Author: kannadanewsnow05

ಮೈಸೂರು : ಇಂದು ವಿಶ್ವಖ್ಯಾತ ನಾಡ ಹಬ್ಬದ ದಸರಾವನ್ನು ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರು ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿದರು. ಈ ಒಂದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಈ ಹಿಂದೆ ಹೈದರಾಲಿ ಹಾಗೂ ಟಿಪ್ಪು ಸುಲ್ತಾನ್ ಸಹ ದಸರಾ ಹಬ್ಬವನ್ನು ಆಚರಿಸುತ್ತಿದ್ದರು ಇತಿಹಾಸ ತಿರುಚಬೇಡಿ ಎಂದು ತಿಳಿಸಿದರು. ವಿಜಯನಗರ ಕಾಲದಲ್ಲಿ ದಸರಾ ಆಚರಣೆ ಮಾಡುತ್ತಿದ್ದರು. ಬಳಿಕ ವಿಜಯನಗರ ಸಾಮ್ರಾಜ್ಯ ಪತನವಾದ ಸಂದರ್ಭದಲ್ಲಿ ಮೈಸೂರು ಅರಸರು ಆಚರಣೆ ಮಾಡಿದರು. ನಂತರ ಶ್ರೀರಂಗಪಟ್ಟಣದಲ್ಲಿ ಹೈದರಾಲಿ ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಣೆ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಎಲ್ಲರೂ ಇತಿಹಾಸವನ್ನ ತಿಳಿದುಕೊಳ್ಳಬೇಕು. ಆ ಕಾರಣಕ್ಕಾಗಿಯೇ ಸಂವಿಧಾನದ ಪೀಠಿಕೆಯನ್ನು ಪ್ರತಿಯೊಂದು ಶಾಲೆಯಲ್ಲೂ ಓದಬೇಕೆಂದು ಮಾಡಿದ್ದೇವೆ. ಇತಿಹಾಸವನ್ನ ತಿರುಚಿ ರಾಜಕೀಯಕ್ಕೋಸ್ಕರ ಮಾಡಬಾರದು. ರಾಜಕೀಯ ಮಾಡೋಣ ಅಂದ್ರೆ ಬಹಳಷ್ಟು ಇದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡೋಣ. ಇಲ್ಲ ಸಲ್ಲದ ದ್ವೇಷಕ್ಕೋಸ್ಕರ ರಾಜಕಾರಣ ಮಾಡಬಾರದು ಎಂದು ಹೇಳಿದರು.

Read More

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಜಯ ಮೃತ್ಯುಂಜಯ ಸ್ವಾಮೀಜಿಗಳನ್ನು ಉಚ್ಚಾಟನೆ ಮಾಡಿದ ಹಿನ್ನೆಲೆಯಲ್ಲಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಳಿ ಇದೀಗ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಗ್ರಾಮದಲ್ಲಿ 1 DAR,ತುಕಡಿ, 20ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಇದೀಗ ಟ್ರಸ್ಟ್ ಸಿಬ್ಬಂದಿಗಳು ಬೀಗ ಹಾಕಿದ್ದಾರೆ. ಸದ್ಯ ಪಂಚಮಸಾಲಿ ಪೀಠದ ಆವರಣ ಜನರಿಲ್ಲದೆ ಬೀಕೋ ಎನ್ನುತ್ತಿದೆ.ಪೀಠದ ಕಡೆಗೆ ಯಾರೂ ಹೋಗದಂತೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಬಸವ ಜಯ ಮೃತ್ಯುಂಜಯ ಶ್ರೀಗಳು ಕೂಡಲಸಂಗಮಕ್ಕೆ ಬರುವ ಸಾಧ್ಯತೆ ಇದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ಆಗದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಲಾದಾಗಿದೆ. ಕೂಡಲಸಂಗಮದಲ್ಲಿ ಭಕ್ತರ ಜೊತೆಗೆ ಸ್ವಾಮೀಜಿ ಚರ್ಚಿಸುವ ಸಾಧ್ಯತೆ ಇದೆ. ಪೀಠದ ಆವರಣ ಬಿಟ್ಟು ಬೇರೆ ಸ್ಥಳದಲ್ಲಿ ಭಕ್ತರ ಜೊತೆಗೆ ಶ್ರೀಗಳು ಚರ್ಚಿಸಿ ಏನು ಹೇಳುತ್ತಾರೆ ಎಂದು ಕಾದು ನೋಡಬೇಕಾಗಿದೆ.

Read More

ಮೈಸೂರು ಸೆ 22: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದರು. ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಡ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ…

Read More

ಮೈಸೂರು : ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ತಿಳಿಸಿದರು. ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ.  ದಸರಾ ಎಂದರೆ ಕೇವಲಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ ಎಂದರು. ಸರ್ವ ಜನಾಂಗದ ಶಾಂತಿಯ ತೋಟ’-ಈ ನೆಲದ ಸಂಸ್ಕೃತಿ ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ.…

Read More

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೆ ನೀಡಿದ್ದ ಚಿನ್ನಯ್ಯನಿಗೆ ಹಣ ನೀಡಿದವರಿಗೆ ಇದೀಗ ಸಂಕಷ್ಟ ಎದುರಾಗಿದ್ದು, ಚಿನ್ನಯ್ಯನ ಖಾತೆಗೆ ಹಣ ಹಾಕಿದವರಿಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ ಹೌದು ಈ ಒಂದು ಪ್ರಕರಣದ ಪ್ರಮುಖ ಆರೋಪಿಗಳಾದ ಚಿನ್ನಯ್ಯ ಹಾಗೂ ಆತನ ಪತ್ನಿಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿದ ಹಲವರಿಗೆ ಎಸ್‌ಐಟಿ ಪೊಲೀಸರು ನೋಟೀಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.ಆರೋಪಿ ಚಿನ್ನಯ್ಯನ ಬ್ಯಾಂಕ್ ಖಾತೆಗೆ ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ₹3 ಲಕ್ಷ ಹಣ ವರ್ಗಾಯಿಸಿದ ಹಲವರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಹಣದ ಮೂಲವನ್ನು ಪತ್ತೆಹಚ್ಚಲು ವಿಚಾರಣೆಗೆ ಕರೆಯಲಾಗಿದೆ. ಚಿನ್ನಯ್ಯನ ಬ್ಯಾಂಕ್ ಖಾತೆಯ ವಿವರಗಳನ್ನು ಈಗಾಗಲೇ ಪಡೆದಿರುವ ಎಸ್ಐಟಿ, ಸುಮಾರು 3 ಲಕ್ಷ ರೂಪಾಯಿಗೂ ಅಧಿಕ ಹಣ ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಜಮೆಯಾಗಿರುವುದನ್ನು ಪತ್ತೆ ಹಚ್ಚಿದೆ. ಈ…

Read More

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆ ಗಂಭೀರ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ. ಇದೀಗ ಸಂಸದ ಡಾ.ಕೆ. ಸುಧಾಕರ್‌ ಅವರ ಪತ್ನಿ ಡಿಜಿಟಲ್‌ ಅರೆಸ್ಟ್‌ ವಂಚನೆಗೆ ಒಳಗಾಗಿದ್ದು, 14 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಆದರೆ ಗೋಲ್ಡನ್ ಅವರ್ನಲ್ಲಿ ಡಾ. ಪ್ರಿಯಾ ಅವರು ಸೈಬರ್ ಠಾಣೆಗೆ ದೂರು ನೀಡಿದ್ದರಿಂದ ತಾವು ಕಳೆದುಕೊಂಡಿದ್ದ ಎಲ್ಲಾ 14 ಲಕ್ಷ ರೂಪಾಯಿಗಳನ್ನು ಮರಳಿ ಪಡೆದುಕೊಂಡಿದ್ದಾರೆ. ಪತ್ನಿ ಡಾ. ಪ್ರೀತಿ ಸುಧಾಕರ್ ಗೆ ಸೈಬರ್ ವಂಚನೆ ಮಾಡಿ 14 ಲಕ್ಷ ರೂಪಾಯಿ ಎಗರಿಸಿದ್ದಾರೆ. ಆಗಸ್ಟ್ 26ರಂದು ಡಾ. ಪ್ರೀತಿ ಸುಧಾಕರ್ ಬೆಳಿಗ್ಗೆ 9:30ಕ್ಕೆ ಕರೆ ಬಂದಿತ್ತು. ನಾವು ಮುಂಬೈ ಸೈಬರ್ ಇಲಾಖೆಯಿಂದ ಕರೆ ಮಾಡುತ್ತಿದ್ದೇವೆ. ನಿಮ್ಮ ದಾಖಲೆಗಳನ್ನ ಸದ್ಭತ್ ಖಾನ್ ಎಂಬ ಅಪರಿಚಿತ ಬಳಸಿಕೊಂಡಿದ್ದಾನೆ. ನಿಮ್ಮ ಹೆಸರಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾನೆ ಎಂದು ವಂಚಕ ಹೇಳಿದ್ದಾನೆ. ವಿದೇಶಕ್ಕೆ ಕಾನೂನುಬಾಹಿರವಾಗಿ ಚಟುವಟಿಕೆ ನಡೆಸಲು ಆತ ಜನರನ್ನು ಕಳುಹಿಸಿದ್ದಾನೆ. ಸದ್ಯಕ್ಕೆ ಸದ್ಬತ್ ಖಾನ್‌ರನ್ನು ಅರೆಸ್ಟ್ ಮಾಡಲಾಗಿದ್ದು,…

Read More

ಮೈಸೂರು : ಸಂವಿಧಾನದಲ್ಲಿ ಎಲ್ಲರೂ ಮನುಷ್ಯರಾಗಿ ಬಾಳಿ ಸಮ ಸಮಾಜವನ್ನು ಕಟ್ಟಿ ಎಲ್ಲರೂ ಭಾತೃತ್ವದಿಂದ ಬಾಳುವ ಭಾವನೆ ಬೆಳೆಸಿಕೊಳ್ಳಿ ಎಂದು ಸಂದೇಶ ಸಾರುತ್ತದೆ. ಹಾಗಾಗಿ ಇದನ್ನು ನಾಡಹಬ್ಬ ಜನರ ಹಬ್ಬ ಎಂದು ಕರೆಯಲಾಗುತ್ತದೆ. ಇದು ಒಂದು ಧರ್ಮದ ಹಬ್ಬ, ಒಂದು ಜಾತಿಯ ಹಬ್ಬ ಅಲ್ಲ. ಎಲ್ಲ ಧರ್ಮದ ಎಲ್ಲಾ ಜಾತಿಗಳ ಹಬ್ಬ. ಹಾಗಾಗಿ ಇದನ್ನು ವಿಶ್ವವಿಖ್ಯಾತ ದಸರಾ ಅಂತ ಕರೆಯಲಾಗುತ್ತದೆ ಎಂದರು. ಬಡವರಿಗೆ ಆರ್ಥಿಕವಾಗಿ ಶಕ್ತಿ ಕೊಡಬೇಕು ಜಾತಿ ವ್ಯವಸ್ಥೆಯನ್ನು ತೆಗೆದು ಹಾಕಬೇಕು. ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೆ ಅಲ್ಲಿಯವರಿಗೆ ದೌರ್ಜನ್ಯ ಅಸಮಾನತೆ ಮುಂದುವರೆಯುತ್ತದೆ. ಅಸಮಾನತೆ,ದೌರ್ಜನ್ಯ ಹೋಗಬೇಕಾದರೆ ಎಲ್ಲರೂ ಮುಖ್ಯವಾಹಿನಿಗೆ ಬರಬೇಕಾದರೆ, ಸಮಾನತೆ ಬಂದಾಗ ಮಾತ್ರ ಸಮ ಸಮಾಜ ನಿರ್ಮಾಣ ಮಾಡಲಿಕ್ಕೆ ಸಾಧ್ಯವಾಗುತ್ತದೆ ಇಲ್ಲವಾದರೆ ಸಾಧ್ಯ ಆಗಲ್ಲ. ಇದನ್ನೇ ಬುದ್ಧ ಬಸವಣ್ಣ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರು ಹೇಳಿದ್ದು. ಕುವೆಂಪು ಅವರು ಹೇಳುತ್ತಾರೆ ಎಲ್ಲಾ ದೇವಸ್ಥಾನಗಳನ್ನ ಚರ್ಚ್ ಗಳನ್ನ ಮಸೀದಿಗಳನ್ನು ಬಿಟ್ಟು ಬರ್ರಿ ಮನುಷ್ಯರಾಗಿ ಅಂತ ಹೇಳಿದರು. ಸರ್ವಜನಾಂಗದ ಶಾಂತಿಯ ತೋಟ…

Read More

ಮೈಸೂರು : ರಾಜ್ಯದಲ್ಲಿ 5 ಗ್ಯಾರಂಟಿಗಳನ್ನು ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆ. ಯಾಕೆ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆ ಅಂದರೆ, ಸ್ವತಂತ್ರ ಬಂದು 78 ವರ್ಷಗಳಾದರೂ ಕೂಡ ಅಸಮಾನತೆ ಇದೆ ತಾರತಮ್ಯ ಇದೆ ಇದೆಲ್ಲವನ್ನು ಹೋಗಲಾಡಿಸಲು ನಾವು ಈ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಸಿದ್ದರಾಮಯ್ಯ ಗ್ಯಾರಂಟಿ ಯೋಜನೆ ಮುಂದುವರೆಸಲಿಕ್ಕೆ ಆಗಲ್ಲ ಅಂತ ಹೇಳಿದರು. ಇಲ್ಲಿವರೆಗೆ ಸುಮಾರು 1 ಲಕ್ಷ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದ್ದೇವೆ. ರಾಜ್ಯ ಏನಾದರೂ ದಿವಾಳಿ ಆಗಿದೆಯಾ ? ಪ್ರತಿವರ್ಷ 52 ರಿಂದ 56,000 ಕೋಟಿ ರೂಪಾಯಿ ಇದಕ್ಕೆ ಖರ್ಚು ಮಾಡುತ್ತಿದ್ದೇವೆ. ಪ್ರತಿಯೊಂದು ಬಡವರ ಮನೆಗೆ ದೀನ ದಲಿತರ ಮನೆಗೆ ಬಡವರ ಮನೆಗೆ ನಾಲ್ಕರಿಂದ ಐದು ಸಾವಿರ ರೂಪಾಯಿ ಕೊಡುತ್ತಿದ್ದೇವೆ. ಇವತ್ತು ಕೊಂಡುಕೊಳ್ಳುವಂಥ ಶಕ್ತಿ ಜಾಸ್ತಿಯಾಗಿದೆ. ಶಕ್ತಿ ಯೋಜನೆಯ ಮೂಲಕ ಯಾವ ಹೆಣ್ಣು ಮಕ್ಕಳು ಕೂಡ ಬಸ್ ಚಾರ್ಜ್ ಕೊಡುವ ಹಾಗಿಲ್ಲ ಸುಮಾರು 500 ಕೋಟಿಗೂ…

Read More

ಮೈಸೂರು : ಬಾನು ಮುಷ್ತಾಕ್ ಅವರು ಹುಟ್ಟಿನಿಂದ ಮುಸ್ಲಿಂ ಮಹಿಳೆ ಆಗಿರಬಹುದು ಆದರೆ ಅವರು ಕೂಡ ಮನುಷ್ಯರೇ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆ ಹೊರತು, ಧರ್ಮದ ಆಧಾರದ ಮೇಲೆ ಜಾತಿಯ ಆಧಾರದ ಮೇಲೆ ದ್ವೇಷಿಸಬಾರದು ನಾವೆಲ್ಲರೂ ಮನುಷರು ನಾವೆಲ್ಲ ಪರಸ್ಪರ ಪ್ರೀತಿಯಿಂದ ಇರಬೇಕೆ ಹೊರತು ದ್ವೇಷದಿಂದ ಇರಬಾರದು ಅದು ಮನುಷ್ಯತ್ವದ ಲಕ್ಷಣ ಅಲ್ಲ. ಲ್ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನಲ್ಲಿ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ನಾವು ಮನುಷ್ಯತ್ವ ಒಪ್ಪಿಕೊಳ್ಳುವುದಾದರೆ ಈ ನಾಡಿನ ಯಾವುದೇ ಧರ್ಮ ಯಾವುದೇ ಜಾತಿ ಯಾವುದೇ ವರ್ಗಕ್ಕೆ ಸೇರಿರತಕ್ಕಂತಹವರು ಕೂಡ ಇಂತಹ ಪ್ರಮುಖವಾದಂತಹ ನಾಡ ಹಬ್ಬಗಳ ಉದ್ಘಾಟನೆಯನ್ನು ಮಾಡುವುದನ್ನು ಸ್ವಾಗತ ಮಾಡಬೇಕು ಈ ನಾಡಿನ ಬಹುಸಂಖ್ಯಾತ ಜನರು ಭಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದನ್ನು ಒಪ್ಪಿಕೊಂಡಿದ್ದಾರೆ ಎಂದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳುತ್ತಿದ್ದರು ಯಾರಿಗೆ ಇತಿಹಾಸ ಗೊತ್ತಿರಲ್ಲ, ಅವರ್ಯಾರು ಭವಿಷ್ಯ ನಿರ್ಮಾಣ ಮಾಡಲು ಸಾಧ್ಯವಿಲ್ಲ ಅಂತ ಹೇಳುತ್ತಿದ್ದರು ಹಾಗಾಗಿ ಪ್ರತಿಯೊಬ್ಬರೂ ಇತಿಹಾಸವನ್ನು…

Read More

ಬೆಂಗಳೂರು : ಮನೆ ಕೆಲಸಗಳಿಗೆ ಸೇರುವ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಸಂಘಟನೆ ಖಾತರಿಪಡಿಸುವ ನಿಟ್ಟಿನಲ್ಲಿ ಉದ್ಯೋಗದಾತರಿಗೆ ಶೇ 5ರ ಕಲ್ಯಾಣ ಶುಲ್ಕ ವಿಧಿಸುವ ಗೃಹ ಕಾರ್ಮಿಕರ ಮಸೂದೆ ರೂಪಿಸಲು ಕರ್ನಾಟಕ ಸರ್ಕಾರ ಮುಂದಾಗಿರುವ ಬಗ್ಗೆ ವರದಿಯಾಗಿದೆ. ಹೌದು ಇನ್ಮುಂದೆ ಗೃಹ ಕೆಲಸಗಳ ಕಾರ್ಮಿಕರ ಸಂಘಟನೆ ಮತ್ತು ಅವರ ಸಾಮಾಜಿಕ ಭದ್ರತೆ ನಿಟ್ಟಿನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಹತ್ವದ ಮಸೂದೆ ರೂಪಿಸುವ ಸುಳಿವು ನೀಡಿದೆ. ಮನೆ ಕೆಲಸದವರ ನೇಮಕ ಮಾಡಿದರೆ ಶೇ 5ರ ಕಲ್ಯಾಣ ಶುಲ್ಕ ವಿಧಿಸುವ ಬಗ್ಗೆ ಮಸೂದೆ ರೂಪಿಸಲು ಮುಂದಾಗಿದೆ. ಗೃಹ ಕಾರ್ಮಿಕರಿಗೆ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಯಂತಹ ಪ್ರಮುಖ ಭದ್ರತೆಗಳನ್ನು ಒದಗಿಸುವುದೇ ಗೃಹ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಮಸೂದೆಯ ಪ್ರಮುಖ ಉದ್ದೇಶ. ಮಸೂದೆ ಜಾರಿಗೆ ಬಂದರೆ, ಮನೆಗಳಲ್ಲಿ ಕೆಲಸ ಮಾಡುವವರು, ಸೇವಕಿಯರು, ಅಡುಗೆಯವರು, ಚಾಲಕರು, ದಾದಿಯರು ಮತ್ತು ಇತರರು ಸರ್ಕಾರಕ್ಕೆ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ಮನೆಕೆಲಸಗಾರರನ್ನು ನೇಮಿಸಿಕೊಳ್ಳುವವರು, ಮಸೂದೆಯ ಅಧೀನದಲ್ಲಿ ಸ್ಥಾಪಿಸಲಾಗುವ ಕಲ್ಯಾಣ ನಿಧಿಗೆ…

Read More