Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರಗಿ : ಕಳೆದ ಎರಡು ದಿನಗಳ ಹಿಂದೆ ಕಲಬುರ್ಗಿ ಜೇವರ್ಗಿ ರಸ್ತೆಯಲ್ಲಿರುವ ಅಂಬೇಡ್ಕರ್ ಮೂರ್ತಿಗೆ ಕಿಡಿಗೇಡಿ ಒಬ್ಬ ಚಪ್ಪಲಿ ಹಾರ ಹಾಕಿರುವ ಘಟನೆ ವಾಸುವ ಮುನ್ನವೇ ಕಲಬುರ್ಗಿಯ ಹಾಸ್ಟೆಲ್ ಒಂದರಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪೂಜೆಗೆ ಬರಲಿಲ್ಲವೆಂದು ವಿದ್ಯಾರ್ಥಿಯನ್ನು ಅರಬೆತ್ತಲೆ ಮಾಡಿ ಬರವಣಿಗೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಹಾಸ್ಟೆಲಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಂಬಂಧ ಗಲಾಟೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ಪೂಜೆಗೆ ಬರಲ್ಲ ಎಂದಿದ್ದಕ್ಕೆ ಸಹ ವಿದ್ಯಾರ್ಥಿಗಳಿಂದ ಬಾಲಕನಿಗೆ ತಿಳಿಸಿರುವ ಘಟನೆ ಕಲಬುರ್ಗಿ ಹೈಕೋರ್ಟ್ ಬಳಿ ಇರುವ ಹಾಸ್ಟೆಲ್ ನಲ್ಲಿ ನಡೆದಿದೆ. ವಿದ್ಯಾರ್ಥಿ ಅರೆಬೆತ್ತಲೆ ಮಾಡಿ ಅಂಬೇಡ್ಕರ್ ಫೋಟೋ ಕೊಟ್ಟು ಮೆರವಣಿಗೆ ಮಾಡಲಾಗಿದೆ ಎನ್ನಲಾಗುತ್ತಿದ್ದು, ವಿದ್ಯಾರ್ಥಿಯನ್ನು ಹಿಗ್ಗಾ ಮುಗ್ಗ ಥಳಿಸಿದ್ದಾರೆ. ನಂತರ ಬಾಲಕರು ಅರೆಬೆತ್ತಲೆ ಮಾಡಿ ಮೆರವಣಿಗೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ಪೂಜೆಗೆ ಬರಲಿಲ್ಲವೆಂದು ಅಮಾನವೀಯವಾಗಿ ನಡೆದುಕೊಂಡಿದ್ದಾರೆ.ಕಲ್ಬುರ್ಗಿ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದಕ್ಕೆ ಲಾಭ ಆಗಿದೆ ನಾನು ಹೋಗಿದ್ದಕ್ಕೆ ಕಾಂಗ್ರೆಸ್ಗೆ ಲಾಸ್ ಆಗಿಲ್ಲ ಇದು ಅವರಿಗೂ ಗೊತ್ತಿರುವ ವಿಷಯವಾಗಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.ಮಾಧ್ಯಮದ ಸಂದರ್ಶನ ಒಂದರಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದಕ್ಕೆ ಅವರಿಗೆ ಲಾಭ ಆಗಿದೆ ನಾನು ಹೋಗಿದ್ದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ರೀತಿ ಲಾಸ್ ಆಗಿಲ್ಲ ಅದು ಅವರಿಗೂ ಗೊತ್ತಿರುವ ವಿಷಯವಾಗಿದೆ ಎಂದು ತಿಳಿಸಿದ್ದಾರೆ. ನಾನು ಯಾವುದೇ ರೀತಿಯಾಗಿ ಕಾಂಗ್ರೆಸ್ ಗೆ ನಷ್ಟ ಮಾಡಿ ಹೋಗಿಲ್ಲ ಬಿಜೆಪಿಗೆ ಬರಬೇಕು ಅನ್ನೋದು ಕಾರ್ಯಕರ್ತರು ಆಸೆಯಾಗಿತ್ತು ದೇಶಕ್ಕೆ ನರೇಂದ್ರ ಮೋದಿಯ ಅಗತ್ಯವಿದೆ ಮೋದಿ ಮತ್ತೆ ಪ್ರಧಾನಿಯಾಗಬೇಕು ಈ ಕಾರಣದಿಂದ ನಾನು ಮತ್ತೆ ಬಿಜೆಪಿಗೆ ಸೇರಿಕೊಂಡಿದ್ದೇನೆ ಎಂದು ತಿಳಿಸಿದರು.ವರಿಷ್ಠರು ರಾಜ ನಾಯಕರು ಬೇಡ ಅಂದಿದ್ದರೆ ಬರುತ್ತಿರಲಿಲ್ಲ ಕಾಂಗ್ರೆಸ್ ಗೆ ಹೋದಾಗ ಬದಲಾವಣೆ ಆಯ್ತು ಅವರಿಗೆ ಗೊತ್ತು.ಕಾರ್ಯಕರ್ತರ ಒಂದು ತಳಮಳ ನೀವು ನಮ್ಮ ಜೊತೆಗಿರಬೇಕೆಂಬ ನಾನು ಮತ್ತೆ ಬಿಜೆಪಿ ಪಕ್ಷಕ್ಕೆ…
ಬೆಂಗಳೂರು : ಇಂದು ದೇಶದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ರಾಜ್ಯದ ರಾಜ್ಯಧಾನಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ತಾವರ್ ಚೆಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿ,ಗೌರವವನ್ನು ಸ್ವೀಕರಿಸಿದರು. ನಂತರ ಇದೇ ವೇಳೆ ಒಂದು ಅವಾಂತರ ಸೃಷ್ಟಿಯಾಗಿದ್ದು, ಗಣರಾಜ್ಯೋತ್ಸವ ಪರೇಡ್ ವೇಳೆ ಅಪರಿಚಿತ ವ್ಯಕ್ತಿಯೋರ್ವ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ. ಮೈಸೂರು ಮೂಲದ ಪರಶುರಾಮ್ ಕರ ಪತ್ರ ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. KPSC ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಬಂದಿದ್ದ ಪರಶುರಾಮ್ ಅವರನ್ನು ಸಿಎಂ ಬಳಿ ಬಿಡದಿದ್ದಕ್ಕೆ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ತಮ್ಮ KPSC ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಪರಶುರಾಮ್ ಬಂದಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗಲು ಪೊಲೀಸರು ಬಿಡದಿದ್ದಾಗ ಪರಶುರಾಮ್ ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲೇ ನುಗ್ಗಲು ಯತ್ನಿಸಿದ್ದಾರೆ. ಗಣರಾಜ್ಯೋತ್ಸವ ಪರೇಡ್…
ಬೆಂಗಳೂರು : ವಸ್ತುಗಳನ್ನು ಅಂಗಡಿಗಳಲ್ಲಿ ಖರೀದಿಸುವಾಗಾಗ ಅವುಗಳ ಗುಣಮಟ್ಟ, ತೂಕ ಮೊದಲಾವುಗಳನ್ನು ಸಮಗ್ರವಾಗಿ ಪರಿಶೀಲಿಸುವ ಹಾಗೆಯೇ ಬೇರೆ ಪಕ್ಷಗಳ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದರು. 75ನೇ ಗಣರಾಜ್ಯೋತ್ಸವದ ಅಂಗವಾಗಿ ಕೆಪಿಸಿಸಿ ಕಚೇರಿ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ಮಾತಾಡಿದ ಖರ್ಗೆ ಅವರು ಪಕ್ಷಕ್ಕೆ ಸೇರಬಯಸುವವರ ಪೂರ್ವಪರ, ಅವರ ಗುಣ, ಚಾರಿತ್ರ್ಯ ಮತ್ತು ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಒಗ್ಗಿಕೊಳ್ಳುತ್ತಾರೆಯೇ-ಈ ಅಂಶಗಳ ಪರಾಮರ್ಶೆ ನಡೆಸಿ ಅರ್ಹರಾಗಿದ್ದರೆ ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಈ ಮೂಲಕ ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ತತ್ವ ಸಿದ್ಧಾಂತಗಳೊಂದಿಗೆ ರಾಜಿ ಮಾಡಿಕೊಳ್ಳಲ್ಲ, ದೇಶದ ಐಕ್ಯತೆಗಾಗಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರು ತಮ್ಮ ಪ್ರಾಣಗಳನ್ನು ಬಲಿದಾನ ಮಾಡಿದ್ದನ್ನು ಯಾರೂ ಮರೆಯಬಾರದು, ಕಾಂಗ್ರೆಸ್ ಬಡವರು,…
ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಉಪಚುನಾವಣೆಯು ಫೆಬ್ರವರಿ 16ರಂದು ನಡೆಯಲಿದೆ. ಅದೇ ದಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಮಂಡಿಸುವ ದಿನಾಂಕವನ್ನು ಮುಂದೂಡುವಂತೆ ರಾಜ್ಯ ಸರಕಾರಕ್ಕೆ ಸೂಚಿಸಬೇಕೆಂದು ಬಿಜೆಪಿ ನಿಯೋಗವು ಒತ್ತಾಯಿಸಿದೆ. ಈ ಕುರಿತು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಮುಖಂಡ ರುದ್ರಯ್ಯ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಯೋಗೇಂದ್ರ ಹೂಡಾಘಟ್ಟ ಹಾಗೂ ಮುಖಂಡರ ನಿಯೋಗವು ಇಂದು ಶೇಷಾದ್ರಿ ರಸ್ತೆ ಬಳಿ ಇರುವ ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ದೂರು ಸಲ್ಲಿಸಿದೆ. ಫೆ.16ರಂದೇ ರಾಜ್ಯ ಬಜೆಟ್ ಮಂಡನೆಯು ಚುನಾವಣಾ ನೀತಿಸಂಹಿತೆಯ ಉಲ್ಲಂಘನೆ ಆಗಲಿದೆ. ಅದೇ ದಿನ ಬಜೆಟ್ ಮಂಡಿಸಿದರೆ ಮತದಾರರ ಮೇಲೆ ಪ್ರಭಾವದ ಸಾಧ್ಯತೆಯೂ ಇದೆ. ಹೀಗಿದ್ದೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಅಧಿವೇಶನವನ್ನು ಪ್ರಕಟಿಸಿದ್ದಾರೆ ಎಂದು ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.ಈಗಾಗಲೇ ಇದನ್ನು ರಾಜ್ಯಪಾಲರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು. ಇದರ ಕುರಿತು ಒಂದೆರಡು ದಿನಗಳಲ್ಲಿ ತಿಳಿಸುವುದಾಗಿ ಚುನಾವಣಾ ಆಯೋಗದ…
ದಾವಣಗೆರೆ : ಪ್ರೇಯಸಿಯ ಜೊತೆಗೂಡಿ ತನ್ನ ಹೆಂಡತಿಯನ್ನೇ ಕ್ರೂರವಾಗಿ ಕೊಲೆ ಮಾಡಿ ಶವವನ್ನು ಗೋಣಿ ಚೀಲದಲ್ಲಿ ತುಂಬಿ ಕೆರೆಯಲ್ಲಿ ಎಸೆದಿದ್ದು, ಇದೀಗ 19 ದಿನಗಳ ನಂತರ ಶವ ಪತ್ತೆಯಾಗಿರುವ ಘಟನೆ ದಾವಣಗೆರೆಯ ಜಿಲ್ಲೆಯ ಕೊಡಗನೂರಿನಲ್ಲಿ ನಡೆದಿದೆ. ದಾವಣಗೆರೆಯ ಕಡ್ಲೆಬಾಳು ಗ್ರಾಮದ ನಿವಾಸಿ ಚೈತ್ರಾ ಎಂಬಾಕೆಯ ಹಿಂದೆ ಬಿದ್ದ ಸಚಿನ್ ಆಕೆಯನ್ನು ಕೂಡ ಎರಡನೇ ಮದುವೆಯಾಗಿದ್ದ ಎಂದು ಹೇಳಲಾಗುತ್ತಿದೆ. ಇದೇ ವಿಚಾರಕ್ಕೆ ಗಲಾಟೆಯಾಗಿ ಕಾವ್ಯ ತವರು ಸೇರಿದ್ದಳು. ಮತ್ತೆ ಜ.6ರಂದು ಆಕೆಯನ್ನು ಸಚಿನ್ ಮರಳಿ ಕರೆದುಕೊಂಡು ಬಂದಿದ್ದ. ಈ ವೇಳೆ ಮತ್ತೆ ಗಲಾಟೆಯಾಗಿದ್ದು, ಚೈತ್ರಾ ಹಾಗೂ ಸಚಿನ್ ಸೇರಿ ಆಕೆಯ ಕತ್ತು ಹಿಸುಕಿ ಹತ್ಯೆಗೈದಿದ್ದಾರೆ. ಬಳಿಕ ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದು ಹೋಗಿದ್ದಾರೆ. ಹತ್ಯೆಯಾದ ಮಹಿಳೆಯನ್ನು ಹೊಳಲ್ಕೆರೆಯ ಸಾಸಲುಹಳ್ಳ ಗ್ರಾಮದ ಕಾವ್ಯಾ ಎಂದು ಗುರುತಿಸಲಾಗಿದೆ. ಕಾವ್ಯಾಳನ್ನು ಕಾಗಳಗೆರೆ ಗ್ರಾಮದ ನಿವಾಸಿ ಸಚಿನ್ ಎಂಬಾತನಿಗೆ ಐದು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಒಂದು ಮಗು ಕೂಡ ಇತ್ತು. ಇಷ್ಟಾದರೂ ಸಚಿನ್ ಬೇರೆ ಹೆಣ್ಣಿನ…
ಬೆಂಗಳೂರು : ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಗೆಹ್ಲೋಟ್, ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ಭಾರತಕ್ಕೆ ಐತಿಹಾಸಿಕ ದಿನವಾಗಿದೆ. ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ, ಹಾಗೂ ಸಮಾನತೆಯ ಅವಕಾಶವನ್ನ ಒದಗಿಸಿದೆ. ಸಮಗ್ರತೆ, ಏಕತೆಯನ್ನ ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯವನ್ನ ಹೊಂದಿದೆ. ಸರ್ಕಾರವು 5 ಗ್ಯಾರೆಂಟಿಗಳನ್ನ ಜಾರಿಗೊಳಿಸುವ ಭರವಸೆ ನೀಡಿತ್ತು. ಅದರಂತೆ ಎಲ್ಲ ಐದು ಗ್ಯಾರೆಂಟಿಗಳನ್ನ ಅನುಷ್ಠಾನಗೊಳಿಸಲಾಗಿದೆ ಎಂದರು. ಶಕ್ತಿ & ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಮಾಸಿಕ ರೂ,2,000 ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ.ಇದು ನಮ್ಮ ಪಕ್ಷದ ಬದ್ಧತೆ ಕೂಡಾ ಆಗಿದೆ. ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಗೆದ್ದು ಬಂದಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಗ್ಯಾರಂಟಿ…
೧] ಸುಮಂಗಲಿಯರು ಬೈತಲೆಯಲ್ಲಿ ಯಾವಾಗಲೂ ಕುಂಕುಮ ಇರದೇ ಇರಬಾರದು. ೨] ಎರಡು ಕೈಗಳಿಂದಲೂ ತಲೆಯನ್ನು ಕೆರೆದುಕೊಳ್ಳಬಾರದು, ೩] ಯಾವುದೇ ಕಾರಣಕ್ಕೂ ಸಂಧ್ಯಾ ಕಾಲದಲ್ಲಿ ಕಣ್ಣಲ್ಲಿ ನೀರು ಹಾಕಬಾರದು. ೪] ಮನೆಗೆ ಬಂದ ಹೆಂಗಸರಿಗೆ ಹರಿಶಿನ, ಕುಂಕುಮ, ಹೂಗಳನ್ನು ಕೊಟ್ಟೆ ಕಳಿಸಬೇಕು. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ೫] ಗರ್ಭಿಣಿ ಸ್ತ್ರೀಯರು ತೆಂಗಿನ ಕಾಯಿ ಮತ್ತು ಕುಂಬಳ ಕಾಯಿ ಹೊಡೆಯಕೂಡದು ಮತ್ತು ಹೊಡೆವ ಜಾಗದಲ್ಲೂ ಇರಕೂಡದು. ೬] ಗರ್ಭಿಣಿ ಸ್ತ್ರೀಯರು ನಿಂಬೆಹಣ್ಣನ್ನು ಕೊಯ್ದು ಬಾರದು…
ಮಹಾರಾಷ್ಟ್ರ : ಮಹಾರಾಷ್ಟ್ರದ ಮುಂಬೈನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮುಂಜಾನೆ ಮುಂಬೈನ ಗ್ರಾಂಟ್ ರಸ್ತೆಯ ಕಮಾತಿಪುರದ ರೆಸ್ಟೋರೆಂಟ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಆಕಸ್ಮಿಕ ಬೆಂಕಿಯಿಂದ ರೆಸ್ಟೋರೆಂಟ್ ಒಂದು ಹೊತ್ತಿ ಉರಿದಿರುವ ಘಟನೆ ನಡೆದಿದ್ದು ಓರ್ವ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡ ನಂತರ 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಒಟ್ಟು 16 ಅಗ್ನಿಶಾಮಕ ವಾಹನಗಳು ಕಾರ್ಯನಿರ್ವಹಿಸುತ್ತಿವೆ. ಬೆಂಕಿಯ ಕಾರಣ, ಹತ್ತಿರದ ಮಾಲ್ ಮತ್ತು ಬಹುಮಹಡಿ ಕಟ್ಟಡವನ್ನು ಖಾಲಿ ಮಾಡಲಾಗಿದೆ. ಇಲ್ಲಿಯವರೆಗೆ ಯಾರಿಗೂ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಮುಂಬೈ ಅಗ್ನಿಶಾಮಕ ಸೇವೆ ತಿಳಿಸಿದೆ. ಘಟನೆಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿಯ ಸುಟ್ಟ ದೇಹವು ಆವರಣದಲ್ಲಿನ ಸ್ನಾನಗೃಹದಲ್ಲಿ ಕಂಡುಬಂದಿದೆ, ಯಾವುದೇ ಗಾಯಾಳು ಅಥವಾ ಕಾಣೆಯಾದ ವ್ಯಕ್ತಿಯ ಬಗ್ಗೆ ವಿಚಾರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://twitter.com/ANI/status/1750696199794151566?t=Apj5XfD5RD1-UIvSQgr4RA&s=19
ಬೆಂಗಳೂರು: ಜಗದೀಶ್ ಶೆಟ್ಟರ್ ನಿನ್ನೆ ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾಜಿ ಸಿಎಂ ಬೊಮ್ಮಾಯಿ ಸ್ಪೋಟಕ ಹೇಳಿಕೆಯನ್ನು ನೀಡಿದ್ದು, ಕಾಂಗ್ರೆಸ್ನ ಪ್ರಮುಖ ನಾಯಕರು ಬಿಜೆಪಿಗೆ ಬರಲಿದ್ದು, ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಇಬ್ಭಾಗವಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು. ಜಗದೀಶ ಶೆಟ್ಟರ್ ಅವರು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರು ಕಾಂಗ್ರೆಸ್ ಮೇಲಿನ ಪ್ರೀತಿಯಿಂದ ಹೋಗಿರಲಿಲ್ಲ, ಬಿಜೆಪಿಯಲ್ಲಿ ಆಗಿರುವ ಬೇಸರದಿಂದ ಕಾಂಗ್ರೆಸ್ಗೆ ಹೋಗಿದ್ದರು. ಅವರನ್ನು ನಾನು ಜನಸಂಘದ ದಿನದಿಂದಲೂ ಬಹಳ ಹತ್ತಿರದಿಂದ ನೋಡಿದ್ದೇನೆ ಎಂದರು. ಅವರಿಗೆ ಕಾಂಗ್ರೆಸ್ ಡಿಎನ್ಎ ಒಗ್ಗುವುದಿಲ್ಲ. ಶೆಟ್ಟರ್ ಅವರ ದೇಹ ಮಾತ್ರ ಕಾಂಗ್ರೆಸ್ಗೆ ಹೋಗಿತ್ತು. ಅವರ ಮನಸ್ಸು ಬಿಜೆಪಿಯಲ್ಲೇ ಇತ್ತು. ಕಾಂಗ್ರೆಸ್ ಸೇರಿದ ಮೇಲೆ ಅಲ್ಲಿನ ಮನಸ್ಥಿತಿ ಅವರಿಗೆ ಅರ್ಥವಾಗಿದೆ. ಇದು ಬಿಜೆಪಿ ಮತ್ತು ಶೆಟ್ಟರ್ ಅವರಿಗೂ ಅನುಕೂಲವಾಗಲಿದೆ ಎಂದು ಬೊಮ್ಮಾಯಿ ತಿಳಿಸಿದರು. ದೇಶವೇ ಮೊದಲು ಎನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಸಿದ್ಧಾಂತ. ಈಗ ಎಡ, ಬಲ ಸಿದ್ಧಾಂತ ಇಲ್ಲ. ದೇಶ…