Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಸ್ನೇಹಿತರ ಜೊತೆಗೆ ಕೃಷಿ ಹೊಂಡಕ್ಕೆ ಈಜಲು ತೆರಳಿದ್ದ SSLC ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಫ್ಜಲ್ಪುರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಫ್ಜಲ್ಪುರದ ಮಹಾಂತೇಶ್ವರ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶ್ರೀಶೈಲ ನಿಲೆಗಾರ (16) ಶನಿವಾರ ಕೃಷಿ ಹೊಂಡದಲ್ಲಿ ಈಜಲು ಹೋಗಿ ಅವನು ಮೃತನಾಗಿದ್ದಾನೆ. ಈ ವೇಳೆ ಡಬ್ಬಿಗೆ ಕಟ್ಟಿರುವ ಹಗ್ಗ ಹರಿದು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಶ್ರೀಶೈಲ ಎಸ್ಸೆಸ್ಸೆಲ್ಸಿ ಕನ್ನಡ ಪರೀಕ್ಷೆ ಬರೆದಿದ್ದ.ಬಾಲಕನ ತಂದೆ ಪಾನಿಪುರಿ ವ್ಯಾಪಾರ ಮಾಡುತ್ತಿದ್ದರು.
ಚಿಕ್ಕಬಳ್ಳಾಪುರ : ಜಮೀನು ವಿವಾದದ ಹಿನ್ನೆಲೆಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸೊನಗನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು 100ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿರುವ ದುಷ್ಕರ್ಮಿಗಳು, ಗ್ರಾಮದ ಗಂಗಮ್ಮಗೆ ಸೇರಿದ ತೋಟದಲ್ಲಿ ಈ ಒಂದು ಕೃತ್ಯ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸೊನಗನಹಳ್ಳಿ ಗ್ರಾಮದಲ್ಲಿ ಗಂಗಮ್ಮ ಎಂಬುವರಿಗೆ ಸೇರಿದ ತೋಟದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಡಿಕೆ ಮರಗಳನ್ನು ಬೆಳೆದಿದ್ದರು. ಜಮೀನು ವಿವಾದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಅಡಕೆ ಮರಗಳನ್ನು ನಾಶ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಹಶೀಲ್ದಾರ್ ನ್ಯಾಯಾಲಯದಲ್ಲಿ ಕೇಸ್ ದಾಖಲಿಸಿದ್ದಕ್ಕೆ ಈ ಒಂದು ಕೃತ್ಯ ಎಸಗಲಾಗಿದೆ ಎನ್ನಲಾಗಿದ್ದು, ಘಟನೆ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಹಂಗಾಮದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿಯಾಗಿದ್ದಾರೆ.ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಮಲ್ಲಿಕಾರ್ಜುನ್ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸುಮಾರು 45ಕ್ಕೂ ಹೆಚ್ಚು ನಿಮಿಷಗಳ ಕಾಲ ಸಿಎಂ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಮಾತುಕತೆ ನಡೆಸಿದ್ದಾರೆ. ಹನಿ ಟ್ರಾಪ್ ಬಗ್ಗೆ ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಎಂ ಸಿದ್ದರಾಮಯ್ಯ ಅವರು ನನ್ನ ನಿವಾಸಕ್ಕೆ ಬರುತ್ತೇನೆ ಅಂತ ಹೇಳಿದ್ದರು. ಅವರಿಗೆ ನಡೆಯಲು ಆಗದಿದ್ದಕ್ಕೆ ನಾನೇ ಅವರನ್ನು ಭೇಟಿಯಾದೆ ಸಿಎಂ ಸಿದ್ದರಾಮಯ್ಯ ಅವರನ್ನು ಸೌಜನ್ಯಯುತ ಭೇಟಿ ಮಾಡಿದ್ದೇನೆ. ಸಿಎಂ ಸಿದ್ದರಾಮಯ್ಯ ಯೋಗ ಕ್ಷೇಮ ಕೇಳೋದು ನಮ್ಮ ಕರ್ತವ್ಯ. ಆದಷ್ಟು ಇಂದ ಭೇಟಿ ಮಾಡಿದ್ದೇನೆ ಎಂದು ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ತುಮಕೂರು : ರಾಜ್ಯದಲ್ಲಿ ಸದ್ಯ ಹಾನಿ ಟ್ರ್ಯಾಪ್ ಭಾರಿ ಸುದ್ದಿಯಾಗುತ್ತಿದ್ದು, ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಶಾಸಕ ಯತ್ನಾಳ್ ಆರೋಪ ಮಾಡಿದ ಮೇಲೆ ಹಲವು ಬೆಳವಣಿಗೆ ನಡೆದಿದ್ದವು. ಇದೀಗ ಸಚಿವ ರಾಜಣ್ಣ ಪುತ್ರ ರಾಜೇಂದ್ರ ಅವರು ಸಹ ನನಗೂ ವೀಡಿಯೋ ಕಾಲ್ ಮೂಲಕ ಹನಿಟ್ರ್ಯಾಪ್ ಮಾಡಲು ಪ್ರಯತ್ನಿಸಿದ್ದರು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಲ್ಲಿ ಮಾತನಾಡಿದ ಅವರು, ಸಚಿವ ರಾಜಣ್ಣ ಅವರನ್ನ ಹನಿಟ್ರ್ಯಾಪ್ ಬಲೆಗೆ ಬೀಳಿಸಲು ಲೇಡಿ ಸೇರಿ ಮೂರ್ನಾಲ್ಕು ಜನ ಪ್ರಯತ್ನ ಮಾಡಿದ್ದಾರೆ.ಈ ಬಗ್ಗೆ ಹೈಕಮಾಂಡ್ಗೆ ದೂರು ಕೊಡುತ್ತೇನೆ. 3-4 ದಿನ ಬಿಟ್ಟು ದೆಹಲಿಗೆ ಹೋಗಿ ಹೈಕಮಾಂಡ್ಗೆ ಹೇಳುತ್ತೇವೆ ಎಂದು ಅವರು ತಿಳಿಸಿದರು. ನನಗೂ ಫೋನ್ ಕಾಲ್ ಹಾಗೂ ವೀಡಿಯೋ ಕಾಲ್ ಮೂಲಕ ಟ್ರ್ಯಾಪ್ ಮಾಡಲು ಪ್ರಯತ್ನ ಮಾಡಿದ್ದರು. ಆ ಎಲ್ಲಾ ನಂಬರ್ ಹಾಗೂ ಕಾಲ್ ಡೀಟೆಲ್ಸ್ ನನ್ನ ಬಳಿ ಇದೆ. ಡಿಜಿಗೆ ಈ ಮೂಲಕ ದೂರು ಕೊಡುತ್ತೇನೆ. ಜೊತೆಗೆ ರಾಜಣ್ಣರಿಗೆ ಲೇಡಿ…
ತುಮಕೂರು : ತುಮಕೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದು, ಬಂಧಿತರಿಂದ 13 ಲಕ್ಷ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಮೈಸೂರಿನ ರಾಕೇಶ್, ಮಂಡ್ಯದ ಹರ್ಷ ಪಿ.ಜೆ. ಎಂದು ತಿಳಿದುಬಂದಿದೆ. ತುಮಕೂರು ನಗರದ ಗಾರ್ಡನ್ ರಸ್ತೆಯ ಟೂಡಾ ಲೇಔಟ್ನಲ್ಲಿ ಮಾರಾಟ ಮಾಡಲು ಆರೋಪಿಗಳು ಗಾಂಜಾ ಸಾಗಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ. ಇದೀಗ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೊದಲನೇ ಅಪಘಾತ ಚಾಮರಾಜನಗರ ತಾಲೂಕಿನ ಹರದನಹಳ್ಳಿ, ಎರಡನೇ ಅಪಘಾತ ಗುಂಡ್ಲುಪೇಟೆಯಲ್ಲಿ ನಡೆದಿದೆ. ಮೊದಲನೇ ಅಪಘಾತ ಬೈಕ್ಗೆ ಈಚರ್ ವಾಹನ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದರುವ ಘಟನೆ ಚಾಮರಾಜನಗರ ತಾಲೂಕಿನ ಹರದನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಚಾಮರಾಜನಗರ ತಾಲೂಕಿನ ಬ್ಯಾಡಮೂಡ್ಲು ಗ್ರಾಮದ ಅಭಿಷೇಕ್(23) ಹಾಗೂ ಅಭಿ(21) ಎನ್ನಲಾಗಿದೆ. ಮಾದೇಶ್(21) ಎಂಬಾತನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮೈಸೂರಿಗೆ ರವಾನಿಸಲಾಗಿದೆ. ಎರಡನೇ ಅಪಘಾತವು ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲೂಕಿನ ಹಳ್ಳದಮಾದಹಳ್ಳಿ ಗೇಟ್ ಬಳಿ ನಡೆದಿದೆ. ರಾಘವಾಪುರ ಗ್ರಾಮದ ನಾಗಶೆಟ್ಟಿ(37) ಮೃತರು ಎಂದು ತಿಳಿದುಬಂದಿದೆ.ಬೈಕ್ನಲ್ಲಿ ಬೇಗೂರು ಕಡೆ ಹೋಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಕಾರು ವಿದ್ಯುತ್ ಕಂಬಕ್ಕೆ ಗುದ್ದಿ ನಿಂತಿದೆ. ಕಾರು…
ಬೆಂಗಳೂರು : ಇಂದು ಅಖಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಕನ್ನಡಪರ ಸಂಘಟನೆಗಳು ಪ್ರತಿಭಟನೆ ರ್ಯಾಲಿ ಮೂಲಕ MES ಹಾಗೂ ಮಹಾರಾಷ್ಟ್ರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈ ಒಂದು ಬಂದ್ ಬಿಸಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ತಟ್ಟಿದೆ. ವಿಮಾನ ನಿಲ್ದಾಣಕ್ಕೆ ಕಡಿಮೆ ಸಂಖ್ಯೆಯಲ್ಲಿ ಟ್ಯಾಕ್ಸಿಗಳು ಏರ್ ಪೋರ್ಟ್ ಗೆ ಸಂಚರಿಸುತ್ತಿವೆ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನತ್ತ ಹೆಚ್ಚಿನ ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿಲ್ಲ ಎಂದು ತಿಳಿದುಬಂದಿದೆ. ಪ್ರಯಾಣಿಕರಿಲ್ಲದೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೂರ್ತಿ ಖಾಲಿ ಖಾಲಿ ಆಗಿದೆ.
ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕನ್ನಡ ಪರ ಸಂಘಟನೆಗಳು ಹೋರಾಟ ಮಾಡುತ್ತಿವೆ. ಇನ್ನು ಬೆಂಗಳೂರಿನಲ್ಲಿ ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು. ಮೆಟ್ರೋ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರಿಗೆ ತಡೆ ನೀಡಲಾಯಿತು. ರಾಜಾಜಿನಗರ ಮತ್ತು ಬಸವೇಶ್ವರ ನಗರದಲ್ಲಿ ಮೆಟ್ರೋ ಮುತ್ತಿಗೆ ಹಾಕಾಲು ಸಂಘಟನೆ ಯತ್ನಿಸಿತ್ತು. ಈ ವೇಳೆ ಪೊಲೀಸರು ಅವರನ್ನು ತಡೆದರು. ಪೋಲೀಸರ ತಡೆಗೆ ಹೋರಾಟಗಾರರು ರೋಷಾವೇಶ ತಾಳಿದ್ದಾರೆ. ಈ ವೇಳೆ ಹೋರಾಟಗಾರರ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ ತಕ್ಷಣ ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಚಿಕ್ಕಮಂಗಳೂರಿನಲ್ಲಿ ಕರ್ನಾಟಕ ಬಂದ್ ಗೆ ಕೆಎಸ್ಆರ್ಟಿಸಿ ನೌಕರರು ಬೆಂಬಲ ನೀಡದ ಹಿನ್ನೆಲೆಯಲ್ಲಿ ಚಾಲಕರನ್ನು ಹೋರಾಟಗಾರರು ಶಾಲು ಹೊಂದಿಸಿ ಸನ್ಮಾನಿಸಿದ ಘಟನೆ ನಡೆಯಿತು. ಕರ್ನಾಟಕ ಬಂದ್ ಗೆ ಕೆಎಸ್ಆರ್ಟಿಸಿ…
ದಾವಣಗೆರೆ : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಪ್ರತಿಭಟನೆಯ ಬಿಸಿ ಕಾವೇರಿದೆ. ಬೆಂಗಳೂರು, ಮೈಸೂರು, ಚಿಕ್ಕಮಂಗಳೂರು, ಮಂಡ್ಯ ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಜೋರಾಗಿದೆ ಇನ್ನು ದಾವಣಗೆರೆಯಲ್ಲಿ ನಡು ರಸ್ತೆಯಲ್ಲಿಯೇ ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಯಲ್ಲಮ್ಮ ನಗರ ಬಳಿ ಟೈರ್ಗೆ ಬೆಂಕಿ ಇಟ್ಟಿದ್ದಾರೆ. ಪೊಲೀಸರು ಎಷ್ಟೇ ಕಟ್ಟೆಚ್ಚರ ವಹಿಸಿದರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ್ದಾರೆ. ಇನ್ನು ಬಲವಂತದ ಬಂಧಗೆ ಯಾವುದೇ ಮೊಲಾಜಿ ಇಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ದಾವಣಗೆರೆ ಜಿಲ್ಲಾ ಎಸ್ ಪಿ ಉಮಾ ಪ್ರಶಾಂತ್ ಅವರು ತಿಳಿಸಿದರು.03-04 ಸಂಘಟನೆಗಳು ಈ ಬಂದ್ಗೆ ದಾವಣಗೆರೆಯಲ್ಲಿ ಬೆಂಬಲ ಸೂಚಿಸಿವೆ. ದಾವಣಗೆರೆ ನಗರ ತಾಲೂಕು ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ಮಾಡಲಾಗಿದೆ.ಬೆಳಗ್ಗೆ ಐದು ಗಂಟೆಯಿಂದಲೇ ನಮ್ಮ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾರೆ.…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ನಡೆದಿದ್ದು ಕಾಲೇಜಿನ ನಾಲ್ಕನೇ ಮಹಡಿಯಿಂದ ಜಿಗಿದು ಕೇರಳ ಮೂಲದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು ಕೇರಳ ರಾಜ್ಯದ ಕಲ್ಲಿಕೋಟೆ ಮೂಲದ ಲಕ್ಷ್ಮೀ ಮಿತ್ರಾ (21) ಎಂದು ಗುರುತಿಸಲಾಗಿದೆ. ಲಕ್ಷ್ಮೀ ಹೆಸರಘಟ್ಟ ರಸ್ತೆಯ ಪ್ರತಿಷ್ಟಿತ ಕಾಲೇಜಿನಲ್ಲಿ ಈಕೆ ಬಿಸಿಎ 6 ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದಳು ಎಂದು ಹೇಳಲಾಗುತ್ತಿದೆ. ಈ ವೇಳೆ ಕಾಲೇಜಿನ 4ನೇ ಮಹಡಿಯಿಂದ ಬಿದ್ದು ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಳಗೆ ಬಿದ್ದ ತಕ್ಷಣ ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೂ ಕೂಡ ಲಕ್ಷ್ಮಿ ಬದುಕುಳಿಯಲಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














