Subscribe to Updates
Get the latest creative news from FooBar about art, design and business.
Author: kannadanewsnow05
ಹಣದ ಮಳೆ ಬೀಳುವ ರಾಶಿಚಕ್ರದ ಚಿಹ್ನೆಗಳ ಜ್ಯೋತಿಷ್ಯಕ್ಕೆ ಸಂಬಂಧಿಸಿದಂತೆ, ಒಂದು ಗ್ರಹದ ಬದಲಾವಣೆಯು ಖಂಡಿತವಾಗಿಯೂ ಎಲ್ಲಾ 12 ರಾಶಿಗಳಲ್ಲಿ ವಿವಿಧ ಬದಲಾವಣೆಗಳನ್ನು ತರುತ್ತದೆ, ಇದು ಸಾಮಾನ್ಯವಾಗಿದೆ. ಅದೇ ರೀತಿ 12 ವರ್ಷಗಳ ನಂತರ ಶುಕ್ರ ರಾಹು ಮತ್ತು ಎರಡು ಗ್ರಹಗಳು ಒಟ್ಟಿಗೆ ಸೇರುತ್ತವೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ರಾಹು ಈಗಾಗಲೇ ಮೀನ ರಾಶಿಯಲ್ಲಿದ್ದಾನೆ.…
ಉತ್ತರಕನ್ನಡ : ರಾಜ್ಯದಲ್ಲಿ ಮತ್ತೆ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕೆಸ್ ಹೆಚ್ಚಳವಾಗುತ್ತಿದ್ದೂ, ಹತ್ತು ದಿನಗಳಲ್ಲಿ 21 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಸಿದ್ದಾಪುರ ತಾಲೂಕಿನಲ್ಲಿ ಪ್ರಕರಣಗಳು ಇದೀಗ ಹೆಚ್ಚಾಗುತ್ತಿವೆ. ಒಟ್ಟು 21 ಸೋಂಕಿತರ ಪೈಕಿ ಎಂಟು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಇಬ್ಬರು ಮಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾಖಲಾದರೆ, ಉಳಿದ 6 ಜನರಿಗೆ ಸಿದ್ದಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನುಳಿದ 13 ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪಸರಿಸುತ್ತಿದೆ. ಕೆಲವು ವರ್ಷಗಳಿಂದ ಮಂಗನ ಕಾಯಿಲೆ ಪತ್ತೆ ಆಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಬೇಕಿರುವ ಲಸಿಕೆ ಬಗ್ಗೆಯೂ ಇಲಾಖೆ ಯೋಚನೆ ಮಾಡದೆ ಸುಮ್ಮನಾಗಿತ್ತು. ಹೀಗಾಗಿ ಇದೀಗ ಮಂಗನ ಕಾಯಿಲೆ ರೋಗ ಪತ್ತೆಯಾಗಿದ್ದು, ಇದು ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಪರದಾಡುತ್ತಿದೆ. ಅದರಲ್ಲೂ ಚಳಿಗಾಲ ಪ್ರಾರಂಭವಾಗುತ್ತಿರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿಗರಿಗೆ…
ತುಮಕೂರು : ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊಸೂರಿನಲ್ಲಿ ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊಸೂರಿನ ಮೂರು ಮಕ್ಕಳಾದ ತನುಶ್ರೀ (8) ಭೂಮಿಕ (6) ಯೋಗಿತಾ (4) ಜೊತೆ ವಸಂತ ಕುಮಾರಿ (25) ಎನ್ನುವ ತಾಯಿ ನಾಪತ್ತೆಯಾಗಿದ್ದಾಳೆ. ಜನವರಿ 16ರಂದು ತಾಯಿ ಹಾಗೂ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ.ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸುವವರ ವಶಕ್ಕೆ ಪಡೆದ ಪೊಲೀಸ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿಗೆ ಭೇಟಿ ನೀಡಲಿದ್ದು, ಈ ವೇಳೆ ಡಿಎಸ್ಎಸ್ ಮುಖಂಡರು ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿರುವ ಮಾಹಿತಿ ತಿಳಿದು ಕೂಡಲೇ ಪೊಲೀಸರು ಇದೀಗ ಡಿಎಸ್ಎಸ್ ಮುಖಂಡರನ್ನು ವಶಪಡಿಸಿಕೊಂಡಿದ್ದಾರೆ. ಮುದ್ದೇಬಿಹಾಳ ಠಾಣೆ ಪೊಲೀಸ್ರಿಂದ ಡಿಎಸ್ಎಸ್ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.ನಾಲತವಾಡ ಅಂಬೇಡ್ಕರ್ ಮೂರ್ತಿ ನಿರ್ಮಾಣ ಕಾಮಗಾರಿ ಅಪೂರ್ಣ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿ…
ಮುಂಬೈ : ಮುಂಬೈ ಟ್ರಾಫಿಕ್ ಪೊಲೀಸರಿಗೆ ಪಠ್ಯದ ಮೂಲಕ ಸಂದೇಶದ ಮೇಲೆ ‘ಬಾಂಬ್ ಬೆದರಿಕೆ’ ಬಂದಿದೆ, ಶುಕ್ರವಾರ ಬೆಳಗ್ಗೆ ಮುಂಬೈ ಸಂಚಾರಿ ನಿಯಂತ್ರಣ ಕಚೇರಿಗೆ ಶುಕ್ರವಾರ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದೆ. ಕಂಟ್ರೋಲ್ ರೂಮ್ಗೆ ಅಪರಿಚಿತ ವ್ಯಕ್ತಿಯಿಂದ ಸಂದೇಶ ಬಂದಿದ್ದು, “ಮುಂಬೈನ ಆರು ಸ್ಥಳಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಎಂದು ಉಲ್ಲೇಖಸಲಾಗಿದೆ. ಶುಕ್ರವಾರ ಬೆಳಗ್ಗೆ ಮುಂಬೈ ಸಂಚಾರ ನಿಯಂತ್ರಣ ಕೊಠಡಿಗೆ ಶುಕ್ರವಾರ ಬೆಳಗ್ಗೆ ಈ ಬಾಂಬ್ ಬೆದರಿಕೆ ಬಂದಿತ್ತು. ಕಂಟ್ರೋಲ್ ರೂಮ್ಗೆ ಅಪರಿಚಿತ ವ್ಯಕ್ತಿಯಿಂದ “ಮುಂಬೈನ ಆರು ಸ್ಥಳಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ” ಎಂಬ ಪಠ್ಯ ಸಂದೇಶವನ್ನು ಸ್ವೀಕರಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಸಂದೇಶದ ನಂತರ ಮುಂಬೈ ಪೊಲೀಸರು ಮತ್ತು ಇತರ ಏಜೆನ್ಸಿಗಳು ಅಲರ್ಟ್ ಆಗಿವೆ. ಸಂದೇಶ ಕಳುಹಿಸಿದವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ.ಮಾಹಿತಿ ಪಡೆದ ಮುಂಬೈ ಪೊಲೀಸರು ಸಂದೇಶ ಕಳುಹಿಸುವವರ ಬಗ್ಗೆ ಪತ್ತೆ ಹಚ್ಚಲು ಆರಂಭಿಸಿದ್ದಾರೆ. ಮುಂಬೈ ನಗರದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಫೋನ್ ಅಥವಾ ಸಂದೇಶ ಬಂದಿರುವುದು ಇದೇ…
ಚಿತ್ರದುರ್ಗ : ಇಟ್ಟಿಗೆ ತುಂಬಿದ ಟ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಅಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಜನರಿಗೆ ಗಂಭೀರವಾದಂತ ಗಾಯಗಳಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಘಟನೆ ಸಂಭವಿಸಿದೆ. ಮದುವೆ ಮುಗಿಸಿಕೊಂಡು ಮಾಗಡಿಗೆ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತಂತೆ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವಾಗಿದೆ ಹಣಕಾಸಿನ ವಿಚಾರಕ್ಕೆ ವ್ಯಕ್ತಿಯ ಬರ್ಬರ ಕೊಲೆ ಹಣದ ವಿಷಯಕ್ಕೆ ಸಂಬಂಧಿಸಿದಂತೆ ಶ್ರೀನಿವಾಸ್ (28) ಎನ್ನುವ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹೊಸ್ಕುರು ಎಂಬಲ್ಲಿ ಈ ಕೊಲೆ ನಡೆದಿದೆ. ಲಾಂಗ್ ನಿಂದ ಕೊಚ್ಚಿ ಶ್ರೀನಿವಾಸ್ ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಗೈಯ್ಯಲಾಗಿದೆ.ಬೆಂಗಳೂರು ಉತ್ತರ ತಾಲೂಕಿನ ಹೊಸ್ಕುರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.ಕೊಲೆಗೆ ಈಡಾದ ಶ್ರೀನಿವಾಸ್ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ…
ರಾಯಚೂರು : ಜಿಲ್ಲೆಯ ಸಿರಿವಾರ ಪಟ್ಟಣದಲ್ಲಿ ಕಿಡಿಗೇಡಿಗಳು ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದರು. ಈ ಪ್ರಕರಣ ಸಂಬಂಧ ಸಿರವಾರ ಪಟ್ಟಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನ ಮಾನ್ವಿ ತಾಲೂಕಿನ ಸಿರವಾರ ಪಟ್ಟಣದ ನಿವಾಸಿ ಆಕಾಶ್ (23) ಎಂದು ಹೇಳಲಾಗುತ್ತಿದೆ. ಜನವರಿ 31ರಂದು ಮಾನ್ವಿ ತಾಲೂಕಿನ ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್ನಲ್ಲಿ ಹಾಕಲಾಗಿರುವ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಕಿಡಿಗೇಡಿಗಳು ರಾತ್ರೋರಾತ್ರಿ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದರು. ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡ ಮುಸ್ಲಿಮರು ತೀವ್ರ ಆಕ್ರೋಶ ಹೊರ ಹಾಕಿದ್ದರು. ಅಲ್ಲದೆ ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದ್ದರು. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದರು. ಸಿರವಾರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಎರಡು ವಿಶೇಷ ತಂಡ ರಚಿಸಿದ್ದರು.…
ಬೆಳಗಾವಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಒತ್ತಡ ವಿಚಾರಕ್ಕೆ ಕಾಂಗ್ರೆಸ್ MLC ಪ್ರಕಾಶ್ ಹುಕ್ಕೇರಿ ಸಿಟ್ಟಾಗಿದ್ದು ನಾನು ಏನಾದರೂ ಫುಟ್ಬಾಲ? ಎಂದು ಪ್ರಕಾಶ್ ಹುಕ್ಕೇರಿ ಪ್ರಶ್ನಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ಈ ಹೇಳಿಕೆಯನ್ನು ನೀಡಿದ ಅವರು, ಈ ಹಿಂದೆ ನನ್ನನ್ನು ದೆಹಲಿಗೆ ಹೋಗಿ ಎಂದು ಒಗೆದರು ಎಂದು ಕೆರೂರು ಗ್ರಾಮದಲ್ಲಿ ಕಾಂಗ್ರೆಸ್ ಎಂಎಲ್ಸಿ ಪ್ರಕಾಶ್ ಹುಕ್ಕೇರಿ ಸ್ವಪಕ್ಷದ ವಿರುದ್ಧವೇ ಸಿಟ್ಟಾಗಿರುವ ಘಟನೆ ಜರುಗಿತು. ಈ MP ಚುನಾವಣೆಗೆ ನಿಲ್ಲು ಅಂತಿದಾರೆ. ಮತ್ತೆ ದಿಲ್ಲಿಗೆ ಹೋಗಿ ಬೀಳಬೇಕು ನಾನೇನು ಫುಟ್ಬಾಲ? ಎಂದರೂ. ಸಿಎಂ ನಿಲ್ಲಬೇಕು ಅಂತ ಹೇಳಿದರೆ ಅವರಿಗೆ ಏನಾದರೂ ನಾನು ಬರೆದು ಕೊಟ್ಟಿದ್ದನಾ? ನನ್ನನ್ನು ಏನಾದರೂ ಫುಟ್ಬಾಲ್ ಆಗಿ ಮಾಡಿಕೊಂಡಿದ್ದೀರಾ? ನಾನು ಲೋಕಸಭಾ ರಾಜ್ಯಸಭಾ ಚುನಾವಣೆಗೆ ನಿಲ್ಲುವುದಿಲ್ಲ. ಚಿಕ್ಕೋಡಿ ಅಭ್ಯರ್ಥಿ ಯಾರು ಅಂತ ಹೈಕಮಾಂಡ್ ಹೇಳಬೇಕು. ನನಗೆ ಎಷ್ಟೇ ಒತ್ತಡ ಹೇರಿದರೂ ಕೂಡ ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ನಾನು ಶಿಕ್ಷಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತೇನೆ. ಶಿಕ್ಷಕರ…
ಬೆಂಗಳೂರು : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಚಿನ್ನ ಜಪ್ತಿ ಮಾಡಿಕೊಂಡಿದ್ದು, ಸಿಂಗಾಪುರದಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕರನ್ನು ಈ ವೇಳೆ ಬಂಧಿಸಲಾಗಿದೆ. ಬಂಧಿತನಿಂದ 47.89 ಲಕ್ಷ ಮೌಲ್ಯದ 77 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಟೋಪಿಯಲ್ಲಿ ಚಿನ್ನವನ್ನು ವೇಸ್ಟ್ ರೂಪದಲ್ಲಿ ಆರೋಪಿ ಅಡಗಿಸಿಟ್ಟಿದ್ದ ಎಂದು ಹೇಳಲಾಗುತ್ತಿದ್ದು, ಸಿಂಗಾಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ್ದ. ಆದರೆ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ತಪಾಸಣೆ ವೇಳೆ ಆರೋಪಿ ಹಾಕಿಕೊಂಡಿದ್ದ ಟೋಪಿಯಲ್ಲಿ ಚಿನ್ನ ಪತ್ತೆಯಾಗಿದೆ. ಇದೀಗ ಚಿನ್ನದ ಸಮೇತ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಳೆಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಈ ಪ್ರಕರಣ ನಡೆದಿದ್ದು, ಕೆಐಡಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ವ್ಯಕ್ತಿಯೊಬ್ಬರ ಮೊಬೈಲ್ಗೆ ವರ್ಕ್ ಫ್ರಮ್ ಹೋಂ ಜಾಹೀರಾತು ಸಂದೇಶ ಕಳುಹಿಸಿ ಸೈಬರ್ ವಂಚಕರು ಆತನಿಂದ ರೂ.1.63 ಲಕ್ಷ ಪಡೆದು ವಂಚಿಸಿರುವ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎಜಿಎಸ್ ಲೇಔಟ್ ನಿವಾಸಿ ಅಭಿಜಿತ್ ಕಬಾದ್ ಹಣ ಕಳೆದುಕೊಂಡವರು ಎಂದು ತಿಳಿದುಬಂದಿದೆ. ಇತ್ತೀಚೆಗೆ ಅಭಿಜಿತ್ ಅವರ ಮೊಬೈಲ್ ಫೋನ್ಗೆ ವರ್ಕ್ ಪ್ರಮ್ ಹೋಮ್ ಜಾಹೀರಾತು ಸಂದೇಶ ಬಂದಿದೆ. ಗೂಗಲ್ನಲ್ಲಿ ರಿವ್ಯೂ ಕೊಟ್ಟು ರೂ.150 ಗಳಿಸಬಹುದು ಎಂದು ಆ ಸಂದೇಶದಲ್ಲಿ ತಿಳಿಸಲಾಗಿದೆ. ಅದರಂತೆ ಅಭಿಜಿತ್ ಮೊದಲಿಗೆ ಗೂಗಲ್ ರಿವ್ಯೂ ಕೊಟ್ಟು ರೂ.150 ಪಡೆದುಕೊಂಡಿದ್ದಾರೆ. ದೊಡ್ಡ ಮೊತ್ತ ಪಡೆದು ವಂಚನೆ: ಮಾರನೇ ದಿನ ಸೈಬರ್ ವಂಚಕರು ಟೆಲಿಗ್ರಾಮ್ ಆ್ಯಪ್ನಲ್ಲಿ ಅಭಿಜಿತ್ ಗೆ ಒಂದು ಲಿಂಕ್ ಕಳುಹಿಸಿದ್ದಾರೆ. ಆ ಲಿಂಕ್ ತೆರೆದು ಅಭಿಜಿತ್ ಗೂಗಲ್ ರಿವ್ಯೂ ಕೊಟ್ಟಿದ್ದಾರೆ. ಇದರಿಂದ ಅವರ ಖಾತೆಗೆ ₹150 ಬಂದಿದೆ. ಬಳಿಕ ಆ ಲಿಂಕ್ ಮೂಲಕ ₹1,300 ಪಾವತಿಸಿ, ₹1,950 ಮರಳಿ ಪಡೆದಿದಾರೆ. ಇದೇ ರೀತಿ ₹5 ಸಾವಿರ…
ನವದೆಹಲಿ : ಅಯೋಧ್ಯೆಯಲ್ಲಿ ನಿರ್ಮಿಸಲಾದ ರಾಮಮಂದಿರ ದಲ್ಲಿ ಬಾಲಕ ರಾಮನ ಪ್ರಾಣಪ್ರತಿಷ್ಠೆ ನೆರವೇರಿಸಿದ ಬಳಿಕ ಪ್ರಧಾನಿ ಮೋದಿ ದೆಹಲಿಯಲ್ಲಿ ಘೋಷಿಸಿದ್ದ 1 ಕೋಟಿ ಮನೆಗಳಿಗೆ ಸೋಲಾರ್ ಛಾವಣಿ ಅಳವಡಿಸುವ ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ಗೆ ಬಜೆಟ್ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ. ಈ ಯೋಜನೆಯ ಫಲಾನುಭವಿಗಳಿಗೆ ಪ್ರತಿ ತಿಂಗಳು 300 ಯುನಿಟ್ಗಳಷ್ಟು ಉಚಿತ ವಿದ್ಯುತ್ ನೀಡಲಾಗುವುದು. ಜೊತೆಗೆ, ಅವರು ಉತ್ಪಾದಿಸಿದ ಹೆಚ್ಚುವರಿ ಸೌರವಿದ್ಯುತ್ತನ್ನು ವಿದ್ಯುತ್ ವಿತರಕ ಕಂಪನಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ಬಜೆಟ್ ಭಾಷಣದಲ್ಲಿ ರಾಮಮಂದಿರದಲ್ಲಿ ನಡೆದ ಪ್ರಾಣಪ್ರತಿಷ್ಠೆಯನ್ನು ಉಲ್ಲೇಖಿಸಿದ ಅವರು, ‘ಅಯೋಧೈಯಲ್ಲಿ ನಡೆದ ಐತಿಹಾಸಿಕ ಪ್ರಾಣಪ್ರತಿಷ್ಠೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಯೋಜನೆಯಡಿ ಈ ಕೆಳಕಂಡ ಅನುಕೂಲಗಳನ್ನು ಮಾಡಿಕೊಡಲಾಗುತ್ತಿದೆ’ ಎಂದು ಪ್ರಕಟಿಸಿದರು. ಛಾವಣಿ ಸೌರಶಕೀಕರಣ ಯೋಜನೆಯಡಿ ದೇಶದ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು ಉಚಿತವಾಗಿ ಅವರೇ ಉತ್ಪಾದಿಸಿದ 300 ಯುನಿಟ್ ಸೌರವಿದ್ಯುತ್ ಲಭಿಸಲಿದೆ. 300ಕ್ಕಿಂತ ಹೆಚ್ಚು ಯುನಿಟ್ ಸೌರವಿದ್ಯುತ್ ಉತ್ಪಾದಿಸಿದರೆ ಅದನ್ನು ಅವರು ವಿದ್ಯುತ್…