Subscribe to Updates
Get the latest creative news from FooBar about art, design and business.
Author: kannadanewsnow05
ವರಲಕ್ಷ್ಮಿ ಉಪವಾಸದಂದು ಏನು ಮಾಡಬಾರದು. ಇಂದು ಶ್ರಾವಣ ಮಾಸ ವಿಶೇಷ ಶುಕ್ರವಾರ. ವರಮಹಾಲಕ್ಷ್ಮಿ ಉಪವಾಸವೂ ಬರುತ್ತಿದೆ. ಸಕಾರಾತ್ಮಕ ಶಕ್ತಿ ತುಂಬಿರುವ ಈ ದಿನದಂದು ಮನೆಯಲ್ಲಿ ಮಹಿಳೆಯರು ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಆಧ್ಯಾತ್ಮಿಕ ಮಾಹಿತಿಯನ್ನು ನಾವು ಇಂದು ತಿಳಿಯಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ…
ಬೆಂಗಳೂರು : ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ವ್ಯಕ್ತಿ ಬಲಿಯಾಗಿದ್ದು, ಬೀದಿನಾಯಿಗಳ ದಾಳಿಯಿಂದ 71 ವರ್ಷದ ಸೀತಪ್ಪ ಎನ್ನುವ ವೃದ್ಧರೊಬ್ಬರು ಇದೀಗ ಸಾವನಪ್ಪಿದ್ದಾರೆ. ಕೋಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ನಿನ್ನೆ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದಾಗ ಸೀತಪ್ಪ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ವೃದ್ಧ ಸೀತಪ್ಪ ಅವರ ಕೈ ಕಾಲು ಮತ್ತು ಮುಖಕ್ಕೆ ಬೀದಿ ನಾಯಿಗಳು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದವು. ಇದೀಗ ಚಿಕಿತ್ಸೆ ಫಲಕಾರಿ ಆಗದೆ ಸೀತಪ್ಪ ಎಂದು ಕೊನೆಯುಸಿರಿಳೆದಿದ್ದಾರೆ.
ವಿಜಯಪುರ : ವಿಜಯಪುರದಲ್ಲಿ ಘೋರ ಘಟನೆಯೊಂದು ನಡೆದಿದ್ದು ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ನಡುಗುಂದಿ ತಾಲೂಕಿನ ಬ್ಯಾಲಿಹಾಳ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಕಲುಷಿತ ನೀರು ಕುಡಿದು ಮೂವತ್ತಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ನಿಡಗುಂದಿ ತಾಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ನಡುಗುಂದಿ ತಾಲೂಕಿನ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ. ಹಾಗಾಗಿ ಕಳೆದ ಮೂರು ದಿನಗಳಿಂದ ವೈದ್ಯರ ತಂಡ ಗ್ರಾಮದಲ್ಲಿಯೇ ವಾಸ್ತವ್ಯ ಹೂಡಿದೆ ಗ್ರಾಮ ಪಂಚಾಯಿತಿಯಿಂದ ಪೂರೈಕೆ ಆದ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ ಅಸ್ವಸ್ಥಗೊಂಡವರು ಬಸವನ ಬಾಗೇವಾಡಿ ಬಾಗಲಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರ ಅಸ್ವಸ್ಥಗೊಂಡ ವ್ಯಕ್ತಿಯನ್ನು ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಬೆಂಗಳೂರು : ವಿಜಯಪುರದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಲ್ಲಿಕಾರ್ಜುನ ಖರ್ಗೆಯವರು, ರಾಜ್ಯದಲ್ಲಿ ಕಷ್ಟಪಟ್ಟು ಪಕ್ಷ ಅಧಿಕಾರಕ್ಕೆ ತಂದಿದ್ದು ನಾನು ಆದರೆ ಮುಖ್ಯಮಂತ್ರಿಯಾದದ್ದು ಎಸ್ಎಂ ಕೃಷ್ಣ ಎಂದು ಬೇಸರ ಹೊರಹಾಕಿದ್ದರು. ಸಿಎಂ ಸ್ಥಾನ ಕವಿ ತಪ್ಪಿದ ವಿಚಾರವಾಗಿ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಜಿ ಪರಮೇಶ್ವರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಅಷ್ಟೇ ಅಲ್ಲದೆ ಎಲ್ಲಾ ಹುದ್ದೆಗಳಿಗೂ ಸಮರ್ಥರಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರ ಹೇಳಿಕೆಯಲ್ಲಿ ಯಾವುದೇ ತಪ್ಪು ಇಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲಾ ಹುದ್ದೆಗಳಿಗೂ ಸಮರ್ಥರು ಖರ್ಗೆಯವರು ನಮ್ಮ ಪಕ್ಷದಲ್ಲಿ ನಿರ್ಣಾಯಕ ಸ್ಥಾನದಲ್ಲಿದ್ದಾರೆ. ಯಾರು ಸಿಎಂ ಆಗಬೇಕು ಎಂದು ನಿರ್ಧಾರ ಮಾಡುವುದೇ ಮಲ್ಲಿಕಾರ್ಜುನ್ ಖರ್ಗೆ. ರಾಜ್ಯ ರಾಜಕಾರಣಕ್ಕೆ ಬರ್ತೀನಿ ಅಂದರೆ ತಪ್ಪು ಭಾವಿಸುವ ಅಗತ್ಯ ಇಲ್ಲ ಖರ್ಗೆ ಏನಾದರೂ ಹೇಳಿದಾಗ ತಪ್ಪಾಗಿ ಭಾವಿಸುವ ಅಗತ್ಯವೇ ಇಲ್ಲ. ಎಂದು ಬೆಂಗಳೂರಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಇನ್ನು ದರ್ಶನ್ ಫ್ಯಾನ್ಸ್ ವಿರುದ್ಧ…
ಬೆಂಗಳೂರು : ಕಾಂಗ್ರೆಸ್ ಶಾಸಕರು ಗೆ ಅವರ ಕ್ಷೇತ್ರಕ್ಕೆ ತಲಾ 50 ಕೋಟಿ ರೂಪಾಯಿ ಅನುದಾನ ನೀಡಿರುವ ವಿಚಾರವಾಗಿ ಹಾಗೂ ಇತರೆ ವಿಷಯಗಳು ಕುರಿತು ಇಂದಿನಿಂದ ಸಚಿವರು ಹಾಗೂ ಶಾಸಕರುಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ನಾಲ್ಕು ದಿನಗಳ ಕಾಲ ಸಭೆ ನಡೆಸಲಿದ್ದಾರೆ. ಆದರೆ ಈ ಒಂದು ಸಭೆಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ ನೀಡಿಲ್ಲ. ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶಾಸಕರ ಬಳಿ ಆಂತರಿಕವಾಗಿ ಅಸಮಾಧಾನ ಹೊರಹಾಕಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬದಿಗಿಟ್ಟು ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ. 50 ಕೋಟಿ ಅನುದಾನ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಶಾಸಕರುಗಳ ಜೊತೆಗೆ ಚರ್ಚಿಸಲಿದ್ದಾರೆ. ನೇರವಾಗಿ ಅವರ ಜೊತೆ ಇಂದಿನಿಂದ ನಾಲ್ಕು ದಿನಗಳ ಕಾಲ ಸಭೆ ನಡೆಸಲಿದ್ದಾರೆ. ಆದರೆ ಈ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ನೀಡದಿರುವುದಕ್ಕೆ ಡಿಸಿಎಂ ಸಹಜವಾಗಿ ಅಸಮಾಧಾನಗೊಂಡಿದ್ದಾರೆ.
ಕೊಡಗು : ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಓರ್ವ ಕೂಲಿ ಕಾರ್ಮಿಕ ಮಹಿಳೆ ಸೇರಿದಂತೆ ಇಬ್ಬರು ಬಲಿಯಾಗಿದ್ದರು. ಇದೀಗ ಕೊಡಗು ಜಿಲ್ಲೆಯಲ್ಲಿ ಕಾಡಾಯ ದಾಳಿಯಿಂದ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹೌದು ಕಾಡಾನೆ ದಾಳಿಯಿಂದ ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯವಾಗಿದ್ದು, ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರಾದಂತಹ ಸಾಬು ಅಲಿ ಮತ್ತು ಕಣ್ಣಣ್ ಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಗಾಯಗೊಂಡ ಕಾರ್ಮಿಕರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರು : ಕೌಟುಂಬಿಕ ಕಲಹಕ್ಕೆ ಬೇಸತ್ತು ಪೊಲೀಸ್ ಪೇದೆ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಬೀರೇಶ್ (37) ಎಂದು ತಿಳಿದುಬಂದಿದೆ. ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ ಬೀರೇಶ್ ಮೈಸೂರು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಬೀರೇಶ್ ತನ್ನ ಪತ್ನಿ ಹಾಗೂ ಮಗುವಿನೊಂದಿಗೆ ನಂಜನಗೂಡಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ವಾಸವಿದ್ದರು ಎನ್ನಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಕೊಠಡಿಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವೀಂದ್ರ, ಪಿಎಸ್ಐ ಕೃಷ್ಣಕಾಂತ ಕೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
BIG NEWS : ಪ್ರತಿ ಕ್ಷೇತ್ರಕ್ಕೆ ತಲಾ 5 ಕೋಟಿ ರೂ.ಅನುದಾನ : ಇಂದಿನಿಂದ 4 ದಿನಗಳ ಕಾಲ ಸಚಿವರು, ಶಾಸಕರ ಜೊತೆ ಸಿಎಂ ಸಭೆ
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲ ಸಚಿವರಗಳ ಜೊತೆಗೆ ಸಭೆ ನಡೆಸಿದರು. ಇದೀಗ ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರು ಹಾಗೂ ಶಾಸಕರುಗಳ ಜೊತೆಗೆ ನಾಲ್ಕು ದಿನಗಳ ಕಾಲ ಸಭೆ ನಡೆಸಲಿದ್ದಾರೆ. ಮೊದಲಿಗೆ, ತವರು ಜಿಲ್ಲೆ ಮೈಸೂರಿನಿಂದಲೇ ಇಂದು ಸಂಜೆ ಸಭೆ ಆರಂಭಿಸಲಿದ್ದಾರೆ. ಶಾಸಕರಿಗೆ ತಲಾ 50 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿ ಮುಖ್ಯಮಂತ್ರಿಗಳು ಕೆಲವು ದಿನಗಳ ಹಿಂದೆ ಆದೇಶ ಹೊರಡಿಸಿದ್ದರು. ಆ ಸಂಬಂಧ ಸಚಿವರು, ಶಾಸಕರ ಜತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಜಿಲ್ಲಾವಾರು ಸಭೆಗಳಲ್ಲಿ ಮುಖ್ಯಮಂತ್ರಿಗಳು ಪ್ರತಿ ಶಾಸಕರೊಂದಿಗೆ ವೈಯಕ್ತಿಕವಾಗಿ 10 ನಿಮಿಷಗಳಷ್ಟು ಹೊತ್ತು ಸಮಾಲೋಚನೆ ನಡೆಸಲಿದ್ದಾರೆ. ಸಚಿವರು ಮತ್ತು ಶಾಸಕರ ಜತೆ ಸಭೆ ನಡೆಸುವ ವಿಚಾರವಾಗಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ. 2025-26ನೇ ಸಾಲಿನಲ್ಲಿ 8,000 ಕೋಟಿ ರೂಪಾಯಿಗಳ ಹೆಚ್ಚುವರಿ ಅನುದಾನವನ್ನು 224 ವಿಧಾನಸಭಾ…
ಬೆಂಗಳೂರು : ಆನ್ಲೈನ್ ಮೂಲಕ ಬಿ ಖಾತಾದಿಂದ ಎ ಖಾತ ಮಾನ್ಯತೆ ವಿಚಾರವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಹತ್ವದ ಹೇಳಿಕೆ ನೀಡಿದ್ದು, ಬಿ ಖಾತದಿಂದ ಎ ಖಾತ ಕೊಡಲು ಸರಕಾರದಿಂದ ಆದೇಶ ಆಗಿದೆ ಎಂದು ಬಿಬಿಎಂಪಿ ಆಯುಕ್ತ ಮಹೇಶ್ವರ ರಾವ್ ತಿಳಿಸಿದರು. ಎರಡು ವಾರದಲ್ಲಿ ಈ ಬಗ್ಗೆ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡುತ್ತೇವೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಎರಡು ವಾರದಲ್ಲಿ ಅವಕಾಶ ನೀಡುತ್ತೇವೆ. ಏನು ನಿಯಮಗಳು ಇರುತ್ತವೋ ಅದನ್ನು ಫಾಲೋ ಮಾಡಬೇಕಾಗುತ್ತದೆ. ಎ ಖಾತ ಮಾಡಿಸಿಕೊಳ್ಳುವುದಕ್ಕೆ ಎಷ್ಟು ಹಣ ಭರಿಸಬೇಕೆಂಬುದರ ಕುರಿತು ಚರ್ಚಿಸಲಾಗಿದ್ದು, ಅದನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ.ಹೊಸ ಮಾರ್ಗಸೂಚಿಯಲ್ಲಿಯೇ ಎಲ್ಲ ಮಾಹಿತಿ ನೀಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ಹೇಳಿಕೆ ನೀಡಿದರು. ಆನ್ಲೈನ್ ವ್ಯವಸ್ಥೆಯನ್ನು ಸುಮಾರು 15 ದಿನಗಳಲ್ಲಿ ಆರಂಭಿಸಲಾಗುತ್ತಿದೆ.ಆದ್ದರಿಂದ ದಯವಿಟ್ಟು ಕಾಯಿರಿ.ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಿದ ನಂತರ ನಾಗರಿಕರು ಕೆಳಗಿನಂತೆ ಅರ್ಜಿ ಸಲ್ಲಿಸಬಹುದು (i) ಬಿ-ಖಾತಾವನ್ನು ಎ-ಖಾತಾಕ್ಕೆ ಪರಿವರ್ತನೆ ಮಾಡುವುದು…
ಬೆಂಗಳೂರು : ನಟ ದರ್ಶನ್ ಅಭಿಮಾನಿಗಳು ನಟ ಪ್ರಥಮ್ ಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತಷ್ಟು ಸ್ಪೋಟಕ ವಿಷಯಗಳು ಬಹಿರಂಗವಾಗಿದ್ದು, ರೌಡಿಶೀಟರ್ ಬೇಕರಿ ರಘು ಮತ್ತು ಗ್ಯಾಂಗ್ನಿಂದ ಪ್ರಥಮ್ ಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ. ಹೌದು ರಾಮಾಯಣಪಾಳ್ಯ ಬಳಿ ರೇಣುಕಾ ಎಲ್ಲಮ್ಮ ದೇವಸ್ಥಾನದ ಹಿಂದೆ ಬೆದರಿಕೆ ಹಾಕಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮಕ್ಕೆ ಜುಲೈ 22ರಂದು ಪ್ರಥಮ್ ರೇಣುಕಾ ಎಲ್ಲಮ್ಮ ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ರಕ್ಷಕ್ ಬುಲೆಟ್ ಜೊತೆಗೆ ಪ್ರಥಮ್ ರೇಣುಕಾ ಎಲ್ಲಮ್ಮ ದೇಗುಲಕ್ಕೆ ತೆರಳಿದ್ದರು. ರೇಣುಕಾ ಎಲ್ಲಮ್ಮ ದೇವಸ್ಥಾನದ ಹಿಂದೆ ಬರ್ತಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು. ರೌಡಿಶೀಟರ್ ಬೇಕರಿ ರಘು ಬರ್ತಡೇ ಪಾರ್ಟಿಯನ್ನು ಆತನ ಸಹಚರರು ಆಯೋಜಿಸಿದ್ದರು. ದೇಗುಲಕ್ಕೆ ತೆರಳಿದ್ದ ರಕ್ಷಕನನ್ನು ಬೇಕರಿ ರಘು ಸಹಜರರು ಮಾತನಾಡಿಸಿದ್ದಾರೆ. ಈ ವೇಳೆ ಬೇಕರಿ ರಘು ಬರ್ತಡೇ ಪಾರ್ಟಿ ಇದೆ ಎಂದು ಕರೆದೊಯ್ದಿದ್ದರು. ರೌಡಿಶೀಟರ್ ಬೇಕರಿ ರಘುಗಳಿಗೆ ಆತನ ಸಹಜರರು ರಕ್ಷಕ್…