Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬಿಗ್ ಬಾಸ್ ಹತ್ತರ ಸೀಸನ್ ನಲ್ಲಿ ಕಾರ್ತಿಕ್ ಮಹೇಶ್ ಅವರು ವಿನ್ನರಾಗಿ ಹೊರಹಮ್ಮಿದ್ದು, ಅದೇ ರೀತಿಯಾಗಿ ಮೊದಲ ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಅವರು ಹೊರ ಹೊಮ್ಮಿದ್ದಾರೆ. ಇದರ ಬೆನ್ನಲ್ಲೇ ಡ್ರೋನ್ ಪ್ರತಾಪಗೆ ಒಂದಾದರೋಂದ ಮೇಲಂತೆ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಹೌದು ಬಿಗ್ ಬಾಸ್ ಮೊದಲನೇ ರನ್ನರ್ ಅಪ್ ಆದ ಬೆನ್ನಲ್ಲೇ ಕಲರ್ಸ್ ಕನ್ನಡ ವಾಹಿನಿಯು ಡ್ರೋನ್ ಪ್ರತಾಪ್ ಅವರಿಗೆ ಮತ್ತೊಂದು ಬಿಗ್ ಆಫರ್ ನೀಡಿದೆ. ವಾಹಿನಿಯ ಅತ್ಯಂತ ಜನಪ್ರಿಯ ಶೋ ಗಿಚ್ಚಿಗಿಲಿಗಿಲಿ ಕಾರ್ಯಕ್ರಮದಲ್ಲಿ ಡ್ರೋನ್ ಪ್ರತಾಪ್ ಕಂಟೆಸ್ಟೆಂಟ್ ಆಗಿ ಆಯ್ಕೆಯಾಗಿದ್ದಾರೆ. ಇಂದಿನಿಂದ ರಿಯಾಲಿಟಿ ಶೋದ ಚಿತ್ರೀಕರಣ ಕೂಡ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಡ್ರೋನ್ ಪ್ರತಾಪ್ ಮಾತ್ರವಲ್ಲ, ತುಕಾಲಿ ಸಂತೋಷ್, ಮೈಕಲ್ ಮತ್ತು ಇಶಾನಿ ಕೂಡ ಈ ಬಾರಿ ಗಿಚ್ಚಿಗಿಲಿಗಿಲಿಯಲ್ಲಿ ಪ್ರೇಕ್ಷಕರನ್ನು ನಕ್ಕು ನಗಿಸಲಿದ್ದಾರೆ. ಮೂವರು ಕೂಡ ಇಂದಿನಿಂದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಶ್ರುತಿ, ಕೋಮಲ್, ಸಾಧು ಕೋಕಿಲಾ ನಿರ್ಣಾಕರಾಗಿದ್ದಾರೆ. ಇದೆಲ್ಲದರ ನಡುವೆ ಡ್ರೋನ್ ಪ್ರತಾಪ್ ಗೆ ಸಂಕಷ್ಟ…
ದಾವಣಗೆರೆ : ಗ್ರಾಮ ದೇವತೆಯ ಜಾತ್ರೆಯ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಜಾತ್ರೆಯ ಆಚರಣೆ ಮಾಡುತ್ತಿದ್ದಾಗ ಗಂಡನೊಬ್ಬ ಕಂಠಪೂರ್ತಿ ಕುಡಿದು ಬಂದು ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಹೆಂಡತಿಯ ತಲೆ ಹಾಗೂ ಕಿವಿಯ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದು, ಕಿವಿಯಲ್ಲಿ ರಸ್ತಸ್ರಾವ ಉಂಟಾಗಿ ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲ್ಲೂಕಿನ ಶಿರಮಗೊಂಡನಹಳ್ಳಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಬೇಡಿ ಎಂದು ಹಿರಿಯರು ಹೇಳುತ್ತಾರೆ. ಆದರೆ, ಇಲ್ಲೊಬ್ಬ ಕುಡುಕ ಗಂಡ ತನ್ನ ಗ್ರಾಮದೇವತೆಯ ಜಾತ್ರೆಯ ವೇಳೆಮದ್ಯವ್ಯಸನಿ ಗಂಡ ಕಂಠಪೂರ್ತಿ ಕುಡಿದು ಬಂದು ಮನೆಯಲ್ಲಿದ್ದ ಹೆಂಡ್ತಿಯನ್ನು ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಅರ್ಪಿತಾ (24) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದಾಳೆ. ಹನಮಂತ (28) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.ಕಳೆದ ಐದು ವರ್ಷಗಳ ಬಳಿಕ ಬಂದ ಗ್ರಾಮದೇವತೆ ಹಬ್ಬಕ್ಕೆ ಎಲ್ಲ ಮನೆಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇನ್ನು ಎಲ್ಲ ಮನೆಗಳಲ್ಲಿಯೂ ಮಾಂಸಾಹಾರದ ಊಟವನ್ನೂ ಮಾಡಲಾಗಿರುತ್ತದೆ. ಜಾತ್ರೆ ಹಿನ್ನೆಲೆ ಕಂಠಪೂರ್ತಿ ಮದ್ಯಪಾನ ಮಾಡಿದ್ದ ಹನುಮಂತ, ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ…
ಶಿವಮೊಗ್ಗ : ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕೊರತೆಗಳನ್ನು ನೀಗಿಸಲು ಹೆಚ್ಚುವರಿಯಾಗಿ ಶಿಕ್ಷಕರ ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತುಂಬಲು ಸಿಎಂ ಬಳಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ದಿನಾಚರಣೆ ಹಾಗೂ ₹2.30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸಭಾಂಗಣ ಮತ್ತು ನೂತನ ಆಡಳಿತ ಮಂಡಳಿ ಕಚೇರಿ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.43 ಸಾವಿರ ಶಿಕ್ಷಕರ ಕೊರತೆ ಇರುವುದನ್ನು ಗಮನಿಸಿ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ. 32 ಸಾವಿರ ಶಿಕ್ಷಕರ ವರ್ಗಾವಣೆ ಮಾಡಿ ಯಶಸ್ಸು ಕಂಡಿದ್ದೇವೆ ಎಂದರು. ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ಪುಣ್ಯದ ಫಲ. ಈ ಅವಕಾಶವನ್ನು ಯಶಸ್ವಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ.ಶಿಕ್ಷಣ ಕ್ಷೇತ್ರದ ಅನುಭವವಿಲ್ಲದ ನನಗೆ ಮುಖ್ಯಮಂತ್ರಿ ಅವರು ನೀಡಿದ ಶಿಕ್ಷಣ ಸಚಿವ ಸ್ಥಾನವನ್ನು…
ಬೆಂಗಳೂರು : ರೌಡಿಶೀಟರ್ ಗಳ ಗ್ಯಾಂಗ್ ಕಟ್ಟಿಕೊಂಡು ದೊಡ್ಡ ದೊಡ್ಡ ಬಿಲ್ಡರ್ ಹಾಗೂ ದೊಡ್ಡ ದೊಡ್ಡ ವ್ಯಕ್ತಿಗಳ ಬಳಿ ಹೆದರಿಸಿ ಹಣವಸೂಲಿ ಮಾಡುತ್ತಿದ್ದ ನಕಲಿ ಆರ್ಟಿಐ ಕಾರ್ಯಕರ್ತರನ್ನು ಇದೀಗ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜೈಹಿಂದ್ ಸಂಘಟನೆ ಮುಖ್ಯಸ್ಥ ಎಂದು ಹೇಳಿಕೊಳ್ತಿದ್ದ ನಕಲಿ RTI ಕಾರ್ಯಕರ್ತ ದೀಪಕ್ ಗೌಡ. ಇನ್ನು ರಕ್ಷಿತ್ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು ಈ ಹಿಂದೆ RTI ಕಾರ್ಯಕರ್ತ ವೆಂಕಟೇಶ್ ಎಂಬುವರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದವನು. ಇಂತಹ ರೌಡಿ ಪಟಾಲಂ ಕಟ್ಟಿಕೊಂಡು ನಗರದ ಅನೇಕ ಬಿಲ್ಡರ್ಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುವ ಕಾಯಕ ಮಾಡಿಕೊಂಡಿದ್ದ ದೀಪಕ್ ಗೌಡ. ಬಿಲ್ಡಿಂಗ್ ಸರಿ ಇಲ್ಲ, ರೂಲ್ಸ್ ಪ್ರಕಾರ ಕಟ್ಟಿಲ್ಲ, ಇದನ್ನೆಲ್ಲ ಬಹಿರಂಗ ಮಾಡ್ತೀವಿ ಅಂತ ಬೆದರಿಸಿ ಬಿಲ್ಡರ್ ಗಳಿಂದ ಹಣ ಬೇಡಿಕೆ ಇಡುತ್ತಿದ್ದ ಎನ್ನಲಾಗುತ್ತಿದೆ. ಅದೇ ರೀತಿ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಬಿಂದು ವೆಂಚರ್ಸ್ ಮಾಲೀಕರಿಗೆ ಬೆದರಿಸಿ 80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಗ್ಯಾಂಗ್. ಈ…
ದಾವಣಗೆರೆ : ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದ ಮನೆಯೊಂದರಲ್ಲಿ ದೇವರ ಮುಂದೆ ಹಚ್ಚಿಟ್ಟಿದ್ದ ದೀಪ ಇಡೀ ಮನೆಯನ್ನೇ ಸುಟ್ಟು ಹಾಕಿರುವಂತ ಘಟನೆ ನಡೆದಿದೆ. ನಿನ್ನೆ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ತಗುಲಿ ಮನೆಯಲ್ಲಿದ್ದ ವಸ್ತು, ಧಾನ್ಯ, ಹಣ ಭಸ್ಮವಾಗಿದೆ. ಬಡಪ್ಪ ಎಂಬುವವರು ಮನೆ ಬಾಗಿಲು ಹಾಕಿಕೊಂಡು ತಮ್ಮ ಕುಟುಂಬಸ್ಥರೊಂದಿಗೆ ಕಾರ್ಯಕ್ರಮಕ್ಕೆ ಹೋಗಿದ್ದರು. ಈ ವೇಳೆ ಮನೆಯಲ್ಲಿದ್ದ ದೀಪದಿಂದ ಆಕಸ್ಮಿಕವಾಗಿ ಬೆಂಕಿ ಹಚ್ಚಿಕೊಂಡಿದೆ. ಉರಿಯುತ್ತಿದ್ದ ದೀಪದ ಜ್ವಾಲೆ ಬಟ್ಟೆಗೆ ಹತ್ತಿಕೊಂಡು ಇಡೀ ಮನೆ ಹೊತ್ತಿ ಉರಿದಿದೆ. ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ಹಣ, ಚಿನ್ನಾಭರಣ, ಬಟ್ಟೆ, ದಾಖಲೆಗಳು ಬೆಂಕಿಗೆ ಅಹುತಿಯಾಗಿದೆ. ಘಟನಾ ಸ್ಥಳಕ್ಕೆ ಜಗಳೂರು ತಾಲೂಕು ದಂಡಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದಿಂದ ಆದ ನಷ್ಟಕ್ಕೆ ಪರಿಹಾರ ನೀಡಲು ಬಡಪ್ಪ ಅವರು ಮನವಿ ಮಾಡಿದ್ದಾರೆ. ಸದ್ಯ ತಾಲೂಕು ದಂಡಧಿಕಾರಿಗಳು ಪರಿಸರ ವಿಕೋಪ ನಿಧಿಯಿಂದ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ವಾರಣಾಸಿ: ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಪೂಜೆ ನಡೆಸಲು ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಆಚಾರ್ಯ ವೇದವ್ಯಾಸ ಪೀಠದ ದೇವಸ್ಥಾನದ ಪ್ರಧಾನ ಅರ್ಚಕ ಶೈಲೇಂದ್ರ ಕುಮಾರ್ ಪಾಠಕ್ ವ್ಯಾಸ್ ಅವರು ಪ್ರಕರಣದ ಫಿರ್ಯಾದಿಯಾಗಿದ್ದಾರೆ. ಅವರ ಕುಟುಂಬ ಮತ್ತು ಎಲ್ಲಾ ಸನಾತನಿಗಳು ಸಂತೋಷದ ಕ್ಷಣವಾಗಿತ್ತು. “ನಮ್ಮ ಪೂರ್ವಜರು ಶತಮಾನಗಳಿಂದ ‘ಪೂಜೆ’ ಸಲ್ಲಿಸಿದ ದಕ್ಷಿಣ ನೆಲಮಾಳಿಗೆಯಲ್ಲಿ ಪೂಜೆಯನ್ನು ಅನುಮತಿಸುವ ನ್ಯಾಯಾಲಯದ ಆದೇಶವು ನಮ್ಮ ಕುಟುಂಬಕ್ಕೆ ಮತ್ತು ಎಲ್ಲಾ ಸನಾತನಿಗೆ ಅತ್ಯಂತ ಆಹ್ಲಾದಕರ ಕ್ಷಣವಾಗಿದೆ” ಎಂದು ಶೃಂಗಾರ್ ಗೌರಿ ಮತ್ತು ಇತರ ಗೋಚರ ಮತ್ತು ಅದೃಶ್ಯ ದೇವತೆಗಳ ಆರಾಧನೆಯನ್ನು ಕೋರಿದ ವ್ಯಾಸ ಹೇಳಿದರು. ಅವರು ತಮ್ಮ ತಾಯಿಯ ಅಜ್ಜ ಸೋಮನಾಥ ವ್ಯಾಸರೊಂದಿಗೆ ದಕ್ಷಿಣದ ನೆಲಮಾಳಿಗೆಗೆ ಭೇಟಿ ನೀಡುತ್ತಿದ್ದ ದಿನಗಳನ್ನು ಅವರು ಅಲ್ಲಿ ಧಾರ್ಮಿಕ ವಿಧಿಗಳನ್ನು ನಡೆಸುತ್ತಿದ್ದರು ಎಂದು ನೆನಪಿಸಿಕೊಂಡರು. ದಿವಂಗತ ಸೋಮನಾಥ್ ವ್ಯಾಸ್ ಅವರು ಮೂಲ ದಾವೆ ನಂ. 610/1991 ದೇವಸ್ಥಾನದ ಭೂಮಿಯಿಂದ ಮಸೀದಿಯನ್ನು ತೆಗೆದುಹಾಕಲು ಕೋರಿ. 1880 ರಿಂದ ಅವರ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಅಡುಗೆಯಲ್ಲಿ ಹುಳು ಪತ್ತೆಯಾಗಿರುವ ಘಟನೆ, ಮಾಸುವ ಮುನ್ನವೇ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಜಾಜೂರಾಯನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಆಹಾರ ಪದಾರ್ಥಗಳಲ್ಲಿ ಹುಳು ಪತ್ತೆಯಾಗಿದ್ದು ಇದರಿಂದ ವಿದ್ಯಾರ್ಥಿಗಳು ತೀವೃ ಆತಂಕಕ್ಕೀಡಾದ ಘಟನೆ ನಡೆದಿದೆ. ತಾಲೂಕು ಕಸಬಾ ಹೋಬಳಿ ವ್ಯಾಪ್ತಿಯ ಜಾಜೂರಾಯನಹಳ್ಳಿ ಗಡಿ ಪ್ರದೇಶದಲ್ಲಿದ್ದು ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 200ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ಬಿಸಿಯೂಟದ ಅಡುಗೆಯ ಹಳೆ ಗೋಧಿ, ಬೇಳೆ ಇತರೆ ಆಹಾರ ಪದಾರ್ಥಗಳಲ್ಲಿ ಪದೇ ಪದೇ ಹುಳುಗಳು ಪತ್ತೆಯಾಗುತ್ತಿದ್ದು, ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ಫೋಷಕರು ಆನೇಕ ಭಾರಿ ಇಲ್ಲಿನ ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಇನ್ನೂ ಘಟನೆಯ ವಿಷಯ ಹೊರಬೀಳುತ್ತಿದ್ದಂತೆ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಂಕರಪ್ಪ ಶಾಲೆಗೆ ಭೇಟಿ ನೀಡಿ ಆಹಾರ ಧಾನ್ಯಗಳನ್ನು ಪರಿಶೀಲನೆ ನಡೆಸಿದ್ದು, ಆಹಾರ ಪದಾರ್ಥಗಳನ್ನು ಸರಿಯಾದ ರೀತಿಯಲ್ಲಿ ಸಂರಕ್ಷಿಸಿ ಅಡುಗೆ ಮಾಡಬೇಕು. ಇದೇ…
ಈ ಉಪಾಯವನ್ನು ಯಾವುದಾದರೂ ಶ್ರೀರಾಮನ ದೇವಸ್ಥಾನ ಅಥವಾ ಆಂಜನೇಯನ ಆಲಯಕ್ಕೆ ಹೋಗಿ ಮಾಡಬೇಕು. ಕೇವಲ ಎರಡು ವಸ್ತುಗಳು ಇದ್ದರೆ ಸಾಕು. ಮೊದಲಿಗೆ ನೀವು ವೀಳ್ಯದೆಲೆಯನ್ನು ತೆಗೆದುಕೊಳ್ಳಬೇಕು, ಒಂದು ವೇಳೆ ನಿಮ್ಮ ಹತ್ತಿರ ವೀಳ್ಯದೆಲೆ ಇಲ್ಲ ಎಂದರೆ ಅರಳಿ ಎಲೆಯನ್ನು ತೆಗೆದುಕೊಳ್ಳಬಹುದು. ಇದಾದ ನಂತರ ಎಕ್ಕದ ಗಿಡದ ಎಲೆಯನ್ನು ತೆಗೆದುಕೊಳ್ಳಬೇಕು. ಈ ಮೂರು ಎಲೆಗಳಲ್ಲಿ ಯಾವುದಾದರೂ ಎರಡು ಎಲೆಗಳನ್ನು ಮಾತ್ರ ನೀವು ಆಯ್ಕೆ ಮಾಡಿಕೊಳ್ಳಬೇಕು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ,…
ಬೆಳಗಾವಿ : ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಬೆಳಗಾವಿ ತಾಲೂಕಿನ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಘಟನೆಗೆ ಕಾರಣೀಕರ್ತರಾದಂತಹ ಮಹಿಳೆಯ ಮಗ ಹಾಗೂ ಹಲ್ಲೆ ಮಾಡಿದವರ ಮಗಳು ಇಬ್ಬರು ಪ್ರೇಮಿಗಳ ವಿವಾಹವನ್ನು ಇದೀಗ ಪೊಲೀಸರು ನೆರವೇರಿಸಿದ್ದಾರೆ. ಬೆಳಗಾವಿ ನಗರದ ದಕ್ಷಿಣ ಉಪನೋಂದಣಿ ಕಚೇರಿಯಲ್ಲಿ ಮದುವೆ ಮಾಡಿಸಲಾಗಿದೆ. ಡಿ.10ರಂದು ಯುವಕನ ತಾಯಿಯನ್ನು ಯುವತಿಯ ಕಡೆಯವರು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿತ್ತು. ಬಳಿಕ ಬೆಳಗಾವಿ ಜಿಲ್ಲಾ ಪೊಲೀಸರು ಪ್ರೇಮಿಗಳನ್ನು ರಕ್ಷಣೆ ಮಾಡಿದ್ದರು. ಇದೀಗ ಉಪನೋಂದಣಿ ಕಚೇರಿಯಲ್ಲಿ ಕಾನೂನು ಪ್ರಕಾರ ವಿವಾಹ ಮಾಡಿಸಿದ್ದಾರೆ. ದುಂಡಪ್ಪ ಅಶೋಕ ನಾಯಕ್ ಎಂಬ ವಂಟಮೂರಿ ಗ್ರಾಮದ ಯುವಕ, ಪ್ರಿಯಾಂಕಾ ಬಸಪ್ಪ ನಾಯಕ್ ಎಂಬ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವತಿಯ ಪೋಷಕರು ಇವರ ಪ್ರೀತಿಯನ್ನು ತಿರಸ್ಕರಿಸಿ ಯುವತಿಗೆ ಬೇರೊಬ್ಬರ ಜೊತೆ ಯಾದಿ ಮೇ ಶಾದಿ ಮಾಡಲು ನಿರ್ಧರಿಸಿದ್ದರು. ಈ ವಿಚಾರ ತಿಳಿದು ಯುವತಿಯ ನಿಶ್ಚಿತಾರ್ಥದ…
ಬಳ್ಳಾರಿ : ಇಂದಿರಾ ಕ್ಯಾಂಟೀನ್ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿತ್ತು.ನಂತರ ಬಿಜೆಪಿ ಸರ್ಕಾರ ಬಂದ ಬಳಿಕ ಕ್ಯಾಂಟೀನ್ ನಿರ್ವಹಣೆ ಕುಂಟುತ್ತಾ ಸಾಗಿತ್ತು. ಆದರೆ, 2023ರಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಇಂದಿರಾ ಕ್ಯಾಂಟೀನ್ಗಳಿಗೆ ಜೀವ ತುಂಬಲಿದೆ ಎಂಬ ನಿರೀಕ್ಷೆ ಜನರಲ್ಲಿತ್ತು. ಆದರೆ, ಇದೀಗ ಗ್ಯಾರಂಟಿ ಯೋಜನೆಗಳ ಸಲುವಾಗಿ ಅನುದಾನ ಬಿಡುಗಡೆ ಮಾಡದೆ ಇಂದಿರಾ ಕ್ಯಾಂಟೀನ್ಗಳು ಸೊರಗುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಬಾಕಿ ಇರುವ ಬಿಲ್ ಪಾವತಿ ಮಾಡದ ಕಾರಣ ಬಳ್ಳಾರಿ ಜಿಲ್ಲೆಯಾದ್ಯಂತ 8 ಇಂದಿರಾ ಕ್ಯಾಂಟೀನ್ಗಳು ಬಂದ್ ಆಗಿವೆ. ಬಳ್ಳಾರಿ ನಗರದ ಐದು ಇಂದಿರಾ ಕ್ಯಾಂಟೀನ್ಗಳು ಸೇರಿ ಒಟ್ಟು 8 ಕ್ಯಾಂಟೀನ್ಗಳು ಕಾರ್ಯಾಚರಣೆ ಸ್ಥಗಿತಗೊಳಿಸಿವೆ. ಸರ್ಕಾರದಿಂದ 3.38 ಕೋಟಿ ರೂಪಾಯಿ ಬಿಲ್ ಬಾಕಿ ಇರುವುದರಿಂದ ನಿರ್ವಹಣೆ ಸಾಧ್ಯವಾಗದೆ ಕ್ಯಾಂಟೀನ್ಗಳು ಮುಚ್ಚಿವೆ. ಖಾಸಗಿ ಏಜೆನ್ಸಿ ಮೂಲಕ ಇಂದಿರಾ ಕ್ಯಾಂಟೀನ್ಗಳನ್ನು ನಡೆಸಲಾಗುತ್ತಿದೆ. ಇದೀಗ, ಬಿಲ್ ಬಿಡುಗಡೆಯಾಗದ ಕಾರಣ ಕ್ಯಾಂಟೀನ್ ನಡೆಸುವುದು ಕಷ್ಟ ಎಂದು ಖಾಸಗಿ ಏಜೆನ್ಸಿಗಳು ಅವುಗಳನ್ನು…