Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಹನಿಟ್ರ್ಯಾಪ್ಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ನಾನು ರಾಜಣ್ಣ ದೂರು ಸ್ವೀಕರಿಸಲು ಆಗಲ್ಲ ಅವರು ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ನೀಡಬೇಕು ಎಂದು ತಿಳಿಸಿದರು. ಸದಾಶಿವನಗರದ ಗೃಹಕಚೇರಿಯಲ್ಲಿ ಮಂಗಳವಾರ ಸಂಜೆ ಭೇಟಿ ಮಾಡಿ ಮನವಿ ನೀಡಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಹನಿಟ್ರ್ಯಾಪ್ಗೆ ಯತ್ನ ಆಗಿದೆ ಎಂಬ ವಿಷಯ ಸದನದಲ್ಲಿ ಚರ್ಚೆಗೆ ಬಂದಾಗ, ನನ್ನ ಮೇಲೆ ಪ್ರಯತ್ನ ಆಗಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಹೇಳಿದ್ದರು. ಗೃಹ ಸಚಿವರಿಗೆ ಮನವಿ ಕೊಡುತ್ತೇನೆ, ಕ್ರಮ ತೆಗೆದುಕೊಳ್ಳಬೇಕು ಎಂದಿದ್ದರು. ಈ ದಿನ ಮನವಿ ನೀಡಿದ್ದಾರೆ. ಮನವಿ ಸ್ವೀಕರಿಸಿದ್ದು, ಮುಂದೆ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸುತ್ತೇನೆ. ಯಾವ ಹಂತದಲ್ಲಿ, ಯಾರಿಂದ ತನಿಖೆಯಾಗಬೇಕು ಎಂಬುದನ್ನು ಸಿಎಂ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು…
ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಹಕಾರ ಸಚಿವ ಕೆ ಎನ್ ರಾಜಣ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವ ಜಿ ಪರಮೇಶ್ವರ್ ಅವರ ಮನೆಗೆ ಭೇಟಿ ನೀಡಿ ದೂರು ನೀಡಿದ್ದಾರೆ. ಬಳಿಕ ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಕೆ.ಎನ್ ರಾಜಣ್ಣ ಜಂಟಿ ಸುದ್ದಿಗೋಷ್ಠಿ ನಡೆಸಿ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಕಾನೂನು ತಜ್ಞರ ಜೊತೆ ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ಪರಮೇಶ್ವರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಮಟ್ಟದ ತನಿಖೆ ಮಾಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಹೇಳಿದ್ದೆ. ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ ಬಳಿಕ ಕೆ.ಎನ್ ರಾಜಣ್ಣ ಬ್ಯುಸಿಯಾಗಿದ್ದರು. ಈಗ ಬಂದು ಹನಿಟ್ರ್ಯಾಪ್ ಯತ್ನ ಕೇಸ್ ಸಂಬಂಧ ಮನವಿ ಸಲ್ಲಿಸಿದ್ದಾರೆ. ಸಿಎಂ ಜೊತೆಗೆ ಚರ್ಚಿಸಿ ಏನು ಕ್ರಮ ಕೈಗೊಳ್ಳಬೇಕೆಂದು ನಿರ್ಧರಿಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು. ಪ್ರಕರಣ ಸಂಬಂಧ ನನಗೆ ದೂರು ಕೊಡಲು ಆಗಲ್ಲ. ರಾಜಣ್ಣ ಕೇವಲ ಮನವಿ ಮಾತ್ರ ಸಲ್ಲಿಸಿದ್ದಾರೆ. ಯಾವುದೇ ದೂರನ್ನು ಆಗಲಿ ಪೊಲೀಸರಿಗೆ ನೀಡಬೇಕು.…
ಮೈಸೂರು : ಸದ್ಯ ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರಿ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೆ ವಿಪಕ್ಷ ನಾಯಕ ಆರ್ ಅಶೋಕ್ ನನ್ನ ಮೊಬೈಲ್ ಸೇರಿದಂತೆ ವಿಪಕ್ಷದ ಎಲ್ಲಾ ನಾಯಕರ ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂದು ಮತ್ತೊಂದು ಗಂಭೀರ ಆರೋಪ ಮಾಡಿದ್ದರು. ಇದೀಗ ಮೈಸೂರಿನಲ್ಲಿ ಕಾಂಗ್ರೆಸ್ ವಕ್ತಾರ ಎಂಬ ಲಕ್ಷ್ಮಣ್ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದು ಬಿಜೆಪಿ ಶಾಸಕ ಮುನಿರತ್ನ 30 ಮಾಜಿ ಸಚಿವರಿಗೆ ಎಚ್ಐವಿ ಇಂಜೆಕ್ಷನ್ ಕೊಡಿಸಿದ್ದಾನೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್. ಅಶೋಕಗೆ ಮುನಿರತ್ನ ನೂರಕ್ಕೆ ನೂರರಷ್ಟು ಎಚ್ಐವಿ ಇಂಜೆಕ್ಷನ್ ನೀಡಿದ್ದಾನೆ. ಎಚ್ಐವಿ ಇಂಜೆಕ್ಷನ್ ನೀಡಿರುವುದರಿಂದ ಆರ್.ಅಶೋಕ್ ಬಣ್ಣ ಬದಲಾಗಿದೆ. ಆರ್ ಅಶೋಕ್ ತುಟಿ ಮೊದಲಿನಂತೆ ಇಲ್ಲ. ಕೈ ಬಣ್ಣ ಸಹ ಬದಲಾಗಿದೆ. ವಿಪಕ್ಷ ನಾಯಕ ಆರ್ ಅಶೋಕ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು. ಅಲ್ಲದೇ ಬಿಜೆಪಿ ಶಾಸಕ ಮುನಿರತ್ನ ಬಳಿ ಸುಮಾರು 200 ಜನರ ಸಿಡಿ ಇದೆ 30…
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಭಾರಿ ಸದ್ದು ಮಾಡುತ್ತಿದ್ದು, ಗ್ರಹ ಸಚಿವರು ಎಲ್ಲೇ ಇದ್ದರೂ ಭೇಟಿಯಾಗಿ ದೂರು ನೀಡುತ್ತೇನೆ ಎಂದು ಹೇಳಿದ ಸಹಕಾರ ಸಚಿವ ಕೇಂದ್ರ ಇದೀಗ ಬೆಂಗಳೂರಿನ ಸದಾಶಿವನಗರದಲ್ಲಿರುವ ಗ್ರಹ ಸಚಿವ ಜಿ ಪರಮೇಶ್ವರ್ ಅವರ ನಿವಾಸಕ್ಕೆ ಹನಿ ಡ್ರಾಪ್ ಕುರಿತು ದೂರ ನೀಡಲು ಸಚಿವ ಕೆ ಎನ್ ರಾಜಣ್ಣ ದಾಖಲೆಗಳ ಸಮೇತ ಆಗಮಿಸಿದ್ದಾರೆ. ಇಂದು ಬೆಳಿಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಟಿ ಬೇಗೂರು ಗ್ರಾಮದಲ್ಲಿ ಕೆ.ಎನ್ ರಾಜಣ್ಣ ಗೃಹ ಸಚಿವರನ್ನು ಭೇಟಿಯಾದರು. ಹನಿಟ್ರ್ಯಾಪ್ ಕುರಿತು ದೂರನ್ನು ನೀಡಲು ಅವರನ್ನು ಭೇಟಿಯಾದಾಗ ಗೃಹ ಸಚಿವರು ರಾಜಣ್ಣ ಅವರಿಗೆ ಸಾಯಂಕಾಲ ಸದಾಶಿವನಗರ ನಿವಾಸಕ್ಕೆ ಬನ್ನಿ ಎಂದು ತಿಳಿಸಿದ್ದರು. ಇದೀಗ ಕೆ.ಎನ್ ರಾಜಣ್ಣ ದಾಖಲೆಗಳ ಸಮೇತ ಗೃಹ ಸಚಿವರ ನಿವಾಸಕ್ಕೆ ಆಗಮಿಸಿದ್ದಾರೆ. ಒಂದು ವೇಳೆ ಕೆ. ಎನ್ ರಾಜಣ್ಣ ಗೃಹ ಸಚಿವರಿಗೆ ದೂರು ನೀಡಿದರೆ, ಕೂಡಲೇ ಗದಸುವರು ಈ ಕುರಿತು ಉನ್ನತ ಮಠದ ತನಿಖೆಗೆ ಆದೇಶಿಸುವ ಸಾಧ್ಯತೆ ಇದೆ ಈಗಾಗಲೇ…
ಬೆಂಗಳೂರು : ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯದಲ್ಲಿ ಆರೋಪಿ ನಟಿ ರನ್ಯಾರಾವ್ ಅವರು ಸಲ್ಲಿಸಿದ ಜಾಮೀನು ಅರ್ಜಿ ಕುರಿತು ಇಂದು ವಿಚಾರಣೆ ನಡೆಯಿತು.ವಿಚಾರಣೆ ಬಳಿಕ ಜಡ್ಜ್ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿ, ಮಾರ್ಚ್ 27 ರಂದು ತೀರ್ಪು ಪ್ರಕಟಿಸಲಾಗುತ್ತೆ ಎಂದು ತಿಳಿಸಿದರು. ವಿಚಾರಣೆ ಆರಂಭದಲ್ಲಿ DRI ಪರ ವಕೀಲ ಮಧು ರಾವ್ ಅವರು ವಾದ ಆರಂಭಿಸಿದರು. ಯಾವುದು ಕಾಗ್ನಿಸಬಲ್ ಯಾವುದು ನಾನ್ ಕಾಗ್ನಿಸಬಲ್ ಎಂದು ಕಸ್ಟಮ್ಸ್ ಕಾಯ್ದೆ 135 ರಲ್ಲಿ ಬಹಳ ಸ್ಪಷ್ಟವಾಗಿ ವಿವರಿಸಲಾಗಿದೆ. ಇದು ಕಾಗ್ನಿಸಬಲ್ ಅಪರಾಧವಾಗಿದೆ ಹಾಗೂ ಜಾಮೀನು ರಹಿತವಾಗಿದೆ. ನಟಿ ರನ್ಯಾ ಚಿನ್ನದ ಜೊತೆಗೆ ದುಬೈನಿಂದ ಆಗಮಿಸಿದ್ದಾರೆ.ಬೆಂಗಳೂರು ಏರ್ಪೋರ್ಟ್ಗೆ ಸಂಜೆ 6:30ಕ್ಕೆ ಲ್ಯಾಂಡ್ ಆಗಿದ್ದಾರೆ. ಈ ವೇಳೆ ಪ್ರೋಟೋಕಾಲ್ ಅಧಿಕಾರಿ ಅಲ್ಲಿಗೆ ಹೋಗಿದ್ದಾರೆ. ಅಂದರೆ ರಮ್ಯಾ ರಾನ್ ಗ್ರೀನ್ ಚಾನಲ್ ಮೂಲಕ ಬರುತ್ತಿದ್ದಾರೆ ಎಂದು ಅರ್ಥ ಎಂದು ವಾದಿಸಿದರು. ಕಸ್ಟಮ್ಸ್ ಏರಿಯಾ, ಇಮ್ಮಿಗ್ರೇಶನ್ ಏರಿಯಾ ಎಲ್ಲಾ ಆದಮೇಲೆ DRI…
ಬೆಂಗಳೂರು : ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ಕಿಶನ್ ಇಬ್ಬರನ್ನು ವಶಕ್ಕೆ ಪಡೆದ ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೋಲಿಸರು ಅವರನ್ನು ಸ್ಥಳ ಮಹಜರಿಗಾಗಿ ಕರೆದುಕೊಂಡು ಹೋಗಿದ್ದಾರೆ. ಹೌದು ನಿನ್ನೆ ಬಿಗ್ ಬಾಸ್ ಖ್ಯಾತಿಯ ರಜತ ಹಾಗೂ ವಿನಯ್ ಗೌಡನನ್ನು ಇದೆ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದರು. ಮಧ್ಯರಾತ್ರಿ ಮತ್ತೆ ಬಿಡುಗಡೆ ಮಾಡಿದ್ದರು. ಈ ವೇಳೆ ಅವರು, ರೀಲ್ಸ್ ಮಾಡಿದ್ದ ಲಾಂಗ್ ಬದಲಾಗಿ ಫೈಬರ್ ಮಚ್ಚು ಪೊಲೀಸರಿಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮತ್ತೆ ಬೆಂಗಳೂರಿನ ಬಸವೇಶ್ವರ ಠಾಣೆಗೆ ವಿಚಾರಣೆಗೆ ಹಾಜರಾದ ರಜತ್ ಹಾಗೂ ವಿನಯ್ ಗೌಡನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಬಳಿಕ ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಸ್ಥಳ ಮಹಜರು ಕರೆದುಕೊಂಡು ಹೋಗುವ ಮುನ್ನ ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಇಬ್ಬರು ಬಿಗ್ ಬಾಸ್ ಮಾಜಿ ಸ್ಪರ್ಧಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ನಂತರ ನಾಗರಬಾವಿಯ ಅಕ್ಷಯ…
ಬೆಂಗಳೂರು : ವರ್ಗಾವಣೆಗಾಗಿ ತನ್ನ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಸಬ್ ಇನ್ಸ್ಪೆಕ್ಟರ್ ವಿರುದ್ಧ ಇದೀಗ FIR ದಾಖಲಾಗಿದೆ. ಹೌದು ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಿದ್ದು ಅಲ್ಲದೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ, ಧರ್ಮಸ್ಥಳ ಸಬ್ ಇನ್ಸ್ ಪೆಕ್ಟರ್ ಕಿಶೋರ್ ವಿರುದ್ಧ ಚಂದ್ರಲೇಔಟ್ ಠಾಣೆಯಲ್ಲಿ FIR ದಾಖಲಾಗಿದೆ. ಹಲ್ಲೆ ಮಾಡಿದ ಸಬ್ ಇನ್ಸ್ಪೆಕ್ಟರ್ ನನ್ನು ಕಿಶೋರ್ ಎಂದು ತಿಳಿದು ಬಂದಿದ್ದು ಪತ್ನಿ ವರ್ಷ ಮೇಲೆ ಕಿಶೋರ್ ವರದಕ್ಷಿಣೆ ಸಂಬಂಧ ಕಿರುಕುಳ ನೀಡುತ್ತಿದ್ದ. 2024ರಲ್ಲಿ ಮೂಡಿಗೆರೆ ಸಬ್ ಇನ್ಸ್ ಪೆಕ್ಟರ್ ʼರನ್ನು ವರ್ಷ ಮದುವೆಯಾಗಿದ್ದರು. ವರದಕ್ಷಿಣೆಗಾಗಿ 10 ಲಕ್ಷ ನಗದು,22 ಲಕ್ಷದ ಕ್ರೇಟಾ ಕಾರು,135 ಗ್ರಾಂ ಚಿನ್ನ ನೀಡಿದ್ರು. ಅಲ್ಲದೆ ವರ್ಷ ಪೋಷಕರು ಲಕ್ಷಾಂತರ ರೂ. ಖರ್ಚು ಮಾಡಿ ಚಿನ್ನ ಹಾಕಿ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಇಷ್ಟಾದ್ರು ಮೂಡಿಗೆರೆಯಿಂದ ಟ್ರಾನ್ಸ್ ಫರ್ ಮಾಡಿಸೋಕೆ ಕಿಶೋರ್ 10 ಲಕ್ಷ ಕೇಳಿದ್ದರು. ಹಣ ತರದಿದ್ದಕ್ಕೆ ಹೆಂಡ್ತಿ ವರ್ಷಾಳಿಗೆ ಅವಾಚ್ಯವಾಗಿ ನಿಂದಿಸಿ ಗಂಡ,ಅತ್ತೆ ಮಾವ ಹಾಗೂ ಮೈದುನನಿಂದ ಹಲ್ಲೆ…
ಬೆಂಗಳೂರು : ಜನೆವರಿ ಹಾಗು ಫೆಬ್ರವರಿ ಕಂತಿನ ಗೃಹಲಕ್ಷ್ಮಿ ಹಣಕ್ಕಾಗಿ ರಾಜ್ಯದ ಯಜಮಾನಿಯರು ಕಾಯುತ್ತಿದ್ದು, ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯಜಮಾನಿಯರಿಗೆ ಸಿಹಿಸುದ್ದಿ ನೀಡಿದ್ದು, 17ನೇ ಕಂತಿನ 2 ತಿಂಗಳ ಒಟ್ಟು ಹಣ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ. ಯುಗಾದಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆಯಾಗಲಿದೆ ಅಂತ ಮಹಿಳಾ ಫಲಾನುಭವಿಗಳು ಕಾಯುತ್ತಿದ್ದಾರೆ. ಆದ್ರೆ ಏಪ್ರಿಲ್ ಮೊದಲ ವಾರದಲ್ಲಿ ಹಣ ಮಹಿಳೆಯರಿಗೆ ತಲುಪುವ ನಿರೀಕ್ಷೆ ಇದೆ. ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ತಡವಾದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಹಾಗೂ ರಾಜ್ಯದ ಮಹಿಳೆಯರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಮಾರ್ಚ್ 31ರ ನಂತರ ಎರಡು ತಿಂಗಳ ಹಣವನ್ನು ಒಂದೇ ಸಲಕ್ಕೆ ಹಾಕುವುದಾಗಿ ಹೇಳಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಮಾತಿನಿಂದ ಮಹಿಳೆಯರು ಖುಷ್ ಆಗಿದ್ದಾರೆ.
ಬೆಂಗಳೂರು : ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ಕಿಶನ್ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ನಿನ್ನೆ ಬಿಗ್ ಬಾಸ್ ಖ್ಯಾತಿಯ ರಜತ ಹಾಗೂ ವಿನಯ್ ಗೌಡನನ್ನು ಪೊಲೀಸರು ವಶಕ್ಕೆ ಪಡೆದು ಮಧ್ಯರಾತ್ರಿ ಮತ್ತೆ ಬಿಡುಗಡೆ ಮಾಡಿದ್ದರು. ಈ ವೇಳೆ ಅವರು, ರೀಲ್ಸ್ ಮಾಡಿದ್ದ ಲಾಂಗ್ ಬದಲಾಗಿ ಫೈಬರ್ ಮಚ್ಚು ಪೊಲೀಸರಿಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮತ್ತೆ ಬೆಂಗಳೂರಿನ ಬಸವೇಶ್ವರ ಠಾಣೆಗೆ ವಿಚಾರಣೆಗೆ ಹಾಜರಾದ ರಜತ್ ಹಾಗೂ ವಿನಯ್ ಗೌಡನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಬಳಿಕ ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳ ಮಹಜರು ಕರೆದುಕೊಂಡು ಹೋಗುವ ಮುನ್ನ ಪೊಲೀಸರು ರಜತ ಹಾಗೂ ವಿನಯ್ ಗೌಡನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಇಬ್ಬರು ಬಿಗ್ ಬಾಸ್ ಮಾಜಿ ಸ್ಪರ್ಧಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ಸ್ಥಳ ಮಹಜರುಗಾಗಿ…
ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ಗೃಹ ಸಚಿವರನ್ನು ಹುಡುಕಿಕೊಂಡು ಹೋಗಿ ದೂರು ನೀಡುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಗೃಹ ಸಚಿವ ಪರಮೇಶ್ವರ ಅವರನ್ನು ಭೇಟಿಯಾದ ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಕುರಿತಂತೆ ಸಂಜೆ ಜಿ.ಪರಮೇಶ್ವರ್ ಅವರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ ಬೇಗೂರು ಬಳಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಸಹಕಾರ ಸಚಿವ ರಾಜಣ್ಣ ಭೇಟಿ ಮಾಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದಾಶಿವನಗರದ ಮನೆಗೆ ಸಂಜೆ 4:30ಕ್ಕೆ ಬರಲು ಸಚಿವರು ತಿಳಿಸಿದ್ದಾರೆ. ಸಚಿವರಿಗೆ ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ದೂರಿನ ಪ್ರತಿಯನ್ನು ಕೊಡುತ್ತೇನೆ. ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಬಳಿಕ ನಾನು ಸ್ವಲ್ಪ ಬ್ಯುಸಿಯಾಗಿದ್ದೆ. ಬಿಡುವಿಲ್ಲದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಇನ್ನು ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ಗೃಹ ಸಚಿವರನ್ನು ಹುಡುಕಿಕೊಂಡು ಹೋಗಿ ದೂರು ನೀಡುತ್ತೇನೆ…











