Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಸಿಎಂ ಖುರ್ಚಿ ಕದನ ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಾಮಿಸಿದೆ. ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಹೊರ ಬಾರದ ಕಾಂಗ್ರೆಸ್ಗೆ ಈಗ ರಾಜ್ಯದ ಕಾಂಗ್ರೆಸ್ ನಾಯಕರ ನಡವಳಿಕೆ ತೀವ್ರ ಬೇಸರ ಉಂಟು ಮಾಡುತ್ತಿದೆ. ಇದೀಗ ಸಿಎಂ ಕಾವೇರಿ ನಿವಾಸದಲ್ಲಿ ರಾಜಕೀಯ ಗರಿಗೆದರಿದ್ದು, ಸಚಿವರು ಶಾಸಕರುಗಳು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ. ಕಾವೇರಿ ನಿವಾಸದಲ್ಲಿ ಸಚಿವರ ಶಾಸಕರ ದಂಡೆ ಜಮಯಿಸಿದೆ. ಸಚಿವರಾದ ಜಿ.ಪರಮೇಶ್ವರ್, ಹೆಚ್.ಸಿ ಮಹದೇವಪ್ಪ, ಸಿಂಧನೂರು ಶಾಸಕ ಸೇರಿದಂತೆ ಹಲವಾರು ಭೇಟಿ ನೀಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಸಿಎಂ ಖುರ್ಚಿ ಕದನ ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಾಮಿಸಿದೆ. ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಹೊರ ಬಾರದ ಕಾಂಗ್ರೆಸ್ಗೆ ಈಗ ರಾಜ್ಯದ ಕಾಂಗ್ರೆಸ್ ನಾಯಕರ ನಡವಳಿಕೆ ತೀವ್ರ ಬೇಸರ ಉಂಟು ಮಾಡುತ್ತಿದೆ.ಇದರ ಮಧ್ಯ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಿದ್ದು, ನಾಯಕತ್ವ ಬದಲಾವಣೆ ಕುರಿತು ಮಾತಾಡಿ ಎಲ್ಲವನ್ನು ಸೆಟಲ್ ಮಾಡ್ತೀವಿ ಎಂದು ತಿಳಿಸಿದ್ದಾರೆ. ದೆಹಲಿಗೆ ತೆರಳುವ ಮುಂಚೆ ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಎಲ್ಲವನ್ನು ಹೈಕಮಾಂಡ್ ಸಮ್ಮುಖದಲ್ಲಿ ಚರ್ಚಿಸುತ್ತೇನೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆ ಮಾತಾಡ್ತೀನಿ. ಹೈ ಕಮಾಂಡ್ ಜೊತೆ ಕೂತು ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಗುತ್ತೆ. ಸಭೆಯಲ್ಲಿ ರಾಹುಲ್ ಗಾಂಧಿ ಸಹ ಇರುತ್ತಾರೆ. 3-4 ಪ್ರಮುಖ ನಾಯಕರನ್ನು ಕರೆಸಿ ಚರ್ಚಿಸುತ್ತೇನೆ. ಎಲ್ಲರ ಸಮ್ಮುಖದಲ್ಲಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುತ್ತೆ ಎಂದರು. ಈ ನಡುವೆ ರಾಜ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡಿರುವ ಹೈಕಮಾಡ್ ಇನ್ನೇರಡು ದಿನದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್…
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಸಿಎಂ ಖುರ್ಚಿ ಕದನ ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಾಮಿಸಿದೆ. ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಹೊರ ಬಾರದ ಕಾಂಗ್ರೆಸ್ಗೆ ಈಗ ರಾಜ್ಯದ ಕಾಂಗ್ರೆಸ್ ನಾಯಕರ ನಡವಳಿಕೆ ತೀವ್ರ ಬೇಸರ ಉಂಟು ಮಾಡುತ್ತಿದೆ. ಈ ನಡುವೆ ರಾಜ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡಿರುವ ಹೈಕಮಾಡ್ ಇನ್ನೇರಡು ದಿನದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಕರೆದು ಮಾತನಾಡಲಿದ್ದಾರೆ ಎನ್ನಲಾಗಿದೆ. ಈ ಸಮಯದಲ್ಲಿ ಪ್ರಸಕ್ತ ರಾಜಕೀಯ ಬಿಕ್ಕಟ್ಟು ಸೇರಿದಂತೆ ಇತರೆ ಮಾಹಿತಿಗಳನ್ನು ಪಾರ್ಟಿಯ ಹಿರಿಯ ನಾಯಕರುಗಳ ಜೊತೆಗೆ ಚರ್ಚಿಸುತ್ತ ಅಂತಿಮ ನಿರ್ಧಾರಕ್ಕೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಬರಲಿದ್ದಾರೆ ಎನ್ನಲಾಗಿದೆ. ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿದ್ದು, ಇದು ಹೊಸ ಚರ್ಚೆಗೆ ಕಾರಣವಾಗಿದೆ. ಇದಲ್ಲದೇ ಇಂದು ರಾಹುಲ್ ಗಾಂಧಿಯನ್ನು ಮಲ್ಲಿಕಾರ್ಜುನ ಖರ್ಗೆಯವರು ಭೇಟಿಯಾಗಲಿದ್ದು, ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ…
ಹಾವೇರಿ : ಎಷ್ಟು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಚಿರತೆ ಹುಲಿಗಳ ಹಾವಳಿ ಹೆಚ್ಚಾಗಿತ್ತು. ಇದರಿಂದ ಜನರು ತೀವ್ರ ಆತಂಕಕ್ಕೆ ಒಳಗಾಗುತ್ತಿದ್ದರು ಇದೀಗ ಹಾವೇರಿಯಲ್ಲಿ ಹಾಡಹಗಲೇ ಚಿರತೆ ಪ್ರತ್ಯಕ್ಷವಾಗಿದ್ದು, ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ರೈತರೊಬ್ಬರ ಜಮೀನಿನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು, ಆತಂಕ ಹೆಚ್ಚಾಗಿದೆ. ಗ್ರಾಮದ ರೈತ ಶಂಕರಗೌಡ ಶಿರಗಂಬಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ.ಶಂಕರಗೌಡರ ತೋಟದಲ್ಲಿ ಮೂರನೇ ಬಾರಿಗೆ ಚಿರತೆ ಕಾಣಿಸಿಕೊಳ್ಳುತ್ತಿದೆ. ಕಳೆದ ವರ್ಷ ಸಹ ತೋಟದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಈ ವರ್ಷ ಎರಡನೇ ಬಾರಿಗೆ ರೈತ ಶಂಕರಗೌಡರ ತೋಟದ ಮನೆ ಮುಂದೆ ಕಾಣಿಸಿಕೊಂಡು ಆಂತಕ ಸೃಷ್ಟಿಯಾಗಿದೆ.ಒಂದೇ ತೋಟದಲ್ಲಿ ಮೂರನೇ ಬಾರಿಗೆ ಚಿರತೆ ಕಾಣಿಸಿಕೊಳ್ಳುತ್ತಿರುವುದಕ್ಕೆ ರೈತ ಕುಟುಂಬ ಹಾಗೂ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದ್ದು, ಚಿರತೆ ಸೆರೆ ಹಿಡಿಯದ ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ : ರಾಜ್ಯದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಕೊಪ್ಪಳದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಹಿನ್ನೆಲೆ ಕುಕನೂರು ಠಾಣೆ ಪೊಲೀಸರು ಪೋಕ್ಸೋ ಪ್ರಕರಣದ ಕಲಿಸಿಕೊಂಡು ಓರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಈ ಒಂದು ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಿಸಿಎಂ ಬಾಲಕಿಯರ ವಿದ್ಯಾರ್ಥಿ ನಿಲಯದ ಹತ್ತನೇ ತರಗತಿ ಓದುತ್ತಿರುವ 16 ವರ್ಷದ ವಿದ್ಯಾರ್ಥಿನಿ ಬುಧವಾರ ಬೆಳಗಿನ ಜಾವ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ವಸತಿ ನಿಲಯಗಳ ಮಕ್ಕಳ ಆರೋಗ್ಯದ ಮೇಲೆ ನಿಗಾ ವಹಿಸಲು ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಪ್ರತೀ ತಿಂಗಳು ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಮಗುವಿಗೆ ಜನ್ಮ ನೀಡಿದ ಬಾಲಕಿಯ ಆರೋಗ್ಯ ತಪಾಸಣೆಯನ್ನು ಎರಡು ತಿಂಗಳ ಹಿಂದೆ ಮಾಡಲಾಗಿದ್ದು, ಬಾಲಕಿ ಗರ್ಭಿಣಿಯಾದ ವಿಷಯವನ್ನು ವೈದ್ಯಾಧಿಕಾರಿಗಳು ಪತ್ತೆ ಹಚ್ಚಿಲ್ಲ. ಆದ್ದರಿಂದ ಕರ್ತವ್ಯ ಲೋಪದ ಮೇಲೆ ಇಬ್ಬರು ವೈದ್ಯಾಧಿಕಾರಿಗಳ ಮೇಲೂ ಎಫ್ಐಆರ್…
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು ಹಾಕಿದೆ. ಪ್ರಧಾನಿ ಸ್ವಾಗತಕ್ಕೆ ನಗರ ಸಿದ್ಧವಾಗಿದೆ. ಬನ್ನಂಜೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದಿಂದ ಕಲ್ಸಂಕದವರೆಗೂ ಪ್ರಧಾನಿ ರೋಡ್ ಶೋ ನಡೆಯಲಿದ್ದು, ಎರಡು ಕಡೆಗಳಲ್ಲೂ ಬ್ಯಾರಿಕೇಡ್ ನಿರ್ಮಾಣ ಮಾಡಲಾಗಿದೆ. ಅಲ್ಲದೇ ಈ ರಸ್ತೆಯ ಎರಡೂ ಬದಿಗಳಲ್ಲಿರುವ ಅಂಗಡಿ ಮಾಲೀಕರಿಗೆ ಅಂದು ಅಂಗಡಿ ತೆರೆಯದಂತೆ ಸೂಚನೆಯನ್ನು ಜಿಲ್ಲಾಡಳಿತ ರವಾನಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಗಮನದ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲೂ ತುಸು ವ್ಯತ್ಯಾಸ ಆಗಲಿದೆ. ನ.28ಕ್ಕೆ ಸೀಮಿತವಾಗಿ ಉಡುಪಿ ನಗರ, ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಕಾವೇರಿ 2.0 ಸದ್ಯ ಮಾರಾಟ, ಗಿಫ್ಟ್ ಡೀಡ್, ಅಡಮಾನ, ಪಿತ್ರಾರ್ಜಿತ ಆಸ್ತಿ ಕುರಿತ ವಹಿವಾಟುಗಳನ್ನು ಆಧರಿಸಿದೆ. ಅದರಲ್ಲಿ ಆಸ್ತಿ ವಿವಾದಗಳ ಕುರಿತಂತೆ ಸಿವಿಲ್ ನ್ಯಾಯಾಲಯಗಳ ತೀರ್ಪುಗಳನ್ನು ಪರಿಶೀಲಿಸಲು ಯಾವುದೇ ಅವಕಾಶವಿಲ್ಲ. ಹಾಗಾಗಿ ಹಾಗಾಗಿ ಅದರಲ್ಲಿ ‘ಮ್ಯುಟೇಷನ್ ಆಧಾರಿತ ಸಿವಿಲ್ ಕೋರ್ಟ್ ಡಿಕ್ರಿ’ ಎಂಬ ಹೊಸ ಕಾರ್ಯನಿರ್ವಹಣಾ ಶೀರ್ಷಿಕೆಯನ್ನು ಸೇರ್ಪಡೆ ಮಾಡಿ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಕಾವೇರಿ 2.0 ತಂತ್ರಾಂಶ ಕಾನೂನು ಗೊಂದಲಗಳನ್ನು ಸೃಷ್ಟಿಸುತ್ತಿದೆ. ಆದ್ದರಿಂದ ಹಾಗಾಗಿ ಅದರಲ್ಲಿ ‘ಮ್ಯುಟೇಷನ್ ಆಧಾರಿತ ಸಿವಿಲ್ ಕೋರ್ಟ್ ಡಿಕ್ರಿ’ ಎಂಬ ಹೊಸ ಕಾರ್ಯನಿರ್ವಹಣಾ ಶೀರ್ಷಿಕೆಯನ್ನು ಸೇರ್ಪಡೆ ಮಾಡಿ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಕಾವೇರಿ 2.0 ಸದ್ಯ ಮಾರಾಟ, ಗಿಫ್ಟ್ ಡೀಡ್, ಅಡಮಾನ, ಪಿತ್ರಾರ್ಜಿತ ಆಸ್ತಿ ಕುರಿತ ವಹಿವಾಟುಗಳನ್ನು ಆಧರಿಸಿದೆ ಮತ್ತು ಅದರಲ್ಲಿ ಆಸ್ತಿ ವಿವಾದಗಳ ಕುರಿತಂತೆ ಸಿವಿಲ್ ನ್ಯಾಯಾಲಯಗಳ ತೀರ್ಪುಗಳನ್ನು ಪರಿಶೀಲಿಸಲು ಯಾವುದೇ ಅವಕಾಶವಿಲ್ಲ. ಜೊತೆಗೆ ಇದು ನಾಗರಿಕರು ನ್ಯಾಯಾಲಯಗಳು ನಿರ್ಣಾಯಕವಾಗಿ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಏನು ನಿಲುವು ತೆಗೆದುಕೊಳ್ಳುತ್ತೇನೆ ಎನ್ನುವುದು ಇದೀಗ ಸದ್ಯಕ್ಕೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ ಇದರ ಮಧ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಟ್ವೀಟ್ ಖಾತೆಯ ಮೂಲಕ ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಹೌದು ಕುರ್ಚಿ ಕಿತ್ತಾಟದ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಕಾರ್ಮಿಕ ಟ್ವೀಟ್ ಮಾಡಿದ್ದು ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿ ದೊಡ್ಡ ಶಕ್ತಿ. ಯಾರೇ ಆಗಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಅದು ಜಡ್ಜ ಆಗಿರಲಿ ಅಧ್ಯಕ್ಷರಾಗಲಿ ಯಾರೇ ಆಗಿರಲಿ ನನ್ನನ್ನು ಸೇರಿಸಿ ಸಹ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಕೊಟ್ಟ ಮಾತಿನ ಶಕ್ತಿಯೇ ಜಗತ್ತಿನ ಶಕ್ತಿಯಾಗಿದೆ ಎಂದು ಟ್ವೀಟ್ ಮೂಲಕ ಡಿಕೆ ಶಿವಕುಮಾರ್ ಮತ್ತೆ ಕೊಟ್ಟ ಮಾತು ಪ್ರಸ್ತಾಪಿಸಿದ್ದಾರೆ.
ಹಾಸನ : ಹಾಸನದಲ್ಲಿ ಭೀಕರವಾದ ಸಂಭವಿಸಿದ್ದು ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಬೈಕ್ ಒಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿ ಇದ್ದಂತಹ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಲೋಕೇಶ್ (25) ಹಾಗೂ ಕಿರಣ್ (32) ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ಇಬ್ಬರು ಸವಾರರು ತೆರುಳುತ್ತಿದ್ದರು. ಆಗ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಸ್ಥಳದಲ್ಲೇ ಲೋಕೇಶ್ ಹಾಗು ಕಿರಣ್ ಸಾವನ್ನಪ್ಪಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದ್ದು, ಇದರ ನಡುವೆ ದಲಿತ ಸಿಎಂ ಕೂಗು ಕೇಳಿ ಬರುತ್ತಿದೆ ಇನ್ನು ನಾಯಕತ್ವ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಎರಡೂವರೆ ವರ್ಷ ಅಂತ ಏನಿಲ್ಲ, ನನ್ನ ವೈಯಕ್ತಿಕ ಏನಿಲ್ಲ, ಪಕ್ಷದ ತೀರ್ಮಾನ. ನಾನು ಸಿಎಂ ಎಲ್ಲರೂ ಸೇರಿ ಸರ್ಕಾರವನ್ನು ತಂದಿದ್ದೇವೆ ಎಂದರು. ಕೆಪಿಸಿಸಿ ಕಚೇರಿಯಲ್ಲಿಂದು ಮಾತನಾಡಿದ ಅವರು, ದೆಹಲಿಗೆ ಹೋಗೋದು ನನಗೆ ಗೊತ್ತಿಲ್ಲ. ನ.28ರಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರ್ಯಕ್ರಮ ಇದೆ. ನ.29 ಇನ್ನೂ ದೂರ ಇದೆ. ನಾನು ಒಕ್ಕಲಿಗ ನಾಯಕ ಅಂತ ಹೇಳಿಲ್ಲ. ನಾನು ಕಾಂಗ್ರೆಸ್ ನಾಯಕ. ನಾನು ಒಕ್ಕಲಿಗನಾಗಿ ಹುಟ್ಟಿದ್ದೇನೆ. ನಾವು ಬಿಟ್ಟರೂ ಜಾತಿ, ಧರ್ಮ ಬಿಡಲ್ಲ. ಅಶೋಕಣ್ಣ ಚಕ್ರವರ್ತಿ, ಸಾಮ್ರಾಟ್ ಎಂದು ಬೇಕಾದರೆ ಬೋರ್ಡ್ ಹಾಕಿಕೊಳ್ಳಲಿ ಎಂದು ತಿರುಗೇಟು ನೀಡಿದರು. ನಾನು ಸತೀಶ್ ಒಳ್ಳೆ ಸ್ನೇಹಿತರು, ನಮ್ಮಿಬ್ಬರ ಬಾಂಧವ್ಯ ಚೆನ್ನಾಗಿದೆ. ಇಬ್ಬರೂ ದುಡಿಯುತ್ತಿದ್ದೇವೆ. ಪಕ್ಷಕ್ಕೆ ಅವರು ಆಸ್ತಿ. ರಾಹುಲ್ ನನಗೆ ಏನು ಹೇಳಿದ್ದಾರೆ…













