಳಿಕೆ ಮತ್ತು ಅನುಕರಣೆಗೆ ಸಂಬಂಧಿಸಿದಂತೆ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಬಾಲಿವುಡ್ ನಟ ರಣವೀರ್ ಸಿಂಗ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರದ ದೈವದ ನರ್ತನ ಮತ್ತು ರಿಷಬ್ ಶೆಟ್ಟಿ ಅವರ ಅಭಿನಯವನ್ನು ಅನುಕರಿಸಿದ್ದರು. ಈ ವೇಳೆ ಅವರು ನೀಡಿದ ಕೆಲವು ಹೇಳಿಕೆಗಳು ದೈವಾರಾಧಕರ ಭಾವನೆಗೆ ಧಕ್ಕೆ ತಂದಿವೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಹೈಕೋರ್ಟ್‌ನಲ್ಲಿ ನಟನ ವಾದ: ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದ ಪೀಠದ ಮುಂದೆ ಸಲ್ಲಿಕೆಯಾಗಿರುವ ಈ ಅರ್ಜಿಯಲ್ಲಿ ರಣವೀರ್ ಸಿಂಗ್ ಈ ಕೆಳಗಿನ ಅಂಶಗಳನ್ನು ಉಲ್ಲೇಖಿಸಿದ್ದಾರೆ: ತಮ್ಮ ಹೇಳಿಕೆಗಳು ರಿಷಬ್ ಶೆಟ್ಟಿ ಅವರ ಅದ್ಭುತ ಪ್ರದರ್ಶನ ಮತ್ತು ಚಿತ್ರದ ಪಾತ್ರದ ಬಗ್ಗೆ ಇದ್ದ ಪ್ರಾಮಾಣಿಕ ಮೆಚ್ಚುಗೆಯಾಗಿತ್ತು. ದೈವಾರಾಧನೆಯನ್ನು ಅವಮಾನಿಸುವ ಯಾವುದೇ ಉದ್ದೇಶ ತಮಗಿರಲಿಲ್ಲ.…

Read More