Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ: 2025 ರಿಂದ ಸಿಎ ಅಂತಿಮ ಪರೀಕ್ಷೆಗಳನ್ನು ವರ್ಷಕ್ಕೆ ಎರಡರ ಬದಲು ಮೂರು ಬಾರಿ ನಡೆಸಲಾಗುವುದು ಎಂದು ಈ ಬಗ್ಗೆ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಹೇಳಿದೆ. ಇದರಿಂದ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶವೂ ಲಭಿಸಲಿದೆ ಎಂದು ಐಸಿಎಐ ಹೇಳಿದೆ. ಕಳೆದ ವರ್ಷ, ಐಸಿಎಐ ಇಂಟರ್ಮೀಡಿಯೇಟ್ ಮತ್ತು ಫೌಂಡೇಶನ್ ಕೋರ್ಸ್ ಪರೀಕ್ಷೆಗಳನ್ನು ವರ್ಷಕ್ಕೆ ಮೂರು ಬಾರಿ ನಡೆಸಲು ನಿರ್ಧರಿಸಿತ್ತು. ಮತ್ತು ಈಗ ಸಿಎ ಫೈನಲ್ ಪರೀಕ್ಷೆಗಳು ಅದನ್ನು ಅನುಸರಿಸುತ್ತವೆ ಎಂದು ಅದು ಹೇಳಿದೆ. ಹೊಸ ತೀರ್ಮಾನದ ಅನ್ವಯ ಪ್ರತೀ ವರ್ಷದ ಜನ ವರಿ, ಮೇ, ಸೆಪ್ಟಂಬರ್ನಲ್ಲಿ ಅಂತಿಮ ಪರೀಕ್ಷೆ ನಡೆಯಲಿದೆ. ಈವರೆಗೆ ಅಂತಿಮ ಪರೀಕ್ಷೆ ವರ್ಷಕ್ಕೆ 2 ಬಾರಿ ನಡೆಯುತ್ತಿತ್ತು. ಜಾಗತಿಕ ಅತ್ಯುತ್ತಮ ಅಭ್ಯಾಸಗಳಿಗೆ ಅನುಗುಣವಾಗಿ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸುವ ಸಲುವಾಗಿ, ಐಸಿಎಐನ 26 ನೇ ಮಂಡಳಿಯು ಸಿಎ ಅಂತಿಮ ಪರೀಕ್ಷೆಯನ್ನು ವರ್ಷಕ್ಕೆ ಮೂರು ಬಾರಿ ನಡೆಸುವ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಪರೀಕ್ಷೆಯನ್ನು ವರ್ಷಕ್ಕೆ ಎರಡು…
ದಾವಣಗೆರೆ : ದಾವಣಗೆರೆ ಜಿಲ್ಲೆಯ ನ್ಯಾಮತಿಯಲ್ಲಿ ಎಸ್ಬಿಎ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ. ದಾವಣಗೆರೆ ಪೊಲೀಸರಿಂದ ಐವರು ಆರೋಪಿಗಳು ಬಂಧನವಾಗಿದ್ದು, ತಮಿಳುನಾಡಿನ ವಿಜಯಕುಮಾರ (32) ಅಜಯ್ ಕುಮಾರ್ (36) ಸ್ಥಳೀಯ ನಿವಾಸಿಗಳಾದ ಮಂಜುನಾಥ (40) ಅಭಿಷೇಕ್ (28) ಚಂದ್ರಶೇಖರ್ (34) ಬಂಧನ ವಾಗಿದ್ದು, ಬಂಧಿತರಿಂದ 220 ಗ್ರಾಮ ಚಿನ್ನಾಭರಣ ಜಪ್ತಿ ಮಾಡಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ತಮಿಳುನಾಡಿನ ಪರಮಾನಂದ ಎಂಬಾತನಿಗಾಗಿ ಹುಡುಕಾಟ ನಡೆಸಲಾಗಿದೆ. ಮೂಲತ: ತಮಿಳುನಾಡಿನವರಾದ ವಿಜಯ್ ಕುಮಾರ್, ಅಜಯ್ ಕುಮಾರ್ ಮತ್ತು ಪರಮಾನಂದ ನ್ಯಾಮತಿಯಲ್ಲಿಯೇ ಕಳೆದ ಅನೇಕ ವರ್ಷಗಳಿಂದ ಬೇಕರಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ಉಳಿದ ಮೂವರ ಪೈಕಿ ಅಭಿಷೇಕ, ಚಂದ್ರು, ಹೊನ್ನಾಳಿಯವರು. ಮಂಜುನಾಥ ನ್ಯಾಮತಿ ನಿವಾಸಿಯಾಗಿದ್ದನು. ದರೋಡೆ ಮಾಡಿದ್ದು ಹೇಗೆ? ಬ್ಯಾಂಕಿನ ಹಿಂದೆ ಕಾಡು ರೀತಿಯಲ್ಲಿ ಮರ ಗಿಡಗಳು ಬೆಳೆದಿರುವುದು ದರೋಡೆಗೆ ಅನುಕೂಲವಾಗಿದೆ. ದರೋಡೆಗಾಗಿ ಸುಮಾರು 4 ಕಿ.ಮೀ. ದೂರ ನಡೆದುಕೊಂಡೇ ಬಂದಿದ್ದ ಆರೋಪಿಗಳು ಬ್ಯಾಂಕಿನ ಮುಖ್ಯದ್ವಾರವನ್ನು ಒಡೆದು…
ಬೆಂಗಳೂರು : ರಾಜ್ಯದಲ್ಲಿ ಹನಿಟ್ರ್ಯಾಪ್ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಈ ಕುರಿತು ಸದನದಲ್ಲೇ ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರಸ್ತಾಪಿಸಿದ್ದರು. ಇನ್ನು ಇದೆ ವಿಚಾರವಾಗಿ ಇದೀಗ ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ CID ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ. ಹೌದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಹನಿಟ್ರ್ಯಾಪ್ ಪ್ರಕರಣದ ವಿಚಾರಣೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.ಈಗಾಗಲೇ ಸಿಐಡಿ ವಿಚಾರಣೆ ಆರಂಭಿ ಸಿದ್ದು, ಈ ಪ್ರಕರಣ ದಲ್ಲಿ ವಿವರಣೆ ಪಡೆಯುವ ಸಂಬಂಧ ಸಚಿವರಿಗೆ ನೋಟಿಸ್ ನೀಡಲು ಮುಂದಾ ಗಿದೆ ಎಂದು ತಿಳಿದು ಬಂದಿದೆ. 2 ದಿನ ಹಿಂದೆ ರಾಜಣ್ಣ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾಗಿ ತಮ್ಮ ಮೇಲೆ ಹನಿ ಟ್ರ್ಯಾಪ್ಗೆ ಯತ್ನಿಸಿದವರ ವಿರುದ್ಧ ಕ್ರಮ ಜರುಗಿಸು ವಂತೆ ಮನವಿ ಸಲ್ಲಿಸಿದ್ದರು. ಈ ಪತ್ರವನ್ನು ಸಿಐಡಿಗೆ ಕಳುಹಿಸಿದ ಸರ್ಕಾರವು, ಹನಿಟ್ರ್ಯಾಪ್ ಕುರಿತು ವಿಚಾರಣೆ ನಡೆಸಿ ತ್ವರಿತವಾಗಿ ವರದಿ ನೀಡುವಂತೆ ಸೂಚಿಸಿದೆ. ಈ ಸೂಚನೆ ಹಿನ್ನೆಲೆಯಲ್ಲಿ ಸಿಐಡಿ ಡಿಐಜಿ ವಂಶಿಕೃಷ್ಣ ನೇತೃತ್ವದ ಎಸ್ಪಿ…
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಬಜೆಟ್ ಅನ್ನು ಮಾರ್ಚ್.29, 2025ರಂದು ಮಂಡಿಸಲಾಗುತ್ತಿದೆ. ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್ ಮಾರ್ಚ್ 29, ಶನಿವಾರ ಬೆಳಗ್ಗೆ 11ಕ್ಕೆ ಮಂಡನೆಯಾಗಲಿದೆ. ಪಾಲಿಕೆಯ ಆಡಳಿತಗಾರ ಎಸ್.ಆರ್.ಉಮಾಶಂಕರ್ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತಿಯಲ್ಲಿ ಬಜೆಟ್ ಕಾರ್ಯಕ್ರಮ ನಡೆಯಲಿದ್ದು, ಹಲವು ಗಣ್ಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ.ಕೆ ಹರೀಶ್ಕುಮಾರ್ ಆಯವ್ಯಯ ಪ್ರಸ್ತುತಪಡಿಸಲಿದ್ದಾರೆ. ಬಜೆಟ್ ಪ್ರಸ್ತುತಿಯು ಯೂಟ್ಯೂಬ್ನಲ್ಲಿ ಲೈವ್ ಬರಲಿದ್ದು, https://youtube.com/live/eydr2vyROL8… ಲಿಂಕ್ ಮೂಲಕ ವೀಕ್ಷಿಸಬಹುದಾಗಿದೆ ಎಂದು ಪಾಲಿಕೆ ತಿಳಿಸಿದೆ. https://twitter.com/KarnatakaVarthe/status/1905186730459988238?t=joWqXzV08NCA39f4xAN9_w&s=19
ಬೆಂಗಳೂರು : ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂ ಹೆಚ್ಚಿಸಿ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆಯಿತು. ಇದೀಗ ಹಾಲಿನ ದರ ಹೆಚ್ಚಾಳವಾದ ಬೆನ್ನಲ್ಲೆ, ಬೆಂಗಳೂರು ಹೊಟೇಲ್ ಮಾಲೀಕರ ಸಂಘವು ಕಾಫಿ ಮತ್ತು ಟೀ ದರವನ್ನು 2-3 ರೂಪಾಯಿಗಳಷ್ಟು ಹೆಚ್ಚಿಸಲು ನಿರ್ಧರಿಸಿದೆ. ಹೌದು ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸರ್ಕಾರ ಅನುಮೋದನೆ ನೀಡಿರುವ ಹಿನ್ನೆಲೆ, ಕಾಫಿ ಮತ್ತು ಟೀಯ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆ ಎದುರಾಗಿದೆ. ಈ ಬಗ್ಗೆ ಬೆಂಗಳೂರು ಹೊಟೇಲ್ ಮಾಲೀಕರ ಸಂಘವು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ್ದು, ಒಂದು ಕಪ್ ಕಾಫಿ ಅಥವಾ ಟೀಯ ದರವನ್ನು 2-3 ರೂಪಾಯಿಗಳಷ್ಟು ಹೆಚ್ಚಿಸುವ ತೀರ್ಮಾನಕ್ಕೆ ಬಂದಿದೆ. ನಂದಿನಿ ಹಾಲಿನ ದರ ಹೆಚ್ಚಳ ಮಾಡಿ ಆ ದುಡ್ಡನ್ನು ರೈತರಿಗೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ದರ ಏರಿಕೆ ಕುರಿತು ಸ್ಪಷ್ಟನೆ ನೀಡಿದೆ. ಆದರೆ ಜನ ಸಾಮಾನ್ಯರಿಗೆ ಬೆಲೆ ಏರಿಕೆ ಹೊಡೆತ ಬಿದ್ದಿದ್ದು, ಅಲ್ಲದೇ ಇದೀಗ…
BIG NEWS : ರಾಜ್ಯದ ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಸೇವೆಯಿಂದ ಬಿಡುಗಡೆ ಮಾಡುವ ಕುರಿತು, ಶಿಕ್ಷಣ ಇಲಾಖೆ ಮಹತ್ವದ ಆದೇಶ
ಬೆಂಗಳೂರು : ರಾಜ್ಯದ ಶಾಲೆಯ ಅಡುಗೆ ಸಿಬ್ಬಂದಿ ಗಳನ್ನು ಸೇವೆಯಿಂದ ಬಿಡುಗಡೆ ಮಾಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.ಮಧ್ಯಾಹ್ನ ಉಪಾಹಾರ ಯೋಜನೆಯ ಅಡುಗೆ ಸಿಬ್ಬಂದಿಯನ್ನು ವಾರ್ಷಿಕ ಹತ್ತು ತಿಂಗಳ ತಾತ್ಕಾಲಿಕ ಸೇವೆಯನ್ನು ಪೊರೈಸಿದ ನಂತರ 31ನೇ-ಮಾರ್ಚ ಅಂತ್ಯಕ್ಕೆ ಸೇವೆಯಿಂದ ಕೈಬಿಡುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25 ನೇ ಸಾಲಿನ ಪಿಎಂಪೋಷಣ್-ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮದಡಿಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಜೂನ್-2024 ಮಾಹೆಯಿಂದ ಮಾರ್ಚ್-2025 ರ ಮಾಹೆಯವರೆಗೆ ಒಟ್ಟು 10 ತಿಂಗಳ ಅವಧಿಗೆ ಯೋಜನೆಯನ್ನು ನಡೆಸಲು ಅನುಮೋದನೆ ನೀಡಿರುತ್ತದೆ. ಸದರಿ ಅವಧಿಗೆ ಸರ್ಕಾರಿ/ಅನುದಾನಿತ ಪ್ರಾಥಮಿಕ/ಪ್ರೌಢ ಶಾಲೆಗಳಲ್ಲಿ ಅಡುಗೆ ತಯಾರಿಸಿ ವಿತರಿಸುವ ಕೆಲಸಕ್ಕೆ ತಾತ್ಕಾಲಿಕವಾಗಿ ಅಡುಗೆ ಸಿಬ್ಬಂದಿಯ ಸೇವೆಯನ್ನು ಪಡೆದುಕೊಂಡಿದ್ದು, ಈ ಅವಧಿಗೆ ಮಾಸಿಕ ಗೌರವ ಸಂಭಾವನೆಯನ್ನು ವಿತರಿಸಲಾಗಿರುತ್ತದೆ. 2024-25ನೇ ಸಾಲಿನಲ್ಲಿ ಯೋಜನೆಯ ಅವಧಿ 31ನೇ ಮಾರ್ಚ್ ಅಂತ್ಯಕ್ಕೆ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ, ಯೋಜನೆಯಡಿ ತಾತ್ಕಾಲಿಕವಾಗಿ ಸೇವೆ ನಿರ್ವಹಿಸಿದ ಅಡುಗೆ ಸಿಬ್ಬಂದಿಯನ್ನು…
ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 2024-25ನೇ ಸಾಲಿನಲ್ಲಿ ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳ ವರ್ಗಾವಣೆ ಪ್ರಸ್ತಾವನೆಗಳನ್ನು ಸ್ವೀಕರಿಸಿ ಅನುಮೋದಿಸುವ ಕುರಿತಂತೆ ಆದೇಶ ಹೊರಡಿಸಿದೆ. ಪ್ರತಿ ವರ್ಷದಂತೆ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳನ್ನು ಅದೇ ಆಡಳಿತ ಮಂಡಳಿಯಿಂದ ನಡೆಯುತ್ತಿರುವಂತಹ ಮತ್ತೊಂದು ಅನುದಾನಿತ ಶಾಲೆಗೆ ಅಥವಾ ಒಂದು ಆಡಳಿತ ಮಂಡಳಿಯ ಶಾಲೆಯಿಂದ ಮತ್ತೊಂದು ಆಡಳಿತ ಮಂಡಳಿಯ ಶಾಲೆಯಲ್ಲಿನ ಖಾಲಿ ಹುದ್ದೆಗಳಿಗೆ ಅನುದಾನಿತ ಶಿಕ್ಷಕರನ್ನು ಕೋರಿಕೆ/ಪರಸ್ಪರ ವರ್ಗಾಯಿಸಲು ಕೋರಿ ಆಡಳಿತ ಮಂಡಳಿಗಳು ಪ್ರಸ್ತಾವನೆಯನ್ನು ಸಲ್ಲಿಸಲು ಕರ್ನಾಟಕ ಶಿಕ್ಷಣ ಕಾಯಿದೆ-1983ರಡಿಯಲ್ಲಿ ರಚಿಸಲಾಗಿರುವ ನಿಯಮಗಳು-1999. ಕಲಂ-12ರಲ್ಲಿ ಅವಕಾಶ ಕಲ್ಪಿಸಲಾಗಿದೆ. 2024-25ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಅನುದಾನಿತ ಕಾಲಾ ಆಡಳಿತ ಮಂಡಳಿಗಳು ತಮ್ಮ ಅಧೀನದಲ್ಲಿ ನಡೆಯುತ್ತಿರುವ ಶಾಲೆಗಳಲ್ಲಿನ ಶಿಕ್ಷಕರುಗಳ ವರ್ಗಾವಣೆ ಪ್ರಸ್ತಾವನೆಗಳನ್ನು ಸಲ್ಲಿಸಲು ಹಾಗೂ ಪ್ರಕ್ರಿಯೆ ಕೈಗೊಳ್ಳಲು ಕೆಳಕಂಡಂತೆ…
ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಲಾರಿ ಹರಿದು ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ನಗರಸಭೆ ಎದುರು ಇಂದು ಸಂಜೆ ನಡೆದಿದೆ. ಬೆಂಗಳೂರಿನಲ್ಲಿ ವಾಸವಾಗಿರುವ, ಮೂಲತಃ ತಾಲ್ಲೂಕಿನ ಬಿಳಿದೇಗಲು ಗ್ರಾಮದ ಬಿ.ಸಿ. ಚನ್ನಕೇಶವ ಅವರ ಪುತ್ರ ಲೇಖನ್ಗೌಡ (11) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.ಬಾಲಕ ಕಾರ್ಯನಿಮಿತ್ತ ತನ್ನ ತಾತ ಕುಳ್ಳೇಗೌಡನ ಜೊತೆ ಮಂಡ್ಯ ನಗರಕ್ಕೆ ಬೈಕ್ ಮೇಲೆ ಬಂದಿದ್ದ. ಕೆಲಸ ಮುಗಿಸಿಕೊಂಡು ವಾಪಾಸ್ ತೆರಳುವಾಗ ಅಕ್ಕಿ ತುಂಬಿದ ಲಾರಿ ನಗರಸಭೆ ಎದುರು ಹಿಂಬದಿಯಿಂದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸಂಚಾರ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಸಿಬ್ಬಂದಿ ಲಾರಿಯನ್ನು ವಶಕ್ಕೆ ಪಡೆದು, ಚಾಲಕನನ್ನು ಬಂಧಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಕುಳ್ಳೇಗೌಡ ಅವರನ್ನು ಮಿಮ್ಸ್ಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಳ್ಳಾರಿ : ಮೂವರು ಬಾಲಕರು ಕಾಲುವೆಯಲ್ಲಿ ಸ್ನಾನಕ್ಕೆಂದುತೆರಳಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಓರ್ವ ಬಾಲಕ ಕೊಚ್ಚಿ ಹೋಗಿದ್ದು ಇಬ್ಬರು ಬಾಲಕರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಶ್ರೀನಿವಾಸ ಕ್ಯಾಂಪ್ ನಲ್ಲಿ ನಡೆದಿದೆ. ಹೌದು ಕಾಲುವೆಯಲ್ಲಿ ಸ್ನಾನಕ್ಕೆ ಎಂದು ತೆರಳಿದ್ದ ಬಾಲಕರಾದ ವಿಕ್ರಂ, ಶಂಭುಲಿಂಗ, ಮತ್ತು ದೀಪು ಕಾಲುವೆಗೆ ಇಳಿದಿದ್ದಾರೆ. ಮೂವರು ಬಾಲಕರು ಕಾಲು ಜಾರಿ ಕಾಲುವೆಗೆ ಬಿದ್ದಿದ್ದಾರೆ. ನೀರಿನ ರಭಸಕ್ಕೆ ಕಾಲುವೆಯಲ್ಲಿ 14 ವರ್ಷದ ವಿಕ್ರಂ ಕೊಚ್ಚಿ ಹೋಗಿದ್ದಾನೆ. ಶಂಭುಲಿಂಗ ಮತ್ತು ದೀಪು ಇಬ್ಬರನ್ನು ಸ್ಥಳೀಯರು ಕೂಡಲೇ ರಕ್ಷಣೆ ಮಾಡಿದ್ದಾರೆ.ಇನ್ನು ವಿಕ್ರಮಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ನಟ ದರ್ಶನ್ ಗೆ ಬುದ್ಧಿ ಬಂದ್ರು ಫ್ಯಾನ್ಸ್ ಗೆ ಬರಲಿಲ್ಲ : ಥಿಯೇಟರ್ ಬಾಗಿಲು, ಕಿಟಕಿ ಒಡೆದು ಪುಂಡಾಟ ಮೆರೆದ ಅಭಿಮಾನಿಗಳು
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನವರು ಇದೀಗ ಸಿನಿಮಾದಲ್ಲಿ ಬಿಜಿಯಾಗಿದ್ದಾರೆ. ಆದರೆ ಅವರ ಅಭಿಮಾನಿಗಳ ಪುಂಡಾಟ ಮಾತ್ರ ಮುಂದುವರೆದಿದ್ದು, ಇದೀಗ ಬೆಂಗಳೂರಿನ ಪ್ರಸನ್ನ ಥಿಯೇಟರ್ ನಲ್ಲಿ ವಾಮನ ಚಲನಚಿತ್ರದ ಟ್ರೈಲರ್ ಲಾಂಚಿಂಗ್ ವೇಳೆ ಗಲಾಟೆ ನಡೆಸಿ ಥಿಯೇಟರ್ ನ ಬಾಗಿಲು, ಕಿಟಕಿ, ಗಾಜು ಒಡೆದು ಗಲಾಟೆ ಮಾಡಿದ್ದಾರೆ. ಹೌದು ದರ್ಶನ್ ಅಭಿಮಾನಿಗಳಿಂದ ಹುಚ್ಚಾಟ ನಡೆದಿದ್ದು, ವಾಮನ ಚಿತ್ರದ ಟ್ರೈಲರ್ ಲಾಂಚ್ ಇವೆಂಟ್ ನಲ್ಲಿ ದರ್ಶನ್ ಅಭಿಮಾನಿಗಳು ಹುಚ್ಚಾಟ ಮೆರೆದಿದ್ದಾರೆ. ಇಂದು ಪ್ರಸನ್ನ ಚಿತ್ರಮಂದಿರದಲ್ಲಿ ಟ್ರೈಲರ್ ಲಾಂಚ್ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಚಿತ್ರಮಂದಿರದ ಬಾಗಿಲು, ಕಿಟಕಿ ಕುರ್ಚಿಗಳನ್ನು ಫ್ಯಾನ್ಸ್ ಹೊಡೆದು ಹಾಕಿದ್ದಾರೆ ಟ್ರೈಲರ್ ಲಾಂಚ್ ಗೆ ಬಂದಿದ್ದ ದರ್ಶನ್ ಅಭಿಮಾನಿಗಳು ಪುಂಡಾಟ ನಡೆಸಿದ್ದಾರೆ. ಪ್ರಸನ್ನ ಥಿಯೇಟರ್ ನ ಸೆಕೆಂಡ್ ಕ್ಲಾಸ್ನಲ್ಲಿರುವ 80 ಸೀಟ್ ಹಾಗೂ ಬಾಲ್ಕನಿಯಲ್ಲಿದ್ದ 10 ಸೀಟ್ಗಳನ್ನು ದರ್ಶನ್ ಅಭಿಮಾನಿಗಳು ಮುರಿದಿದ್ದಾರೆ. ದರ್ಶನ್ ಫ್ಯಾನ್ಸ್ ನಡೆಗೆ ಪ್ರಸನ್ನ ಥಿಯೇಟರ್ ಸಿಬ್ಬಂದಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಸನ್ನ…














