Author: kannadanewsnow05

ಬೆಂಗಳೂರು : ಕಳೆದ ವರ್ಷ ಇಡೀ ದೇಶಾದ್ಯಂತ ಕೆಂಪು ರಾಣಿ ಎಂದೆ ಸುದ್ದಿಯಾಗಿದ್ದ ಟೊಮ್ಯಾಟೋ, ಜನರಿಗೆ ಕೈಗೆಟುಕಲಾರದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಏಕೆಂದರೆ ಕೆಜಿಗೆ 100, 200 ಏರಿದ್ದರೆ ಜನ ಕೊಂಡುಕೊಳ್ಳುತ್ತಿದ್ದರು, ಆದರೆ ಕಳೆದ ವರ್ಷ ಟೊಮೊಟೊ ಬೆಲೆ ಗಗನಕ್ಕೆರಿತ್ತು. ಅದಾದ ನಂತರ ಈರುಳ್ಳಿ ಕೂಡ ಮಧ್ಯದಲ್ಲಿ ಇದೀಗ ಬೆಳ್ಳುಳ್ಳಿ ಸರದಿ ಬಂದಿದೆ. ಈಚೆಗೆ ಟೊಮೆಟೊ, ಈರುಳ್ಳಿ ದರಗಳು ಗ್ರಾಹಕರಿಗೆ ಬೆಚ್ಚಿ ಬೀಳಿಸಿದ್ದವು. ಈಗ ಬೆಳ್ಳುಳ್ಳಿ ಸರದಿ. ಬೆಳ್ಳುಳ್ಳಿಗೆ ಬಂಗಾರದ ಬೆಲೆ ಬಂದಿರುವುದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ತರಕಾರಿ ಮಾರುಕಟ್ಟೆ ಗಳಲ್ಲಿ ಬೆಳ್ಳುಳ್ಳಿ ಕೆ.ಜಿಗೆ 400 ರಿಂದ 500 ರೂ. ತಲುಪಿದ್ದು, ಬಹಳಷ್ಟು ಗ್ರಾಹಕರು ಅಂಗಡಿಗಳಲ್ಲಿ ದರ ಕೇಳಿ ಖರೀದಿಸದೇ ವಾಪಸಾಗುತ್ತಿರುವುದು ಸಾಮಾನ್ಯವಾಗಿದೆ. ವಾರದಿಂದ ಈಚೆಗೆ ನಿತ್ಯವೂ ಬೆಲೆ ಹೆಚ್ಚುತ್ತಲೇ ಇದೆ. ಕಳೆದ ವಾರ ಕೆ.ಜಿಗೆ 200 ರಿಂದ 300 ರೂ. ಇದ್ದ ಬೆಳ್ಳುಳ್ಳಿ ದರ ಈಗ ಬಹುತೇಕ ದುಪ್ಪಟ್ಟಾಗಿದೆ. ಹವಾಮಾನ ವೈಪರೀತ್ಯ ಹಾಗೂ ಮಳೆ ಕಡಿಮೆಯಾಗಿರು ವುದರಿಂದ ಬೆಳ್ಳುಳ್ಳಿ ಇಳುವರಿ ಗಣನೀಯ ವಾಗಿ…

Read More

ಬಾಗಲಕೋಟೆ : ಟ್ಯಾಕ್ಟರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು ಈ ವೇಳೆ ಶಾಲಾ ಬಸ್ಸಿನಲ್ಲಿದ ನಾಲ್ವರ ಮಕ್ಕಳು ಸಾವನ್ನಪ್ಪಿರುವ ಘಟನೆ ಜಮಖಂಡಿ ತಾಲೂಕಿನ ಹಲಗೂರು ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಸಾಗರ ಕಡಕೋಳ, ಶ್ವೇತಾ, ಗೋವಿಂದ, ಬಸವರಾಜ್ ಎನ್ನುವ ಮಕ್ಕಳ್ಳು ಸಾವನ್ನಪ್ಪಿದ್ದು ಇಬ್ಬರು ಪಿಯುಸಿ, ಇಬ್ಬರು 9ನೇ ಕ್ಲಾಸ್ ವಿದ್ಯಾರ್ಥಿನಿಯರು ಎಂದು ಹೇಳಲಾಗುತ್ತಿದೆ. ತಡರಾತ್ರಿ 12 ಗಂಟೆ ವೇಳೆ ಈ ಅಪಘಾತ ಸಂಭವಿಸಿದೆ ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಾಲೆಯ ಒಂದು ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಮೃತ ವಿದ್ಯಾರ್ಥಿಗಳು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕವಟಗಿ ಗ್ರಾಮದವರು ಎಂದು ಪ್ರಾಥಮಿಕ ತನಿಖೆ ತಿಳಿದು ಬಂದಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಎಸ್ಪಿ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು : ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸಭೆ ಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ 10.30ಕ್ಕೆ ಪ್ರತಿಭಟನೆ ನಡೆಯಲಿದೆ ಎಂದು ತಿಳಿದುಬಂದಿದೆ ಬೆಂಗಳೂರಿನ ಎಲ್ಲಾ ಬಿಜೆಪಿ ಶಾಸಕರು ಈ ಒಂದು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ಕೆರಗೋಡು ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಅದರಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡ್ಯಕ್ಕೆ ಭೇಟಿ ನೀಡಲಿದ್ದು ಕೆರಗೋಡು ರಾಮನಿಂದ ಮಂಡ್ಯ ನಗರದ ವರೆಗೆ ಪಾದಯಾತ್ರೆ ನಡೆಯಲಿದೆ ಮಧ್ಯಾಹ್ನ 12:30 ಕ್ಕೆ ನಡೆಯಲಿರುವ ಪ್ರತಿಭಟನೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ. ಅಲೆಗೆ ರಾಜ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಇದಕ್ಕೆ ಜೆಡಿಎಸ್ ಕೂಡ ಸಾಥ್…

Read More

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸಿದಂತೆ ಪ್ರತಿ ಪಕ್ಷ ಬಿಜೆಪಿಯು ಆಡಳಿತಾರೂಢ ಕಾಂಗ್ರೆಸ್ ವೈಫಲ್ಯಗಳ ವಿರುದ್ಧ ಸೋಮವಾರದಿಂದಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತನ್ನ ಸರಣಿ ಹೋರಾಟ ಆರಂಭಿಸುತ್ತಿದೆ. ‘ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ’ ಎಂಬ ಘೋಷಣೆಯೊಂದಿಗೆ ಸೋಮ ವಾರ ಕೋಲಾರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಮಂಗಳವಾರ ವಿದ್ಯುತ್ ಕಡಿತ ಹಾಗೂ ಕಾಮಗಾರಿಗಳ ಸಗಿತದ ಸ್ಥಗಿತದ ವಿರುದ್ಧ ದೊಡ್ಡಬಳ್ಳಾ ಪುರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್‌ ವಿಷಯ ತಿಳಿಸಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯ బిజీబి ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಸರಣಿ ಪ್ರತಿಭಟನೆ ಹಮ್ಮಿಕೊಳ್ಳುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು. ಈ ಕುರಿತು ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಾವೇಶದ ಭಾಷಣ ಮಾಡಿ ಅಧಿವೇಶನಕ್ಕೂ ಮುನ್ನ ರೈತರಿಗೆ ಬರ ಪರಿಹಾರ ಘೋಷಿಸಿದ್ದರು. ಇಷ್ಟು ಬಜೆಟ್‌ಗಳನ್ನು ಮಂಡನೆ ಮಾಡಿದ ಇವರು ಜನರಿಗೆ ಟೋಪಿ ಹಾಕುವುದು ಹೇಗೆಂದು ಕಲಿತಿದ್ದಾರೆ. ರೈತರು ಕಣ್ಣೀರು ಹಾಕುತ್ತಿರುವಾಗ ಮುಲ್ಲಾಗಳಿಗೆ…

Read More

ಬೆಳ್ತಂಗಡಿ : ವೇಣೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್‌ತ್ಯಾರು ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಸಂಜೆ 5 ಗಂಟೆಗೆ ಸ್ಫೋಟ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ತ್ರಿಶೂರಿನ ವರ್ಗೀಸ್, ಹಾಸನ ನಾಯಕನಹಳ್ಳಿ ಚೇತನ್, ಕೇರಳದ ಸ್ವಾಮಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಉಳಿದಂತೆ ಹಾಸನದ ದಿನೇಶ, ಕಿರಣ, ಕುಮಾರ, ಕಲ್ಲೇಶ, ಕೇರಳದ ಪ್ರೇಮ್, ಕೇಶವ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗುತ್ತಿದೆ.ಕುಟ್ಟೋಡಿಯ ಸಾಲಿಡ್ ಫೈಯರ್‌ವರ್ಕ್‌ ಎಂಬ ಘಟಕದಲ್ಲಿ ಘಟನೆ ನಡೆದಿದ್ದು, ಅಲ್ಲಿನ ಪರಿಸ್ಥಿತಿಭಯಾನಕವಾಗಿದೆ. ಸುಮಾರು 5 ಬಾರಿ ಸ್ಫೋಟ ಸಂಭವಿಸಿದ್ದು, ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಮೃತಪಟ್ಟ ಮೂವರು,ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಇಬ್ಬರ ದೇಹ ಸ್ಪೋಟದ ಸುತ್ತ ನೂರು ಮೀಟ‌ರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ. ಮೃತದೇಹ ಪತ್ತೆಹಚ್ಚಲು ಪರದಾಡುವಂತಾಯಿತು. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ಒಬ್ಬರನ್ನು ಆಸ್ಪತ್ರೆಗೆ ಸಾಗಿಸಿದರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.…

Read More

ಬೆಂಗಳೂರು: ಬೆಂಗಳೂರಿನ ಬಳೆಪೇಟೆಯಲ್ಲಿರುವ ಹಾರ್ಡ್‌ವೇ‌ರ್ ಶಾಪ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು ೩೦ ಲಕ್ಷ ರೂ. ಮೌಲ್ಯದ ಪೈಂಟ್ ಬಾಕ್ಸ್ ಹಾಗೂ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ. ಬಳೆಪೇಟೆಯಲ್ಲಿ ಮೂರು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಕೃಷ್ಣಮೂರ್ತಿ ಎಂಬುವರು ಶ್ರೀಲಕ್ಷ್ಮೀ ನರಸಿಂಹ ಟ್ರೇಡರ್ಸ್ ಆ್ಯಂಡ್ ಹಾರ್ಡ್‌ವೇರ್‌ಶಾಪ್‌ ಹೊಂದಿದ್ದು, ನೆಲಮಹಡಿಯಲ್ಲಿ ಪೈಂಟ್ ಬಾಕ್ಸ್‌ಗಳನ್ನು ಇಡಲಾಗಿತ್ತು. ಶುಕ್ರವಾರ ರಾತ್ರಿ ೧೦ ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಮೊದಲಿಗೆ ಪೇಯಿಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಅಕ್ಕಪಕ್ಕದ ಜನರಿಗೆ ಸುಟ್ಟ ವಾಸನೆ ಬರಲು ಆರಂಭಿಸಿದಾಗ, ಬಂದು ನೋಡಿದರೆ ಬಳಿಕ ಕೆಲ ಕ್ಷಣಗಳಲ್ಲೇ ಇಡೀ ಕಟ್ಟಡಕ್ಕೆ ಬೆಂಕಿಯ ಕೆನ್ನಾಲಿಗೆ ಆವರಿಸಿಕೊಂಡು ದುರಂತ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಜೆಸಿಬಿ ಬಳಸಿ ಕಟ್ಟಡದ ಶೆಟರ್ಸ್ ಮುರಿದು ಸತತ ನಾಲ್ಕು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.ಘಟನೆಯಲ್ಲಿ ಓರ್ವ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಈ…

Read More

ಬೆಂಗಳೂರು : ನಗರದಲ್ಲಿ ಅಪರಾಧ ಚಟುವಟಿಕೆ ತಡೆಯಲು ಸುರಕ್ಷತೆ ಸಲುವಾಗಿ ನಗರದಲ್ಲಿರುವ ಪೇಯಿಂಗ್ ಗೆಸ್ಟ್ (ಪಿಜಿ) ಕೇಂದ್ರಗಳಿಗೆ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.ಈ ಬಗ್ಗೆ ಶನಿವಾರ ತಮ್ಮ ಎಕ್ಸ್‌ ಖಾತೆಯಲ್ಲಿ ಹೆಚ್ಚುವರಿ ಪೊಲೀಸ್‌ ಆಯುಕ್ತ (ಪೂರ್ವ) ರಮಣ್ ಗುಪ್ತ ಪೋಸ್ಟ್ ಮಾಡಿದ್ದು, ಪಿಜಿಗಳ ಮಾಲಿಕರಿಗೆ ಕರ್ನಾಟಕ ಪೊಲೀಸ್‌ ಕಾಯ್ದೆ ಕಾಲಂ 34 (ಡಿ) ಮತ್ತು 70 ಅನ್ವಯ ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸುವಂತೆ ಪೊಲೀಸರು ತಿಳಿಸಿದ್ದಾರೆ. ಮಾರ್ಗಸೂಚಿ ವಿವರ: ಪಿಜಿ ಆರಂಭಿಸಲು ಬಿಬಿಎಂಪಿಯಿಂದ ಕಡ್ಡಾಯವಾಗಿ ಪರವಾನಿಗೆ ಪಡೆಯಬೇಕು. ವಾಸಕ್ಕೆ ಬರುವ ಎಲ್ಲ ವ್ಯಕ್ತಿಗಳ ಗುರುತಿನ ಚೀಟಿ ಹಾಗೂ ಇತ್ತೀಚಿನ ಭಾವಚಿತ್ರ ಮತ್ತು ರಕ್ತ ಸಂಬಂಧಿಗಳ ವಿವರ, ಮೊಬೈಲ್ ಸಂಖ್ಯೆ ಗಣಕೀಕೃತ ದಾಖಲಾತಿ ಮತ್ತು ಭೇಟಿ ನೀಡಲು ಬರುವ ಸಂಬಂಧಿಕರ ಮತ್ತು ಸಾರ್ವಜನಿಕರ ವಿವರ ಪ್ರತ್ಯೇಕವಾಗಿ ನಿರ್ವಹಿ ಸಬೇಕು. ಸಿಸಿಟಿವಿ ಅಳವಡಿಕೆ ಹಾಗೂ ಅಗ್ನಿ ಸುರಕ್ಷತಾ ವ್ಯವಸ್ಥೆ ಹೊಂದಿರಬೇಕು, ಮಾದಕ ವಸ್ತು ಸೇವನೆ ಮತ್ತು ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸ ಬಾರದು. ಪೊಲೀಸ್-112, ವೈದ್ಯಕೀಯ- 03…

Read More

ಮೈಸೂರು : ಇತ್ತೀಚ್ಚಿಗೆ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಂಡ ಬಾಲರಾಮನ ಕೆತ್ತನೆಗೆ ಬಳಸಲಾದ ಶಿಲೆಯ ಗಣಿಗಾರಿಕೆ ವೇಳೆ ಅನುಮತಿ ಇಲ್ಲದೆ ಗಣಿಗಾರಿಕೆ ಮಾಡಿದ್ದಕ್ಕಾಗಿ ಗುತ್ತಿಗೆದಾರ ಶ್ರೀನಿವಾಸ್‌ ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ 80 ಸಾವಿರ ರೂ. ದಂಡ ವಿಧಿಸಿತ್ತು. ಆ ದಂಡವನ್ನು ಬಿಜೆಪಿಯಿಂದ ಕಟ್ಟಿಕೊಡುತ್ತೇವೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಮೈಸೂರು ತಾಲೂಕಿನ ಹಾರೋಹಳ್ಳಿ- ಗುಜ್ಜೆಗೌಡನಪುರ ಗ್ರಾಮದ ರಾಮದಾಸ್ ಅವರ ಜಮೀನಿನಲ್ಲಿ ಈ ಕಲ್ಲು ದೊರಕಿತ್ತು. ಈ ಕಲ್ಲನ್ನು ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತನೆಗೆ ಶ್ರೀನಿವಾಸ್ ನೀಡಿದ್ದರು. ಕಲ್ಲಿನ ಗಣಿಗಾರಿಕೆ ವೇಳೆ ಅನುಮತಿ ಪಡೆದಿಲ್ಲ ಎಂದು ಗುತ್ತಿಗೆದಾರ ಶ್ರೀನಿವಾಸ್‌ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ 80 ಸಾವಿರ ರೂ.ದಂಡ ವಿಧಿಸಿತ್ತು. ಆ ದಂಡವನ್ನು ಬಿಜೆಪಿಯಿಂದ ಕಟ್ಟಿ ಕೊಡುತ್ತೇವೆ ಎಂದರು. ಈ ಮಧ್ಯೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀನಿವಾಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಯಿಂದ ಅನುಮತಿ ಪಡೆಯದೆ ಗಣಿಗಾರಿಕೆ ಮಾಡಿದ…

Read More

ಬೆಂಗಳೂರು : ಬಿಜೆಪಿಯಲ್ಲಿ ಟಿಕೆಟ್ ಸಿಕ್ಕಿಲ್ಲವೆಂದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಗಮಿಸಿದ್ದ ಜಗದೀಶ್ ಶೆಟ್ಟರ್ ಅವರು ನಿನ್ನೆ ಪುನಃ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಈ ವಿಷಯದ ಕುರಿತಾಗಿ ರಾಜ್ಯ ಕಾಂಗ್ರೆಸ್ನ ಹಲವು ನಾಯಕರು ಜಗದೀಶ್ ಶೆಟ್ಟರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶೆಟ್ಟರಿಂದ ನಮಗೇನು ಲಾಭವಿಲ್ಲ ಶೆಟ್ಟರಿಂದ ನಮಗೆ ಲಾಭನು ಇಲ್ಲ ನಷ್ಟಾನು ಇಲ್ಲ. ನನಗೆ ನೋವಾಗಿದೆ ಎಂದು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬಂದರು. ಚುನಾವಣೆಯಲ್ಲಿ ಸೋತರೂ ಕೂಡ ಅವರನ್ನು ಎಂಎಲ್ಸಿ ಮಾಡಿದ್ದೇವೆ ಇಷ್ಟೆಲ್ಲಾ ಮಾಡಿದ್ರೂ ಸಹ ವಾಪಸ್ ಬಿಜೆಪಿಗೆ ಹೋಗಿದ್ದಾರೆ. ಇದನ್ನು ರಾಜ್ಯದ ಜನತೆಯ ಆದೇಶಕ್ಕೆ ಬಿಡೋಣ. ಎಂದು ಮಂಡ್ಯದಲ್ಲಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.ಲಕ್ಷ್ಮಣ ಸವದಿಯವರು ಮತ್ತೆ ಬಿಜೆಪಿಗೆ ಹೋಗಲ್ಲ ಸವದಿ ನನಗೆ ಒಳ್ಳೆ ಸ್ನೇಹಿತರು ಅವರು ಹೋಗಲ್ಲ ಬಿಜೆಪಿಯವರು ಎಲ್ಲರ ಮೇಲು ಒತ್ತಡ ಹಾಕುತ್ತಾರೆ ಎಂದು ಸಚಿವ ಎನ್ ಚೆಲುವರಾಯಸ್ವಾಮಿ ತಿಳಿಸಿದರು. ಇಡಿ-ಐಟಿ ಭಯ ಇರಬೇಕು ಜಗದೀಶ್ ಶೆಟ್ಟರ್ ಗೆ ಇಡಿ ಅಥವಾ ಐಟಿ…

Read More

ಮಂಡ್ಯ : ಬಿಜೆಪಿಯಿಂದ ಕಾಂಗ್ರೆಸ್ಗೆ ಬಂದಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿನ್ನೆ ಪುನಃ ಮತ್ತೆ ಬಿಜೆಪಿ ಪಕ್ಷಕ್ಕೆ ತೆರಳಿದ್ದು ಇದೀಗ ಪಕ್ಷಾಂತರ ಪರ್ವ ಜೋರಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತಾಗಿ ಮಂಡ್ಯದಲ್ಲಿ ಸಚಿವ ಎಂದು ಚೆಲುವರಾಯಸ್ವಾಮಿ ಸ್ಪೋಟಕ ವಾದಂತ ಹೇಳಿಕೆ ನೀಡಿದ್ದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ 30 ಜನ ಬರುತ್ತಾರೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸ್ನೇಹಿತ ಅಶೋಕಣ್ಣನಿಗೆ ಹೇಳಿ ಬಿಜೆಪಿ ಹಾಗೂ ಜೆಡಿಎಸ್ ನಿಂದ 30 ಜನರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ ಅದು ಲೋಕಸಭೆ ಚುನಾವಣೆ ಮುಂಚೆ ಕರೆದುಕೊಳ್ಳಬೇಕಾ ಅಥವಾ ಚುನಾವಣೆ ಆದಮೇಲೆ ಕರೆದುಕೊಳ್ಳಬೇಕಾ ಎಂದು ಯೋಚನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಬರುವ ಕೆಲವು ಜನರ ಹೆಸರನ್ನು ಹೇಳಿದರೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಗೆ ಶಾಕ್ ಆಗುತ್ತರೆ. ಸುಮ್ಮನೆ ಇವೆಲ್ಲ ಬಿಟ್ಟು ಚುನಾವಣೆ ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕೆಂಬುದನ್ನು ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.ಯಾವುದೇ ರೀತಿಯಾದಂತಹ ಆಪರೇಷನ್ ಮಾಡುತ್ತಿಲ್ಲ…

Read More