Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ಇಂದು ಬೆಂಗಳೂರಿನಲ್ಲಿ ಮತ್ತೋರ್ವ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಲ್ಲಸಂದ್ರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ಯುವತಿಯನ್ನು ರುಚಿತಾ (25) ಎಂದು ತಿಳಿದು ಬಂದಿದೆ. ರುಚಿತಾ ಬಯೋಕಾನ್ ಕಂಪನಿಯ ಜೂನಿಯರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದಳು. ಬೆಂಗಳೂರಿನ ಮಲ್ಲಸಂದ್ರದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ರುಚಿತ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ರುಚಿತ ಮೂಲತಃ ಆಂಧ್ರದ ಅನಂತಪುರ ಜಿಲ್ಲೆಯ ಬೆಸ್ತರಹಳ್ಳಿ ನಿವಾಸಿ ಎಂದು ತಿಳಿದು ಬಂದಿದ್ದು, ಘಟನೆ ಸಂಬಂಧ ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ರುಚಿತಾ ತಂದೆ ತಾಯಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮಗಳು ಫೋನ್ ಕಾಲ್ ರಿಸೀವ್ ಮಾಡದ ಹಿನ್ನೆಲೆಯಲ್ಲಿ ಅನುಮಾನ ಕೊಂಡು ಮನೆಗೆ…
ಬೆಳಗಾವಿ : ಮನೆಯಲ್ಲಿ ಹೇಳದೆ ಕಾರು ತೆಗದುಕೊಂಡು ಹೋಗಿದ್ದ ವ್ಯಕ್ತಿಯೊಬ್ಬರು ಘಟಪ್ರಭಾ ನದಿಗೆ ಕಾರಿನ ಸಮೇತ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿ ದಡ್ಡಿ ಗ್ರಾಮ ನಿವಾಸಿಯಾಗಿದ್ದಂತ ಕಿರಣ್ ನಾವಲಗಿ (45) ಎಂಬಾತ ಕಾರು ಚಾಲನೆ ಮಾಡಿಕೊಂಡು ತೆರಳುತ್ತಿದ್ದಂತ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ಬ್ಯೂಟಿ ಪಾರ್ಲರ್ ಉದ್ಯಮ ನಡೆಸುತ್ತಿದ್ದ ಮೃತ ಕಿರಣ್ ನಾವಲಗಿ ಡಿಸೆಂಬರ್ 30ರಂದು ಮನೆಯಲ್ಲಿ ಯಾರಿಗೂ ತಿಳಿಸದೆ ಮನೆ ತೊರೆದಿದ್ದರು. ಕಿರಣ್ ಅವರಿಗೆ ಉದ್ಯಮದಲ್ಲಿ ನಷ್ಟವಾಗಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಸ್ಯ ಕ್ರೇನ್ ಸಹಾಯದಿಂದ ನದಿಗೆ ಬಿದ್ದಂತಹ ಕಾರನ್ನು ಪೊಲೀಸರು ಮೇಲೆತ್ತಿದ್ದಾರೆ. ಘಟನೆ ಕುರಿತಂತೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೀದರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕರು ನಿನ್ನೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದ್ದರು. ಈ ವಿಚಾರವಾಗಿ ಇದೀಗ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಪೋಸ್ಟರ್ ಅಂಟಿಸಿದ ಬಿಜೆಪಿ ನಾಯಕರು ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಸಿ ಟಿ ರವಿ, ಎನ್.ರವಿಕುಮಾರ್ ಸೇರಿದಂತೆ 13 ಜನರ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದೆ. ಪಿಎಸ್ಐ ಶಶಿಧರ್ ವಣ್ಣೂರ್ ದೂರು ಆಧರಿಸಿ ಇದೀಗ FIR ದಾಖಲಾಗಿದೆ. ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಪಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಪಿ ಎಸ್ ಐ ಶಶಿಧರ…
BREAKING : ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ‘ಲೈಂಗಿಕ ದೌರ್ಜನ್ಯ’ ಎಸಗಿ, ಮತಾಂತರಕ್ಕೆ ಯತ್ನ : ಇಬ್ಬರು ಅರೆಸ್ಟ್!
ಹಾವೇರಿ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಲ್ಲದೆ, ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಡ ಹೇಳಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹೌದು ಅಪ್ರಾಪ್ತ ಬಾಲಕಿಗೆ ಮತಾಂತರಕ್ಕೆ ಒತ್ತಾಯ ಮಾಡಿರುವ ಆರೋಪ ಕೇಳಿ ಬಂದಿದ್ದು, ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಅಪ್ರಾಪ್ತ ಬಾಲಕಿಗೆ ಒತ್ತಾಯ ಮಾಡಿರುವ ಆರೋಪ ಕೇಳಿ ಬಂದಿದೆ. ಲೈಂಗಿಕ ದೌರ್ಜನ್ಯ ಎಸಗಿ, ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಅಲ್ಲದೇ ಆರೋಪಿ ಮದುವೆ ಆಗುತ್ತೇನೆ ಅಂತ ಬೆದರಿಕೆ ಹಾಕಿದ ಆರೋಪ ಕೂಡ ಕೇಳಿಬಂದಿದೆ. ಈ ಕುರಿತಂತೆ ಕರ್ಜಗಿ ಗ್ರಾಮದ ಇಬ್ಬರು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದ್ದು, ಮಹಬೂಬ್ ಅಲಿ (28) ಹಾಗೂ ಸೋಯಲ್ ಸಾಬ್ (20) ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್…
ಬೆಂಗಳೂರು : ಹೊಸ ವರ್ಷಕ್ಕೆ ಸಂಪುಟ ಪುನರಚನೆ ಆಗುತ್ತಾ ಎನ್ನುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳಿವು ನೀಡಿದ್ದು, ಸಚಿವ ಸಂಪುಟ ಪುನಾರಚಣೆ ಕುರಿತಂತೆ ಹೈ ಕಮಾಂಡ್ ಜೊತೆಗೆ ಚರ್ಚಿಸಿ ನಿರ್ಧರಿಸುತ್ತೇನೆ ಎಂದು ತಿಳಿಸಿದರು. ಈ ಮೂಲಕ ಸಚಿವ ಸಂಪುಟ ಪುನಾರಚನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೊಸ ವರ್ಷಕ್ಕೆ ಸಂಪುಟದಲ್ಲಿ ಸರ್ಜರಿ ಮಾಡುತ್ತೀರಾ, ಸಂಪುಟ ಪುನಾರಚನೆ ಆಗುತ್ತಾ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಂಪುಟ ಪುನರ್ ರಚನೆ ಕುರಿತಂತೆ ಹೈಕಮಾಂಡ್ ಜೊತೆಗೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು. ಹಾಗಾಗಿ ಸಿಎಂ ಹೇಳಿಕೆಯಿಂದ ಇದೀಗ ಸಂಪುಟ ಸಭೆ ಪುನಾರಚನೆ ಮತ್ತೆ ಜೀವ ಪಡೆದಿದೆ. ಹೊಸ ವರ್ಷದಲ್ಲಿ ಹೊಸ ತಂಡ ಕಟ್ಟುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಸಂಪುಟ ಪುನರಚನೆ ಬಗ್ಗೆ ಬೆಳವಣಿಗೆ ಆಗಿದ್ದು, ಕೆಲ ಪ್ರಭಾವಿ ನಾಯಕರು ತಡೆದಿಂದಾಗಿ ಈ ಒಂದು…
ಬೆಂಗಳೂರು : ಹೊಸ ವರ್ಷದ ಶುಭಾಶಯ ತಿಳಿಸಲು ಐಪಿಎಸ್, ಐಎಎಸ್ ಸೇರಿದಂತೆ ಹಿರಿಯ ಅಧಿಕಾರಿಗಳ ವರ್ಗ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭಾಶಯ ತಿಳಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯುವಜನತೆ ನಮ್ಮ ಆಸ್ತಿ, ಇವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸಿ ಎಂದು ಸಲಹೆ ನೀಡಿದರು. ಇಂದು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಭೇಟಿಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದು, ಹೊಸ ವರ್ಷದ ಶುಭಾಶಯ ತಿಳಿಸಲು ಅಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿದ್ದರು. ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಿ. ಪ್ರಾದೇಶಿಕ ಅಸಮತೋಲನ ಅಸಮಾನತೆ ತೊಡೆಯಲು ಸಹಕಾರ ಬೇಕು. ಈ ವರ್ಷದ ಕಾರ್ಯ ಕ್ಷಮತೆ ಹೆಚ್ಚಿಸಿಕೊಳ್ಳೋಣ ಯುವಜನತೆ ನಮ್ಮ ಆಸ್ತಿ ಇವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸಿ ಎಂದು ಸಲಹೆ ನೀಡಿದರು. ಬದುಕಿನಲ್ಲಿ ಏಳು ಬೀಳು ಸಹಜ. ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ…
ಬೆಂಗಳೂರು : ಈ ಬಾರಿ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ. ಆದರೆ ಬಜೆಟ್ ಮಂಡನೆ ದಿನಾಂಕ ಇನ್ನು ನಿಗದಿಯಾಗಿಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರುವ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಆದರೆ ಬಜೆಟ್ ಮಂಡನೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ , ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ.ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ…
ನವದೆಹಲಿ : ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತರ ಪ್ರದೇಶದ ಮೂಲದ ಟೆಕ್ಕಿ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ನವದೆಹಲಿಯಲ್ಲಿ ಕೂಡ ಇಂತಹದ್ದೇ ಘಟನೆ ನಡೆದಿದ್ದು, ಪತ್ನಿಯ ಕಿರುಕುಳಕ್ಕೆ ಬೇಸತ್ತು ಬೇಕರಿ ಮಾಲೀಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಡೆಲ್ ಟೌನ್ ನ ಕಲ್ಯಾಣ ವಿಹಾರ್ ಪ್ರದೇಶದ ಮನೆಯಲ್ಲಿ ಪುನೀತ್ ಖುರಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಪುನೀತ್ ಖುರಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಡೆಲ್ ಟೌನ್ ನ ಕಲ್ಯಾಣ ವಿಹಾರ್ ಪ್ರದೇಶದ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ.ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ಪುನೀತ್ ಖುರಾನ್, ಬೇಕರಿ ಮಾಲೀಕತ್ವದ ವಿಚಾರವಾಗಿ ಗಂಡ ಹೆಂಡತಿಯ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಆತ್ಮಹತ್ಯೆಗೂ ಮುನ್ನ ಪುನೀತ್ ಖುರಾನ್ ಗೆ ಪತ್ನಿ ಕರೆ ಮಾಡಿದ್ದಳು. ತನಗೆ ಮತ್ತು ತನ್ನ ಕುಟುಂಬವನ್ನು ಅವಮಾನಿಸಿದ್ದಾನೆ ಎಂದು ಆರೋಪಿಸಿರುವ ಆಕೆ, ಮೊಬೈಲ್ ನಲ್ಲಿ ಮಾತನಾಡುವ ವೇಳೆ ತನ್ನ ಹಾಗೂ ಪುನೀತ್…
ರಾಮನಗರ : ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಭಾರಿ ದುರಂತ ಒಂದು ತಪ್ಪಿದ್ದು 110 ಪ್ರಯಾಣಿಕರನ್ನು ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಒಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ, ಪ್ರಪಾತಕ್ಕೆ ಬೀಳುವ ಮುನ್ನ ಕೂದಲಿ ಅಂತರದಲ್ಲಿ ಪಾರಾಗಿರುವ ಘಟನೆ, ಕನಕಪುರದ ಸಂಗಮ ಘಾಟ್ ಬಳಿ ನಡೆದಿದೆ. ಹೌದು ಹೊಸ ವರ್ಷದ ದಿನ ಭಾರಿ ದುರಂತ ತಪ್ಪಿದೆ. ಕನಕಪುರದ ಸಂಗಮ ಘಾಟ್ ಬಳಿ ಬಸ್ ಬ್ರೇಕ್ ಫೇಲ್ ಆಗಿದೆ. ಬಸ್ ನಲ್ಲಿದ್ದ 110 ಪ್ರಯಾಣಿಕರು ಜಸ್ಟ್ ಮಿಸ್ ಆಗಿದ್ದಾರೆ. ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಪ್ರಪಾತಕ್ಕೆ ಬೀಳುತ್ತಿದ್ದ ಬಸ್ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ತಡೆಗೋಡೆಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದು ಅದೃಷ್ಟವಶಾತ್ 110 ಪ್ರಯಾಣಿಕರು ಬಚಾವ್ ಆಗಿದ್ದಾರೆ.
ಯಾದಗಿರಿ : ಹೊಸ ವರ್ಷಾಚರಣೆಯ ಸಂಭ್ರಮದ ಹೊತ್ತಲ್ಲೇ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಭೀಕರ ವಾದಂತಹ ಕೊಲೆಯಾಗಿದ್ದು, ಚಾಕುವಿನಿಂದ ಕತ್ತು ಕೊಯ್ದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಚಗುಂಡಾಳ್ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಚಾಕುವಿನಿಂದ ಕತ್ತು ಕೊಯ್ದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯಸುರಪುರ ತಾಲೂಕಿನ ಮಾಚಗುಂಡಾಳ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಗ್ರಾಮದ ಶರಣಪ್ಪ ಮೇಟಿ (28) ಎನ್ನುವ ವ್ಯಕ್ತಿಯ ಬರ್ಬರ ಕೊಲೆಯಾಗಿದೆ.ಶರಣಪ್ಪಗೆ ಚಾಕುವಿನಿಂದ ಮನಬಂದಂತೆ ಇರಿದು ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಕೊಲೆಯ ಬಳಿಕ ಕುತ್ತಿಗೆ ಬಳಿಗೆ ಚಾಕು ಬಿಟ್ಟು ಪಾತಕಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಅನೈತಿಕ ಸಂಬಂಧವೇ ಈ ಒಂದು ಕೊಲೆಗೆ ಕಾರಣ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಘಟನೆ ಕುರಿತಂತೆ ಸುರಪುರ ಠಾಣೆ ಪೊಲೀಸರು, ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.