Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಮಂಡ್ಯ : ಇಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನ ಯಾತ್ರೆ ನಡೆಯಿತು. ಜಾಮಿಯಾ ಮಸೀದಿ ಮುಂದೆ ಕುಳಿತು ಹನುಮ ಮಾಲಾಧಾರಿಗಳು ಭಜನೆ ಮಾಡಿದರು. ಈ ವೇಳೆ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡೆ ಅವರು ಹನುಮ ಮಾಲಾಧಾರಿಗಳ ಮನವೊಲಿಸಿದರು. ಬಳಿಕ ಮಾಲಾಧಾರಿಗಳು ಎಸ್ ಪಿ ಮನೋವೊಲಿಕೆಗೆ ನಂತರ ಮುಂದೆ ಸಾಗಿದರು. ಜಾಮಿಯಾ ಮಸೀದಿ ವೃತದಿಂದ ಹನುಮ ಮಾಲಾಧಾರಿಗಳು ಮುಂದೆ ಸಾಗಿದರು ಕೆಲವೇ ನಿಮಿಷಗಳಲ್ಲಿ ರಂಗನಾಥ ಸ್ವಾಮಿ ದೇವಾಲಯ ಬಳಿ ಯಾತ್ರೆ ಸಮಾಪ್ತಿ ಆಗಲಿದೆ. ಈ ವೇಳೆ ಜಾಮಿಯಾ ಮಸೀದಿ ಜಾಗ ನಮ್ಮದು ಎಂದು ಮಾಲಾಧಾರಿಗಳು ಘೋಷಣೆ ಕೂಗಿದರು. ಮಸೀದಿ ವೃತದಲ್ಲೇ ಹನುಮ ಮಾಲಾಧಾರಿಗಳು ಘೋಷಣೆ ಕೂಗುತ್ತಿದ್ದರು. ಈ ವೇಳೆ ಕೆಲವು ಹನುಮ ಮಾಲಾಧಾರಿಗಳು ಜಾಮಿಯ ಮಸೀದಿಗೆ ಹೋಗಲು ಯತ್ನಿಸಿದರು. ಪೊಲೀಸರು ಹಾಗೂ ಹನುಮ ಮಾಲಾಧಾರಿಗಳ ನಡುವೆ ಈ ಬೆಳೆ ವಾಗ್ವಾದ ನಡೆಯಿತು. ಹರಸಾಹಸ ಪಟ್ಟು ಮಾಲದಾರಿಗಳನ್ನು ಪೊಲೀಸರು ಮುಂದೆ ಕಳುಹಿಸಿದರು.
ಬೆಂಗಳೂರು : ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತಾರ ಸೀಕ್ವೆಲ್’ನ ಸಿನಿಮಾವನ್ನು ನೋಡಿದ ನಟ ರಣವೀರ್ ಸಿಂಗ್ ಅವರು ಈ ಸಿನಿಮಾದಲ್ಲಿರುವ ಚಾವುಂಡಿ ದೈವವನ್ನು ಫೀಮೇಲ್ ಘೋಸ್ಟ್ ಎಂದು ಕರೆದು ಅದರ ನಟನೆಯ ಅನುಕರಣೆ ಮಾಡಿದ್ದರು. ಇದೀಗ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ದ ದೂರು ದಾಖಲಾಗಿದೆ. ಬಾಲಿವುಡ್ ಸ್ಟಾರ್ ನಟ ದೀಪಿಕಾ ಪಡುಕೋಣೆ ಪ, ಸ್ಟಾರ್ ನಟ ರಣವೀರ್ ಸಿಂಗ್ ವಿರುದ್ಧ ಇದೀಗ ಕರ್ನಾಟಕದಲ್ಲಿ, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಣವೀರ್ ಸಿಂಗ್ ಅವರು ಕಾಂತಾರ ದೈವವನ್ನು ‘ದೆವ್ವ’ ಎಣಬ ಪದ ಉಪಯೋಗಿಸಿ ಕರೆದಿದ್ದು ದೊಡ್ಡ ವಿವಾದವಾಗುತ್ತಿದೆ.28 ನವೆಂಬರ್ 2025ರಂದು, ಗೋವಾದ ಇಂಟರ್ ನ್ಯಾಷನಲ್ ಫೀಲಂ ಫೆಸ್ಟಿವಲ್ ಆಫ್ ಇಂಡಿಯಾದಲ್ಲಿ ಈ ಘಟನೆ ನಡೆದಿತ್ತು. ಕಾಂತಾರ ಸಿನಿಮಾದ ಉಳ್ಳಾಳ್ತಿ ದೈವದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ನಟ ರಣವೀರ್ ಸಿಂಗ್ ವಿರುದ್ಧ ಇದೀಗ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತಾರ…
ಶಿವಮೊಗ್ಗ : ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಯಾದ ಮರುದಿನವೇ ಕುಸಿದು ಬಿದ್ದು ನವ ವರ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಹನುಮಂತಾಪುರದ ಯುವಕ ಮದುವೆಯಾದ ಮರುದಿನವೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಮೇಶ್(30) ಮೃತಪಟ್ಟವರು. ಭಾನುವಾರ ಹರಪನಹಳ್ಳಿ ಸಮೀಪದ ಬಂಡ್ರಿಯ ಯುವತಿಯನ್ನು ರಮೇಶ್ ಮದುವೆಯಾಗಿದ್ದರು. ವಧುವಿನ ಮನೆಗೆ ನವ ದಂಪತಿ ತೆರಳಿದ್ದಾರೆ. ದೇವರ ಕೋಣೆಗೆ ಹೋಗಿ ಕೈಮುಗಿದು ಹೊರ ಬರುತ್ತಿದ್ದಂತೆ ರಮೇಶ್ ಹೃದಯಾಘಾತದಿಂದ ಕುಸಿತು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದಾರೆ.
ಬೆಂಗಳೂರು : ಕಳೆದ ಶನಿವಾರದಿಂದ ರಾಜ್ಯದಲ್ಲಿ ಬ್ರೇಕ್ ಫಾಸ್ಟ್ ರಾಜಕಾರಣ ಜೋರಾಗಿತ್ತು. ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ಕರೆದು ಬ್ರೇಕ್ ಫಾಸ್ಟ್ ಮೀಟಿಂಗ್ ಆರೇಂಜ್ ಮಾಡಿದ್ದರು. ಬಳಿಕ ನಿನ್ನೆ ಡಿಕೆ ಶಿವಕುಮಾರ್ ಖುದ್ದು ಸಿಎಂ ಸಿದ್ದರಾಮಯ್ಯಗೆ ಅಹ್ವಾನ ನೀಡಿದ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು. ಇದೀಗ ಇಂದು ರಾಜ್ಯಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಆಗಮಿಸಿದ್ದು, ಮಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಲಂಚ್ ಮೀಟಿಂಗ್ ಅರೇಂಜ್ ಮಾಡಿದ್ದಾರೆ. ಮಂಗಳೂರಲ್ಲಿ ಕಾವೇರಿ ಗೆಸ್ಟ್ ಹೌಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಕೆ.ಸಿ ವೇಣುಗೋಪಾಲ್ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ. ಸಿಎಂಗೆ ಖಾದ್ಯ ರೆಡಿ ಡಿಕೆ ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಗೆ ಸಿಎಂ ಫೆವರೇಟ್ ನಾಟಿಕೋಳಿ ಸಾರು ಮಾಡಿದ್ದರು. ಇದೀಗ ಮಂಗಳೂರಲ್ಲಿ ಸಹ ನಾಟಿ ಕೋಳಿ ಸಾರು ಸೇರಿದಂತೆ ಮಂಗಳೂರಿನ ಹಲವು ಖಡಯಗಳನ್ನು ತಯ್ಯಾರಿಸಲಾಗಿದೆ. ಕೆಲವೇ ಕ್ಷಣಗಳಲ್ಲಿ ಲಂಚ್ ಮೀಟಿಂಗ್ ಆರಂಭವಾಗಲಿದೆ. ರಾಜ್ಯದ ಬೆಳವಣಿಗೆ ಬಗ್ಗೆ ವೇಣುಗೋಪಾಲ್ ಮಾಹಿತಿ ಸಂಗ್ರಹಿಸಲಿದ್ದಾರೆ. https://twitter.com/siddaramaiah/status/1996110251494711411?t=IiQqITxUyGSvFXF6VLRNZw&s=19
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಂದ ವಶಪಡಿಸಿಡ್ಕೊಂಡ 82 ಲಕ್ಷ ಹಣವನ್ನು ಇದೀಗ ಐಟಿ ಅರ್ಜಿ ಪುರಸ್ಕರಿಸಿ ಆದಾಯ ತೆರಿಗೆ ಇಲಾಖೆ ವಶಕ್ಕೆ ನೀಡಿ ಬೆಂಗಳೂರಿನ 57ನೇ CCH ಕೋರ್ಟ್ ಆದೇಶ ಹೊರಡಿಸಿದೆ. ಇಂದು ಬೆಂಗಳೂರಿನ 57ನೇ CCH ಕೋರ್ಟ್ ನಲ್ಲಿ ಆದಾಯ ತೆರಿಗೆ ಇಲಾಖೆ ಮುಂದೆ ದರ್ಶನ್ ತಕರಾರು ಸಲ್ಲಿಸಬಹುದು. ಐಟಿ ಹಣ ಬಿಡುಗಡೆ ಮಾಡಿದರೆ ದರ್ಶನ್ ಹಣ ಹಿಂಪಡೆಯಬಹುದು. ಹಣ ಹಿಂತಿರುಗಿಸುವಂತೆ ಕೋರಿದ್ದ ಅರ್ಜಿ ಸಂಬಂಧ ಆದೇಶ ನೀಡಿದೆ.
ಬೆಂಗಳೂರು : ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 42 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದ್ದು, ಅಗತ್ಯ ತಪಾಸಣೆ ಹಾಗೂ ಇತರ ಕಾರಣಗಳಿಂದ ಫ್ಲೈಟ್ ಕ್ಯಾನ್ಸಲ್ ಮಾಡಲಾಗಿದೆ ಎಂದು ಇಂಡಿಗೋ ಮಾಹಿತಿ ನೀಡಿದೆ. ವಿಮಾನ ಹಾರಾಟ ರದ್ದುಗೊಂಡಿದ್ದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಇಂಡಿಗೋ ವಿರುದ್ಧ ಜನರು ಕಿಡಿಕಾರಿದ್ದಾರೆ. ಇದರ ಬೆನ್ನಲ್ಲೇ ಇಂಡಿಗೋ ಪ್ರತಿಕ್ರಿಯೆ ನೀಡಿದ್ದು, ಅಗತ್ಯ ತಪಾಸಣೆ ಹಾಗೂ ಕಾರ್ಯಾಚರಣೆ ಕಾರಣಗಳಿಂದ ಫ್ಲೈಟ್ ಕ್ಯಾನ್ಸಲ್ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. ಹೈದರಾಬಾದ್, ಮುಂಬೈ, ಚೆನ್ನೈ, ದೆಹಲಿ, ಗೋವಾ ಕೋಲ್ಕತ್ತಾ ಹಾಗೂ ಅಹಮದಾಬಾದ್ನಿಂದ ಬೆಂಗಳೂರಿಗೆ ಬರಬೇಕಿದ್ದ 22 ವಿಮಾನ ಹಾಗೂ ಬೆಂಗಳೂರಿನಿಂದ ಬೇರೆ ನಗರಗಳಿಗೆ ಸಂಚರಿಸಬೇಕಿದ್ದ 20 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಈ ಪೈಕಿ ಒಟ್ಟು 42 ವಿಮಾನಗಳ ಹಾರಾಟ ರದ್ದಾಗಿದೆ.
ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಮತ್ತೊಂದು ಶಾಕ್ ನೀಡಿದೆ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್ ಇದೀಗ ನಿರಾಕರಿಸಿದೆ. ಇಂದು ಜೀವಿತಾವರಿ ಸೆರೆವಾಸದ ಶಿಕ್ಷಕ ಪ್ರಶ್ನೆಸಿ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ಕೋರಿದ್ದ ಮಧ್ಯಂತರ ಅರ್ಜಿಯನ್ನು ಹೈ ಕೋರ್ಟ್ ವಜಾ ಗೊಳಿಸಿದೆ ನ್ಯಾಯಮೂರ್ತಿ ಕೆ ಎಸ್ ಮುದುಗಲ್ ಹಾಗೂ ಟಿ ವೆಂಕಟೇಶ ನಾಯಕ ಅವರಿದ್ದ ಪೀಠ ಆದೇಶ ಹೊರಡಿಸಿದೆ
ಬೆಂಗಳೂರು : ನಿನ್ನೆವರೆಗೂ ರಾಜ್ಯದಲ್ಲಿ ಬ್ರೇಕ್ ಫಾಸ್ಟ್ ರಾಜಕೀಯ ಜೋರಾಗಿತ್ತು. ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಹ್ವಾನ ನೀಡಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ ಸಿಎಂ ಬದಲಾವಣೆಗೆ ಬ್ರೇಕ್ ಹಾಕಿದ್ದರು. ಇನ್ನು ನಿನ್ನೆ ಡಿಕೆ ಶಿವಕುಮಾರ್ ತಮ್ಮ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯರನ್ನು ಆಹ್ವಾನಿಸಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಡಿಸಿಎಂ ಡಿಕೆ ಶಿವಕುಮಾರ್ ಬ್ರದರ್ಸ್. ನಮ್ಮ ಪಕ್ಷವು ಒಂದೇ, ಸಿದ್ಧಾಂತವು ಒಂದೇ ಎಂದು ಹೇಳುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು. ಇದೀಗ ಇಂದು ಮಾಧಹ್ನ 3 ಗಂಟೆಗೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ಹಾಗಾಗಿ ಹೈಕಮಾಂಡ್ ಅವರನ್ನು ಭೇಟಿ ಮಾಡ್ತಾರಾ ಎನ್ನುವ ಕುತೂಹಲ ಮೂಡಿಸಿದೆ.
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದಿನನಿತ್ಯ ಸುಮಾರು 1.3 ಲಕ್ಷ ಪ್ರಯಾಣಿಕರು ಮತ್ತು 1 ಲಕ್ಷ ವಾಹನಗಳ ಸಂಚಾರವಿರುವ ದೇಶದ ಮೂರನೇ ಅತಿದೊಡ್ಡ ನಿಲ್ದಾಣ. ನಿತ್ಯವೂ ಟ್ರಾಫಿಕ್ನಿಂದ ಕೂಡಿರರುತ್ತದೆ. ಈ ಸಮಸ್ಯೆ ಬಗೆಹರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಡಿ.8ರಿಂದ ಜಾರಿಗೆ ಬರುವಂತೆ ಹೊಸ ಪಿಕ್-ಅಪ್ ನಿಯಮಗಳನ್ನು ಜಾರಿ ಮಾಡಲಾಗಿದೆ. ಹೌದು ಡಿಸೆಂಬರ್8ರಿಂದ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಹೊಸ ನಿಯಮ ಜಾರಿ ಆಗಲಿದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ದಂಡಸ್ತ್ರ ಜಾರಿಗೊಳಿಸಲಾಗುತ್ತಿದೆ. ಸೈಡ್ ಪಿಕಪ್ ಹಾವಳಿ ಹಾಗೂ ಟ್ರಾಫಿಕ್ ನಿಯಂತ್ರಿಸಲು ಹೊಸ ನಿಯಮ ಜಾರಿಗೆ ಆಗಲಿದೆ. ಏರ್ಪೋರ್ಟ್ ನ ಅರೈವಲ್ ಗೇಟ್ ಮುಂಭಾಗ ಹೊಸ ರೂಲ್ಸ್ ಜಾರಿಯಾಗಲಿದೆ ಟರ್ಮಿನಲ್ ಒಂದು ಮತ್ತು ಎರಡರ ಮುಂಭಾಗ ವಾಹನಗಳು ಅವದಿvಮೀರಿ ನಿಂತರೆ ದಂಡ ವಿಧಿಸಲಾಗುತ್ತದೆ. ವೈಟ್ ಬೋರ್ಡ್ ಹಳದಿ ಬೋರ್ಡ್ ವಾಹನಗಳಿಗೆ…
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಕೊಡಿಯಾಲಬೈಲ್ನಲ್ಲಿರುವ ಮಂಗಳೂರು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಮೊಬೈಲ್ ಹಾಗೂ ಇಂಟರ್ನೆಟ್ ಬಳಕೆಗೆ ಸಮಸ್ಯೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್ ಜಾಮರ್ಗಳ ಸಾಮರ್ಥ್ಯ ಮಿತಿಯನ್ನು ಕಾರಾಗೃಹಕ್ಕೆ ಸೀಮಿತಗೊಳಿಸುವಂತೆ ಕೇಂದ್ರ ಸರಕಾರ ಸ್ವಾಮ್ಯದ ಸಂಸ್ಥೆಯಾದ ಮೆಸರ್ಸ್ ಟೆಲಿಕಮ್ಯುನಿಕೇಷನ್ಸ್ ಕನ್ಸಲೆಂಟ್ಸ್ ಇಂಡಿಯಾ ಲಿಮಿಟೆಡ್ಗೆ ಹೈಕೋರ್ಟ್ ನಿರ್ದೇಶಿಸಿದೆ. ನ್ಯಾಯಾಲಯದಲ್ಲಿ ಸಂವಹನಕ್ಕೆ ಅಡ್ಡಿಪಡಿಸುತ್ತಿರುವ ಜಾಮರ್ಗಳನ್ನು ತಕ್ಷಣವೇ ತೆರವುಗೊಳಿಸಲು ಗೃಹ ಇಲಾಖೆ ಹಾಗೂ ಕಾರಾಗೃಹದ ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿ ಮಂಗಳೂರು ವಕೀಲರ ಸಂಘ ಮತ್ತದರ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಹಾಗೂ ಕಾರ್ಯದರ್ಶಿ ಶ್ರೀಧರ ಹೊಸಮನೆ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಅರ್ಜಿಯಲ್ಲಿ ಹೇಳಲಾಗಿರುವ ಸಮಸ್ಯೆ ಕುರಿತು ತಾಂತ್ರಿಕ ವರದಿ ಸಲ್ಲಿಸುವಂತೆ ಕೇಂದ್ರ ಸರಕಾರದ ಸಂವಹನ ಸಚಿವಾಲಯಕ್ಕೆ ಸೂಚಿಸಲಾಗಿತ್ತು. ಅದರಂತೆ ಸಚಿವಾಲಯದ ವೈರ್ಲೆಸ್ ಮಾನಿಟರಿಂಗ್ ಸಂಸ್ಥೆ ವರದಿ ಸಲ್ಲಿಸಿದೆ. ಈ ವರದಿ ಪರಿಶೀಲಿಸಿದಾಗ ಜೈಲು ಆವರಣದೊಳಗೆ ಜಾಮರ್ ಸಿಗ್ನಲ್ ಸಾಮರ್ಥ್ಯವು…














