Author: kannadanewsnow05

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುವ ಸಂದರ್ಭದಲ್ಲಿ, ಮಹೇಶ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಬಂದೂಕು ಹಾಗೂ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಇದೀಗ ಮಹೇಶ್ ಶೆಟ್ಟಿ ತಿಮರೊಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಹೌದು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸ್ಐ ಟಿ ಎಸ್ಪಿ ಸೈಮನ್ ಅವರ ದೂರು ಆಧರಿಸಿ ಮಹೇಶ ಶೆಟ್ಟಿ ತಿಮರೊಡಿ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆ 25(1), 25(1-A), 24(1-B), (A) ರಡಿ ಕೇಸ್ ದಾಖಲಾಗಿದೆ. ಮಹೇಶ ಶೆಟ್ಟಿ ತಿಮ್ಮರೊಡಿ ಮನೆಯಲ್ಲಿ ಬಂದೂಕು ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿದ್ದವು. ಆಗಸ್ಟ್ 26ರಂದು ತಿಮರೋಡಿ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ನೆಡೆಸಿದ್ದರು. ಈ ವೇಳೆ 2ತಲ್ವಾರ್, ಬಂದೂಕು ಸೇರಿದಂತೆ ಹಲವು ವಸ್ತುಗಳನ್ನು ಎಸ್ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಸ್ಐಟಿ ಎಸ್‌ಪಿ…

Read More

ಕೋಲಾರ : ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ನಿನ್ನೆ ಆದೇಶ ಹೊರಡಸಿತ್ತು.ಬಳಿಕ ನಂಜೇಗೌಡ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಬೆಂಜ್ ಎಂದು ಹೇಳಿ ಮನವಿ ಮಾಡಿದರು. ಬಳಿಕ ಹೈಕೋರ್ಟ್ 30 ದಿನಗಳ ಕಾಲ ಅವಕಾಶ ನೀಡಿ ತನ್ನದೇ ತೀರ್ಪಿಗೆ ತಡೆ ನೀಡಿತು. ಇದೀಗ ಈ ವಿಚಾರವಾಗಿ ಮರು ಮತಎಣಿಕೆಗೆ ಕೋರ್ಟ್ ಆದೇಶ ನೀಡಿದ್ದು, ಸದ್ಯ ಮಾಲೂರು ಶಾಸಕ ಕೆವೈ ನಂಜೇಗೌಡ ಶಾಸಕಸ್ಥಾನವನ್ನು ಅಸಿಂಧುಗೊಳಿಸಲಾಗಿದೆ. ಹೀಗಾಗಿ ಒಂದು ವೇಳೆ ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ದರೆ ತಾವು ರಾಜಕೀಯ ಬಿಡುವುದಾಗಿ ಮಾಲೂರು ಶಾಸಕ ಕೆವೈ ನಂಜೇಗೌಡ ಸವಾಲು ಹಾಕಿದ್ದಾರೆ. ನಮ್ಮ ಕ್ಷೇತ್ರದ ಮರು ಮತಎಣಿಕೆಗೆ ಹೈಕೋರ್ಟ್ ತೀರ್ಪು ನೀಡಿದೆ. ನನ್ನ ವಿರುದ್ಧ ಚುನಾವಣೆ ಸೋತ ಅಭ್ಯರ್ಥಿ ಮರು ಎಣಿಕೆಗೆ ನ್ಯಾಯಾಲಯದ ಮೊರೆ ಹೋಗಿದ್ದರು.ಹೀಗಾಗಿ ರೀ ಕೌಂಟಿಂಗ್ ಕೊಟ್ರೆ ನಾನು ಬದ್ಧ.ಆದ್ರೆ ಈಗ ಶಾಸಕ ಸ್ಥಾನವನ್ನೇ ಅಸಿಂಧುಗೊಳಿಸಲಾಗಿದೆ. ಹೈಕೋರ್ಟ್ ತೀರ್ಪು…

Read More

ಕಲಬುರ್ಗಿ : ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ ಒಟ್ಟು 8 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಗಳು ಇರುವುದು ಪತ್ತೆಯಾಗಿದೆ. ಈ ಹಿನ್ನಲೆ ಆಹಾರ ಇಲಾಖೆ, ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿದವರ ವಿರುದ್ಧ ಕ್ರಮ ಕೈಗೊಳ್ಳಲು ಆಹಾರ ಇಲಾಖೆ ಮುಂದಾಗಿದೆ. ಈ ವಿಚಾರವಾಗಿ ಕಲಬುರ್ಗಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಕರ್ನಾಟಕದಲ್ಲಿ ಅನರ್ಹರಿಗೆ ನೀಡಲಾಗಿದ್ದ ಬಿಪಿಎಲ್ ಪಡಿತರ ಕಾರ್ಡ್‌ಗಳ ಪೈಕಿ ಈಗಾಗಲೇ 3.65 ಲಕ್ಷ ಕಾರ್ಡ್ ಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದ್ದು, ಇನ್ನೂ ಸಾಕಷ್ಟ ಅನರ್ಹರು ಬಿಪಿಎಲ್ ಕಾರ್ಡ್ ಗಳನ್ಜು ಹೊಂದಿದ್ದಾರೆ. ಅವುಗಳನ್ನು ಪತ್ತೆ ಮಾಡಿ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖಡಕ್ ಸೂಚನೆ ನೀಡಿದ್ದಾರೆ. ಅನರ್ಹರ ಬಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಪಿಎಲ್ ಕಾರ್ಡ್ ಇದ್ದು, ಅನರ್ಹರನ್ನು ಬಿಪಿಎಲ್ ಕಾರ್ಡ್ ನ ಸೌಲಭ್ಯದಿಂದ ತೆಗೆದುಹಾಕುವಂತೆ ಹಾಗೂ ಅರ್ಹರಿಗೆ ಈ ಸೌಲಭ್ಯವನ್ನು ನೀಡುವಂತೆ ಸೂಚನೆ…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದ್ದು ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ದಾಖಲಾಗಿದ್ದ ಖಾಸಗಿ ದೂರು ಇದೀಗ ವಜಾಗೊಂಡಿದೆ. ಎನ್ ಕಿರಣ್ ಎಂಬುವವರು ಸಿಎಂ ಸಿದ್ದರಾಮಯ್ಯ ಆರ್ ಎಸ್ ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರು ದಾಖಲಿಸಿದ್ದರು. ಇದೀಗ ಬೆಂಗಳೂರಿನ 42ನೇ ACMM ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಖಾಸಗಿದೂರು ವಜಾಗೊಳಿಸಿ ಆದೇಶ ಹೊರಡಿಸಿದೆ.

Read More

ಬೆಂಗಳೂರು : ಚಾಮುಂಡಿ ತಾಯಿಗೆ ಹೂ ಮೂಡಿಸುವ ವಿಚಾರವಾಗಿ ವಿಜಯಪುರ ನಗರ ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಾಮಾನ್ಯ ದಲಿತ ಮಹಿಳೆಗೂ ಇದಕ್ಕೆ ಅವಕಾಶ ಇಲ್ಲ. ಕೇವಲ ಸನಾತನ ಧರ್ಮದವರಿಗೆ ಮಾತ್ರ ಚಾಮುಂಡಿ ತಾಯಿಗೆ ಹೂ ಮುಡಿಸುವ ಅವಕಾಶ ಇದೆ ಎಂದು ಹೇಳಿಕೆ ನೀಡಿದ್ದರು. ಇವರ ಈ ಒಂದು ಹೇಳಿಕೆಯಿಂದ ಕೊಪ್ಪಳ ನಗರದಲ್ಲಿ ದಲಿತ ವಿಮೋಚನೆಯ ಮಾನವ ಹಕ್ಕುಗಳ ಕಾರ್ಯಕರ್ತ ಮಲ್ಲು ಪೂಜಾರ್ ಎಂಬಾತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿತ್ತು ಈ ಒಂದು ಎಫ್ಐಆರ್ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆಯ ನಡೆಸಿದ ಹೈಕೋರ್ಟ್ ಯತ್ನಾಳ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿತು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR ಹಿನ್ನೆಲೆಯಲ್ಲಿ ಅಟ್ರಾಸಿಟಿ ಕಾಯ್ದೆ ಯಡಿ ಅರ್ಜಿ ಸಲ್ಲಿಸಿದ್ದಾರೆ. ಸನಾತನ ಧರ್ಮದ ಹೆಣ್ಣು ಮಕ್ಕಳಿಗೆ ಚಾಮುಂಡಿ…

Read More

ಬೆಂಗಳೂರು : ಸಾಮೂಹಿಕ ಅತ್ಯಾಚಾರ ಪ್ರಕಾರಣದಲ್ಲಿ ರಾಜ ರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಸಾಮೂಹಿಕ ಅತ್ಯಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ SIT ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವುದರಿಂದ ಈ ಸಂಬಂಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಬೆಂಗಳೂರಿನ ಯಶವಂತಪುರದ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಮುನಿರತ್ನ, ವಸಂತ ಕುಮಾರ್, ಚನ್ನಕೇಶವ್ ಮತ್ತು ಕಮಲ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿತು. ಎಸ್ಐಟಿಯು ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಅದನ್ನು ಒಪ್ಪಿಕೊಳ್ಳಲಾಗಿದೆ. ಹೀಗಾಗಿ, ಅರ್ಜಿಯು ಅಸ್ತಿತ್ವ ಕಳೆದುಕೊಂಡಿದ್ದು, ಅವುಗಳನ್ನು ವಜಾ ಮಾಡಲಾಗಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿತು. ಸಿಒಡಿ-ಎಸ್ಟಿಯ ಪರವಾಗಿ ಹಾಜರಾಗಿದ್ದ ಸರ್ಕಾರಿ ವಕೀಲರು, ಎಸ್ಐಟಿಯು ವಿಚಾರಣಾಧೀನ ನ್ಯಾಯಾಲಯಕ್ಕೆ ಪ್ರಕರಣದ ಸಂಬಂಧ ಬಿ ರಿಪೋರ್ಟ್ ಸಲ್ಲಿಸಿದ್ದು,…

Read More

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ.ಇದೀಗ ಬಂಗ್ಲೆ ಗುಡ್ಡದಲ್ಲಿ ವಿಠಲ ಗೌಡ ತೋರಿಸಿದ ಜಾಗದಲ್ಲಿ ಬುರುಡೆಗಳು ಮತ್ತು ಅಸ್ತಿ ಪಂಜರಗಳು ಪತ್ತೆಯಾಗಿವೆ. ಕೆಲ ಹೊತ್ತಿನಲ್ಲಿ SIT ಅಧಿಕಾರಿಗಳು ಅಸ್ತಿಪಂಜರ ಮತ್ತು ಬುರುಡೆಗಳನ್ನು ಕಾಡಿನಿಂದ ತರಲಿದ್ದಾರೆ. ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಮತ್ತೆ 5 ಕಡೆಗಳಲ್ಲಿ ಮೂಳೆಗಳು ಪತ್ತೆಯಾಗಿವೆ, ಎಸ್ಐಟಿ ಮಹಜರು ವೇಳೆ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿವೆ. ಭೂಮಿಯ ಮೇಲ್ಭಾಗದಲ್ಲಿ ಅಸ್ತಿಪಂಜರದ ಅವಶೇಷಗಳು, ಮೂಳೆಗಳು ಸಿಕ್ಕಿದ್ದು, ಸುಕೋ ಟೀಮ್ ಸಿಕ್ಕ ಜಾಗದಲ್ಲಿ ಮಣ್ಣಿನ ಮಾದರಿ ಯನ್ನು ಸಂಗ್ರಹಿಸಲಾಗಿದೆ ಪೈಪ್ ಗಳಲ್ಲಿ ಮೂಳೆಗಳನ್ನು ಸಂಗ್ರಹಿಸಿದೆ. ತನಿಖಾಧಿಕಾರಿ ಜಿತೇಂದ್ರ ದಯಾಮಾ ನೇತೃತ್ವದ ತಂಡ ಕಳೆದ ಎರಡು ಗಂಟೆಗಳಿನಿಂದ ಸ್ಥಳದಲ್ಲೇ ಶೋಧ ಕಾರ್ಯ ಮುಂದುವರೆಸಿದ್ದು, ಈ ವೇಳೆ ಭೂಮಿಯ ಮೇಲ್ಭಾಗದಲ್ಲೇ ಕೆಲವು ಸಣ್ಣಪುಟ್ಟ ಮೂಳೆ ತುಂಡುಗಳು ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಸಿದಂತೆ ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಾಜಿ ಆಯುಕ್ತ ದಿನೇಶ್ ಕುಮಾರ್  ಅವರನ್ನು  ವಿಚಾರಣೆಗೆ ಕರೆದಿದ್ದರು. ಈ ವೇಳೆ ದಿನೇಶ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹೌದು ಬೆಂಗಳೂರಿನ ಶಾಂತಿ ನಗರದ ಇಡಿ ಕಚೇರಿಯಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿಚಾರಣೆಗೆ ಹಾಜರಾಗಿದ್ದರು . ಇದೀಗ ಇಡಿ ಅಧಿಕಾರಿಗಳು ದಿನೇಶ್ ಅವರನ್ನು ವಿಚಾರಣೆ ನಡೆಸಿ ತಮ್ಮ ವಶದಲ್ಲಿ ಇಟ್ಟುಕೊಂಡಿದ್ದಾರೆ. ಮುಡಾದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು. ದಿನೇಶ್ ವಿರುದ್ಧ ಮಾತ್ರ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಇ.ಡಿ ಅಧಿಕಾರಿಗಳು ದಿನೇಶ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದೆಲ್ಲದರ ನಡುವೆ ಲೋಕಾಯುಕ್ತ ಪೊಲೀಸರ ನಡೆಯಿಂದ ಸಮಾಜದಲ್ಲಿ ನಾನು ಅವಮಾನ ಎದುರಿಸುತ್ತಿದ್ದೇನೆ. ಮಾನಸಿಕವಾಗಿ ಕುಗ್ಗಿದ್ದೇನೆ. ಇದರಿಂದ ಬೇಗ ತನಿಖೆಗೆ ಆದೇಶಿಸಿ ಎಂದು ಸ್ನೇಹಮಯಿ ಕೃಷ್ಣ ಅವರು…

Read More

ಚಾಮರಾಜನಗರ :  ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಮರಾಜನಗರಕ್ಕೆ ಭೇಟಿ ನೀಡಿ, 18,500 ಹೊಸ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಘೋಷಿಸಿದರು. ಶಾಲಾ ಕೊಠಡಿಗಳ ನಿರ್ಮಾಣ ಮತ್ತು ಪಾರದರ್ಶಕ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯ ಮೂಲಕ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಭರವಸೆ ನೀಡಿದರು. ಸಚಿವರಾದ ನಂತರ ಮೊದಲ ಬಾರಿಗೆ ಚಾಮರಾಜನಗರಕ್ಕೆ ಆಗಮಿಸಿದ ಮಧು ಬಂಗಾರಪ್ಪ ಅವರಿಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು. ನಗರದ ಭುವನೇಶ್ವರಿ ವೃತ್ತದಲ್ಲಿ 250 ಕೆ.ಜಿ ತೂಕದ ಸೇಬಿನ ಹಾರವನ್ನು ಹಾಕಿ ಸ್ವಾಗತಿಸಲಾಯಿತು. ಅವರು ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈಗಾಗಲೇ 13,500 ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಕೇವಲ 5,428 ಶಿಕ್ಷಕರ ನೇಮಕ ಮಾಡಿಕೊಂಡಿತ್ತು. ನಮ್ಮ ಸರ್ಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಬದ್ಧವಾಗಿದೆ. ಶೀಘ್ರದಲ್ಲೇ ಇನ್ನೂ 18,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಇದರಲ್ಲಿ ಅನುದಾನಿತ ಮತ್ತು ಸರ್ಕಾರಿ ಶಾಲೆಗಳಿಗೂ ಸಮಾನ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು…

Read More

ಕೊಪ್ಪಳ : ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಆಕ್ರೋಶ ಹೊರ ಹಾಕುತ್ತಿವೆ. ಇದೇ ವೇಳೆ ವಿಜಯಪುರ ನಗರ ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚಾಮುಂಡಿ ತಾಯಿಗೆ ಹೂ ಮುಡಿಸಲು ಸನಾತನ ಧರ್ಮದವರಿಗೆ ಮಾತ್ರ ಅವಕಾಶ ಇದೆ. ಸಾಮಾನ್ಯ ದಲಿತ ಮಹಿಳೆಗೂ ಅವಕಾಶ ಇಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಇವರ ಹೇಳಿಕೆ ವಿರುದ್ಧ ಕೊಪ್ಪಳದಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲು ಮಾಡಲಾಗಿದೆ. ಕಾರ್ಯಕರ್ತ ಮಲ್ಲು ಪೂಜಾರಿ ದಲಿತ ವಿಮೋಚನೆಯ ಮಾನವ ಹಕ್ಕುಗಳ ಕಾರ್ಯಕರ್ತ ಮಲ್ಲು ಪೂಜಾರ್ ದೂರನ್ನು ಆಧರಿಸಿ ಮೊಕದ್ದಮೆ ದಾಖಲು ಮಾಡಲಾಗಿದೆ. ಮೈಸೂರು ದಸರಾ ಉದ್ಘಾಟನಾ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ ಹೇಳಿಕೆ ನೀಡಿದ್ದರು. ಸನಾತನ ಧರ್ಮದವರು ಮಾತ್ರ ಚಾಮುಂಡಿಗೆ ಪೂಜಿಸಬೇಕು ಅಂತ ಹೇಳಿಕೆ…

Read More