Author: kannadanewsnow05

ರಾಮನಗರ : ಬರ್ತಡೇ ಪಾರ್ಟಿ ವೇಳೆ ಗಲಾಟೆ ನಡೆದಿದ್ದರಿಂದ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ತಿಮ್ಮೇಗೌಡನ ದೊಡ್ಡಿ ಗ್ರಾಮದ ಬಳಿ ಯುವಕನೊಬ್ಬನ ಬರ್ಬರ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಅಶೋಕ್ (30) ಎನ್ನುವ ವ್ಯಕ್ತಿಯನ್ನು ಕೊಲೆಗೈಯಲಾಗಿದೆ. ಕಾರ್ಪೊರೇಟರ್ ಮಂಜುನಾಥ್ ತೋಟದ ಮನೆಯಲ್ಲಿ ಅಶೋಕ್ ಶವ ಪತ್ತೆಯಾಗಿದೆ.ರಾತ್ರಿ ಒಂದು ಗಂಟೆಗೆ ಯುವಕನ ಶವ ಕಂಡು ಗ್ರಾಮಸ್ಥರು 112 ಗೆ ಕರೆ ಮಾಡಿ ಶವ ಬಿದ್ದಿರುವ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಲೆ ಬಗ್ಗೆ ಮಾಹಿತಿ ಕುದೂರು ಪೊಲೀಸರು ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.ಜನವರಿ 21ರಂದು ದಿಲೀಪ್ ಎಂಬ ಯುವಕನ ಹುಟ್ಟುಹಬ್ಬ ಇತ್ತು. ನಿನ್ನೆ ರಾತ್ರಿ ಬಿಲೇಟೇಡ್ ಬರ್ತಡೇ ಪಾರ್ಟಿ ನಡೆಯುತ್ತಿತ್ತು.ಪಾರ್ಟಿ ವೇಳೆ ಗಲಾಟೆ ಆಗಿರುವ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾರ್ಟಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪೊಲೀಸರು ಇದೀಗ ಹುಡುಕಾಟ ನಡೆಸುತ್ತಿದ್ದಾರೆ. ಕುದುರು ಪೊಲೀಸ್ ಅಣ್ಣ ವ್ಯಾಪ್ತಿಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.

Read More

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮುಗ್ತಿಹಳ್ಳಿಯಲ್ಲಿರುವ ಆಂಬರ್ ವ್ಯಾಲಿ ವಸತಿ ಶಾಲೆಯಲ್ಲಿ ಸುಮಾರು 27 ಕಾಡಾನೆಗಳು ಆಗಮಿಸಿ ಬಿಡು ಬಿಟ್ಟಿರುವ ಹಿನೆಲೆಯಲ್ಲಿ ಇಂದು ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಮುಗ್ತಿಹಳ್ಳಿ ಬಳಿ ಇರುವ ವಸತಿ ಶಾಲೆಯೊಳಗೆ ಸುಮಾರು 25ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿರುವ ಹಿನ್ನೆಲೆಯಲ್ಲಿ, ಶಾಲೆಯಲ್ಲಿರುವ ಇರುವ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಯಾವುದೇ ಕಾರಣಕ್ಕೂ ವಸತಿ ಶಾಲೆಯಿಂದ ಹೊರಗಡೆ ಬರಬೇಡಿ ಎಂದು ಅರಣ್ಯ ಇಲಾಖೆ ಸೂಚನೆ ನೀಡಿದೆ. 25 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಈ ಆಂಬರ್ ವ್ಯಾಲಿ ವಸತಿ ಶಾಲೆ ಇದೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮುಗ್ತಿಹಳ್ಳಿ ಬಳಿಯ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ವಸತಿ ಶಾಲೆಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರಿಂದ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ತಿಳಿದುಬಂದಿದೆ. ಬಿಡು ಬಿಟ್ಟಿರುವ ಆನೆಗಳನ್ನು ಪುನಃ ಕಾಡಿಗೆ ಓಡಿಸಲು ಅರಣ್ಯ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Read More

ಕಲಬುರಗಿ : ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಸಂಭೋಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಲ್ಬುರ್ಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಿಎಂ ಹಾಗೂ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದು ದಲಿತ ಮಹಿಳೆಯನ್ನು ಉನ್ನತ ಸ್ಥಾನದಲ್ಲಿ ಕೂರಿಸಿರುವುದಕ್ಕೆ ಅವರಿಗೆ ಸಹಿಸಲಾಗುತ್ತಿಲ್ಲ ಎಂದು ಕಿಡಿ ಕಾರಿದ್ದರೆ. ಈ ಕುರಿತಂತೆ ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿಗಳ ಬಗ್ಗೆ ಸಿಎಂ ಏಕವಚನದ ಮಾತಿಗೆ ಬಿವೈ ವಿಜಯೇಂದ್ರ ವಿರೋಧ ವ್ಯಕ್ತಪಡಿಸಿದ್ದು, ಈ ಮಾತು ಮುಖ್ಯಮಂತ್ರಿಗಳ ಬಾಯಿ ತಪ್ಪಿನಿಂದ ಬಂದಿದೆ ಅಂತ ಅನಿಸುತ್ತಿಲ್ಲ. ಸಿಎಂ ಅಂತರಾಳದ ಭಾವನೆಯನ್ನು ಮಾತಿನ ಮೂಲಕ ಹೊರ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅನುಭವಿ ಸಿಎಂ ಅವರಿಂದ ಇಂತಹ ನಿರೀಕ್ಷೆಯನ್ನು ಮಾಡಿರಲಿಲ್ಲ ಸಿಎಂ ಬಾಯಿಯಿಂದ ಯಾಕೆ ಈ ಮಾತು ಬಂತು ಅನ್ನೋದೇ ಆಶ್ಚರ್ಯವಾಗಿದೆ. ರಾಷ್ಟ್ರಪತಿಗಳ ಬಗ್ಗೆ ಅವರ ಮಾತನ್ನಾಡಿದ್ದು ಅಕ್ಷಮ್ಯ ಅಪರಾಧ ಉನ್ನತ ಸ್ಥಾನದಲ್ಲಿ ದಲಿತ ಮಹಿಳೆಯನ್ನು ಕೂರಿಸಿದ್ದಕ್ಕೆ ಅವರು ಸಹಿಸುತ್ತಿಲ್ಲ.ಇದ್ಯಾವುದನ್ನು ಸಹಿಸಿಕೊಳ್ಳಲು ಕಾಂಗ್ರೆಸ್ ನವರಿಗೆ ಆಗುತ್ತಿಲ್ಲ. ಕಾಂಗ್ರೆಸ್ನವರು ಗುತ್ತಿಗೆ ಪಡೆದವರಂತೆ ದಲಿತರ ಬಗ್ಗೆ ಮಾತನಾಡುತ್ತಾರೆ…

Read More

ದಕ್ಷಿಣಕನ್ನಡ : ಜಿಲ್ಲೆಯ ಬೆಳ್ತಂಗಡಿ ತಾಲೂಕು ವೇಣುರಿನಲ್ಲಿ ನಿನ್ನೆ ಪಟಾಕಿ ಗೋದಬಿನಲ್ಲಿ ಸ್ಫೋಟದಿಂದ ಮೂವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಂಕಿತ ವ್ಯಕ್ತಿ ಸಯ್ಯದ್ ಬಶೀರ್ ಎನ್ನುವವನ್ನು ಪೊಲೀಸರು ಬಂಧಿಸಿದ್ದಾರೆ. ಪಟಾಕಿಗೋದಾಮಿನಲ್ಲಿ ಸ್ಪೋಟದಿಂದ ಮೂವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ್ಕೆ ಅಲ್ಲಿ ಅಕ್ರಮವಾಗಿ ಬಾಂಬ್ ತಯಾರಿಸಲಾಗುತ್ತಿತ್ತು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಯ್ಯದ್ ಬಶೀರ್ನನ್ನು ಇದೀಗ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬಶೀರ್ನನ್ನು ಸುಳ್ಯದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿಸಿದ ನಂತರ ಅಜ್ಞಾತ ಸ್ಥಳದಲ್ಲಿ ಬೆಳ್ತಂಗಡಿ ಪೊಲೀಸರು ಬಶೀರ್ನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಹಿನ್ನೆಲೆ? ನಿನ್ನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್‌ತ್ಯಾರು ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಸಂಜೆ 5 ಗಂಟೆಗೆ ಸ್ಫೋಟ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ತ್ರಿಶೂರಿನ ವರ್ಗೀಸ್, ಹಾಸನ ನಾಯಕನಹಳ್ಳಿ…

Read More

ಮಂಡ್ಯ : ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ಕೆ ಸಂಬಂಧಿಸಿದಂತೆ ಇದೀಗ ರಾಜ್ಯಾದ್ಯಂತ ಹಿಂದೂ ಪರ ಸಂಘಟನೆಗಳು ಹಾಗೂ ಬಿಜೆಪಿ ಜೆಡಿಎಸ್ ಪಕ್ಷಗಳು ತೀವ್ರವಾದ ವಿರೋಧ ವ್ಯಕ್ತಪಡಿಸುತ್ತಿದ್ದು, ಕೆರಗೋಡು ಗ್ರಾಮದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಾಗಿದೆ. ಹನುಮಧ್ವಜ ತೆರವು ವಿರೋಧಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಬಿಜೆಪಿ ಕರೆ ಕೊಟ್ಟಿದೆ. ಬಿಜೆಪಿ ಹೋರಾಟಕ್ಕೆ ಜೆಡಿಎಸ್ ನಾಯಕರೂ ಸಾಥ್ ನೀಡಿದ್ದಾರೆ. ಮಂಡ್ಯದಲ್ಲಿ ಇಂದು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಕೆರಗೋಡು ಗ್ರಾಮದಿಂದ ಪಾದಯಾತ್ರೆ ಆರಂಭವಾಗಲಿದೆ. ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಾಷದಯಾತ್ರೆಗೆ ಚಾಲನೆ ನೀಡಲಾಗುತ್ತದೆ. 15ಕಿ.ಮೀ ಸಾಗಲಿರುವ ಪಾದಯಾತ್ರೆ ಹುಲಿವಾನ, ಸಾತನೂರು, ಚಿಕ್ಕಮಂಡ್ಯ ಮಾರ್ಗವಾಗಿ ಮಂಡ್ಯದ ಶ್ರೀಕಾಳಿಕಾಂಭ ದೇವಾಲಯ ಪ್ರವೇಶಿಸಲಿದೆ. ಅಲ್ಲಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಮುಂದುವರಿಯಲಿದೆ. ಡಿ.ಸಿ ಕಚೇರಿಗೆ ಮುತ್ತಿಗೆ ಹಾಕಿ ಹನುಮ ಧ್ವಜ ಪುನರ್ ಸ್ಥಾಪನೆಗೆ ಆಗ್ರಹಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಎಸ್‌ಪಿ, ಎಎಸ್‌ಪಿ, ಇನ್ಸ್ಪೆಕ್ಟರ್‌ಗಳು ಸೇರಿ 400ಕ್ಕೂ ಹೆಚ್ಚು ಪೊಲೀಸರ…

Read More

ದಾವಣಗೆರೆ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸೌಲಭ್ಯ ದೊರಕಿಸಿಕೊಡುವ ಬಗ್ಗೆ ಸರ್ಕಾರ ಪದೇ ಪದೇ ನಿರ್ಲಕ್ಷ್ಯ ತೋರುತ್ತಿದ್ದು, ಶೀಘ್ರದಲ್ಲಿಯೇ ದಾವಣಗೆರೆಯಲ್ಲಿ ಸಮಾಜದ ಮುಖಂಡರ ರಾಜ್ಯ ಮಟ್ಟದ ಸಭೆ ನಡೆಯಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಸೇರಿಸಬೇಕೆಂಬ ಇಡೀ ವೀರಶೈವ ಸಮಾಜದ ಬೇಡಿಕೆಗೆ ನಮ್ಮದು ಪೂರಕ ಬೆಂಬಲವಿದೆ. ಸರ್ವೆ ಕಾರ್ಯ ಕೈಗೊಂಡಾಗ ಸಮಾಜದವರು ಒಳಪಂಗಡಗಳ ನಮೂನೆಯಲ್ಲಿ ಪಂಚಮಸಾಲಿ ವೀರಶೈವ ಎಂದು ನಮೂದಿಸಬೇಕು. ಇದರಿಂದ ವೀರಶೈವ ಜನಾಂಗದ ಬೇಡಿಕೆ ಸಮಗ್ರ ಸಮಾಜದ ಬೇಡಿಕೆಗೆ ಖಂಡಿತ ಪೆಟ್ಟಾಗುವುದಿಲ್ಲ ಎಂದರು. ಮೀಸಲಾತಿ ಸೌಲಭ್ಯಕ್ಕಾಗಿ ಕೂಡಲ ಸಂಗಮ ಪೀಠ ನಿರಂತರವಾಗಿ ಹೋರಾಟ ನಡೆಸುತ್ತಾ ಸಾಗಿದೆ. ಈ ಸೌಲಭ್ಯ ಪಡೆಯದ ಹೊರತು ವಿರಮಿಸುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೀಸಲಾತಿ ಸೌಲಭ್ಯ ಕೊಡುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿ ಇದೀಗ ಜನಾಂಗಕ್ಕೆ ಒಳಿತಾಗುವ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ ಮತ್ತೊಮ್ಮೆ ದೊಡ್ಡ ಮಟ್ಟದ ಹೋರಾಟ ಅನಿವಾರ್ಯ…

Read More

ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ಮೇಷ ರಾಶಿ ಇಂದಿನ ದಿನ ಇಂದು ದಿನದ ಮೊದಲ ಭಾಗದಲ್ಲಿ ನೀವು ಲೋಕೋಪಕಾರ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿರಬಹುದು. ನೀವು ಸ್ನೇಹಿತರಿಗೆ ಅಥವಾ ಸಂಬಂಧಿಕರಿಗೆ ಆರ್ಥಿಕವಾಗಿ…

Read More

ಮೈಸೂರು : ಮೈಸೂರಿನಲ್ಲಿ ಸಾಲಗಾರರ ಕಾಟಕ್ಕೆ ಹೆದರಿ ಕುಟುಂಬವೊಂದು ನಾಪತ್ತೆಯಾಗಿರುವ ಘಟನೆ ಮೈಸೂರಿನ ಕೆಜಿ ಕೊಪ್ಪಲಿನ ಗ್ರಾಮದ ಒಂದೇ ಕುಟುಂಬದ 5 ಜನರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ನಾಪತ್ತೆಯಾಗೋಕು ಮುನ್ನ ಕುಟುಂಬದವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರೊಬ್ಬರ ಮೊಬೈಲ್ ಗೆ ಮೆಸೇಜ್ ಕೂಡ ಕಳುಹಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ವಾಟ್ಸಾಪ್ನಲ್ಲಿ ಸ್ನೇಹಿತರಿಗೆ ಸಂದೇಶ ಕಳಿಸಿ ಕುಟುಂಬ ನಾಪತ್ತೆಯಾಗಿದೆ. ಎಂಟು ದಿನಗಳಿಂದ ಕುಟುಂಬದ 5 ಸದಸ್ಯರು ಸಂಪರ್ಕಕ್ಕೆ ಸಿಗದೇ ನಾಪತ್ತಿಯಾಗಿದ್ದಾರೆ. ಕೆಜಿ ಕೊಪ್ಪಲಿನ ಮಹೇಶ್ (35) ಪತ್ನಿ ಭವಾನಿ (28) ಪುತ್ರಿ ಪ್ರೇಕ್ಷ (3) ಮಹೇಶ್ ತಂದೆ ಮಹದೇವಪ್ಪ (65) ತಾಯಿ ಸುಮಿತ್ರ (55) ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.ಕುಟುಂಬಸ್ಥರ ನಾಪತ್ತೆ ಬಗ್ಗೆ ಭವಾನಿ ಸಹೋದರ ಜಗದೀಶ್ ಈ ಕುರಿತಂತೆ ದೂರು ನೀಡಿದ್ದು, ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಗೆ ಜಗದೀಶ್ ಅವರು ದೂರು ನೀಡಿದ್ದರೆ. ಮಾರ್ಕೆಟಿಂಗ್ ಬಿಸಿನೆಸ್ ನಡೆಸುತ್ತಿದ್ದ ಮಹೇಶ್​ಗೆ, ವೀರೇಶ್ ಎಂಬುವರು ವ್ಯವಹಾರಕ್ಕೆ ಸಾಥ್ ನೀಡಿದ್ದರು. ಮಹೇಶ್ ಪರಿಚಯ ಹೇಳಿಕೊಂಡು ವೀರೇಶ್ 30 ರಿಂದ…

Read More

ವಿಜಯಪುರ ::ವಿಜಯಪುರ ಜಿಲ್ಲೆಯಲ್ಲಿ ವಿವಿಧಡೆ ಭೂಕಂಪನ ಮುಂದುವರೆದಿದ್ದು, ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ ತಿಳಿದುಬಂದಿದೆ. ವಿಜಯಪುರ ನಗರದಲ್ಲೂ ಎರಡು ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದು ಬಂದಿದೆ. ತಡರಾತ್ರಿ 12.22 ನಿಮಿಷಕ್ಕೆ ಹಾಗೂ ರಾತ್ರಿ‌ 1.20 ನಿಮಿಷಕ್ಕೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪದ ತೀರ್ವತೆಯನ್ನು ರಿಕ್ಟರ್​ ಮಾಪಕದಲ್ಲಿ 2.9 ಎಂದು ಅಳೆಯಲಾಗಿದೆ. ಭೂಮಿಯ 5 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ. ಭೂಕಂಪನದಿಂದ ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಮನೆಯಲ್ಲಿನ ಸಾಮಾಗ್ರಿಗಳು ಚಲ್ಲಾಪಿಲ್ಲಿಯಾಗಿವೆ. ಪದೇ ಪದೆ ಭೂಕಂಪನದಿಂದ ಜನತೆ ಆತಂಕಗೊಂಡಿದ್ದಾರೆ. ಅಲ್ಲದೆ ಕಳೆದ ವರ್ಷ ಡಿಸೆಂಬರ್ 8 ರಂದು ವಿಜಯಪುರ ತಾಲೂಕಿನ ಉಕಿಮನಾಳ ಗ್ರಾಮದಲ್ಲಿ ಭೂಕಂಪವಾಗಿತ್ತು.ಜಿಲ್ಲೆಯ ಉಕಿಮನಾಳ ಗ್ರಾಮದಲ್ಲಿ 3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳು ದೃಢಪಡಿಸಿದ್ದರೂ. ಕಳೆದೆರಡು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೇ ಭೂಕಂಪ ಆಗುತ್ತಲೇ ಇದೆ

Read More

ತುಮಕೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ವಿವಾದಕ್ಕೆ ಸಂಬಂಧಿಸಿದಂತೆ, ತುಮಕೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಬೇರೆ ಕಡೆ ಹನುಮಾನ್‌ ಧ್ವಜ ಹಾರಿಸಲು ಯಾರದ್ದೂ ತಕರಾರು ಇಲ್ಲ. ಸರ್ಕಾರಿ ಜಾಗದಲ್ಲಿ ಹನುಮಾನ್‌ ಧ್ವಜ ಹಾರಿಸಲು ಅವಕಾಶವಿಲ್ಲ ಎಂದು ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಹನುಮಾನ ಧ್ವಜ ಇಳಿಸಿದ ಕುರಿತು ಪ್ರತಿಕ್ರಿಯಿಸಿ, ರಾಷ್ಟ್ರಧ್ವಜ ಹಾರಿಸುತ್ತೇವೆಂದು ಗ್ರಾಮ ಪಂಚಾಯಿತಿ ನಿಂದ ಅನುಮತಿ ಪಡೆದಿದ್ದರು. ಆದರೆ ರಾಷ್ಟ್ರಧ್ವಜ ಬದಲು ಹನುಮ ಧ್ವಜ ಹಾರಿಸಿದ್ದಾರೆ. ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಿದ್ದರಿಂದ ತೆರವುಗೊಳಿಸಿದ್ದಾರೆ. ಬಳಿಕ ಕೆಲವು ಪ್ರತಿಭಟನೆಗಳು ನಡೆದವು ಎಂದು ಸ್ಪಷ್ಪಪಡಿಸಿದರು. ರಾಷ್ಟ್ರ ಧ್ವಜ ಹಾಕುತ್ತೇವೆ ಎಂದು ಊರಿನವರೆಲ್ಲ ಹೇಳಿದ್ದು ಒಳ್ಳೆಯದೇ. ಆದರೆ, ನಂತರ ಬೇರೆಯ ಧ್ವಜವನ್ನ ಹಾಕಿದ್ದಾರೆ. ಅದಾದ ಬಳಿಕ ಬೇರೆ ಬೇರೆಯವರು ಬೇರೆ ಧ್ವಜ ಹಾಕುತ್ತೇವೆ ಅಂತಾ ಹೇಳಿದ್ದಾರೆ. ಕೆಲವರು ಅಂಬೇಡ್ಕರ್, ಕೆಲವರು ಕೆಂಪೇಗೌಡ ಧ್ವಜ ಹಾರಿಸುತ್ತೇವೆ ಎಂದಿದ್ದಾರೆ ಪರಮೇಶ್ವರ್ ವಿವರಿಸಿದರು.ರಾಜ್ಯ ಸರ್ಕಾರ ಹಿಂದೂ…

Read More