Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತ್ರತ್ವದಲ್ಲಿ ಅಖಂಡ ಕರ್ನಾಟಕ ಬಂದ್ ಆಚರಣೆ ನಡೆಯಲಿದೆ. ಈಗಾಗಲೇ ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳು ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆ ಸುಮಾರಿಗೆ ಮೈಸೂರಿನ ಬಸ್ ನಿಲ್ದಾಣದ ಬಳಿ ತೆರಳಿದ ಕನ್ನಡ ಪರ ಸಂಘಟನೆಗಳು ಬಸ್ ಸಂಚರಿಸುತ್ತಿದ್ದನ್ನು ಗಮನಿಸಿ ಆಕ್ರೋಶ ಹಾಕಿದ್ದಾರೆ. ಕೂಡಲೇ ಬಸ್ಸಿನ ಚಾಲಕರಿಗೆ ಕನ್ನಡ ಪರ ಹೋರಾಟಗಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ ಈ ವೇಳೆ ಬಸ್ಸಿನ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಅದೇ ರೀತಿಯಾಗಿ ಕರ್ನಾಟಕ ಬಂದ್ ಬೆಂಬಲಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಲಾಗಿದೆ. MES ಪ್ರತಿಕೃತಿ ಡಹಿಸಿ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಚಿಕ್ಕಬಳ್ಳಾಪುರ ನಗರದ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕನ್ನಡ ಸೇನೆ ಕರವೇ ಶಿವರಾಮೇಗೌಡ ಬಣ ಮುಖಂಡರು ಪ್ರತಿಭಟಿಸಿದರು. ಇದೆ ವೇಳೆ…
ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆ ಬೆಂಗಳೂರಲ್ಲಿ ಖಾಸಗಿ ಬಸ್, ವಾಹನಗಳು, ಓಲಾ ಉಬರ್ ಹೋರಾಟ ಸ್ಥಗಿತವಾಗಿದ್ದು, ಕೆಎಸ್ಆರ್ಟಿಸಿ ಬಿಎಂಟಿಸಿ ಸಂಚಾರ ಇರುತ್ತದೆ ಆದರೂ ಕೂಡ ಅದರಲ್ಲೂ ಇನ್ನು ಗೊಂದಲ ಇದೆ. ಮಧ್ಯಾಹ್ನದವರೆಗೆ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಗಳು ಕ್ಯಾನ್ಸಲ್ ಆಗಿದ್ದು, ಟೌನ್ ಹಾಲಿನಿಂದ ಬೆಳಿಗ್ಗೆ 6 ಗಂಟೆಯಿಂದ ಬೃಹತ್ ರ್ಯಾಲಿ ನಡೆಯಲಿದೆ. ಹಾಗಾಗಿ ಬೆಳಿಗ್ಗೆಯಿಂದಲೇ ಸಾರ್ವಜನಿಕರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಲಿದೆ. ಏನಿರಲ್ಲ? ಬಂದ್ ವೇಳೆಯಲ್ಲಿ ಹೋಟೆಲ್ ಕ್ಲೋಸ್ ಸಿನಿಮಾ ಥಿಯೇಟರ್ ಬಂದ್ ಸರ್ಕಾರಿ ಕಚೇರಿಗಳು ತೆರೆದಿರೋದು ದೌಟ್ ಸಾರಿಗೆ ಬಸ್ ಸಂಚಾರ ಇರಲ್ಲ. ಓಲಾ, ಉಬರ್, ಆಟೋ, ಲಾರಿ ಸಂಚಾರ ಬಹುತೇಕ ಸ್ಥಗಿತ.…
ಬೆಂಗಳೂರು : ರಾಜ್ಯ ವಿಧಾನಸಭೆಯಲ್ಲಿ ನಿನ್ನೆ ಹನಿಟ್ರ್ಯಾಪ್ ವಿಚಾರ ಭಾರಿ ಸದ್ದು ಗದ್ದಲವನ್ನು ಉಂಟು ಮಾಡಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ಅದೇಶಿಸಿದರು. ಬಳಿಕ ಪರಿಷತ್ ನಲ್ಲೂ ಇದೆ ವಿಚಾರ ಪ್ರಸ್ತಾಪವಾದಾಗ ಸಿಎಂ ಸಿದ್ದರಾಮಯ್ಯ ಇದರ ಹಿಂದೆ ಬಿಜೆಪಿ, ಜೆಡಿಎಸ್, ಕಾಂಗ್ರೆಸನವರು ಯಾರೇ ಇದ್ದರೂ ಸುಮ್ನೆ ಬಿಡಲ್ಲ ಈ ಕುರಿತು ಉನ್ನತ ಮಟ್ಟದ ತನಿಖೆ ಮಾಡುತ್ತೇವೆ ಎಂದು ತಿಳಿಸಿದರು. ತಮ್ಮ ವಿರುದ್ಧ ಹನಿಟ್ರ್ಯಾಪ್ ಹನಿಟ್ರ್ಯಾಪ್ ಪ್ರಕರಣ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂಬ ಬಿಜೆಪಿ ಶಾಸಕರ ಆಗ್ರಹಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ನಡೆದಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸದನದಲ್ಲಿಯೇ ಹೇಳಿದ್ದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. 100ಕ್ಕೆ 100ರಷ್ಟು ಗಹನ ತನಿಖೆ ನಡೆಸಿ ಪ್ರಕರಣವನ್ನು ಭೇದಿಸುತ್ತೇವೆ. ಯಾವ ಪಕ್ಷದವರೇ ಆದರೂ ಅವರನ್ನು ಸುಮ್ಮನೇ…
ಹಾಸನ : ಕಳೆದ ಎರಡು ದಿನಗಳಿಂದ ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಕುರಿತು ಗಂಭೀರವಾಗಿ ಚರ್ಚೆ ನಡೆಯಿತು. ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವ ಕೆಎನ್ ರಾಜಣ್ಣ ಮೇಲೆ ಹನಿ ಟ್ರ್ಯಾಪ್ ನಡೆದಿದೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಇದಕ್ಕೆ ಸ್ಪಷ್ಟನೆ ನೀಡಿದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ನನ್ನ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿತ್ತು ಆದರೆ ನಾನು ಹನಿಟ್ರ್ಯಾಪ್ ಗೆ ಬಿದ್ದಿಲ್ಲ ಈ ಕುರಿತು ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದ್ದರು. ಇದೀಗ ಈ ಒಂದು ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಸನದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ರಾಜ್ಯದಲ್ಲಿ ಹನಿಟ್ರ್ಯಾಪ್ ಪಿತಾಮಹ ಡಿಕೆ ಶಿವಕುಮಾರ್ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರಾಜಕಾರಣಿಗಳ ಹನಿಟ್ರ್ಯಾಪ್ ಬಗ್ಗೆ ವರ್ಷದ ಹಿಂದೆಯೇ ನಾನು ಹೇಳಿದ್ದೆ. ಡಿಸಿಎಂ ಡಿಕೆ ಶಿವಕುಮಾರ್ ರಾಜಕೀಯ ಲಾಭಕ್ಕಾಗಿ ಅಧಿಕಾರದ ದಾಹದಿಂದ ಏನೇನು ಮಾಡುತ್ತಾರೆ ಎಂದು ಎಳೆ ಎಳೆಯಾಗಿ ಹೇಳಿದ್ದೆ. ಅಂದು…
ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ತೀವ್ರ ವಿರೋಧ, ಗದ್ದಲದ ನಡುವೆ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಶೇ.4ರಷ್ಟು ಮೀಸಲಾತಿಯ ಮಸೂಧೆಯನ್ನು ಅಂಗೀಕಾರ ನೀಡಲಾಯಿತು. ಮುಸ್ಲಿಂ ಗುತ್ತಿಗೆದಾರರಿಗೆ ಟೆಂಡರ್ ಗಳಲ್ಲಿ ಶೇ 4ರಷ್ಟು ಮೀಸಲಾತಿ ನೀಡುವ ಉದ್ದೇಶದಿಂದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಈ ಮಸೂದೆಯನ್ನು ಇಂದು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಮಂಡಿಸಿತ್ತು. ಈ ಮಸೂದೆಯಲ್ಲಿ ಒಂದು ಕೋಟಿಯವರೆಗಿನ ಕಾಮಗಾರಿಗಳಲ್ಲಿ ಮುಸ್ಲೀಮರಿಗೆ ಮೀಸಲಾತಿ, ಹಿಂದುಳಿದ, ಇತರೇ ಹಿಂದುಳಿದ ವರ್ಗಗಳಿಗೆ ಮಾತ್ರ ಇದ್ದ ಕಾಮಗಾರಿ ಮೀಸಲಾತಿ, ಮುಸ್ಲೀಂ ಸಮುದಾಯಕ್ಕೂ ಮೀಸಲಾತಿ ವಿಸ್ತರಿಸಿ ಗುತ್ತಿಗೆ ನೀಡಲು ಅವಕಾಶ ನೀಡಲಾಗಿತ್ತು. ಎಸ್.ಸಿ ಎಸ್.ಟಿ ಸಮುದಾಯಕ್ಕೆ ಈ ಹಿಂದೆ ಇದ್ದ 1 ಕೋಟಿಯವರೆಗಿನ ಮೊತ್ತ ವಿಸ್ತರಿಸಿ 2 ಕೋಟಿಯವರೆಗೆ ಮೀಸಲಾತಿ ಅವಕಾಶ ನೀಡಲಾಗಿದೆ. ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸಂಪುಟ ಅನುಮೋದನೆ ನೀಡಿತ್ತು. ಇಂದು ವಿಧಾನಸಭೆಯಲ್ಲಿ ಮಂಡಿಸಿ, ಸರ್ಕಾರಿ ಕಾಮಗಾರಿಗಳ…
BREAKING : ರಾಜ್ಯದಲ್ಲಿ ‘ಹನಿಟ್ರ್ಯಾಪ್ ಪಿತಾಮಹ’ ಡಿಸಿಎಂ ಡಿಕೆ ಶಿವಕುಮಾರ್ : ಬಿಜೆಪಿ ಮುಖಂಡ ದೇವರಾಜೇಗೌಡ ಹೊಸ ಬಾಂಬ್
ಹಾಸನ : ಕಳೆದ ಎರಡು ದಿನಗಳಿಂದ ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಕುರಿತು ಗಂಭೀರವಾಗಿ ಚರ್ಚೆ ನಡೆಯಿತು. ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವ ಕೆಎನ್ ರಾಜಣ್ಣ ಮೇಲೆ ಹನಿ ಟ್ರ್ಯಾಪ್ ನಡೆದಿದೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಇದಕ್ಕೆ ಸ್ಪಷ್ಟನೆ ನೀಡಿದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ನನ್ನ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿತ್ತು ಆದರೆ ನಾನು ಹನಿಟ್ರ್ಯಾಪ್ ಗೆ ಬಿದ್ದಿಲ್ಲ ಈ ಕುರಿತು ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದ್ದರು. ಇದೀಗ ಈ ಒಂದು ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಸನದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ರಾಜ್ಯದಲ್ಲಿ ಹನಿಟ್ರ್ಯಾಪ್ ಪಿತಾಮಹ ಡಿಕೆ ಶಿವಕುಮಾರ್ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರಾಜಕಾರಣಿಗಳ ಹನಿಟ್ರ್ಯಾಪ್ ಬಗ್ಗೆ ವರ್ಷದ ಹಿಂದೆಯೇ ನಾನು ಹೇಳಿದ್ದೆ. ಡಿಸಿಎಂ ಡಿಕೆ ಶಿವಕುಮಾರ್ ರಾಜಕೀಯ ಲಾಭಕ್ಕಾಗಿ ಅಧಿಕಾರದ ದಾಹದಿಂದ ಏನೇನು ಮಾಡುತ್ತಾರೆ ಎಂದು ಎಳೆ ಎಳೆಯಾಗಿ ಹೇಳಿದ್ದೆ. ಅಂದು…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಯುವಕನೊಬ್ಬ ಬ್ರಿಡ್ಜ್ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟಾ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಸಮೀರ್ (23) ಎಂದು ಗುರುತಿಸಲಾಗಿದೆ. ಕಲ್ಬುರ್ಗಿಯ ಮಿಲ್ಲತ್ ನಗರದ ನಿವಾಸಿಯಾಗಿರುವಂತ ಸಮೀರ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳದಲ್ಲಿ ಸಮೀರ್ ಶವಕ್ಕಾಗಿ ಎಸ್ ಡಿ ಆರ್ ಎಫ್ ಮತ್ತು ಪೊಲೀಸರು ತೀವ್ರ ಹುಡುಕಾಟ ಮುಂದುವರಿಸಿದ್ದಾರೆ, ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮನೆಯ ಬಳಿ ವೆಹಿಕಲ್ ಪಾರ್ಕ್ ವಿಚಾರಕ್ಕೆ ಗಲಾಟೆ ನಡೆದಿದ್ದು, ಬೆಂಗಳೂರಿನ ಮೈಕೋ ಲೇಔಟ್ ನಲ್ಲಿ ಈ ಒಂದು ಗಲಾಟೆ ನಡೆದಿದೆ. ಅಕ್ಕ ಪಕ್ಕದ ಮನೆ ನಿವಾಸಿಗಳು ವೆಹಿಕಲ್ ಪಾರ್ಕಿಂಗ್ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಲಾಟೆ ವೇಳೆ ಯುವತಿಯ ಮೇಲೆ ಯುವಕ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿಂದೆಯೂ ಕೂಡ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದರು. ಹಲ್ಲೆಗೆ ಒಳಗಾದ ಯುವತಿಗೆ ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಬಿಟಿಎಂ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳ ಬಂದ್ ಕುರಿತಂತೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ನಾಳೆ ಶಾಲಾ-ಕಾಲೇಜುಗಳು ಬಂದು ಕುರಿತಂತೆ ಇನ್ನೂ ತೀರ್ಮಾನಿಸಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಶಾಲಾ-ಕಾಲೇಜು ರಜೆ ಬಗ್ಗೆ ಈವರೆಗೆ ಯಾವುದೇ ತೀರ್ಮಾನ ಮಾಡಿಲ್ಲ.ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಶಾಲೆ ಬಂದ್ ಮಾಡುವ ನಿರ್ಧಾರ ಮಾಡಿಲ್ಲ.ಗೃಹ ಸಚಿವ ಹಾಗೂ ಸಾರಿಗೆ ಸಚಿವರ ಜೊತೆ ಈ ವಿಚಾರವಾಗಿ ಮಾತುಕತೆ ನಡೆಸುತ್ತೇನೆ. ಅವರು ಏನು ಹೇಳ್ತಾರೆ ಅದರ ಮೇಲೆ ನಿರ್ಧಾರ ಮಾಡಲಾಗುತ್ತದೆ. ಅಲ್ಲದೇ ಸಾರಿಗೆ ಹಾಗೂ ಸರಿಯಾದ ಭದ್ರತೆ ಇಲ್ಲದೆ ಶಾಲೆಗಳನ್ನು ತೆರೆಯುವುದು ಕಷ್ಟವಾಗುತ್ತದೆ. ನಾಳೆ ಮೌಲ್ಯಾಂಕನ ಪರೀಕ್ಷೆ ಇದೆ. ಆದರೆ ಗೃಹ ಇಲಾಖೆ ಹಾಗೂ ಸಾರಿಗೆ ಇಲಾಖೆಯ ನಿರ್ಧಾರ ನೋಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು : ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಇಂದು ಬಿಜೆಪಿ 18 ಶಾಸಕರನ್ನು ಆರು ತಿಂಗಳುಗಳ ಕಾಲ ವಿಧಾನಸಭೆಯಿಂದ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ಆದೇಶಿಸಿದರು.ಈ ಕುರಿತು ಅಮಾನತು ಶಾಸಕ ಅಶ್ವಥ್ ನಾರಾಯಣ್ ಕಾನೂನನ್ನು ನಾವು ಕೈಗೆ ತೆಗೆದುಕೊಂಡಿಲ್ಲ ಹೊಡೆದಾಟ ಮಾಡಿಲ್ಲ ಕೂಡಲೇ ಅಮಾನತು ಆದೇಶ ಹಿಂಪಡೆಯಬೇಕು ಎಂದು ಬೆಂಗಳೂರಿನಲ್ಲಿ ಶಾಸಕ ಅಶ್ವತ್ ನಾರಾಯಣ್ ಆಗ್ರಹಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಬಗ್ಗೆ ದಲಿತ ಸಚಿವರು ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಕೂಡಲೇ ಸಿಟ್ಟಿಂಗ್ ಜಡ್ಜ್ ಮೂಲಕವೇ ತನಿಖೆ ಮಾಡಿಸಬೇಕು. ಕಾಂಗ್ರೆಸ್ ಸರ್ಕಾರದಲ್ಲಿ ಮನಬಂದಂತೆ ಆಡಳಿತ ನಡೆಸುತ್ತಿದ್ದಾರೆ. ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸರ್ಕಾರ ತೊಡಗಿದೆ ಅಲ್ಲದೆ ಸಂವಿಧಾನದ ವಿರುದ್ಧವಾಗಿ ಮೀಸಲಾತಿ ನೀಡಲಾಗಿದೆ ಎಂದು ಕಿಡಿ ಕಾರಿದರು. ಅಧಿಕಾರ ದುರುಪಯೋಗ ಮಾಡಿಕೊಳ್ಳಲಾಗಿದೆ. ಕಾನೂನು ಬದ್ಧವಾಗಿ ನಾವು ಸದನದಲ್ಲಿ ಪ್ರತಿಭಟನೆ ಮಾಡಿದ್ದೇವೆ. ಆದರೆ ನಮ್ಮನ್ನು 6 ತಿಂಗಳ ಕಾಲ ಅಮಾನತು ಮಾಡಿದ್ದಾರೆ. ನಾವೇನು ಯಾರನ್ನು ತಳ್ಳಿಲ್ಲ, ಪೇಪರ್ ಎರಚಿಲ್ಲ. ಪ್ರತಿಭಟನೆ…













