Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ಹಾವೇರಿ ವಿಶ್ವವಿದ್ಯಾಲಯದಿಂದ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಘೋಷಣೆ ಮಾಡಿತ್ತು ಆದರೆ ಇದೀಗ ಡಾಕ್ಟರೇಟ್ ಪದವಿ ಸ್ವೀಕರಿಸದಿರಲು ಸಂಸದ ಬಸವರಾಜ ಬೊಮ್ಮಾಯಿ ತೀರ್ಮಾನಿಸಿದ್ದಾರೆ. ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಲ್ಲ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಬಹು ಮಾಹಿತಿ ತಿಳಿಸಿದ್ದಾರೆ. ನಿನ್ನೆ ಹಾವೇರಿ ವಿಶ್ವವಿದ್ಯಾಲಯ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿತ್ತು. ಹಾವೇರಿ ಹುಕ್ಕೇರಿಮಠದ ಸದಾಶಿವಶ್ರೀಗಳು, ಮಾಜಿ ಸಿಎಂ ಹಾಗೂ ಹಾಲಿ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಮತ್ತು ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿತ್ತು. ಆದರೆ ಇದೀಗ ಬಸವರಾಜ ಬೊಮ್ಮಾಯಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಲ್ಲ ಎಂದು ಕುಲಪತಿಗಳಿಗೆ ಮಾಹಿತಿ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ ದಿವಂಗತ ಎಸ್.ಆರ್. ಬೊಮ್ಮಾಯಿ ಮತ್ತು ಗಂಗಮ್ಮ ದಂಪತಿಯ ಪುತ್ರ. ರಾಜಕಾರಣಿ, ಉದ್ಯಮಿಯಾಗಿರುವ ಬೊಮ್ಮಾಯಿ ಹಲವು ನೀರಾವರಿ ಯೋಜನೆಗಳ ರೂವಾರಿ. ಹಾವೇರಿ ಜಿಲ್ಲೆಯ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿದ್ದ ಅವರು…
ಬೆಂಗಳೂರು : IPL ಟಿಕೆಟ್ ಕೊಡಿಸುವುದಾಗಿ ಟೆಕ್ಕಿಗೆ 1.46 ಲಕ್ಷ ರೂಪಾಯಿ ವಂಚನೆ ಎಸೆಗಿರುವ ಘಟನೆ ವರದಿಯಾಗಿದೆ. ಇನ್ಸ್ಟಾಗ್ರಾಮ್ ಮೂಲಕ ಟಕ್ಕಿಗೆ ಪರಿಚಯ ಆದವನಿಂದ ವಂಚನೆ ನಡೆದಿದೆ. ig.virajsingh ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಟಿಕೆಟ್ ಪೋಸ್ಟ್ ಮಾಡಿದ್ದು ಟಿಕೆಟ್ ಬಗ್ಗೆ ಪೋಸ್ಟ್ ಹಾಕಿದ್ದಾನೆ. ಈ ಪೋಸ್ಟ್ ನೋಡಿ ಟೆಕ್ಕಿ ಆತನನ್ನು ಸಂಪರ್ಕಿಸಿದ್ದಾನೆ. ಐಪಿಎಲ್ ಟಿಕೆಟ್ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಂಚಕ ಪೋಸ್ಟ್ ಹಾಕಿದ್ದಾನೆ. ಫೇಸ್ಬುಕ್ ನಲ್ಲಿ ಐಪಿಎಲ್ ಧಮಾಕ ಸೇಲ್ ಹೆಸರಿನಲ್ಲಿ ವಂಚಕ ಪೋಸ್ಟ್ ಮಾಡಿದ್ದಾನೆ ಟಿಕೆಟ್ ಬೇಕಾದಲ್ಲಿ ಲಿಂಕ್ ಅನ್ನು ಕ್ಲಿಕ್ ಮಾಡಿ ಎಂದು ಪೋಸ್ಟ್ ಮಾಡಿದ್ದಾನೆ ಇಂದು ಆರ್ಸಿಬಿ ಮತ್ತು ಸಿಎಸ್ಕೆ ನಡುವೆ ಪೋಸ್ಟ್ ಮಾಡಿದ್ದಾನೆ. ಸಾರ್ವಜನಿಕರನ್ನು ಒತ್ತಿಸುವ ಸಲುವಾಗಿ ಗಿಡಿ ಗಿಡಿಗಳು ಈ ಒಂದು ಕೃತ್ಯ ಎಸಿಗಿದ್ದಾರೆ ಟಿಕೆಟ್ ಲಭ್ಯವಿದೆ ಎಂದು ಸಾರ್ವಜನಿಕರ ಅಧಿಕ ತಪ್ಪಿಸಲು ಯತ್ನಿಸಿದ್ದಾರೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಅಪರಿಚಿತರ ವಿರುದ್ಧ FIR ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನವದೆಹಲಿ : ಅಮೆರಿಕನ್ ಪೈಲೆಟ್ ಹುಡುಕಲು ಬಂದಿದ್ದ ಮತ್ತೊಂದು ವಿಮಾನ ಪತನವಾಗಿದೆ. ಅಮೆರಿಕದ ಮತ್ತೊಂದು ವಿಮಾನವನ್ನು ಇರಾನ್ ಪಡೆದು ಹಾಕಿದೆ ದಕ್ಷಿಣ ಇಸ್ಫಹಾನ ಎಂಬಲ್ಲಿ ಅಮೇರಿಕಾದ ಮತ್ತೊಂದು ವಿಮಾಮ ಪತನವಾಗಿದೆ. ಇನ್ನು ಇನ್ನೊಂದು ಕಡೆ ನಾಪತ್ತೆಯಾಗಿದ್ದ ಅಮೆರಿಕದ ಎರಡನೇ ಪೈಲೆಟ್ ನನ್ನು ರಕ್ಷಣೆ ಮಾಡಲಾಗಿದೆ. ಭಾರಿ ಗುಂಡಿನ ಚಕಮಕಿಯ ಬಳಿಕ ಅಮೆರಿಕ ಕಮಾಂಡೊಗಳಿಂದ ಪೈಲೆಟ್ ಅನ್ನು ರಕ್ಷಣೆ ಮಾಡಲಾಗಿದೆ. ಅಮೆರಿಕಾದ F-15E ಜೆಟ್ ಅನ್ನು ಇರಾನ್ ಹೊಡೆದುರುಳಿಸಿತ್ತು. ಪ್ಯಾರಾಚೂಟ್ ಮೂಲಕ ಇಬ್ಬರು ಪೈಲೆಟ್ ಗಳು ಜಿಗಿದಿದ್ದರು. ನಿನ್ನೆ ಓರ್ವ ಪೈಲೆಟ್ ಅನ್ನು ರಕ್ಷಿಸಿದ್ದೇವೆ. ಎಂದು ಅಮೆರಿಕ ಹೇಳಿತ್ತು. ಇದೀಗ ಇಂದು ಅಮೆರಿಕ ಕಮಾಂಡಗಳು ಮತ್ತೊಬ್ಬ ಪೈಲಟ್ ನನ್ನ ರಕ್ಷಣೆ ಮಾಡಿದ್ದಾರೆ.
ದಾವಣಗೆರೆ : ಇದೇ ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ನಡೆಯುತ್ತಿದ್ದು ಈಗಾಗಲೇ ರಾಜಕೀಯ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದೇ ವೇಳೆ ಕುರ್ಚಿ ಅಲುಗಾಡಿದರೆ ಮಾತ್ರ ಸಿಎಂ ಅಹಿಂದ ಅಹಿಂದ ಅಂತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕುರ್ಚಿ ಅಲುಗಾಡಿದರೆ ಮಾತ್ರ ಸಿಎಂ ಅಹಿಂದ ಅಂತಾರೆ, ಕುರ್ಚಿ ಸರಿಯಾಗಿದ್ದರೆ ಅಹಿಂದವನು ಹಿಂದೆ ಹಾಕುವ ಕೆಲಸ ಮಾಡುತ್ತಾರೆ, ಇದೆಲ್ಲ ಸಿಎಂ ಸಿದ್ದರಾಮಯ್ಯ ಅವರ ನಾಟಕ. ಸಿಎಂ ಸಿದ್ದರಾಮಯ್ಯ ಜಾತ್ಯತೀತ ನಾಯಕ ಎಂದು ಹೇಳುತ್ತಿದ್ದಾರೆ. ಅದೇ ಜಾತ್ಯಾತೀತ ಜನತಾದಳ ಪಕ್ಷದಲ್ಲಿ ಇದ್ದಾಗ ಏನ್ ಮಾಡಿದ್ರು? ಯುದ್ಧದ ಕಾಲದಲ್ಲಿ ಎಲ್ಲಾ ಕಡಿಯು ಸಿಲಿಂಡರ್ ಸಮಸ್ಯೆ ಆಗಿದೆ. ಪ್ರಧಾನಮಂತ್ರಿಯ ಬಗ್ಗೆ ಒಳ್ಳೆಯ ಮಾತು ಇಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಬೆಂಗಳೂರು : ಕಳೆದ ವರ್ಷ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ಯುವಕನ ಭೀಕರ ಕೊಲೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣದಲ್ಲಿ ಎ2 (ಎರಡನೇ ಆರೋಪಿ) ಆಗಿ ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರನ್ನು ಪೊಲೀಸರು ಬಂಧಿಸಿದ್ದರು. ಅಂದಿನಿಂದ ಇಂದಿನವರೆಗೆ ದರ್ಶನ್ ಕಾನೂನು ಹೋರಾಟ ನಡೆಸುತ್ತಲೇ ಇದ್ದಾರೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ದರ್ಶನ್ ಸೇರಿದಂತೆ ಒಟ್ಟು 17 ಮಂದಿಯನ್ನು ಬಂಧಿಸಿದ್ದರು. ಸುದೀರ್ಘ ವಿಚಾರಣೆಯ ನಂತರ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆರಂಭದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್, ಅಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಫೋಟೋ ಮತ್ತು ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಅವರನ್ನು ಭದ್ರತೆಯ ದೃಷ್ಟಿಯಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಯಿತು. ಪೊಲೀಸರು ಸಾವಿರಾರು ಪುಟಗಳ ಸುದೀರ್ಘ ದೋಷಾರೋಪ ಪಟ್ಟಿಯನ್ನು (Charge Sheet) ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅದರಲ್ಲಿ ಕೊಲೆಗೆ ಸಂಬಂಧಿಸಿದ ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಉಲ್ಲೇಖಿಸಿದ್ದಾರೆ. ಈ…
ಕಲಬುರ್ಗಿ : ಕಲಬುರ್ಗಿಯಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಭೀಮಾ ನದಿಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಪುಂಡಲೀಕ ಮೂಲಿಮನಿ (17) ಹಾಗೂ ಮಹೇಶ್ (16) ಎಂದು ತಿಳಿದು ಬಂದಿದೆ. ಹರಕೆ ತೀರಿಸಲು ಇಬ್ಬರು ಮಣ್ಣೂರ್ ಯಲ್ಲಮ್ಮನ ದೇಗುಲಕ್ಕೆ ಬಂದಿದ್ದರು. ಈ ವೇಳೆ ನದಿಯಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಅಫ್ಜಲ್ಪುರ ತಾಲೂಕಿನ ಗೌರ್ ಕೆ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತು ಅಫಜಲ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮೀರ್ ಮುಲ್ಲಾನನ್ನ ಸದ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೆ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಮುಫೀಸ್ ಮಿಯನ್ನವರ ಎಂಬಾತನಿಂದ ಹಿಂದೂ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಹಿಂದೂ ಯುವತಿಗೆ ಬ್ಲಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸೆಗಿದ್ದಾನೆ ಬಳಿಕ ಧಾರವಾಡದಲ್ಲಿ ಯುವತಿಗೆ ಗೊತ್ತಾಗದಂತೆ ರಿಜಿಸ್ಟರ್ ಮದುವೆಗೆ ಮುಫೀಸ್ ಸಿದ್ಧತೆ ನಡೆಸಿದ್ದ ಎನ್ನಲಾಗಿದೆ. ಕಳೆದ ಆಗಸ್ಟ್ ನಲ್ಲಿ ಮದುವೆಯಾಗಲು ನೋಂದಣಿ ಮಾಡಿಸಲು ಸಿದ್ಧತೆ ನಡೆಸಿದ್ದ ವಿಷಯ ತಿಳಿದು ಯುವತಿಯ ಸಂಬಂಧಿಕರು ಮದುವೆಯನ್ನು ನಿಲ್ಲಿಸಿದ್ದಾರೆ. ಬಳಿಕ ಮತ್ತೆ ಯುವತ್ತಿಗೆ ಬ್ಲಾಕ್ ಮೇಲ್ ಮಾಡಿದ್ದಾನೆ. ನಿನ್ನೆ ಖಾಸಗಿ ವಿಡಿಯೋ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಒಬ್ಬಳೇ ಇದ್ದ ವೇಳೆ ಮನೆಗೆ ನುಗ್ಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.…
ಬೆಂಗಳೂರು : ಇತ್ತೀಚಿಗೆ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳು ಜಿಲ್ಲಾ ನ್ಯಾಯಾಲಯಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ದೆಹಲಿ ಪೊಲೀಸರು ಓರ್ವಣನ್ನು ಅರೆಸ್ಟ್ ಮಾಡಿದ್ದರು. ಇದೀಗ ಇಂದು ಬೆಳಿಗ್ಗೆ ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಹೌದು ಟಿಶ್ಯೂ ಪೇಪರ್ ನಲ್ಲಿ ಬಾಂಬ್ ಇದೆ ಅಂತ ಕಿಡಿಗೇಡಿಗಳು ಬರೆದಿದ್ದಾರೆ. ಕೆಂಪೇಗೌಡ ಏರ್ಪೋರ್ಟ್ ನಿಂದ ಇಂಡಿಗೋ ವಿಮಾನ ದೆಹಲಿಗೆ ತೆರಳುತ್ತಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್ಪೋರ್ಟ್ ನಲ್ಲಿ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ವಿಮಾನದಲ್ಲಿ ಇದ್ದ 183 ಪ್ರಯಾಣಿಕರನ್ನು ತಕ್ಷಣ ಕೆಳಗಡೆ ಇಳಿಸಿ ತಪಾಸಣೆ ನಡೆಸಲಾಯಿತು. ಈ ವೇಳೆ ಅದೊಂದು ಹುಸಿ ಬಾಂಬ್ ಸಂದೇಶ ಅಂತ ಗೊತ್ತಾದ ಮೇಲೆ ಸಿಬ್ಬಂದಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ತೆಲಂಗಾ : ಹೆಣ್ಣು ಮಕ್ಕಳು ಜನಿಸಿದರೆ ಮನೆ ಮಹಾಲಕ್ಷ್ಮಿ ಅಂತ ಕರೀತಾರೆ ಆದರೆ ಇಲ್ಲಿ ಒಬ್ಬ ಪಾಪಿ ಗಂಡ ಗಂಡು ಮಗು ಆಗ್ಲಿಲ್ಲ ಅಂತ ಬೇಸರಗೊಂಡು ಗರ್ಭಿಣಿ ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ವ್ಯಕ್ತಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ವಾರಂಗಲ್ನಲ್ಲಿ ನಡೆದಿದೆ. ಫರ್ಹತ್ (26) ಮತ್ತು ಆಕೆಯ ಇಬ್ಬರು ಅಪ್ರಾಪ್ತ ಪುತ್ರಿಯರಾದ ಉಮೇರಾ (8), ಆಯೇಷಾ (6) ವಾರಂಗಲ್-ಖಮ್ಮಾಮ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈಜುಕೊಳದಲ್ಲಿ ಶವವಾಗಿ ಪತ್ತೆಯಾಗಿದ್ದರು. ರಾತ್ರಿ ಆಕಸ್ಮಿಕವಾಗಿ ಈಜುಕೊಳಕ್ಕೆ ಜಾರಿದ ನಂತರ ಮೂವರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪತಿ ಅಜರುದ್ದೀನ್ ತಿಳಿಸಿದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಅಜರುದ್ದೀನ್ ಕೊಲೆಗಾರ ಎಂಬುದು ಗೊತ್ತಾಗಿದೆ. ಅಜರುದ್ದೀನ್, ಪತ್ನಿ ಫರ್ಹತ್ ಮತ್ತು ಅವರ ಹೆಣ್ಣುಮಕ್ಕಳನ್ನು ಕೊಳಕ್ಕೆ ಕರೆದೊಯ್ದು ನೀರಿಗೆ ತಳ್ಳಿ ಹತ್ಯೆ ಮಾಡಿದ್ದಾನೆ. ಕೃತ್ಯಕ್ಕೂ ಮೊದಲು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಲಾಗಿತ್ತು.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ನಡೆದಿದೆ.ಮೃತ ಬಾಲಕಿಯನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ. ಬಾಲಕಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ ಹಾಗೂ ಭಾಗ್ಯಮ್ಮ ದಂಪತಿ ಮಗಳು ಎಂದು ತಿಳಿದುಬಂದಿದೆ. ಕುಟುಂಬ ಹೊಸಕೋಟೆಯಲ್ಲಿ ವಾಸವಾಗಿತ್ತು. ಜಾತ್ರೆಗೆ ತೆರಳಿದ್ದ ಭಾಗ್ಯಮ್ಮ ಸಂಬಂಧಿಕ ಮಹೇಶ್ ಎಂಬವರಿಗೆ ಸೇರಿದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಮಕ್ಕಳೊಂದಿಗೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಲಾರಿ ಒವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಹಾರಿ ಪಲ್ಟಿಯಾಗಿದೆ. ಈ ವೇಳೆ ಬಾಲಕಿ ಸಾವನ್ನಪ್ಪಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














