Author: kannadanewsnow05

ಮಂಡ್ಯ : ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಜೆಡಿಎಸ್ ಜಂಟಿಯಾಗಿ ಲೋಕಸಭಾ ಚುನಾವಣೆ ಎದುರಿಸುತ್ತಿದ್ದು ಕಾಂಗ್ರೆಸ್ ಕೂಡ ಭರ್ಜರಿ ತಯಾರಿ ಮಾಡಿಕೊಂಡಿದೆ. ಇದರ ಬೆನ್ನಲ್ಲೇ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಕಂಡ ಸಂಸದ ಸುಮಲತಾ ಅಂಬರೀಶ್ ಬಹಿರಂಗವಾಗಿ ಬಿಜೆಪಿಗೆ ಬೆಂಬಲ ಸೂಚಿಸಿದ್ದರು. ಇದೀಗ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹಿನ್ನೆಲೆ ಆ ಒಂದು ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಗೆ ಲೋಕಸಭಾ ಟಿಕೆಟ್ ನೀಡಬೇಕೆನ್ನುವುದು ಗೊಂದಲಮಯವಾಗಿದೆ. ಇನ್ನು ಇದೇ ವಿಚಾರವಾಗಿ ಮಾಧ್ಯಮದೊಂದಿಗೆ ಸಂಸದ ಅಂಬರೀಶ್ ಮಾತನಾಡಿದ್ದು, ಬಿಜೆಪಿಯಿಂದ ಮಂಡ್ಯ ಬಿಟ್ಟು ಬೇರೆ ಕೊಟ್ಟರೆ ನನಗೆ ಆಸಕ್ತಿ ಇಲ್ಲ. ನನಗೆ ಮಂಡ್ಯದ ಸೇವೆ ಮಾಡಬೇಕು ಎಂಬ ಹಂಬಲ ಇನ್ನೂ ಇದೆ.ಮೋದಿ ಕೆಲಸಗಳನ್ನು ನೋಡಿ ನಾನು ಬಿಜೆಪಿಗೆ ಬೆಂಬಲ ಕೊಟ್ಟಿದ್ದೇನೆ. ಬಿಜೆಪಿಗೆ ನನ್ನ ಬೆಂಬಲ ಈಗಲೂ ಇದೆ ಎಂದು ಅವರು ತಿಳಿಸಿದರು. ಬಿಜೆಪಿ ಜೆಡಿಎಸ್ ಮೈತ್ರಿ ಆದ ಮೇಲೆ ಯಾರ ಜೊತೆಯೂ ಚರ್ಚಿಸಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ…

Read More

ಬೆಳಗಾವಿ : ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಕೈಕೊಟ್ಟು ಬಿಜೆಪಿಗೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆನ್ನಲ್ಲೇ ಇದೀಗ ಶಾಸಕ ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ವಿಚಾರವಾಗಿ ಬೆಳಗಾವಿಯಲ್ಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಮಾತನಾಡಿ ಈ ವಿಷಯದ ಕುರಿತಾಗಿ ರಾಜ್ಯಾಧ್ಯಕ್ಷರು ಲಕ್ಷ್ಮಣ ಸವದಿ ಅವರನ್ನು ಪಕ್ಷಕ್ಕೆ ಕರೆತರಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಈ ವಿಷಯದ ಕುರಿತಾಗಿ ಮಾತನಾಡಿದ ಅವರು, ಸವದಿಯನ್ನು ಕರೆದುಕೊಂಡು ಬರುವ ಜವಾಬ್ದಾರಿ ಎಲ್ಲರ ಹೆಗಲ ಮೇಲಿದೆ. ನಾನು ಕಡಾಡಿ ರಮೇಶ್ ಕತ್ತಿ ಸೇರಿ ಜಿಲ್ಲೆಯ ನಾಯಕರ ಹೆಗಲ ಮೇಲೆ ಜವಾಬ್ದಾರಿ ಇದೆ ಕೇಂದ್ರ ಹಾಗೂ ರಾಜ್ಯದ ನಾಯಕರು ಮುಂದೆ ಅದನ್ನು ನೋಡಿಕೊಳ್ಳುತ್ತಾರೆ. ಶಾಸಕ ಲಕ್ಷ್ಮಣ ಸವದಿ ಬಿಜೆಪಿಗೆ ಬರಲು ಅನ್ನುವುದು ನಮ್ಮ ಆಶಯವಾಗಿದೆ ಲಕ್ಷ್ಮಣ ಸವದಿ ಪಕ್ಷಕ್ಕೆ ಬಂದರೆ ಬೆಳಗಾವಿ ಜಿಲ್ಲೆಗೆ ಅನುಕೂಲವಾಗುತ್ತದೆ ನಮ್ಮ ಪಕ್ಷದಿಂದ ಹೊರಹೋದವರಿಗೆ ನಾವು ಆಹ್ವಾನವನ್ನು ಕೊಟ್ಟಿದ್ದೇವೆ ಅದೇ ರೀತಿ ಲಕ್ಷ್ಮಣ ಸವದಿಗೆ ಕೂಡ ನಾವು ಕೂಡ ಆಹ್ವಾನ ಕೊಟ್ಟಿದ್ದೇವೆ.…

Read More

ಬೆಂಗಳೂರು : ಮಂಡ್ಯ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಾದಯಾತ್ರೆ ಮಾಡುವ ಮೂಲಕ ಪ್ರತಿಭಟನೆ ಕೈಗೊಂಡಿದ್ದರು ಈ ವೇಳೆ ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದರು ಇದಕ್ಕೆ ಶಂಸಿದ್ರಾಮಯ್ಯ ಕೂಡ ಕುಮಾರಸ್ವಾಮಿ ಅವರು ಹೇಳಿಕೆಗೆ ತಿರುಗೇಟನ್ನು ನೀಡಿದ್ದರು. ಇದೀಗ ಸರಣಿ ಟ್ವೀಟ್ ಗಳ ಮುಖಾಂತರ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಹರಿ ಹಾಯ್ದಿದೆ. ಗೊಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ. ಈ ದೇಶದಲ್ಲಿ ಯಾವುದಾದರೂ ಛದ್ಮವೇಷದಾರಿ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ. HD ಕುಮಾರಸ್ವಾಮಿ ಅವರು ಹಾಗಲ್ಲ. ಏನಾದರೂ ಹೇಳಬೇಕೆಂದರೆ ನೇರ, ದಿಟ್ಟ, ನಿಷ್ಠುರ. ಏನೇ ಬಂದರೂ ಎದುರಿಸುವ ಕೆಚ್ಚು ಅವರದ್ದು, ಪಲಾಯನ ಮಾಡುವ ಪೈಕಿ ಅವರಲ್ಲ. RSS ಬಗ್ಗೆ ಕುಮಾರಸ್ವಾಮಿ ಅವರು ಹಿಂದೆ ಮಾತನಾಡಿದ್ದಾರೆ, ಬರೆದಿದ್ದಾರೆ.. ನಿಜ. ಟೀಕೆ ಮಾಡಿದ್ದಾರೆನ್ನುವುದೂ ಹೌದು. ಹಾಗೆಯೇ, ಶ್ರೀ ಕಲ್ಲಡ್ಕ ಪ್ರಭಾಕರ ಭಟ್ಟರು ನಡೆಸುತ್ತಿರುವ ಶ್ರೀರಾಮ…

Read More

ಮಂಡ್ಯ : ಮಂಡ್ಯದಲ್ಲಿ ಇಂದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ ಹಮ್ಮಿಕೊಂಡಿದ್ದು, ಇಂದು ಬೆಳಗ್ಗೆ 10:30 ಕ್ಕೆ ಸಕ್ಕರೆ ಕಾರ್ಖಾನೆ ಮೈದಾನದಲ್ಲಿ ಈ ಸಮಾವೇಶ ನಡೆಯಲಿದೆ. ಮಂಡ್ಯ ಕಾಂಗ್ರೆಸ್ ಶಾಸಕ ರವಿ ಗಣಿಗ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್ ಚೆಲುವರಾಯ ಸ್ವಾಮಿ ಸೇರಿದಂತೆ ಪಕ್ಷದ ಅನೇಕ ಮುಖಂಡರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.ಸುಮಾರು ಹತ್ತು ಸಾವಿರ ಜನರನ್ನು ಸೇರಿಸಿ ಕಾರ್ಯಕ್ರಮ ಮಾಡಲು ಯೋಜನೆ ರೂಪಿಸಿಕೊಳ್ಳಲಾಗಿದೆ. ಇನ್ನು ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮದ್ವಜ ತೆರವು ಖಂಡಿಸಿ ನಿನ್ನೆ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಕೈಗೊಂಡಿದ್ದು ಮಾಜಿ ಸಚಿವ ಸಿಟಿ ರವಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಕೂಡ ಈ ಒಂದು ಪಾದಯಾತ್ರೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇಂದು ಕಾಂಗ್ರೆಸ್ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ ಆಯೋಜನೆ ಮಾಡಿದ್ದು ಈ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ…

Read More

ಬೆಂಗಳೂರು : ಯಾವುದೇ ಒಂದು ಕೊಲೆ ಯತ್ನ ಅಥವಾ ಕೊಲೆ ನಡೆಯಬೇಕಾದರೆ ಗಂಭೀರವಾದಂತಹ ಕಾರಣಗಳು ಇರುತ್ತವೆ ಹಾಗಾಗಿ ಕೊಲೆಗಳು ನಡೆಯುತ್ತವೆ ಆದರೆ ಇಲ್ಲಿ ಕೇವಲ ಗುರಾಯಿಸಿ ನಿಂದಿಸಿದಕ್ಕೆ ಪ್ರತಿಯೊಬ್ಬ ಇನ್ನೊಬ್ಬ ವ್ಯಕ್ತಿಗೆ ಚಾಕು ಇರಿದು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಟಿಬೇಗೂರು ಎಂಬಲ್ಲಿ ನಡೆದಿದೆ. ಗುರಾಯಿಸಿ ನಿಂದಿಸಿದ ಆರೋಪ ಹಿನ್ನೆಲೆಯಲ್ಲಿ ಯುವಕನಿಗೆ ಚಾಕು ಇರಿದಿರುವ ಘಟನೆ ನೆಲಮಂಗಲ ತಾಲೂಕಿನ ಟಿ ಬೇಗೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮಂಜುನಾಥ್ ಎಂಬಾತನಿಂದ ಅಶ್ವತ್ ಕುಮಾರ್ ಗೆ ಚಾಕು ಇರಿತ ಘಟನೆ ನಡೆದಿದ್ದು ಸಿದ್ದಾರ್ಥ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಗಾಯಾಳು ಅಶ್ವಥಗೆ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಕಂಪನಿಯಲ್ಲಿ ಅಶ್ವತ್ ಕುಮಾರ್ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದ್ದು ಡಿಯೋ ಬೈಕ್ನಲ್ಲಿ ಬಂದು ಮಂಜುನಾಥ್ ಈ ಕೃತ್ಯ ಎಸೆಗೆ ಪರಾರಿಯಾಗಿದ್ದಾನೆ ಹಲ್ಲೆ ಮಾಡಿದ ಆರೋಪಿ ಮಂಜುನಾಥ್ ಗಾಗಿ ಇದೀಗ ಪೊಲೀಸ್ ಸರು ಬಲೆ ಬೀಸಿದ್ದಾರೆ. ನೆಲಮಂಗಲ ಗ್ರಾಮ ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮುಗ್ತಿಹಳ್ಳಿಯಲ್ಲಿರುವ ಆಂಬರ್ ವ್ಯಾಲಿ ವಸತಿ ಶಾಲೆಯಲ್ಲಿ ಸುಮಾರು 30 ಕಾಡಾನೆಗಳು ನಿನ್ನೆ  ಬೀಡು ಬಿಟ್ಟಿದ್ದವು. ಆದರೆ ಅರಣ್ಯ ಸಿಬ್ಬಂದಿಗಳು ಪಟಾಕಿ ಸಿಡಿಸಿದ್ದರಿಂದ ಆಂಬರ್ ವ್ಯಾಲಿ ಶಾಲಾ ಅವರಣದಿಂದ ಸುಮಾರು 30 ಕಾಡಾನೆಗಳು ಹೊರಬಂದಿವೆ. ಶಾಲೆಯ ಆವರಣದಲ್ಲಿ ಬಿಡು ಬಿಟ್ಟಿದ್ದ 30 ಕಾಡಾನೆಗಳನ್ನು ಸಿಬ್ಬಂದಿಗಳು ಓಡಿಸಿದ್ದಾರೆ. ಚಿಕ್ಕಮಗಳೂರಿನ ಹೊರವಲಯದಲ್ಲಿರುವ ಆಂಬರ್ ವ್ಯಾಲಿ ಶಾಲೆಯಲ್ಲಿ 30 ಕಾಡನೆಗಳು ಬೀಳ್ಬಿಟ್ಟಿದ್ದೆವು. ಸಿಬ್ಬಂದಿಗಳು ಈ ವೇಳೆ ಪಟಾಕಿ ಸಿಡಿಸಿದ್ದಾರೆ. ಕಾಡಾನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಓಡಿಸಿದರೆ ಕತ್ರಿಮಿದ್ರಿ ಗ್ರಾಮ ಸೇರಿದಂತೆ 9 ಗ್ರಾಮದ ಜನರಲ್ಲಿ ಆತಂಕ ಮೂಡಿಸಿತ್ತು ಜನತೆಗೆ ಮನೆಯಿಂದ ಹೊರಬರದಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಮುಗ್ತಿಹಳ್ಳಿಯಲ್ಲಿರುವ ಆಂಬರ್ ವ್ಯಾಲಿ ವಸತಿ ಶಾಲೆಯಲ್ಲಿ ಸುಮಾರು 27 ಕಾಡಾನೆಗಳು ಆಗಮಿಸಿ ಬಿಡು ಬಿಟ್ಟಿರುವ ಹಿನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿತ್ತು.ಚಿಕ್ಕಮಗಳೂರು ತಾಲೂಕಿನ ಮುಗ್ತಿಹಳ್ಳಿ ಬಳಿ ಇರುವ ವಸತಿ ಶಾಲೆಯೊಳಗೆ ಸುಮಾರು 25ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿರುವ…

Read More

ಮೈಸೂರು : ನಂಜನಗೂಡಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಕೆ ಕುರಿತಂತೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಹಲ್ಲರೆ ಗ್ರಾಮದಿಂದ ಹುರ ಕಡೆಗೆ ತೆರಳುವ ರಸ್ತೆಗೆ ಹೆಸರಿಡುವ ಸಂಬಂಧ ಸುದ್ದಿ ತಿಳಿದು ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಆಗಮಿಸಿದ ಪೊಲೀಸರ ಮೇಲೂ ಕಲ್ಲು ತೂರಾಟವಾಗಿದೆ. ಈ ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 30ಕ್ಕೂ ಹೆಚ್ಚು ವಾಹನಗಳು ಜಖಂ ಆಗಿವೆ. ಗಾಯಗೊಂಡವರಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಕೂಡ ಸೇರಿದ್ದಾರೆ. ಗ್ರಾಮದ ನಿವಾಸಿಗಳಾದ ನಂಜುಂಡಸ್ವಾಮಿ, ಶಂಕರಮ್ಮ, ಸುರೇಶ್‌, ಶಂಕರ, ಮನೋಜ್‌, ಮಹದೇವಸ್ವಾಮಿ, ನಂಜುಂಡಸ್ವಾಮಿ, ಸಾಗರ್‌, ಪುನೀತ್‌ ಕುಮಾರ್‌, ರಾಮು ಹಾಗೂ ಮಹದೇವ ಪ್ರಸಾದ್‌ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದರೊಂದಿಗೆ ಮನೆ ಮುಂದೆ ನಿಂತಿದ್ದ 30ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಜಖಂಗೊಂಡಿದ್ದು, ಗ್ರಾಮದಲ್ಲಿಬಿಗುವಿನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಹಲ್ಲರೆ ಗ್ರಾಮದಿಂದ ಹುರ ಕಡೆಗೆ ತೆರಳುವ ರಸ್ತೆಗೆ ಹೆಸರಿಡುವ ಸಂಬಂಧ ಒಂದು ಗುಂಪಿನ ಕೆಲ ಯುವಕರು ಸ್ಥಳೀಯ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ಪಿಡಿಒ ಅವರಿಂದ…

Read More

ಬೆಂಗಳೂರು : ಬೆಂಗಳೂರು ನಗರಕ್ಕೆ ಹೊಸ ರೂಪ ತರಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಹಲವು ತೀರ್ಮಾನಗಳನ್ನು ಬಿಬಿಎಂಪಿ ಸಭೆಯಲ್ಲಿ ಡಿಕೆ ಶಿವಕುಮಾರ್‌ ಕೈಗೊಂಡಿದ್ದಾರೆ. ಬಿಬಿಎಂಪಿಯ 2024-25ನೇ ಸಾಲಿನ ಆಯವ್ಯಯಕ್ಕೆ ಸಂಬಂಧಿಸಿದಂತೆ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್‌ ಹಾಗೂ ರಾಜ್ಯಸಭಾ ಸದಸ್ಯರೊಂದಿಗೆ ಸೋಮವಾರ ವಿಕಾಸಸೌಧದಲ್ಲಿಸಭೆ ನಡೆಸಿ ಸಲಹೆ, ಸೂಚನೆಗಳನ್ನು ಪಡೆದರು. ನಗರದ ಕೆಲ ಬಡಾವಣೆಗಳು ಯೋಜಿತವಾಗಿ ನಿರ್ಮಾಣಗೊಂಡಿದ್ದು, ಉಳಿದ ಪ್ರದೇಶಗಳು ಯೋಜಿತವಾಗಿ ಬೆಳೆದಿಲ್ಲ. ಹೀಗಾಗಿ, ಬೆಂಗಳೂರಿಗೆ ಹೊಸ ರೂಪ ನೀಡಲು ಸರ್ಕಾರ ಮುಂದಾಗಿದೆ. ನಗರದಲ್ಲಿ ಸಂಚಾರ ದಟ್ಟಣೆ, ಕುಡಿಯುವ ನೀರು, ತ್ಯಾಜ್ಯ ವಿಲೇವಾರಿ ಸಮಸ್ಯೆಗಳಿವೆ. 2013 ರಿಂದ ಕುಡಿಯುವ ನೀರಿನ ದರ ಹೆಚ್ಚಳ ಮಾಡಿಲ್ಲ. ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ ಸಮರ್ಪಕವಾಗಿ ತೆರಿಗೆ ಪಾವತಿಯಾಗುತ್ತಿಲ್ಲ. ಶೇ 50ರಷ್ಟು ಮಂದಿ ತಮ್ಮ ಆಸ್ತಿ ವಿಸ್ತೀರ್ಣಕ್ಕೆ ಅನುಗುಣವಾಗಿ ತೆರಿಗೆ ಪಾವತಿಸದಿರುವುದು ಸಮೀಕ್ಷೆಯಿಂದ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿಆಸ್ತಿ ದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. 2020ರಲ್ಲಿ ಬಿಬಿಎಂಪಿ ಕಾಯಿದೆಗೆ…

Read More

ಬೆಂಗಳೂರು : ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ರೈತರ ಕೊಬ್ಬರಿಗೆ ಬೆಂಬಲ ಬೆಲೆ ಒದಗಿಸಲು ಕೇಂದ್ರ ಸರ್ಕಾರ ರೂಪಿಸಿರುವ ಮಾರ್ಗಸೂಚಿ ಅನ್ವಯ ಪ್ರತಿ ಕ್ವಿಂಟಲ್‌ ಕೊಬ್ಬರಿಗೆ ಕೇಂದ್ರದ 12,000 ರು. ಜತೆಗೆ ರಾಜ್ಯದಿಂದ 1,500 &. 93.73 ಕೋಟಿ ರು. ಬಿಡುಗಡೆ ಮಾಡಿ ಸಹಕಾರ ಇಲಾಖೆ ಆದೇಶ ಹೊರಡಿಸಿದೆ. ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ ಮತ್ತು ರಾಮ ನಗರ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕ್ವಿಂಟಲ್ ಕೊಬ್ಬರಿಗೆ ಕೇಂದ್ರದ 12,000 ರು. ಬೆಂಬಲ ಬೆಲೆ ಜತೆಗೆ ರಾಜ್ಯ ಸರ್ಕಾರದಿಂದ 2022-23ರಲ್ಲಿ ಘೋಷಿಸಿದ್ದ 1,250 ರು. ಜತೆಗೆ ಪ್ರಸಕ್ತ ಸಾಲಿನಲ್ಲಿ 250 ರು. ಸೇರಿಸಿ 1,500 ರು.ಗಳಂತೆ ನೀಡಲು 93.73 ಕೋಟಿ ರು. ಬಿಡುಗಡೆಗೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಮಂಜೂರಾತಿ ನೀಡಲಾಗಿದೆ. ರಾಜ್ಯದಲ್ಲಿ ಕೊಬ್ಬರಿ ಬೆಳೆವ ಅವರಿಗೆ ಬೆಂಬಲ ಬೆಲೆ ಕೊಡಬೇಕು ಎಂದು ಆಗ್ರಹಿಸಿ ಜೆಡಿಎಸ್ ರಾಜ್ಯಾಧ್ಯಕ್ಷ HD ಕುಮಾರಸ್ವಾಮಿಯವರು ಈ ಹಿಂದೆ…

Read More

ಬೆಂಗಳೂರು : ಬಿಎಂಟಿಸಿ ತನ್ನ ಸೇವೆಯನ್ನು ಉತ್ತಮಗೊಳಿ ಸಲು ಹೊಸದಾಗಿ 1,500ಕ್ಕೂ ಹೆಚ್ಚಿನ ಬಸ್‌ಗಳ ಸೇರ್ಪಡೆಗೆ ಮುಂದಾಗಿದ್ದು, ಅದರಲ್ಲಿ ಬಹು ತೇಕ ಬಸ್‌ಗಳನ್ನು ಗ್ರಾಸ್ ಕಾಸ್ಟ್ ಕಾಂಟ್ಯಾಕ್ಟ್ (ಜಿಸಿಸಿ) ಮಾದರಿ ಯಲ್ಲಿ ಪಡೆಯಲಿದೆ. ಹೊಸ ಬಸ್ ಗಳ ಸೇರ್ಪಡೆ ಮೂಲಕ ಬಿಎಂ ಟಿಸಿಯ ಟ್ರಿಪ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಮುಂದಿನ ದಿನಗಳಲ್ಲಿ ಬಿಎಂಟಿಸಿಗೆ ಹೊಸದಾಗಿ 1,500ಕ್ಕೂ ಹೆಚ್ಚಿನ ಬಸ್‌ಗಳನ್ನು ಸೇರ್ಪಡೆ ಮಾಡಲಿದೆ. ಪ್ರಮುಖವಾಗಿ 400 ಬಿಎಸ್ – 6ಬಸ್ ಗಳನ್ನು ಖರೀದಿಸಲಾಗುತ್ತಿದೆ. ಅದರ ಜತೆಗೆ 20 ಮಿಡಿ ಬಸ್ ಗಳು, 10 ಡಬ್ಬಲ್ ಡೆಕ್ಕರ್ ಬಸ್, 921 ಎಲೆಕ್ನಿಕ್ ಬಸ್‌ಗಳನ್ನು ಜಿಸಿಸಿ ಆಧಾರದಲ್ಲಿ ಪಡೆಯಲು ನಿರ್ಧರಿ ಸಲಾಗಿದೆ. ಎಲೆಕ್ನಿಕ್ ಬಸ್‌ಗಳ ಪೈಕಿ ಈಗಾಗಲೇ 100 ಬಸ್‌ಗಳು ಪೂರೈಕೆ ಯಾಗಿದ್ದು, ಉಳಿದ ಬಸ್‌ಗಳ ಈ ಆರ್ಥಿಕ ವರ್ಷದ ಅಂತ್ಯದೊಳಗೆ ಬಿಎಂಟಿಸಿ ಪಡೆಯಲಿದೆ. ಕೊರೋನಾ ಪೂರ್ವದಲ್ಲಿ ಬಿಎಂಟಿಸಿ 6,185 ಬಸ್‌ಗಳ ಮೂಲಕ ಸೇವೆ ನೀಡುತ್ತಿತ್ತು. ಆದರೆ, ಕೊರೋನಾ ನಂತರ ಆ ಸಂಖ್ಯೆ 5,587ಕ್ಕೆ ಇಳಿದಿದೆ. ಒಟ್ಟು…

Read More