Author: kannadanewsnow05

ಬೆಂಗಳೂರು : ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ. ಸಾವಾಗಿದ್ದು ಇದರ ಬೆನ್ನಲ್ಲೇ, ಇದೀಗ ಮತ್ತೊಂದು ಬಾಣಂತಿಯ ಸಾವಾಗಿದೆ. ಇಂದು ಬೆಳಿಗ್ಗೆ ತಾನೇ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ ಮೃತಪಟ್ಟಿದ್ದಾರೆ. ಆದರೆ ಇದೀಗ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯು ಸಾವನ್ನಪ್ಪಿದ್ದಾಳೆ. ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೌದು ಬೆಂಗಳೂರಿನಲ್ಲಿ ಇದೀಗ ಮತ್ತೊರ್ವ ಬಾಣಂತಿ ಸಾವಾಗಿದೆ.ಕೆ ಸಿ ಜನರಲ್ ಆಸ್ಪತ್ರೆಯ ವೈದ್ಯರ ವಿರುದ್ಧ ಇದೀಗ ನಿರ್ಲಕ್ಷ ಆರೋಪ ಕೇಳಿ ಬಂದಿದೆ. ವೈದ್ಯರ ನಿರ್ಲಕ್ಷವೇ ಬಾಣಂತಿಯ ಸಾವಿಗೆ ಕಾರಣ ಎಂದು ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ನಿನ್ನೆ ಕೇಸಿ ಜನರಲ್ ಆಸ್ಪತ್ರೆಗೆ ವಿನೂತಿ (32) ದಾಖಲಾಗಿದ್ದರು. ನಿನ್ನೆ ಸಂಜೆ ಮಗುವಿಗೆ ವಿನುತಿ ಜನ್ಮ ನೀಡಿದ್ದಾಳೆ.ಬಳಿಕ ವಾಣಿ ವಿಲಾಸ್ ಆಸ್ಪತ್ರೆಗೆ ವಿನುತಿಯನ್ನು ದಾಖಲಿಸಲಾಗಿತ್ತು. ಇಂದು ವಾಣಿವಿಲಾಸ ಆಸ್ಪತ್ರೆಯಲ್ಲಿ ವಿನಂತಿ ಸಾವನ್ನಪ್ಪಿದ್ದಾಳೆ. ಇದಕ್ಕೂ ಮುನ್ನ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ…

Read More

ಬಾಗಲಕೋಟೆ : ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ್ ಅವರ ಕ್ಷೇತ್ರದಲ್ಲಿ ಇದೀಗ ಅಕ್ರಮ ಮದ್ಯ ಮಾರಾಟವನ್ನು ಪ್ರಶ್ನಿಸಿದ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹೌದು ಅಕ್ರಮ ಮದ್ಯ ಮಾರಾಟವನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಕಟ್ಟಿಗೆಯಿಂದ ಹಲ್ಲೆ ಮಾಡಿದ್ದು ಅಲ್ಲದೆ, ವ್ಯಕ್ತಿಗೆ ಕರೆಂಟ್ ಶಾಕ್ ನೀಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಗ್ರಾಮದಲ್ಲಿ ನಡೆದಿದೆ. ಹೌದು ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದಕ್ಕೆ ಭೀಕರ ಕೊಲೆಯಾಗಿದ್ದು, ಈ ಒಂದು ಕೊಲೆ ಪ್ರಕರಣದಲ್ಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯ ಪೊಲೀಸರು, ಹನುಮಂತ ನೀಲರ್, ಪತ್ನಿ ಶೈಲ ನೀಲರ್, ಪರ್ವತಗೌಡ ಮುದಿಗೌಡ್ರ, ಪುಟ್ಟಪ್ಪ ಮುದಿಗೌಡ್ರ ಹಾಗೂ ಸಿದ್ದಪ್ಪ ನೀಲಗೌಡ್ರ ಎಂಬ ಆರೋಪಿಗಳನ್ನ ಕೆರೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರೆಡ್ಡಿರತಿಮ್ಮಾಪುರದಲ್ಲಿ ವೆಂಕರೆಡ್ಡಿ ಶೇಷಪ್ಪನವರ ಮೇಲೆ ಹಲ್ಲೆ ಮಾಡಿದ್ದರು ವೆಂಕರೆಡ್ಡಿ (40) ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದು ಅಲ್ಲದೇ, ಕರೆಂಟ್…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ತಾಯೊಬ್ಬಳು ತನ್ನ ಮಗುವನ್ನು ಶಾಲಾ ಬಸ್ ಹತ್ತಿಸುವ ಸಂದರ್ಭದಲ್ಲಿ ವಿದ್ಯುತ್ ತಂತಿ ತುಳಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ನಗರದ ಮೋಹನ್ ಲಾಡ್ಜ್ ಎದುರುಗಡೆ ನಡೆದಿದೆ. ಹೌದು ಶಾಲಾ ಬಸ್ ಹತ್ತಿಸುತ್ತಿರುವಾಗಲೇ ತಾಯಿ ವಿದ್ಯುತ್ ತಂತಿ ತುಳಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿದ್ಯುತ್ ಶಾಕ್ ನಿಂದ ಗಂಭೀರವಾಗಿ ಭಾಗ್ಯಶ್ರೀ ಗಾಯಗೊಂಡಿದ್ದಾರೆ. ಸ್ವಲ್ಪ ಹೆಚ್ಚು ಕಮ್ಮಿ ಆಗಿದ್ದರೂ ಕೂಡ ಘೋರ ದುರಂತ ಒಂದು ನಡೆದು ಹೋಗುತ್ತಿತ್ತು. ಅಕಸ್ಮಾತ್ ಬಸ್ ಗೆ ವಿದ್ಯುತ್ ತಾಗಿದ್ದರೆ, ಭಾರಿ ಅನಾಹುತ ನಡೆಯುತ್ತಿತ್ತು. ಶಾಲಾ ಬಸ್ ನಲ್ಲಿ ಹತ್ತಾರು ಬುದ್ಧಿಮಾಂದ್ಯ ಮಕ್ಕಳು ಇದ್ದರು. ತನ್ನ ಮಗುವನ್ನು ಶಾಲಾ ಬಸ್ ಗೆ ಹತ್ತಿಸಲು ಭಾಗ್ಯಶ್ರೀ ಬಂದಿದ್ದಾರೆ. ಮಗುವನ್ನು ಶಾಲೆಗೆ ಬಿಡಲು ಬಂದಿದ್ದ ತಾಯಿ ಭಾಗ್ಯಶ್ರೀ ವಿದ್ಯುತ್ ತಂತಿ ತುಳಿದಿದ್ದಾಳೆ. ಕೂಡಲೇ ಭಾಗ್ಯಶ್ರೀ ಮಗುವನ್ನು ಎತ್ತಿ ಪಕ್ಕಕ್ಕೆ ಎಸೆದಿದ್ದು ತಾನು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕೂಡಲೇ ಸ್ಥಳೀಯರು ಬಡಿಗೆಯಿಂದ…

Read More

ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ರಹೀಂ ಖಾನ್​, ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ ಮತ್ತು ಶಾಸಕರು ಸಾಥ್ ನೀಡಿದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಕಲಬುರಗಿಯಲ್ಲಿ‌ ರೂ.377 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಆಸ್ಪತ್ರೆಯನ್ನು ನಾಳೆ ಉದ್ಘಾಟಿಸುತ್ತಿದ್ದೇನೆ. ಹೈದರಾಬಾದ್ – ಕರ್ನಾಟಕ ವಿಶೇಷ ಪ್ರಾತಿನಿಧ್ಯ 371J ದೊರೆತು ದಶಕ ಪೂರೈಸಿದ ನೆನಪಿಗಾಗಿ 7 ಐಸಿಯು ಕೊಠಡಿ, 4 ಜನರಲ್ ವಾರ್ಡ್, 13 ಸೆಮಿ ಸ್ಪೆಷಲ್ ವಾರ್ಡ್‌ಗಳನ್ನು ಒಳಗೊಂಡ 371 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ.ಇದು ರಾಜ್ಯದ ಮೂರನೇ ಸರ್ಕಾರಿ ಹೃದ್ರೋಗ ಆಸ್ಪತ್ರೆಯಾಗಿ…

Read More

ಶಿವಮೊಗ್ಗ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಪತ್ನಿಯ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ ಮುಖ್ಯ ರಸ್ತೆ 5ನೇ ಕ್ರಾಸ್ ಮನೆಯಲ್ಲಿ ನಡೆದಿದೆ. ಇನ್ನು ಕೊಲೆಯಾದ ಪತ್ನಿಯನ್ನು ರುಕ್ಸನ (38) ಎಂದು ತಿಳಿದುಬಂದಿದೆ. ಪತ್ನಿಯನ್ನು ಹತ್ಯೆಗೈದ ಪತಿಯನ್ನು ಯೂಸುಫ್ ಎಂದು ಗುರುತಿಸಲಾಗಿದೆ.ಕಳೆದ 12 ವರ್ಷಗಳ ಹಿಂದೆ ಯೂಸುಫ್ ರುಕ್ಸನಳನ್ನು ಮದುವೆಯಾಗಿದ್ದ. ದಂಪತಿಗಳಿಗೆ ಮೂವರು ಮಕ್ಕಳು ಸಹ ಇದ್ದರು. ಆದರೆ ಸಂಸಾರದಲ್ಲಿ ಕಲಹದಿಂದ ಆಗಾಗ ಜಗಳ ನಸೆಯುತ್ತಿತ್ತು. ನಿನ್ನೆ ಕೂಡ ಇದೆ ಕೌಟುಂಬಿಕ ಕಲಹಕ್ಕೆ ಗಲಾಟೆ ನಡೆದು ಯೂಸುಫ್ ರುಕ್ಸನಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ. ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ತುಂಗಾ ನಗರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಹುಬ್ಬಳ್ಳಿ : ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಆಕ್ಷೇಪಾರ್ಹ ಪದ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಎಂಎಲ್ಸಿ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಮೂರು ಜಿಲ್ಲೆಗಳನ್ನು ಸುತ್ತಾಡಿಸಿಕೊಂಡು ಬಂದಿದ್ದಾರೆ. ಈ ಸಂದರ್ಭದಲ್ಲಿ ಸಿಟಿ ರವಿ ಅವರನ್ನು ಫೇಕ್ ಎನ್ಕೌಂಟರ್ ಮೂಲಕ ಮುಗಿಸುವ ಉದ್ದೇಶ ಪೊಲೀಸರು ಹೊಂದಿದ್ದರೋ ಏನೋ ಎಂದು ಕೇಂದ್ರ ಸಚಿವ ಪ್ರವಾಹ ಜೋಶಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಫೇಕ್ ಎನ್ಕೌಂಟರ್ ಮಾಡುವ ಉದ್ದೇಶ ಇತ್ತು. ನಾನು ನಿನ್ನೆಯೂ ಹೇಳಿದೆ ಇವತ್ತು ಕೂಡ ಹೇಳುತ್ತೇನೆ. ಯಾವ ಉದ್ದೇಶ ಇರದಿದ್ದರೆ ಕಬ್ಬಿನ ಗದ್ದೆಗೆ ಯಾಕೆ ಕರೆದುಕೊಂಡು ಹೋದರು? ಮಾಧ್ಯಮದವರು ಇರದೆ ಹೋಗಿದ್ದರೆ ಏನು ಆಗುತ್ತಿತ್ತೋ ಏನೋ ಸಿಟಿ ರವಿ ಕೂಡ ಕೊಲ್ಲುವ ಸಂಚು ಇತ್ತು ಎಂದು ಹೇಳಿಕೆ ನೀಡಿದ್ದಾರೆ. ಸಿಟಿ ರವಿ ಹೇಳಿಕೆಯ ಆಧಾರದ ಮೇಲೆ ನಾನು ಮಾತನಾಡಿದ್ದೇನೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಅವಕಾಶ ಸಿಕ್ಕರೆ ಸಿಟಿ ರವಿ ಮಗಿಸಬೇಕು ಎಂಬ ಉದ್ದೇಶವಿತ್ತು.…

Read More

ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಕೆ ಮಾಡಿದ್ದರ ಕುರಿತಂತೆ ಬಿಜೆಪಿಯ ಎಂಎಲ್ಸಿ ಸಿಟಿ ರವಿಯ ವಿರುದ್ಧ ಕಾಂಗ್ರೆಸ್ಸಿನ ಮಾಜಿ ಸಂಸದ ಡಿಕೆ ಸುರೇಶ್ ವಾಗ್ದಾಳಿ ನಡೆಸಿದ್ದು, ಎಂಎಲ್ಸಿ ಸಿಟಿ ರವಿ ಕೂಡ ತಾಯಿಯ ಗರ್ಭದಿಂದಲೇ ಹುಟ್ಟಿದ್ದಾರೆ ಅವರೇನು ಕರಣನ ರೀತಿ ಬೇರೆ ಇನ್ಯಾವುದೋ ರೀತಿಯಲ್ಲಿ ಹುಟ್ಟಿದ್ದಾರೋ ಏನೋ ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂಎಲ್ಸಿ ಸಿಟಿ ರವಿಗೆ ಬೆಂಬಲ ಕೊಡುವುದು ಎಷ್ಟು ಸರಿ? ಸಿಟಿ ರವಿ ಏನೇನೋ ಹೇಳುತ್ತಾರೆ ಅವರು ಕ್ಷಮೆ ಕೇಳಬೇಕಿತ್ತು. ಅವರ ಮನೆಯಲ್ಲಿಯೂ ತಾಯಿ ಇದ್ದಾರೆ, ಮಕ್ಕಳಿದ್ದಾರೆ. ಎಂಎಲ್ಸಿ ಸಿಟಿ ರವಿ ಕೂಡ ತಾಯಿ ಗರ್ಭದಿಂದಲೇ ಬಂದಿದ್ದಾರೆ. ಬೇರೆ ಯಾವ ರೀತಿ ಹುಟ್ಟಿ ಬಂದಿದ್ದಾರಾ? ಎಂದು ಅವರ ವಿರುದ್ಧ ಡಿಕೆ ಸುರೇಶ್ ಆಕ್ರೋಶ ಹೊರಹಾಕಿದರು. ಮೌಲ್ಯಗಳು ಕುಸಿತ ಆಗುತ್ತಿವೆ. ಓಲೈಕೆ ರಾಜಕಾರಣ ಹೆಚ್ಚಾಗುತ್ತಿದೆ. ಸಿಟಿ ರವಿ ಕರ್ಣನ ರೀತಿ ಬೇರೆ ಹೇಗೋ ಹುಟ್ಟಿದ್ದಾರೋ ಏನೋ? ಮೋದಿ ಅವರು ದೈವಾಂಶ…

Read More

ಕಲಬುರ್ಗಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅವಾಚ್ಯ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಲ್ಬುರ್ಗಿಯಲ್ಲಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು, ಸಿಟಿ ರವಿ ಅವರು ಅವಾಚ್ಯ ಪದ ಬಳಸಿದ್ದ ಆಡಿಯೋ ಹಾಗೂ ವಿಡಿಯೋ ರೆಕಾರ್ಡ್ ಇದೆ ಎಂದು ತಿಳಿಸಿದರು. ಇಂದು ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಪದ ಬಳಸಿದ್ದ ಸಾಕ್ಷಿಯೇ ಇದೆ. ಆಡಿಯೋ ವಿಡಿಯೋ ಕೂಡ ರೆಕಾರ್ಡ್ ಆಗಿದೆ. ಸಿಟಿ ರವಿ ಪದ ಬಳಕೆ ಅತ್ಯಂತ ಖಂಡನೀಯವಾಗಿದೆ ಎಂದು ಕಲ್ಬುರ್ಗಿಯಲ್ಲಿ ಸಿಎಂ ಸಿದ್ದರಾಮಯ್ಯ ಈ ಕುರಿತು ಹೇಳಿಕೆ ನೀಡಿದರು. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಸಿಟಿ ರವಿ ಹೇಳುತ್ತಾರೆ. ಆದರೆ ಅಂದು ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲವಾಗಿ ಪದ ಬಳಸಿ ನಿಂದಿಸಿದ್ದನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಎರಡು ಸದಸ್ಯರು ಕೂಡ ಕೇಳಿಸಿಕೊಂಡಿದ್ದಾರೆ. ಈ ಕುರಿತು ಸಾಕ್ಷಿ ಕೂಡ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Read More

ಶಿವಮೊಗ್ಗ : ಹಾಜರಾತಿ ಕೊರತೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗೆ ಪರೀಕ್ಷೆಗೆ ಕೂರಿಸದ ಉಪನ್ಯಾಸಕನ ಮೇಲೆ ವಿದ್ಯಾರ್ಥಿಯ ಪೋಷಕರಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.ಇತಿಹಾಸದ ಉಪನ್ಯಾಸಕ ರಾಜು ಮೇಲೆ ವಿದ್ಯಾರ್ಥಿ ನಿಶ್ಚಿತ ಕುಮಾರ್ ಹಾಗೂ ಆತನ ಪೋಷಕರು ಹಲ್ಲೆ ಮಾಡಿದ್ದ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಇತಿಹಾಸ ಉಪನ್ಯಾಸಕ ರಾಜು ಮೇಲೆ ವಿದ್ಯಾರ್ಥಿ ನಿಶ್ಚಯ ಕುಮಾರ್ ವಿದ್ಯಾರ್ಥಿಯ ತಂದೆ ವಿಜಯಕುಮಾರ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದಂತಹ ರಾಜುವಿಗೆ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ವಿದ್ಯಾರ್ಥಿಯ ಮೇಲೆ ಉಪನ್ಯಾಸಕ ಸಹ ಅಲ್ಲೇ ನಡೆಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ ಈ ಕುರಿತಂತೆ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿ ದೂರು ದಾಖಲಾಗಿದೆ.

Read More

ಚಿಕ್ಕಮಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅವಾಚ್ಯ ಪದಗಳಿಂದ ನಿಂದಿಸಿ ಬೈದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಬಂಧನಕ್ಕೆ ಒಳಗಾಗಿದ್ದರು. ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಬಿಡುಗಡೆಯಾಗಿ ಚಿಕ್ಕಮಂಗಳೂರಿಗೆ ತೆರಳಿದ್ದರು. ಈ ವೇಳೆ ಎಂಎಲ್ಸಿ ಸಿಟಿ ರವಿ ಸ್ವಾಗತ ಮೆರವಣಿಗೆ ವೇಳೆ ಆಂಬುಲೆನ್ಸ್ ಬಳಕೆ ಮಾಡಿದ್ದು, 7 ಆಂಬುಲೆನ್ಸ್ ಗಳಲ್ಲಿ ಸೈರನ್, ಲೈಟ್ ಹಾಕಿ ಮೆರವಣಿಗೆ ಮಾಡಲಾಗಿದೆ ಎಂದು ಆರೋಪಿಸಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಆಂಬುಲೆನ್ಸ್ ಮಾಲೀಕ ಹಾಗೂ ಚಾಲಕರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಹೌದು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆಂಬುಲೆನ್ಸ್ ಮಾಲೀಕ ಹಾಗೂ ಚಾಲಕರ ವಿರುದ್ಧ ಇದೀಗ ಸೋಮೊಟೊ ಕೇಸ್ ದಾಖಲಾಗಿದೆ. ಸಾರ್ವಜನಿಕರ ಶಾಂತಿಭಂಗ ಆರೋಪದ ಅಡಿ ಇದೀಗ ಎಫ್ಐಆರ್ ದಾಖಲಾಗಿದೆ. ಜೈಲಿನಿಂದ ಬಿಡುಗಡೆಯಾಗಿ ಎಂಎಲ್ಸಿ ಸಿಟಿ ರವಿ ಚಿಕ್ಕಮಂಗಳೂರಿಗೆ ಬಂದಿದ್ದರು.ಮೆರವಣಿಗೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಭಾಗಿಯಾಗಿದ್ದರು.

Read More